ಸುದ್ದಿ

ಹಾಸನದಲ್ಲಿ ಕಾಂಗ್ರೆಸ್‌ ʼಜನ ಕಲ್ಯಾಣʼ ಬಲಪ್ರದರ್ಶನಕ್ಕೆ ಕ್ಷಣಗಣನೆ

ಲಕ್ಷಕ್ಕೂ ಮೀರಿ ಜನ ಭಾಗವಹಿಸುವ ನಿರೀಕ್ಷೆ; ಸಚಿವರ ದಂಡೇ ಹಾಸನದತ್ತ ಬೆಂಗಳೂರು: ಉಪಚುನಾವಣೆಯಲ್ಲಿ ಅಭೂತಪೂರ್ವ ಯಶಸ್ಸು ಸಾಧಿಸಿರುವ ಕಾಂಗ್ರೆಸ್​ ಈಗ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ತವರು ಜಿಲ್ಲೆ ಹಾಸನದಲ್ಲಿ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದೆ. ಈ ಮೂಲಕ ಜೆಡಿಎಸ್‌-ಬಿಜೆಪಿ ಎರಡಕ್ಕೂ ಟಕ್ಕರ್‌ ಕೊಡಲು ‘ಕೈ’ ತಂತ್ರ ಹೂಡಿದೆ.ಅರಸೀಕೆರೆ ರಸ್ತೆಯ ಎಸ್​.ಎಂ ಕೃಷ್ಣ ನಗರದಲ್ಲಿರುವ ಕೆ.ಎಸ್​ ಸಿಎ ಕ್ರಿಕೆಟ್ ಮೈದಾನದಲ್ಲಿ ಬೃಹತ್ ವೇದಿಕೆ ಸಜ್ಜಾಗಿದೆ. ಲಕ್ಷ ಲಕ್ಷ ಜನರ ಆಗಮನದ ನಿರೀಕ್ಷೆ ಇದೆ. ಬೆಳಗ್ಗೆ 11.30ಕ್ಕೆ ಹಾಸನದಲ್ಲಿ ಜನಕಲ್ಯಾಣ […]

ಹಾಸನದಲ್ಲಿ ಕಾಂಗ್ರೆಸ್‌ ʼಜನ ಕಲ್ಯಾಣʼ ಬಲಪ್ರದರ್ಶನಕ್ಕೆ ಕ್ಷಣಗಣನೆ Read More »

ನೀವೆಷ್ಟು ಪಾಸಿಟಿವ್ ಥಿಂಕರ್ ಆಗಿದ್ದೀರಿ?

ಅದಕ್ಕೊಂದು ಸ್ವಯಂಮಾಪಕ ಇಲ್ಲಿದೆ ನೀವೆಷ್ಟು ಪಾಸಿಟಿವ್ ಥಿಂಕರ್ ಆಗಿರುತ್ತೀರಿ ಅಷ್ಟು ಯಶಸ್ಸು ನಿಮ್ಮದಾಗುತ್ತದೆ. ನೀವು ಪಾಸಿಟಿವ್ ಆಗಿದ್ದರೆ ನಿಮ್ಮ ಬದುಕು ಇನ್ನೊಬ್ಬರಿಗೆ ಮಾದರಿ ಆಗುತ್ತದೆ. ನೀವು ಎಲ್ಲರಿಗೂ ಸ್ಫೂರ್ತಿ ತುಂಬುವ ಐಕಾನ್ ಆಗುತ್ತೀರಿ. ನಿಮ್ಮ ಬದುಕು ಇತರರಿಗೆ ಯಶೋಗಾಥೆ ಆಗುತ್ತದೆ. ನಿಮ್ಮ ಸಿಗ್ನೇಚರ್ ಸಾವಿರಾರು ಮಂದಿಗೆ ಆಟೋಗ್ರಾಫ್ ಆಗುತ್ತದೆ. ನಿಮ್ಮ ಆತ್ಮವಿಶ್ವಾಸದ ಮಟ್ಟವು ಯಾವಾಗಲೂ ಒಂದೇ ರೀತಿ ಇರುತ್ತದೆ. ಸೋಲು ನಿಮ್ಮನ್ನು ಕಂಡು ಹೆದರುತ್ತದೆ. ನಿಮ್ಮ ಬದುಕಿನ ಪುಸ್ತಕ ಸಾವಿರಾರು ಮಂದಿಗೆ ಪ್ರೇರಣೆ ಕೊಡುವ ಆಟೊಬಯೋಗ್ರಾಫಿ ಆಗುತ್ತದೆ.

