ಸುದ್ದಿ

ಸಂಪಾದಕೀಯ- ಈಗ ಬೆಲೆ ಏರಿಕೆಯೇ ಸರಕಾರದ ಗ್ಯಾರಂಟಿ

ದರ ಹೆಚ್ಚಳದಿಂದ ಜನಸಾಮಾನ್ಯರು ಹೈರಾಣಾದರೂ ಆಳುವವರು ಡೋಂಟ್‌ಕೇರ್‌ ರಾಜ್ಯ ಸರಕಾರ ನಿನ್ನೆ ಮತ್ತೊಮ್ಮೆ ಹಾಲಿನ ಬೆಲೆಯನ್ನು ಲೀಟರಿಗೆ 4 ರೂಪಾಯಿಯಂತೆ ಏರಿಸಿದೆ. ಇದರ ಬೆನ್ನಿಗೆ ವಿದ್ಯುತ್‌ ದರವೂ ಏರಿಕೆಯಾಗಿದ್ದು, ರಾಜ್ಯದ ಜನರಿಗೆ ಒಟ್ಟೊಟ್ಟಿಗೆ ಎರಡೆರಡು ಬರೆ ಬಿದ್ದಿದೆ. ಅಂದು ಚುನಾವಣೆ ಸಂದರ್ಭದಲ್ಲಿ ಬೆಲೆ ಏರಿಕೆಯನ್ನೇ ಮುಖ್ಯ ವಿಷಯ ಮಾಡಿಕೊಂಡು ಬಡವರಿಗೆ ಗ್ಯಾರಂಟಿ ಕೊಡುಗೆಗಳನ್ನು ಕೊಟ್ಟು ಬೆಲೆ ಏರಿಕೆಯ ಬಿಸಿಯಿಂದ ಪಾರು ಮಾಡುವುದಾಗಿ ಹೇಳಿಕೊಂಡಿದ್ದ ಕಾಂಗ್ರೆಸ್‌ ಅಧಿಕಾರ ದಕ್ಕುತ್ತಿದ್ದಂತೆಯೇ ಉಲ್ಟಾ ಹೊಡೆದು ಈಗ ಬೆಲೆ ಏರಿಕೆಯೇ ತನ್ನ ಗ್ಯಾರಂಟಿ […]

ಸಂಪಾದಕೀಯ- ಈಗ ಬೆಲೆ ಏರಿಕೆಯೇ ಸರಕಾರದ ಗ್ಯಾರಂಟಿ Read More »

ಅಡಿಕೆ ಯಂತ್ರಕ್ಕೆ ಸೀರೆ ಸೆರಗು ಸಿಲುಕಿ  ಮಹಿಳೆ ಮೃತ್ಯು

ಅಡಿಕೆ ಯಂತ್ರಕ್ಕೆ ಸೀರೆ ಸೆರಗು ಸಿಲುಕಿ  ಮಹಿಳೆಯೋರ್ವಳು ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವೆಂಕಟೇಶ ಹೆಗಡೆ ಹೊಸಬಾಳೆ ಪತ್ನಿ ಶೋಭಾ ಎನ್ನಲಾಗಿದೆ. ಶೋಭಾ ಮನೆಯಲ್ಲಿ ಅಡಕೆ ಸುಲಿಯುವ ಕಾರ್ಯ ನಡೆಯುತ್ತಿತ್ತು. ಶೋಭಾ ಹೆಗಡೆ ಕೆಲಸಗಾರರನ್ನು ನೋಡಿಕೊಳ್ಳಲು ಹೋಗಿದ್ದರು. ಈ ವೇಳೆ ಚಾಲಿ ಸುಲಿಯುವ ಯಂತ್ರಕ್ಕೆ ಆಕಸ್ಮಿಕವಾಗಿ ಶೋಭಾ ಸೀರೆಯ ಸೆರಗು ಸಿಲುಕಿ ಪ್ರಾಣಬಿಟ್ಟಿದ್ದಾರೆ. ಕೆಲಸಗಾರರು ಅಲ್ಲಿಯೇ ಇದ್ದರೂ ಕ್ಷಣಾರ್ಧದಲ್ಲಿ ಘಟನೆ ಸಂಭವಿಸಿದೆ. ಯಂತ್ರ ಶೋಭಾರನ್ನು ಎತ್ತಿ ಬಿಸಾಡಿದ್ದು, ರಕ್ತಸ್ರಾವವಾಗಿ ಸಾವನಪ್ಪಿದ್ದಾರೆ.  ಕಳೆದ ಮೂರು

