ಸುದ್ದಿ

ಚಾರ್ಮಾಡಿಯ ಗುಡ್ಡ ಪ್ರದೇಶದಲ್ಲಿ ಬೆಂಕಿ ಅನಾಹುತ | ನೂರಾರು ಎಕರೆ ಅರಣ್ಯ ನಾಶ

ಚಾರ್ಮಾಡಿ ಘಾಟ್ : ಚಾರ್ಮಾಡಿಯ ಗುಡ್ಡದ ತುದಿಯಲ್ಲಿ ಕಾಡ್ಲಿಚ್ಚು ಕಾಣಿಸಿಕೊಂಡಿದ್ದು ಬೆಂಕಿಯ ಕೆನ್ನಾಲಿಗೆಗೆ ನೂರಾರು ಎಕರೆ ಅರಣ್ಯ ಸುಟ್ಟು ಕರಕಲಾಗಿದೆ. ಯಾವ ಕಾರಣದಿಂದ ಬೆಂಕಿ ಉಂಟಾಗಿದೆ ಎಂದು ತಿಳಿದು ಬಂದಿಲ್ಲ ಪ್ರಾಣಿ ಸೇರಿದಂತೆ ಅಪರೂಪದ ಸಸ್ಯ ಸಂಪತ್ತು ನಾಶವಾಗಿದೆ ಎಂಬುವುದಾಗಿ ಶಂಕೆ ವ್ಯಕ್ತವಾಗಿದೆ. ಸದ್ಯ ಅರಣ್ಯ ಇಲಾಖೆಯ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ. ದ.ಕ. ಜಿಲ್ಲಾ ವಿಭಾಗದ ಘಾಟಿ ಪ್ರದೇಶ ಈ ಸ್ಥಳಕ್ಕೆ ಹತ್ತಿರವಿದ್ದು ಅಲ್ಲಿಗೂ ಬೆಂಕಿ ವ್ಯಾಪಿಸುವ ಭೀತಿ ಇದೆ. ಚಾರ್ಮಾಡಿ ಘಾಟಿಯಲ್ಲಿ ಹೆಚ್ಚಾಗಿ […]

ಚಾರ್ಮಾಡಿಯ ಗುಡ್ಡ ಪ್ರದೇಶದಲ್ಲಿ ಬೆಂಕಿ ಅನಾಹುತ | ನೂರಾರು ಎಕರೆ ಅರಣ್ಯ ನಾಶ Read More »

ಎನ್‌ಕೌಂಟರ್‌ನಲ್ಲಿ 12 ನಕ್ಸಲರ ಹತ್ಯೆ

1 ಕೋಟಿ ರೂ. ಬಹುಮಾನ ಹೊಂದಿದ್ದ ನಕ್ಸಲ್‌ ಮುಖಂಡನೂ ಬಲಿ ಭುವನೇಶ್ವರ: ಛತ್ತೀಸ್‌ಗಢದ ಗರಿಯಾಬಂದ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಕನಿಷ್ಠ 12 ನಕ್ಸಲರು ಹತರಾಗಿದ್ದಾರೆ. ಸೋಮವಾರ ಮತ್ತು ಮಂಗಳವಾರ ಕಾರ್ಯಾಚರಣೆ ನಡೆಸಲಾಗಿದ್ದು, ಇಬ್ಬರು ಮಹಿಳಾ ನಕ್ಸಲರನ್ನು ಕೂಡ ಹತ್ಯೆ ಮಾಡಲಾಗಿದೆ. ಓರ್ವ ಕೋಬ್ರಾ ಯೋಧ ಗಾಯಗೊಂಡಿದ್ದಾರೆ.ಛತ್ತೀಸ್‌ಗಢ-ಒಡಿಶಾ ಗಡಿಯಲ್ಲಿರುವ ಮೈನ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಸೋಮವಾರ ತಡರಾತ್ರಿ ಮತ್ತು ಮಂಗಳವಾರ ಮುಂಜಾನೆ ಗುಂಡಿನ ಚಕಮಕಿ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಜಿಲ್ಲಾ

ಎನ್‌ಕೌಂಟರ್‌ನಲ್ಲಿ 12 ನಕ್ಸಲರ ಹತ್ಯೆ Read More »

