ಸುದ್ದಿ

ನಟ ಸುಶಾಂತ್‌ ಸಿಂಗ್‌ ರಜಪೂತ್‌ ಆತ್ಮಹತ್ಯೆ ಪ್ರಕರಣ : ರಿಯಾ ಚಕ್ರವರ್ತಿಗೆ ಕ್ಲೀನ್‌ಚಿಟ್‌

ಆತ್ಮಹತ್ಯೆ ಹಿಂದೆ ಪ್ರೇಯಸಿಯ ಕೈವಾಡವಿಲ್ಲ ಎಂದು ವರದಿ ಸಲ್ಲಿಸಿದ ಸಿಬಿಐ ಮುಂಬಯಿ: ಬಾಲಿವುಡ್‌ ಸೆಲೆಬ್ರಿಟಿಗಳ ಮ್ಯಾನೇಜರ್‌ ಆಗಿದ್ದ ಉಡುಪಿ ಮೂಲದ ದಿಶಾ ಸಾಲ್ಯಾನ್‌ ಸಾವಿನ ಪ್ರಕರಣ ಐದು ವರ್ಷಗಳ ಬಳಿಕ ಮರಳಿ ಮುನ್ನೆಲೆಗೆ ಬಂದಿರುವಾಗಲೇ ಇನ್ನೊಂದೆಡೆ ಈ ಕೇಸಿನ ಜೊತೆಗೆ ತಳುಕು ಹಾಕಿಕೊಂಡಿರುವ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣದಲ್ಲಿ ಸಿಬಿಐ ನಟನ ಪ್ರೇಯಸಿಯಾಗಿದ್ದ ರಿಯಾ ಚಕ್ರವರ್ತಿಗೆ ಕ್ಲೀನ್‌ಚಿಟ್‌ ನೀಡಿದೆ.2020 ಜೂನ್‌ 14ರಂದು ಸುಶಾಂತ್‌ ಸಿಂಗ್‌ ರಜಪೂತ್‌ ಸಿಂಗ್‌ ತನ್ನ ಫ್ಲ್ಯಾಟ್‌ನಲ್ಲಿ ನೇಣಿಗೆ ಶರಣಾಗಿದ್ದರು. […]

ನಟ ಸುಶಾಂತ್‌ ಸಿಂಗ್‌ ರಜಪೂತ್‌ ಆತ್ಮಹತ್ಯೆ ಪ್ರಕರಣ : ರಿಯಾ ಚಕ್ರವರ್ತಿಗೆ ಕ್ಲೀನ್‌ಚಿಟ್‌ Read More »

ಹನಿಟ್ರ್ಯಾಪ್‌ ದಾಖಲೆ ಸಿಎಂ ಸಿದ್ದರಾಮಯ್ಯನವರಿಗೆ ಹಸ್ತಾಂತರ

ಹನಿಟ್ರ್ಯಾಪ್‌ನಲ್ಲಿ ದೊಡ್ಡ ದೊಡ್ಡವರ ಕೈವಾಡ ಇದೆ ಎಂದು ಮಾಹಿತಿ ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ಕೋಲಾಹಲ ಸೃಷ್ಟಿಸಿರುವ ಹನಿಟ್ರ್ಯಾಪ್​ ಪ್ರಕರಣದ ದಾಖಲೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಹಸ್ತಾಂತರಿಸಲಾಗಿದೆ. ಸಚಿವ ರಾಜಣ್ಣ ಪುತ್ರ ವಿಧಾನ ಪರಿಷತ್ ಸದಸ್ಯ ರಾಜೇಂದ್ರ ನಿನ್ನೆ ಸಿದ್ದರಾಮಯ್ಯನವರನ್ನು ಭೇಟಿಯಾಗಿ ದಾಖಲೆ ಸಮೇತ ಹನಿಟ್ರ್ಯಾಪ್ ಪ್ರಕರಣದ ಮಾಹಿತಿ ನೀಡಿದ್ದಾರೆ. ಹನಿಟ್ರ್ಯಾಪ್ ಯತ್ನ ಸಂಬಂಧ ಎಲ್ಲ ಸಾಕ್ಷ್ಯಗಳನ್ನು ಸಿಎಂಗೆ ನೀಡಿದ್ದೇನೆ. ಸೋಮವಾರ ಅಥವಾ ಮಂಗಳವಾರ ಡಿಜಿ ಮತ್ತು ಐಜಿಪಿಗೆ ದೂರು ಸಲ್ಲಿಸುವೆ ಎಂದು ಹೇಳಿದ್ದಾರೆ.ನನಗೆ ಕೂಡ ಹನಿಟ್ರ್ಯಾಪ್ ನಡೆಸಲು

