ಸುದ್ದಿ

ಮದ್ಯಪ್ರಿಯರಿಗೆ ಕಹಿ ಸುದ್ದಿ: ಮತ್ತೆ ಏರಿಕೆಯಾಗಲಿದೆ ಬೆಲೆ

ಎಲ್ಲ ರೀತಿಯ ಮದ್ಯದ ಬೆಲೆ ಹೆಚ್ಚಿಸಲು ಅಬಕಾರಿ ಇಲಾಖೆ ತೀರ್ಮಾನ ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮದ್ಯದ ಬೆಲೆ ಏರಿಕೆ ಆಗಲಿದೆ. ಈಗಾಗಲೇ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಎರಡು ಬಾರಿ ದರ ಹೆಚ್ಚಳ ಮಾಡಿದೆ. ಇದೀಗ ಮತ್ತೆ ಮೂರನೇ ಬಾರಿ ಮದ್ಯ ದರ ಹೆಚ್ಚಳವಾಗಲಿದ್ದು, ಈ ವಾರದಿಂದಲೇ ಪರಿಷ್ಕೃತ ದರ ಜಾರಿಯಾಗಲಿದೆ. 2024-25ನೇ ಸಾಲಿನಲ್ಲಿ ಸರ್ಕಾರ ಅಬಕಾರಿ ಇಲಾಖೆಗೆ 38,600 ಕೋಟಿ ರೂ. ಕಂದಾಯ ಸಂಗ್ರಹಿಸುವ ಟಾರ್ಗೆಟ್ ನೀಡಿತ್ತು. ಈ ಬಾರಿಯ ಬಜೆಟ್‌ನಲ್ಲಿ 40 ಸಾವಿರ […]

ಮದ್ಯಪ್ರಿಯರಿಗೆ ಕಹಿ ಸುದ್ದಿ: ಮತ್ತೆ ಏರಿಕೆಯಾಗಲಿದೆ ಬೆಲೆ Read More »

ರಿಯಲ್ ಸ್ಟಾರ್ ಉಪೇಂದ್ರ ಆರೋಗ್ಯದಲ್ಲಿ ವ್ಯತ್ಯಯ | ಆಸ್ಪತ್ರೆಗೆ ದಾಖಲು

ರಿಯಲ್ ಸ್ಟಾರ್ ಉಪೇಂದ್ರ ಅವರ ಆರೋಗ್ಯದಲ್ಲಿ ವ್ಯತ್ಯಯ ಕಂಡುಬಂದಿದ್ದು, ತಕ್ಷಣ ಉಪ್ಪೇಂದ್ರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಮಧ್ಯಾಹ್ನದ ಹೊತ್ತಿಗೆ ಓವರ್ ಅಸಿಡಿಟಿಯಿಂದ ಬಳಲುತ್ತಿದ್ದ ಅವರನ್ನು ಹತ್ತಿರದ ಸ್ಪರ್ಶ್ ಆಸ್ಪತ್ರೆಗೆ ಮಧ್ಯಾಹ್ನ 3 ಗಂಟೆ ಸುಮಾರಿಗೆ ಸೇರಿಸಲಾಗಿದೆ. ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದಾರೆ. ಯುಐ ಸಿನಿಮಾ ಶೂಟಿಂಗ್‍  ವೇಳೆ ಇದೇ ರೀತಿ ಆಗಿತ್ತು. ಸದ್ಯ ಉಪ್ಪಿ ಆರೋಗ್ಯದಲ್ಲಿ ಚೇತರಿಕೆಯಾಗಿದ್ದು, ಅಭಿಮಾನಿಗಳು ಗಾಬರಿಪಡುವ ಅವಶ್ಯಕತೆಯಿಲ್ಲ ಎಂದು ಮೂಲಗಳು ತಿಳಿಸಿವೆ.

ರಿಯಲ್ ಸ್ಟಾರ್ ಉಪೇಂದ್ರ ಆರೋಗ್ಯದಲ್ಲಿ ವ್ಯತ್ಯಯ | ಆಸ್ಪತ್ರೆಗೆ ದಾಖಲು Read More »

ಐಪಿಎಲ್‌ನಲ್ಲಿ ಸೆಂಚುರಿ ಬಾರಿಸಿದ 14 ವರ್ಷದ ವೈಭವ್ ಸೂರ್ಯವಂಶಿ | ವೈಭವ್ ಆಟದ ಬಗ್ಗೆ ಮೋದಿ ಏನಂದ್ರು?