ಬಾವಿಗೆ ಹಾರಿ ಯುವಕ  ಆತ್ಮಹತ್ಯೆ

ಕಾರ್ಕಳ : ಕಾರ್ಕಳದ ಕಸಬಾ ಗ್ರಾಮದಲ್ಲಿ ಬಾವಿಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಕಸಬಾ ಗ್ರಾಮದ ಮೀನಗುಂಡಿ ಕಂಪೌಂಡ್‌ನ ಕೆ. ವೆಂಕಟೇಶ ಹೆಗ್ಡೆ (22) ಮೃತ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಮೃತ ಕೆ. ವೆಂಕಟೇಶ ಹೆಗ್ಡೆ ಮಂಗಳೂರು ಸೈಂಟ್ ಜೋಸೆಫ್ ವಿದ್ಯಾಲಯದಲ್ಲಿ ಪ್ರಥಮ ವರ್ಷದ ಎಂಬಿಎ ವ್ಯಾಸಂಗ ಮಾಡುತ್ತಿದ್ದು, ವಿದ್ಯಾಭ್ಯಾಸ ಮುಂದುವರೆಸಲು ಕಷ್ಟವಾಗುತ್ತಿದೆ ಎಂದು ತಂದೆಯ ಬಳಿ ಹೇಳಿಕೊಂಡಿದ್ದನು ಎನ್ನಲಾಗಿದೆ. ಸುಮಾರು 10 ದಿನಗಳಿಂದ ಮೌನವಾಗಿದ್ದ ಈತ ಇದೇ ಕಾರಣದಿಂದ ಮನನೊಂದು ಮನೆಯ ಹಿಂಬದಿಯ

ಬಾವಿಗೆ ಹಾರಿ ಯುವಕ  ಆತ್ಮಹತ್ಯೆ Read More »

ಎರಡು ತಿಂಗಳ ಹಿಂದೆ ಮಂಗಳೂರಿಗೆ ಬಂದಿದ್ದ ದರೋಡೆ ಸೂತ್ರಧಾರ

ಸ್ಥಳೀಯರು ನೆರವಾಗಿರುವ ಅನುಮಾನ ಮಂಗಳೂರು : ಉಳ್ಳಾಲದ ಕೋಟೆಕಾರು ಸಹಕಾರಿ ಬ್ಯಾಂಕ್​ ದರೋಡೆಯ ಸೂತ್ರಧಾರ ಮುರುಗಂಡಿ ಥೇವರ್ ಎರಡು ತಿಂಗಳ ಹಿಂದೆ ಮಂಗಳೂರಿಗೆ ಬಂದು ತಲಪಾಡಿ ಸಮೀಪ ಕೆ.ಸಿ.ರೋಡ್‌ನಲ್ಲಿರುವ ಕೋಟೆಕಾರು ಸಹಕಾರಿ ಬ್ಯಾಂಕಿನ ಪರಿಸರವನ್ನು ಅಧ್ಯಯನ ಮಾಡಿ ಹೋಗಿದ್ದ ಎಂಬ ಮಾಹಿತಿ ತಿಳಿದುಬಂದಿದೆ.ಕೋಟೆಕಾರು ಪರಿಸರದಲ್ಲಿ ಓಡಾಡಿ ಎಲ್ಲ ವಿಚಾರ ತಿಳಿದುಕೊಂಡು ನಿಖರವಾದ ಸ್ಕೆಚ್ ತಯಾರಿಸಿ ಮತ್ತೆ ತಮಿಳುನಾಡಿಗೆ ತೆರಳಿದ್ದ. ಆ ಬಳಿಕ ದರೋಡೆಗೆ ಪಕ್ಕಾ ಪ್ಲಾನ್ ಮಾಡಿಕೊಂಡು ತಂಡದ ಜೊತೆ ಬಂದಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಎರಡು ತಿಂಗಳ ಹಿಂದೆ ಮಂಗಳೂರಿಗೆ ಬಂದಿದ್ದ ದರೋಡೆ ಸೂತ್ರಧಾರ Read More »

