ಸುದ್ದಿ

ಧರ್ಮಸ್ಥಳ ಪ್ರಕರಣ : ತನಿಖೆ ಅಧಿಕೃತವಾಗಿ ಆರಂಭ

ಧರ್ಮಸ್ಥಳಕ್ಕೆ ಆಗಮಿಸಿ ದಾಖಲೆಗಳನ್ನು ಪಡೆದುಕೊಂಡ ಎಸ್‌ಐಟಿ ಅಧಿಕಾರಿಗಳು ಬೆಳ್ತಂಗಡಿ : ಧರ್ಮಸ್ಥಳ ವ್ಯಾಪ್ತಿಯಲ್ಲಿ ಶವ ಹೂತು ಹಾಕಲಾಗಿದೆ ಎಂದು ಆರೋಪಿಸಲಾದ ಪ್ರಕರಣದ ತನಿಖೆ ನಡೆಸಲು ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡ (ಎಸ್ಐಟಿ) ತಂಡದ ಅಧಿಕಾರಿಗಳು ಶುಕ್ರವಾರ ಧರ್ಮಸ್ಥಳ ಠಾಣೆಯಿಂದ ದಾಖಲೆಗಳನ್ನು ಪಡೆದುಕೊಂಡಿದ್ದಾರೆ. ಇದರೊಂದಿಗೆ ಈ ಪ್ರಕರಣದ ಎಸ್‌ಐಟಿ ತನಿಖೆ ಅಧಿಕೃತವಾಗಿ ಪ್ರಾರಂಭವಾದಂತಾಗಿದೆ. ಎಸ್‌ಐಟಿ ತಂಡದ ಐಪಿಎಸ್ ಅಧಿಕಾರಿ ಜಿತೇಂದ್ರ ಕುಮಾರ್ ದಯಾಮ ಹಾಗೂ ಇತರ ಅಧಿಕಾರಿಗಳು ಧರ್ಮಸ್ಥಳ ಠಾಣೆಗೆ ಆಗಮಿಸಿದ್ದರು.ಧರ್ಮಸ್ಥಳ ಠಾಣೆಯ ಪಿ.ಎಸ್.ಐ ಸಮರ್ಥ್ […]

ಧರ್ಮಸ್ಥಳ ಪ್ರಕರಣ : ತನಿಖೆ ಅಧಿಕೃತವಾಗಿ ಆರಂಭ Read More »

ಪುತ್ತೂರು – ಉಪ್ಪಿನಂಗಡಿ ರಸ್ತೆ ದುರಸ್ತಿ ತಕ್ಷಣ ಮಾಡದಿದ್ದಲ್ಲಿ ಬಿಜೆಪಿಯಿಂದ ಪ್ರತಿಭಟನೆ: ಸಂಜೀವ ಮಠಂದೂರ್

ಪುತ್ತೂರು: ನಗರದಿಂದ ಉಪ್ಪಿನಂಗಡಿಗೆ ಸಂಪರ್ಕಿಸುವ ರಸ್ತೆಯನ್ನು ಚತುಷ್ಪತ ರಸ್ತೆಯನ್ನಾಗಿ ಮಾಡಿ ರಾಜ್ಯ ಹೆದ್ದಾರಿಯಾಗಿ ಪರಿವರ್ತಿಸಲಾಗಿದೆ. ಆದರೆ ಈಗಿನ ಕಾಂಗ್ರೆಸ್ ಸರ್ಕಾರ ಆ ರಸ್ತೆಯನ್ನು ಸೂಕ್ತವಾಗಿ ನಿರ್ವಹಣೆ ಮಾಡದೆ ಪ್ರಯಾಣಿಕರು ಪರದಾಡುವಂತಾಗಿದೆ ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪುತ್ತೂರಿನಿಂದ ‌ಸೇಡಿಯಾಪುವಿನ ವರೆಗೆ ರಸ್ತೆ ನಿರ್ವಹಣೆ ಇಲ್ಲದೆ ಜನರು ನಿತ್ಯ ಪರದಾಡುತ್ತಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ರಸ್ತೆ ಸರಿಪಡಿಸುವತ್ತ ತಕ್ಷಣವೇ ಗಮನ ಹರಿಸದೇ ಹೋದಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸುವುದಾಗಿ ಮಠಂದೂರ್ ಎಚ್ಚರಿಕೆ ನೀಡಿದ್ದಾರೆ.

