ಸುದ್ದಿ

ಅಹಮದಾಬಾದ್‌ ವಿಮಾನ ದುರಂತ : ಇಂದು ಪ್ರಧಾನಿ ಮೋದಿ ಭೇಟಿ

ನವದೆಹಲಿ: ಏರ್‌ ಇಂಡಿಯಾ ವಿಮಾನ ಪತನಗೊಂಡು 265 ಮಂದಿ ಸಾವನ್ನಪ್ಪಿರುವ ಅಹಮದಾಬಾದ್‌ನ ದುರಂತ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಇಂದು ಭೇಟಿ ನೀಡಲಿದ್ದಾರೆ. ಸಚಿವರು ಮತ್ತು ಅಧಿಕಾರಿಗಳ ಜೊತೆ ನಿನ್ನೆಯಿಂದೀಚೆಗೆ ನಿರಂತರ ಸಂಪರ್ಕದಲ್ಲಿರುವ ಮೋದಿ ಇಂದು ಖುದ್ದಾಗಿ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಲಿದ್ದಾರೆ. ವಿಮಾನ ಪತನಗೊಂಡ ಸ್ಥಳಕ್ಕೆ ಮೋದಿ ಭೇಟಿ ನೀಡಲಿದ್ದು, ಅಧಿಕಾರಿಗಳಿಂದ ದುರಂತದ ಬಗ್ಗೆ ಮಾಹಿತಿ ಪಡೆಯಲಿದ್ದಾರೆ. ಬಳಿಕ ಆಸ್ಪತ್ರೆಗೆ ಭೇಟಿ ನೀಡಿ, ಬದುಕುಳಿದ ಏಕೈಕ ಪ್ರಯಾಣಿಕನ ಆರೋಗ್ಯ ವಿಚಾರಿಸಲಿದ್ದಾರೆ. ನಿನ್ನೆಯೂ ಅವಘಡದ ಕುರಿತು ಕೇಂದ್ರ […]

ಅಹಮದಾಬಾದ್‌ ವಿಮಾನ ದುರಂತ : ಇಂದು ಪ್ರಧಾನಿ ಮೋದಿ ಭೇಟಿ Read More »

ಇರಾನ್‌ ಮೇಲೆ ಇಸ್ರೇಲ್‌ ಹಠಾತ್‌ ದಾಳಿ : ಅಣ್ವಸ್ತ್ರ ನೆಲೆಗಳೇ ಗುರಿ

ಇರಾನ್ ಸೇನಾಧಿಕಾರಿಗಳು, ಪರಮಾಣು ವಿಜ್ಞಾನಿಗಳು ಸಾವನ್ನಪ್ಪಿರುವ ಶಂಕೆ ಜೆರುಸಲೇಂ : ಇರಾನ್‌ನ ಪರಮಾಣು ನೆಲೆಗಳನ್ನು ಗುರಿಯಾಗಿಸಿಕೊಂಡು ಇಸ್ರೇಲ್ ಸೇನೆ ಶುಕ್ರವಾರ ಬೆಳಗಿನ ಜಾವ ಹಠಾತ್ ದಾಳಿ ನಡೆಸಿದೆ. ಇರಾನ್ ರಾಜಧಾನಿ ಟೆಹ್ರಾನ್ ಸೇರಿದಂತೆ ಹಲವು ಕಡೆಗಳಲ್ಲಿ ಸ್ಫೋಟದ ಸದ್ದು ಕೇಳಿಸಿದೆ. ಈ ದಾಳಿಯಲ್ಲಿ ಇರಾನ್ ಸೇನೆಯ ಪ್ರಮುಖ ಅಧಿಕಾರಿಗಳು, ಪರಮಾಣು ವಿಜ್ಞಾನಿಗಳು ಸೇರಿದಂತೆ ಅನೇಕ ಪ್ರಮುಖರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ. ಇರಾನ್‌ಗೆ ಭಾರಿ ಹಾನಿಯಾಗಿದೆ ಎಂದು ಇಸ್ರೇಲ್ ಹೇಳಿಕೊಂಡಿದೆ. ಇರಾನ್ ಪರಮಾಣು ನೆಲೆಗಳನ್ನು ಗುರಿಯಾಗಿಸಿ ನಮ್ಮ ಸೇನೆ

ಇರಾನ್‌ ಮೇಲೆ ಇಸ್ರೇಲ್‌ ಹಠಾತ್‌ ದಾಳಿ : ಅಣ್ವಸ್ತ್ರ ನೆಲೆಗಳೇ ಗುರಿ Read More »

