ಸುದ್ದಿ

ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಶ್ರೀ ಬಸವೇಶ್ವರ ಜಯಂತಿ ಆಚರಣೆ

ಪುತ್ತೂರು: ಪುತ್ತೂರು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಶ್ರೀ ಬಸವೇಶ್ವರ ಜಯಂತಿ ಆಚರಣೆ ಬುಧವಾರ ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆಯಿತು. ತಹಸೀಲ್ದಾರ್ ಪುರಂದರ ಹೆಗ್ಡೆ ಬಸವೇಶ್ವರ ಭಾವಚಿತ್ರದ ಮುಂದೆ ದೀಪ ಬೆಳಗಿಸಿ ಉದ್ಘಾಟಿಸಿ, ಅಧ್ಯಕ್ಷತೆ ವಹಿಸಿ ಮಾತನಾಡಿ, 12ನೇ ಶತಮಾನದಲ್ಲಿ ಹುಟ್ಟಿದ ಬಸವೇಶ್ವರರು ವೀರಶೈವ ಪ್ರತಿಪಾದಕರು. ಇಂತಹಾ ವೀರಶೈವ ಜನಾಂಗದವರು ಕರ್ನಾಟಕದಲ್ಲಿ ಕಡಿಮೆಯಿದ್ದರೂ ಉತ್ತರ ಕರ್ನಾಟಕದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಬಸವೇಶ್ವರರು ಸಮಾಜದಲ್ಲಿರುವ ಸಮಾನತೆ, ಜಾತಿ-ಮತ ಬೇಧಗಳನ್ನು ತೊಡೆದು ಹಾಕುವ ಕುರಿತು ತನ್ನ ವಚನಗಳಲ್ಲಿ ತಿಳಿ […]

ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಶ್ರೀ ಬಸವೇಶ್ವರ ಜಯಂತಿ ಆಚರಣೆ Read More »

ಪುತ್ತೂರು: ಮೇ 5 : ಶೃಂಗೇರಿಯಲ್ಲಿ ಹಿಂದೂ ಧರ್ಮ ಶಿಕ್ಷಣ ತರಗತಿಗಳಿಗೆ ಚಾಲನೆ | ಪುತ್ತೂರಿನಿಂದ ಸಾವಿರಾರು ಮಂದಿ ಭಾಗಿ

ಪುತ್ತೂರು: ಪುತ್ತೂರಿನಲ್ಲಿ ಹಿಂದೂ ಧರ್ಮ ಶಿಕ್ಷಣ ನೀಡುವ ನಿಟ್ಟಿನಲ್ಲಿ ಈಗಾಗಲೇ ಗ್ರಾಮ ಸಹಿತ ತಾಲೂಕು ಸಮಿತಿಗಳನ್ನು ರಚಿಸಲಾಗಿದ್ದು, ಮೇ ೫ ರಂದು ಅಪರಾಹ್ನ 3 ಗಂಟೆಗೆ ಹಿಂದೂ ಧರ್ಮ ಶಿಕ್ಷಣ ತರಗತಿಗೆ ಶೃಂಗೇರಿಯಲ್ಲಿ ಶೃಂಗೇರಿ ಜಗದ್ಗುರುಗಳಾದ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರು ತಮ್ಮ ಅಮೃತ ಹಸ್ತದಿಂದ ಚಾಲನೆ ನೀಡಲಿದ್ದಾರೆ ಎಂದು ತಾಲೂಕು ಸಮಿತಿ ಉಪಾಧ್ಯಕ್ಷ ಆರ್.ಸಿ.ನಾರಾಯಣ ತಿಳಿಸಿದ್ದಾರೆ. ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪುತ್ತೂರು ಧಾರ್ಮಿಕ ಶಿಕ್ಷಣದ ಕೇಂದ್ರವಾಗಬೇಕು. ಈ ಮೂಲಕ ಕರ್ನಾಟಕದಾದ್ಯಂತ ಶಿಕ್ಷಣದ ಮಹತ್ವ ಪಸರಿಸಬೇಕು.

