ಸುದ್ದಿ

ಬಿಯರ್‌ ಕ್ಯಾನ್‌ನಲ್ಲಿ ಮಹಾತ್ಮ ಗಾಂಧಿ ಚಿತ್ರ : ಭಾರತೀಯರ ಆಕ್ರೋಶ

ಮಾಸ್ಕೊ: ರಷ್ಯಾದ ಮದ್ಯ ತಯಾರಕ ಕಂಪನಿಯೊಂದು ತನ್ನ ಹೊಸ ಬ್ರ್ಯಾಂಡ್‌ನ ಬಿಯರ್‌ ಕ್ಯಾನ್‌ ಮೇಲೆ ಭಾರತದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಚಿತ್ರ ಮುದ್ರಿಸಿ ಅವಮಾನ ಮಾಡಿದ್ದು, ಈ ಕುರಿತಾದ ವೀಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡಿ ಭಾರತೀಯರ ವ್ಯಾಪಕ ಆಕ್ರೋಶಕ್ಕೆ ತುತ್ತಾಗಿದೆ. ರಷ್ಯಾದ ಬಿಯರ್ ಕ್ಯಾನ್‌ನಲ್ಲಿ ಮಹಾತ್ಮ ಗಾಂಧಿಯವರ ಚಿತ್ರವನ್ನು ಪ್ರಿಂಟ್‌ ಮಾಡಿಸಿದ್ದು ಸೋಷಿಯಲ್‌ ಮೀಡಿಯಾದಲ್ಲಿ ದೊಡ್ಡ ವಿವಾದವನ್ನು ಹುಟ್ಟುಹಾಕಿದೆ. ವರದಿಗಳ ಪ್ರಕಾರ ರೆವರ್ಟ್ ಬ್ರಾಂಡ್‌ನ ಹೇಜಿ ಐಪಿಎ ಬಿಯರ್ ಕ್ಯಾನ್‌ಗಳಲ್ಲಿ ಗಾಂಧಿಯವರ ಫೋಟೋ ಮತ್ತು ಸಹಿಯನ್ನು ಮುದ್ರಿಸಲಾಗಿದೆ. […]

ಬಿಯರ್‌ ಕ್ಯಾನ್‌ನಲ್ಲಿ ಮಹಾತ್ಮ ಗಾಂಧಿ ಚಿತ್ರ : ಭಾರತೀಯರ ಆಕ್ರೋಶ Read More »

ವಕ್ಫ್ ತಿದ್ದುಪಡಿ ಮಸೂದೆಯನ್ನು ವಿರೋಧಿಸಿ ಎಸ್‍ ಡಿಪಿಐ ಪ್ರತಿಭಟನೆ

ಪುತ್ತೂರು : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ರಾಜ್ಯಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ 2024 ಮಂಡನೆಯನ್ನು ವಿರೋದಿಸಿ ಪುತ್ತೂರು ಬಸ್ಸು ನಿಲ್ದಾಣದ ಬಳಿ ವಕ್ಫ್  ತಿದ್ದುಪಡಿ ಮಸೂದೆಯನ್ನು ವಿರೋಧಿಸಿ, ಕೇಂದ್ರ ಸರ್ಕಾರದ ಜನ ವಿರೋಧಿ ನೀತಿ ವಿರುದ್ಧ ಘೋಷಣೆ ಕೂಗಿ, ಮಸೂದೆಯ ಪ್ರತಿಯನ್ನು ಸುಡುವ ಮೂಲಕ ಪ್ರತಿಭಟನೆ ನಡೆಯಿತು. ವಕ್ಫ್ ತಿದ್ದುಪಡಿ ಮಸೂದೆಯು ಕೇಂದ್ರ ಸರ್ಕಾರದ ಹಿಡನ್ ಅಜೆಂಡಾವಾಗಿದ್ದು ಈ ಮಸೂದೆಯನ್ನು ದೇಶದ ಜಾತ್ಯಾತೀತರು ಒಪ್ಪಲ್ಲ, ವಕ್ಫ್ ಆಸ್ತಿಯು

ವಕ್ಫ್ ತಿದ್ದುಪಡಿ ಮಸೂದೆಯನ್ನು ವಿರೋಧಿಸಿ ಎಸ್‍ ಡಿಪಿಐ ಪ್ರತಿಭಟನೆ Read More »

