ಸುದ್ದಿ

ಕಾಲ್ತುಳಿತ ಘಟನೆಯ ತಪ್ಪೆಲ್ಲ ಪೊಲೀಸರದ್ದೇ : ಸಿದ್ದರಾಮಯ್ಯ

ನಾವು ತಪ್ಪೇ ಮಾಡಿಲ್ಲ, ಹೀಗಾಗಿ ಕಪ್ಪುಚುಕ್ಕೆ ಇಲ್ಲ ಎಂದು ಸಮರ್ಥನೆ ಬೆಂಗಳೂರು : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕಾಲ್ತುಳಿತದ ಸಂಪೂರ್ಣ ಹೊಣೆ ಪೊಲೀಸರದ್ದೇ, ಸರ್ಕಾರ ತಪ್ಪೆ ಮಾಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಘಟನೆಯಲ್ಲಿ ಸರ್ಕಾರ ತಪ್ಪೇ ಮಾಡಿಲ್ಲ, ಪೊಲೀಸರು ತಪ್ಪು ಮಾಡಿದ್ದಾರೆ. ಸರ್ಕಾರಕ್ಕೆ ಯಾಕೆ ಮುಜುಗರ ಆಗಬೇಕು ಎಂದು ಪ್ರಶ್ನಿಸುವ ಮೂಲಕ ಸಿದ್ದರಾಮಯ್ಯ ಸರ್ಕಾರವನ್ನು ಸಮರ್ಥಿಸಿಕೊಂಡಿದ್ದಾರೆ. ಕಾಲ್ತುಳಿತ ಪ್ರಕರಣದಲ್ಲಿ ಪೊಲೀಸರಿಂದಲೇ ತಪ್ಪು ನಡೆದಿದೆ. ಕಾರ್ಯಕ್ರಮಕ್ಕೆ ಬಂದೋಬಸ್ತ್ ಮಾಡಿದ್ದೇವೆ ಎಂದು ತಿಳಿಸಬೇಕಾದವರು ಯಾರು? ನಗರ ಪೊಲೀಸ್‌ […]

ಕಾಲ್ತುಳಿತ ಘಟನೆಯ ತಪ್ಪೆಲ್ಲ ಪೊಲೀಸರದ್ದೇ : ಸಿದ್ದರಾಮಯ್ಯ Read More »

ಮಹಿಳೆಯ ಹೊಟ್ಟೆಯೊಳಗಿತ್ತು 861 ಕಲ್ಲು!

ಮೈಸೂರು : ಮಹಿಳೆಯ ಹೊಟ್ಟೆಯೊಳಗಿದ್ದ 861 ಕಲ್ಲುಗಳನ್ನು ವೈದ್ಯರು ಹೊರ ತೆಗೆದಿರುವಂತಹ ಘಟನೆಯೊಂದು ನಗರದಲ್ಲಿ ನಡೆದಿದೆ. ಮೈಸೂರಿನ ಕಾವೇರಿ ಆಸ್ಪತ್ರೆಯ ವೈದ್ಯರು ಮಾಡಿದ ಅಪರೂಪದ ಶಸ್ತ್ರ ಚಿಕಿತ್ಸೆ ಇದು. ವೈದ್ಯಕೀಯ ತಪಾಸಣೆ ವೇಳೆ ಮಹಿಳೆಯ ಗಾಲ್ ಬ್ಲಾಡರ್ ಮತ್ತು ಬೈಲ್ ಡಕ್ಟ್​ನಲ್ಲಿ ಕಲ್ಲುಗಳು ಇರುವುದು ಪತ್ತೆ ಆಗಿದೆ. ಕೂಡಲೇ ಎಂಡೋಸ್ಕೋಪಿಕ್ ರೆಟ್ರೋಗ್ರೇಡ್​​ಕೊಲೆಂಜಿಯೊ ಪ್ಯಾಂಕ್ರಿಯಾಟೋಗ್ರಫಿ ವಿಧಾನದ ಮ‌ೂಲಕ ಶಸ್ತ್ರಚಿಕಿತ್ಸೆ ಮಾಡಿ ಕಲ್ಲುಗಳನ್ನು ಹೊರ ತೆಗೆದಿದ್ದಾರೆ. 55 ವರ್ಷದ ಮಹಿಳೆಯೋರ್ವರು ಹೊಟ್ಟೆನೋವು ಮತ್ತು ಜಾಂಡೀಸ್​ನಿಂದ ಬಳಲುತ್ತಿದ್ದರು. ತಪಾಸಣೆ ಮಾಡಿದ ವೈದ್ಯರು,

ಮಹಿಳೆಯ ಹೊಟ್ಟೆಯೊಳಗಿತ್ತು 861 ಕಲ್ಲು! Read More »

ಇಡೀ ರಾಜ್ಯವೇ ಕಾರಣ ಕೇಳುತ್ತಿದ್ದರೂ ಬಾಯಿ ಬಿಗಿದು ಕುಳಿತಿದ್ದೇಕೆ?