ಡಾ.ಡಿ.ವೀರೇಂದ್ರ ಹೆಗ್ಗಡೆ ವಿರುದ್ಧ ಮಾನಹಾನಿ ಹೇಳಿಕೆ ನೀಡದಂತೆ ಹೈಕೋರ್ಟ್‌ ಆದೇಶ

ಏನೇ ದೂರು ಇದ್ದರೂ ಕಾನೂನಿನಡಿ ಪರಿಹಾರ ಕಂಡುಕೊಳ್ಳಲು ಮಹೇಶ್‌ ಶೆಟ್ಟಿ ತಿಮರೋಡಿಗೆ ನಿರ್ದೇಶನ ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹಾಗೂ ಅವರ ಕುಟುಂಬ ಸದಸ್ಯರ ವಿರುದ್ಧ ಯಾವುದೇ ಮಾನಹಾನಿ ಹೇಳಿಕೆ ನೀಡದಂತೆ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸಂಸ್ಥಾಪಕ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಅವರ ಸಹಚರರಿಗೆ ಹೈಕೋರ್ಟ್ ನಿರ್ದೇಶಿಸಿದೆ.ಡಾ. ವೀರೇಂದ್ರ ಹೆಗ್ಗಡೆ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧ ಮಾನಹಾನಿ ಹೇಳಿಕೆ ನೀಡುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಕಾನೂನು ಕ್ರಮ

ಡಾ.ಡಿ.ವೀರೇಂದ್ರ ಹೆಗ್ಗಡೆ ವಿರುದ್ಧ ಮಾನಹಾನಿ ಹೇಳಿಕೆ ನೀಡದಂತೆ ಹೈಕೋರ್ಟ್‌ ಆದೇಶ Read More »

ಸಿದ್ದರಾಮಯ್ಯನವರ ವರುಣಾ ಕ್ಷೇತ್ರದಲ್ಲೇ ಕಾಂಗ್ರೆಸ್‌ ಮುಖಂಡರಿಗೆ ಬಹಿಷ್ಕಾರ

ಸಿಎಂ ಕ್ಷೇತ್ರವಾದರೂ ಅಭಿವೃದ್ಧಿಯಾಗದ ಹಿನ್ನೆಲೆಯಲ್ಲಿ ಬ್ಯಾನರ್‌ ಹಾಕಿದ ಗ್ರಾಮಸ್ಥರು ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿಧಾನಸಭೆ ಕ್ಷೇತ್ರವಾದ ವರುಣಾದಲ್ಲೇ ಜನರು ಕಾಂಗ್ರೆಸ್‌ ನಾಯಕರಿಗೆ ಬಹಿಷ್ಕಾರ ಹಾಕಿದ ಬೆಳವಣಿಗೆಯೊಂದು ನಿನ್ನೆ ನಡೆದಿದೆ. ವರುಣಾದ ನಗರ್ಲೆ ಗ್ರಾಮದಲ್ಲಿ ಕಾಂಗ್ರೆಸ್ ಮುಖಂಡರಿಗೆ ನಿಷೇಧ ಹೇರಲಾಗಿದೆ ಎಂಬ ಫ್ಲೆಕ್ಸ್‌ಗಳು ಅಲ್ಲಲ್ಲಿ ಕಾಣಿಸಿಕೊಂಡಿದ್ದವು. ಕ್ಷೇತ್ರಕ್ಕೆ ಯಾವುದೇ ಅನುದಾನ ಸಿಗದೆ, ಅಭಿವೃದ್ಧಿಯಾಗದಿರುವುದರಿಂದ ಬೇಸತ್ತ ಜನರು ಕಾಂಗ್ರೆಸ್‌ ಮೇಲೆ ಆಕ್ರೋಶಗೊಂಡು ಬ್ಯಾನರ್‌ಗಳನ್ನು ಹಾಕಿದ್ದರು. ಕಾಂಗ್ರೆಸ್ ಮುಖಂಡರಿಗೆ ನಮ್ಮ ಗ್ರಾಮದ ಒಳಗೆ ಪ್ರವೇಶವಿಲ್ಲ ಎಂದು ಬ್ಯಾನರ್‌ಗಳಲ್ಲಿ ಬರೆಯಲಾಗಿತ್ತು. ಸೋಷಿಯಲ್‌ ಮೀಡಿಯಾದಲ್ಲಿ

ಸಿದ್ದರಾಮಯ್ಯನವರ ವರುಣಾ ಕ್ಷೇತ್ರದಲ್ಲೇ ಕಾಂಗ್ರೆಸ್‌ ಮುಖಂಡರಿಗೆ ಬಹಿಷ್ಕಾರ Read More »