ಅಹಮದಾಬಾದ್‌ವಿಮಾನ ದುರಂತ ಸಾವಿನ ಸಂಖ್ಯೆ 265ಕ್ಕೇರಿಕೆ

ಡ್ರೀಮ್‌ಲೈನರ್‌ನಲ್ಲಿ ಪ್ರಯಾಣಿಸುತ್ತಿದ್ದವರ ಕನಸುಗಳೆಲ್ಲ ಆಕಾಶದಲ್ಲೇ ಸುಟ್ಟು ಕರಕಲಾಯಿತು 1.25 ಲಕ್ಷ ಲೀಟರ್‌ನಷ್ಟು ಪೆಟ್ರೋಲ್‌ ಸ್ಫೋಟಿಸಿ ಭೀಕರ ಅವಘಡ ನವದೆಹಲಿ: ಡ್ರೀಮ್‌ಲೈನರ್‌ ವಿಮಾನದಲ್ಲಿ ಬದುಕಿನ ನಾನಾ ಕನಸುಗಳನ್ನು ಹೊತ್ತು ಪ್ರಯಾಣಿಸುತ್ತಿದ್ದವರ ಕನಸುಗಳೆಲ್ಲ ಆಕಾಶದಲ್ಲೇ ಹೊತ್ತಿ ಉರಿದು ಕರಟಿ ಹೋಗಿವೆ. ದೇಶ ಕಂಡ ಮಹಾ ವಿಮಾನ ದುರಂತವೊಂದು 265 ಮಂದಿಯ ಪ್ರಾಣ ಕಸಿದುಕೊಂಡಿದೆ. ಅಹಮದಾಬಾದ್‌ನಲ್ಲಿ ಗುರುವಾರ ಮಧ್ಯಾಹ್ನ ಏರ್‌ ಇಂಡಿಯಾ ವಿಮಾನ ಪತನಗೊಂಡು ಸಂಭವಿಸಿದ ಮಹಾದುರಂತದಲ್ಲಿ ಒಟ್ಟು 265 ಮಂದಿ ಸಾವನ್ನಪ್ಪಿದ್ದಾರೆ. ವಿಮಾನದಲ್ಲಿ 242 ಮಂದಿಯ ಪೈಕಿ ಓರ್ವ ಮಾತ್ರ

ಅಹಮದಾಬಾದ್‌ವಿಮಾನ ದುರಂತ ಸಾವಿನ ಸಂಖ್ಯೆ 265ಕ್ಕೇರಿಕೆ Read More »

ಬಸ್‌-ಆಟೋರಿಕ್ಷಾ ಡಿಕ್ಕಿ : ಓರ್ವ ಸಾವು

ಮಂಗಳೂರು: ಖಾಸಗಿ ಬಸ್ ಮತ್ತು ಆಟೋರಿಕ್ಷಾ ನಡುವೆ ಡಿಕ್ಕಿಯಾಗಿ ಓರ್ವ ವ್ಯಕ್ತಿ ಸಾವನ್ನಪ್ಪಿ, ನಾಲ್ವರು ಗಾಯಗೊಂಡಿರುವ ಘಟನೆ ಕಾರ್ಕಳ-ಪಡುಬಿದ್ರಿ ರಾಜ್ಯ ಹೆದ್ದಾರಿಯಲ್ಲಿರುವ ಅಡ್ವೆ ಗಣಪತಿ ದೇವಸ್ಥಾನದ ಬಳಿ ಗುರುವಾರ ಬೆಳಗ್ಗೆ ಸಂಭವಿಸಿದೆ. ಬಸ್ ಕಾರ್ಕಳದಿಂದ ಮಂಗಳೂರಿನ ಕಡೆಗೆ ಪ್ರಯಾಣಿಸುತ್ತಿದ್ದಾಗ, ಅಡ್ಡ ರಸ್ತೆಯಿಂದ ಬಂದ ಆಟೋರಿಕ್ಷಾ ಇದ್ದಕ್ಕಿದ್ದಂತೆ ಬಸ್‌ನ ಮಾರ್ಗಕ್ಕೆ ಅಡ್ಡಲಾಗಿ ಬಂದಿದೆ. ಪರಿಣಾಮ ಬಸ್ ರಿಕ್ಷಾಗೆ ಡಿಕ್ಕಿ ಹೊಡೆದು ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯಲ್ಲಿ ನಿಂತಿದೆ. ಅದೃಷ್ಟವಶಾತ್, ಬಸ್ ರಸ್ತೆಬದಿಯ ಕಂದಕಕ್ಕೆ ಬೀಳುವುದು ಸ್ವಲ್ಪದರಲ್ಲೇ ತಪ್ಪಿದ ಕಾರಣ