ತನ್ನಿಂದ ತಾನೇ ಚಲಿಸಿ ಹೋಟೆಲ್‌ಗೆ ಗುದ್ದಿದ ಟ್ಯಾಂಕರ್‌

ಕಾರು, ಬೈಕ್‌ಗಳು, ಆಟೋರಿಕ್ಷಾ ಜಖಂ ಮಂಗಳೂರು: ರಸ್ತೆ ಬದಿ ನಿಲ್ಲಿಸಿದ್ದ ಟ್ಯಾಂಕರ್‌ ತನ್ನಿಂದ ತಾನೇ ಚಲಿಸಿ ರಸ್ತೆ ದಾಟಿ ಹೋಗಿ ಹೋಟೆಲ್‌ಗೆ ನುಗ್ಗಿ ಕಾರು, ಬೈಕ್‌ಗಳನ್ನು ಜಖಂಗೊಳಿಸಿದ ಘಟನೆ ಗುರುವಾರ ರಾತ್ರಿ ಕುಳಾಯಿಯ ಹೊನ್ನಕಟ್ಟೆ ಜಂಕ್ಷನ್‌ನಲ್ಲಿ ನಡೆದಿದೆ. ಕುಳಾಯಿಗುಡ್ಡೆಗೆ ಹೋಗುವ ರಸ್ತೆಯಲ್ಲಿ ಟ್ಯಾಂಕರ್‌ ನಿಲ್ಲಿಸಿ ಚಾಲಕ ಹೊಟೇಲ್‌ಗೆ ತೆರಳಿದ್ದರು. ಈ ವೇಳೆ ಲಾರಿ ಏಕಾಏಕಿ ಇಳಿಜಾರಾಗಿರುವ ರಸ್ತೆಯಲ್ಲಿ ಚಲಿಸಿಕೊಂಡು ಹೋಗಿ ರಾಷ್ಟೀಯ ಹೆದ್ದಾರಿ 66ನ್ನು ದಾಟಿ ಹೊಟೇಲ್‌ಗೆ ಡಿಕ್ಕಿ ಹೊಡೆದಿದೆ. ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಕಾರು, ಆಟೋರಿಕ್ಷಾ

ತನ್ನಿಂದ ತಾನೇ ಚಲಿಸಿ ಹೋಟೆಲ್‌ಗೆ ಗುದ್ದಿದ ಟ್ಯಾಂಕರ್‌ Read More »

ಕುಂಭಮೇಳದ ರುದ್ರಾಕ್ಷಿ ಹುಡುಗಿ ಈಗ ಜ್ಯುವೆಲ್ಲರಿ ಬ್ರ್ಯಾಂಡ್‌ ಅಂಬಾಸಿಡರ್‌

ಕೇರಳದ ಚಿನ್ನಾಭರಣ ಮಳಿಗೆಯ ರೂಪದರ್ಶಿಯಾಗಲಿರುವ ಮೊನಾಲಿಸಾ ಪ್ರಯಾಗ್‌ರಾಜ್‌: ಸೋಷಿಯಲ್‌ ಮೀಡಿಯಾ ಎಲ್ಲೋ ಇದ್ದವರನ್ನು ಇನ್ನೆಲ್ಲಿಗೋ ತಲುಪಿಸಿ ಬಿಡುತ್ತದೆ ಎನ್ನುವುದಕ್ಕೆ ಮಹಾಕುಂಭಮೇಳದಲ್ಲಿ ರುದ್ರಾಕ್ಷಿ ಮಾರುತ್ತಿದ್ದ ಮೊನಾಲಿಸಾ ಎಂಬ ಅಲೆಮಾರಿ ಜನಾಂಗದ ಹುಡಗಿಯೇ ಸಾಕ್ಷಿ. ಬೆಕ್ಕಿನ ಕಣ್ಣಿನ ಸಹಜ ಸುಂದರಿ 16ರ ಹರೆಯದ ಮೊನಾಲಿಸಾ ಯೂಟ್ಯೂಬರ್‌ಗಳ ಕಣ್ಣಿಗೆ ಬಿದ್ದು ರಾತ್ರಿ ಬೆಳಗಾಗವುದುರೊಳಗೆ ಸೋಷಿಯಲ್‌ ಮೀಡಿಯಾ ಸೆನ್ಸೇಷನ್‌ ಆಗಿದ್ದು, ಈ ಜನಪ್ರಿಯತೆ ಈಗ ಆಕೆಯ ಬದುಕನ್ನೇ ಬದಲಾಯಿಸಿದೆ. ಕೇರಳದ ಪ್ರಸಿದ್ಧ ಚಿನ್ನಾಭರಣ ಮಳಿಗೆಯ ಬ್ರ್ಯಾಂಡ್‌ ಅಂಬಾಸಿಡರ್‌ ಆಗಿ ಮೊನಾಲಿಸಾ ಆಯ್ಕೆಯಾಗಿದ್ದಾರೆ. ಇದರೊಂದಿಗೆ

