ಸುದ್ದಿ

ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಮನೆ ಧ್ವಂಸ

ಕಡಬ : ವಿದ್ಯುತ್ ಶಾರ್ಟ್ ಸಕ್ಯೂಟ್‌ನಿಂದ ಮನೆ ಸಂಪೂರ್ಣವಾಗಿ ಸುಟ್ಟಿರುವ ಘಟನೆ ಕಡಬ ತಾಲೂಕು ಆಲಂಕಾರು ಗ್ರಾಮದ ನೆಕ್ಕಿಲಾಡಿಯಲ್ಲಿ ನಡೆದಿದೆ. ವಿನೋದಾ ಎಂಬವರ ಮನೆ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ. ಸುಮಾರು ರಾತ್ರಿ 8 ರ ವೇಳೆ ವಿದ್ಯುತ್ ಶಾರ್ಟ್ ಸಕ್ಯೂಟ್‌  ಸಂಭವಿಸಿದೆ. ಈ ವೇಳೆ  ಮನೆಯಿಂದ ಹೊಗೆ ಬರುತ್ತಿರುವುದನ್ನು ಗಮನಿಸಿದ ಸ್ಥಳೀಯರು ವಿನೋದ ಅವರ ಮನೆ ಕಡೆ ತೆರಳಿ ನೋಡಿದಾಗ  ಬೆಂಕಿ ಮನೆಯೊಳಗೆ ಆವರಿಸಿಕೊಂಡಿರುವುದು  ಬೆಳಕಿಗೆ ಬಂದಿದೆ. ತಕ್ಷಣ ಮನೆಯೊಡತಿಗೆ ವಿಚಾರ ತಿಳಿಸಿ ಮನೆ ಬಾಗಿಲು ಮುರಿದು […]

ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಮನೆ ಧ್ವಂಸ Read More »

ಸಾಲಭಾದೆಯಿಂದ ಯುವಕ ಆತ್ಮಹತ್ಯೆ

ಮೂಡಬಿದಿರೆ : ಸಾಲ ಭಾದೆಯಿಂದ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಪಡುಬಿದ್ರೆಯಲ್ಲಿ ಬುಧವಾರ ಸಂಜೆ ನಡೆದಿದೆ. ನಸ್ರುಲ್ಲಾ(29) ಆತ್ಮಹತ್ಯೆ ಮಾಡಿಕೊಂಡ ಯುವಕ ಎನ್ನಲಾಗಿದೆ. ವಿದೇಶದಲ್ಲಿ ಉದ್ಯೋಗದಲ್ಲಿದ್ದ ನಸ್ರುಲ್ಲಾ ಎಂಬುವವರು  ಮೂರು ತಿಂಗಳ ಹಿಂದೆ ಊರಿಗೆ ಮರಳಿದ್ದರು. ಈ ವೇಳೆ ಸಾಲದ ಚಿಂತೆಯಲ್ಲಿದ್ದರೆನ್ನಲಾಗಿದೆ. ಮನೆಯಲ್ಲಿದ್ದ ಸಮಯದಲ್ಲಿ ಸಾಲ ಕೊಟ್ಟ ಬ್ಯಾಂಕ್ ನವರು, ಸಾಲದವರು ಆತನ ಮನೆಗೆ ಬಂದು ಹೋಗುತ್ತಿದ್ದರೆನ್ನಲಾಗಿದ್ದು, ಇದರಿಂದ ಮಾನಸಿಕವಾಗಿ ನೊಂದಿದ್ದರು. ಬುಧವಾರ ಬೆಡ್ ರೂಂನಲ್ಲಿ ಫ್ಯಾನಿಗೆ ಚೂಡಿದಾರದ ವೇಲಿನಿಂದ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ

ಸಾಲಭಾದೆಯಿಂದ ಯುವಕ ಆತ್ಮಹತ್ಯೆ Read More »

