ಸುದ್ದಿ

ಬೆಳಗಾವಿ ವಿವಿ ಎಂಜಿನಿಯರಿಂಗ್‍ ಕಾಲೇಜುಗಳ ರಾಜ್ಯಮಟ್ಟದ ಅಥ್ಲೆಟಿಕ್ಸ್ ಕೂಟ | ಪುತ್ತೂರಿನ ಅನಘಾ 4×400 ಹರ್ಡಲ್ಸ್ ನಲ್ಲಿ ಪ್ರಥಮ

ಪುತ್ತೂರು :  ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ವ್ಯಾಪ್ತಿಯ ಎಂಜಿನಿಯರಿಂಗ್ ಕಾಲೇಜುಗಳ ರಾಜ್ಯಮಟ್ಟದ ಅಥ್ಲೆಟಿಕ್ಸ್ ಕೂಟದ ಮಹಿಳಾ ವಿಭಾಗದ 4×400 ಮೀ. ಹರ್ಡಲ್ಸ್ ನಲ್ಲಿ ಪುತ್ತೂರಿನ ಕೆ.ಎ.ಅನಘಾ ಪ್ರಥಮ ಸ್ಥಾನ ಪಡೆದಿದ್ದಾರೆ. ಅನಘಾ ಪುತ್ತೂರು ನಗರ ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅನಿಲ್ ತೆಂಕಿಲ ಹಾಗೂ ಕವಿತ ಅನಿಲ್ ದಂಪತಿ ಪುತ್ರಿ. ಪ್ರಸ್ತುತ ಮಂಗಳೂರಿನ ಸೆಂಟ್‍ ಜೋಸೆಫ್‍ ಎಂಜಿನಿಯರಿಂಗ್‍ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದಾರೆ.

ಬೆಳಗಾವಿ ವಿವಿ ಎಂಜಿನಿಯರಿಂಗ್‍ ಕಾಲೇಜುಗಳ ರಾಜ್ಯಮಟ್ಟದ ಅಥ್ಲೆಟಿಕ್ಸ್ ಕೂಟ | ಪುತ್ತೂರಿನ ಅನಘಾ 4×400 ಹರ್ಡಲ್ಸ್ ನಲ್ಲಿ ಪ್ರಥಮ Read More »

ವಿಮಾನದಲ್ಲೇ ಪ್ರಯಾಣಿಕ ಸಾವು

ಲ್ಯಾಂಡ್‌ ಆದ ಬಳಿಕವಷ್ಟೆ ಸಿಬ್ಬಂದಿಗೆ ತಿಳಿಯಿತು ಲಖನೌ: ದೆಹಲಿಯಿಂದ ಲಕ್ನೋಗೆ ಬಂದಿಳಿದ ಏರ್​ ಇಂಡಿಯಾ ವಿಮಾನದಲ್ಲಿ ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಇಂದು ಸಂಭವಿಸಿದೆ. ಆದರೆ ಪ್ರಯಾಣಿಕ ಮೃತಪಟ್ಟ ವಿಚಾರ ವಿಮಾನದ ಸಿಬ್ಬಂದಿಗೆ ತಿಳಿದದ್ದು ವಿಮಾನ ಲ್ಯಾಂಡ್‌ ಆದ ಬಳಿಕ. ಮೃತ ವ್ಯಕ್ತಿಯನ್ನು ಆಸಿಫುಲ್ಲಾ ಅನ್ಸಾರಿ ಎಂದು ಗುರುತಿಸಲಾಗಿದೆ. ಬೆಳಗ್ಗೆ 8.10ಕ್ಕೆ ವಿಮಾನ ಲಖನೌ ಚೌಧರಿ ಚರಣ್ ಸಿಂಗ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದಿತ್ತು, ಸಿಬ್ಬಂದಿ ಪ್ರಯಾಣಿಕನನ್ನು ಎಬ್ಬಿಸಲು ಎಷ್ಟೇ ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ. ಬಳಿಕ ವಿಮಾನದಲ್ಲಿದ್ದ ವೈದ್ಯರು ಪ್ರಯಾಣಿಕನನ್ನು

