ಸುದ್ದಿ

ನಾಪತ್ತೆಯಾಗಿದ್ದ ಯುವತಿ ಮದುವೆಯಾಗಿ ಪ್ರತ್ಯಕ್ಷ

ಸೋಷಿಯಲ್‌ಮೀಡಿಯಾದಲ್ಲಿ ಭಾರಿ ವೈರಲ್‌ ಆದ ಮದುವೆ ಸುದ್ದಿ ಬೆಳ್ತಂಗಡಿ: ಮೂಡುಬಿದಿರೆ ಪೊಲೀಸ್‌ ಠಾಣೆ ವ್ಯಾಪ್ತಿಯ ಪಟ್ರಮೆ ಎಂಬಲ್ಲಿಂದ ನಾಪತ್ತೆಯಾಗಿದ್ದ ಮುಸ್ಲಿಮ್‌ ಯುವತಿಯೊಬ್ಬಳು ಧರ್ಮಸ್ಥಳ ಸಮೀಪ ದೇವಸ್ಥಾನದಲ್ಲಿ ಹಿಂದು ಯುವಕನನ್ನು ಮದೆಯಾಗಿದ್ದು, ಈ ಮದುವೆ ಸುದ್ದಿ ಸೋಷಿಯಲ್‌ ಮೀಡಿಯಾದಲ್ಲಿ ಬಹಳ ವೈರಲ್‌ ಆಗಿದೆ. ಬೆಳ್ತಂಗಡಿ ತಾಲೂಕು ವ್ಯಾಪ್ತಿಯ ಪಟ್ರಮೆ ಗ್ರಾಮದ ಸುಹಾನ (19) ಕಂಪ್ಯೂಟರ್ ಕ್ಲಾಸ್‍ಗೆ ಹೋಗಿದ್ದವಳು ನಾಪತ್ತೆ ಆಗಿದ್ದಳು. ಈ ಬಗ್ಗೆ ಬಳಿಕ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು. ನಿನ್ನೆ ಈಕೆ ಹಿಂದೂ ಯುವಕ […]

ನಾಪತ್ತೆಯಾಗಿದ್ದ ಯುವತಿ ಮದುವೆಯಾಗಿ ಪ್ರತ್ಯಕ್ಷ Read More »

ಪರಮಾದ್ಭುತ ಧಾರ್ಮಿಕ ಕಾರ್ಯಕ್ರಮ ಮಹಾಕುಂಭಮೇಳ

144 ವರ್ಷಗಳ ಬಳಿಕ ನಡೆಯುತ್ತಿರುವ ಮಹಾ ಉತ್ಸವಕ್ಕೆ ನಡೆದ ತಯಾರಿಯೂ ಅದ್ಭುತ ಇಲ್ಲಿದೆ ಪ್ರಯಾಗ್‌ರಾಜ್‌ ಮಹಾಕುಂಭಮೇಳದ ಸಂಪೂರ್ಣ ಚಿತ್ರಣ ಲಖನೌ: ಪ್ರಯಾಗ್‌ರಾಜ್‌ನಲ್ಲಿ ನಡೆಯಲಿರುವ ಮಹಾಕುಂಭಮೇಳಕ್ಕೆ ಕ್ಷಣಗಣನೆ ಶುರುವಾಗಿದೆ. ಜ.13ರಂದು ಪ್ರಾರಂಭವಾಗಲಿರುವ ಕುಂಭಮೇಳಕ್ಕಾಗಿ ಪ್ರಯಾಗ್‌ರಾಜ್‌ನಲ್ಲಿ ವರ್ಷದಿಂದಲೇ ತಯಾರಿ ನಡೆಯುತ್ತಿದ್ದು, ಉತ್ತರ ಪ್ರದೆಶ ಸರಕಾರ ಮತ್ತು ಕೇಂದ್ರ ಸರಕಾರ ಎಲ್ಲ ವ್ಯವಸ್ಥೆಗಳನ್ನು ಮಾಡಿದೆ.ಇದು 144 ವರ್ಷಗಳ ನಂತರ ನಡೆಯುತ್ತಿರುವ ಮಹಾಕುಂಭಮೇಳ. ವಿಶ್ವಾದ್ಯಂತ ಕೋಟಿಗಟ್ಟಲೆ ಜನರು ಈ ಪರಮಾದ್ಭುತ ಧಾರ್ಮಿಕ ಕಾರ್ಯವನ್ನು ನೋಡಲು ಕಾತರರಾಗಿದ್ದಾರೆ. ಕುಂಭಮೇಳಕ್ಕೆ ಜಗತ್ತಿನ ಅತಿಹೆಚ್ಚು ಸಂಖ್ಯೆಯಲ್ಲಿ ಜನ