ಸಿದ್ದರಾಮಯ್ಯನವರಿಗೆ ಶಾಸಕ ಸುನಿಲ್‌ ಕುಮಾರ್‌ ಪ್ರಶ್ನೆ ಕಾರ್ಕಳ: ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜಕೀಯ ಕಾರ್ಯದರ್ಶಿ ಗೋವಿಂದರಾಜ್‌ ಅವರನ್ನು ಆರ್‌ಸಿಬಿ ವಿಜಯೋತ್ಸವ ಸಂದರ್ಭದಲ್ಲಿ 11 ಮಂದಿಯ ಸಾವಿಗೆ ಕಾರಣವಾದ ಕಾಲ್ತುಳಿತ ಘಟನೆಗೆ ಹೊಣೆಗಾರರನ್ನಾಗಿ ಮಾಡಿ ಹುದ್ದೆಯಿಂದ ಕಿತ್ತು ಹಾಕಿದ ಕ್ರಮದ ಕುರಿತು ಬಿಜೆಪಿ ಶಾಸಕ ಸುನಿಲ್‌ ಕುಮಾರ್‌ ಹಲವು ಪ್ರಶ್ನೆಗಳನ್ನು ಎತ್ತಿದ್ದಾರೆ. ನಿಮ್ಮ ʼಸಯಾಮಿʼಯಂತೆ ಸದಾ ಅಂಟಿಕೊಂಡೇ ಇರುತ್ತಿದ್ದ ಕೆ.ಗೋವಿಂದರಾಜ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ ಬಿಡುಗಡೆಗೊಳಿಸಿದ್ದೇಕೆ? ಗೋವಿಂದರಾಜ್ ಕೊಟ್ಟ ಸಲಹೆ ಆಧರಿಸಿ ಈ ಕಾರ್ಯಕ್ರಮ

ಇಡೀ ರಾಜ್ಯವೇ ಕಾರಣ ಕೇಳುತ್ತಿದ್ದರೂ ಬಾಯಿ ಬಿಗಿದು ಕುಳಿತಿದ್ದೇಕೆ? Read More »

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ : ಅಪಾರ ಹಾನಿ

ಮೈತೆಯಿ ಸಂಘಟನೆಯ ನಾಯಕನ ಬಂಧನ ವಿರೋಧಿಸಿ ಪ್ರತಿಭಟನೆ ಇಂಫಾಲ: ಮಣಿಪುರದಲ್ಲಿ ಹಿಂಸಾಚಾರ ಮತ್ತೆ ಭುಗಿಲೆದ್ದಿದೆ. ರಾತ್ರೋರಾತ್ರಿ ಎಲ್ಲ ಜಿಲ್ಲೆಗಳಲ್ಲಿ ಇಂಟರ್ನೆಟ್​​ ಸ್ಥಗಿತಗೊಳಿಲಾಗಿದ್ದು, ಹಲವೆಡೆ ಕರ್ಫ್ಯೂ ಜಾರಿ ಮಾಡಲಾಗಿದೆ. ಭದ್ರತಾ ಪಡೆಗಳು ಮಣಿಪುರದ ಇಂಫಾಲ್ ಪಶ್ಚಿಮದ ಕ್ವಾಕೆಟಾಲ್ ಪ್ರದೇಶದಲ್ಲಿ ಮೈತೆಯಿ ಸಂಘಟನೆಯ ನಾಯಕ ಅರಾಂಬೈ ಟೆಂಗೋಲ್ ಅವರನ್ನು ಬಂಧಿಸಿದ್ದು, ಇದು ಅವರ ಬೆಂಬಲಿಗರನ್ನು ಕೆರಳಿಸಿದೆ. ಇದರ ಬೆನ್ನಲ್ಲೇ ಮಣಿಪುರದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಹಿಂಸಾಚಾರ ಹಿನ್ನೆಲೆಯಲ್ಲಿ ಪೊಲೀಸರು ಹಲವು ಜಿಲ್ಲೆಗಳಲ್ಲಿ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಿದ್ದಾರೆ. ಇಂಫಾಲ್