ಮಂಗಳೂರು ದರೋಡೆ ಕೃತ್ಯ ಆರೋಪಿಗಳ ಬಂಧನಕ್ಕೆ ನೆರವಾದದ್ದು ಹಳೆ ಫಿಯೆಟ್‌ ಕಾರು

ನಾಲ್ಕೇ ದಿನದಲ್ಲಿ ಪ್ರಕರಣ ಭೇದಿಸಲು ನಡೆಸಿದ ತನಿಖೆ ಥ್ರಿಲ್ಲರ್‌ ಸಿನೆಮಾಗಿಂತಲೂ ರೋಚಕ ಮಂಗಳೂರು: ಉಳ್ಳಾಲ ಸಮೀಪದ ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಖದೀಮರನ್ನು ಮಂಗಳೂರು ಪೊಲೀಸರು ಅರೆಸ್ಟ್​ ಮಾಡಿದ್ದಾರೆ. ತಮಿಳುನಾಡಿನ ತಿರುವನ್ನೇಲಿಯಲ್ಲಿ ಮುರುಗಂಡಿ ಥೇವರ್‌, ಮನಿವೆಣ್ಣನ್ ಹಾಗೂ ಪ್ರಕಾಶ್​ ಅಲಿಯಾಸ್ ಜೋಶ್ವಾ ಎಂಬವರನ್ನು ಬಂಧಿಸಲಾಗಿದೆ. ಮುರುಗಂಡಿ ಥೇವರ್ ಈ ಪ್ರಕರಣದ ಮುಖ್ಯ ಕಿಂಗ್‌ಪಿನ್ ಎನ್ನಲಾಗಿದೆ.ಆದರೆ ಈ ದರೋಡೆ ಕೃತ್ಯದಲ್ಲಿ ಇನ್ನೂ ಏಳು ಮಂದಿ ಇದ್ದಾರೆ. ಈ ಪೈಕಿ ಮೂವರು ನೇರವಾಗಿ ದರೋಡೆ ಕೃತ್ಯದಲ್ಲಿ

ಮಂಗಳೂರು ದರೋಡೆ ಕೃತ್ಯ ಆರೋಪಿಗಳ ಬಂಧನಕ್ಕೆ ನೆರವಾದದ್ದು ಹಳೆ ಫಿಯೆಟ್‌ ಕಾರು Read More »

ಮಹಾಭಾರತ ಸರಣಿಯಲ್ಲಿ ಮಧ್ಯಮ ವ್ಯಾಯೋಗ  ತಾಳಮದ್ದಳೆ

ಉಪ್ಪಿನಂಗಡಿ  : ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಕಾಳಿಕಾಂಬಾ ಯಕ್ಷಗಾನ ಕಲಾ ಸೇವಾ ಸಂಘದ  50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ  ಶ್ರೀ ಮಹಾಭಾರತ ಸರಣಿಯಲ್ಲಿ 61ನೇ ಕಾರ್ಯಕ್ರಮವಾಗಿ ಶ್ರೇಣಿ ಡಾ.ಗೋಪಾಲಕೃಷ್ಣ ಭಟ್ ವಿರಚಿತ ಮಧ್ಯಮ ವ್ಯಾಯೋಗ ತಾಳಮದ್ದಳೆ ಜರಗಿತು. ಭಾಗವತರಾಗಿ ಪದ್ಮನಾಭ ಕುಲಾಲ್, ಸುರೇಶ ರಾವ್. ಬಿ, ಹರೀಶ ಆಚಾರ್ಯ ಬಾರ್ಯ, ಹಿಮ್ಮೇಳದಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ, ಚಂದ್ರಶೇಖರ ಆಚಾರ್ಯ ಗೇರುಕಟ್ಟೆ, ಅರ್ಥಧಾರಿಗಳಾಗಿ ಜಯರಾಮ ಬಲ್ಯ(ಭೀಮ), ಹರೀಶ ಆಚಾರ್ಯ ಬಾರ್ಯ (ಧರ್ಮರಾಯ ),  ಪೂರ್ಣಿಮ ರಾವ್

ಮಹಾಭಾರತ ಸರಣಿಯಲ್ಲಿ ಮಧ್ಯಮ ವ್ಯಾಯೋಗ  ತಾಳಮದ್ದಳೆ Read More »