ಲಂಚ ಸ್ವೀಕರಿಸಿದ ನಿಮಿತ್ತ ಮುಲ್ಕಿ ಕಂದಾಯ ನಿರೀಕ್ಷಕನ ಜಾಮೀನು ಅರ್ಜಿ ರದ್ದು

ಮಂಗಳೂರು : ಲಂಚ ಸ್ವೀಕರಿಸುತ್ತಿದ್ದ ವೇಳೆ  ಸಿಕ್ಕಿಬಿದ್ದು ನ್ಯಾಯಾಂಗ ಬಂಧನದಲ್ಲಿರುವ ಮೂಲ್ಕಿ ಕಂದಾಯ ನಿರೀಕ್ಷಕ ಜಿ.ಎಸ್‌.ದಿನೇಶ್ ಅವರ ಜಾಮೀನು ಅರ್ಜಿಯನ್ನು ಮಂಗಳೂರು ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ವಿಶೇಷ) ನ್ಯಾಯಾಲಯ ವಜಾಗೊಳಿಸಿದೆ. ನ್ಯಾಯಾಧೀಶೆ ಸಂಧ್ಯಾ ಎಸ್ ಅರ್ಜಿಯನ್ನು ವಜಾಗೊಳಿಸಿ, ನ್ಯಾಯಾಂಗ ಬಂಧನವನ್ನು ವಿಸ್ತರಿಸಿದ್ದಾರೆ. 2024ರ ಡಿಸೆಂಬರ್ 19ರಂದು 4 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಿನೇಶ್ ಅವರನ್ನು ಬಂಧಿಸಿದ್ದಲ್ಲದೆ, ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಲೋಕಾಯುಕ್ತ ಸಂಸ್ಥೆಯ ಪರವಾಗಿ ವಿಶೇಷ

ಲಂಚ ಸ್ವೀಕರಿಸಿದ ನಿಮಿತ್ತ ಮುಲ್ಕಿ ಕಂದಾಯ ನಿರೀಕ್ಷಕನ ಜಾಮೀನು ಅರ್ಜಿ ರದ್ದು Read More »

ಅಮೆರಿಕ : 15 ಸಾವಿರ ಎಕರೆ ಪ್ರದೇಶದಲ್ಲಿ ಕಾಡ್ಗಿಚ್ಚು – 5 ಮಂದಿ ಸಜೀವ ದಹನ

ಸಾವಿರಕ್ಕೂ ಅಧಿಕ ಕಟ್ಟಡ ಬೆಂಕಿಗಾಹುತಿ; 1 ಲಕ್ಷ ಮಂದಿ ಸ್ಥಳಾಂತರ ವಾಷಿಂಗ್ಟನ್‌: ಅಮೆರಿಕದ ದಕ್ಷಿಣ ಕ್ಯಾಲಿಫೋರ್ನಿಯಾದ ನಗರ ಲಾಸ್‌ ಏಂಜಲೀಸ್‌ನಲ್ಲಿ ಭೀಕರ ಕಾಡ್ಗಿಚ್ಚು ಹೊತ್ತಿಕೊಂಡಿದ್ದು, ಬೆಂಕಿ ನಿಯಂತ್ರಿಸಲು ಸರಕಾರ ಹರಸಾಹಸ ಪಡುತ್ತಿದೆ. ಇಷ್ಟರತನಕ ಕನಿಷ್ಠ 5 ಮಂದಿ ಸಜೀವ ದಹನವಾಗಿದ್ದಾರೆ. ಅಪಾರ ಪ್ರಮಾಣದ ಅರಣ್ಯ ಮತ್ತು ಸೊತ್ತು ನಾಶವಾಗಿದೆ. 15,832 ಎಕರೆ ಪ್ರದೇಶಕ್ಕೆ ಬೆಂಕಿ ವ್ಯಾಪಿಸಿಹೊತ್ತಿ ಉರಿಯುತ್ತಿದೆ. 1,000 ಕಟ್ಟಡಗಳು ಬೆಂಕಿಗೆ ಆಹುತಿಯಾಗಿವೆ. ಬೆಂಕಿ ನಿಯಂತ್ರಣಕ್ಕೆ ಬಾರದ ಹಿನ್ನೆಲೆ ಸುಮಾರು 1 ಲಕ್ಷ ಮಂದಿಯನ್ನು ಸ್ಥಳಾಂತರಿಸಲಾಗಿದೆ. ಇನ್ನೂ

ಅಮೆರಿಕ : 15 ಸಾವಿರ ಎಕರೆ ಪ್ರದೇಶದಲ್ಲಿ ಕಾಡ್ಗಿಚ್ಚು – 5 ಮಂದಿ ಸಜೀವ ದಹನ Read More »

