ಸುದ್ದಿ

ಬೆಂಗಳೂರಿನಲ್ಲಿ ನಡುರಾತ್ರಿ ಕಾಂಗ್ರೆಸ್‌ ಮುಖಂಡನ ಹತ್ಯೆ

ಬೆಂಬಲಿಗರಿಂದ ಆಸ್ಪತ್ರೆ ಎದುರು ಮಚ್ಚು, ಲಾಂಗ್‌ ಪ್ರದರ್ಶಿಸಿ ಭೀತಿ ಸೃಷ್ಟಿ ಬೆಂಗಳೂರು : ಕಾಂಗ್ರೆಸ್‌ ಮುಖಂಡರೊಬ್ಬರು ನಿನ್ನೆ ತಡರಾತ್ರಿ ಬೆಂಗೂರಿನಲ್ಲಿ ಬರ್ಬರವಾಗಿ ಹತ್ಯೆಯಾಗಿದ್ದಾರೆ. ಅಶೋಕನಗರದ ಗರುಡ ಮಾಲ್ ಬಳಿ ತಡರಾತ್ರಿ 1 ಗಂಟೆ ವೇಳೆಗೆ ಕಾಂಗ್ರೆಸ್​ ಮುಖಂಡ ಹೈದರ್ ಅಲಿ ಎಂಬವರನ್ನು ಕೊಲೆ ಮಾಡಲಾಗಿದೆ. ಹೈದರ್ ಅಲಿ ಶನಿವಾರ ರಾತ್ರಿ ಲೈವ್‌ಬ್ಯಾಂಡ್​ ಕಾರ್ಯಕ್ರಮವೊಂದನ್ನು ಮುಗಿಸಿಕೊಂಡು ಸ್ನೇಹಿತನ ಜೊತೆಗೆ ಬೈಕ್​ನಲ್ಲಿ ತೆರಳುತ್ತಿದ್ದರು. ಈ ವೇಳೆ ಬೈಕ್​ನಲ್ಲಿ ಹಿಂಬಾಲಿಸಿಕೊಂಡು ಬಂದ ದುಷ್ಕರ್ಮಿಗಳು ಹೈದರ್ ಅಲಿಯ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ.ಸ್ಥಳಕ್ಕೆ […]

ಬೆಂಗಳೂರಿನಲ್ಲಿ ನಡುರಾತ್ರಿ ಕಾಂಗ್ರೆಸ್‌ ಮುಖಂಡನ ಹತ್ಯೆ Read More »

ಚಾಂಪಿಯನ್ಸ್‌ ಟ್ರೋಫಿ : ಇಂದು ಭಾರತ-ಪಾಕಿಸ್ಥಾನ ಪಂದ್ಯ

ಗೆದ್ದರೆ ಟೀಮ್‌ ಇಂಡಿಯಾ ಸೆಮಿಫೈನಲ್‌ಗೆ; ಪಾಕಿಸ್ಥಾನ ಟೂರ್ನಿಯಿಂದ ಔಟ್‌ ದುಬೈ : ಚಾಂಪಿಯನ್ಸ್‌ ಟ್ರೋಫಿ ಕೂಟದಲ್ಲಿ ಇಂದು ಭಾರತ-ಪಾಕಿಸ್ಥಾನ ಮುಖಾಮುಖಿಯಾಗಲಿದ್ದು, ಕ್ರಕೆಟಿನ ಈ ಮಹಾಕದನವನ್ನು ಜನರು ಕಾತರದಿಂದ ಎದುರು ನೋಡುತ್ತಿದ್ದಾರೆ. ಭಾನುವಾರ ಮಧ್ಯಾಹ್ನ 2.30ರಿಂದ ಆರಂಭವಾಗಲಿರುವ ಚಾಂಪಿಯನ್ಸ್ ಟ್ರೋಫಿಯ 5ನೇ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ಥಾನ ತಂಡಗಳು ಮುಖಾಮುಖಿಯಾಗಲಿವೆ. ಈ ಜಿದ್ದಾಜಿದ್ದಿನ ಕದನ ಬಹಳ ನಿರೀಕ್ಷೆಗಳನ್ನು ಹುಟ್ಟುಹಾಕಿದೆ.ದುಬೈ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಮ್ಯಾಚ್​ನಲ್ಲಿ ಟೀಮ್ ಇಂಡಿಯಾ ಗೆದ್ದರೆ ಸೆಮಿಫೈನಲ್​ಗೇರುವುದು ಬಹುತೇಕ ಖಚಿತವಾಗಲಿದೆ. ಅತ್ತ

