ಸುದ್ದಿ

ಮಹಿಳಾ ಅಧಿಕಾರಿಯ ಖಾಸಗಿ ದೃಶ್ಯ ಚಿತ್ರೀಕರಿಸಿ ಬ್ಲ್ಯಾಕ್ಮೇಲ್: ಮತ್ತೊಬ್ಬ ಆರೋಪಿ ಪೊಲೀಸ್ ಬಲೆಗೆ

ಬೆಳಗಾವಿ: ಮಹಿಳಾ ಅಧಿಕಾರಿಯ ಮನೆಯಲ್ಲಿ ರಹಸ್ಯ ಕೆಮರಾ ‌ಇರಿಸಿದ ಮೂವರು ನಕಲಿ ಪತ್ರಕರ್ತರ ಬಂಧನ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಮಹಿಳಾ ಅಧಿಕಾರಿಯ ಕೆಳಹಂತದ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದವನೇ ವೃತ್ತಿ ಮಾತ್ಸರ್ಯದಿಂದ ಆರೋಪಿಗಳಿಗೆ ಸಾಥ್ ನೀಡಿದ್ದ ಎನ್ನುವ ವಿಚಾರ ಬಹಿರಂಗವಾಗಿದೆೆ. ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ವಿನೋದ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಸದ್ಯ ಪೊಲೀಸರು ಆರೋಪಿ ವಿನೋದ್ ಎಂಬವನ ಮೊಬೈಲ್ ಫೋನ್ ತಪಾಸಣೆ ಸಹ ನಡೆಸಿದ್ದಾಗಿ ‌ತಿಳಿದು ಬಂದಿದೆ. ಮಹಿಳಾ ಅಧಿಕಾರಿಯ ಮನೆಯಲ್ಲಿ ರಹಸ್ಯ ಕೆಮರಾ ಇಟ್ಟು, ಖಾಸಗಿ […]

ಮಹಿಳಾ ಅಧಿಕಾರಿಯ ಖಾಸಗಿ ದೃಶ್ಯ ಚಿತ್ರೀಕರಿಸಿ ಬ್ಲ್ಯಾಕ್ಮೇಲ್: ಮತ್ತೊಬ್ಬ ಆರೋಪಿ ಪೊಲೀಸ್ ಬಲೆಗೆ Read More »

ಕಾಲೇಜು ವಿದ್ಯಾರ್ಥಿನಿಯನ್ನು ಅಪಹರಿಸಲು ಯತ್ನ

ಬೆಳ್ತಂಗಡಿ: ಕಾರಿನಲ್ಲಿ ಬಂದ ಮೂವರು ಅಪರಿಚಿತ ದುಷ್ಟರು ‌ಸ್ಕೂಟರ್‌ನಲ್ಲಿ ಕಾಲೇಜಿಗೆ ತೆರಳುತ್ತಿದ್ದ ಅಪ್ರಾಪ್ತ ಯುವತಿಯನ್ನು ಅಪಹರಿಸಲು ಯತ್ನಿಸಿದ ಘಟನೆ ಸುದೇಮುಗೇರು ಎಂಬಲ್ಲಿ ನಡೆದಿದೆ. ಈ ವೇಳೆ ಯುವತಿ ತೋರಿದ ಪ್ರತಿರೋಧ ಹಾಗೂ ಸಮಯ ಪ್ರಜ್ಞೆಯಿಂದಾಗಿ ಕಿಡ್ನಾಪರ್ಸ್ ಪ್ರಯತ್ನ ವಿಫಲವಾಗಿದೆ. ಪ್ರಥಮ ಪಿಯುಸಿ ವಿದ್ಯಾರ್ಥಿನಿಯನ್ನು ಅಪಹರಿಸುವ ಪ್ರಯತ್ನ ಇದಾಗಿದ್ದು, ಕಾರಿನ ನಂಬರ್ ಪ್ಲೇಟ್ ಕಾಣದಂತೆ ದುಷ್ಟರು ಅದಕ್ಕೆ ಬಟ್ಟೆ ಕಟ್ಟಿದ್ದರು ಎಂದು ತಿಳಿದು ಬಂದಿದೆ. ಕಾರಿನಿಂದ ಇಳಿದ ದುಷ್ಕರ್ಮಿಗಳು ಆಕೆಯನ್ನು ಬಲವಂತವಾಗಿ ಕಾರಿನೊಳಕ್ಕೆ ಹಾಕಿಕೊಳ್ಳಲು ಯತ್ನಿಸಿದ್ದಾರೆ. ಈ ವೇಳೆ