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ : ಅಪಾರ ಹಾನಿ Read More »

34.4 ಕೋಟಿಯಿಂದ 7.25 ಕೋಟಿಗಿಳಿದ ಕಡುಬಡವರ ಸಂಖ್ಯೆ

ದೇಶದಲ್ಲಿ ಕಡುಬಡವರ ಸಂಖ್ಯೆ ಭಾರಿ ಪ್ರಮಾಣದಲ್ಲಿ ಇಳಿಮುಖ ಎಂದು ವಿಶ್ವಬ್ಯಾಂಕ್‌ ವರದಿ ನವದೆಹಲಿ: ದೇಶದಲ್ಲಿ ಕಡಡುಬಡವರ ಸಂಖ್ಯೆ ಭಾರಿ ಪ್ರಮಾಣದಲ್ಲಿ ಇಳಿಕೆಯಾಗುತ್ತಿದೆ ಎಂದು ವರದಿಯೊಂದು ತಿಳಿಸಿದೆ. ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಎನ್‌ಡಿಎ ಸರ್ಕಾರದ ಆಡಳಿತದಲ್ಲಿ ಕಳೆದೊಂದು ದಶಕದಲ್ಲಿ ಕಡುಬಡತನದ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದೆ. 2011-12ರಲ್ಲಿ ಶೇ. 27.1 ಇದ್ದ ಕಡುಬಡತನ ಪ್ರಮಾಣ 2022-23ರಲ್ಲಿ ಶೇ.5.3ಕ್ಕೆ ಇಳಿದಿದೆ ಎಂದು ವಿಶ್ವಬ್ಯಾಂಕ್ ಅಂಕಿಅಂಶಗಳು ಬಹಿರಂಗಪಡಿಸಿವೆ. 2022-23ರ ಅವಧಿಯಲ್ಲಿ ಭಾರತದಲ್ಲಿ ಸುಮಾರು 75.24 ಮಿಲಿಯನ್ ಜನರು ತೀವ್ರ ಬಡತನದಲ್ಲಿದ್ದರು. ಇದು

34.4 ಕೋಟಿಯಿಂದ 7.25 ಕೋಟಿಗಿಳಿದ ಕಡುಬಡವರ ಸಂಖ್ಯೆ Read More »

ಸಿದ್ದರಾಮಯ್ಯ, ಖಾದರ್‌ ವಿರುದ್ಧ ಅವಹೇಳನಕಾರಿ ಸಂದೇಶ : ಕೇಸ್‌ ದಾಖಲು

ಬಕ್ರೀದ್‌ ಹಬ್ಬದ ಹಿನ್ನೆಲೆಯಲ್ಲಿ ವಾಟ್ಸಾಪ್‌ ಗ್ರೂಪ್‌ಗಳಲ್ಲಿ ಸಂದೇಶ ಹಂಚಿಕೆ ಮಂಗಳೂರು: ಸೋಷಿಯಲ್‌ ಮೀಡಿಯಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸ್ಪೀಕರ್‌ ಯು.ಟಿ. ಖಾದರ್‌ ಮತ್ತು ಕಾಂಗ್ರೆಸ್‌ ಪಕ್ಷದ ವಿರುದ್ಧ ಅವಹೇಳನಕಾರಿ ಸಂದೇಶ ಪೋಸ್ಟ್‌ ಮಾಡಿದ ಕುರಿತು ಮಂಗಳೂರು ಪೊಲೀಸರು ಕೇಸ್‌ ದಾಖಲಿಸಿಕೊಂಡಿದ್ದಾರೆ. ‘ಪಿರ್ಸ ಎಪ್ಪೊಲುಂ ಇಕ್ಕಟ್ಟ್’ ಎಂಬ ವಾಟ್ಸ್‌ಆ್ಯಪ್ ಗ್ರೂಪ್‌ನಲ್ಲಿ ಸ್ಪೀಕರ್ ಯು.ಟಿ.ಖಾದರ್, ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಪಕ್ಷ ಮತ್ತು ಪೊಲೀಸರ ವಿರುದ್ಧ ಅವಹೇಳನಕಾರಿಯಾಗಿ ಸಂದೇಶಗಳನ್ನು ಹರಿಯಬಿಡಲಾಗಿತ್ತು. ಈ ಗ್ರೂಪ್‌ನಲ್ಲಿ ಅಶ್ರಫ್ ಕಿನಾರ ಕುದ್ರೋಳಿ ಎಂಬ ಹೆಸರಿನ ವ್ಯಕ್ತಿ