ವಿಮಾನದಲ್ಲೇ ಪ್ರಯಾಣಿಕ ಸಾವು Read More »

ರಾಷ್ಟ್ರೀಯ ಮಟ್ಟದ ಮ್ಯಾನೇಜ್ಮೆಂಟ್ ಅಂಡ್ ಕಲ್ಚರ್ ಫೆಸ್ಟಿವಲ್ ನಲ್ಲಿ ಕೆ.ಎಸ್.ಎಸ್ ಕಾಲೇಜಿಗೆ ಬಹುಮಾನ

ಶ್ರೀದೇವಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮಂಗಳೂರು ಅವರು ಆಯೋಜಿಸಿರುವ ರಾಷ್ಟ್ರೀಯ ಮಟ್ಟದ ಮ್ಯಾನೇಜ್ಮೆಂಟ್ ಹಾಗೂ ಕಲ್ಚರಲ್ ಫೆಸ್ಟ್ ಕಾರ್ಯಕ್ರಮ ನಡೆಯಿತು. ಇದರಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಭಾಗವಹಿಸಿ ಬ್ರಾಂಡ್ ರಂಗೋಲಿ ಸ್ಪರ್ಧೆಯಲ್ಲಿ  ಸಿಂಚನ ಪಿ ಹಾಗೂ ಭಾರತಿ ಎಂ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜ್ (ಸ್ವಾಯತ್ತ) ಉಜಿರೆ, ಆಯೋಜಿಸಿದಂತಹ ರಾಷ್ಟ್ರೀಯ ಮಟ್ಟದ ಅಂತರ್ ಕಾಲೇಜು ಕಾಮರ್ಸ್ ಹಾಗೂ ಮ್ಯಾನೇಜ್ಮೆಂಟ್ ಫೆಸ್ಟ್ ನಲ್ಲಿ  ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಭಾಗವಹಿಸಿ

ರಾಷ್ಟ್ರೀಯ ಮಟ್ಟದ ಮ್ಯಾನೇಜ್ಮೆಂಟ್ ಅಂಡ್ ಕಲ್ಚರ್ ಫೆಸ್ಟಿವಲ್ ನಲ್ಲಿ ಕೆ.ಎಸ್.ಎಸ್ ಕಾಲೇಜಿಗೆ ಬಹುಮಾನ Read More »

ಶ್ರೀ ಕ್ಷೇತ್ರ ಧರ್ಮಸ್ಥಳ  ಗ್ರಾಮಾಭಿವೃದ್ಧಿ ಯೋಜನೆ  ಕೇಪು ವಲಯದ  ಮಾಣಿಲದಲ್ಲಿ  ಟೈಲರಿಂಗ್  ತರಬೇತಿ ಸಮಾರೋಪ ಸಮಾರಂಭ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ವಿಟ್ಲ ತಾಲೂಕಿನ ಕೇಪು ವಲಯದ ಮಾಣಿಲ  ವ್ಯವಸಾಯ ಸೇವಾ ಸಹಕಾರ ಭವನದಲ್ಲಿ  ಕಳೆದ 3  ತಿಂಗಳಿನಿಂದ ಹೊಲಿಗೆ ತರಬೇತಿಯನ್ನು ಆರಂಭಿಸಿದ್ದು  ಈ ತರಬೇತಿಯಲ್ಲಿ 20 ಮಂದಿ ಸದಸ್ಯರು ಪ್ರಯೋಜನವನ್ನು ಪಡೆದಿದ್ದು, ಬೆರಿಪದವು   ಹೊಲಿಗೆ ಕೇಂದ್ರದ ಶಿಕ್ಷಕರಾದ ಸರೋಜಿನಿ ಇವರು ತರಬೇತಿಯನ್ನು ನೀಡಿರುತ್ತಾರೆ. ಈ ದಿನ ಹೊಲಿಗೆ ತರಬೇತಿಯ ಸಮಾರೋಪ ಕಾರ್ಯಕ್ರಮವು ಮಾಣಿಲ  ಒಕ್ಕೂಟದ ಅಧ್ಯಕ್ಷರಾದ ಕೃಷ್ಣ ಮೂಲ್ಯ  ಇವರ ಅಧ್ಯಕ್ಷತೆಯಲ್ಲಿ ನೆರವೇರಿತು. ಈ ಕಾರ್ಯಕ್ರಮದ ಉದ್ಘಾಟನೆಯನ್ನು 

