ಸುದ್ದಿ

ದ್ವಿಚಕ್ರ ವಾಹನ ಚಾಲಕರೋರ್ವರಿಗೆ ರಿಕ್ಷಾ ಚಾಲಕನಿಂದ ಹಲ್ಲೆ

ಬಂಟ್ವಾಳ: ದ್ವಿಚಕ್ರ ಸವಾರನೋರ್ವನ ಮೇಲೆ ರಿಕ್ಷಾ ಚಾಲಕನೋರ್ವ ಹಲ್ಲೆ ನಡೆಸಿದ್ದಲ್ಲದೆ ಜೀವಬೆದರಿಕೆ ಹಾಕಿದ ಘಟನೆ ಇಂದು ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯ ಪಾಣೆಮಂಗಳೂರಿನಲ್ಲಿ ನಡೆದಿದೆ. ನರಿಕೊಂಬು ಗ್ರಾಮದ ನಾಯಿಲ ನಿವಾಸಿ ಸುನಿಲ್ ಎಂಬಾತನ ಮೇಲೆ ನಂದಾವರ ನಿವಾಸಿ ರಿಕ್ಷಾ ಚಾಲಕ ಅಝೀಲ್ ಹಲ್ಲೆ ನಡೆಸಿರುವುದಾಗಿ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಘಟನೆ ನಡೆದ ಕೆಲವೇ ಗಂಟೆಯಲ್ಲಿ ನಗರ ಪೋಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.  ಸುನಿಲ್ ಮತ್ತು ಆತನ ಸ್ನೇಹಿತ ದಯಾನಂದ ಅವರು […]

ದ್ವಿಚಕ್ರ ವಾಹನ ಚಾಲಕರೋರ್ವರಿಗೆ ರಿಕ್ಷಾ ಚಾಲಕನಿಂದ ಹಲ್ಲೆ Read More »

ಉಡುಪಿ ಲವ್‌ ಜಿಹಾದ್‌ ಪ್ರಕರಣಕ್ಕೆ ತಿರುವು : ಸ್ವಇಚ್ಚೆಯಿಂದ ಹೋಗಿದ್ದೇನೆ ಎಂದ ಯುವತಿ

ಎ.19ರಂದು ರಿಜಿಸ್ಟ್ರರ್‌ ಮದುವೆ ಮಾಡಿಕೊಳ್ಳುವುದಾಗಿ ಹೇಳಿಕೆ ಉಡುಪಿ: ಉಡುಪಿಯಲ್ಲಿ ತೀವ್ರ ವಿವಾದಕ್ಕೆ ಕಾರಣವಾಗಿದ್ದ ಲವ್‌ ಜಿಹಾದ್‌ ಪ್ರಕರಣ ಯುವತಿ ನ್ಯಾಯಾಲಯಕ್ಕೆ ಹಾಜರಾಗುವುದರೊಂದಿಗೆ ತಿರುವು ಪಡೆದುಕೊಂಡಿದೆ. ಕ್ರೈಸ್ತ ಸಮುದಾಯದ 19ರ ಹರೆಯದ ಕಾಲೇಜು ವಿದ್ಯಾರ್ಥಿನಿಯನ್ನು ಮುಹಮ್ಮದ್‌ ಅಕ್ರಮ್‌ ಎಂಬಾತ ಅಪಹರಿಸಿ ಬಲವಂತವಾಗಿ ಮದುವೆಯಾಗಲು ತಯಾರಿ ನಡೆಸಿದ್ದಾನೆ. ಈ ವಿಚಾರದಲ್ಲಿ ದೂರು ನೀಡಿದರೂ ಪೊಲೀಸರು ಯಾವುದೇ ಕ್ರಮಕೈಗೊಂಡಿಲ್ಲ ಎಂದು ಯುವತಿಯ ತಾಯಿ ಕೆಲದಿನಗಳ ಹಿಂದೆ ಆರೋಪಿಸಿದ್ದರು. ಇದರ ಬೆನ್ನಿಗೆ ಹಿಂದು ಸಂಘಟನೆಗಳು ಮಧ್ಯೆ ಪ್ರವೇಶಿಸಿ ಲವ್‌ ಜಿಹಾದ್‌ ಅರೋಪ ಮಾಡಿದ್ದವು.ಅಪಹರಣ

ಉಡುಪಿ ಲವ್‌ ಜಿಹಾದ್‌ ಪ್ರಕರಣಕ್ಕೆ ತಿರುವು : ಸ್ವಇಚ್ಚೆಯಿಂದ ಹೋಗಿದ್ದೇನೆ ಎಂದ ಯುವತಿ Read More »