ನೀವೆಷ್ಟು ಪಾಸಿಟಿವ್ ಥಿಂಕರ್ ಆಗಿದ್ದೀರಿ? Read More »

ಡಿ.11 -14. : ದತ್ತ ಜಯಂತಿ ಹಿನ್ನಲೆಯಲ್ಲಿ ಮುಳ್ಳಯ್ಯನಗಿರಿಗೆ ನಿರ್ಬಂಧ : ಜಿಲ್ಲಾಡಳಿತ ಆದೇಶ

ಚಿಕ್ಕಮಗಳೂರು : ದತ್ತ ಪಾದುಕೆ ದರ್ಶನ ಹಾಗೂ ದತ್ತ ಜಯಂತಿಯ ಹಿನ್ನಲೆ ಪ್ರವಾಸಿಗರಿಗೆ 4 ದಿನ ಮುಳ್ಳಯ್ಯನ ಗಿರಿ ಹಾಗೂ ಮಾಣಿಕ್ಯಧಾರಕ್ಕೆ ನಿರ್ಬಂಧ ಹೇರಿ ಜಿಲ್ಲಾಡಳಿತ ಆದೇಶಿಸಿದೆ. ವಿಶ್ವಹಿಂದೂ ಪರಿಷದ್, ಬಜರಂಗದಳದ ನೇತೃತ್ವದಲ್ಲಿ ದತ್ತ ಜಯಂತಿ ಡಿ.11ರಿಂದ 14ರವರೆಗೆ ನಡೆಯಲಿದೆ. ಈ ಹಿನ್ನೆಲೆ ನಾಲ್ಕು ದಿನಗಳವರೆಗೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ ಅಧಿಕೃತ ಆದೇಶ ಹೊರಡಿಸಿರುವ ಜಿಲ್ಲಾಧಿಕಾರಿ ಮೀನಾ ನಾಗರಾಜ್  ಡಿ. 15ರ ಸಂಜೆಯ ನಂತರ ಮುಳ್ಳಯ್ಯನ ಗಿರಿಧಾಮ, ಚಂದ್ರದ್ರೋಣ ಪರ್ವತ ತಪ್ಪಲಿಗೆ ಪ್ರವಾಸಕ್ಕೆ ಅನುವು ಮಾಡಲಾಗಿದೆ ಎಂದು

ಡಿ.11 -14. : ದತ್ತ ಜಯಂತಿ ಹಿನ್ನಲೆಯಲ್ಲಿ ಮುಳ್ಳಯ್ಯನಗಿರಿಗೆ ನಿರ್ಬಂಧ : ಜಿಲ್ಲಾಡಳಿತ ಆದೇಶ Read More »

ಸಂಪ್ಯದಲ್ಲಿ ನೂತನ ರಿಕ್ಷಾ ತಂಗುದಾಣ ಉದ್ಘಾಟನೆ

ಪುತ್ತೂರು : ಪುತ್ತೂರು ಬಿರುಮಲೆ ಬೆಟ್ಟವನ್ನು ಸುಮಾರು 10 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುವುದು. ಈಗಾಗಲೇ 2 ಕೋಟಿ ರೂ. ಅನುದಾನ ಬಿಡುಗಡೆಗೊಂಡಿದೆ ಎಂದು ಶಾಸಕ ಅಶೋಕ್ ರೈ ಹೇಳಿದರು. ಅವರು ಮಂಗಳವಾರ ಮಾಣಿ-ಸಂಪಾಜೆ ರಾಷ್ಟ್ರೀಯ ಹೆದ್ದಾರಿ 275 ರ ಆರ್ಯಾಪು ಗ್ರಾಪಂ ವ್ಯಾಪ್ತಿಯ ಸಂಪ್ಯದಲ್ಲಿ ನೂತನವಾಗಿ ನಿರ್ಮಾಣಗೊಂಡ ರಿಕ್ಷಾ ತಂಗುದಾಣವನ್ನು ಉದ್ಘಾಟಿಸಿ ಮಾತನಾಡಿದರು. ಮಕ್ಕಳಿಗೆ ಶಿಕ್ಷಣ, ಉದ್ಯೋಗ ನೀಡುವ ದೃಷ್ಟಿಕೋನವನ್ನಿಟ್ಟುಕೊಂಡು ಪಕ್ಷಾತೀತವಾಗಿ ಕೆಲಸ ಮಾಡುತ್ತಿದ್ದೇನೆ. ಒಟ್ಟಾರೆಯಾಗಿ ಅಭಿವೃದ್ಧಿ ಕೆಲಸಗಳು ನಡೆಯುತ್ತಿದೆ ಎಂದ ಅವರು, ಈಗಾಗಲೇ