ಪುತ್ತೂರು – ಉಪ್ಪಿನಂಗಡಿ ರಸ್ತೆ ದುರಸ್ತಿ ತಕ್ಷಣ ಮಾಡದಿದ್ದಲ್ಲಿ ಬಿಜೆಪಿಯಿಂದ ಪ್ರತಿಭಟನೆ: ಸಂಜೀವ ಮಠಂದೂರ್ Read More »

ಮಂಗಳೂರು ಸೆಂಟ್ರಲ್‌ – ಶ್ರೀ ಮಾತಾ ವೈಷ್ಣೋದೇವಿ ಕತ್ರಾಗೆ ನೇರ ರೈಲು ಸೇವೆ: ಸಚಿವ ಸೋಮಣ್ಣ ಅವರಿಗೆ ಮನವಿ ಸಲ್ಲಿಸಿದ ಕಿಶೋರ್ ಕುಮಾರ್ ಪುತ್ತೂರು

ಪುತ್ತೂರು: ಕರಾವಳಿ ಕರ್ನಾಟಕ ಪ್ರದೇಶದ ದೀರ್ಘಕಾಲದ ಬೇಡಿಕೆಯಾದ ಮಂಗಳೂರು ಸೆಂಟ್ರಲ್ (MAQ) ನಿಂದ ಶ್ರೀ ಮಾತಾ ವೈಷ್ಣೋದೇವಿ ಕತ್ರಾ (SVDK) ಗೆ ನೇರ ಮತ್ತು ಸಮಯ ದಕ್ಷ ರೈಲು ಸೇವೆಯನ್ನು ಒದಗಿಸಲು ಕೇಂದ್ರ ರೈಲ್ವೆ ರಾಜ್ಯ ಸಚಿವ ಸೋಮಣ್ಣ ಅವರಿಗೆ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಅವರು ಮನವಿ ಮಾಡಿದ್ದಾರೆ. ಕೆಲ ವಾರಗಳ ಹಿಂದೆ ಹಲವರು ನವಯುಗ ಎಕ್ಸ್‌ಪ್ರೆಸ್ ಪುನರಾರಂಭ ಮಾಡಿ, ಇದನ್ನು ಹಾಸನ, ಹುಬ್ಬಳ್ಳಿ – ಮೀರಜ್ ಮಾರ್ಗವಾಗಿ ದೆಹಲಿಗೆ ಸಂಪರ್ಕಿಸುವಂತೆ ಕೋರಿ

ಮಂಗಳೂರು ಸೆಂಟ್ರಲ್‌ – ಶ್ರೀ ಮಾತಾ ವೈಷ್ಣೋದೇವಿ ಕತ್ರಾಗೆ ನೇರ ರೈಲು ಸೇವೆ: ಸಚಿವ ಸೋಮಣ್ಣ ಅವರಿಗೆ ಮನವಿ ಸಲ್ಲಿಸಿದ ಕಿಶೋರ್ ಕುಮಾರ್ ಪುತ್ತೂರು Read More »

