ಸುದ್ದಿ

ಏನಿದು ಒನ್‌ ನೇಶನ್‌ ಒನ್‌ ಸಬ್‌ಸ್ಕ್ರಿಪ್ಶನ್‌ ಯೋಜನೆ?

ಪ್ರಧಾನಿ ಮೋದಿಯವರೇ ವಿಶೇಷ ಮುತುವರ್ಜಿ ವಹಿಸಿರುವ ಯೋಜನೆಯ ಮಾಹಿತಿ ಇಲ್ಲಿದೆ ಹೊಸದಿಲ್ಲಿ : ಕೇಂದ್ರ ಸರಕಾರ ಸುಮಾರು 6000 ಕೋ. ರೂ. ವೆಚ್ಚದ ಒನ್‌ ನೇಶನ್‌ ಒನ್‌ ಸಬ್‌ಸ್ಕ್ರಿಪ್ಶನ್‌ ಎಂಬ ಮಹತ್ವಾಕಾಂಕ್ಷಿ ಯೋಜನೆಗೆ ನಿನ್ನೆ ನಡೆದ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿದೆ. ಆ ಬಳಿಕ ಈ ವಿಶಿಷ್ಟ ಯೋಜನೆ ಕುರಿತಾಗಿ ದೇಶವ್ಯಾಪಿಯಾಗಿ ಬಹಳ ಚರ್ಚೆಯಾಗುತ್ತಿದೆ. ವಿದ್ಯಾರ್ಥಿಗಳು, ಬೋಧಕರು ಮತ್ತು ಸಂಶೋಧಕರಿಗೆ ನೆರವಾಗುವ ಉದ್ದೇಶದಿಂದ ಈ ಮಹತ್ವದ ಯೋಜನೆಯನ್ನು ನರೇಂದ್ರ ಮೋದಿ ಸರಕಾರ ಈ ಯೋಜನೆಯನ್ನು ದೇಶಕ್ಕೆ ನೀಡುತ್ತಿದೆ. […]

ಏನಿದು ಒನ್‌ ನೇಶನ್‌ ಒನ್‌ ಸಬ್‌ಸ್ಕ್ರಿಪ್ಶನ್‌ ಯೋಜನೆ? Read More »

25,000 ಕೋ.ರೂ. ಮೌಲ್ಯದ ಮಾದಕ ವಸ್ತು ವಶ

ದೋಣಿ ಮೂಲಕ ಭಾರತಕ್ಕೆ ಬರುತ್ತಿದ್ದ ಅಪಾರ ಪ್ರಮಾಣದ ಡ್ರಗ್ಸ್‌ ಹೊಸದಿಲ್ಲಿ : ಭಾರತೀಯ ಕೋಸ್ಟ್ ಗಾರ್ಡ್ ಪಡೆ ಅಂಡಮಾನ್ ದ್ವೀಪದ ಸಮೀಪ ಜಲಪ್ರದೇಶದಲ್ಲಿ ಮೀನುಗಾರಿಕಾ ದೋಣಿಯೊಂದರಿಂದ ಸುಮಾರು 5500 ಕೆಜಿ (5.5 ಟನ್) ತೂಕದ ಮಾದಕವಸ್ತು ವಶಪಡಿಸಿಕೊಂಡಿದೆ. ಇದರ ಬೆಲೆ 25,000 ಕೋಟಿ ರೂ. ಆಗಿದೆ. ಈ ಡ್ರಗ್ಸ್‌ ಎಲ್ಲಿಂದ ಬರುತ್ತಿತ್ತು ಮತ್ತು ಯಾರಿಗೆ ಮತ್ತು ಎಲ್ಲಿಗೆ ಸರಬರಾಜು ಮಾಡಬೇಕಿತ್ತು ಎಂಬುದರ ಕುರಿತು ತನಿಖೆ ನಡೆಸಲಾಗುತ್ತಿದೆ.ದೊಡ್ಡ ಪ್ರಮಾಣದ ಮಾದಕ ದ್ರವ್ಯ ವಶವಾಗಿರುವುದು ಡ್ರಗ್ಸ್‌ ವಿರುದ್ಧ ಸರಕಾರ ನಡೆಸುತ್ತಿರುವ