ಗೋ ಸಂರಕ್ಷಣಾ ಸಮಿತಿ ವತಿಯಿಂದ ಬೃಹತ್ ಪ್ರತಿಭಟನಾ ಮೆರವಣಿಗೆ | ಹಿಂದೂ ಧರ್ಮದಲ್ಲಿ ಅತ್ಯಂತ ಪವಿತ್ರ ಸ್ಥಾನವನ್ನು ಪಡೆಯುವ ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಬೇಕು : ನಾ. ಸೀತಾರಾಮ್

ಪುತ್ತೂರು : ಹಿಂದೂ ಧರ್ಮದಲ್ಲಿ ಅತ್ಯಂತ ಪವಿತ್ರ ಸ್ಥಾನವನ್ನು ಪಡೆಯುವ ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಬೇಕು ಎನ್ನುವ ಒತ್ತಾಯ ಈಗಾಗಲೇ ಇದೆ. ಆದರೆ ಗೋವನ್ನು ` ರಾಷ್ಟ್ರೀಯ ಸಂಪತ್ತು’ ಎಂದು ಘೋಷಿಸುವಂತೆ ಆಗ್ರಹಿಸಬೇಕಾಗಿದೆ. ತಾಯಿ ಸಮಾನಾದ ಗೋವಿನ ಮೇಲೆ ಕ್ರೌರ್ಯ ,  ಮಾನಸಿಕತೆ ಪ್ರದರ್ಶಿಸುವವರು ಮನುಷ್ಯರೇ ಅಲ್ಲ ಎಂದು ರಾಷ್ಟೀಯ ಸ್ವಯಂ ಸೇವಕ ಸಂಘದ ಪ್ರಾಂತ ಸಹ ಸೇವಾ ಪ್ರಮುಖ್ ನಾ. ಸೀತಾರಾಮ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ಗೋಮಾತೆಯ ಕೆಚ್ಚಲು ಕತ್ತರಿಸಿದ ವಿಕೃತ ಮನಸ್ಸುಗಳನ್ನು ಖಂಡಿಸಿ ಪುತ್ತೂರು ಜಿಲ್ಲಾ

ಗೋ ಸಂರಕ್ಷಣಾ ಸಮಿತಿ ವತಿಯಿಂದ ಬೃಹತ್ ಪ್ರತಿಭಟನಾ ಮೆರವಣಿಗೆ | ಹಿಂದೂ ಧರ್ಮದಲ್ಲಿ ಅತ್ಯಂತ ಪವಿತ್ರ ಸ್ಥಾನವನ್ನು ಪಡೆಯುವ ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಬೇಕು : ನಾ. ಸೀತಾರಾಮ್ Read More »

ಇಡ್ಕಿದು ಸೇವಾ ಸಹಕಾರಿ ಸಂಘದ ಆಡಳಿತ ಮಂಡಳಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರಿ ಭಾರತೀಯ ಎಲ್ಲಾ 12 ಅಭ್ಯರ್ಥಿಗಳಿಗೆ ಗೆಲುವು

ಪುತ್ತೂರು : ಇಡ್ಕಿದು ಸೇವಾ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ ಅಭ್ಯರ್ಥಿಗಳು ಎಲ್ಲಾ 12 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಆಡಳಿತ ಚುಕ್ಕಾಣಿ ಸಹಕಾರ ಭಾರತಿ ಪಾಲಾಗಿದೆ. ಭಾನುವಾರ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ 4 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದು, 8 ಸ್ಥಾನಗಳಿಗೆ ಚುನಾವಣೆ ನಡೆಯಿತು. ಗೆದ್ದ ಪ್ರಮುಖರು : ಸುಧಾಕರ ಶೆಟ್ಟಿ, ರಾಮ್‍ ಭಟ್‍ ನೀರಪಳಿಕೆ, ಚಂದ್ರಹಾಸ, ಹೃಷಿಕೇಶ್‍, ನವೀನ್‍ ಕೆ.ಪಿ., ಪದ್ಮಾವತಿ, ವಿದ್ಯಾ ವಿ., ಜಯಂತ

ಇಡ್ಕಿದು ಸೇವಾ ಸಹಕಾರಿ ಸಂಘದ ಆಡಳಿತ ಮಂಡಳಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರಿ ಭಾರತೀಯ ಎಲ್ಲಾ 12 ಅಭ್ಯರ್ಥಿಗಳಿಗೆ ಗೆಲುವು Read More »

error: Content is protected !!
Scroll to Top