ಕುಂಭಮೇಳದ ರುದ್ರಾಕ್ಷಿ ಹುಡುಗಿ ಈಗ ಜ್ಯುವೆಲ್ಲರಿ ಬ್ರ್ಯಾಂಡ್‌ ಅಂಬಾಸಿಡರ್‌ Read More »

ಮುಂಬಯಿ ದಾಳಿಯ ಸೂತ್ರಧಾರ ರಾಣಾ ಭಾರತಕ್ಕೆ ಹಸ್ತಾಂತರ : ಟ್ರಂಪ್‌ ಘೋಷಣೆ

ಮೋದಿ ಜೊತೆ ದ್ವಿಪಕ್ಷೀಯ ಮಾತುಕತೆ ಸಂದರ್ಭದಲ್ಲಿ ಘೋಷಣೆ ವಾಷಿಂಗ್ಟನ್‌ : ಮುಂಬಯಿ ಮೇಲೆ 2008ರ ನ.26ರಂದು ನಡೆದ ಭೀಕರ ಭಯೋತ್ಪಾದಕ ದಾಳಿಯ ಸೂತ್ರಧಾರ ತಹಾವುರ್‌ ರಾಣಾನನ್ನು ಭಾರತಕ್ಕೆ ಗಡಿಪಾರು ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಒಪ್ಪಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸಮ್ಮುಖದಲ್ಲಿ ಡೊನಾಲ್ಡ್​ ಟ್ರಂಪ್ ಅಪರಾಧಿ ರಾಣಾನನ್ನು ಭಾರತಕ್ಕೆ ಹಸ್ತಾಂತರ ಮಾಡುವ ಘೋಷಣೆ ಮಾಡಿದ್ದಾರೆ. ಕಳೆದ ತಿಂಗಳು, ಅಮೆರಿಕದ ಸುಪ್ರೀಂ ಕೋರ್ಟ್ ತಹಾವ್ವುರ್ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸಲು ಅನುಮೋದನೆ ನೀಡಿತ್ತು. ಪ್ರಕರಣದಲ್ಲಿ ಅವನ ಶಿಕ್ಷೆಯ ವಿರುದ್ಧ

ಮುಂಬಯಿ ದಾಳಿಯ ಸೂತ್ರಧಾರ ರಾಣಾ ಭಾರತಕ್ಕೆ ಹಸ್ತಾಂತರ : ಟ್ರಂಪ್‌ ಘೋಷಣೆ Read More »

ಡಿವೈಡರ್‌ಗೆ ಬೈಕ್‌ ಢಿಕ್ಕಿ ಹೊಡೆದು ಯುವಕ ಮೃತ್ಯು

ಬೆಳ್ತಂಗಡಿ : ಡಿವೈಡರ್‌ಗೆ ಬೈಕ್‌ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಿನ್ನೆ ರಾತ್ರಿ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ-ವೇಣೂರು ರಸ್ತೆಯಲ್ಲಿ ನಡೆದಿದೆ. ಬಂಟ್ವಾಳ ತಾಲೂಕು ಸಿದ್ದಕಟ್ಟೆ ಸಮೀಪದ ಉಕ್ಕಿನಡ್ಕ ನಿವಾಸಿ ಪ್ರಶಾಂತ್‌ ಪೂಜಾರಿ ಮೃತ ಪಟ್ಟ ಯುವಕ ಎನ್ನಲಾಗಿದೆ. ಪ್ರಶಾಂತ್‌ ಪೂಜಾರಿ ಗುರುವಾಯನಕೆರೆಯಿಂದ ವೇಣೂರು ಕಡೆಗೆ ಬೈಕ್‌ ಚಲಾಯಿಸಿಕೊಂಡು ಹೋಗಿದ್ದು, ವೇಣೂರು ರಸ್ತೆಯ ದ್ವಾರದಿಂದ ಸ್ವಲ್ಪ ಮುಂದೆ ತಲುಪುತ್ತಿದ್ದಂತೆ ನಿಯಂತ್ರಣ ತಪ್ಪಿ ಬೈಕ್‌ ಡಿವೈಡರ್‌ಗೆ ಢಿಕ್ಕಿ ಹೊಡೆದಿದ್ದಾರೆ. ಢಿಕ್ಕಿಯ ರಭಸಕ್ಕೆ ಬೈಕ್ ಸವಾರನ ತಲೆ