ಸಂಪ್ಯದಲ್ಲಿ ನೂತನ ರಿಕ್ಷಾ ತಂಗುದಾಣ ಉದ್ಘಾಟನೆ Read More »

ಮಂಗಳೂರು ವಿಮಾನ ನಿಲ್ದಾಣಕ್ಕೆ ರಾಮೇಶ್ವರಂ ಮಾದರಿಯಲ್ಲಿ ಸ್ಫೋಟದ ಬೆದರಿಕೆ

ಸಂದೇಶದಲ್ಲಿರುವ ಹೆಸರುಗಳನ್ನು ನೋಡಿ ಪೊಲೀಸರು ಹೈರಾಣ ಮಂಗಳೂರು : ರಾಮೇಶ್ವರಂ ಕೆಫೆ ಮಾದರಿಯಲ್ಲಿ ಬಾಂಬ್ ಇರಿಸಿದ್ದಾಗಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆದರಿಕೆ ಸಂದೇಶ ಬಂದ ಬಗ್ಗೆ ತಡವಾಗಿ ವರದಿಯಾಗಿದೆ. ನ.30ರಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಅಕ್ರಮ್ ವಾಯ್ಕರ್‌ ಎನ್ನುವ ಹೆಸರಲ್ಲಿದ್ದ ಇಮೇಲ್‌ನಿಂದ ಬೆದರಿಕೆ ಸಂದೇಶ ಬಂದಿದೆ. ಈ ಬಗ್ಗೆ ಬಜಪೆ ಠಾಣೆಗೆ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ ಸಿಬ್ಬಂದಿ ದೂರು ನೀಡಿದ್ದಾರೆ. ಇಂಥ ಬೆದರಿಕೆ ಕರೆಗಳು ಈಗ ಮಾಮೂಲಿಯಾಗಿದ್ದರೂ ಈ ಸಂದೇಶದಲ್ಲಿ ಉಲ್ಲೇಖಿಸಿರುವ ಕೆಲವು

ಮಂಗಳೂರು ವಿಮಾನ ನಿಲ್ದಾಣಕ್ಕೆ ರಾಮೇಶ್ವರಂ ಮಾದರಿಯಲ್ಲಿ ಸ್ಫೋಟದ ಬೆದರಿಕೆ Read More »

ಮುಡಾ ಹಗರಣ : ಇ.ಡಿಯಿಂದ ಸಿದ್ದರಾಮಯ್ಯ ವಿರುದ್ಧ ಮಹತ್ವದ ಸಾಕ್ಷ್ಯ ಸಂಗ್ರಹ

ಸೈಟ್‌ ಹಂಚಿಕೆಯಲ್ಲಿ ಭಾರಿ ಭ್ರಷ್ಟಾಚಾರ ನಡೆದಿರುವುದಕ್ಕೆ ಸಿಕ್ಕಿದೆ ಹಲವು ಪುರಾವೆ ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಮುಖ ಆರೋಪಿಯಾಗಿರುವ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಹಲವು ಮಹತ್ವದ ಸಾಕ್ಷ್ಯಗಳನ್ನು ಕಲೆ ಹಾಕಿದೆ. ಮುಡಾದಲ್ಲಿ ಹಗರಣ ನಡೆದೇ ಇಲ್ಲ, ಎಲ್ಲ ವಿಪಕ್ಷಗಳ ಅಪಪ್ರಚಾರ ಎನ್ನುತ್ತಿರುವ ಸಿದ್ದರಾಮಯ್ಯನವರಿಗೆ ಈ ಸಾಕ್ಷ್ಯಗಳು ಉರುಳಾಗಿ ಪರಿಣಮಿಸಲಿವೆ ನ್ನಲಾಗಿದೆ. ಮುಡಾದ 14 ನಿವೇಶನಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿ ಬಿ.ಎಂ ಪಾರ್ವತಿ ಅವರಿಗೆ ಹಸ್ತಾಂತರಿಸಿರುವ ಹಿಂದೆ ಹಲವಾರು ಅವ್ಯವಹಾರಗಳು ನಡೆದಿರುವುದಕ್ಕೆ ಹಲವು ಪುರಾವೆಗಳನ್ನು ಜಾರಿ

ಮುಡಾ ಹಗರಣ : ಇ.ಡಿಯಿಂದ ಸಿದ್ದರಾಮಯ್ಯ ವಿರುದ್ಧ ಮಹತ್ವದ ಸಾಕ್ಷ್ಯ ಸಂಗ್ರಹ Read More »