ಕಾಲೇಜು ವಿದ್ಯಾರ್ಥಿನಿಯನ್ನು ಅಪಹರಿಸಲು ಯತ್ನ Read More »

ವಿವಾಹವಾಗುವುದಾಗಿ ನಂಬಿಸಿ, ಮಗು ಕೊಟ್ಟು ಕೈಕೊಟ್ಟ ಪ್ರಕರಣ: ಆರೋಪಿ ಕೃಷ್ಣರಾವ್ ತಂದೆಗೆ ಕೊಂಚ ರಿಲೀಫ್

ಬೆಂಗಳೂರು: ಪುತ್ತೂರಿನಲ್ಲಿ ಯುವತಿಗೆ ಮದುವೆಯಾಗದೆ ಮಗು ಕೊಟ್ಟು ಮೋಸ ಮಾಡಿದ ಪುತ್ರನಿಗೆ ಆಶ್ರಯ ನೀಡಿರುವ ಆರೋಪ ಎದುರಿಸುತ್ತಿರುವ ಪಿ. ಜಿ. ಜಗನ್ನಿವಾಸ ರಾವ್ ಅವರಿಗೆ ಹೈಕೋರ್ಟ್ ಕೊಂಚ ರಿಲೀಫ್ ನೀಡಿದೆ. ಜಗನ್ನಿವಾಸ್ ರಾವ್ ವಿರುದ್ಧದ ಕಾನೂನು ಪ್ರಕ್ರಿಯೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಕಳೆದ ಜೂನ್ ತಿಂಗಳಿನಲ್ಲಿ ಪುತ್ತೂರು ಮಹಿಳಾ ಠಾಣೆಯಲ್ಲಿ ಯುವತಿಯೊಬ್ಬಳು ಕೃಷ್ಣ ಜೆ. ರಾವ್ ಎಂಬ ಯುವಕ ಮದುವೆಯಾಗುವುದಾಗಿ ನಂಬಿಸಿ, ಮಗು ಕರುಣಿಸಿ ಬಳಿಕ ಮೋಸ ಮಾಡಿದ್ದಾನೆ ಎಂದು ದೂರು ನೀಡಿದ್ದಳು. ದೂರು ದಾಖಲಾಗುತ್ತಿದ್ದ ಹಾಗೆ

ವಿವಾಹವಾಗುವುದಾಗಿ ನಂಬಿಸಿ, ಮಗು ಕೊಟ್ಟು ಕೈಕೊಟ್ಟ ಪ್ರಕರಣ: ಆರೋಪಿ ಕೃಷ್ಣರಾವ್ ತಂದೆಗೆ ಕೊಂಚ ರಿಲೀಫ್ Read More »

ಖಾಲಿ ಟ್ರಂಕ್‌ ತೋರಿಸಿ ಪ್ರತಿಭಟಿಸಿದ ಸಂಸದ ತೇಜಸ್ವಿ ಸೂರ್ಯ

ಮೆಟ್ರೋ ರೈಲು ದರ ಏರಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ ಬೆಂಗಳೂರು: ಮೆಟ್ರೋ ದರ ಏರಿಸಿದ್ದನ್ನು ಖಂಡಿಸಿ ಆರ್‌ವಿ ಮೆಟ್ರೋ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದ ಬೆಂಗಳೂರು ದಕ್ಷಿಣ ಕ್ಷೇತ್ರ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮತ್ತು ಜಯನಗರದ ಶಾಸಕ ರಾಮಮೂರ್ತಿ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರತಿಭಟನೆಯ ಹಿನ್ನೆಲೆಯಲ್ಲಿ ಪೊಲೀಸರು ನೋಟಿಸ್‌ ನೀಡಿದ್ದರೂ ಇಂದು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಖಾಲಿ ಟ್ರಂಕ್‌ ಹಿಡಿದುಕೊಂಡು ಬಂದ ತೇಜಸ್ವಿ ಸೂರ್ಯ ಟ್ರಂಕ್‌ ತೆರೆದು ರಾಜ್ಯ ಸರ್ಕಾರ ಖಾಲಿಯಾಗಿದೆ ಎಂದು ಹೇಳಿದರು.

