ಸುದ್ದಿ

ಆಕಾಶವಾಣಿ ಕೇಂದ್ರದ  ಸೂರ್ಯನಾರಾಯಣ ಭಟ್ಟರಿಗೆ ಸನ್ಮಾನ

ಮೇ ತಿಂಗಳ ಅಂತ್ಯದಲ್ಲಿ ನಿವೃತ್ತರಾಗಲಿರುವ ಮಂಗಳೂರು ಆಕಾಶವಾಣಿ ಕೇಂದ್ರದ ಕಾರ್ಯಕ್ರಮ ಮುಖ್ಯಸ್ಥರಾದ ಪಿ. ಎಸ್ ಸೂರ್ಯನಾರಾಯಣ ಭಟ್ ಇವರನ್ನು ಶ್ರೀಮದವೂರ ವಿಘ್ನೇಶ ಕಲಾ ಸಂಘ ಗೇರುಕಟ್ಟೆ ವತಿಯಿಂದ ಆಕಾಶವಾಣಿ ಕೇಂದ್ರದಲ್ಲಿ  ಸನ್ಮಾನಿಸಲಾಯಿತು.  ಕ್ರಿಯಾಶೀಲ ವ್ಯಕ್ತಿತ್ವದ ಸೂರ್ಯನಾರಾಯಣ ಭಟ್ಟರು ಕಾವ್ಯಯಾನ, ಕಥಾಮೃತ, ಕೃಷಿರಂಗ, ತುಳು- ಕನ್ನಡ ಸಂದರ್ಶನ, ಯಕ್ಷ ಸಿರಿ, ಯಕ್ಷಗಾನ ತಾಳಮದ್ದಳೆ ಸಂಯೋಜನೆಯ ಮೂಲಕ ಬಾನುಲಿ ಕಾರ್ಯಕ್ರಮಗಳ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆಂದು ವಿಘ್ನೇಶ ಕಲಾ ಸಂಘದ ಅಧ್ಯಕ್ಷ   ಪ್ರೊ. ಮಧೂರು ಮೋಹನ ಕಲ್ಲೂರಾಯ ತಿಳಿಸಿದರು.  ಈ […]

ಆಕಾಶವಾಣಿ ಕೇಂದ್ರದ  ಸೂರ್ಯನಾರಾಯಣ ಭಟ್ಟರಿಗೆ ಸನ್ಮಾನ Read More »

ನಾಳೆ (ಮೇ ೩೦): ಸನ್ ಮ್ಯಾಟ್ರಿಕ್ಸ್ ಬ್ಯಾನರಿನಡಿ ತಯಾರಾದ, ಕೆ.ಸತ್ಯೇಂದ್ರ ಪೈ ನಿರ್ಮಾಣದ ಕನ್ನಡ ಸಿನಿಮಾ ’ಸ್ಕೂಲ್ ಲೀಡರ್’ ಬಿಡುಗಡೆ

ಪುತ್ತೂರು : ಸನ್ ಮ್ಯಾಟ್ರಿಕ್ಸ್ ಬ್ಯಾನರಿನಡಿ ತಯಾರಾದ, ಕೆ.ಸತ್ಯೇಂದ್ರ ಪೈ ನಿರ್ಮಾಣದ ಬಹು ನಿರೀಕ್ಷಿತ ಕನ್ನಡ ಸಿನಿಮಾ ’ಸ್ಕೂಲ್ ಲೀಡರ್’ ಕರಾವಳಿಯಾದ್ಯಂತ ಮೇ ೩೦ ಶುಕ್ರವಾರ ತೆರೆ ಕಾಣಲಿದೆ. ಉಡುಪಿ, ದ.ಕ. ಜಿಲ್ಲೆಯ ಸುಮಾರು ೧೩ ಥಿಯೇಟರ್ ಗಳಲ್ಲಿ ಬಿಡುಗಡೆಗೊಳ್ಳಲಿದೆ ಎಂದು ಚಿತ್ರದ ನಿರ್ದೇಶಕ ರಝಾಕ್ ಪುತ್ತೂರು ತಿಳಿಸಿದ್ದಾರೆ. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಕಟಪಾಡಿಯ ಒಂದೇ ಶಾಲೆಯಲ್ಲಿ ಚಿತ್ರೀಕರಣ ಮಾಡಲಾಗಿದೆ. ಸುಮಾರು ೨೫ ಶಾಲೆಯ ೧೨೦ ಕ್ಕೂ ಹೆಚ್ಚು ವಿದ್ಯಾರ್ಥಿಗಳು ಚಿತ್ರದಲ್ಲಿ ಅಭಿನಯಿಸಿರುವುದು ವಿಶೇಷವಾಗಿದೆ. ಮೊದಲಿಗೆ

