ಸುದ್ದಿ

ವಾಹನಗಳ ಮೇಲೆ ಉಗ್ರರ ದಾಳಿ : 50ಕ್ಕೂ ಹೆಚ್ಚು ಮಂದಿ ಸಾವು

ಇಸ್ಲಾಮಾನಾದ್: ಪಾಕಿಸ್ಥಾನದಲ್ಲಿ ನಾಗರಿಕರನ್ನು ಕರೆದೊಯ್ಯುತ್ತಿದ್ದ ವಾಹನಗಳ ಮೇಲೆ ಉಗ್ರರ ದಾಳಿ ನಡೆದಿದ್ದು, 50 ಜನರು ಸಾವನ್ನಪ್ಪಿದ್ದಾರೆ. 20 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಫ್ಘಾನಿಸ್ತಾನದ ಗಡಿಯಲ್ಲಿರುವ ಖೈಬರ್ ಪಖ್ತೂನ್‌ಖ್ವಾ ಪ್ರಾಂತ್ಯದ ಕರ‍್ರಂ ಜಿಲ್ಲೆಯಲ್ಲಿ ಗುರುವಾರ ಸಂಜೆ ಈ ಘಟನೆ ನಡೆದಿದೆ. ಪರಾಚಿನಾರ್‌ನಿಂದ ಖೈಬರ್ ಪಖ್ತೂನ್‌ಖ್ವಾದ ರಾಜಧಾನಿ ಪೇಷಾವರ್ ಕಡೆಗೆ ಹೊರಟಿದ್ದ ವಾಹನಗಳ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ.ಎಂಟು ಮಹಿಳೆಯರು ಮತ್ತು ಐದು ಮಕ್ಕಳು ಸೇರಿದಂತೆ 50 ಜನರು ಸಾವನ್ನಪ್ಪಿದ್ದು, 20 ಜನರು ಗಾಯಗೊಂಡಿದ್ದಾರೆ. ಸಾವನ್ನಪ್ಪಿದವರ […]

ವಾಹನಗಳ ಮೇಲೆ ಉಗ್ರರ ದಾಳಿ : 50ಕ್ಕೂ ಹೆಚ್ಚು ಮಂದಿ ಸಾವು Read More »

ವಿಕ್ರಂ ಗೌಡ ಸಹಚರರಿಗಾಗಿ ವ್ಯಾಪಕ ಶೋಧ

ಗಡಿಭಾಗಗಳಲ್ಲಿ ನಾಕಾಬಂಧಿ ಹಾಕಿ ವಾಹನ ತಪಾಸಣೆ ಕಾರ್ಕಳ : ಎನ್‌ಕೌಂಟರ್‌ಗೆ ಬಲಿಯಾಗಿರುವ ನಕ್ಸಲ್ ನಾಯಕ ವಿಕ್ರಂ ಗೌಡನ ಸಹಚರರ ಪತ್ತೆಗಾಗಿ ವ್ಯಾಪಕ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಹೆಬ್ರಿಯ ಪೀತಬೈಲಿನಲ್ಲಿ ಎನ್‌ಕೌಂಟರ್‌ ನಡೆಯುವ ಸಂದರ್ಭದಲ್ಲಿ ವಿಕ್ರಂ ಗೌಡನ ಜೊತೆಗೆ ಇಬ್ಬರು ಮಹಿಳೆಯರು ಹಾಗೂ ಓರ್ವ ಪುರುಷ ಇದ್ದ. ಅವರು ಕಾಡಿನೊಳಗೆ ಓಡಿಹೋಗಿ ತಪ್ಪಿಸಿಕೊಂಡಿದ್ದಾರೆ ಎಂದು ಎಎನ್‌ಎಫ್‌ ಅಧಿಕಾರಿಗಳು ಹೇಳುತ್ತಿದ್ದಾರೆ. ಇವರಲ್ಲದೆ ನಕ್ಸಲ್‌ ತಂಡದಲ್ಲಿ ಇನ್ನೂ ಕೆಲವರಿದ್ದು, ಒಟ್ಟು ಆರು ಮಂದಿ ಬಂದಿರುವ ಅನುಮಾನವಿದೆ. ಈ ಹಿನ್ನೆಲೆಯಲ್ಲಿ ಗಡಿಭಾಗಗಳಲ್ಲಿ ಚೆಕ್‌ಪೋಸ್ಟ್‌