ಶ್ರೀ ಕ್ಷೇತ್ರ ಧರ್ಮಸ್ಥಳ  ಗ್ರಾಮಾಭಿವೃದ್ಧಿ ಯೋಜನೆ  ಕೇಪು ವಲಯದ  ಮಾಣಿಲದಲ್ಲಿ  ಟೈಲರಿಂಗ್  ತರಬೇತಿ ಸಮಾರೋಪ ಸಮಾರಂಭ Read More »

ಇನ್ನು ಸಿಎಂ, ಸಚಿವರು, ಶಾಸಕರಿಗೆ ದುಪ್ಪಟ್ಟು ಸಂಬಳ

ಸದ್ದಿಲ್ಲದೆ ವೇತನ ಏರಿಸಿಕೊಂಡ ಸರಕಾರ ಬೆಂಗಳೂರು : ಜನರು ಬೆಲೆ ಏರಿಕೆಯಿಂದ ನಿತ್ಯ ಖರ್ಚುವೆಚ್ಚಗಳನ್ನು ಸರಿದೂಗಿಸಲು ಒದ್ದಾಡುತ್ತಿರುವಾಗಲೇ ಸರಕಾರ ಮಾತ್ರ ಮುಖ್ಯಮಂತ್ರಿಯೂ ಸೇರಿದಂತೆ ಎಲ್ಲ ಸಚಿವರ ಮತ್ತು ಶಾಸಕರ ವೇತವನ್ನು ಸದ್ದಿಲ್ಲದೆ ಹೆಚ್ಚಿಸಿಕೊಂಡಿದೆ. ಸಚಿವರು ಮತ್ತು ಶಾಸಕರ ವೇತನವನ್ನು ಶೇ.100ರಷ್ಟು ಹೆಚ್ಚಿಸುವ ಪ್ರಸ್ತಾವಕ್ಕೆ ರಾಜ್ಯಪಾಲರಿಂದ ಅನುತಿಯೂ ದೊರೆತಿದೆ. ಕಲಾಪ ವ್ಯವಹಾರಗಳ ಸಲಹಾ ಸಮಿತಿಯ ನಿರ್ಣಯದಂತೆ ‘ಕರ್ನಾಟಕ ಸಚಿವರ ವೇತನ ಮತ್ತು ಭತ್ಯೆ (ತಿದ್ದುಪಡಿ) ಮಸೂದೆ 2025’ ಮತ್ತು ‘ಕರ್ನಾಟಕ ಶಾಸಕಾಂಗ ಸದಸ್ಯರ ವೇತನ, ಪಿಂಚಣಿ ಮತ್ತು ಭತ್ಯೆ

ಇನ್ನು ಸಿಎಂ, ಸಚಿವರು, ಶಾಸಕರಿಗೆ ದುಪ್ಪಟ್ಟು ಸಂಬಳ Read More »