ಪರಮಾದ್ಭುತ ಧಾರ್ಮಿಕ ಕಾರ್ಯಕ್ರಮ ಮಹಾಕುಂಭಮೇಳ Read More »

ಬೈಕ್‌ನಿಂದ ಬಿದ್ದ ಅರ್ಚಕರಿಗೆ ಮಸೀದಿಯಲ್ಲಿ ಚಿಕಿತ್ಸೆ

ಪುತ್ತೂರು  : ಅರ್ಚಕರೊಬ್ಬರು ಬೈಕ್‌ನಿಂದ ರಸ್ತೆ ಬಿದ್ದು ಗಾಯಗೊಂಡ ಘಟನೆ ಪುತ್ತೂರು ತಾಲ್ಲೂಕಿನ ಒಳಮೊಗ್ರು ಗ್ರಾಮದ ಕುಂಬ್ರದಲ್ಲಿ ನಡೆದಿದೆ. ಗಾಯಗೊಂಡ ಅರ್ಚಕರೊರ್ವರ ನೆರವಿಗೆ ದಾವಿಸಿದ್ದು ಸಮೀಪದ ಮಸೀದಿಯಲ್ಲಿರುವವರೆನ್ನಲಾಗಿದೆ. ಅರ್ಚಕರನ್ನು ಮಸೀದಿಗೆ ಕರೆದುಕೊಂಡು ಹೋಗಿ ಪ್ರಾಥಮಿಕ ಚಿಕಿತ್ಸೆ ನೀಡಿ ಉಪಚರಿಸಿದ್ದಾರೆ. ನೆಟ್ಟಣಿಗೆ ಮುನ್ನೂರು ಗ್ರಾಮದ ಈಶ್ವರಮಂಗಲ ಸಮೀಪದ ಮುಂಡ್ಯ ಎಂಬಲ್ಲಿರುವ ಶಾಸ್ತಾರ ದೇವಸ್ಥಾನದಲ್ಲಿ ಅರ್ಚಕರಾಗಿರುವ ರಘುರಾಮ ಭಟ್ ಬುಧವಾರ ಬೈಕ್‌ನಲ್ಲಿ ಬರುವಾಗ, ಕುಂಬ್ರ ಬದ್ರಿಯಾ ಮಸೀದಿಯ ಎದುರು ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿದ್ದು ಗಾಯಗೊಂಡಿದ್ದರು. ಬೈಕ್‍ನಿಂದ ಬಿದ್ದಿದರಿಂದ ಕಾಲಿಗೆ

ಬೈಕ್‌ನಿಂದ ಬಿದ್ದ ಅರ್ಚಕರಿಗೆ ಮಸೀದಿಯಲ್ಲಿ ಚಿಕಿತ್ಸೆ Read More »

ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಕಿಟ್ ವಿತರಣೆ

ವಿಟ್ಲ : ಶ್ರೀ  ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ)  ವಿಟ್ಲ ಇವರ ವಾತ್ಸಲ್ಯ ಕಾರ್ಯಕ್ರಮದಡಿ ಪೆರ್ನೆ ವಲಯದ  ಕೆದಿಲ ನಿವಾಸಿ ವಾತ್ಸಲ್ಯ ಸದಸ್ಯೆ  ಕಮಲ ಅವರಿಗೆ  ಮಂಜೂರಾದ ವಾತ್ಸಲ್ಯ ಕಿಟ್ಟನ್ನು ವಿತರಿಸಲಾಗಿದೆ. ಮಾತೃ ಶ್ರೀ ಹೇಮಾವತಿ ಅಮ್ಮನವರ ಆಶಯದಂತೆ ನಡೆಯುವ  ವಾತ್ಸಲ್ಯ ಕಾರ್ಯಕ್ರಮದಡಿ ವಾತ್ಸಲ್ಯ ಕಿಟ್ ಅನ್ನು ಜ್ಞಾನವಿಕಾಸ ಸಮನ್ವಯಧಿಕಾರಿ ದೀಪಾ  ವಿತರಿಸಿದರು. ಈ ಸಂದರ್ಭದಲ್ಲಿ  ಕೆದಿಲ A ಒಕ್ಕೂಟದ  ಸೇವಾಪ್ರತಿನಿದಿ ಶಾರದಾ,  B ಒಕ್ಕೂಟದ ಸೇವಾಪ್ರತಿನಿದಿ ಜಯಂತಿ, ಪೆರ್ನೆ ಶೌರ್ಯ ವಿಪತ್ತು ನಿರ್ವಹಣಾ

ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಕಿಟ್ ವಿತರಣೆ Read More »

70 ಚದರ ಕಿಲೋ ಮೀಟರ್‌ ವ್ಯಾಪಿಸಿದ ಭೀಕರ ಕಾಡ್ಗಿಚ್ಚು : ಸಾವಿನ ಸಂಖ್ಯೆ 10ಕ್ಕೇರಿಕೆ

ಹಾಲಿವುಡ್‌ ತಾರೆಯರ, ಸೆಲೆಬ್ರಿಟಿಗಳ ಬಂಗಲೆಗಳ ಸಹಿತ 5000 ಕಟ್ಟಡಗಳು ಸುಟ್ಟು ಕರಕಲು ವಾಷಿಂಗ್ಟನ್‌ : ಅಮೆರಿಕದ ಲಾಸ್‌ ಏಂಜೆಲ್ಸ್‌ನಲ್ಲಿ ಕಾಣಿಸಿಕೊಂಡಿರುವ ಭೀಕರ ಕಾಡ್ಗಿಚ್ಚು ಸುಮಾರು 70 ಚದರ ಕಿಲೋಮೀಟರ್‌ ವ್ಯಾಪಿಸಿದ್ದು, ಸಾವಿರಾರು ಕಟ್ಟಡಗಳನ್ನು ಆಪೋಶನ ತೆಗೆದುಕೊಂಡಿದೆ ಹಾಗೂ ಮೃತರ ಸಂಖ್ಯೆ 10ಕ್ಕೇರಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 5000ಕ್ಕೂ ಅಧಿಕ ಕಟ್ಟಡಗಳು ಬೆಂಕಿಗಾಹುತಿಯಾಗಿದ್ದು, ಅನೇಕ ಹಾಲಿವುಡ್‌ ನಟಿ, ನಟಿಯರು ಹಾಗೂ ಸೆಲೆಬ್ರಿಟಿಗಳ ಮನೆಗಳು ಕೂಡ ಸುಟ್ಟು ಕರಕಲಾಗಿವೆ.ಗಾಳಿಯಿಂದಾಗಿ ಬೆಂಕಿ ಕೆನ್ನಾಲೆಗಳು ಧಗದಗಿಸುತ್ತಾ ವ್ಯಾಪಿಸುತ್ತಿದ್ದು, ಬಲವಾದ ಗಾಳಿ ಬೀಸುತ್ತಿರುವುದರಿಂದ ನಿಯಂತ್ರಣಕ್ಕೆ

70 ಚದರ ಕಿಲೋ ಮೀಟರ್‌ ವ್ಯಾಪಿಸಿದ ಭೀಕರ ಕಾಡ್ಗಿಚ್ಚು : ಸಾವಿನ ಸಂಖ್ಯೆ 10ಕ್ಕೇರಿಕೆ Read More »

ಮಂಗಳೂರಿನಲ್ಲಿ ಹೈಡ್ರೋವಿಡ್ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಮಂಗಳೂರು : ಮಂಗಳೂರು ನಗರ ಪೊಲೀಸರ ಸಿಸಿಬಿ ಘಟಕವು ಗೋವಾದಿಂದ ಮಂಗಳೂರು ಮತ್ತು ಕೇರಳಕ್ಕೆ ಹೈಡೋವಿಡ್ ಗಾಂಜಾ ಸಾಗಾಟ ಮಾಡುತ್ತಿದ್ದ ಓರ್ವ ವ್ಯಕ್ತಿಯನ್ನು ಬಂಧಿಸಿ, 73 ಲಕ್ಷ ರೂಪಾಯಿ ಮೌಲ್ಯದ ಮಾದಕ ವಸ್ತುವನ್ನು ವಶಪಡಿಸಿಕೊಂಡಿರುವ ಘಟನೆ ನಡೆದಿದೆ. ಬಂಧಿತ ಆರೋಪಿಯನ್ನು ಶಮೀರ್ ಪಿ.ಕೆ (42) ಎಂದು ಪತ್ತೆಹಚ್ಚಲಾಗಿದೆ. ಬಂಧಿತ  ಶಮೀರ್ ಪಿ.ಕೆಯನ್ನು ಮುಲ್ಕಿ ರಾಷ್ಟ್ರೀಯ ಹೆದ್ದಾರಿ ಬಳಿ ಹಿಡಿದು ಬಂದಿಸಲಾಗಿದೆ. ಆತನಿಂದ 738 ಗ್ರಾಂ ಹೈಡ್ರೋವಿಡ್ ಗಾಂಜಾ, ಕಾರು, ಮೊಬೈಲ್ ಫೋನ್ ಸೇರಿದಂತೆ ಒಟ್ಟು 80 ಲಕ್ಷ