ಡಿವೈಡರ್‌ಗೆ ಬೈಕ್‌ ಢಿಕ್ಕಿ ಹೊಡೆದು ಯುವಕ ಮೃತ್ಯು Read More »

ಪುತ್ತೂರು (ಫೆ.೧೬): ಅಕ್ಷಯ ಕಾಲೇಜಿನಲ್ಲಿ ದಿಕ್ಸೂಚಿ ಕಾರ್ಯಕ್ರಮ

ಪುತ್ತೂರು : ಪುತ್ತೂರಿನಲ್ಲಿ ವಿನೂತನ ಪದವಿ ಕೋರ್ಸುಗಳನ್ನು ಪರಿಚಯಿಸಿ ಶೈಕ್ಷಣಿಕ ಕ್ಷೇತ್ರದೊಂದಿಗೆ ಕ್ರೀಡಾ ಹಾಗೂ ಸಾಂಸ್ಕೃತಿಕ ಕ್ಷೇತ್ರದಲ್ಲೂ ಹಲವು ಸಾಧನೆ ಮಾಡುತ್ತಿರುವ ಸಂಪ್ಯದ ಅಕ್ಷಯ ಕಾಲೇಜಿನಲ್ಲಿ ಫೆ.೧೬ ಭಾನುವಾರ ಬೆಳಿಗ್ಗೆ ೧೦. ಗಂಟೆಯಿಂದ ೧೨.೩೦ ರ ವರೆಗೆ “ದಿಕ್ಸೂಚಿ-೪” ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಏನಿದು “ದಿಕ್ಸೂಚಿ”? ಕಳೆದ ೩ ವರ್ಷಗಳಿಂದ ಸಂಸ್ಥೆಯು ಪುತ್ತೂರು ಹಾಗು ಪುತ್ತೂರಿನ ಆಸುಪಾಸಿನ ತಾಲೂಕುಗಳ ಪಿ.ಯು.ಸಿ ವಿದ್ಯಾರ್ಥಿಗಳಿಗೆ ಪಿ.ಯು.ಸಿ ಬಳಿಕ ಇರುವ ಆಯ್ಕೆ, ವೃತ್ತಿ ಶಿಕ್ಷಣ ಕ್ಷೇತ್ರದ ಪ್ರಾಮುಖ್ಯತೆ ವಿಷಯಗಳಲ್ಲಿ ಸಮಗ್ರ ರೂಪುರೇಷೆಯನ್ನು ನೀಡಿ

ಪುತ್ತೂರು (ಫೆ.೧೬): ಅಕ್ಷಯ ಕಾಲೇಜಿನಲ್ಲಿ ದಿಕ್ಸೂಚಿ ಕಾರ್ಯಕ್ರಮ Read More »

ಇತ್ತಂಡಗಳ ಮಧ್ಯೆ  ವಾಗ್ವಾದ | ಸೋಡಾಬಾಟಲಿಯಿಂದ ಹಲ್ಲೆ

ಪುತ್ತೂರು: ನಗರದ ಬೊಳ್ಳಾರ್ ನಲ್ಲಿ ಇತ್ತಂಡಗಳ ಮಧ್ಯೆ  ವಾದಗಳು ನಡೆದಿದ್ದು,ಕೋಪಕ್ಕೆ ತುತ್ತಾಗಿ ವ್ಯಕ್ತಿಯೊರ್ವರಿಗೆ  ಸೋಡಾ ಬಾಟಲಿಯಿಂದ ಚುಚ್ಚಿದ್ದ ಘಟನೆ ಬುಧವಾರ ತಡ ರಾತ್ರಿ ನಡೆದಿದೆ. ಘಟನೆಯ ಕುರಿತು ಉಮೇಶ್ ಬಾಳುಗೋಡು ದೂರು ನೀಡಿದ್ದು,  ಪುತ್ತೂರು ನಗರ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಾಗಿದೆ. ತಿಂಗಳಾಡಿ ನೀವಾಸಿ ನರ್ಮೇಶ್ ರೈ, ಪ್ರಸಾದ್ ಪ್ರಕರಣದ ಆರೋಪಿತರು.  ನರ್ಮೇಶ್ ರೈ ಎಂಬುವರು ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದರು ಎನ್ನಲಾಗಿದೆ. ಇತ್ತಂಡದವರು ಕುಡಿತದ ಮತ್ತಿನಲ್ಲಿ ಜಗಳವಾಡಿದ್ದು, ಈ ವೇಳೆ ಇದು ತಾರಕಕ್ಕೆ ಹೋಗಿ