ವಿಕ್ರಂ ಗೌಡ ಸಹಚರರಿಗಾಗಿ ವ್ಯಾಪಕ ಶೋಧ Read More »

ವಂಚನೆ ಪ್ರಕರಣ : ಗೌತಮ್‌ ಅದಾನಿ ವಿರುದ್ಧ ಅರೆಸ್ಟ್‌ ವಾರಂಟ್‌ | ಅಮೆರಿಕದಲ್ಲಿ ಅದಾನಿ ಸೇರಿ ಎಂಟು ಮಂದಿ ವಿರುದ್ಧ ಕೇಸ್‌ ದಾಖಲು

ನ್ಯೂಯಾರ್ಕ್ : ಅದಾನಿ ಗ್ರೂಪ್ ಮುಖ್ಯಸ್ಥ ಗೌತಮ್ ಅದಾನಿ ಸೇರಿ ಎಂಟು ಮಂದಿ ವಿರುದ್ಧ ಅಮೆರಿಕದಲ್ಲಿ ವಂಚನೆಯ ಕೇಸ್‌ ದಾಖಲಾಗಿದ್ದು, ಅರೆಸ್ಟ್‌ ವಾರಂಟ್‌ ಹೊರಡಿಸಲಾಗಿದೆ. ಸೌರಶಕ್ತಿ ಗುತ್ತಿಗೆಗಳನ್ನು ಪಡೆಯಲು ಅಧಿಕಾರಿಗಳಿಗೆ ಲಂಚ ನೀಡಿದ ಆರೋಪ ಅದಾನಿ ವಿರುದ್ಧ ಕೇಳಿಬಂದಿದೆ. ಕೆನಡಾದ ಪೆನ್ಶನ್ ಫಂಡ್ ಆದ ಸಿಡಿಪಿಕ್ಯೂನ ಮಾಜಿ ಎಂಡಿ, ಹಾಗೂ ಅಜುರೆ ಪವರ್ ಸಂಸ್ಥೆಯ ಮಾಜಿ ಎಕ್ಸಿಕ್ಯೂಟಿವ್ ಸೈರಿಲ್ ಕೆಬನೆಸ್ ಅವರೂ ಆರೋಪಿಗಳ ಪೈಕಿ ಒಬ್ಬರು. ಗೌತಮ್ ಅದಾನಿ, ಸೈರಿಲ್ ಕೆಬನೆಸ್ ಅವರಲ್ಲದೆ, ಸಾಗರ್ ಅದಾನಿ, ವಿನೀತ್

ವಂಚನೆ ಪ್ರಕರಣ : ಗೌತಮ್‌ ಅದಾನಿ ವಿರುದ್ಧ ಅರೆಸ್ಟ್‌ ವಾರಂಟ್‌ | ಅಮೆರಿಕದಲ್ಲಿ ಅದಾನಿ ಸೇರಿ ಎಂಟು ಮಂದಿ ವಿರುದ್ಧ ಕೇಸ್‌ ದಾಖಲು Read More »

ವಿಕ್ರಂ ಗೌಡ ಎನ್‌ಕೌಂಟರ್‌ ಕುರಿತು ನಿವೃತ್ತ ನ್ಯಾಯಾಧೀಶರ ಮೂಲಕ ತನಿಖೆಗೆ ಒತ್ತಾಯ

ಎನ್‌ಕೌಂಟರ್‌ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸುಧಾರಿತ ನಕ್ಸಲರು ಬೆಂಗಳೂರು: ನಕ್ಸಲ್‌ ಮುಖಂಡ ವಿಕ್ರಂ ಗೌಡ ಎನ್‌ಕೌಂಟರ್‌ ನಕಲಿ ಎಂಬ ದಟ್ಟ ಅನುಮಾನಗಳಿರುವ ಹಿನ್ನೆಲೆಯಲ್ಲಿ ಎನ್‌ಕೌಂಟರ್‌ನ ಸಾಚಾತನ ತಿಳಿಯಲು ನಿವೃತ್ತ ನ್ಯಾಯಾಧೀಶರ ಮೂಲಕ ತನಿಖೆ ನಡೆಸಬೇಕೆಂದು ಸುಧಾರಿತ ನಕ್ಸಲೀಯರು ಒತ್ತಾಯಿಸಿದ್ದಾರೆ. ವಿಕ್ರಂ ಗೌಡ ಅಲಿಯಾಸ್ ವಿಕ್ರಮ್ ಗೌಡ್ಲುವನ್ನು ಸೋಮವಾರ ರಾತ್ರಿ ಹೆಬ್ರಿಯ ಪೀತಬೈಲಿನಲ್ಲಿ ನಕ್ಸಲ್‌ ನಿಗ್ರಹ ಪಡೆಯವರು ಎನ್‌ಕೌಂಟರ್‌ ಮಾಡಿದ್ದಾರೆ. ಈ ಎನ್‌ಕೌಂಟರ್‌ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಸುಧಾರಿತ ನಕ್ಸಲೀಯರು ಎನ್‌ಕೌಂಟರ್ ನಿಜವೋ ನಕಲಿಯೋ ಎಂದು ತಿಳಿಯಲು ನಿವೃತ್ತ