ಹನಿಟ್ರ್ಯಾಪ್‌ ದಾಖಲೆ ಸಿಎಂ ಸಿದ್ದರಾಮಯ್ಯನವರಿಗೆ ಹಸ್ತಾಂತರ Read More »

ವಿವೇಕಾನಂದ ಕಾಲೇಜಿನಲ್ಲಿ ದಶಮಾನೋತ್ಸವ ಆಚರಣೆ | ಯುವಜನತೆ ರಾಷ್ಟ್ರದ ಸಂಪತ್ತು: ಕ್ಯಾಪ್ಟನ್ ಬ್ರಿಜೇಶ್ ಚೌಟ

ಪುತ್ತೂರು:  ನಮ್ಮ ರಾಷ್ಟ್ರದ ಸ್ಥಾನಮಾನ ಅನಾವರಣವಾಗಬೇಕಾದರೆ ವಿದ್ಯಾರ್ಥಿಗಳ ಪಾತ್ರ ಪ್ರಮುಖವಾಗಿರುತ್ತದೆ. ಭಾರತಕ್ಕೆ ಒಂದು ಸಾಂಸ್ಕೃತಿಕ ಪರಂಪರೆ ಇದೆ, ವಿಶ್ವದ ಮೂರನೇ ದೊಡ್ಡ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಿದೆ, ಇಂತಹ ಸಂದರ್ಭದಲ್ಲಿ ಯುವಜನತೆ ತಮ್ಮ ಕರ್ತವ್ಯವನ್ನು ನಿರ್ವಹಿಸಬೇಕು. ವಿದ್ಯಾರ್ಥಿಗಳು ಕೀಳರಿಮೆಯ ಮಾನಸಿಕತೆಯನ್ನು ಬಿಟ್ಟು ತಮ್ಮ ಸಾಮರ್ಥ್ಯಕ್ಕೆ ಅನುಗುಣವಾಗಿ ಕೆಲಸ ಮಾಡಬೇಕು, ಹಾಗಿದ್ದಾಗ ಮಾತ್ರ ನಾವು ಗೆಲ್ಲಲು ಸಾಧ್ಯ ಎಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹೇಳಿದರು. ಅವರು ಶನಿವಾರ ವಿವೇಕಾನಂದ ಕಲಾ,ವಿಜ್ಞಾನ ಮತ್ತು ವಾಣಿಜ್ಯ

ವಿವೇಕಾನಂದ ಕಾಲೇಜಿನಲ್ಲಿ ದಶಮಾನೋತ್ಸವ ಆಚರಣೆ | ಯುವಜನತೆ ರಾಷ್ಟ್ರದ ಸಂಪತ್ತು: ಕ್ಯಾಪ್ಟನ್ ಬ್ರಿಜೇಶ್ ಚೌಟ Read More »

ಕೆ ಎಸ್ ಎಸ್ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿಗಳಿಂದ ವಿಧಾನಸಭೆ ಭೇಟಿ           