25,000 ಕೋ.ರೂ. ಮೌಲ್ಯದ ಮಾದಕ ವಸ್ತು ವಶ Read More »

ಢಾಕಾ : ಚಿನ್ಮಯ್‌ ಕೃಷ್ಣ ದಾಸ್ ಬ್ರಹ್ಮಚಾರಿ ಬಂಧನ ವಿರೋಧಿಸಿ ಭಾರಿ ಪ್ರತಿಭಟನೆ

ಹಿಂದುಗಳ ಪರವಾಗಿ ಹೋರಾಡುತ್ತಿದ್ದ ಧಾರ್ಮಿಕ ನಾಯಕನನ್ನು ಕ್ಷುಲ್ಲಕ ಕೇಸ್‌ ಹಾಕಿ ಬಂಧಿಸಿದ ಪೊಲೀಸರು ಢಾಕಾ: ಬಾಂಗ್ಲಾದೇಶದ ಹಿಂದೂ ಅಲ್ಪಸಂಖ್ಯಾತರ ಪ್ರಮುಖ ವಕೀಲ, ಇಸ್ಕಾನ್ ಸಂಸ್ಥೆಯ ಧಾರ್ಮಿಕ ನಾಯಕ ಚಿನ್ಮಯ್‌ ಕೃಷ್ಣ ದಾಸ್ ಬ್ರಹ್ಮಚಾರಿ ಅವರ ಬಂಧನವನ್ನು ವಿರೋಧಿಸಿ ಹಿಂದುಗಳು ನಿನ್ನೆ ರಾತ್ರಿ ಭಾರಿ ಪ್ರತಿಭಟನೆ ನಡೆಸಿದ್ದಾರೆ. ಬಾಂಗ್ಲಾದ ಹಲವೆಡೆ ಹಿಂದುಗಳು ಬೀದಿಗಿಳಿದು ಮೆರವಣಿಗೆ, ಧರಣಿ ನಡೆಸಿದ್ದು, ಈ ಸಂದರ್ಭದಲ್ಲಿ ಹಲವು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.ಚಿನ್ಮಯ್‌ ಕೃಷ್ಣ ದಾಸ್ ಬ್ರಹ್ಮಚಾರಿ ಅವರನ್ನು ನಿನ್ನೆ ಸಂಜೆ ಢಾಕಾ ವಿಮಾನ

ಢಾಕಾ : ಚಿನ್ಮಯ್‌ ಕೃಷ್ಣ ದಾಸ್ ಬ್ರಹ್ಮಚಾರಿ ಬಂಧನ ವಿರೋಧಿಸಿ ಭಾರಿ ಪ್ರತಿಭಟನೆ Read More »