ಬಸ್‌-ಆಟೋರಿಕ್ಷಾ ಡಿಕ್ಕಿ : ಓರ್ವ ಸಾವು Read More »

ಕಾಂತಾರ-1 ಚಿತ್ರದ ಇನ್ನೋರ್ವ ಕಲಾವಿದ ಸಾವು

ಕೆಲವೇ ತಿಂಗಳ ಅಂತರದಲ್ಲಿ ಚಿತ್ರದ ಮೂವರು ಕಲಾವಿದರು ಮೃತ್ಯು ಮಂಗಳೂರು: ಕರಾವಳಿಯ ದೈವಾರಾಧನೆಯ ಕಥೆಯನ್ನೊಳಗೊಂಡಿರುವ ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸುತ್ತಿರುವ ಕಾಂತಾರ-1 ಚಿತ್ರಕ್ಕೆ ಅಪಘಾತ, ಅವಘಡ ಎಂದು ಪದೇಪದೆ ಅಪಶಕುನ ಎದುರಾಗುತ್ತಿದೆ. ಈ ಚಿತ್ರದಲ್ಲಿ ನಟಿಸುತ್ತಿದ್ದ ಇಬ್ಬರು ಕಲಾವಿದರು ಈ ಮೊದಲು ಬೇರೆ ಬೇರೆ ಕಾರಣಗಳಿಂದ ಮೃತಪಟ್ಟಿದ್ದರು. ಇದೀಗ ಇನ್ನೋರ್ವ ಕಲಾವಿದ ಮೃತ್ಯುವೀಡಾಗಿದ್ದಾರೆ. ವಿಜು ವಿ.ಕೆ ಎಂಬುವವರು ಮೃತ ದುರ್ದೈವಿ. ಇವರು ಕೇರಳದ ತ್ರಿಶ್ಶೂರ್​ನವರು. ‘ಕಾಂತಾರ-1’ ಸಿನಿಮಾ ಶೂಟ್​ಗಾಗಿ ಕರ್ನಾಟಕಕ್ಕೆ ಬಂದು ಆಗುಂಬೆಯ ಸಮೀಪದ ಹೋಂ ಸ್ಟೇನಲ್ಲಿ

ಕಾಂತಾರ-1 ಚಿತ್ರದ ಇನ್ನೋರ್ವ ಕಲಾವಿದ ಸಾವು Read More »

ಸರ್ಕಾರ-ವಿಪಕ್ಷ ಜಾತಿ ಗಣತಿ ಜಟಾಪಟಿ

ಮೊದಲ ಗಣತಿಗೆ ಮಾಡಿದ 165 ಕೋ. ರೂ.ಗೆ ಯಾರು ಹೊಣೆ ಎಂದು ಪ್ರಶ್ನೆ ಬೆಂಗಳೂರು: ರಾಜ್ಯದಲ್ಲಿ ಮರಳಿ ಜಾತಿ ಗಣತಿ ಮಾಡುವ ವಿಚಾರ ಭಾರಿ ವಿವಾದಕ್ಕೆ ಕಾರಣವಾಗಿದೆ. ಪ್ರತಿಪಕ್ಷ ಬಿಜೆಪಿ ಮತ್ತು ಜೆಡಿಎಸ್‌ ಈ ವಿಚಾರದಲ್ಲಿ ಸರ್ಕಾರದ ವಿರುದ್ಧ ಮುಗಿಬಿದ್ದಿವೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ರಾಜ್ಯ ಸರ್ಕಾರ ಮತ್ತೆ ಜಾತಿ ಗಣತಿ ಸಮೀಕ್ಷೆ ನಡೆಸಲು ಮುಂದಾಗಿದೆ. ಈಗಾಗಲೇ ನಡೆದ ಸಮೀಕ್ಷೆ ವರದಿ ಏನು ಮಾಡುತ್ತೀರಿ? 165 ಕೋಟಿ ರೂ. ಖರ್ಚು ಮಾಡಿದ್ದು ನೀರಿನಲ್ಲಿಟ್ಟ ಹೋಮದಂತಾಯಿತೇ ಎಂದು ಬಿಜೆಪಿ

ಸರ್ಕಾರ-ವಿಪಕ್ಷ ಜಾತಿ ಗಣತಿ ಜಟಾಪಟಿ Read More »