ಐಪಿಎಲ್‌ ಕ್ರಿಕೆಟ್‌ ಹಬ್ಬಕ್ಕೆ ಕ್ಷಣಗಣನೆ : ಈ ಸಲ ಹಲವು ನಿಯಮ ಬದಲಾವಣೆ

ನಾಳೆಯಿಂದ ಶುರುವಾಗಲಿದೆ ಎರಡು ತಿಂಗಳ ಕ್ರಿಕೆಟ್‌ ಸಂಭ್ರಮ ಮುಂಬಯಿ: ಚಾಂಪಿಯನ್‌ ಟ್ರೋಫಿ ಮುಗಿದ ಬೆನ್ನಿಗೆ ಇಂಡಿಯನ್ ಪ್ರೀಮಿಯರ್ ಲೀಗ್-2025 (ಐಪಿಎಲ್‌) ಕ್ರಿಕೆಟ್ ಟೂರ್ನಿಗೆ ಕ್ಷಣಗಣನೆ ಪ್ರಾರಂಭವಾಗಿದೆ. 10 ತಂಡಗಳು ಎರಡು ತಿಂಗಳ ಕ್ರಿಕೆಟ್‌ ಹಬ್ಬಕ್ಕೆ ತಯಾರಾಗಿರುವಂತೆಯೇ ಬಿಸಿಸಿಐ ಈ ಸಲ ಐಪಿಎಲ್‌ ನಿಯಮಾವಳಿಗಳಲ್ಲಿ ಕೆಲವು ಬದಲಾವಣೆಗಳನ್ನು ಮಾಡಿದೆ.ಮಾರ್ಚ್ 22ರಿಂದ ಇಂಡಿಯನ್ ಪ್ರೀಮಿಯರ್ ಲೀಗ್ ಚುಟುಕು ಕ್ರಿಕೆಟ್ ಟೂರ್ನಿ ಶುರುವಾಗುತ್ತದೆ. ಐಪಿಎಲ್ 18ನೇ ಋತುವಿನಲ್ಲಿ ಮಹತ್ವದ ನಿರ್ಧಾರ ತೆಗೆದುಕೊಳ್ಳಲು ಬಿಸಿಸಿಐ ಮುಂದಾಗಿದ್ದು, ಕೊರೊನಾ ಸಂದರ್ಭದಲ್ಲಿ ನಿಷೇಧಿಸಲಾಗಿದ್ದ ಹಳೆ ನಿಯಮ

ಐಪಿಎಲ್‌ ಕ್ರಿಕೆಟ್‌ ಹಬ್ಬಕ್ಕೆ ಕ್ಷಣಗಣನೆ : ಈ ಸಲ ಹಲವು ನಿಯಮ ಬದಲಾವಣೆ Read More »

ಗೃಹ ನಿರ್ಮಾಣ ಸಹಕಾರ ಸಂಘದ ಅಧ್ಯಕ್ಷರಾಗಿ ಪಾಂಡುರಂಗ ಹೆಗ್ಡೆ ಮತ್ತು ಉಪಾಧ್ಯಕ್ಷರಾಗಿ ರಾಮಮೋಹನ್ ರೈ ಆಯ್ಕೆ

ಪುತ್ತೂರು: ಬೊಳುವಾರಿನಲ್ಲಿ ಕಾರ್ಯಾಚರಿಸುತ್ತಿರುವ ದ.ಕ.ಜಿಲ್ಲಾ ಗೃಹ ನಿರ್ಮಾಣ ಸಹಕಾರ ಸಂಘದ ಮುಂದಿನ 5 ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಪಾಂಡುರಂಗ ಹೆಗ್ಡೆ ಮತ್ತು ಉಪಾಧ್ಯಕ್ಷರಾಗಿ ರಾಮಮೋಹನ್ ರೈ ಅವರು ಅಯ್ಕೆಯಾಗಿದ್ದಾರೆ. ಗೃಹ ನಿರ್ಮಾಣ ಸಹಕಾರ ಸಂಘದ ಚುನಾವಣೆಗೆ ಮಾ.20ಕ್ಕೆ ನಾಮಪತ್ರ ಸಲ್ಲಿಸಿ, ಅದೇ ದಿನ ನಾಮಪತ್ರ ಹಿಂಪಡೆಯಲು ಹಾಗು ಬಳಿಕ ಮತದಾನವೂ ಒಂದೆ ದಿನಕ್ಕೆ ನಿಗದಿ ಮಾಡಿದಂತೆ ಎಲ್ಲಾ 13 ಸದಸ್ಯರು ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಅಜಿತ್ ಕುಮಾರ್ ಕೆ, ರಾಮಮೋಹನ್ ರೈ ಎಂ.ಕೆ, ರಘುನಾಥ ಬಿ, ಎ.ನಾಗೇಶ ರಾವ್,