ಜರ್ಮನಿಯಲ್ಲಿ ಉದ್ಯೋಗದಲ್ಲಿದ್ದ ಇಂಜಿನಿಯರ್‌ ಈಗ ಬೆಂಗಳೂರಿನಲ್ಲಿ ಭಿಕ್ಷುಕ

ಇಂಜಿನಿಯರನ್ನು ಭಿಕ್ಷುಕನನ್ನಾಗಿ ಮಾಡಿದ್ದು ಬದುಕಿನ ಆ ಒಂದು ಆಘಾತಕಾರಿ ಘಟನೆ ಬೆಂಗಳೂರು: ಜರ್ಮನಿಯಲ್ಲಿ ಇಂಜಿನಿಯರಿಂಗ್‌ ಕಲಿತು, ಫ್ರಾಂಕ್‌ಫರ್ಟ್‌ನಲ್ಲಿ ಆರಂಕಿಯ ಸಂಬಳ ಪಡೆಯುತ್ತಿದ್ದ ಮಧ್ಯ ವಯಸ್ಸಿನ ವ್ಯಕ್ತಿಯೊಬ್ಬ ಈಗ ಬೆಂಗಳೂರಿನ ಬೀದಿಗಳಲ್ಲಿ ಭಿಕ್ಷೆ ಬೇಡುತ್ತಿರುವ ವೀಡಿಯೊ ನಿನ್ನೆಯಿಂದ ಸೋಷಿಯಲ್‌ ಮೀಡಿಯಾದಲ್ಲಿ ಭಾರಿ ವೈರಲ್‌ ಆಗಿದೆ. ಕೆಂಪು ಬಣ್ಣದ ಹಳೆಯ ಟಿಶರ್ಟ್‌ ಮತ್ತು ಹರಕು ಜೀನ್ಸ್‌ ಪ್ಯಾಂಟ್‌ ಧರಿಸಿ ಕುರುಚಲು ಗಡ್ಡ ಬಿಟ್ಟು ಕಂಡೋರಿಗೆಲ್ಲ ಕೈಚಾಚಿ ಭಿಕ್ಷೆ ಕೇಳುತ್ತಿದ್ದ ಈ ವ್ಯಕ್ತಿಯನ್ನು ಶರತ್‌ ಯುವರಾಜ್‌ ಎಂಬವರು ಕುತೂಹಲದಿಂದ ಮಾತನಾಡಿಸಿದಾಗ ಆತನ

ಜರ್ಮನಿಯಲ್ಲಿ ಉದ್ಯೋಗದಲ್ಲಿದ್ದ ಇಂಜಿನಿಯರ್‌ ಈಗ ಬೆಂಗಳೂರಿನಲ್ಲಿ ಭಿಕ್ಷುಕ Read More »

ಪೊಲೀಸರ ಕಸ್ಟಡಿಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಮಂಗಳೂರಿನ ಕುಖ್ಯಾತ ದರೋಡೆಕೋರರ ಕಾಲಿಗೆ ಗುಂಡೇಟು

ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರಿನಲ್ಲಿ ಸೆರೆಯಾಗಿದ್ದ ಪಾತಕಿಗಳು ಮಂಗಳೂರು: ಪೊಲೀಸರ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ ಮಂಗಳೂರಿನ ಇಬ್ಬರು ಕುಖ್ಯಾತ ದರೋಡೆಕೋರರ ಕಾಲಿಗೆ ಸಿಸಿಬಿ ಪೊಲೀಸರು ಗುಂಡಿಕ್ಕಿದ ಘಟನೆ ಹುಬ್ಬಳ್ಳಿ ಸಮೀಪ ಭಾನುವಾರ ಸಂಭವಿಸಿದೆ. ಮಂಗಳೂರಿನ ಕುರ್ತಾ ಅಲಿಯಾಸ್ ಭರತ್ ಕುಮಾರ್ ಹಾಗೂ ಫಾರೂಕ್ ಅಲಿಯಾಸ್ ಟೊಮೆಟೊ ಫಾರೂಕ್ ಕಾಲಿಗೆ ಗುಂಡೇಟು ತಗುಲಿದೆ. ಭರತ್ ಮತ್ತು ಫಾರೂಕ್ ಕಾರು ಅಡ್ಡಗಟ್ಟಿ ದರೋಡೆ ಮಾಡುತ್ತಿದ್ದರು. ಇವರ ಗ್ಯಾಂಗ್‌ನಲ್ಲಿ 15 ಜನರಿದ್ದಾರೆ. ಹುಬ್ಬಳ್ಳಿಯ ರೈಲ್ವೆ ನಿಲ್ದಾಣದ ಹತ್ತಿರ ಮಹಾರಾಷ್ಟ್ರದ