ಪಾರ್ಟಿ ಮಾಡಲು ಅನುಮತಿ ಪಡೆಯಬೇಕೆಂದು ಗೊತ್ತಿರಲಿಲ್ಲ : ಮಂಗ್ಲಿ ಗೋಳಾಟ

ಬರ್ತ್‌ಡೇ ಪಾರ್ಟಿಯಲ್ಲಿ ಮದ್ಯ, ಮಾದಕ ವಸ್ತು ಬಳಸಿದ ಪ್ರಕರಣ ಹೈದರಾಬಾದ್‌: ಬರ್ತ್‌ಡೇ ಪಾರ್ಟಿಯಲ್ಲಿ ಮದ್ಯ ಮತ್ತು ಡ್ರಗ್ಸ್‌ ಪೂರೈಸಿರುವ ಆರೋಪಕ್ಕೆ ಒಳಗಾಗಿರುವ ತೆಲುಗಿನ ಪ್ರಸಿದ್ಧ ಗಾಯಕಿ ಮಂಗ್ಲಿ ಯಾನೆ ಸತ್ಯವತಿ ರಾಠೋಡ್‌, ಪಾರ್ಟಿಯಲ್ಲಿ ಮದ್ಯ ಸೇವಿಸಲು ಪೊಲೀಸರ ಅನುಮತಿ ಪಡೆಯಬೇಕೆಂದು ತನಗೆ ಗೊತ್ತಿರಲಿಲ್ಲ, ಇದು ಅರಿವಿಲ್ಲದೆ ಆಗಿರುವ ತಪ್ಪು ಎಂದು ಹೇಳಿಕೊಂಡಿದ್ದಾರೆ. ಪ್ರಸಿದ್ಧ ಜಾನಪದ ಗಾಯಕಿಯಾಗಿರುವ ಮಂಗ್ಲಿ ತೆಲುಗು ಮತ್ತು ಕನ್ನಡದ ಅನೇಕ ಸಿನಿಮಾಗಳಿಗೂ ಹಾಡಿದ್ದಾರೆ. ವಿಶಿಷ್ಟವಾದ ಧ್ವನಿ ಮತ್ತು ಜಾನಪದ ಶೈಲಿಯ ನೃತ್ಯಗಳಿಂದ ಅವರು ಸೋಷಿಯಲ್‌

ಪಾರ್ಟಿ ಮಾಡಲು ಅನುಮತಿ ಪಡೆಯಬೇಕೆಂದು ಗೊತ್ತಿರಲಿಲ್ಲ : ಮಂಗ್ಲಿ ಗೋಳಾಟ Read More »

ರೈಲ್ವೆ ಟಿಕೆಟ್‌ ಬುಕ್ಕಿಂಗ್‌ ನಿಯಮಗಳಲ್ಲಿ ಮಹತ್ವದ ಬದಲಾವಣೆ

ಜುಲೈ 1ರಿಂದಲೇ ಜಾರಿಗೆ ಬರಲಿದೆ ಹೊಸ ನಿಯಮ ನವದೆಹಲಿ: ಭಾರತೀಯ ರೈಲ್ವೆ ಸಚಿವಾಲಯ ತತ್ಕಾಲ್​ ಟಿಕೆಟ್​ ಬುಕಿಂಗ್ ನಿಯಮಯದಲ್ಲಿ ಬದಲಾವಣೆ ಮಾಡಿದೆ. ತತ್ಕಾಲ್​ ಟಿಕೆಟ್​ ಬುಕ್ಕಿಂಗ್​ ಮಾಡಬೇಕೆಂದರೆ IRCTC ಅಧಿಕೃತ ವೆಬ್​ಸೈಟ್​ ಅಥವಾ ಆ್ಯಪ್‌ಗೆ ಆಧಾರ್​ ಲಿಂಕ್​ ಆಗಿರುವುದನ್ನು ಕಡ್ಡಾಯಗೊಳಿಸಲಾಗಿದೆ. ಹೀಗಾಗಿ ಇನ್ಮುಂದೆ ಆಧಾರ್ ಲಿಂಕ್​ ಹೊಂದಿರುವ ಬಳಕೆದಾರರು ಮಾತ್ರ ತತ್ಕಾಲ್ ಟಿಕೆಟ್‌ಗಳನ್ನು ಬುಕ್ ಮಾಡಲು ಸಾಧ್ಯವಾಗುತ್ತದೆ. ಜೊತೆಗೆ ಏಜೆಂಟ್‌ಗಳ ಮೇಲೆ ಸಮಯದ ನಿರ್ಬಂಧ ಹೇರಿದೆ. ಈ ಬಗ್ಗೆ ರೈಲ್ವೆ ಸಚಿವಾಲಯ ಆದೇಶ ಹೊರಡಿಸಿದ್ದು, ಈ ಹೊಸ