ಗೋವಾದಲ್ಲಿ ನಡೆಯಲಿರುವ ಕನಕ ಉತ್ಸವದಲ್ಲಿ ಉಪನ್ಯಾಸ ನೀಡಲು ಕರ್ನಾಟಕದಿಂದ ಡಾ. ಅನುರಾಧ ಕುರುಂಜಿ

ಸುಳ್ಯ: ಆಗಸ್ಟ್ 25 ರಂದು ಗೋವಾದಲ್ಲಿ ನಡೆಯಲಿರುವ ಕನಕ ಉಪನ್ಯಾಸ ಉತ್ಸವದಲ್ಲಿ ಉಪನ್ಯಾಸ ನೀಡಲು ಸಂಪನ್ಮೂಲ ವ್ಯಕ್ತಿಯಾಗಿ ಕರ್ನಾಟಕದಿಂದ ಡಾ. ಅನುರಾಧ ಕುರುಂಜಿ ಅವರು ಆಯ್ಕೆಯಾಗಿದ್ದಾರೆ. ಇವರು ಸುಳ್ಯದ ನೆಹರೂ ಮೆಮೊರಿಯಲ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾಗಿ ಮತ್ತು ವ್ಯಕ್ತಿತ್ವ ವಿಕಸನ ತರಬೇತುದಾರರಾಗಿದ್ದಾರೆ. ಇವರು 250 ಕ್ಕೂ ಅಧಿಕ ತರಬೇತಿ ಉಪನ್ಯಾಸಗಳನ್ನು ನೀಡಿದ್ದಾರೆ. ರಾಷ್ಟ್ರೀಯ, ಅಂತಾರಾಷ್ಟ್ರೀಯ, ರಾಜ್ಯ ಮಟ್ಟದ ವಿಚಾರ ಸಂಕಿರಣಗಳಲ್ಲಿಯೂ ಪ್ರಬಂಧ ಮಂಡನೆ ಮಾಡಿದ್ದಾರೆ. ಇವರು ಪದ್ಮಯ ಗೌಡ ಕುರುಂಜಿ ಮತ್ತು ಸೀತಮ್ಮ ಕುರುಂಜಿ ದಂಪತಿಯ ಪುತ್ರಿ.

ಗೋವಾದಲ್ಲಿ ನಡೆಯಲಿರುವ ಕನಕ ಉತ್ಸವದಲ್ಲಿ ಉಪನ್ಯಾಸ ನೀಡಲು ಕರ್ನಾಟಕದಿಂದ ಡಾ. ಅನುರಾಧ ಕುರುಂಜಿ Read More »

ಧರ್ಮಸ್ಥಳ ಪ್ರಕರಣ: SIT ಅಧಿಕಾರಿಗಳಿಗೆ ಬೆಳ್ತಂಗಡಿಯಲ್ಲಿ ಕಚೇರಿ ಆರಂಭ?

ಮಂಗಳೂರು: ರಾಜ್ಯದಲ್ಲೇ ಸಂಚಲನ ಮೂಡಿಸಿರುವ ಧರ್ಮಸ್ಥಳದಲ್ಲಿ ನಡೆದ ನೂರಾರು ಅಸಹಜ ಸಾವು ಪ್ರಕರಣಕ್ಕೆ ‌ಸಂಬಂಧಿಸಿದಂತೆ ರಚಿಸಲಾದ SIT ಅಧಿಕಾರಿಗಳ ತಂಡಕ್ಕೆ ಬೆಳ್ತಂಗಡಿಯಲ್ಲಿ ಕಚೇರಿ ನಿರ್ಮಾಣವಾಗಲಿದೆ ಎನ್ನಲಾಗುತ್ತಿದೆ. ಅಸಹಜವಾಗಿ ಮೃತಪಟ್ಟವರ ಹೆಣಗಳನ್ನು ಹೂಳಲಾಗಿದೆ ಎಂಬ ಬಹುದೊಡ್ಡ ಆರೋಪದಲ್ಲಿ ದಾಖಲಾದ ಪ್ರಕರಣ ಇದಾಗಿದೆ. ಈ ಪ್ರಕರಣದ ತನಿಖೆ ನಡೆಸಲಿರುವ SIT ಅಧಿಕಾರಿಗಳು ಇಂದು ಧರ್ಮಸ್ಥಳಕ್ಕೆ ತೆರಳುತ್ತಿದೆ ಎಂದು ಹೇಳಲಾಗಿದೆ. SIT ಅಧಿಕಾರಿಗಳಿಗೆ ಬೆಳ್ತಂಗಡಿ ಪೊಲೀಸ್ ಠಾಣೆಯ ಸಮೀಪದಲ್ಲಿರುವ ನೂತನವಾಗಿ ನಿರ್ಮಾಣವಾದ ಪೊಲೀಸ್ ಕ್ವಾಟ್ರಸ್‌ನಲ್ಲಿ ಕಚೇರಿ ಆರಂಭವಾಗಲಿದೆ ಎಂದು ವರದಿಗಳು ಹೇಳಿವೆ.