ಸಿದ್ದರಾಮಯ್ಯ, ಖಾದರ್‌ ವಿರುದ್ಧ ಅವಹೇಳನಕಾರಿ ಸಂದೇಶ : ಕೇಸ್‌ ದಾಖಲು Read More »

ಅಮರನಾಥ ಯಾತ್ರೆಗೆ ಆಪರೇಷನ್‌ ಶಿವ ಭದ್ರತೆ

50,000 ಅರೆಸೇನಾಪಡೆ ಸಿಬ್ಬಂದಿ ಮತ್ತು ಕಾಶ್ಮೀರ ಪೊಲೀಸರಿಂದ ಸರ್ಪಗಾವಲು ಶ್ರೀನಗರ: ಪಹಲ್ಗಾಮ್‌ನಲ್ಲಿ ಅಮಾಯಕ ಪ್ರವಾಸಿಗರನ್ನು ಪಾಕಿಸ್ಥಾನದ ಉಗ್ರರು ಧರ್ಮ ಕೇಳಿ ಹತ್ಯೆಗೈದ ಬಳಿಕ ಎಚ್ಚೆತ್ತುಕೊಂಡಿರುವ ಸರ್ಕಾರ ಅಮರನಾಥ ಯಾತ್ರೆಗೆ ಗರಿಷ್ಠ ಭದ್ರತೆ ಒದಗಿಸಲು ಏರ್ಪಾಡು ಮಾಡಿದೆ. ಯಾತ್ರಿಕರಿಗೆ ಬಹುಪದರದ ಗರಿಷ್ಠ ಭದ್ರತೆ ಕಲ್ಪಿಸುವ ಉದ್ದೇಶದಿಂದ ಭಾರತೀಯ ಸೇನೆ, ಸಿಆರ್‌ಪಿಎಫ್ ಹಾಗೂ ಕಾಶ್ಮೀರ ಪೊಲೀಸ್ ಇಲಾಖೆ ಜಂಟಿಯಾಗಿ `ಆಪರೇಷನ್ ಶಿವ’ ಯೋಜನೆಯನ್ನು ಜಾರಿಗೆ ತಂದಿದೆ. ‘ಆಪರೇಷನ್ ಶಿವ’ ಅಮರನಾಥ ಯಾತ್ರಿಕರಿಗೆ ಹೆಜ್ಜೆ ಹೆಜ್ಜೆಗೂ ಸುರಕ್ಷಿತ ಹಾಗೂ ಸುಗಮ ಪ್ರಯಾಣಕ್ಕೆ

ಅಮರನಾಥ ಯಾತ್ರೆಗೆ ಆಪರೇಷನ್‌ ಶಿವ ಭದ್ರತೆ Read More »

ಕಾಲ್ತುಳಿದಲ್ಲಿ ಮಡಿದವರ ಕುಟುಂಬಗಳ ಪರಿಹಾರ ಮೊತ್ತ 25 ಲಕ್ಷಕ್ಕೇರಿಕೆ

ಅಲ್ಪ ಪರಿಹಾರ ನೀಡಿದ್ದಕ್ಕೆ ಟೀಕೆ ವ್ಯಕ್ತವಾದ ಬಳಿಕ ಹೆಚ್ಚಳ ಮಾಡಿದ ಸರ್ಕಾರ ಬೆಂಗಳೂರು: ಆರ್‌ಸಿಬಿ ವಿಜಯೋತ್ಸವ ವೇಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮಡಿದವರ ಕುಟುಂಬಗಳಿಗೆ ಬರೀ 10 ಲ.ರೂ. ಪರಿಹಾರ ಘೋಷಿಸಿದ್ದಕ್ಕೆ ಭಾರಿ ಟೀಕೆಗೆ ಗುರಿಯಾಗಿದ್ದ ಸರ್ಕಾರ ಇದೀಗ ಪರಿಹಾರ ಮೊತ್ತವನ್ನು 25 ಲ.ರೂ.ಗೆ ಏರಿಕೆ ಮಾಡಿದೆ. ಕಾಲ್ತುಳಿತದಿಂದ ಸಾವನ್ನಪ್ಪಿದ 11 ಮಂದಿಯ ಕುಟುಂಬಗಳ ಪರಿಹಾರ ಮೊತ್ತವನ್ನು ತಲಾ 25 ಲಕ್ಷ ರೂ.ಗೆ ಹೆಚ್ಚಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ. ಈ ಮೊದಲು ಮೃತರ ಕುಟುಂಬಗಳಿಗೆ