ರೈಲ್ವೆ ಟಿಕೆಟ್‌ ಬುಕ್ಕಿಂಗ್‌ ನಿಯಮಗಳಲ್ಲಿ ಮಹತ್ವದ ಬದಲಾವಣೆ Read More »

ಕೋಮು ನಿಗ್ರಹ ಪಡೆ ನಾಳೆ ಉದ್ಘಾಟನೆ

ಸುಧೀರ್‌ ಕುಮಾರ್‌ ರೆಡ್ಡಿ ಮುಖ್ಯಸ್ಥ; ಮಂಗಳೂರಲ್ಲಿ ಕೇಂದ್ರ ಕಚೇರಿ ಬೆಂಗಳೂರು: ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಪದೇಪದೆ ಸಂಭವಿಸುತ್ತಿರುವ ಕೋಮು ಗಲಭೆಗಳನ್ನು ನಿಗ್ರಹಿಸುವ ಸಲುವಾಗಿ ಸರ್ಕಾರ ರಚಿಸಿರುವ ವಿಶೇಷ ಕೋಮು ನಿಗ್ರಹ ಪಡೆಯ ಉದ್ಘಾಟನೆ ನಾಳೆ ನೆರವೇರಲಿದೆ. ಗೃಹ ಸಚಿವ ಜಿ.ಪರಮೇಶ್ವರ್‌ ಉದ್ಘಾಟಿಸಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಭಾಗವಹಿಸಲಿದ್ದಾರೆ. ಕೋಮುಗಲಭೆ ಪ್ರಚೋದಿಸುವ ಸರಣಿ ಹತ್ಯೆಗಳ ತಡೆಗೆ ರಾಜ್ಯ ಸರ್ಕಾರ ಈ ವಿಶೇಷ ಪಡೆಯನ್ನು ರಚಿಸಿದೆ. ವಿಶೇಷ ಕಾರ್ಯಪಡೆ ಘಟಕಕ್ಕೆ ಮಂಗಳೂರು ನಗರ ಪೊಲೀಸ್ ಆಯುಕ್ತ

ಕೋಮು ನಿಗ್ರಹ ಪಡೆ ನಾಳೆ ಉದ್ಘಾಟನೆ Read More »

ಜಲರಾಶಿಯ ನಡುವೆ ಧಗಧಗಿಸುತ್ತಿದೆ ಸಿಂಗಾಪುರದ ಹಡಗು : ಬೆಂಕಿ ನಂದಿಸಲು ಹರಸಾಹಸ

ರಾಸಾಯನಿಕ, ತೈಲ ತುಂಬಿರುವ ಕಂಟೈನರ್‌ಗಳು ಸ್ಫೋಟಿಸುವ ಆತಂಕ ಮಂಗಳೂರು: ಕೇರಳದ ಕರಾವಳಿ ಸಮೀಪ ಸಿಂಗಾಪುರ ಮೂಲದ ಕಂಟೈನರ್‌ ಸಾಗಿಸುತ್ತಿದ್ದ ಬೃಹತ್‌ ಹಡಗಿಗೆ ಭೀಕರ ಸ್ಫೋಟದ ಬಳಿಕ ಹತ್ತಿಕೊಂಡ ಬೆಂಕಿಯನ್ನು ನಂದಿಸಲು 48 ತಾಸುಗಳ ಸತತ ಕಾರ್ಯಾಚರಣೆಯ ಬಳಿಕವೂ ಸಾಧ್ಯವಾಗಿಲ್ಲ. ಹಡಗಿನಲ್ಲಿ ರಾಸಾಯನಿಕವೂ ಸೇರಿದಂತೆ ಅಪಾಯಕಾರಿ ತೈಲ ಮತ್ತು ಅನಿಲ ಇರುವ ಕಂಟೈನರ್‌ಗಳು ಕೂಡ ಇವೆ. ಹೀಗಾಗಿ ಈ ಹಡಗು ಕರಾವಳಿ ಭಾಗದಲ್ಲಿ ತೀವ್ರ ಆತಂಕ ಹುಟ್ಟಿಸಿದೆ. ಕೆಲದಿನಗಳ ಹಿಂದೆಯಷ್ಟೇ ಕೇರಳ ಕರಾವಳಿಯಾಚೆ ಕಂಟೈನರ್‌ ಹಡಗೊಂದು ಮುಳುಗಿ ಅನೇಕ

ಜಲರಾಶಿಯ ನಡುವೆ ಧಗಧಗಿಸುತ್ತಿದೆ ಸಿಂಗಾಪುರದ ಹಡಗು : ಬೆಂಕಿ ನಂದಿಸಲು ಹರಸಾಹಸ Read More »

error: Content is protected !!
Scroll to Top