ಬೆಂಗಳೂರು : ಸಾಧಿಸುವ ಛಲವಿದ್ದಲ್ಲಿ ಎಂತಹ ಸಂಧಿಗ್ಧ ಸ್ಥಿತಿ ಎದುರಾದರು ಸಾಧಿಸಿಯೇ ಸಾಧಿಸುತ್ತಾರೆ. ಅಂತದ್ದೇ ಒಂದುಸಾಧನೆಯನ್ನು 14ವರ್ಷದ ಯುವಕ ಮಾಡಿದ್ದಾನೆ.  ಐಪಿಎಲ್‌ನಲ್ಲಿ ಅತಿ ವೇಗ ಸೆಂಚುರಿ ಬಾರಿಸಿದ 14 ವರ್ಷದ ವೈಭವ್ ಸೂರ್ಯವಂಶಿ ಇವತ್ತು ಕ್ರಿಕೆಟ್ ಜಗತ್ತೇ ತನ್ನತ್ತ ತಿರುಗಿ ನೋಡುವಂತೆ ಮಾಡಿದ್ದಾರೆ. ಇವರ ಆಕ್ರಮಣಾಕಾರಿ ಬ್ಯಾಟಿಂಗ್, ಬೌಂಡರಿ, ಸಿಕ್ಸರ್‌ ಶೈಲಿಗೆ ಮಾಜಿ ಕ್ರಿಕೆಟಿಗರು, ಕ್ರಿಕೆಟ್ ಅಭಿಮಾನಿಗಳು ಫಿದಾ ಆಗಿದ್ದಾರೆ. ರಾಜಸ್ಥಾನ ರಾಯಲ್ಸ್​ ತಂಡದ ಆಟಗಾರ ವೈಭವ್ ಸೂರ್ಯವಂಶಿ ಶತಕ ಸಾಧನೆಯನ್ನು ಮಾಡಿದ್ದಾರೆ. ಈ ಸಾಧನೆಯನ್ನು ಗುರುತಿಸಿದ

ಐಪಿಎಲ್‌ನಲ್ಲಿ ಸೆಂಚುರಿ ಬಾರಿಸಿದ 14 ವರ್ಷದ ವೈಭವ್ ಸೂರ್ಯವಂಶಿ | ವೈಭವ್ ಆಟದ ಬಗ್ಗೆ ಮೋದಿ ಏನಂದ್ರು? Read More »

ಜೀಪೊಂದು ಬೈಕ್‍ ಹಾಗೂ ಸ್ಕೂಟರ್ ಗೆ ಡಿಕ್ಕಿ | ಓರ್ವ ವ್ಯಕ್ತಿಗೆ ಗಾಯ

ಪುತ್ತೂರು : ಜೀಪೊಂದು ಬೈಕ್‍ ಹಾಗೂ ಸ್ಕೂಟರ್‍ ಗೆ ಡಿಕ್ಕಿ ಹೊಡೆದ ಘಟನೆ ಪುತ್ತೂರು ಎಪಿಎಂಸಿ ರಸ್ತೆಯ ಆದರ್ಶ ಆಸ್ಪತ್ರೆಯ ಎದುರು ನಡೆದಿದೆ. ಡಿಕ್ಕಿ ಹೊಡೆದ ಪರಿಣಾಮ ಓರ್ವ ವ್ಯಕ್ತಿ ಗಂಭೀರ ಗಾಯಗೊಂಡಿದ್ದಾರೆ.  ಜೀಪು ಡಿಕ್ಕಿ ಹೊಡೆದುದರಿಂದ ಸ್ಕೂಟರ್ ಹಾಗೂ ಬೈಕನ್ನು 15 ಮೀಟರ್ ನಷ್ಟು ದೂರ ಎಳೆದೊಯ್ದಿದೆ. ಬೈಕ್ ನಲ್ಲಿದ್ದ ಬಾಲಕನ ಕೈಗೆ ಗಂಭೀರ ಗಾಯವಾಗಿದ್ದು, ಬೈಕ್ ಸವಾರ ಬೈಕ್ ನಿಂದ ಹಾರಿದ ಕಾರಣ ಪ್ರಾಣಾಪಾಯದಿಂದ ಪಾರಗಿದ್ದಾರೆ. ಸ್ಕೂಟರ್ ನಲ್ಲಿದ್ದ ಮಹಿಳೆಗೂ ಗಾಯವಾಗಿದೆ.