ಖಾಲಿ ಟ್ರಂಕ್‌ ತೋರಿಸಿ ಪ್ರತಿಭಟಿಸಿದ ಸಂಸದ ತೇಜಸ್ವಿ ಸೂರ್ಯ Read More »

ಹುಲಿಚಾಮುಂಡಿ ಹಾಗೂ ಪರಿವಾರ ದೈವಗಳ ನೇಮೋತ್ಸವ

ಕಡಬ: ಶ್ರೀ ಹುಲಿಚಾಮುಂಡಿ ಮತ್ತು ಪರಿವಾರ ದೈವಗಳ ದೈವಸ್ಥಾನ ಕಾರಣಿಕ ಕ್ಷೇತ್ರ ಬದಿಬಾಗಿಲು, ನೂಜಿಬಾಳ್ತಿಲ, ಕಡಬ ಇಲ್ಲಿಯ ವಾರ್ಷಿಕ ನೇಮೋತ್ಸವ ಫೆ. 14 ರಂದು ನಡೆಯಲಿದೆ. ಬೆಳಿಗ್ಗೆ ನಾಗ ರಕ್ತೇಶ್ವರಿ ಬನದಲ್ಲಿ ತಂಬಿಲ ಸೇವೆ ನಡೆದು, ಕ್ಷೇತ್ರದಲ್ಲಿ ಗಣಪತಿ ಹವನ, ದೈವಗಳಿಗೆ ಕಳಶಾಭಿಷೇಕ, ತಂಬಿಲ ಸೇವೆ ನಡೆಯಲಿದೆ. ಸಂಜೆ ಗಂಟೆ 6 ಕ್ಕೆ ಭಂಡಾರ ಹಿಡಿಯುವುದು, 7.30ರಿಂದ ಅನ್ನಸಂತರ್ಪಣೆ, ರಾತ್ರಿ ಗಂಟೆ 8.30ಕ್ಕೆ ಕಾರಣಿಕ ಕ್ಷೇತ್ರದ ಪ್ರಧಾನ ದೈವ ಹುಲಿ ಚಾಮುಂಡಿ ದೈವದ ನೇಮೋತ್ಸವ, ಬಂಡಿ ಉತ್ಸವ,

ಹುಲಿಚಾಮುಂಡಿ ಹಾಗೂ ಪರಿವಾರ ದೈವಗಳ ನೇಮೋತ್ಸವ Read More »

ಆತ್ಮಹತ್ಯೆ ಮಾಡಿಕೊಳ್ಳುವಾಗ ರುಂಡ ಬೇರ್ಪಟ್ಟು ಸಾವು

ಮನೆಯ ಬಾವಿಗೆ ಹಾರಿ ಆತ್ಮಹತ್ಯೆಗೆತ್ನಿಸಿದಾಗ ಬೇರ್ಪಟ್ಟ ರುಂಡ ಉಡುಪಿ : ನಿವೃತ್ತಿಯ ಅಂಚಿನಲ್ಲಿ ಇರುವ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಳ್ಳಲು ಬಾವಿಗೆ ಹಾರಿದ್ದಾರೆ. ಆದರೆ ಆತ್ಮಹತ್ಯೆ ಮಾಡಿಕೊಳ್ಳುವ ವೇಳೆಯೇ ಅವರ ರುಂಡ ಬೇರ್ಪಟ್ಟು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಉಡುಪಿಯಲ್ಲಿ ನಡೆದಿದೆ. ನಗರದ ಅಂಬಾಗಿಲು ವಾರ್ಡ್‌ನ ಕಕ್ಕುಂಜೆ ಪ್ರದೇಶದಲ್ಲಿ ಶನಿವಾರ ತಡರಾತ್ರಿ ವ್ಯಕ್ತಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವ ವೇಳೆ ಅವರ ರುಂಡ ಬೇರ್ಪಟ್ಟಿದೆ. ಮೃತರನ್ನು ಪುರುಷೋತ್ತಮ ನಾಯಕ್ (52) ಎಂದು ಗುರುತಿಸಲಾಗಿದೆ. ಮೃತ ಪುರುಷೋತ್ತಮ ನಾಯಕ್ ಅವರು

ಆತ್ಮಹತ್ಯೆ ಮಾಡಿಕೊಳ್ಳುವಾಗ ರುಂಡ ಬೇರ್ಪಟ್ಟು ಸಾವು Read More »

ಹೋಟೆಲ್‌ನಲ್ಲಿ ತಾಸುಗಟ್ಟಲೆ ಕುಳಿತರೆ ಬರುತ್ತದೆ ಹೆಚ್ಚುವರಿ ಬಿಲ್‌!