ಕಲಾರತ್ನ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡ ಪುತ್ತೂರಿನ ರಂಗಭೂಮಿ ಕಲಾವಿದೆ  ಜ್ಯೋತಿ ಕುಲಾಲ್‍

ಪುತ್ತೂರು  : ರಂಗಭೂಮಿಯಲ್ಲಿ ಸಾಧನೆಗೈದ ಪುತ್ತೂರಿನ ರಂಗಭೂಮಿ ಕಲಾವಿದೆ  ಜ್ಯೋತಿ ಕುಲಾಲ್‍ ಕಲಾರತ್ನ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡರು. ಆಕ್ಸಿಸ್‍ ಮ್ಯಾಕ್ಸ್ ಲೈಫ್ ಇನ್ಸುರೆನ್ಸ್‍ ವತಿಯಿಂದ  “VALUE AWARD CEREMONY “ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.

ಕಲಾರತ್ನ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡ ಪುತ್ತೂರಿನ ರಂಗಭೂಮಿ ಕಲಾವಿದೆ  ಜ್ಯೋತಿ ಕುಲಾಲ್‍ Read More »

ಸುಳ್ಯ : ಚಾಲಕನ ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ಲಾರಿ

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮೋರಿಗೆ ಟಾಟಾ 407 ಮಿನಿ ಲಾರಿ ಪಲ್ಟಿಯಾದ ಘಟನೆ ಮಾಣಿ-ಮೈಸೂರು ಹೆದ್ದಾರಿಯ ಸುಳ್ಯದ ಓಡಬಾಯಿಯ ಗುಂಡ್ಯಡ್ಕ ಸಮೀಪ ನಡೆದಿದೆ. ಬೆಳ್ತಂಗಡಿಯಿಂದ ಕುಶಾಲನಗರ ಕಡೆಗೆ ಹೋಗುತ್ತಿದ್ದ ವಾಹನ ಗುಂಡ್ಯಡ್ಕ ಸಮೀಪ ಚಾಲಕನ ನಿಯಂತ್ರಣ ತಪ್ಪಿದೆ. ಪರಿಣಾಮ ರಸ್ತೆ ಬದಿಯ ಮೋರಿಗೆ ಪಲ್ಟಿಯಾಗಿ ಬಿದ್ದಿದೆ. ಅಪಘಾತದಲ್ಲಿ ಲಾರಿ ಜಖಂಗೊಂಡಿದ್ದು, ವಾಹನದಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.

ಸುಳ್ಯ : ಚಾಲಕನ ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ಲಾರಿ Read More »

ಕಲಾರತ್ನ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡ ಪ್ರಕಾಶ್‍ ಸವಣಾಲ್‍ ಹಾಗೂ ಯಜ್ಞೇಶ್‍ ಧರ್ಮಸ್ಥಳ

ಬೆಳ್ತಂಗಡಿ : ರಂಗಭೂಮಿಯಲ್ಲಿ ಸಾಧನೆಗೈದ ಪ್ರಕಾಶ್‍ ಸವಣಾಲ್‍ ಹಾಗೂ ಯಜ್ಞೇಶ್‍ ಧರ್ಮಸ್ಥಳ ರವರು ಕಲಾರತ್ನ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡರು. ಆಕ್ಸಿಸ್‍ ಮ್ಯಾಕ್ಸ್‍ ಲೈಫ್ ಇನ್ಸುರೆನ್ಸ್‍ ವತಿಯಿಂದ  “VALUE AWARD CEREMONY “ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ  ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾದಕರನ್ನು  ಗುರುತಿಸಿ ಕಲಾರತ್ನ ಪ್ರಶಸ್ತಿಯನ್ನು ನೀಡಲಾಗಿದೆ.

ಕಲಾರತ್ನ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡ ಪ್ರಕಾಶ್‍ ಸವಣಾಲ್‍ ಹಾಗೂ ಯಜ್ಞೇಶ್‍ ಧರ್ಮಸ್ಥಳ Read More »