ಪುತ್ತೂರು: ಮೇ 5 : ಶೃಂಗೇರಿಯಲ್ಲಿ ಹಿಂದೂ ಧರ್ಮ ಶಿಕ್ಷಣ ತರಗತಿಗಳಿಗೆ ಚಾಲನೆ | ಪುತ್ತೂರಿನಿಂದ ಸಾವಿರಾರು ಮಂದಿ ಭಾಗಿ Read More »

ಸಂಟ್ಯಾರ್ ಜಂಕ್ಷನ್‍ ಬಳಿ ಸರಣಿ ಅಪಘಾತ | ಅದೃಷ್ಟವಶಾತ್‍ ಪ್ರಾಣಪಾಯದಿಂದ ಪಾರು

ಪುತ್ತೂರು: ಸಂಟ್ಯಾರ್ ಜಂಕ್ಷನ್ ನಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್, ಮಾರುತಿ ಕಾರು ಹಾಗೂ ಎರಡು ದ್ವಿಚಕ್ರ ವಾಹನಗಳ ನಡುವೆ ಸರಣಿ ಅಪಘಾತ ನಡೆದಿದೆ. ಪುತ್ತೂರಿನಿಂದ ಸುಳ್ಯ ಕಡೆಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಸಂಟ್ಯಾರ್ ಜಂಕ್ಷನ್ ನಲ್ಲಿ ರಸ್ತೆ ಬದಿ ನಿಲ್ಲಿಸಿ ಪ್ರಯಾಣಿಕರನ್ನು ಹತ್ತಿಸುತ್ತಿದ್ದ ವೇಳೆ ಪಾಣಾಜೆ ಕಡೆಯಿಂದ ಬಂದ ಮಾರುತಿ (ಕೆಎಂ3ಎಂ.ಬಿ6672) ಎದುರಿನಿಂದ ಬಂದ ಸುಝುಕಿ ಎಕ್ಸಸ್(ಕೆಎ21 ಇಬಿ4576) ಡಿಕ್ಕಿ ಹೊಡೆದು ಎದುರಿನಿಂದ ಬಂದ ಬಜಾಜ್ ಪಲ್ಸರ್(ಕೆಎ21ವಿ5950) ಬೈಕ್ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ಗೆ ಡಿಕ್ಕಿ ಹೊಡೆದಿದೆ. ಅಪಘಾತದಿಂದ

ಸಂಟ್ಯಾರ್ ಜಂಕ್ಷನ್‍ ಬಳಿ ಸರಣಿ ಅಪಘಾತ | ಅದೃಷ್ಟವಶಾತ್‍ ಪ್ರಾಣಪಾಯದಿಂದ ಪಾರು Read More »