ಜೀಪೊಂದು ಬೈಕ್‍ ಹಾಗೂ ಸ್ಕೂಟರ್ ಗೆ ಡಿಕ್ಕಿ | ಓರ್ವ ವ್ಯಕ್ತಿಗೆ ಗಾಯ Read More »

ಪಾತಾಳ ಕಲಾಮಂಗಳ ಪ್ರಶಸ್ತಿ ಪ್ರದಾನ

ಉಪ್ಪಿನಂಗಡಿ ಪಾತಾಳ ಯಕ್ಷಪ್ರತಿಷ್ಠಾನದ  ಕಲಾಮಂಗಳ ಪ್ರಶಸ್ತಿ ಪ್ರದಾನ ಸಮಾರಂಭವು ಪಾತಾಳದ ಪೂರ್ಣ ಶ್ರೀ ಗೃಹದಲ್ಲಿ ಜರಗಿತು. ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರು ಅಧ್ಯಕ್ಷತೆ ವಹಿಸಿದ್ದರು. ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಪ್ರದೀಪ ಕುಮಾರ ಕಲ್ಕೂರ, ಉದ್ಯಮಿ, ಕಲಾಪೋಷಕ ಶ್ರೀಪತಿ ಭಟ್ ಮೂಡಬಿದ್ರೆ, ಜನಾರ್ಧನ ಹಂದೆ ಮಂಗಳೂರು ಮುಖ್ಯ ಅಭ್ಯಾಗತರಾಗಿ ಶುಭ ಹಾರೈಸಿದರು. ಅಶ್ವತ್ಥಾಮ ಖ್ಯಾತಿಯ ಕಲಾವಿದ ಗುಂಡಿ ಮಜಲು ಗೋಪಾಲಕೃಷ್ಣ ಭಟ್ ಮತ್ತು ಕಟೀಲು ಮೇಳದ ಕಲಾವಿದ,

ಪಾತಾಳ ಕಲಾಮಂಗಳ ಪ್ರಶಸ್ತಿ ಪ್ರದಾನ Read More »

ಪಹಲ್ಗಾಮ್‌ ಉಗ್ರರಿಗೆ ಊಟ-ಆಶ್ರಯ ಕೊಟ್ಟ ಯುವಕ ನದಿಯಲ್ಲಿ ಮುಳುಗಿ ಸಾವು

ತಪ್ಪಿಸಿಕೊಳ್ಳಲು ನದಿಗೆ ಹಾರಿ ಈಜಲಾಗದೆ ಮುಳುಗಿದ ಯುವಕ ಶ್ರೀನಗರ: ಪಹಲ್ಗಾಮ್‌ನಲ್ಲಿ ಅಮಾಯಕ ಪ್ರವಾಸಿಗರನ್ನು ಗುಂಡಿಕ್ಕಿ ಸಾಯಿಸಿದ ಉಗ್ರರಿಗೆ ಊಟ ಮತ್ತು ಆಶ್ರಯ ನೀಡಿದ ಸ್ಥಳೀಯ ಯುವಕನೊಬ್ಬ ಪೊಲೀಸರ ಕಸ್ಟಡಿಯಿಂದ ತಪ್ಪಿಸಿಕೊಳ್ಳಲು ನದಿಗೆ ಹಾರಿ ಮುಳುಗಿ ಮೃತಪಟ್ಟಿದ್ದಾನೆ. ಆದರೆ ಈ ಯುವಕನ ತಾಯಿ ಇದು ಪೊಲೀಸರು ಮತ್ತು ಭದ್ರತಾ ಪಡೆಯವರು ಉದ್ದೇಶಪೂರ್ವಕವಾಗಿ ನಡೆಸಿದ ಕೊಲೆ ಎಂದು ಅರೋಪಿಸಿ ಮಾಧ್ಯಮಗಳ ಮುಂದೆ ಗೋಳಾಡಿದ್ದಾರೆ. ಇಮ್ತಿಯಾಜ್‌ ಅಹ್ಮದ್ ಮಾಗ್ರೆ ಎಂಬ 23 ವರ್ಷದ ಯುವಕ ಪಹಲ್ಗಾಮ್‌ ದಾಳಿಕೋರರಿಗೆ ಸಕಲ ನೆರವು ನೀಡುತ್ತಿದ್ದ