ಕುಕ್ಕೆ ಶ್ರೀ  ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದಿಂದ  ಮಾರ್ಚ್ 20 ಗುರುವಾರದಂದು ವಿಧಾನಸಭೆಯ ಅಧಿವೇಶನಕ್ಕೆ ಅಂತಿಮ ಬಿ ಎ  ವಿದ್ಯಾರ್ಥಿಗಳು ಶೈಕ್ಷಣಿಕ ಭೇಟಿ ನೀಡಿದರು. ರಾಜ್ಯಶಾಸ್ತ್ರ ವಿಭಾಗ ಮುಖ್ಯಸ್ಥೆ  ಸ್ವಾತಿ ಕೆ ಮತ್ತು ಉಪನ್ಯಾಸಕ ಭರತ್ ಎಂ.ಎಲ್ ಅವರ ಮಾರ್ಗದರ್ಶನದಲ್ಲಿ ಮತ್ತು ಪ್ರಾಕ್ತನ ವಿದ್ಯಾರ್ಥಿ ಜಯಪ್ರಕಾಶ್ ಎಂ.ಸಿ  ಅವರ  ಸಹಕಾರದೊಂದಿಗೆ ವಿಧಾನಸಭೆಯ ಬಜೆಟ್ ಅಧಿವೇಶನದಲ್ಲಿ ಪಾಲ್ಗೊಂಡು ಕಾರ್ಯಕಲಾಪ ವೀಕ್ಷಿಸಿದರು. ವಿಧಾನಸಭಾ ಸಚಿವಾಲಯದ ಸಿಬ್ಬಂದಿ ಜ್ಞಾನಶೇಖರ್ ವಿದ್ಯಾರ್ಥಿಗಳಿಗೆ ವಿಧಾನಸಭೆಯ ಸವಿವರ ಮಾಹಿತಿ ನೀಡಿದರು.

ಕೆ ಎಸ್ ಎಸ್ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿಗಳಿಂದ ವಿಧಾನಸಭೆ ಭೇಟಿ            Read More »

ಪುತ್ತೂರಿನಲ್ಲಿ ಭಾವ ತೀರ ಯಾನ ಮಾ. 23 ರಂದು 10:30ಕ್ಕೆ ಹಾಗೂ 4:30ಕ್ಕೆ ಚಿತ್ರ ಪ್ರದರ್ಶನ

ಪುತ್ತೂರು : ಸುಳ್ಯದ ಯುವ ಸಂಗೀತ ನಿರ್ದೇಶಕ ಮಯೂರ ಅಂಬೆಕಲ್ಲು ಹಾಗು ತೇಜಸ್‍ ಕಿರಣ್‍ ರವರ ನಿರ್ದೇಶನದಿಂದ ಮೂಡಿಬಂದ “ಭಾವ ತೀರ ಯಾನ” ಸಿನಿಮಾ ಪುತ್ತೂರಿನ ಭಾರತ್‍ ಸಿನಿಮಾಸ್‍ ನಲ್ಲಿ ಸಂಭ್ರಮಾಚರಣೆಗೊಂಡು, ಇದೀಗ ಪ್ರೇಕ್ಷಕರ  ಮೆಚ್ಚುಗೆಗೆ ಪಾತ್ರವಾಗಿದೆ. ಪುತ್ತೂರಿನ ಭಾರತ್ ಸಿನಿಮಾಸ್‍ನಲ್ಲಿ ಭಾವ ತೀರ ಯಾನ  ಮಾ. 23(ನಾಳೆ) ರಂದು ಬೆಳಗ್ಗೆ 10:30ಕ್ಕೆ ಮತ್ತು 4:30 ರ ಸಮಯಕ್ಕೆ  ಶೋ ನೀಡಲು ನಿರ್ಧರಿಸಲಾಗಿದೆ.  ಕೌಂಟ‌ರ್’ನಲ್ಲಿ ಟಿಕೆಟ್ ಪಡೆದುಕೊಳ್ಳಲು ಕಷ್ಟ ಸಾಧ್ಯವಾಗುವವರು Book My Show Appನಲ್ಲಿ  ticketಗಳನ್ನು

ಪುತ್ತೂರಿನಲ್ಲಿ ಭಾವ ತೀರ ಯಾನ ಮಾ. 23 ರಂದು 10:30ಕ್ಕೆ ಹಾಗೂ 4:30ಕ್ಕೆ ಚಿತ್ರ ಪ್ರದರ್ಶನ Read More »