ಹೆಂಡತಿ, ಮಗನನ್ನು ಗುಂಡಿಕ್ಕಿ ಸಾಯಿಸಿ ಉದ್ಯಮಿ ಆತ್ಮಹತ್ಯೆ

ಮೈಸೂರು ಮೂಲದ ಸಾಫ್ಟ್‌ವೇರ್‌ ಕಂಪನಿ ಮಾಲೀಕನಿಂದ ಘೋರ ಕೃತ್ಯ ಮೈಸೂರು:‌ ಮೈಸೂರು ಮೂಲದ ಅಮೆರಿಕದ ಉದ್ಯಮಿಯೊಬ್ಬರು ಹೆಂಡತಿ ಮತ್ತು ಮಗನನ್ನು ಗುಂಡಿಕ್ಕಿ ಸಾಯಿಸಿ ಬಳಿಕ ತಾನು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಸಂಭವಿಸಿದೆ. ಇನ್ನೋರ್ವ ಮಗ ಹೊರಗಿದ್ದ ಕಾರಣ ಬದುಕುಳಿದಿದ್ದಾನೆ. ಹರ್ಷವರ್ಧನ ಕಿಕ್ಕೇರಿ ಈ ಕೃತ್ಯವೆಸಗಿದ ಉದ್ಯಮಿ. ಅಮೆರಿಕದ ವಾಷಿಂಗ್ಟನ್ ಬಳಿಯ ನ್ಯೂಕ್ಯಾಸಲ್‌ನಲ್ಲಿ ಪತ್ನಿ ಶ್ವೇತಾ ಮತ್ತು 14 ವರ್ಷದ ಮಗನನ್ನು ಗುಂಡಿಕ್ಕಿ ಕೊಂದಿದ್ದಾರೆ. ಬಳಿಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಏ.24ರಂದು ನಡೆದಿದೆ. ದಂಪತಿಯ ಕಿರಿಯ ಮಗ

ಹೆಂಡತಿ, ಮಗನನ್ನು ಗುಂಡಿಕ್ಕಿ ಸಾಯಿಸಿ ಉದ್ಯಮಿ ಆತ್ಮಹತ್ಯೆ Read More »

ಕೆ.ಎಸ್. ಎಸ್ ಕಾಲೇಜಿನ ಪ್ರಾಕೃತ ಪ್ರವೇಶ ಮತ್ತು ಡಿಪ್ಲೋಮಾ ಕೋರ್ಸಿಗೆ ಉತ್ತಮ ಫಲಿತಾಂಶ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಇತಿಹಾಸ ವಿಭಾಗ ಹಾಗೂ ರಾಷ್ಟ್ರೀಯ ಪ್ರಾಕೃತ ಅಧ್ಯಯನ ಮತ್ತು ಸಂಶೋಧನಾ ಸಂಸ್ಥೆ ಶ್ರವಣಬೆಳಗೊಳ ಜಂಟಿಯಾಗಿ  ಪ್ರಾಕೃತ ಸರ್ಟಿಫಿಕೇಟ್ ಮತ್ತು ಡಿಪ್ಲೋಮ  ಕೋರ್ಸ್ನ ಫಲಿತಾಂಶ ಕಾರ್ಯಕ್ರಮ ನಡೆಯಿತು. ಇತಿಹಾಸ ವಿಭಾಗದ ಮುಖ್ಯಸ್ಥ ಡಾ ಪ್ರಸಾದ. ಎನ್ ಹಾಗೂ ಇತಿಹಾಸ ಉಪನ್ಯಾಸಕಿ ನಮಿತಾ ಎಂ ಎ ಅವರ ಮಾರ್ಗದರ್ಶನದಲ್ಲಿ   ಪ್ರತಿ ವರ್ಷ ಕೆ.ಎಸ್. ಎಸ್ ಕಾಲೇಜಿನ ಪ್ರಾಕೃತ ಪ್ರವೇಶ ಮತ್ತು ಡಿಪ್ಲೋಮಾ ಕೋರ್ಸಿಗೆ ಉತ್ತಮ ಫಲಿತಾಂಶ ನಡೆಸಲಾಗುತ್ತದೆ.  ಈ ಕೋರ್ಸಿಗೆ 31 ವಿದ್ಯಾರ್ಥಿಗಳು ದಾಖಲಾಗಿ

ಕೆ.ಎಸ್. ಎಸ್ ಕಾಲೇಜಿನ ಪ್ರಾಕೃತ ಪ್ರವೇಶ ಮತ್ತು ಡಿಪ್ಲೋಮಾ ಕೋರ್ಸಿಗೆ ಉತ್ತಮ ಫಲಿತಾಂಶ Read More »

ಮೇ 5ರಿಂದ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಸಮುದಾಯಗಳ ಸಮಗ್ರ ಸಮೀಕ್ಷೆ