ಗೃಹ ನಿರ್ಮಾಣ ಸಹಕಾರ ಸಂಘದ ಅಧ್ಯಕ್ಷರಾಗಿ ಪಾಂಡುರಂಗ ಹೆಗ್ಡೆ ಮತ್ತು ಉಪಾಧ್ಯಕ್ಷರಾಗಿ ರಾಮಮೋಹನ್ ರೈ ಆಯ್ಕೆ Read More »

ದಿಶಾ ಸಾಲ್ಯಾನ್‌ ಸಾವಿನ ಕೇಸಿಗೆ ಮರುಜೀವ : ಆದಿತ್ಯ ಠಾಕ್ರೆಗೆ ಎದುರಾಯಿತು ಸಂಕಷ್ಟ

ಐದು ವರ್ಷಗಳ ಬಳಿಕ ಸಾವಿನ ಮರುತನಿಖೆ ಆಗ್ರಹಿಸಿ ಹೈಕೋರ್ಟ್‌ ಮೆಟ್ಟಿಲೇರಿದ ತಂದೆ ಮುಂಬಯಿ: ಮುಂಬಯಿಯಲ್ಲಿ ನಟ ಸುಶಾಂತ್‌ ಸಿಂಗ್‌ ರಜಪೂತ್‌ ಸೇರಿದಂತೆ ಸಿನೆಮಾ ತಾರೆಯರು ಮತ್ತು ಸೆಲೆಬ್ರಿಟಿಗಳಿಗೆ ಮ್ಯಾನೇಜರ್‌ ಆಗಿ ಕೆಲಸ ಮಾಡುತ್ತಿದ್ದ ಉಡುಪಿ ಮೂಲದ ದಿಶಾ ಸಾಲ್ಯಾನ್‌ ಎಂಬ ಯುವತಿಯ ಸಾವಿನ ಕೇಸ್‌ ಮರುಜೀವ ಪಡೆದುಕೊಂಡಿದೆ. ದಿಶಾ ಸಾಲ್ಯಾನ್‌ ಸಾವಿಗೀಡಾಗಿ ಐದು ವರ್ಷಗಳ ಬಳಿಕ ಅವರ ತಂದೆ ಸತೀಶ್‌ ಸಾಲ್ಯಾನ್‌ ಮಗಳನ್ನು ಗ್ಯಾಂಗ್‌ರೇಪ್‌ ಮಾಡಿ ಸಾಯಿಸಲಾಗಿದೆ ಮತ್ತು ಇದರ ಹಿಂದೆ ಮಾಜಿ ಮುಖ್ಯಮಂತ್ರಿ ಉದ್ಧವ ಠಾಕ್ರೆಯವರ

ದಿಶಾ ಸಾಲ್ಯಾನ್‌ ಸಾವಿನ ಕೇಸಿಗೆ ಮರುಜೀವ : ಆದಿತ್ಯ ಠಾಕ್ರೆಗೆ ಎದುರಾಯಿತು ಸಂಕಷ್ಟ Read More »