ನಾಳೆ (ಮೇ ೩೦): ಸನ್ ಮ್ಯಾಟ್ರಿಕ್ಸ್ ಬ್ಯಾನರಿನಡಿ ತಯಾರಾದ, ಕೆ.ಸತ್ಯೇಂದ್ರ ಪೈ ನಿರ್ಮಾಣದ ಕನ್ನಡ ಸಿನಿಮಾ ’ಸ್ಕೂಲ್ ಲೀಡರ್’ ಬಿಡುಗಡೆ Read More »

ಕಾರು -ಮಿನಿ ಟೆಂಪೋ ಡಿಕ್ಕಿ  

ಕಡಬ: ಕಾರು ಮತ್ತು ಮಿನಿ ಟೆಂಪೋ ನಡುವೆ ಅಪಘಾತವಾದ  ಘಟನೆ ಕುದ್ಮಾರು ಆಲಂಕಾರು ರಸ್ತೆಯ ಶಾಂತಿಮೊಗರಿನಲ್ಲಿ ನಡೆದಿದೆ. ಕುದ್ಮಾರು ಕಡೆಗೆ ಬರುತ್ತಿದ್ದ ಕಾರು ಹಾಗೂ  ಅಲಂಕಾರು ಕಡೆಗೆ ಹೋಗುತ್ತಿದ್ದ ಬೇಕರಿ ಉತ್ಪನ್ನಗಳ ಲೈನ್ ಸೇಲ್‌ನ ಮಿನಿ ಟೆಂಪೋ ನಡುವೆ ಅಪಘಾತ ಉಂಟಾಗಿದೆ. ಅಪಘಾತದ ರಭಸಕ್ಕೆ ಟೆಂಪೋ ಪಲ್ಟಿಯಾಗಿದ್ದು, ಅದರಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗಿದೆ.

ಕಾರು -ಮಿನಿ ಟೆಂಪೋ ಡಿಕ್ಕಿ   Read More »

ಸರಣಿ ಕೊಲೆ, ಹಿಂಸಾಚಾರಕ್ಕೆ ಉನ್ನತ ಪೊಲೀಸ್‌ ಅಧಿಕಾರಿಗಳ ತಲೆದಂಡ?

ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್‌ ವ್ಯವಸ್ಥೆಗೆ ಆಮೂಲಾಗ್ರ ಬದಲಾವಣೆ ತರಲು ಚರ್ಚೆ ಬೆಂಗಳೂರು : ಮಂಗಳವಾರ ಬಂಟ್ವಾಳದಲ್ಲಿ ನಡೆದ ಅಬ್ದುಲ್‌ ರಹಿಮಾನ್‌ ಹತ್ಯೆ ಪ್ರಕರಣವೂ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಒಂದೂವರೆ ತಿಂಗಳಲ್ಲಿ ನಡೆದಿರುವ ಮೂರು ಕೊಲೆಗಳು ಹಾಗೂ ಆಗಾಗ ಸಂಭವಿಸುತ್ತಿರುವ ಕೋಮು ಹಿಂಸಾಚಾರ ಸಂಬಂಧಿ ಘಟನೆಗಳನ್ನು ತಡೆಯಲು ವಿಫಲವಾಗಿರುವ ಪೊಲೀಸ್‌ ಇಲಾಖೆಯ ವಿರುದ್ಧ ಭಾರಿ ಸಾರ್ವಜನಿಕ ಆಕ್ರೋಶ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಕೆಲವು ಉನ್ನತ ಅಧಿಕಾರಿಗಳ ತಲೆದಂಡವಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು

ಸರಣಿ ಕೊಲೆ, ಹಿಂಸಾಚಾರಕ್ಕೆ ಉನ್ನತ ಪೊಲೀಸ್‌ ಅಧಿಕಾರಿಗಳ ತಲೆದಂಡ? Read More »