ಧರ್ಮಸ್ಥಳ ಪ್ರಕರಣ: SIT ಅಧಿಕಾರಿಗಳಿಗೆ ಬೆಳ್ತಂಗಡಿಯಲ್ಲಿ ಕಚೇರಿ ಆರಂಭ? Read More »

ಮಂಗಳೂರಿನಲ್ಲಿ ಮೆರಿಟೈಮ್ ವಿವಿ ಸ್ಥಾಪಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ ಸಂಸದ ಕ್ಯಾ. ಬ್ರಿಜೇಶ್ ಚೌಟ

ಮಂಗಳೂರು: ನಗರದಲ್ಲಿ ಕೇಂದ್ರೀಯ ಮೆರಿಟೈಮ್ ‌ವಿಶ್ವವಿದ್ಯಾಲಯ ಸ್ಥಾಪಿಸುವಂತೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕೇಂದ್ರ ಸಚಿವ ಸರ್ಬಾನಂದ್ ‌ಸೋನೋವಾಲ್ ಅವರಿಗೆ ಮನವಿ ಮಾಡಿದ್ದು, ಇದನ್ನು ಪರಿಶೀಲನೆ ನಡೆಸುವುದಾಗಿ ಕೇಂದ್ರ ಸಚಿವರು ಭರವಸೆ ನೀಡಿದ್ದಾಗಿ ತಿಳಿದು ಬಂದಿದೆ. ಮಂಗಳೂರು ವಿಶಾಲವಾದ ಕಡಲ ತೀರ ಹೊಂದಿದ್ದು, ಈ ಭಾಗದಲ್ಲಿ ಮೆರಿಟೈಮ್ ‌ವಿಶ್ವವಿದ್ಯಾಲಯ ಸ್ಥಾಪನೆ ಮಾಡುವುದರಿಂದ ಕಡಲ ಕ್ಷೇತ್ರದ ಬಗ್ಗೆ ಅಧ್ಯಯನ,‌ ಸಂಶೋಧನೆಗೆ ಹೆಚ್ಚು ಅವಕಾಶ ದೊರೆಯಲಿದೆ. ಈ ಭಾಗದಲ್ಲಿ ಪ್ರಮುಖ ಬಂದರುಗಳನ್ನು ಒಳಗೊಂಡಂತೆ ಎಲ್ಲಾ ರೀತಿಯ ಭೌಗೋಳಿಕ ಅನುಕೂಲಗಳನ್ನು

ಮಂಗಳೂರಿನಲ್ಲಿ ಮೆರಿಟೈಮ್ ವಿವಿ ಸ್ಥಾಪಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ ಸಂಸದ ಕ್ಯಾ. ಬ್ರಿಜೇಶ್ ಚೌಟ Read More »