ಪಹಲ್ಗಾಮ್‌ ಉಗ್ರರಿಗೆ ಊಟ-ಆಶ್ರಯ ಕೊಟ್ಟ ಯುವಕ ನದಿಯಲ್ಲಿ ಮುಳುಗಿ ಸಾವು Read More »

ಮಂಗಳೂರು: 3 ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ

ಮಂಗಳೂರು: ಮಂಗಳೂರಿನ ಪಣಂಬೂರಿನಲ್ಲಿ ಮೂರು ವರ್ಷ ಪ್ರಾಯದ ಮಗುವಿನ ಮೇಲೆ 50ರ ಹರೆಯದ ವ್ಯಕ್ತಿ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿಬಂದಿದೆ. ಉತ್ತರ ಭಾರತದ ದಂಪತಿಯ 3 ವರ್ಷ ಪ್ರಾಯದ ಮಗುವಿನ ಮೇಲೆ ಅಶೋಕ್‌ ಖಾರ್ವಿ (50) ಎಂಬಾತ ಲೈಂಗಿಕ ದೌರ್ಜನ್ಯ ಎಸಗಿರುವ ಕುರಿತು ಎಫ್‌ಐಆರ್‌ ದಾಖಲಾಗಿದೆ. ಪಣಂಬೂರಿನ ಬೆಂಗ್ರೆಯಲ್ಲಿ ಘಟನೆ ನಡೆದಿದ್ದು, ಭಾನುವಾರ ದಂಪತಿ ಮನೆಯಲ್ಲಿ ಇಲ್ಲದ ವೇಳೆ ಅರೋಪಿ ಮಗುವನ್ನು ತನ್ನ ಮನೆಗೆ ಕರೆದುಕೊಂಡು ದೌರ್ಜನ್ಯ ಎಸಗಿದ್ದಾನೆ ಎನ್ನಲಾಗಿದೆ. ದಂಪತಿ ಸಂಜೆ ಮನೆಗೆ ಹಿಂದಿರುಗಿದ

ಮಂಗಳೂರು: 3 ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ Read More »

ಸುಹಾಸ್‌ ಶೆಟ್ಟಿ ಹತ್ಯೆಗೂ ಮೊದಲು ಆರೋಪಿಗಳಿಂದ ಭರ್ಜರಿ ಪಾರ್ಟಿ

ಕಳಸದ ರೆಸಾರ್ಟ್‌ನಲ್ಲಿ ಪಾರ್ಟಿ ಮಾಡಿರುವ ಫೋಟೊ ಬಹಿರಂಗ ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಹತ್ಯೆ ಮಾಡಿರುವ ಆರೋಪಿಗಳು ಭರ್ಜರಿ ಪಾರ್ಟಿ ಮಾಡಿರುವ ಫೋಟೊ ಬಹಿರಂಗವಾಗಿದೆ. ಕಳಸದ ರೆಸಾರ್ಟ್ ಒಂದರಲ್ಲಿ ಏ.2ರಂದು ಆರೋಪಿಗಳು ನೈಟ್‌ ಪಾರ್ಟಿ ಮಾಡಿದ್ದಾರೆ ಎನ್ನಲಾಗಿದೆ. ಈ ಪಾರ್ಟಿಯಲ್ಲೇ ಹತ್ಯೆಯ ಸ್ಕೆಚ್‌ ಫೈನಲ್‌ ಮಾಡಿರುವ ಅನುಮಾನ ಇದೆ. ಸುಹಾಸ್‌ ಶೆಟ್ಟಿ ಹತ್ಯೆಯ ಆರೋಪಿಗಳಾದ ಮುಝಮ್ಮಿಲ್, ನಿಯಾಜ್ ಹಾಗೂ ಚಿಕ್ಕಮಗಳೂರು ಮೂಲದ ರಂಜಿತ್ ಕ್ಯಾಂಪ್ ಫೈರ್ ಹಾಕಿ ಪಾರ್ಟಿ ಮಾಡಿದ್ದಾರೆ. ಈ ಮೂವರ ಜೊತೆ ಇನ್ನೂ

ಸುಹಾಸ್‌ ಶೆಟ್ಟಿ ಹತ್ಯೆಗೂ ಮೊದಲು ಆರೋಪಿಗಳಿಂದ ಭರ್ಜರಿ ಪಾರ್ಟಿ Read More »