ಅಬ್ದುಲ್‌ ರಹಿಮಾನ್‌ ಹತ್ಯೆಗೆ ಆಕ್ರೋಶ : ಕಾಂಗ್ರೆಸ್‌ಗೆ ಮುಸ್ಲಿಮ್‌ ಮುಖಂಡರ ರಾಜೀನಾಮೆ

ಜಿಲ್ಲಾ ಉಸ್ತುವಾರಿ ಸಚಿವರ ಹೇಳಿಕೆಗೆ ಆಕ್ಷೇಪ ಮಂಗಳೂರು: ಬಂಟ್ವಾಳದ ಅಬ್ದುಲ್‌ ರಹಿಮಾನ್‌ ಹತ್ಯೆಯ ಬಳಿಕ ಕಾಂಗ್ರೆಸ್‌ನ ಮೇಲೆ ಮುಸ್ಲಿಮರು ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಹಲವು ನಾಯಕರು ಪಕ್ಷದಲ್ಲಿರುವ ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡುತ್ತಿದ್ದಾರೆ. ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್‌ ಸರ್ಕಾರ ಕೋಮು ಹಿಂಸಾಚಾರ ತಡೆಯುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಹೇಳಿ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪೋಸ್ಟ್‌ಗಳಿಗೆ ಮುಸ್ಲಿಮ್ ಮುಖಂಡರು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ. ಅಬ್ದುಲ್‌ ರಹಿಮಾನ್‌ ಶವವನ್ನು ಆಸ್ಪತ್ರೆಗೆ ತಂದಾಗ ಅಲ್ಲಿ ಜಮಾಯಿಸಿದ್ದ ಮುಸ್ಲಿಮರು ತಮ್ಮ ಸಮುದಾಯದ ನಾಯಕರನ್ನು ತರಾಟೆಗೆ

ಅಬ್ದುಲ್‌ ರಹಿಮಾನ್‌ ಹತ್ಯೆಗೆ ಆಕ್ರೋಶ : ಕಾಂಗ್ರೆಸ್‌ಗೆ ಮುಸ್ಲಿಮ್‌ ಮುಖಂಡರ ರಾಜೀನಾಮೆ Read More »

ಲಷ್ಕರ್‌ನ ಇಬ್ಬರು ಹೈಬ್ರಿಡ್‌ ಉಗ್ರರ ಬಂಧನ

ಬಂದೂಕು ಸಹಿತ ಅಪಾರ ಶಸ್ತ್ರಾಸ್ತ್ರ ವಶ ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್​ನಲ್ಲಿ ಭದ್ರತಾ ಪಡೆ ಲಷ್ಕರ್‌ ಇ ತೈಬಾದ ಇಬ್ಬರು ಹೈಬ್ರಿಡ್ ಉಗ್ರರನ್ನು ಬಂಧಿಸಿ ಅವರಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದೆ. ಶೋಪಿಯಾನ್‌ನಲ್ಲಿ ಬಂಧಿಸಲಾದ ಈ ಲಷ್ಕರ್ ಭಯೋತ್ಪಾದಕರನ್ನು ಇರ್ಫಾನ್ ಬಶೀರ್ ಮತ್ತು ಉಜೈರ್ ಸಲಾಮ್ ಎಂದು ಗುರುತಿಸಲಾಗಿದೆ. ಭಾರಿ ದೊಡ್ಡ ವಿಧ್ವಂಸಕ ಕೃತ್ಯ ಎಸಗುವ ಉದ್ದೇಶದಿಂದ ಅವರು ಓಡಾಡುತ್ತಿದ್ದರು ಎಂದು ಭದ್ರತಾ ಪಡೆ ಮೂಲಗಳು ತಿಳಿಸಿವೆ. ಸೆರೆಯಾದ ಉಗ್ರರ ಬಳಿ 2 ಎಕೆ-56 ಬಂದೂಕು,

ಲಷ್ಕರ್‌ನ ಇಬ್ಬರು ಹೈಬ್ರಿಡ್‌ ಉಗ್ರರ ಬಂಧನ Read More »