ಮುಸ್ಲಿಂ ಮುಖಂಡರ ಜೊತೆ RSS ಮುಖ್ಯಸ್ಥ ಮೋಹನ್ ಭಾಗವತ್ ಸಭೆ

ನವದೆಹಲಿ: ಕೋಮು ಸಾಮರಸ್ಯ ಸ್ಥಾಪನೆಯ ಉದ್ದೇಶದಿಂದ ಮುಸ್ಲಿಂ ಮುಖಂಡರುಗಳ ಜೊತೆಗೆ RSS ಮುಖ್ಯಸ್ಥ ಮೋಹನ್ ಭಾಗವತ್ ಅವರು ಸಭೆ ನಡೆಸಿದ್ದಾರೆ. ದೀರ್ಘಕಾಲದಿಂದ ಹಿಂದೂಗಳು ಮತ್ತು ಮುಸಲ್ಮಾನರ ನಡುವೆ ಅಪನಂಬಿಕೆ ಮನೆ ಮಾಡಿದ್ದು, ಅದನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಮುಸ್ಲಿಂ ಧರ್ಮ ಗುರುಗಳ ಜೊತೆಗೆ ಸಭೆ ನಡೆಸಲಾಗಿದೆ. ಸುಮಾರು ಅರವತ್ತಕ್ಕೂ ಹೆಚ್ಚು ಮುಸ್ಲಿಂ ಮುಖಂಡರು ಈ ಸಭೆಯಲ್ಲಿ ಪಾಲ್ಗೊಂಡಿದ್ದು, ಮೂರು ಗಂಟೆಗಳ ಕಾಲ ಈ ಸಭೆ ನಡೆದಿದೆ. ಇದನ್ನು ಸಕಾರಾತ್ಮಕ ಸಭೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘ ಕರೆದಿದ್ದು, ದೇಶದ

ಮುಸ್ಲಿಂ ಮುಖಂಡರ ಜೊತೆ RSS ಮುಖ್ಯಸ್ಥ ಮೋಹನ್ ಭಾಗವತ್ ಸಭೆ Read More »

ಇಂದಿರಾ ಗಾಂಧಿ ದಾಖಲೆ ಮುರಿದ ಪ್ರಧಾನಿ ಮೋದಿ: ಯಾವ ವಿಷಯದಲ್ಲಿ ಗೊತ್ತಾ?

ನವದೆಹಲಿ: ಪ್ರಧಾನಿ ಮೋದಿ ಅವರು ಪ್ರಧಾನಿ ಸ್ಥಾನವನ್ನು ಅಲಂಕರಿಸಿ 4078 ದಿನಗಳನ್ನು ಪೂರ್ಣಗೊಳಿಸಿ ದೀರ್ಘಾವಧಿ ಸೇವೆ ಸಲ್ಲಿಸಿದ ಭಾರತದ ಎರಡನೇ ಪ್ರಧಾನಿ ಎಂಬ ಕೀರ್ತಿಗೆ ಭಾಜನರಾಗಿ ದಾಖಲೆ ಬರೆದಿದ್ದಾರೆ. ಇಂದಿರಾ ಗಾಂಧಿ ಅವರು 4077 ದಿನಗಳ ಕಾಲ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದು, ಈ ವರೆಗೆ ಜವಹರಲಾಲ್ ನೆಹರು (16 ವರ್ಷ 286 ದಿನಗಳು) ಅವರ ನಂತರ ಎರಡನೇ ಸ್ಥಾನದಲ್ಲಿ ದೀರ್ಘಾವಧಿ ಸೇವೆ ಸಲ್ಲಿಸಿದ ಪ್ರಧಾನಿ ಎಂದು ಗುರುತಿಸಿಕೊಳ್ಳುತ್ತಿದ್ದರು. ಆದರೆ ಈ ಹಿರಿಮೆ ಈಗ ಪ್ರಧಾನಿ ಮೋದಿ ಅವರಿಗೆ

ಇಂದಿರಾ ಗಾಂಧಿ ದಾಖಲೆ ಮುರಿದ ಪ್ರಧಾನಿ ಮೋದಿ: ಯಾವ ವಿಷಯದಲ್ಲಿ ಗೊತ್ತಾ? Read More »