ಜಿಲ್ಲಾ ಸಮಿತಿಗಳಿಗೆ ಮರಳು ಬ್ಲಾಕ್‌ ಹಂಚಿಕೆ ಹೊಣೆ

ಹೊಸ ಮರಳು ನೀತಿ ಕುರಿತು ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಮಾಹಿತಿ ಬೆಂಗಳೂರು : ಸಾರ್ವಜನಿಕರಿಗೆ ಸುಲಭವಾಗಿ ಮತ್ತು ಕೈಗೆಟುಕುವ ದರಗಳಲ್ಲಿ ಮರಳು ಸಿಗಲಿ ಎಂಬ ಉದ್ದೇಶದಿಂದ ಸರಕಾರ ಹೊಸ ಮರಳು ನೀತಿ ಜಾರಿಗೊಳಿಸಿದ್ದು, ಆಯವ್ಯಯದಲ್ಲಿ ಘೋಷಿಸಿರುವಂತೆ ಈ ಸಮಗ್ರ ಮರಳು ನೀತಿಯನ್ನು ಗಣಿ ಇಲಾಖೆ ಅನುಷ್ಠಾನಗೊಳಿಸುತ್ತಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ತಿಳಿಸಿದ್ದಾರೆ. ಸಾರ್ವಜನಿಕರಿಗೆ ಕೈಗೆಟಕುವ ದರದಲ್ಲಿ ಮರಳು ಪೂರೈಸುವ ಉದ್ದೇಶದಿಂದ ಮರಳು ಬ್ಲಾಕ್‌ಗಳನ್ನು ಹಂಚಿಕೆ ಮಾಡುವ ಹೊಣೆಗಾರಿಕೆಯನ್ನು ಜಿಲ್ಲಾ ಸಮಿತಿಗಳಿಗೆ ನೀಡಲು ನಿರ್ಧರಿಸಲಾಗಿದೆ.

ಜಿಲ್ಲಾ ಸಮಿತಿಗಳಿಗೆ ಮರಳು ಬ್ಲಾಕ್‌ ಹಂಚಿಕೆ ಹೊಣೆ Read More »

ಆಟೋ ಚಾಲಕ ನಾಪತ್ತೆ : ಪ್ರಕರಣ ದಾಖಲು

ವಿಟ್ಲ: ಆಟೋ ಚಾಲಕರೊಬ್ಬರು ಬಾಡಿಗೆಗೆಂದು ತೆರಳಿ ನಾಪತ್ತೆಯಾದ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ಬಾಯಿಲ ನಿವಾಸಿ ಧನರಾಜ್ ನಾಪತ್ತೆಯಾಗಿದ್ದು, ಅವರ ಆಟೋ ರಿಕ್ಷಾ, ಉಪ್ಪಿನಂಗಡಿಯಲ್ಲಿ ಪತ್ತೆಯಾಗಿದೆ. ಮೊಬೈಲ್ ಸ್ವಿಚ್ ಆಗಿದೆ. ನ.28 ರಂದು ತನ್ನ ಮನೆಯಿಂದ ಆಟೋರಿಕ್ಷಾವನ್ನು ತೆಗೆದುಕೊಂಡು ಬೆಳಿಗ್ಗೆ ಹೊರಟಿದ್ದು ವಾರ ಕಳೆದರೂ ಮನೆಗೆ ವಾಪಸು ಬಂದಿಲ್ಲ. ಈ ಬಗ್ಗೆ ಸಂಬಂದಿಕರಲ್ಲಿ ನೆರೆಕರೆಯವರಲ್ಲಿ ಹಾಗೂ ಸ್ನೇಹಿತರಲ್ಲಿ ವಿಚಾರಿಸಲಾಗಿ ಎಲ್ಲಿಯೂ ಪತ್ತೆಯಾಗದೆ ಕಾಣೆಯಾಗಿರುತ್ತಾರೆ ಮನಯವರು ಠಾಣೆಗೆ ನೀಡಿದ ಎಂದು ದೂರಿನಲ್ಲಿ

ಆಟೋ ಚಾಲಕ ನಾಪತ್ತೆ : ಪ್ರಕರಣ ದಾಖಲು Read More »