ಅಡಿಕೆ ಯಂತ್ರಕ್ಕೆ ಸೀರೆ ಸೆರಗು ಸಿಲುಕಿ  ಮಹಿಳೆ ಮೃತ್ಯು Read More »

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ  ಸಮುದಾಯ ಅಭಿವೃದ್ಧಿ ವಿಭಾಗದಿಂದ ಮಿತ್ತೂರು ಶಾಲೆಯ ಸಭಾಂಗಣಕ್ಕೆ  ಸಹಾಯಧನ ಮಂಜೂರಾತಿ ಪತ್ರ ವಿತರಣೆ

ಮಿತ್ತೂರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ (ರಿ). ಧರ್ಮಸ್ಥಳದ ಸಮುದಾಯ ಅಭಿವೃದ್ಧಿ ವಿಭಾಗದಿಂದ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ, ಮಿತ್ತೂರು ಇದರ  ಸಭಾಂಗಣ ರಚನೆಗೆ ಒಂದು  ಲಕ್ಷದ ಸಹಾಯಧನ ಮಂಜೂರಾತಿ ಪತ್ರವನ್ನು ಮಾ.27 ಗುರುವಾರದಂದು ವಿತರಿಸಲಾಯಿತು. ಶಾಲಾ ಮುಖ್ಯೋಪಾಧ್ಯಯಿಣಿ ಸರೋಜಾರವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಟ್ಲ ತಾಲೂಕಿನ ಯೋಜನಾಧಿಕಾರಿ ರಮೇಶ್‍ ಅವರು ಹಸ್ತಾಂತರಿಸಿದರು.  ಈ ಸಂದರ್ಭದಲ್ಲಿ ವಲಯ  ಮೇಲ್ವಿಚಾರಕಿ ಆಶಾ ಪಾರ್ವತಿ, ಸೇವಾ ಪ್ರತಿನಿಧಿ ಸುಗಂಧಿನಿ, ಶೌರ್ಯ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ  ಸಮುದಾಯ ಅಭಿವೃದ್ಧಿ ವಿಭಾಗದಿಂದ ಮಿತ್ತೂರು ಶಾಲೆಯ ಸಭಾಂಗಣಕ್ಕೆ  ಸಹಾಯಧನ ಮಂಜೂರಾತಿ ಪತ್ರ ವಿತರಣೆ Read More »

ಮಂಗಳೂರು : ವಧಿಸಲು ಸಾಗಿಸುತ್ತಿದ್ದ 25 ಗೋವುಗಳ ರಕ್ಷಣೆ

ಬಜಪೆ ಸಮೀಪ ಬಜರಂಗ ದಳ ಕಾರ್ಯಕರ್ತರ ಸಾಹಸಮಯ ಕಾರ್ಯಾಚರಣೆ ಮಂಗಳೂರು : ವಧಿಸುವ ಉದ್ದೇಶದಿಂದ ಅಕ್ರಮವಾಗಿ ಸಾಗಿಸುತ್ತಿದ್ದ 25 ಜಾನುವಾರುಗಳನ್ನು ಬಜರಂಗ ದಳ ಕಾರ್ಯಕರ್ತರು ರಕ್ಷಿಸಿದ್ದಾರೆ. ನಗರದ ಹೊರವಲಯದ ಬಜಪೆ ಸೂರಲ್ಪಾಡಿಯಲ್ಲಿ ಶುಕ್ರವಾರ ಬೆಳಗ್ಗೆ ಈ ಘಟನೆ ನಡೆದಿದೆ. ಮಂಗಳೂರು ಕಡೆಯಿಂದ ಮೂಡುಬಿದಿರೆಯತ್ತ ಗೋವುಗಳನ್ನು ಅಕ್ರಮವಾಗಿ ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ವಾಹನವನ್ನು ತಡೆದು ಪರಿಶೀಲನೆ ನಡೆಸಿದ ವೇಳೆ ಪಿಕಪ್‌ ಗೂಡ್ಸ್ ವಾಹನದಲ್ಲಿ ಕಾಲುಗಳನ್ನು ಕಟ್ಟಿ ಅಮಾನುಷವಾಗಿ 25 ಗೋವುಗಳನ್ನು ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ. ಗೋವುಗಳ

ಮಂಗಳೂರು : ವಧಿಸಲು ಸಾಗಿಸುತ್ತಿದ್ದ 25 ಗೋವುಗಳ ರಕ್ಷಣೆ Read More »