ಚಾಂಪಿಯನ್ಸ್‌ ಟ್ರೋಫಿ : ಇಂದು ಭಾರತ-ಪಾಕಿಸ್ಥಾನ ಪಂದ್ಯ Read More »

ಅಳಿಕೆ ವಲಯದ  ಸ್ವಉದ್ಯೋಗ ಪ್ರೇರಣಾ ಶಿಬಿರ

ವಿಟ್ಲ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ವಿಟ್ಲ ತಾಲೂಕು ಅಳಿಕೆ ವಲಯದ  ನಿರ್ಕಜೆ  ಪಂಚಾಯತ್ ಹಾಲ್ ನಲ್ಲಿ  ಸ್ವಉದ್ಯೋಗ ಪ್ರೇರಣಾ ಶಿಬಿರ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು  ನಿರ್ಕಜೆ  ಒಕ್ಕೂಟದ ಅಧ್ಯಕ್ಷ  ಭವ್ಯ ನೆರವೇರಿಸಿದರು. ವಲಯ ಮೇಲ್ವಿಚಾರಕಿ ಮಾಲತಿ ಪ್ರಾಸ್ತವಿಕವಾಗಿ ಮಾತನಾಡಿದ್ದರು.  ರುಡ್ ಸೆಟ್ ನಿರ್ದೇಶಕ ಅಜಯ್ ಸ್ವಉದ್ಯೋಗ ಹಾಗೂ  ಸ್ವಉದ್ಯೋಗಕ್ಕೆ ಬೇಕಾದ ಬ್ಯಾಂಕ್ ಸಾಲದ ಬಗ್ಗೆ ಮಾಹಿತಿ ನೀಡಿದರು. ಈ ಸಂಧರ್ಭ  ಸಂಘದ ಸದಸ್ಯರು, ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು. ಸೇವಾಪ್ರತಿನಿಧಿ

ಅಳಿಕೆ ವಲಯದ  ಸ್ವಉದ್ಯೋಗ ಪ್ರೇರಣಾ ಶಿಬಿರ Read More »

ಆದಿತ್ಯವಾರ, 23 ಫೆಬ್ರವರಿ 2025ರಂದು ಭಾವ ತೀರ ಯಾನ ಸಿನಿಮಾ 2 ದೇಖಾವೆಗಳು

ತುಳುನಾಡ ಪ್ರತಿಭೆ ಮಯೂರ್ ಅಂಬೆಕಲ್ಲು ಸಂಗೀತ ನೀಡಿ ನಿರ್ದೇಶಿಸಿದ ಕಲಾತ್ಮಕ ಚಿತ್ರ ಭಾವ ತೀರ ಯಾನ 21 ರಂದು GL One Mallನ ಭಾರತ್ ಸಿನಿಮಾಸ್’ನ screen ೨ರಲ್ಲಿ ಬಿಡುಗಡೆಯಾಗಿದ್ದು ಭರ್ಜರಿ ಪ್ರದರ್ಶನ ಕಾಣುತ್ತಿದೆ. ನ್ಯೂಸ್ ಪುತ್ತೂರು ಮೀಡಿಯಾ ಪಾರ್ಟ್ನರ್ ಆಗಿ ತೆರೆ ಕಂಡಿರುವ ಸಿನಿಮಾ ಭಾವ ತೀರ ಯಾನ ದ ಪ್ರೇಕ್ಷಕರ ಸಂದಣಿಯನ್ನು ನಿಭಾಯಿಸುವುದಕ್ಕಾಗಿಫೆಬ್ರವರಿ 23ನೆ ಆದಿತ್ಯವಾರದಂದು ಎರಡು ಪ್ರದರ್ಶನಗಳು ನಡೆಯಲಿವೆ. 23 ಫೆಬ್ರವರಿ ಆದಿತ್ಯವಾರದಂದು ಅಪರಾಹ್ನ 1.45 ಕ್ಕೆ ಮತ್ತು 4.15ಕ್ಕೆ ಎರಡು ಪ್ರದರ್ಶನಗಳು