ತೆಲಂಗಾಣದಲ್ಲಿ 5.3 ತೀವ್ರತೆಯ ಭೂಕಂಪ

ಹೈದರಾಬಾದ್‌ : ತೆಲಂಗಾಣದ ಮುಲುಗು ಜಿಲ್ಲೆಯಲ್ಲಿ ಇಂದು ಬೆಳಗ್ಗೆ 5.3 ತೀವ್ರತೆಯ ಭೂಕಂಪ ಸಂಭವಿಸಿದ್ದು, ಹೈದರಾಬಾದ್‌ನಾದ್ಯಂತ ಕಂಪನಗಳ ಅನುಭವಗಳಾಗಿವೆ. ಭೂಕಂಪನ ರಾಷ್ಟ್ರೀಯ ಕೇಂದ್ರದ ಪ್ರಕಾರ ಭೂಕಂಪ ಬೆಳಗ್ಗೆ 7.27ರ ವೇಳೆಗೆ ಸಂಭವಿಸಿದೆ. ಕಂಪನ ಕೇಂದ್ರ ಭೂಮಿಯ 40 ಕಿ. ಮೀ. ಆಳದಲ್ಲಿತ್ತು. ಭೂಕಂಪ ಈ ಪ್ರದೇಶಗಳ ನಿವಾಸಿಗಳಲ್ಲಿ ಭಯವನ್ನು ಉಂಟುಮಾಡಿದೆ. ಯಾವುದೇ ಪ್ರಾಣಹಾನಿ ಅಥವಾ ಗಮನಾರ್ಹ ಹಾನಿಯ ಬಗ್ಗೆ ತಕ್ಷಣದ ವರದಿಗಳು ಬಂದಿಲ್ಲ. ಅಧಿಕಾರಿಗಳು ಪ್ರಸ್ತುತ ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದಾರೆ. ಜನರಿಗೆ ಜಾಗರೂಕರಾಗಿರಲು ಮತ್ತು ಕಿಕ್ಕಿರಿದ ಹಾಗೂ ಅಸುರಕ್ಷಿತ

ತೆಲಂಗಾಣದಲ್ಲಿ 5.3 ತೀವ್ರತೆಯ ಭೂಕಂಪ Read More »

ಎಲ್ಲ ಕೆಎಸ್‌ಆರ್‌ಟಿಸಿ ಬಸ್‌ಗಳಿಗೆ ಕ್ಯುಆರ್ ಕೋಡ್ ಟಿಕೆಟ್ ವ್ಯವಸ್ಥೆ ವಿಸ್ತರಣೆ

ಮೊಬೈಲ್‌ ಫೋನ್‌ ಮೂಲಕವೇ ಟಿಕೆಟ್‌ನ ಹಣ ಪಾವತಿಸಬಹುದು ಬೆಂಗಳೂರು: ಕೆಎಸ್​ಆರ್​ಟಿಸಿ ಬಸ್​ನಲ್ಲಿ ಪ್ರಯಾಣಿಸುವಾಗ ಕಂಡಕ್ಟರ್ ಜತೆ ಚಿಲ್ಲರೆಗಾಗಿ ಜಗಳ ಮಾಡಬೇಕಿಲ್ಲ. ಕ್ಯುಆರ್ ಕೋಡ್ ಟಿಕೆಟ್ ವ್ಯವಸ್ಥೆ ಬಹುತೇಕ ಎಲ್ಲ ಕೆಎಸ್​ಆರ್​​ಟಿಸಿ ಬಸ್​ಗಳಿಗೂ ಇದೀಗ ವಿಸ್ತರಣೆಯಾಗಿದ್ದು, ಯುಪಿಐ ಆ್ಯಪ್ ಮೂಲಕವೇ ಟಿಕೆಟ್ ಹಣ ಪಾವತಿ ಮಾಡಬಹುದಾಗಿದೆ. ಸುಮಾರು 9,000 ಬಸ್‌ಗಳಲ್ಲಿ ಕ್ಯುಆರ್ ಕೋಡ್ ಟಿಕೆಟ್ ವ್ಯವಸ್ಥೆ ಜಾರಿಗೊಳಿಸಲಾಗಿದೆ. ಕ್ಯುಆರ್ ಕೋಡ್ ಟಿಕೆಟ್ ವ್ಯವಸ್ಥೆಯನ್ನು ನ.6ರಂದು ಕೆಎಸ್​ಆರ್​​ಟಿಸಿ ಬಸ್​​ಗಳಲ್ಲಿ ಆರಂಭಿಸಲಾಗಿತ್ತು. ಸದ್ಯ ನಿಗಮದ ಎಲ್ಲ 8,941 ಬಸ್‌ಗಳಿಗೆ ಈ ವ್ಯವಸ್ಥೆಯನ್ನು

ಎಲ್ಲ ಕೆಎಸ್‌ಆರ್‌ಟಿಸಿ ಬಸ್‌ಗಳಿಗೆ ಕ್ಯುಆರ್ ಕೋಡ್ ಟಿಕೆಟ್ ವ್ಯವಸ್ಥೆ ವಿಸ್ತರಣೆ Read More »

error: Content is protected !!
Scroll to Top