ಮಂಗಳೂರಿನಲ್ಲಿ ಹೈಡ್ರೋವಿಡ್ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ Read More »

ಬೈಕ್ ಗೆ  ಬಸ್‌ ಡಿಕ್ಕಿ | ಬೈಕ್‍ ಸವಾರ ಗಂಭೀರ ಗಾಯ

ಮುಲ್ಕಿ: ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ಬಸ್ ನಿಲ್ದಾಣ ಜಂಕ್ಷನ್ ಬಳಿ ಬೈಕ್ ಗೆ ತಡೆರಹಿತ ಬಸ್ ಡಿಕ್ಕಿಯಾದ ಘಟನೆ ನಡೆದಿದೆ. ಡಿಕ್ಕಿಯಾದ ಪರಿಣಾಮ ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ಚಿಕಿತ್ಸೆಗೆ  ದಾಖಲಾಗಿದ್ದಾರೆ. ಗಾಯಗೊಂಡವರನ್ನು ಮುಲ್ಕಿ ಅಂಚೆ ಕಚೇರಿಯ ಅಂಚೆಪಾಲಕ ಕೊಲ್ಲೂರು ನಿವಾಸಿ ಪಾಂಡುರಂಗ ರಾವ್ ಎನ್ನಲಾಗಿದೆ. ಗಾಯಾಳು ಪಾಂಡುರಂಗ ರಾವ್ ತಮ್ಮ ಬೈಕ್ ನಲ್ಲಿ ರಾಷ್ಟ್ರೀಯ ಹೆದ್ದಾರಿ ಮುಲ್ಕಿ ಜಂಕ್ಷನ್ ಬಳಿ ಹೆದ್ದಾರಿ ಕ್ರಾಸ್ ಮಾಡುತ್ತಿದ್ದ ವೇಳೆ  ಉಡುಪಿ ಕಡೆಯಿಂದ ಸರ್ವಿಸ್ ರಸ್ತೆಯಲ್ಲಿ ಬಂದ ತಡೆರಹಿತ

ಬೈಕ್ ಗೆ  ಬಸ್‌ ಡಿಕ್ಕಿ | ಬೈಕ್‍ ಸವಾರ ಗಂಭೀರ ಗಾಯ Read More »

ಹೆಜ್ಜೇನು ಕಡಿತ : ಇಬ್ಬರಿಗೆ ಗಂಭೀರ ಗಾಯ

ನೆಲ್ಯಾಡಿ: ಹೆಜ್ಜೇನು ದಾಳಿ ನಡೆಸಿ ಇಬ್ಬರು ಗಾಯಗೊಂಡು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಿನ್ನೆ ಬೆಳಿಗ್ಗೆ ನೆಲ್ಯಾಡಿ ಗ್ರಾಮದ ಮಾದೇರಿ ಸಮೀಪದ ತುಂಬೆತ್ತಡ್ಕ ಎಂಬಲ್ಲಿ ನಡೆದಿದೆ. ಗಾಯಗೊಂಡವರು ಮಾದೇರಿ ತುಂಬೆತ್ತಡ್ಕ ನಿವಾಸಿ ರೂಪಾವತಿ(30) ಹಾಗೂ ತಿಮ್ಮಪ್ಪ ಕುಂಬಾರ(49) ಎನ್ನಲಾಗಿದೆ. ರೂಪಾವತಿ ಎಂಬವರಿಗೆ ಮನೆ ಸಮೀಪವೇ ಏಕಾಏಕಿ ಹೆಜ್ಜೇನುಗಳು ದಾಳಿ ಮಾಡಿವೆ. ಇದರಿಂದ ವಿಚಲಿತಗೊಂಡ ರೂಪಾವತಿ ಜೋರಾಗಿ ಕಿರುಚಿದ್ದಾರೆ.  ರೂಪಾವತಿಯವರ ಬೊಬ್ಬೆ ಕೇಳಿ ಪಕ್ಕದ ಮನೆಯ ತಿಮ್ಮಪ್ಪ ಕುಂಬಾರ ಎನ್ನುವವರು ರಕ್ಷಣೆಗಾಗಿ ಗೋಣಿ ಚೀಲ ಹಿಡಿದು ಬಂದಿದ್ದರು.