ಕಡಬ :  ಶ್ರೀ ಉಮಾಮಹೇಶ್ವರ ದೇವಸ್ಥಾನದ ಪ್ರತಿಷ್ಟಾ ವಾರ್ಷಿಕೋತ್ಸವ ಸಂಭ್ರಮ

ಕಡಬ : ಕಡಬ ತಾಲ್ಲೂಕಿನ ನೂಜಿಬಾಳ್ತಿಲ ಗ್ರಾಮದ ಒರುoಬಾಲು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಟಾ ವಾರ್ಷಿಕೋತ್ಸವ ಜ.10ರಂದು ನಡೆಯಲಿದೆ. ಕೆಮ್ಮಿoಜೆ ನಾಗೇಶ್ ತಂತ್ರಿ ಅವರ ನೇತೃತ್ವದಲ್ಲಿ ಒರುಬಾoಲು ಶ್ರೀ ಉಮಾಮಹೇಶ್ವರ ದೇವರ ಪ್ರತಿಷ್ಠಾ ವಾರ್ಷಿಕೋತ್ಸವದ ಅಂಗವಾಗಿ ಬೆಳ್ಳಿಗೆ 7.30ರಿಂದ ದೇವತಾ ಪ್ರಾರ್ಥನೆ, ಆಚಾರ್ಯವರಣ, ಗಣಪತಿ ಹೋಮ, ಪಂಚವಿoಶತಿ  ನಡೆಯಲಿದೆ. ನಂತರ ಸಾಮೂಹಿಕ ಸತ್ಯನಾರಾಯಣ ಪೂಜೆ ಜರುಗಲಿದೆ. ಬಳಿಕ ಬೆಳಿಗ್ಗೆ 11.00 ಗಂಟೆಗೆ ಶ್ರೀ ದೇವರಿಗೆ ಕಳಶಾಭಿಷೇಕ, ನಾಗ ದೇವರಿಗೆ ತಂಬಿಲ ಸೇವೆ, ಪರಿವಾರ ದೈವಗಳಿಗೆ ತಂಬಿಲ ಸೇವೆ

ಕಡಬ :  ಶ್ರೀ ಉಮಾಮಹೇಶ್ವರ ದೇವಸ್ಥಾನದ ಪ್ರತಿಷ್ಟಾ ವಾರ್ಷಿಕೋತ್ಸವ ಸಂಭ್ರಮ Read More »

ನೋಡು ನೋಡುತ್ತಿದ್ದಂತೆ ಉದುರಿ ಹೋಗುತ್ತಿದೆ ಕೂದಲು : ವಿಚಿತ್ರ ಸಮಸ್ಯೆಯಿಂದ ಕಂಗಾಲಾದ ಜನ

ಮಹಾರಾಷ್ಟ್ರದ ಹಳ್ಳಿಗಳಲ್ಲಿ ಕಾಣಿಸಿಕೊಂಡ ವಿಚಿತ್ರ ಸಮಸ್ಯೆ ಮುಂಬಯಿ : ಮಹಾರಾಷ್ಟ್ರದ ಬುಲ್ಢಾನ ಜಿಲ್ಲೆಯ ಮೂರು ಹಳ್ಳಿಗಳಲ್ಲಿ ಕಳೆದ ಸುಮಾರು ಎರಡು ವಾರದಿಂದ ಜನರು ವಿಚಿತ್ರವಾದ ಸಮಸ್ಯೆಯ ಸುಳಿಯಲ್ಲಿ ಸಿಲುಕಿದ್ದಾರೆ. ಮಕ್ಕಳು, ವಯಸ್ಕರು, ಪುರುಷರು, ಮಹಿಳೆಯರು, ವೃದ್ಧರೆನ್ನದೆ ಈ ಹಳ್ಳಿಗಳಲ್ಲಿ ಜನರು ಹಠಾತ್‌ ಕೂದಲು ಉದುರುವ ಸಮಸ್ಯೆ ಎದುರಿಸುತ್ತಿದ್ದಾರೆ. ಸುಮಾರು 50 ಜನ ಈಗಾಗಲೇ ಕೂದಲು ಉದುರಿ ಹೋಗಿ ಬೊಕ್ಕ ತಲೆಯವರಾಗಿದ್ದಾರೆ. ವಿಶೇಷ ಎಂದರೆ ಕೆಲವು ಮಕ್ಕಳ ತಲೆಕೂದಲು ಕೂಡ ಉದುರಿ ಹೋಗಿದೆ. ಕೆಲವು ಯುವಕರ ಗಡ್ಡ ಉದುರುತ್ತಿದೆ.