ಶಾಲೆಯ ಮೇಲ್ಛಾವಣಿ ಕುಸಿದು ನಾಲ್ಕು ಮಕ್ಕಳು ಸಾವು

ಬೆಳಗ್ಗೆ ಪ್ರಾರ್ಥನೆ ನಡೆಯುತ್ತಿರುವಾಗಲೇ ಕುಸಿದು ಬಿದ್ದ ಛಾವಣಿ ಜೈಪುರ: ಪ್ರಾಥಮಿಕ ಶಾಲಾ ಕಟ್ಟದ ಮೇಲ್ಛಾವಣಿ ಕುಸಿದು ಕನಿಷ್ಠ ನಾಲ್ವರು ಮಕ್ಕಳು ಸಾವನ್ನಪ್ಪಿರುವ ದಾರುಣ ಘಟನೆ ರಾಜಸ್ಥಾನದ ಝಲಾವರ್‌ನಲ್ಲಿ ಸಂಭವಿಸಿದೆ. ಇಂದು ಬೆಳಗ್ಗೆ ಝಲಾವರ್‌ನಲ್ಲಿರುವ ಪಿಪ್ಲೋಡಿ ಪ್ರಾಥಮಿಕ ಶಾಲೆಯ ಮೇಲ್ಛಾವಣಿ ಕುಸಿದಿದ್ದು, ಘಟನೆಯಲ್ಲಿ ಕನಿಷ್ಠ ನಾಲ್ವರು ಮಕ್ಕಳು ಸಾವನ್ನಪ್ಪಿರುವುದಾಗಿ ವರದಿಯಾಗಿದೆ. 60ಕ್ಕೂ ಹೆಚ್ಚು ಮಕ್ಕಳು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದು, ರಕ್ಷಣಾ ತಂಡಗಳಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಸ್ಥಳೀಯರು ಸಹ ಅಧಿಕಾರಿಗಳೊಂದಿಗೆ ಕೈಜೋಡಿಸಿದ್ದಾರೆ. ಮೃತಪಟ್ಟ ಮಕ್ಕಳ ಶವಗಳನ್ನ ಹೊರತೆಗೆಯಲಾಗಿದೆ. ಗಾಯಗೊಂಡವರನ್ನ

ಶಾಲೆಯ ಮೇಲ್ಛಾವಣಿ ಕುಸಿದು ನಾಲ್ಕು ಮಕ್ಕಳು ಸಾವು Read More »

ರಾಷ್ಟ್ರಪತಿ ಮುರ್ಮು ಅವರಿಂದ ರಾಣಿ ಚೆನ್ನಭೈರಾದೇವಿ ಅಂಚೆ ಚೀಟಿ ಬಿಡುಗಡೆ

ನವದೆಹಲಿ: ರಾಣಿ ಚೆನ್ನಭೈರಾದೇವಿ ‌ಸ್ಮರಣಾರ್ಥ ಅಂಚೆ ಚೀಟಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬಿಡುಗಡೆ ಮಾಡಿದರು. ಬಳಿಕ ಮಾತನಾಡಿದ ಮುರ್ಮು, ರಾಣಿ ಚೆನ್ನಭೈರಾದೇವಿ ಅವರ ಧೈರ್ಯ, ಸ್ಥೈರ್ಯ, ಸಾಧನೆಯನ್ನು ನಾವು ಸುವರ್ಣಾಕ್ಷರಗಳಲ್ಲಿ ಬರೆದಿಡಬೇಕು. ಇದೊಂದು ಅವಿಸ್ಮರಣೀಯ ಸಂದರ್ಭ ಎಂದು ತಿಳಿಸಿದರು. ರಾಷ್ಟ್ರಪತಿ ಭವನದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮತ್ತು ರಾಜ್ಯಸಭಾ ಸದಸ್ಯ ಡಾ. ವೀರೇಂದ್ರ ಹೆಗ್ಗಡೆ ಅವರು ಭಾಗವಹಿಸಿದ್ದರು.

ರಾಷ್ಟ್ರಪತಿ ಮುರ್ಮು ಅವರಿಂದ ರಾಣಿ ಚೆನ್ನಭೈರಾದೇವಿ ಅಂಚೆ ಚೀಟಿ ಬಿಡುಗಡೆ Read More »

error: Content is protected !!
Scroll to Top