ಆದಿತ್ಯವಾರ, 23 ಫೆಬ್ರವರಿ 2025ರಂದು ಭಾವ ತೀರ ಯಾನ ಸಿನಿಮಾ 2 ದೇಖಾವೆಗಳು Read More »

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ಸೇವಾಪ್ರತಿನಿದಿಗಳಿಗೆ  ಸಂಪೂರ್ಣ ಸುರಕ್ಷಾ  ಮಾಹಿತಿ ಕಾರ್ಯಾಗಾರ

ವಿಟ್ಲ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ವಿಟ್ಲ ಯೋಜನಾ ಕಛೇರಿ ವ್ಯಾಪ್ತಿಯ ಸೇವಾಪ್ರತಿನಿಧಿಗಳಿಗೆ 2025-2026 ನೇ ಸಾಲಿನ ಸಂಪೂರ್ಣ ಸುರಕ್ಷಾ ಹಾಗೂ ಹಿಡುವಳಿ ಯೋಜನೆ  ಬಗ್ಗೆ  ಮಾಹಿತಿ  ಕಾರ್ಯಗಾರ ನಡೆಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ರಮೇಶ್ ಕಾರ್ಯಕ್ರಮವನ್ನುಉದ್ಘಾಟಿಸಿ, ಪ್ರಾಸ್ತವಿಕ  ಮಾತುಗಳನ್ನಾಡಿದರು.  ಜಿಲ್ಲಾ  ವಿಮಾ ಸಮನ್ವಯಧಿಕಾರಿ ಜನಾರ್ಧನ  ಇವರು ಸುರಕ್ಷಾದಲ್ಲಿ ಸಿಗುವ ಸಾಲಭ್ಯ, ಪಾಕೇಜ್,  ಬೇಕಾದ ದಾಖಲಾತಿ ಬಗ್ಗೆ ಸಂಘದ ಸದಸ್ಯರಿಗೆ ಮಾಹಿತಿ ನೀಡಿ ಸುರಕ್ಷಾ ನೋಂದಾವಣೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ಸೇವಾಪ್ರತಿನಿದಿಗಳಿಗೆ  ಸಂಪೂರ್ಣ ಸುರಕ್ಷಾ  ಮಾಹಿತಿ ಕಾರ್ಯಾಗಾರ Read More »

ಕೊಳ್ತಿಗೆ ಪ್ರಾಥಮಿಕ ಕೃಷಿ ಪತ್ತಿನ  ಸಹಕಾರಿ ಸಂಘದ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ

ಪುತ್ತೂರು : ಕೊಳ್ತಿಗೆ ಪ್ರಾಥಮಿಕ ಕೃಷಿ ಪತ್ತಿನ  ಸಹಕಾರಿ ಸಂಘ. ನಿ. ಇದರ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ ನಡೆಯುತ್ತಿದೆ. ಈ ಸಂದರ್ಭದಲ್ಲಿ ಪುತ್ತೂರು  ಮಾಜಿ ಶಾಸಕ ಸಂಜೀವ ಮಠಂದೂರು ಹಾಗೂ  ಪುತ್ತೂರು  ಗ್ರಾಮಾಂತರ ಮಂಡಲದ ಹಾಗೂ ನಗರಮಂಡಲದ ಅಧ್ಯಕ್ಷರುಗಳು ಹಾಗೂ ಸುಳ್ಯ ವಿಧಾನಸಭಾ ಕ್ಷೇತ್ರದ ಪದಾಧಿಕಾರಿಗಳು, ಕಾರ್ಯಕರ್ತರು  ಉಪಸ್ಥಿತರಿದ್ದರು.

ಕೊಳ್ತಿಗೆ ಪ್ರಾಥಮಿಕ ಕೃಷಿ ಪತ್ತಿನ  ಸಹಕಾರಿ ಸಂಘದ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ Read More »