ಇತ್ತಂಡಗಳ ಮಧ್ಯೆ  ವಾಗ್ವಾದ | ಸೋಡಾಬಾಟಲಿಯಿಂದ ಹಲ್ಲೆ Read More »

ಮಂಗಳೂರು : ಅಡಿಕೆ ವರ್ತಕರ ಮೇಲೆ ಐಟಿ ದಾಳಿ

ಸಾವಿರಾರು ಕೋ.ರೂ. ತೆರಿಗೆ ವಂಚನೆ, ಅಕ್ರಮ ಗಳಿಕೆ ಪತ್ತೆ ಮಂಗಳೂರು: ಅಡಿಕೆ ರಫ್ತು ವ್ಯವಹಾರ ನಡೆಸುತ್ತಿರುವ ಮಂಗಳೂರಿನ ಕೆಲವು ಕಂಪನಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ. ಮಂಗಳೂರಿನ ಸ್ವಸ್ತಿಕ್ ಟ್ರೇಡಿಂಗ್ ಕಂಪನಿ, ನರೇಶ್ & ಕೋ, ಶಿವ ಪ್ರೇಮ್ ಟ್ರೇಡರ್ಸ್ ಮತ್ತು ಪರಮೇಶ್ವರಿ ಟ್ರೇಡಿಂಗ್ ಕಂಪನಿ ಮೇಲೆ ಐಟಿ ದಾಳಿಯಾಗಿದೆ. ಟ್ರೇಡಿಂಗ್ ಕಂಪನಿ ಕಚೇರಿ, ಗೋಡೌನ್ ಹಾಗೂ ಟ್ರೇಡಿಂಗ್ ಕಂಪನಿ ಮಾಲೀಕರ ಮನೆ ಮೇಲೂ ದಾಳಿ‌ ನಡೆಸಿ ಅಧಿಕಾರಿಗಳು ದಾಖಲೆ ಪರಿಶೀಲನೆ

ಮಂಗಳೂರು : ಅಡಿಕೆ ವರ್ತಕರ ಮೇಲೆ ಐಟಿ ದಾಳಿ Read More »

ಕುಖ್ಯಾತ ಬೈಕ್‍ ಕಳ್ಳರ ಬಂಧನ

ಪಡುಬಿದ್ರಿ : ಮುಂಡೂರು ಗ್ರಾಮದ ಪರೀಕ್ಷಿತ್ ಅವರಿಗೆ ಸೇರಿದ ಬುಲೆಟ್ ಬೈಕನ್ನುಜ. 21ರಂದು ಪಡುಬಿದ್ರಿಯಲ್ಲಿ ಪಾರ್ಕ್ ಮಾಡಿದ್ದಲ್ಲಿಂದ ಕಳವು ಮಾಡಿರುವ ಘಟನೆ ನಡೆದಿದೆ. ಬೈಕ್‍ ಕದ್ದವರು ಸೂಳೆಬೈಲು ಶಿವಮೊಗ್ಗದ ಮೊಹಮ್ಮದ್ ರೂಹಾನ್ ಮತ್ತು ಶಿವಮೊಗ್ಗದ ತಾಜುದ್ದೀನ್ ಯಾನೆ ತಾಜು ಇಬ್ಬರು ಅಂತರ್ ಜಿಲ್ಲಾ ಕುಖ್ಯಾತ ಬೈಕ್ ಕಳ್ಳರಾಗಿದ್ದಾರೆ. ಇವರನ್ನು ಪಡುಬಿದ್ರಿ ಪೊಲೀಸರು ಶಿವಮೊಗ್ಗದಿಂದ ಬಂಧಿಸಿದ್ದಾರೆ 4 ಲ.ರೂ. ಮೌಲ್ಯದ ಸೊತ್ತು ವಶಪಡಿಸಿಕೊಳ್ಳಲಾಗಿದೆ. ಕಳವು ಮಾಡಿದ್ದ  ಬುಲೆಟ್ ಹಾಗೂ ಈ ಕೃತ್ಯಕ್ಕೆ ಬಳಸಿದ್ದ ಮಾರುತಿ ರಿಟ್ಸ್ ಕಾರು ಸಹಿತ

ಕುಖ್ಯಾತ ಬೈಕ್‍ ಕಳ್ಳರ ಬಂಧನ Read More »

error: Content is protected !!
Scroll to Top