ಸಣ್ಣ ಪುಟ್ಟ ಮೀಟಿಂಗ್‌ಗಳನ್ನು ಹೋಟೆಲ್‌ನಲ್ಲೇ ಮುಗಿಸುವವರಿಂದ ಟೇಬಲ್‌ ಚಾರ್ಜ್‌ ವಸೂಲು ಮಾಡಲು ಚಿಂತನೆ ಬೆಂಗಳೂರು : ಬೆಂಗಳೂರಿನಂಥ ದೊಡ್ಡ ನಗರಗಳಲ್ಲಿ ಹೋಟೆಲ್‌ಗಳು ಹೊಟ್ಟೆ ಹಸಿವು ತಣಿಸುವ ಕಾಫಿ- ತಿಂಡಿ ಸವಿಯುವ ಜಾಗಗಳಾಗಿ ಉಳಿಯದೆ ಮೀಟಿಂಗ್ ಸ್ಪಾಟ್‌ಗಳಾಗುತ್ತಿವೆ. ಕೆಲವರು ಅರ್ಧರ್ಧ ಕಾಫಿ ಹಿಡಿದುಕೊಂಡು ಮಾತಾಡುತ್ತಾ ಗಂಟೆಗಟ್ಟಲೆ ಕುಳಿತುಕೊಳ್ಳುತ್ತಾರೆ. ಇದರಿಂದಾಗಿ ಗ್ರಾಹಕರು ಹಾಗೂ ಹೋಟೆಲ್ ಮಾಲೀಕರಿಗೆ ತೊಂದರೆಯಾಗುತ್ತಿದೆ. ಈ ನಿಟ್ಟಿನಲ್ಲಿ ಹೊಸ ʼಟೇಬಲ್‌ ಚಾರ್ಜ್ʼ ವಸೂಲು ಮಾಡುವ ಬಗ್ಗೆ ಚರ್ಚೆ ನಡೆದಿದೆ. ಇತ್ತೀಚೆಗೆ ಬೆಂಗಳೂರಿನ ಹೋಟೆಲ್‌ವೊಂದರ ಗೋಡೆಯ ಮೇಲೆ ಇಲ್ಲಿ

ಹೋಟೆಲ್‌ನಲ್ಲಿ ತಾಸುಗಟ್ಟಲೆ ಕುಳಿತರೆ ಬರುತ್ತದೆ ಹೆಚ್ಚುವರಿ ಬಿಲ್‌! Read More »

ಭಾರತದ ಜೊತೆ ಆಡಲು ಮೂರು ಬೇಡಿಕೆ ಮುಂದಿಟ್ಟ ಪಾಕಿಸ್ತಾನ

ಬಾಂಗ್ಲಾದೇಶವನ್ನು ಬೆಂಬಲಿಸಲು ಹೋಗಿ ಇಕ್ಕಟ್ಟಿಗೆ ಸಿಲುಕಿರುವ ಪಾಕ್‌ ದುಬೈ: ಪ್ರಸ್ತುತ ನಡೆಯುತ್ತಿರುವ ಟಿ20 ವಿಶ್ವಕಪ್‌ನಲ್ಲಿ ಭಾರತದ ಜೊತೆ ಆಡುವುದಿಲ್ಲ ಎಂದು ಹೇಳಿ ಇಕ್ಕಟ್ಟಿಗೆ ಸಿಲುಕಿರುವ ಪಾಕಿಸ್ತಾನ ಈಗ ತನ್ನ ನಿಲುವು ಬದಲಿಸಲು ಮುಂದಾಗಿದೆ. ಭಾರತದ ವಿರುದ್ಧ ಟಿ20 ವಿಶ್ವಕಪ್‌ ಪಂದ್ಯವಾಡಲು ಭಾರಿ ಹೈಡ್ರಾಮಾ ನಡೆಸುತ್ತಿರುವ ಪಾಕಿಸ್ತಾನ ಈಗ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ಮುಂದೆ ಮೂರು ಮಹತ್ವದ ಬೇಡಿಕೆ ಮುಂದಿಟ್ಟಿರುವ ವಿಚಾರ ಬೆಳಕಿಗೆ ಬಂದಿದೆ. ಫೆ.15 ರಂದು ಶ್ರೀಲಂಕಾದ ಕೊಲಂಬೋದಲ್ಲಿ ಭಾರತದ ವಿರುದ್ಧ ನಿಗದಿಯಾಗಿದ್ದ ಪಂದ್ಯವನ್ನು ಬಹಿಷ್ಕರಿಸಿದ್ದಕ್ಕೆ ಪಾಕಿಸ್ತಾನ