ಮಾ. 29-30 : ಕರ್ಕೇರ ಕುಟುಂಬಸ್ಥರ ಕುದ್ಮಾರು ದೋಳ ತರವಾಡಿನ ಗೃಹಪ್ರವೇಶ

ಕುದ್ಮಾರು : ಕರ್ಕೇರ ಕುಟುಂಬಸ್ಥರ ಕುದ್ಮಾರು ದೋಳ ತರವಾಡು ಮನೆಯ ಗೃಹಪ್ರವೇಶ, ಶ್ರೀ ಧರ್ಮದೈವ ಧೂಮಾವತಿ ಮತ್ತು ಪರಿವಾರ ದೈವಗಳ ಪ್ರತಿಷ್ಠಾಪನೆ ಮಾ. 29 ಶನಿವಾರ ಹಾಗೂ ಮಾ.30 ಭಾನುವಾರದಂದು ನಡೆಯಲಿದೆ. ಮಾ.29ರಂದು ಬೆಳಗ್ಗೆ 9ಗಂಟೆಗೆ ವಾರ್ಷಿಕ ನಾಗತಂಬಿಲ, ಮದ್ಯಾಹ್ನ 1ಗಂಟೆಗೆ ಅನ್ನಸಂತರ್ಪಣೆ, ಸಂಜೆ 4 ಗಂಟೆಗೆ ದೈವಗಳ ಆಭರಣ ತರುವುದು, ಪೂರ್ಣಕುಂಭ ಸ್ವಾಗತ, ಸಂಜೆ 6 ಗಂಟೆಗೆ ದೇವತಾ ಪ್ರಾರ್ಥನೆ, ಆಚಾರ್ಯವರಣ, ಸ್ಥಳ ಶುದ್ಧಿ, ಪ್ರಸಾದ ಶುದ್ಧಿ, ರಕ್ಷೋಘ್ನ ಹೋಮ, ವಾಸ್ತು ಹೋಮ, ವಾಸ್ತು ಪೂಜಾ

ಮಾ. 29-30 : ಕರ್ಕೇರ ಕುಟುಂಬಸ್ಥರ ಕುದ್ಮಾರು ದೋಳ ತರವಾಡಿನ ಗೃಹಪ್ರವೇಶ Read More »

ಒಕ್ಕಲಿಗರ ಪ್ರೀಮಿಯರ್ ಲೀಗ್ – ಗೌಡ್ರ ಕಪ್ 2025-26 ಕ್ರಿಕೆಟ್ ಹಬ್ಬ – ಎ.ವಿ.ಜಿ. ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ (ರಿ.) ವತಿಯಿಂದ ಜೆರ್ಸಿ ವಿತರಣೆ

‘ಗೌಡ್ರ ಕಪ್’ ಕ್ರಿಕೆಟ್ ಟೂರ್ನಮೆಂಟ್ ನಡೆಯಲಿದ್ದು ಅದರಲ್ಲಿ ಸ್ಪರ್ಧಿಸಲಿರುವ ‘ ಶಕ್ತಿ ಕೃಷ್ಣ ನಗರ ‘ ತಂಡಕ್ಕೆ ಎ.ವಿ.ಜಿ. ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ (ರಿ.) ವತಿಯಿಂದ ಜೆರ್ಸಿಗಳನ್ನು ವಿತರಿಸಲಾಯಿತು. ಎ.ವಿ.ಜಿ. ಇಂಗ್ಲೀಷ್ ಮೀಡಿಯಂ ಸ್ಕೂಲ್ ನಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ತಂಡದ ನಾಯಕ ಪುಷ್ಪರಾಜ್ ಗೌಡ ಜೆರ್ಸಿ ಸ್ವೀಕರಿಸಿದರು. ಎ.ವಿ.ಜಿ. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಕಳುವಾಜೆ ವೆಂಕಟ್ ರಮಣ ಗೌಡ ಅವರು ಜೆರ್ಸಿ ವಿತರಿಸಿ ಶುಭ ಹಾರೈಸಿದರು. ಸಂಚಾಲಕ ಎ. ವಿ. ನಾರಾಯಣ, ಕಾರ್ಯದರ್ಶಿ