ಮಾ.3ರಿಂದ ಬಜೆಟ್‌ ಅಧಿವೇಶನ : ಬಿಜೆಪಿ ಕಾರ್ಯತಂತ್ರ ರಚನೆ

ಸರಕಾರದ ಮೇಲೆ ದಾಳಿ ಮಾಡಲು ವಿಪಕ್ಷದ ಬಳಿಯಿದೆ ಸಾಕಷ್ಟು ಅಸ್ತ್ರ ಬೆಂಗಳೂರು: ಮಾರ್ಚ್ 3ರಿಂದ ರಾಜ್ಯ ಬಜೆಟ್ ಅಧಿವೇಶನದ ಆರಂಭವಾಗುತ್ತಿದ್ದು, ಸರ್ಕಾರದ ವಿರುದ್ಧ ಮುಗಿಬೀಳಲು ಹಲವಾರು ಅಸ್ತ್ರಗಳನ್ನು ಬತ್ತಳಿಕೆಗೆ ಸೇರಿಸಿಕೊಂಡು ವಿಪಕ್ಷ ಬಿಜೆಪಿ ಸಜ್ಜಾಗಿದೆ. ಈ ಸಂಬಂಧ ಶುಕ್ರವಾರ ಪೂರ್ವಭಾವಿ ಸಭೆ ನಡೆಸಿ ಚರ್ಚಿಸಲಾಗಿದೆ. ಮುಂಬರುವ ಬಜೆಟ್ ಅಧಿವೇಶನ ಕುರಿತು ಮಹತ್ವದ ಚರ್ಚೆ ನಡೆಸಲಾಗಿದ್ದು. ಸದನದಲ್ಲಿ ಪ್ರಶ್ನೆಗಳನ್ನು ಕೇಳುವುದು, ಚರ್ಚೆಗೆ ಒಳಪಡಿಸುವ ವಿಷಯಗಳು ಹಾಗೂ ನಿಲುವಳಿ ಸೂಚನೆಯ ಮಂಡನೆಗೆ ಸಂಬಂಧಿಸಿದಂತೆ ಮಾತುಕತೆ ನಡೆಸಲಾಗಿದೆ ಎಂದು ವಿಧಾನ ಪರಿಷತ್ತಿನ

ಮಾ.3ರಿಂದ ಬಜೆಟ್‌ ಅಧಿವೇಶನ : ಬಿಜೆಪಿ ಕಾರ್ಯತಂತ್ರ ರಚನೆ Read More »

ಸ್ನೇಹಮಯಿ ಕೃಷ್ಣ ಮೇಲೆ ವಾಮಾಚಾರ : ಇನ್ನಿಬ್ಬರು ಸೆರೆ

ಬೆಂಗಳೂರಿನ ಅಶೋಕ್ ನಗರದ ಸ್ಮಶಾನದ ಕಾಳಿಕಾಂಬ ಗುಡಿಯಲ್ಲಿ ರಕ್ತಾಭಿಷೇಕ ಮಂಗಳೂರು: ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ಮತ್ತು ಗೋವಿಂದರಾಜು ಸೇರಿ ಹಲವರ ಮೇಲೆ ವಾಮಾಚಾರ ಮಾಡಿಸಿದ್ದಾರೆ ಎಂಬ ಆರೋಪದ ಮೇಲೆ ಮಂಗಳೂರು ಪೊಲೀಸರು ಬೆಂಗಳೂರಿನಲ್ಲಿ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಸ್ನೇಹಮಯಿ ಕೃಷ್ಣ ಮೇಲೆ ಬೆಂಗಳೂರಿನ ಅಶೋಕ್ ನಗರದ ಸ್ಮಶಾನದಲ್ಲಿ ಕಾಳಿಕಾಂಬ ಗುಡಿಯ ಅರ್ಚಕರಿಗೆ ವಿಚಾರ ತಿಳಿಸದೆ ಈ ಇಬ್ಬರು ಆರೋಪಿಗಳು ಕುರಿಗಳನ್ನು ಬಲಿ ನೀಡಿ ವಾಮಾಚಾರ ಮಾಡಿದ್ದಾರೆ ಎಂದು ತನಿಖೆಯಲ್ಲಿ ಪತ್ತೆಯಾಗಿದೆ.ಸ್ನೇಹಮಯಿ ಕೃಷ್ಣ, ಗಂಗರಾಜು,

ಸ್ನೇಹಮಯಿ ಕೃಷ್ಣ ಮೇಲೆ ವಾಮಾಚಾರ : ಇನ್ನಿಬ್ಬರು ಸೆರೆ Read More »