ಭಾರತದ ಜೊತೆ ಆಡಲು ಮೂರು ಬೇಡಿಕೆ ಮುಂದಿಟ್ಟ ಪಾಕಿಸ್ತಾನ Read More »

12ಕ್ಕೂ ಅಧಿಕ ಗೋದಾಮುಗಳು ಬೆಂಕಿಗಾಹುತಿ

ಗುಜರಿಗೆ ಹತ್ತಿಕೊಂಡ ಬೆಂಕಿ ಹರಡಿ ಭಾರಿ ಅನಾಹುತ ಮೈಸೂರು: ಹಳೆ ವಸ್ತುಗಳು ಸಂಗ್ರಹಿಸಿಡುವ ಗುಜರಿಗೆ ಬೆಂಕಿ ಬಿದ್ದ ಪರಿಣಾಮ ಸಾಲು ಸಾಲು ಗೋದಾಮುಗಳು ಸುಟ್ಟು ಹೋಗಿರುವ ಘಟನೆ ಮೈಸೂರು ಹೊರವಲಯದ ಹಳೆ ಕೆಸರೆ ಗ್ರಾಮದಲ್ಲಿ ಸೋಮವಾರ ನಸುಕಿನ ವೇಳೆ ನಡೆದಿದೆ. ಮೈಸೂರು-ಬೆಂಗಳೂರು ಹೆದ್ದಾರಿ ಬಳಿಯ ಹಳೆ ಕೆಸರೆಯಲ್ಲಿ ಗುಜರಿಗೆ ಬೆಂಕಿ ಬಿದ್ದ ಪರಿಣಾಮ ಬಹಳಷ್ಟು ಗೋದಾಮುಗಳು ಹೊತ್ತಿ ಉರಿಯುತ್ತಿವೆ. ಬೆಳಗ್ಗೆ 3.30ರ ವೇಳೆಗೆ ಬೆಂಕಿ ಬಿದ್ದಿದೆ. ಸ್ಥಳೀಯರು 4.30ರ ವೇಳೆಗೆ ಅಗ್ನಿಶಾಮಕ ದಳಕ್ಕೆ ಮಾಹಿತಿ ಕೊಟ್ಟಿದ್ದಾರೆ. ಕೆಲ

12ಕ್ಕೂ ಅಧಿಕ ಗೋದಾಮುಗಳು ಬೆಂಕಿಗಾಹುತಿ Read More »

ಗೇರುಕಟ್ಟೆ ಶ್ರೀ ಪತಂಜಲಿ ಯೋಗ ಶಿಬಿರದ ಪ್ರಥಮ ವಾರ್ಷಿಕೋತ್ಸವ

ಪುತ್ತೂರು: ಕಳಿಯ ಗೇರುಕಟ್ಟೆಯ ಕ್ಷೀರ ಸಂಗಮ ಸಭಾಭವನದಲ್ಲಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕೇಂದ್ರ ಕಚೇರಿ ತುಮಕೂರು ಮಂಗಳೂರು ವಲಯ ಪುತ್ತೂರು ತಾಲೂಕು ಇದರ ವತಿಯಿಂದ ನಡೆಯುತ್ತಿರುವ ಯೋಗ ತರಬೇತಿ ಶಾಖೆಯಲ್ಲಿ ಪ್ರಥಮ ವಾರ್ಷಿಕೋತ್ಸವ ಸಮಾರಂಭ ಜರಗಿತು. ಮುಖ್ಯ ಶಿಕ್ಷಕಿ ಪ್ರೇಮಲತ ಗಣೇಶ್ ನಿತ್ಯ ಯೋಗ ಅಭ್ಯಾಸ ಮತ್ತು ಅಗ್ನಿಹೋತ್ರ ಕಾರ್ಯಕ್ರಮ ನಡೆಸಿಕೊಟ್ಟರು. ದಿವಾಕರ ಆಚಾರ್ಯ ಗೇರುಕಟ್ಟೆ ಮತ್ತು ಭಾರತಿ ಎಂ. ಎಲ್. ಅಗ್ನಿಹೋತ್ರದ ನೇತೃತ್ವ ವಹಿಸಿದ್ದರು. ಯೋಗ ಬಂಧುಗಳಾದ ಅಶೋಕ, ನಿತಿನ್, ವಸಂತ, ವಿಜಯ,

ಗೇರುಕಟ್ಟೆ ಶ್ರೀ ಪತಂಜಲಿ ಯೋಗ ಶಿಬಿರದ ಪ್ರಥಮ ವಾರ್ಷಿಕೋತ್ಸವ Read More »

error: Content is protected !!
Scroll to Top