ಕೊನೆಗೂ ಸಿಕ್ಕಿತು ಹನಿಟ್ರ್ಯಾಪ್‌ ಸೂತ್ರಧಾರನ ಸುಳಿವು : ಕಾಂಗ್ರೆಸ್‌ನಲ್ಲಿ ನಡುಕ

ರಾಜ್ಯದಲ್ಲಿ ಬಿರುಗಾಳಿ ಎಬ್ಬಿಸಿದ ಹನಿಟ್ರ್ಯಾಪ್‌ ಕೃತ್ಯ ಬೆಂಗಳೂರು: ವಿಧಾನಸಭೆ ಕಲಾಪದಲ್ಲಿ ನಿನ್ನೆ ಹನಿಟ್ರ್ಯಾಪ್‌ ಕುರಿತು ಜೋರು ಚರ್ಚೆ ನಡೆದ ಬೆನ್ನಿಗೆ ಹನಿಟ್ರ್ಯಾಪ್‌ನ ರೂವಾರಿ ಯಾರು ಮತ್ತು ಯಾರಿಗೆಲ್ಲ ಹನಿಟ್ರ್ಯಾಪ್‌ ಬಲೆ ಹೆಣೆಯಲಾಗಿತ್ತು ಎಂಬ ಮಾಹಿತಿಗಳು ಹೊರಬರತೊಡಗಿವೆ. ವಿಧಾನಸಭೆ ಅಧಿವೇಶನದಲ್ಲಿ ನಿನ್ನೆ ಸಹಕಾರಿ ಸಚಿವ ಕೆ.ಎನ್‌. ರಾಜಣ್ಣ ತನ್ನನ್ನೂ ಸೇರಿಸಿ ರಾಜ್ಯ ಮತ್ತು ಕೇಂದ್ರದ 48 ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಜಾಲಕ್ಕೆ ಬೀಳಿಸಲಾಗಿದೆ ಎಂಬ ಆಘಾತಕಾರಿ ಮಾಹಿತಿಯನ್ನು ಬಹಿರಂಗಪಡಿಸಿದ್ದರು. ಶಾಸಕ ಸುನಿಲ್‌ ಕುಮಾರ್‌ ಕೂಡ ಹನಿಟ್ರ್ಯಾಪ್‌ ಕುರಿತಂತೆ ಸರಕಾರದ ಮೇಲೆ

ಕೊನೆಗೂ ಸಿಕ್ಕಿತು ಹನಿಟ್ರ್ಯಾಪ್‌ ಸೂತ್ರಧಾರನ ಸುಳಿವು : ಕಾಂಗ್ರೆಸ್‌ನಲ್ಲಿ ನಡುಕ Read More »

ಹಿರಿಯ ನಿರ್ದೆಶಕ ಎ.ಟಿ.ರಘು ನಿಧನ

ಅಂಬರೀಷ್‌, ರಜನಿಕಾಂತ್‌ ಚಿತ್ರಗಳನ್ನು ನಿರ್ದೆಶಿಸಿದ್ದ ನಿರ್ದೇಶಕ ಬೆಂಗಳೂರು : ಕನ್ನಡದ ಖ್ಯಾತ ನಿರ್ದೇಶಕ ಎ.ಟಿ.ರಘು (76) ಗುರುವಾರ ರಾತ್ರಿ ನೀಧನರಾಗಿದ್ದಾರೆ. ಮಂಡ್ಯದ ಗಂಡು ಸೇರಿದಂತೆ ಒಟ್ಟು 55 ಸಿನಿಮಾಗಳನ್ನು ಎ.ಟಿ ರಘು ಅವರು ನಿರ್ದೇಶನ ಮಾಡಿದ್ದರು. ಹಿಂದಿ ಮತ್ತು ಮಳಯಾಲಂ ಚಿತ್ರಗಳಲ್ಲೂ ಕೆಲಸ ಮಾಡಿದ್ದರು. ಅವರ ನಿಧನ ವಾರ್ತೆ ತಿಳಿದು ಚಿತ್ರರಂಗದ ಸೆಲೆಬ್ರಿಟಿಗಳು ಸಂತಾಪ ಸೂಚಿಸಿದ್ದಾರೆ.ಅಂಬರೀಷ್‌ ನಾಯಕನಾಗಿ ನಟಿಸಿದ 25ಕ್ಕೂ ಹೆಚ್ಚು ಚಿತ್ರಗಳನ್ನು ನಿರ್ದೇಶಿಸಿದ ಹಿರಿಮೆ ಎ.ಟಿ.ರಘು ಅವರಿಗಿದೆ. ತೀವ್ರ ಅನಾರೋಗ್ಯದಿಂದ ರಘು ಬಳಲುತ್ತಾ ಇದ್ದರು. ನಿರಂತರವಾಗಿ

ಹಿರಿಯ ನಿರ್ದೆಶಕ ಎ.ಟಿ.ರಘು ನಿಧನ Read More »

error: Content is protected !!
Scroll to Top