ಮಂಗಳೂರು: ಆಂತರಿಕ ಮೀಸಲಾತಿ ಮ್ಯಾಟ್ರಿಕ್ಸ್ ಅನುಷ್ಠಾನಕ್ಕೆ ಅನುಕೂಲವಾಗುವಂತೆ ಮೇ 5ರಿಂದ 17ರವರೆಗೆ ಎಲ್ಲ ಪರಿಶಿಷ್ಟ ಜಾತಿ ಸಮುದಾಯಗಳ ಸಮಗ್ರ ಸಮೀಕ್ಷೆಯನ್ನು ನಡೆಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹೇಳಿದ್ದಾರೆ. ಎಸ್‌ಸಿ ವರ್ಗದ ಅಡಿಯಲ್ಲಿ 101 ಜಾತಿಗಳನ್ನು ಗುರುತಿಸಲಾಗಿದೆ. ಸಮೀಕ್ಷೆಯು ವಿವರವಾದ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಮಾಹಿತಿಯನ್ನು ಸಂಗ್ರಹಿಸಲಾಗುತ್ತದೆ. ಸಮೀಕ್ಷೆಯ ಸುಗಮ ಅನುಷ್ಠಾನವನ್ನು ಖಚಿತಪಡಿಸಿಕೊಳ್ಳಲು, 2,047 ಶಿಕ್ಷಕರಿಗೆ ತರಬೇತಿ ನೀಡಲಾಗಿದೆ ಮತ್ತು ಗೊತ್ತುಪಡಿಸಿದ ಅಧಿಕಾರಿಗಳ ಮೇಲ್ವಿಚಾರಣೆಯಲ್ಲಿ ನಿರ್ದಿಷ್ಟ ಪ್ರದೇಶಗಳಿಗೆ ನಿಯೋಜಿಸಲಾಗಿದೆ. ಇದಲ್ಲದೆ ಸಮೀಕ್ಷೆಯ ಪ್ರಕ್ರಿಯೆಯನ್ನು

ಮೇ 5ರಿಂದ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಸಮುದಾಯಗಳ ಸಮಗ್ರ ಸಮೀಕ್ಷೆ Read More »

ಹೊಳೆಗೆ ಬಿದ್ದು ಮಹಿಳೆ ಮೃತ್ಯು

ಸುಳ್ಯ : ಸುಳ್ಯದ ಸಂಪಾಜೆ ಗ್ರಾಮದ ಕೊಯನಾಡಿನಲ್ಲಿ ಹೊಳೆಗೆ ಬಿದ್ದು ಮಹಿಳೆ ಸಾವನ್ನಪ್ಪಿದ ಘಟನೆ ಏ.29 ರಂದು ಮಧ್ಯಾಹ್ನ ನಡೆದಿದೆ. ಮೃತ ಮಹಿಳೆಯನ್ನು ದಿ. ಅಣ್ಣು ದಾಸ್ ಅವರ ಧರ್ಮ ಪತ್ನಿ ಯಶೋದ ದಾಸ್ (60) ಎಂದು ಗುರುತಿಸಲಾಗಿದೆ. ಯಶೋದ ಅವರು ಕೆಲವು ವರ್ಷಗಳ ಹಿಂದೆ ಸ್ಪೋಕ್ ಮತ್ತು ಹೃದಯ ಖಾಯಿಲೆಯಿಂದ  ಬಳಲುತ್ತಿದ್ದು,  ಮಂಗಳೂರಿನ ಯೂನಿಟಿ ಆಸ್ಪತ್ರೆಯಲ್ಲಿ ಅಪರೇಶನ್ ಮಾಡಿ ಚಿಕಿತ್ಸೆ ಪಡೆಯುತ್ತಿದ್ದರು. ಬಳಿಕ ಮನೆಗೆ ಕರೆದುಕೊಂಡು ಬರಲಾಗಿತ್ತು. ಪುತ್ರನಲ್ಲಿ ಅಡುಗೆ ಮಾಡಲು ಕೋಳಿ ತರಲು ಹೇಳಿದ್ದರೆನ್ನಲಾಗಿದ್ದು,