ಉಗ್ರರ ದಾಳಿ ಹಾಗೂ ಹಿಂದೂ ಮುಖಂಡ ಸುಹಾಸ್‍ ಹತ್ಯೆ ಪ್ರಕರಣ | ಇಂದು ಕಾಫಿನಾಡು ಬಂದ್‍

ಉಗ್ರರ ದಾಳಿ ಹಾಗೂ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ವಿ.ಎಚ್.ಪಿ. ಹಾಗೂ ಬಜರಂಗದಳ ನೇತೃತ್ವದಲ್ಲಿ ಜಿಲ್ಲಾಡಳಿತದ ವಿರೋಧದ ಮಧ್ಯೆಯೂ ಕಾಫಿನಾಡಿನಲ್ಲಿ ಬಂದ್‍ಗೆ ಕರೆ ನೀಡಿದ್ದು,  ಇಂದು ಕಾಫಿನಾಡು ಬಂದ್ ಆಗಿದೆ. ಬಂದ್‍ ಕರೆಗೆ ಉತ್ತಮವಾದ ಸ್ಪಂದನೆ ವ್ಯಕ್ತವಾಗಿದೆ. ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಂಪೂರ್ಣ ಸ್ಥಬ್ದಗೊಂಡಿದೆ. ಮಂಗಳೂರು-ಚಿಕ್ಕಮಗಳೂರು ಗಡಿ ಗ್ರಾಮ ಕೊಟ್ಟಿಗೆಹಾರವು ಸ್ವಯಂಪ್ರೇರಿತ ಬಂದ್ ಆಗಿದೆ. ಇಲ್ಲಿ ಹಿಂದೂ ಸಂಘಟನೆಗಳು ಬಂದ್‌ಗೆ ಕರೆ ನೀಡಿದ್ದಾರೆ. ಕಾಫಿನಾಡು ಸಂಪೂರ್ಣವಾಗಿ ಬಂದ್‍ ಆದ ಹಿನ್ನಲೆ ಜನ ಸಂಚಾರ, ವಾಹನ ಸಂಚಾರ ಬಂದ್‍

ಉಗ್ರರ ದಾಳಿ ಹಾಗೂ ಹಿಂದೂ ಮುಖಂಡ ಸುಹಾಸ್‍ ಹತ್ಯೆ ಪ್ರಕರಣ | ಇಂದು ಕಾಫಿನಾಡು ಬಂದ್‍ Read More »

ಯುದ್ಧದ ಕಾರ್ಮೋಡ : ಭಾರತೀಯ ಸೇನೆಯಿಂದ ರಾತ್ರಿ ಅಣಕು ಸಮರ

ಎಲ್ಲ ದೀಪಗಳನ್ನು ಆರಿಸಿ ಅರ್ಧ ತಾಸು ಯುದ್ಧಾಭ್ಯಾಸ ಮಾಡಿದ ಸೇನೆ ಹೊಸದಿಲ್ಲಿ : ಪಹಲ್ಗಾಮ್ ಉಗ್ರ ದಾಳಿಯ ಬಳಿಕ ಭಾರತ ಮತ್ತು ಪಾಕಿಸ್ಥಾನದ ಮಧ್ಯೆ ಯುದ್ಧದ ಕಾರ್ಮೋಡ ಕವಿದಿರುವಂತೆಯೇ ಭಾರತೀಯ ಸೇನೆ ನಿನ್ನೆ ರಾತ್ರಿ ಪಂಜಾಬ್‌ನ ಫಿರೋಜ್‌ಪುರ ಗಡಿ ಭಾಗದಲ್ಲಿ ಅಣಕು ಸಮರ ನಡೆಸಿದೆ. ಏ.22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನ ಬೈಸರನ್ ಕಣಿವೆಯಲ್ಲಿ ನಡೆದ ಹಿಂದೂಗಳ ನರಮೇಧದ ಬಳಿಕ ಭಾರತ ಮತ್ತು ಪಾಕಿಸ್ಥಾನದ ನಡುವಿನ ಉದ್ವಿಗ್ನ ನೆಲೆಸಿದೆ. ಯಾವುದೇ ಕ್ಷಣದಲ್ಲಿ ಯುದ್ಧ ಶುರುವಾಗಬಹುದು ಎಂಬ ಪರಿಸ್ಥಿಯಿದ್ದು,

ಯುದ್ಧದ ಕಾರ್ಮೋಡ : ಭಾರತೀಯ ಸೇನೆಯಿಂದ ರಾತ್ರಿ ಅಣಕು ಸಮರ Read More »

error: Content is protected !!
Scroll to Top