ಪೊಲೀಸರ ಕಸ್ಟಡಿಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಮಂಗಳೂರಿನ ಕುಖ್ಯಾತ ದರೋಡೆಕೋರರ ಕಾಲಿಗೆ ಗುಂಡೇಟು Read More »

ಬೃಹತ್‌ ಸಾರಿಗೆ ಮುಷ್ಕರಕ್ಕೆ ನೌಕರರ ಸಿದ್ಧತೆ

38 ತಿಂಗಳ ಅರಿಯರ್ಸ್‌ ಬಿಡುಗಡೆ, ವೇತನ ಹೆಚ್ಚಳ ಬೇಡಿಕೆ ಬೆಂಗಳೂರು: 38 ತಿಂಗಳಿಂದ ಬಾಕಿಯಿರುವ ಅರಿಯರ್ಸ್‌ ಬಿಡುಗಡೆ, ವೇತನ ಏರಿಕೆ ಮುಂತಾದ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಮುಷ್ಕರ ಹೂಡಲು ಕೆಸ್‌ಆರ್‌ಟಿಸಿ ನೌಕರರು ಸಿದ್ಧತೆ ಮಾಡುತ್ತಿದ್ದಾರೆ. ಡಿಸೆಂಬರ್ 31ರಿಂದ ಸಾರಿಗೆ ಮುಷ್ಕರಕ್ಕೆ ಸಾರಿಗೆ ನೌಕರರ ಹಿರಿಯ ಮುಖಂಡ ಅನಂತ ಸುಬ್ಬರಾವ್ ಕರೆ ನೀಡಿದ್ದಾರೆ. ಡಿಸೆಂಬರ್ 9ರಂದು ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಬೆಳಗಾವಿ ಚಲೋ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಷ್ಕರದ ನೋಟಿಸ್ ನೀಡಲಾಗುತ್ತದೆ. ಕೈಗಾರಿಕಾ ವಿವಾದ ಕಾಯ್ದೆ ಸೆಕ್ಷನ್-22ರ ಪ್ರಕಾರ

ಬೃಹತ್‌ ಸಾರಿಗೆ ಮುಷ್ಕರಕ್ಕೆ ನೌಕರರ ಸಿದ್ಧತೆ Read More »

ಇಂದಿನಿಂದ ಪಡಿತರ ಕಾರ್ಡ್‌ ಪರಿಶೀಲನೆ

ಬಡವರಾ, ಶ್ರೀಮಂತರಾ ಎಂದು ಪರಿಶೀಲಿಸಲಿರುವ ಅಧಿಕಾರಿಗಳು ಬೆಂಗಳೂರು : ಬಿಪಿಎಲ್ ಕಾರ್ಡ್ ರದ್ದತಿಯಿಂದ ಉಂಟಾಗಿರುವ ಗೊಂದಲಗಳನ್ನು ನಿವಾರಿಸುವ ಸಲುವಾಗಿ ಇಂದಿನಿಂದ ಅಧಿಕಾರಿಗಳು ರಾಜ್ಯಾದ್ಯಂತ ಪಡಿತರ ಕಾರ್ಡ್‌ಗಳ ಪರಿಶೀಲನೆ ಪ್ರಕ್ರಿಯೆ ಪ್ರಾರಂಭಿಸಲಿದ್ದಾರೆ. ಅರ್ಹ ಫಲಾನುಭವಿಗಳ ಕಾರ್ಡ್‌ಗಳು ಮತ್ತೆ ನೀಡಲಾಗುವುದು ಎಂದು ಸರ್ಕಾರ ಭರವಸೆ ನೀಡಿರುವ ಹಿನ್ನೆಲೆಯಲ್ಲಿ ಸರ್ಹತೆಯನ್ನು ದೃಢಪಡಿಸಿಕೊಳ್ಳುವ ಸಲುವಾಗಿ ಕಾರ್ಡ್‌ಗಳನ್ನು ಪರಿಶೀಲಿಸಲಾಗುತ್ತಿದೆ. ಆಧಾರ್, ಪ್ಯಾನ್ ಕಾರ್ಡ್, ಐಟಿ ರಶೀದಿ ಮುಂತಾದ ದಾಖಲೆಗಳ ಮೂಲಕ ಕಾರ್ಡ್‌ ರದ್ದಾದವರು ತಮ್ಮ ಕಾರ್ಡ್‌ಗಳನ್ನು ಸರಿಪಡಿಸಿಕೊಳ್ಳಬಹುದಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ಅರ್ಹರ