ಹೆಜ್ಜೇನು ಕಡಿತ : ಇಬ್ಬರಿಗೆ ಗಂಭೀರ ಗಾಯ Read More »

ಕಾಂಗ್ರೆಸ್‌ ಸಂವಿಧಾನ್‌ ಸಮಾವೇಶಕ್ಕೆ ಭೀಮ ಸಂಗಮದ ಮೂಲಕ ಬಿಜೆಪಿ ತಿರುಗೇಟು

ಜ.25ರವರೆಗೆ ರಾಜ್ಯಾದ್ಯಂತ ಬಿಜೆಪಿಯಿಂದ ವಿವಿಧ ಹಂತಗಳಲ್ಲಿ ಅಭಿಯಾನ ಬೆಂಗಳೂರು: ಕಾಂಗ್ರೆಸ್‌ನ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ್ ಸಮಾವೇಶಕ್ಕೆ ಪ್ರತಿಯಾಗಿ ಬಿಜೆಪಿ ಭೀಮ ಸಮಗಮ ಸಭಿಯಾನ ನಡೆಸಲಿದೆ. ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ನಿಧನದ ಕಾರಣ ಅರ್ಧಕ್ಕೆ ನಿಂತಿದ್ದ ಬೆಳಗಾವಿಯ ಕಾಂಗ್ರೆಸ್‌ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ್ ಸಮಾವೇಶ 21ರಂದು ನಡೆಸಲು ತೀರ್ಮಾನಿಸಲಾಗಿದೆ. ಇದಕ್ಕೆ ತಿರುಗೇಟು ನೀಡುವ ಸಲುವಾಗಿ ಬಿಜೆಪಿ ಭೀಮ ಸಂಗಮ ಅಭಿಯಾನ ಆರಂಭಿಸಲು ಚಿಂತನೆ ನಡೆಸಿದೆ.

ಕಾಂಗ್ರೆಸ್‌ ಸಂವಿಧಾನ್‌ ಸಮಾವೇಶಕ್ಕೆ ಭೀಮ ಸಂಗಮದ ಮೂಲಕ ಬಿಜೆಪಿ ತಿರುಗೇಟು Read More »

ಕಾಡಿನ ರಹಸ್ಯ ಸ್ಥಳದಲ್ಲಿದೆಯೇ ನಕ್ಸಲರ ಶಸ್ತ್ರಾಸ್ತ್ರ?

ನಕ್ಸಲರು ಬಳಸುತ್ತಿದ್ದ ಎಕೆ 47, ಮಷಿನ್‌ ಗನ್‌ ಅರಣ್ಯದೊಳಗೆ ಬಚ್ಚಿಟ್ಟಿರುವ ಶಂಕೆ ಬೆಂಗಳೂರು: ಮುಖ್ಯಮಂತ್ರಿ ಸಮ್ಮುಖದಲ್ಲಿ ಶರಣಾದ ನಕ್ಸಲರು ಆಧುನಿಕ ಶಸ್ತ್ರಾಸ್ತ್ರಗಳನ್ನು ಬಳಸುತ್ತಿದ್ದರು. ಆದರೆ ಇನ್ನೂ ಆ ಶಸ್ತ್ರಾಸ್ತ್ರಗಳನ್ನು ಒಪ್ಪಿಸಿಲ್ಲ. ಒಪ್ಪಿಸುವ ಪ್ರತಿ ಶಸ್ತ್ರಾಸ್ತ್ರಕ್ಕೆ ಪರಿಹಾರ ರೂಪದಲ್ಲಿ ಹಣ ಕೊಡುವುದಾಗಿ ಸರಕಾರ ಪ್ಯಾಕೇಜ್‌ನಲ್ಲಿ ಘೋಷಿಸಿದೆ. ಹೀಗಾಗಿ ನಕ್ಸಲರ ಶಸ್ತ್ರಾಸ್ತ್ರಗಳು ಎಲ್ಲಿವೆ ಎಂಬ ಕುತೂಹಲ ಇದೆ. ಆಧುನಿಕ ಶಸ್ತ್ರಾಸ್ತ್ರಗಳನ್ನು ನಕ್ಸಲರು ಕಾಡಿನ ರಹಸ್ಯ ಸ್ಥಳದಲ್ಲಿ ಅಡಗಿಸಿಟ್ಟಿರುವ ಶಂಕೆ ವ್ಯಕ್ತವಾಗಿದೆ. ಶರಣಾದ ಯಾವೊಬ್ಬ ನಕ್ಸಲ್‌ ಕೂಡ ಆಯುಧಗಳನ್ನು ಪೊಲೀಸರಿಗೆ ನೀಡಿಲ್ಲ.

ಕಾಡಿನ ರಹಸ್ಯ ಸ್ಥಳದಲ್ಲಿದೆಯೇ ನಕ್ಸಲರ ಶಸ್ತ್ರಾಸ್ತ್ರ? Read More »

error: Content is protected !!
Scroll to Top