ಉಗ್ರರ ದಾಳಿಗೆ ಬಲಿಯಾದ ಪ್ರವಾಸಿಗರ ನೆನಪಿಗಾಗಿ ಪಹಲ್ಗಾಮ್‌ನಲ್ಲಿ ಸ್ಮಾರಕ ನಿರ್ಮಾಣ

ಬೈಸರನ್‌ ಕಣಿವೆಯಲ್ಲಿ ಶಾಶ್ವತ ಸ್ಮಾರಕ ನಿರ್ಮಿಸಿ ಮುಗ್ಧರಿಗೆ ಗೌರವ ಎಂದು ಸಿಎಂ ಘೋಷಣೆ ಶ್ರೀನಗರ: ಬೈಸರನ್ ಕಣಿವೆಯಲ್ಲಿ ನಡೆದ ದಾಳಿಯಲ್ಲಿ ಮೃತರಾದ 26 ಪ್ರವಾಸಿಗರ ನೆನಪಿಗಾಗಿ ಪಹಲ್ಗಾಮ್‌ನಲ್ಲಿ ಸ್ಮಾರಕ ನಿರ್ಮಿಸಲಾಗುವುದು ಎಂದು ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಘೋಷಿಸಿದ್ದಾರೆ. ಪಹಲ್ಗಾಮ್‌ನಲ್ಲಿ ನಡೆದ ಸಂಪುಟ ಸಭೆಯಲ್ಲಿ ಮಾತನಾಡಿದ ಅವರು, ಏ.22ರಂದು ಪಹಲ್ಗಾಮ್‌ನ ಬೈಸರನ್ ಕಣಿವೆಯಲ್ಲಿ ನಡೆದ ಹಿಂದೂಗಳ ನರಮೇಧದಲ್ಲಿ 26 ನಾಗರಿಕರು ಬಲಿಯಾಗಿದ್ದರು. ಈ 26 ಜನರಿಗೆ ಶಾಶ್ವತ ಗೌರವ ಸಲ್ಲಿಸುವ ಸ್ಮರಣಾರ್ಥ ಸ್ಮಾರಕವನ್ನು ಸ್ಥಾಪಿಸುವುದಾಗಿ

ಉಗ್ರರ ದಾಳಿಗೆ ಬಲಿಯಾದ ಪ್ರವಾಸಿಗರ ನೆನಪಿಗಾಗಿ ಪಹಲ್ಗಾಮ್‌ನಲ್ಲಿ ಸ್ಮಾರಕ ನಿರ್ಮಾಣ Read More »

ಕಾಂಗ್ರೆಸ್‌ನಲ್ಲಿ ಮತ್ತೆ ಮುಖ್ಯಮಂತ್ರಿ ಕುರ್ಚಿ ಕಿತ್ತಾಟ : ಹೈಕಮಾಂಡ್‌ ಭೇಟಿಯಾದ ನಾಯಕರು

ಅಧಿಕಾರ ಹಂಚಿಕೆ ಸೂತ್ರ ಪಾಲಿಸಲು ಹೈಕಮಾಂಡ್‌ ಮುಂದೆ ಕೋರಿಕೆ ಇಟ್ಟ ಡಿಕೆಶಿ ಬೆಂಗಳೂರು: ಕೆಲ ಸಮಯದಿಂದ ತಣ್ಣಗಾಗಿದ್ದ ಕಾಂಗ್ರೆಸ್‌ನ ಮುಖ್ಯಮಂತ್ರಿ ಕುರ್ಚಿ ಕಿತ್ತಾಟ ಮತ್ತೆ ಶುರುವಾಗಿದೆ. ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮತ್ತು ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ. ವೇಣುಗೋಪಾಲ್ ಮತ್ತು ರಣದೀಪ್ ಸಿಂಗ್ ಸುರ್ಜೆವಾಲಾ ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿ ಮಾತುಕತೆ ನಡೆಸಿ ಮುಖ್ಯಮಂತ್ರಿ ಹುದ್ದೆಯ ಬಗ್ಗೆ ಹಕ್ಕುಮಂಡಿಸಿದ್ದಾರೆ ಎನ್ನಲಾಗಿದೆ. ಡಿಕೆ.ಶಿವಕುಮಾರ್ ಅವರು ಕೆ.ಸಿ. ವೇಣುಗೋಪಾಲ್ ಹಾಗೂ ರಣದೀಪ್

ಕಾಂಗ್ರೆಸ್‌ನಲ್ಲಿ ಮತ್ತೆ ಮುಖ್ಯಮಂತ್ರಿ ಕುರ್ಚಿ ಕಿತ್ತಾಟ : ಹೈಕಮಾಂಡ್‌ ಭೇಟಿಯಾದ ನಾಯಕರು Read More »