ನೋಡು ನೋಡುತ್ತಿದ್ದಂತೆ ಉದುರಿ ಹೋಗುತ್ತಿದೆ ಕೂದಲು : ವಿಚಿತ್ರ ಸಮಸ್ಯೆಯಿಂದ ಕಂಗಾಲಾದ ಜನ Read More »

ತಾಯಿಯೇ ಐದು ವರ್ಷದ ಮಗುವಿಗೆ ಬಿಸಿ ಪಾತ್ರೆಯಿಂದ ಸುಟ್ಟ ಪ್ರಕರಣ| 10 ಸಾವಿರ ರೂ. ದಂಡ ವಿಧಿಸಿದ ನ್ಯಾಯಲಾಯ

ಸುಳ್ಯ: ತಾಯಿಯೊಬ್ಬಳು ತನ್ನ  ಐದು ವರ್ಷದ ಮಗುವಿಗೆ ಬಿಸಿ ಪಾತ್ರೆಯಿಂದ ಸುಟ್ಟು ಗಾಯಗೊಳಿಸಿದ ಘಟನೆ ನಾವೂರಿನಲ್ಲಿ ನಡೆದಿದೆ. ಪ್ರಕರಣಕ್ಕೆ ಹಿನ್ನಲೆ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿ, ಆರೋಪ ಸಾಬೀತಾಗಿದ್ದು, ಆರೋಪಿಗೆ ಶಿಕ್ಷೆ ವಿಧಿಸಲಾಗಿದೆ. ಆರೋಪಿ ತಾಯಿ ಕಾವ್ಯಶ್ರೀ ಎಂದು ಗುರುತಿಸಲಾಗಿದೆ. ಸುಳ್ಯ ಗಾಂಧಿನಗರ ನಾವೂರು ಎಂಬಲ್ಲಿ ತಾಯಿಯೋರ್ವಳು ಬಿಸಿ ಹಾಲಿನ ಪಾತ್ರೆಯಿಂದ ತನ್ನ ಐದು ವರ್ಷ ಪ್ರಾಯದ ಪುತ್ರಿಯ ದೇಹದ ವಿವಿಧ ಕಡೆ ಸುಟ್ಟಿರುವಂತದ್ದು ಆ.16  2022ರಂದು ನಡೆದಿದೆ.  ಈ ಕುರಿತು ತಾಯಿ ಕಾವ್ಯಶ್ರೀ ವಿರುದ್ಧ ಮಹಿಳಾ ಮತ್ತು

ತಾಯಿಯೇ ಐದು ವರ್ಷದ ಮಗುವಿಗೆ ಬಿಸಿ ಪಾತ್ರೆಯಿಂದ ಸುಟ್ಟ ಪ್ರಕರಣ| 10 ಸಾವಿರ ರೂ. ದಂಡ ವಿಧಿಸಿದ ನ್ಯಾಯಲಾಯ Read More »

ಮೂರನೇ ದಿನಕ್ಕೆ ಕಾಲಿರಿಸಿದ ಆಶಾ ಕಾರ್ಯಕರ್ತೆಯರ ಮುಷ್ಕರ

ಆರೋಗ್ಯ ಸಚಿವರ ಸಂಧಾನ ವಿಫಲ; ಕೊರೆವ ಚಳಿಯಲ್ಲೂ ಅಹೋರಾತ್ರಿ ಧರಣಿ ಬೆಂಗಳೂರು: ಗೌರವ ಧನ ಏರಿಕೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಬೆಂಗಳೂರಿನಲ್ಲಿ ನಡೆಸುತ್ತಿರುವ ಮುಷ್ಕರ ಮೂರನೇ ದಿನಕ್ಕೆ ಕಾಲಿರಿಸಿದ್ದು, ನಗರದ ಕೊರೆವ ಚಳಿಯನ್ನು ಲೆಕ್ಕಿಸದೆ ಆಶಾ ಕಾರ್ಯಕರ್ತೆಯರು ಮಕ್ಕಳೊಂದಿಗೆ ಧರಣಿ ಕುಳಿತಿದ್ದಾರೆ. ಗೌರವ ಧನ ಏರಿಕೆ ಸಹಿತ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಫ್ರೀಡಂ ಪಾರ್ಕ್‌ನಲ್ಲಿ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ. ಬುಧವಾರ ರಾತ್ರಿ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ್ದ ಸಚಿವ ದಿನೇಶ್ ಗುಂಡೂರಾವ್ ಮಾಸಿಕ