ಹೊಳೆಗೆ ಬಿದ್ದು ಮಹಿಳೆ ಮೃತ್ಯು Read More »

ಮಂಗಳೂರು: ಅಕ್ರಮ ದಾಸ್ತಾನು ಇಟ್ಟಿದ್ದ 500 ಕ್ವಿಂಟಾಲ್‌ ಅಕ್ಕಿಪತ್ತೆ

ಅನ್ನಭಾಗ್ಯದ ಅಕ್ಕಿಯನ್ನು ಪಾಲಿಷ್‌ ಮಾಡಿ ಮಾರಾಟ ಮಾಡುತ್ತಿರುವ ಶಂಕೆ ಮಂಗಳೂರು: ಮಂಗಳೂರಿನ ಖಾಸಗಿ ಗೋಡೌನ್ ಒಂದರಲ್ಲಿ ನೂರಾರು ಮೂಟೆ ಅಕ್ಕಿ ಅಕ್ರಮವಾಗಿ ಸಂಗ್ರಹಿಸಿರುವುದು ಪತ್ತೆಯಾಗಿದೆ. ಮಂಗಳೂರು ನಗರದ ಬಂದರು ಸಮೀಪದ ಅಕ್ಕಿ ದಾಸ್ತಾನು ಗೋಡೌನ್​​ಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿನಲ್ ಸೂಚನೆಯಂತೆ ಸಹಾಯಕ ಆಯುಕ್ತ ಹರ್ಷವರ್ಧನ್ ಹಾಗೂ ಆಹಾರ ಇಲಾಖೆಯ ಉಪನಿರ್ದೇಶಕರು ದಾಳಿ ನಡೆಸಿದಾಗ ಈ ಅಕ್ರಮ ಬೆಳಕಿಗೆ ಬಂದಿದೆ. ಸುಮಾರು 500 ಕ್ವಿಂಟಾಲ್‌ ಅಕ್ಕಿ ಅಕ್ರಮ ದಾಸ್ತಾನು ಇಟ್ಟಿರುವುದು ಪತ್ತೆಯಾಗಿದೆ. ಇದು ಅನ್ನಭಾಗ್ಯದ ಅಕ್ಕಿಯಾಗಿರಬಹುದು ಎಂಬ ಶಂಕೆ

ಮಂಗಳೂರು: ಅಕ್ರಮ ದಾಸ್ತಾನು ಇಟ್ಟಿದ್ದ 500 ಕ್ವಿಂಟಾಲ್‌ ಅಕ್ಕಿಪತ್ತೆ Read More »