ಪತ್ನಿಯನ್ನು ಕತ್ತರಿಸಿ ಸೂಟ್‌ಕೇಸ್‌ನಲ್ಲಿ ತುಂಬಿಸಿಟ್ಟು ಪಲಾಯನ ಮಾಡಿದ್ದ ಪತಿ ಪುಣೆಯಲ್ಲಿ ಸೆರೆ

ಬೆಂಗಳೂರನ್ನು ಬೆಚ್ಚಿಬೀಳಿಸಿದ್ದ ಬರ್ಬರ ಹತ್ಯೆ ಬೆಂಗಳೂರು: ಪತ್ನಿಯನ್ನು ಕೊಂದು ಆಕೆಯ ದೇಹವನ್ನು ತುಂಡರಿಸಿ ಸೂಟ್‌ಕೇಸ್‌ಗೆ ತುಂಬಿಸಿ ಪಲಾಯನ ಮಾಡಿದ್ದ ಪತಿಯನ್ನು ಮಹಾರಾಷ್ಟ್ರದ ಪುಣೆಯಲ್ಲಿ ಬಂಧಿಸಲಾಗಿದೆ. ಹುಳಿಮಾವು ಬಳಿಯ ನಿವಾಸವೊಂದರಲ್ಲಿ ಸೂಟ್‌ಕೇಸ್‌ನಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿದ್ದು, ಬೆಂಗಳೂರಿನಲ್ಲಿ ಸಂಚಲನ ಸೃಷ್ಟಿಸಿತ್ತು, 32 ವರ್ಷದ ಗೌರಿ ಅನಿಲ್ ಸಂಬೇಕರ್ ಅವರನ್ನು ಆಕೆಯ ಪತಿ ಮಹಾರಾಷ್ಟ್ರ ಮೂಲದ ರಾಕೇಶ್ ಕೊಲೆ ಮಾಡಿ ಹೆಣವನ್ನು ಕತ್ತರಿಸಿ ಸೂಟ್‌ಕೇಸ್‌ನಲ್ಲಿ ತುಂಬಿಸಿಟ್ಟು ಬಳಿಕ ಹೆಂಡತಿಯ ತಾಯಿಗೆ ಫೋನ್‌ ಮಾಡಿ ತಿಳಿಸಿ ಪಲಾಯನ ಮಾಡಿದ್ದ. ಈ ಮಾದರಿಯ

ಪತ್ನಿಯನ್ನು ಕತ್ತರಿಸಿ ಸೂಟ್‌ಕೇಸ್‌ನಲ್ಲಿ ತುಂಬಿಸಿಟ್ಟು ಪಲಾಯನ ಮಾಡಿದ್ದ ಪತಿ ಪುಣೆಯಲ್ಲಿ ಸೆರೆ Read More »

ಜಾನುವಾರು ಸಾಗಾಟಮಾಡುತ್ತಿದ್ದ ಮೂವರು ಆರೋಪಿಯರ ಬಂಧನ

ಪುತ್ತೂರು : ಗೂಡ್ಸ್‌ ವಾಹನವೊಂದರಲ್ಲಿ ಹಿಂಸಾತ್ಮಕವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪ್ರಕರಣ ಉಪ್ಪಿನಂಗಡಿಯ  34ನೇ ನೆಕ್ಕಿಲಾಡಿ ಗ್ರಾಮದ ನೆಕ್ಕಿಲಾಡಿ ಜಂಕ್ಷನ್ ನಲ್ಲಿ ನಡೆದಿದೆ. ಈ ಪ್ರಕರಣವನ್ನು  ಪೊಲೀಸರು ಪತ್ತೆ ಹಚ್ಚಿ, ಹಾಸನ ಮೂಲದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.  ಕೃತ್ಯಕ್ಕೆ ಬಳಸುತ್ತಿದ್ದ ವಾಹನ ಹಾಗೂ ಜಾನುವಾರು ವಶಪಡಿಸಿಕೊಂಡಿರುವ ಘಟನೆ ಹಾಸನ ತಾಲೂಕು ಸಾಲಗಾಮೆ ಹೋಬಳಿ ನಿವಾಸಿಗಳಾದ ಪ್ರತಾಪ್ ಎಸ್.ಎಂ.(28ವ.), ಪವನ್ ಸಿ.(24ವ.), ಶ್ರೇಯಸ್ ಹೆಚ್.ವಿ.(24ವ.) ಬಂಧಿತ ಆರೋಪಿಗಳಾಗಿದ್ದಾರೆ. ಮಾ.25ರಂದು ಸಂಜೆ ಉಪ್ಪಿನಂಗಡಿ ಪೊಲೀಸ್ ಠಾಣಾ ಉಪನಿರೀಕ್ಷಕರಾದ ಮನಿಶಾ ಎಂ.,