ಇಂದಿನಿಂದ ಪಡಿತರ ಕಾರ್ಡ್‌ ಪರಿಶೀಲನೆ Read More »

ಪರ್ತ್‌ನಲ್ಲಿ 38 ವರ್ಷ ಹಿಂದಿನ ದಾಖಲೆ ಪತನ

ಹೊಸ ದಾಖಲೆ ಬರೆದ ಕೆ.ಎಲ್ ರಾಹುಲ್ – ಯಶಸ್ವಿ ಜೈಸ್ವಾಲ್ ಜೋಡಿ ಪರ್ತ್‌: ಪರ್ತ್​ನಲ್ಲಿ ನಡೆಯುತ್ತಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಮೊದಲ ಟೆಸ್ಟ್ ಪಂದ್ಯದ ದ್ವಿತೀಯ ಇನ್ನಿಂಗ್ಸ್‌ನಲ್ಲಿ ಟೀಮ್ ಇಂಡಿಯಾ ಮೊದಲ ಇನ್ನಿಂಗ್ಸ್‌ನ ವೈಫಲ್ಯಗಳನ್ನೆಲ್ಲ ಮೆಟ್ಟಿನಿಂತು ಭರ್ಜರಿ ಬ್ಯಾಟಿಂಗ್ ನಡೆಸುತ್ತಿದೆ. ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ದ್ವಿಶತಕದ ಜೊತೆಯಾಟವಾಡುವ ಮೂಲಕ ಕೆ.ಎಲ್ ರಾಹುಲ್ ಹಾಗೂ ಯಶಸ್ವಿ ಜೈಸ್ವಾಲ್ ಲೆಜೆಂಡ್ ಸುನಿಲ್ ಗವಾಸ್ಕರ್ – ಶ್ರೀಕಾಂತ್ ದಾಖಲೆಯನ್ನು ಮುರಿದು ಹೊಸ ಇತಿಹಾಸವನ್ನೇ ನಿರ್ಮಿಸಿದ್ದಾರೆ. ದ್ವಿತೀಯ ಇನಿಂಗ್ಸ್​ನಲ್ಲಿ

ಪರ್ತ್‌ನಲ್ಲಿ 38 ವರ್ಷ ಹಿಂದಿನ ದಾಖಲೆ ಪತನ Read More »