ಮೂರನೇ ದಿನಕ್ಕೆ ಕಾಲಿರಿಸಿದ ಆಶಾ ಕಾರ್ಯಕರ್ತೆಯರ ಮುಷ್ಕರ Read More »

ಮದ್ಯಪ್ರಿಯರಿಗೆ ಮತ್ತೆ ಬರೆ : ಬಿಯರ್‌ ಬೆಲೆ ಭಾರಿ ಹೆಚ್ಚಳ

ಬಾಟಲಿಗೆ 20-50 ರೂ. ತನಕ ಏರಿಕೆ; ಜ.20ರಿಂದ ಜಾರಿ ಬೆಂಗಳೂರು: ಮದ್ಯಪ್ರಿಯರಿಗೆ ಸರಕಾರ ಮತ್ತೊಮ್ಮೆ ಬರೆ ಎಳೆದಿದೆ. ಬಿಯರ್‌ ಬೆಲೆಯನ್ನು ಏರಿಸಲು ತೀರ್ಮಾನಿಸಿದ್ದು, ಬಜೆಟ್‌ ಮಂಡನೆಗೂ ಮುಂಚಿತವಾಗಿ ಈ ಏರಿಕೆ ಜಾರಿಯಾಗಲಿದೆ. ಪ್ರಸಕ್ತ ಆರ್ಥಿಕ ವರ್ಷದ ಮೊದಲ ಒಂಬತ್ತು ತಿಂಗಳಲ್ಲಿ ಅಬಕಾರಿಯಿಂದ ನಿರೀಕ್ಷಿತ ಆದಾಯ ಬಾರದ ಹಿನ್ನೆಲೆಯಲ್ಲಿ ಸರಕಾರ ಬಜೆಟ್‌ಗೆ ಮುನ್ನವೇ ಬಿಯರ್‌ ದರ ಏರಿಕೆ ಮಾಡಿದೆ. ಜ.20ರಿಂದಲೇ ಪರಿಷ್ಕೃತ ಬೆಲೆ ಜಾರಿಗೆ ಬರಲಿದೆ.ಕಾಂಗ್ರೆಸ್‌ ಸರಕಾರ ಬಂದ ಮೇಲೆ ಗ್ಯಾರಂಟಿ ಕೊಡುಗೆಗಳಿಗೆ ಹಣ ಹೊಂದಿಸುವ ಸಲುವಾಗಿ ಪದೇಪದೆ

ಮದ್ಯಪ್ರಿಯರಿಗೆ ಮತ್ತೆ ಬರೆ : ಬಿಯರ್‌ ಬೆಲೆ ಭಾರಿ ಹೆಚ್ಚಳ Read More »

ನಟಿಗೆ ಕಿರುಕುಳ : ಖ್ಯಾತ ಉದ್ಯಮಿ ಬಂಧನ

ಸೋಷಿಯಲ್‌ ಮೀಡಿಯಾದಲ್ಲಿ ಅಸಭ್ಯ ಕಮೆಂಟ್‌ಗಳನ್ನು ಹಾಕಿ ವರ್ಷದಿಂದ ಕಿರುಕುಳ ತಿರುವನಂತಪುರಂ: ಮಲಯಾಳಂ ನಟಿ ಹನಿರೋಸ್‌ಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಕೇರಳದ ಖ್ಯಾತ ಉದ್ಯಮಿ ಬಾಬಿ ಚೆಮ್ಮನೂರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ನಟಿ ಹನಿ ರೋಸ್ ಅವರ ದೂರಿನ ಮೇರೆಗೆ ಮಂಗಳವಾರ ದಾಖಲಿಸಿದ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿ ಬೋಬಿ ಚೆಮ್ಮನೂರ್ ಅಲಿಯಾಸ್ ‘ಬೋಚೆ’ ಅವರನ್ನು ಕೊಚ್ಚಿ ನಗರ ಪೊಲೀಸರು ಬಂಧಿಸಿದ್ದಾರೆ. ಬುಧವಾರ ವಯನಾಡಿನಿಂದ ಚೆಮ್ಮನೂರ್‌ ಅವರನ್ನು ಬಂಧಿಸಿ ಕೊಚ್ಚಿಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಸೋಷಿಯಲ್‌ ಮೀಡಿಯಾದಲ್ಲಿ

ನಟಿಗೆ ಕಿರುಕುಳ : ಖ್ಯಾತ ಉದ್ಯಮಿ ಬಂಧನ Read More »

error: Content is protected !!
Scroll to Top