ಜಾನುವಾರು ಸಾಗಾಟಮಾಡುತ್ತಿದ್ದ ಮೂವರು ಆರೋಪಿಯರ ಬಂಧನ Read More »

ಲಾರಿ – ಬೈಕ್ ನಡುವೆ ಅಪಘಾತ | ಬೈಕ್‍ ಸವಾರ ಮೃತ್ಯು

ಸುಳ್ಯ: ಲಾರಿ ಮತ್ತು ಬೈಕ್ ನಡುವೆ ತೀರ್ವ ಅಪಘಾತವಾಗಿದ್ದು, ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಮಡಿಕೇರಿ ಸಮೀಪದ ಕಾಟಿಕೇರಿ ಸಮೀಪ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮೃತ ಬೈಕ್ ಸವಾರ ಕಕ್ಕಬೆ ನಿವಾಸಿ ಶರತ್ (28) ಎಂದು ಪತ್ತೆಹಚ್ಚಲಾಗಿದೆ. ಕಾರನ್ನು ಹಿಂದಿಕ್ಕಿ ಹೋಗುತ್ತಿದ್ದಾಗ ಲಾರಿ ಅಡಿಗೆ ಬೈಕ್ ಸಮೇತ ಯುವಕ ಬಿದ್ದಿದ್ದಾನೆ ಎನ್ನಲಾಗಿದೆ. ಮಡಿಕೇರಿ ಗ್ರಾಮಾಂತರ ಪೋಲಿಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು, ಧರ್ಮಸ್ಥಳ ವಿಪತ್ತು ನಿರ್ವಹಣಾ ತಂಡ ಹಾಗೂ ಎನ್ ಡಿ ಆರ್

ಲಾರಿ – ಬೈಕ್ ನಡುವೆ ಅಪಘಾತ | ಬೈಕ್‍ ಸವಾರ ಮೃತ್ಯು Read More »

ರಸ್ತೆಯಲ್ಲಿ ನಮಾಜ್‌ ಮಾಡಿದರೆ ಡ್ರೈವಿಂಗ್‌ ಲೈಸೆನ್ಸ್‌, ಪಾಸ್‌ಪೋರ್ಟ್‌ ರದ್ದು

ಹೋಳಿಯ ಯಶಸ್ಸಿನ ಬಳಿಕ ಪೊಲೀಸರ ಇನ್ನೊಂದು ಕಟ್ಟುನಿಟ್ಟಿನ ಸೂಚನೆ ಲಖನೌ: ಹೋಳಿ ಹಬ್ಬದ ಬಣ್ಣದಿಂದ ಸಮಸ್ಯೆಯಾಗುವುದಿದ್ದರೆ ಮನೆಯೊಳಗೆ ನಮಾಜು ಮಾಡಿ ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದ ಉತ್ತರ ಪ್ರದೇಶ ಪೊಲೀಸರು ಈಗ ಈದ್-ಉಲ್-ಫಿತರ್ ಮತ್ತು ರಮ್ಜಾನ್‌ನ ಕೊನೆಯ ಶುಕ್ರವಾರದಂದು ರಸ್ತೆಗಳಲ್ಲಿ ನಮಾಜ್ ಮಾಡಿದರೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ರಸ್ತೆಗಳಲ್ಲಿ ನಮಾಜ್‌ ಮಾಡಿದರೆ ಕಠಿಣ ಕಾನೂನು ಕ್ರಮ ಎದುರಿಸಬೇಕಾಗುತ್ತದೆ. ಅಂತಹವರ ಪಾಸ್‌ಪೋರ್ಟ್‌ ಹಾಗೂ ಡ್ರೈವಿಂಗ್‌ ಲೈಸೆನ್ಸ್‌ ರದ್ದುಗೊಳಿಸಬಹುದು ಎಂದು ಮೀರತ್ ಪೊಲೀಸ್ ಅಧೀಕ್ಷಕ (ನಗರ) ಆಯುಷ್ ವಿಕ್ರಮ್

ರಸ್ತೆಯಲ್ಲಿ ನಮಾಜ್‌ ಮಾಡಿದರೆ ಡ್ರೈವಿಂಗ್‌ ಲೈಸೆನ್ಸ್‌, ಪಾಸ್‌ಪೋರ್ಟ್‌ ರದ್ದು Read More »