ವಂಚನೆ : ಕ್ರಿಪ್ಟೊ ಕರೆನ್ಸಿ ಹೂಡಿಕೆ ನೆಪದಲ್ಲಿ 70 ಲ.ರೂ. ವಂಚನೆ

ಮಂಗಳೂರು: ಕ್ರಿಪ್ಟೊ ಕರೆನ್ಸಿಯಲ್ಲಿ ಹೂಡಿಕೆ ಮಾಡಿದರೆ ಹೆಚ್ಚು ಲಾಭ ಸಿಗುವ ನಂಬಿಕೆ ಹುಟ್ಟಿಸಿ ಸುಮಾರು 70 ಲ.ರೂ. ವಂಚಿಸಿದ ಕುರಿತು ಮಂಗಳೂರಿನ ವ್ಯಕ್ತಿಯೊಬ್ಬರು ಸೆನ್‌ ಪೊಲೀಸರಿಗೆ ದೂರು ನೀಡಿದ್ದಾರೆ. ಫೇಸ್‌ಬುಕ್‌ನಲ್ಲಿ ಪರಿಚಿತನಾದ ರೈಸೆನ್‌ ಎಂಬ ವ್ಯಕ್ತಿ ದೂರುದಾರರ ವಿಶ್ವಾಸ ಸಂಪಾದಿಸಿ ಕ್ರಿಪ್ಟೊ ಕರೆನ್ಸಿ ಹೂಡಿಕೆಯ ಆಶೆ ಹುಟ್ಟಿಸಿದ್ದಾನೆ. ತಾನು ಕ್ರಿಪ್ಟೊ ಕರೆನ್ಸಿ ಟ್ರೇಡಿಂಗ್‌ ಮಾಡುತ್ತಿದ್ದು, ಅದರಲ್ಲಿ ಶೇ.30ರಷ್ಟು ಲಾಭಾಂಶವಿದೆ ಎಂದು ಹೇಳಿದ್ದ. ಅವನ ಮಾತು ನಂಬಿ ದೂರುದಾರರು ಫೆ.2ರಿಂದ 23ರ ವರೆಗೆ ಪ್ರತಿದಿನ ಹೂಡಿಕೆ ಮಾಡುತ್ತಿದ್ದರು. ಒಟ್ಟಾರೆಯಾಗಿ

ವಂಚನೆ : ಕ್ರಿಪ್ಟೊ ಕರೆನ್ಸಿ ಹೂಡಿಕೆ ನೆಪದಲ್ಲಿ 70 ಲ.ರೂ. ವಂಚನೆ Read More »

ಮೇ 29ರಿಂದ ಮುಂದಿನ ಶೈಕ್ಷಣಿಕ ವರ್ಷದ ಶಾಲಾರಂಭ

2025- 26ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಇಂತಿದೆ ಬೆಂಗಳೂರು: ಈ ಬೇಸಿಗೆ ರಜೆ ಕಳೆದ ಬಳಿಕ ಮೇ 29ರಿಂದ ಮುಂದಿನ ಶೈಕ್ಷಣಿಕ ವರ್ಷದ ಚಟುವಟಿಕೆಗಳು ಪ್ರಾರಂಭಗೊಳ್ಳಲಿವೆ. ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಇಲಾಖೆ 2025- 26ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಬಿಡುಗಡೆ ಮಾಡಿದೆ. ಮೇ 29ರಿಂದ ಶಾಲೆಗಳನ್ನು ಆರಂಭಿಸಲು ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇದು ಅನ್ವಯವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.ಮೇ 29ರಿಂದ ಶಾಲೆಗಳು ಆರಂಭವಾಗಲಿದ್ದು,

ಮೇ 29ರಿಂದ ಮುಂದಿನ ಶೈಕ್ಷಣಿಕ ವರ್ಷದ ಶಾಲಾರಂಭ Read More »

ಸೌಜನ್ಯಾ ಪ್ರಕರಣ : ನಾಳಿನ ಸಭೆಗೆ ಹೈಕೋರ್ಟ್‌ ತಡೆ

ಬೆಳ್ತಂಗಡಿ : ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಏ.6ರಂದು ನಡೆಯಬೇಕಿದ್ದ ಸಭೆಗೆ ಹೈಕೋರ್ಟ್‌ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ. ನಾಳೆ ಧರ್ಮಸ್ಥಳದಿಂದ ಉಜಿರೆವರೆಗೆ ಮೆರವಣಿಗೆ ನಡೆಸಿ ಉಜಿರೆಯಲ್ಲಿ ಹಕ್ಕೊತ್ತಾಯ ಸಭೆ ನಡೆಸಲು ನಿರ್ಧರಿಸಲಾಗಿತ್ತು.ಆರಂಭದಲ್ಲಿ ಈ ಪ್ರತಿಭಟನೆಗೆ ನ್ಯಾಯಾಲಯ ಅನುಮತಿ ನೀಡಿತ್ತು. ಆದರೆ ಈ ಪ್ರತಿಭಟನೆಗೆ ಸಂಬಂಧಿಸಿ ವಾಟ್ಸಪ್‌ ಸೇರಿದಂತೆ ವಿವಿಧ ಸೋಷಿಯಲ್‌ ಮೀಡಿಯಾಗಳಲ್ಲಿ ಹರಿದಾಡುತ್ತಿರುವ ಸಂದೇಶಗಳನ್ನು ಗಮನಿಸಿದ ಬಳಿಕ ಪರಿಸ್ಥಿತಿ ಗಂಭೀರವಾಗಿರುವುದನ್ನು ಅರಿತು ನ್ಯಾಯಾಲಯ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ.ಪ್ರತಿಭಟನೆಗೆ ಅವಕಾಶ ನೀಡದಂತೆ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು

ಸೌಜನ್ಯಾ ಪ್ರಕರಣ : ನಾಳಿನ ಸಭೆಗೆ ಹೈಕೋರ್ಟ್‌ ತಡೆ Read More »

ಪುತ್ತೂರಿನಲ್ಲಿ ಭಾವ ತೀರ ಯಾನ ಸಿನಿಮಾ ನಾಳೆ ಸಂಜೆ 4:30ಕ್ಕೆ ಚಿತ್ರ ಪ್ರದರ್ಶನ

ಪುತ್ತೂರು : ಸುಳ್ಯದ ಯುವ ಸಂಗೀತ ನಿರ್ದೇಶಕ ಮಯೂರ ಅಂಬೆಕಲ್ಲು ಹಾಗು ತೇಜಸ್‍ ಕಿರಣ್‍ ರವರ ನಿರ್ದೇಶನದಿಂದ ಮೂಡಿಬಂದ “ಭಾವ ತೀರ ಯಾನ” ಸಿನಿಮಾ ರಾಜ್ಯಾದ್ಯಂತ ಅದ್ಭುತವಾಗಿ ಚಿತ್ರ ಪ್ರದರ್ಶನಗೊಳ್ಳುತ್ತಿದೆ ಪುತ್ತೂರಿನ ಭಾರತ್ ಸಿನಿಮಾಸ್‍ನಲ್ಲಿ ಭಾವ ತೀರ ಯಾನ ಏ.05(ನಾಳೆ) ರಂದು ಸಂಜೆ 4:30 ರ ಸಮಯಕ್ಕೆ  ಶೋ ನೀಡಲು ನಿರ್ಧರಿಸಲಾಗಿದೆ.

ಪುತ್ತೂರಿನಲ್ಲಿ ಭಾವ ತೀರ ಯಾನ ಸಿನಿಮಾ ನಾಳೆ ಸಂಜೆ 4:30ಕ್ಕೆ ಚಿತ್ರ ಪ್ರದರ್ಶನ Read More »

ಚಿನ್ನದ ಬೆಲೆ ದಿಢೀರ್‌ ಇಳಿಕೆ : ಒಂದೇ ದಿನದಲ್ಲಿ 1,600 ರೂ. ಕಡಿಮೆ

ನವದೆಹಲಿ: ಕೆಲ ದಿನಗಳಿಂದ ಭಾರಿ ಏರಿಕೆ ಕಾಣುತ್ತಿದ್ದ ಚಿನ್ನ ಮತ್ತು ಬೆಳ್ಳಿಯ ದರ ಇಂದು ದಿಢೀರ್‌ ಇಳಿಕೆಯಾಗಿದೆ. ಇಂದು 24 ಕ್ಯಾರೆಟ್ ಚಿನ್ನದ ಬೆಲೆ 1,740 ರೂ. ಮತ್ತು 22 ಕ್ಯಾರೆಟ್ ಚಿನ್ನದ ಬೆಲೆ 1,600 ರೂ. ಕಡಿಮೆಯಾಗಿದೆ. ಶುಕ್ರವಾರ ಬೆಂಗಳೂರಿನಲ್ಲಿ 10 ಗ್ರಾಂ 24 ಕ್ಯಾರಟ್ ಚಿನ್ನದ ಬೆಲೆ 91,640 ರೂ. ಆಗಿದ್ದರೆ, 22 ಕ್ಯಾರಟ್ ಚಿನ್ನದ ಬೆಲೆ 84,000 ರೂ.ಗೆ ಇಳಿಕೆಯಾಗಿದೆ. ಗುರುವಾರ 10 ಗ್ರಾಂ 24 ಕ್ಯಾರೆಟ್ ಬೆಲೆ 93,380 ರೂ. ಆಗಿದ್ದರೆ,

ಚಿನ್ನದ ಬೆಲೆ ದಿಢೀರ್‌ ಇಳಿಕೆ : ಒಂದೇ ದಿನದಲ್ಲಿ 1,600 ರೂ. ಕಡಿಮೆ Read More »

error: Content is protected !!
Scroll to Top