ಎಚ್‌ಎಸ್‌ಆರ್‌ಪಿ ಗಡುವು ಮತ್ತೆ ವಿಸ್ತರಣೆ

ಮಾ.31ರೊಳಗೆ ಹೊಸ ನಂಬರ್‌ ಪ್ಲೇಟ್‌ ಅಳವಡಿಸಲು ಸೂಚನೆ ಬೆಂಗಳೂರು : ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್‌ ಅಳವಡಿಕೆ ಗಡುವನ್ನು ಮತ್ತೆ ವಿಸ್ತರಣೆ ಮಾಡಲಾಗಿದೆ. ಈ ಕುರಿತಂತೆ ರಾಜ್ಯ ಸರ್ಕಾರ ಗೆಜೆಟ್ ಅಧಿಸೂಚನೆ ಹೊರಡಿಸಿದ್ದು, ಏಪ್ರಿಲ್‌ 1, 2019ಕ್ಕಿಂತ ಮುಂಚಿತವಾಗಿ ನೋಂದಣಿಯಾಗಿರುವ ಎಲ್ಲ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್‌ ಅಳವಡಿಕೆಗೆ ಆಗಸ್ಟ್‌ 17, 2023ರಲ್ಲಿ ಅಧಿಸೂಚನೆ ಹೊರಡಿಸಿತ್ತು. ಇನ್ನೂ ಬಹಳಷ್ಟು ವಾಹನ ಸವಾರರು ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡಿಲ್ಲ. ಮತ್ತೆ ಗಡುವು ವಿಸ್ತರಿಸುವಂತೆ ಮನವಿ ಮಾಡಿದ ಹಿನ್ನೆಲೆ ಮಾರ್ಚ್‌

ಎಚ್‌ಎಸ್‌ಆರ್‌ಪಿ ಗಡುವು ಮತ್ತೆ ವಿಸ್ತರಣೆ Read More »

ಎಸ್‌ಎಸ್‌ಎಲ್‌ಸಿ ತೇರ್ಗಡೆ ಕನಿಷ್ಠ ಅಂಕ ಶೇ.33ಕ್ಕಿಳಿಸಲು ಖಾಸಗಿ ಶಾಲೆಗಳ ಒತ್ತಾಯ

ಸಿಬಿಎಸ್‌ಎ, ಐಸಿಎಸ್‌ಯ ಬೋರ್ಡ್‌ ಮಾದರಿಯಲ್ಲಿ ಅಂಕ ನಿಗದಿಗೆ ಆಗ್ರಹ ಬೆಂಗಳೂರು: ಎಸ್‌ಎಸ್‌ಎಲ್‌ಸಿ ಉತ್ತೀರ್ಣಕ್ಕೆ ಕನಿಷ್ಠ 35 ಅಂಕದ ಬದಲು 33ಕ್ಕೆ ಇಳಿಸಿ ಎಂದು ಸರ್ಕಾರಕ್ಕೆ ಖಾಸಗಿ ಶಾಲೆಗಳು ಒತ್ತಾಯ ಮಾಡಿವೆ.ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಈ ಕುರಿತು ಪತ್ರ ಬರೆದಿರುವ ಖಾಸಗಿ ಶಾಲೆಗಳ ಒಕ್ಕೂಟ ಕನಿಷ್ಠ 35 ಅಂಕಗಳ ಬದಲಾಗಿ ಈ ವರ್ಷದಿಂದಲೇ ಪಾಸ್‌ ಮಾನದಂಡವನ್ನು 33 ಅಂಕಗಳಿಗೆ ಬದಲಾವಣೆ ಮಾಡುವಂತೆ ಒತ್ತಾಯಿಸಿದೆ. ಸರಕಾರ ಸರಕಾರಿ ಮತ್ತು ಅನುದಾನಿತ ಶಾಲೆಗಳ ಎಸ್‌ಎಸ್‌ಎಲ್‌ಸಿ ಮಕ್ಕಳ ತೇರ್ಗಡೆಗೆ ಕನಿಷ್ಠ ಶೇ.35 ಅಂಕ ಗಳಿಕೆ

ಎಸ್‌ಎಸ್‌ಎಲ್‌ಸಿ ತೇರ್ಗಡೆ ಕನಿಷ್ಠ ಅಂಕ ಶೇ.33ಕ್ಕಿಳಿಸಲು ಖಾಸಗಿ ಶಾಲೆಗಳ ಒತ್ತಾಯ Read More »

error: Content is protected !!
Scroll to Top