ಮನೆ ಬಾಗಿಲಿಗೆ ಬರಲಿದೆ ದೇವರ ಪ್ರಸಾದ

ಕೊಲ್ಲೂರು, ಕುಕ್ಕೆ ಸಹಿತ ಪ್ರಮುಖ ದೇವಸ್ಥಾನಗಳ ಪ್ರಸಾದ ಆನ್‌ಲೈನ್‌ ಮೂಲಕ ವಿತರಣೆ ಬೆಂಗಳೂರು: ಇನ್ನು ಮುಂದೆ ಕರ್ನಾಟಕದ 14 ಪ್ರಮುಖ ದೇವಸ್ಥಾನಗಳ ಪ್ರಸಾದ ಭಕ್ತರ ಮನೆ ಬಾಗಿಲಿಗೆ ಬರಲಿದೆ. ಕಲ್ಲುಸಕ್ಕರೆ, ಬಾದಾಮಿ, ಗೋಡಂಬಿ, ದ್ರಾಕ್ಷಿ, ಭಸ್ಮ, ಬಿಲ್ವಪತ್ರೆ, ಕುಂಕುಮ, ಹೂವಿನ ಪ್ರಸಾದವನ್ನು ಭಕ್ತರು ತಾವಿದ್ದಲ್ಲಿಗೆ ತರಿಸಿಕೊಳ್ಳಬಹುದು. ಕುಕ್ಕೆ ಸುಬ್ರಹ್ಮಣ್ಯ, ಕೊಲ್ಲೂರು ಮೂಕಾಂಬಿಕಾ ದೇಗುಲ ಸೇರಿದಂತೆ ರಾಜ್ಯದ ಮುಜರಾಯಿ ಇಲಾಖೆಯ ಅಧೀನದಲ್ಲಿ ಬರುವ ದೇಗುಲಗಳ ಪ್ರಸಾದ ಆನ್​ಲೈನ್ ಮೂಲಕ ವಿತರಿಸುವ ಇ-ಪ್ರಸಾದ ಕಾರ್ಯಕ್ರಮಕ್ಕೆ ಗುರುವಾರ ಮುಜರಾಯಿ ‌ಸಚಿವ ರಾಮಲಿಂಗಾರೆಡ್ಡಿ

ಮನೆ ಬಾಗಿಲಿಗೆ ಬರಲಿದೆ ದೇವರ ಪ್ರಸಾದ Read More »

ಇಬ್ಬರು ಉಗ್ರರು ಬಲಿ; ಮೂವರು ಯೋಧರು ಹುತಾತ್ಮ

ಕಥುವಾದಲ್ಲಿ ಐದು ದಿನಗಳಿಂದ ಉಗ್ರರ ವಿರುದ್ಧ ಕಾರ್ಯಾಚರಣೆ ಶ್ರೀನಗರ: ಜಮ್ಮು-ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಇಬ್ಬರು ಉಗ್ರರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ. ಈ ಗುಂಡಿನ ಕಾಳಗದಲ್ಲಿ ಮೂವರು ಸೈನಿಕರು ಹುತಾತ್ಮರಾಗಿದ್ದಾರೆ ಹಾಗೂ ಇಬ್ಬರು ತೀವ್ರ ಗಾಯಗೊಂಡಿದ್ದಾರೆ. ಕಳೆದ ನಾಲ್ಕು ದಿನಗಳಿಂದ ಕಥುವಾದಲ್ಲಿ ಉಗ್ರ ಬೇಟೆ ನಡೆಯುತ್ತಿದ್ದು, ನಿನ್ನೆ ರಾತ್ರಿ ತೀವ್ರ ಕಾಳಗ ನಡೆದಿದೆ ಎಂದು ಭದ್ರತಾ ಪಡೆ ಮೂಲಗಳು ತಿಳಿಸಿವೆ.ಕಥುವಾ ಜಿಲ್ಲೆಯ ಜುಥಾನ ಸಮೀಪ ದಟ್ಟಾರಣ್ಯದಲ್ಲಿ ಐವರು ಉಗ್ರರು ಅವಿತಿರುವ ಕುರಿತು ಮಾಹಿತಿ ಸಿಕ್ಕಿದ ಬಳಿಕ ಇಲ್ಲಿ ಕಾರ್ಯಾಚರಣೆ

ಇಬ್ಬರು ಉಗ್ರರು ಬಲಿ; ಮೂವರು ಯೋಧರು ಹುತಾತ್ಮ Read More »

error: Content is protected !!
Scroll to Top