ನಿಖಿಲ್‌ ಸೋಲಿನಿಂದ ಮನನೊಂದು ವಿಷ ಸೇವಿಸಿದ ಅಭಿಮಾನಿ

ರಾಮನಗರ : ಚನ್ನಪಟ್ಟಣ ಉಪಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಸೋಲನುಭವಿಸಿದ್ದಕ್ಕೆ ಬೇಸರಗೊಂಡು ಅವರ ಕಟ್ಟಾ ಅಭಿಮಾನಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ರಾಮನಗರದಲ್ಲಿ ಸಂಭವಿಸಿದೆ. ಆತನನ್ನು ಮಂಡ್ಯದ ಆಸ್ಪತ್ರೆಗೆ ದಾಖಲಿಸಲಾಗಿದೆ. ಚನ್ನಪಟ್ಟಣದ ಕೂಡ್ಲೂರು ಬಳಿಯ ಶ್ರೀರಾಂಪುರ ಗ್ರಾಮದ ಮಂಜುನಾಥ್ ಎಂಬಾತ ಆತ್ಮಹತ್ಯೆಗೆ ಯತ್ನಿಸಿದವ.‘ನಾನು ನಿಖಿಲ್ ಅಭಿಮಾನಿ, ನನ್ನ ಸಾವಿಗೆ ನಾನೇ ಕಾರಣ, ಜೈ ಜೆಡಿಎಸ್’ ಎಂದು ಪತ್ರ ಬರೆದಿಟ್ಟು ಆತ ವಿಷ ಸೇವಿಸಿದ್ದಾನೆ. ಕೂಡಲೇ ಆತನನ್ನು ಆಸ್ಪತ್ರೆಗೆ ಕೊಂಡೊಯ್ದ ಕಾರಣ ಪ್ರಾಣ ಉಳಿದಿದೆ. ಪೊಲೀಸರು ಪ್ರಕರಣ ದಾಖಲಿಸಿ

ನಿಖಿಲ್‌ ಸೋಲಿನಿಂದ ಮನನೊಂದು ವಿಷ ಸೇವಿಸಿದ ಅಭಿಮಾನಿ Read More »

ಬಿಜೆಪಿಯ ವಕ್ಫ್‌ ಹೋರಾಟಕ್ಕೆ ಬಲ ತುಂಬಿದ ಮಹಾರಾಷ್ಟ್ರದ ಗೆಲುವು

ವೋಟ್‌ಬ್ಯಾಂಕ್‌ ಹೆಚ್ಚಿಸಿಕೊಳ್ಳಲು ಕಾಂಗ್ರೆಸ್‌ನಿಂದ ವಕ್ಫ್‌ ಮಂಡಳಿ ರಚನೆ ಎಂದು ಮೋದಿ ವಾಗ್ದಾಳಿ ಹೊಸದಿಲ್ಲಿ: ಮಹಾರಾಷ್ಟ್ರದ ವಿಧಾನಸಭೆ ಚುನಾವಣೆಯ ಭರ್ಜರಿ ಗೆಲುವು ಬಿಜೆಪಿಯ ವಕ್ಫ್‌ ವಿರುದ್ಧದ ಹೋರಾಟಕ್ಕೆ ಇನ್ನಷ್ಟು ಬಲ ತುಂಬಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಈಗಾಗಲೇ ಕೇಂದ್ರ ಸರಕಾರ ವಕ್ಫ್‌ ಕಾಯಿದೆ ತಿದ್ದಪಡಿಯತ್ತ ಮೊದಲ ಹೆಜ್ಜೆಯಿಟ್ಟಿದ್ದು, ಇದಕ್ಕಾಗಿ ಜೆಪಿಸಿಯನ್ನೂ ರಚನೆ ಮಾಡಿದೆ. ಇದೇ ವೇಳೆ ಕರ್ನಾಟಕವೂ ಸೇರಿದಂತೆ ಕೆಲವು ರಾಜ್ಯಗಳಲ್ಲಿ ವಕ್ಫ್‌ ಮಂಡಳಿ ಇದ್ದ ಜಮೀನುಗಳನ್ನೆಲ್ಲ ತನ್ನದು ಎಂದು ಹೇಳುತ್ತಿರುವುದು ದೊಡ್ಡ ವಿವಾದವಾಗಿ ಮಾರ್ಪಟ್ಟಿದೆ. ಈ ನಡುವೆ ಮಹಾರಾಷ್ಟ್ರದಲ್ಲಿ

ಬಿಜೆಪಿಯ ವಕ್ಫ್‌ ಹೋರಾಟಕ್ಕೆ ಬಲ ತುಂಬಿದ ಮಹಾರಾಷ್ಟ್ರದ ಗೆಲುವು Read More »

error: Content is protected !!
Scroll to Top