ಕಾಲ್ತುಳಿದಲ್ಲಿ ಮಡಿದವರ ಕುಟುಂಬಗಳ ಪರಿಹಾರ ಮೊತ್ತ 25 ಲಕ್ಷಕ್ಕೇರಿಕೆ Read More »

ಕಾಲ್ತುಳಿತ ಘಟನೆ : ಕೆಎಸ್‌ಸಿಎ ಇಬ್ಬರು ಪದಾಧಿಕಾರಿಗಳು ರಾಜೀನಾಮೆ

ಬೆಂಗಳೂರು: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಕ್ರಿಕೆಟ್‌ ಅಸೋಸಿಯೇಷನ್‌ನ ಇಬ್ಬರು ಪದಾಧಿಕಾರಿಗಳು ರಾಜೀನಾಮೆ ನೀಡಿದ್ದಾರೆ. ಕೆಎಸ್‌ಸಿಎ ಕಾರ್ಯದರ್ಶಿ ಎ. ಶಂಕರ್‌, ಖಜಾಂಚಿ ಜೈರಾಮ್‌ ಶುಕ್ರವಾರ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಈ ಕುರಿತು ಎ. ಶಂಕರ್‌ ಅವರೇ ಪ್ರಕಟಣೆ ಹೊರಡಿಸಿದ್ದಾರೆ. ಕಾಲ್ತುಳಿತ ಪ್ರಕರಣ ಸಂಬಂಧ ಗುರುವಾರ ರಾತ್ರಿ ತುರ್ತು ಸುದ್ದಿಗೋಷ್ಠಿ ನಡೆಸಿದ್ದ ಸಿಎಂ ಸಿದ್ದರಾಮಯ್ಯ, ತನಿಖೆಯನ್ನು ಸಿಐಡಿಗೆ ವಹಿಸಿ ಕಾಲ್ತುಳಿತಕ್ಕೆ ಕಾರಣರಾದ ಆರ್‌ಸಿಬಿ ಆಡಳಿತ ಮಂಡಳಿ, ಡಿಎನ್‌ಎ

ಕಾಲ್ತುಳಿತ ಘಟನೆ : ಕೆಎಸ್‌ಸಿಎ ಇಬ್ಬರು ಪದಾಧಿಕಾರಿಗಳು ರಾಜೀನಾಮೆ Read More »

ಕಾಲ್ತುಳಿತ ಘಟನೆ : ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ಬಿಜೆಪಿಯಿಂದ ಪೊಲೀಸರಿಗೆ ದೂರು

ಎಫ್‌ಐಆರ್‌ ದಾಖಲಿಸಿ ಕ್ರಮ ಕೈಗೊಳ್ಳದಿದ್ದರೆ ಕೋರ್ಟ್‌ಗೆ ಹೋಗುವ ಎಚ್ಚರಿಕೆ ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಸಂಭವಿಸಿ 11 ಮಂದಿ ಮೃತರಾದ ಘಟನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ಗೆ ನಿಜವಾದ ಸಂಕಷ್ಟ ಈಗ ಶುರುವಾಗಿದೆ. ದುರಂತದಲ್ಲಿ 11 ಮಂದಿ ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್‌ ವಿರುದ್ಧವೂ ಪೊಲೀಸ್‌ ದೂರು ನೀಡಲಾಗಿದೆ. ಬಿಜೆಪಿ ನಾಯಕರು ಸಿಎಂ, ಡಿಸಿಎಂ ಹಾಗೂ ಗೃಹ ಸಚಿವ ಜಿ.ಪರಮೇಶ್ವರ್‌ ವಿರುದ್ಧ ಕಬ್ಬನ್​ಪಾರ್ಕ್ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ರಾಜ್ಯ ಸರ್ಕಾರ

ಕಾಲ್ತುಳಿತ ಘಟನೆ : ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ಬಿಜೆಪಿಯಿಂದ ಪೊಲೀಸರಿಗೆ ದೂರು Read More »

error: Content is protected !!
Scroll to Top