ಪಾಕಿಸ್ಥಾನದಲ್ಲಿ ತಾರಕಕ್ಕೇರಿದ ಯುದ್ಧ ಭೀತಿ : 36 ತಾಸಿನೊಳಗೆ ದಾಳಿ ಶುರುವಾಗಬಹುದು ಎಂದ ಸಚಿವ

ಮಧ್ಯರಾತ್ರಿ ಸುದ್ದಿಗೋಷ್ಠಿ ನಡೆಸಿದ ಪಾಕ್‌ ಸರಕಾರ ನವದೆಹಲಿ: ಪಹಲ್ಗಾಮ್‌ ಭಯೋತ್ಪಾದಕ ದಾಳಿಗೆ ಪ್ರತೀಕಾರ ಆಗಲೇಬೇಕು ಎಂದು ಭಾರತ ಪಣತೊಟ್ಟಿದೆ. ಭಾರತದ ಸಶಸ್ತ್ರ ಪಡೆಗಳಿಗೆ ಪ್ರಧಾನಿ ನರೇಂದ್ರ ಮೋದಿ ನಿನ್ನೆ ಕಾರ್ಯಾಚರಣೆ ನಡೆಸಲು ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದಾರೆ. ಇದರ ಬೆನ್ನಿಗೆ ಪಾಕಿಸ್ಥಾನದಲ್ಲಿ ಯುದ್ಧ ಭೀತಿ ತಾರಕಕ್ಕೇರಿದೆ. ಸ್ವತಹ ಪಾಕಿಸ್ಥಾನದ ಸಚಿವರೇ 36 ತಾಸಿನೊಳಗೆ ನಮ್ಮ ಮೇಲೆ ದಾಳಿಯಾಗಬಹುದು ಎಂದು ಹೇಳಿಕೊಂಡಿದ್ದಾರೆ. ಭಯೋತ್ಪಾದನೆಗೆ ತಕ್ಕ ಹೊಡೆತ ನೀಡುವುದು ನಮ್ಮ ರಾಷ್ಟ್ರೀಯ ಸಂಕಲ್ಪ ಎಂದು ಪ್ರಧಾನಿ ಪುನರುಚ್ಚರಿಸಿದ್ದಾರೆ. ಭಾರತೀಯ ಸೇನೆಯಲ್ಲಿ ನನಗೆ

ಪಾಕಿಸ್ಥಾನದಲ್ಲಿ ತಾರಕಕ್ಕೇರಿದ ಯುದ್ಧ ಭೀತಿ : 36 ತಾಸಿನೊಳಗೆ ದಾಳಿ ಶುರುವಾಗಬಹುದು ಎಂದ ಸಚಿವ Read More »

ಕುಡುಪು ಕೊಲೆ ಪ್ರಕರಣ : ಯುವಕನ ಶವ ಹಸ್ತಾಂತರ

ಇನ್‌ಸ್ಪೆಕ್ಟರ್‌ ವಿರುದ್ಧ ಕರ್ತವ್ಯ ಲೋಪ ಆರೋಪ – ಉನ್ನತ ತನಿಖೆಗೆ ಒತ್ತಾಯ ಮಂಗಳೂರು: ಕುಡುಪು ಭಟ್ರ ಕಲ್ಲುರ್ಟಿ ದೈವಸ್ಥಾಣದ ಸಮೀಪ ಕೊಲೆಯಾದ ಕೇರಳದ ಯುವಕನ ಶವವನ್ನು ಆತನ ಕುಟುಂಬದವರಿಗೆ ಹಸ್ತಾಂತರಿಸಲಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಕೇರಳದ ವಯನಾಡು ಜಿಲ್ಲೆಯ ಸುಲ್ತಾನ್ ಬತ್ತೇರಿ ತಾಲೂಕಿನ ಪುಲಪಳ್ಳಿ ನಿವಾಸಿಯಾಗಿದ್ದ ಯುವಕ ಅಶ್ರಫ್‌ ಎಂಬಾತ ಏ.27ರಂದು ಯುವಕರ ಗುಂಪಿನ ಹೊಡೆತಕ್ಕೆ ಸಿಕ್ಕಿ ಸಾವಿಗೀಡಾಗಿದ್ದಾನೆ. ಮಂಗಳೂರಿನ ವೆನ್‌ಲಾಕ್ ಶವಾಗಾರದಲ್ಲಿದ್ದ ಅಶ್ರಫ್‌ನ ಮೃತದೇಹವನ್ನು ಅವನ ಕುಟುಂಬಸ್ಥರು ಗುರುತಿಸಿ ಪೊಲೀಸರಿಂದ ಪಡೆದುಕೊಂಡಿದ್ದಾರೆ. ಮಧ್ಯರಾತ್ರಿ ಕೇರಳದಿಂದ

ಕುಡುಪು ಕೊಲೆ ಪ್ರಕರಣ : ಯುವಕನ ಶವ ಹಸ್ತಾಂತರ Read More »

error: Content is protected !!
Scroll to Top