ಒಕ್ಕಲಿಗರ ಪ್ರೀಮಿಯರ್ ಲೀಗ್ – ಗೌಡ್ರ ಕಪ್ 2025-26 ಕ್ರಿಕೆಟ್ ಹಬ್ಬ – ಎ.ವಿ.ಜಿ. ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ (ರಿ.) ವತಿಯಿಂದ ಜೆರ್ಸಿ ವಿತರಣೆ Read More »

ಕಾಡಿನ ಮಧ್ಯೆ ಪತ್ತೆಯಾದ ನಾಲ್ಕು ತಿಂಗಳ ಹೆಣ್ಣು ಮಗು | ಮಹಿಳೆಯಿಂದ  ಮಗು ರಕ್ಷಣೆ

ಉಜಿರೆ: ಬೆಳಾಲುವಿನ  ಕೊಡೋಳುಕೆರೆಯಲ್ಲಿ ನಾಲ್ಕು ತಿಂಗಳ ಹೆಣ್ಣು ಮಗುವೊಂದು ಕಾಡಿನ ಮಧ್ಯೆ ಬಿಟ್ಟು ಹೋದ ಘಟನೆ ಇಂದು(ಮಾ.22) ಬೆಳಗ್ಗೆ ನಡೆದಿದೆ. ಬೆಳಾಲು ಗ್ರಾ.ಪಂ ವ್ಯಾಪ್ತಿಯ ಮುಂಡ್ಕೊಟ್ಟು ರಸ್ತೆಯ ಕೊಡೋಳುಕೆರೆ ಕಾಡಿನಲ್ಲಿ ಮಗುವೊಂದು ಅಳುವ ಶಬ್ದ ದಾರಿಹೋಕ ಮಹಿಳೆಗೆ ಕೇಳಿದ್ದು, ತಕ್ಷಣ ಅವರು ಮಗುವನ್ನು ಕಂಡು ಸಂಬಂಧ ಪಟ್ಟವರಿಗೆ ತಿಳಿಸಿದ್ದಾರೆ. ಹಸುಕೂಸು ಆರೋಗ್ಯಕರವಾಗಿದೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಪೊಲೀಸ್ ಮತ್ತು ಆರೋಗ್ಯ ಇಲಾಖೆ ಧಾವಿಸಿದ್ದು,  ಮಹಿಳಾ ಮತ್ತು ಮಕ್ಕಳ ಇಲಾಖಾ ಬರುವಿಕೆಗಾಗಿ ಕಾಯುತ್ತಿದ್ದಾರೆ ಎಂದು ಬೆಳಾಲು ಗ್ರಾ.ಪಂ.

ಕಾಡಿನ ಮಧ್ಯೆ ಪತ್ತೆಯಾದ ನಾಲ್ಕು ತಿಂಗಳ ಹೆಣ್ಣು ಮಗು | ಮಹಿಳೆಯಿಂದ  ಮಗು ರಕ್ಷಣೆ Read More »

ಮಾ.25-26 : ಮುಗೇರು ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನದಲ್ಲಿ 11ನೇ ವರ್ಷದ ಪ್ರತಿಷ್ಠಾವಾರ್ಷಿಕೋತ್ಸವ ಮತ್ತು ಜಾತ್ರೋತ್ಸವ ಹಾಗೂ ಭಜನಾ ಸಂಭ್ರಮ