ಹಮಾಸ್‌ ಮುಖ್ಯಸ್ಥ ಮುಹಮ್ಮದ್‌ ಸಿನ್ವಾರ್‌ ಇಸ್ರೇಲ್‌ ದಾಳಿಗೆ ಬಲಿ

ಆಸ್ಪತ್ರೆಯ ನೆಲಮಾಳಿಗೆಯಲ್ಲಿ ಅಡಗಿಕೊಂಡಿದ್ದ ಉಗ್ರನನ್ನು ಹುಡುಕಿ ಕೊಂದ ಇಸ್ರೇಲ್‌ ಪಡೆ ಟೆಲ್‌ ಅವೀವ್‌: ಇಸ್ರೇಲ್ ವಾಯುದಾಳಿಯಲ್ಲಿ ಹಮಾಸ್‌ನ ಉಗ್ರಗಾಮಿ ಪಡೆಯ ಮುಖ್ಯಸ್ಥ ಮುಹಮ್ಮದ್ ಸಿನ್ವಾರ್ ಸತ್ತಿರುವುದನ್ನು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ದೃಢಪಡಿಸಿದ್ದಾರೆ. ಕಳೆದ ಅಕ್ಟೋಬರ್‌ನಲ್ಲಿ ದಕ್ಷಿಣ ಗಾಜಾದಲ್ಲಿ ಇಸ್ರೇಲ್ ಮಿಲಿಟರಿಯಿಂದ ಕೊಲ್ಲಲ್ಪಟ್ಟ ಗಾಜಾದ ಮಾಜಿ ಹಮಾಸ್ ನಾಯಕ ಯಾಹ್ಯಾ ಸಿನ್ವಾರ್‌ನ ಕಿರಿಯ ಸಹೋದರ ಮುಹಮ್ಮದ್ ಸಿನ್ವಾರ್. ಈತನನ್ನು ಸಾಯಿಸುವ ಮೂಲಕ ಹಮಾಸ್‌ ವಿರುದ್ಧದ ಯುದ್ಧದಲ್ಲಿ ಇಸ್ರೇಲ್‌ ನಿರ್ಣಾಯಕ ಗೆಲುವು ಪಡೆದುಕೊಂಡಿದೆ. ಗಾಜಾದ ಆಸ್ಪತ್ರೆಯ ನೆಲಮಾಳಿಗೆಯಲ್ಲಿ ಅಡಗಿಕೊಂಡಿದ್ದ

ಹಮಾಸ್‌ ಮುಖ್ಯಸ್ಥ ಮುಹಮ್ಮದ್‌ ಸಿನ್ವಾರ್‌ ಇಸ್ರೇಲ್‌ ದಾಳಿಗೆ ಬಲಿ Read More »

ಅಬ್ದುಲ್‌ ರಹಿಮಾನ್‌ ಹತ್ಯೆ : ಮೂವರು ವಶ

15 ಮಂದಿಯ ತಂಡದಿಂದ ಕೊಲೆ ಎಂದು ಎಫ್‌ಐಆರ್‌ ದಾಖಲು ಬಂಟ್ವಾಳ: ತಾಲೂಕಿನ ಕೂರಿಯಾಳ ಸಮೀಪದ ಇರಾಕೋಡಿಯ ಕೊಳತ್ತಮಜಲ್ ನಿವಾಸಿ ಅಬ್ದುಲ್ ರಹಿಮಾನ್ ಹತ್ಯೆಗೆ ಸಂಬಂಧಪಟ್ಟು ದೀಪಕ್ ಸಹಿತ ಮೂವರನ್ನು ಪೊಲೀಸರು ವಶಕ್ಕೆ ಪಡೆದಿರುವುದಾಗಿ ತಿಳಿದು ಬಂದಿದೆ. ಕೊಲೆ ಕೃತ್ಯದಲ್ಲಿ ಸುಮಾರು 15 ಮಂದಿ ಭಾಗಿಯಾಗಿದ್ದಾರೆ ಎನ್ನಲಾಗುತ್ತಿದ್ದು, ಕೃತ್ಯ ನಡೆದ ಬಳಿಕ ಆರೋಪಿಗಳು ಪರಾರಿಯಾಗಿದ್ದಾರೆ. ಆ ಪೈಕಿ ಮೂವರನ್ನು ಪೊಲೀಸರು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮಂಗಳವಾರ ಮಧ್ಯಾಹ್ನ ಅಬ್ದುಲ್‌ ರಹಿಮಾನ್‌ ಅವರನ್ನು

ಅಬ್ದುಲ್‌ ರಹಿಮಾನ್‌ ಹತ್ಯೆ : ಮೂವರು ವಶ Read More »

error: Content is protected !!
Scroll to Top