ಮುಗೇರು : ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನದಲ್ಲಿ ಮಾ.25 ಬುಧವಾರದಂದು 11ನೇ ವರ್ಷದ ಪ್ರತಿಷ್ಠಾವಾರ್ಷಿಕೋತ್ಸವ ಮತ್ತು ಜಾತ್ರೋತ್ಸವ ಹಾಗೂ ಭಜನಾ ಸಂಭ್ರಮ ಬ್ರಹ್ಮಶ್ರೀ ನೀಲೇಶ್ವರ ಆರೋತ್‍ ಪದ್ಮನಾಭ ತಂತ್ರಿಗಳ ದಿವ್ಯ ನೇತೃತ್ವದಲ್ಲಿ ನಡೆಯಲಿದೆ. ಮಾ.18  ಮಂಗಳವಾರದಂದು ಬೆಳಗ್ಗೆ 10 ಗಂಟೆಗೆ ಗೊನೆ ಮುಹೂರ್ತ ನಡೆದಿದ್ದು, ಮಾ.25 ಮಂಗಳವಾರ ಬೆಳಗ್ಗೆ 6:30ಕ್ಕೆ ಅರ್ಧ ಏಕಾಹ ಭಜನೆ ಪ್ರಾರಂಭ, ಬೆಳಗ್ಗೆ 10 ಗಂಟೆಗೆ ಊರ ಭಕ್ತಾದಿಗಳಿಂದ ಹೊರೆಕಾಣಿಕೆ ಸಮರ್ಪಣೆ, ಬಳಿಕ ಭಕ್ತಾದಿಗಳಿಂದ ಸ್ವಚ್ಛತೆ ಹಾಗೂ ಅಲಂಕಾರ ಸೇವೆ, ಸಂಜೆ 5

ಮಾ.25-26 : ಮುಗೇರು ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನದಲ್ಲಿ 11ನೇ ವರ್ಷದ ಪ್ರತಿಷ್ಠಾವಾರ್ಷಿಕೋತ್ಸವ ಮತ್ತು ಜಾತ್ರೋತ್ಸವ ಹಾಗೂ ಭಜನಾ ಸಂಭ್ರಮ Read More »

ಮಾ. ೨೧ರಂದು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಎಸ್, ಎಸ್, ಎಲ್ ಸಿ ಪರೀಕ್ಷೆಗೆ ಚಾಲನೆ

ಸವಣೂರು : ವಿದ್ಯಾರಶ್ಮಿ ವಿದ್ಯಾಲಯದಲ್ಲಿ ನಿನ್ನೆ ಎಸ್, ಎಸ್, ಎಲ್ ಸಿ ಪರೀಕ್ಷೆಯ ಉದ್ಘಾಟನೆ ಕರ‍್ಯಕ್ರಮ ನಡೆಯಿತು. ಎಸ್, ಎಸ್, ಎಲ್ ಸಿ ಪರೀಕ್ಷಾ ಕೇಂದ್ರವಾದ ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಸಂಸ್ಥೆಯ ಸಂಚಾಲಕರಾದ ¸ವಣೂರು ಸೀತಾರಾಮ ರೈ ಕೆ ದೀಪ ಪ್ರಜ್ವಲನೆಯ ಮೂಲಕ ಪರೀಕ್ಷೆಗೆ ಚಾಲನೆ ನೀಡಿ ಮಕ್ಕಳಿಗೆ ಶುಭ ಹಾರೈಸಿದರು. ಈ ಸಂದಭ೯ದಲ್ಲಿ ಆಡಳಿತಾಧಿಕಾರಿ ಅಶ್ವಿನ್ ಎಲ್ ಶೆಟ್ಟಿ, ಪ್ರಾಂಶುಪಾಲೆ ಶಶಿಕಲಾ ಎಸ್ ಆಳ್ವ, ಪರೀಕ್ಷಾ ಆಧಿಕ್ಷಕರಾದ ಪ್ರೇಮ್ ಕುಮಾರ್, ಉಪ ಆಧಿಕ್ಷಕರಾದ ಲಕ್ಷಿö್ಮ, ಪ್ರಶ್ನೆಪತ್ರಿಕೆ ಅಭಿರಕ್ಷಕರಾದ

ಮಾ. ೨೧ರಂದು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಎಸ್, ಎಸ್, ಎಲ್ ಸಿ ಪರೀಕ್ಷೆಗೆ ಚಾಲನೆ Read More »

error: Content is protected !!
Scroll to Top