ವಿಕ್ರಂ ಗೌಡ ಎನ್‌ಕೌಂಟರ್‌ ಕುರಿತು ನಿವೃತ್ತ ನ್ಯಾಯಾಧೀಶರ ಮೂಲಕ ತನಿಖೆಗೆ ಒತ್ತಾಯ Read More »

ಸಿಬಿಎಸ್‌ಇ 10, 12ನೇ ತರಗತಿ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಫೆ.15ರಿಂದ 10ನೇ ತರಗತಿ, ಫೆ.17ರಿಂದ 12ನೇ ತರಗತಿ ಪರೀಕ್ಷೆಗಳು ಆರಂಭ ಹೊಸದಿಲ್ಲಿ : ಸಿಬಿಎಸ್‌ಇ ಶಿಕ್ಷಣ ಮಂಡಳಿ 2025ನೇ ಸಾಲಿನ 10 ಮತ್ತು 12ನೇ ತರಗತಿ ಅಂತಿಮ ಬೋರ್ಡ್‌ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಸಿದೆ. ಆ ಪ್ರಕಾರ 10ನೇ ತರಗತಿ ಪರೀಕ್ಷೆ ಫೆಬ್ರವರಿ 15ರಿಂದ ಶುರುವಾಗಿ ಮಾರ್ಚ್‌ 18ರ ವರೆಗೆ ನಡೆಯಲಿದೆ. 12ನೇ ತರಗತಿ ಪರೀಕ್ಷೆಗಳು ಫೆಬ್ರವರಿ 17ರಿಂದ ಶುರುವಾಗಿ ಏಪ್ರಿಲ್‌ 4ರ ತನಕ ನಡೆಯಲಿವೆ. 10ನೇ ತರಗತಿಗೆ ಫೆ.15ರಂದು ಮೊದಲ ಪರೀಕ್ಷೆ ಇಂಗ್ಲಿಷ್‌ ಆಗಿರುತ್ತದೆ. ಅಂತೆಯೇ 12ನೇ

ಸಿಬಿಎಸ್‌ಇ 10, 12ನೇ ತರಗತಿ ಪರೀಕ್ಷೆ ವೇಳಾಪಟ್ಟಿ ಪ್ರಕಟ Read More »

ಶಿಕ್ಷಣ ಮಂತ್ರಿಗೆ ಕನ್ನಡ ಬರಲ್ಲ ಎಂದ ವಿದ್ಯಾರ್ಥಿ ಮೇಲೆ ಮಧು ಬಂಗಾರಪ್ಪ ಕೆಂಡಾಮಂಡಲ

ಆನ್‌ಲೈನ್‌ ಅಭಿಪ್ರಾಯ ಸಂಗ್ರಹ ವೇಳೆ ಸಚಿವರನ್ನು ಕೆಣಕಿದ ವಿದ್ಯಾರ್ಥಿ ಬೆಂಗಳೂರು : ಶಿಕ್ಷಣ ಸಚಿವರಿಗೆ ಕನ್ನಡ ಬರಲ್ಲ ಎಂದು ಓರ್ವ ವಿದ್ಯಾರ್ಥಿ ಸಚಿವ ಮಧು ಬಂಗಾರಪ್ಪ ಎದುರೇ ಹೇಳಿದ್ದು, ಇದರಿಂದ ಕೆಂಡಾಮಂಡಲವಾದ ಮಧು ಬಂಗಾರಪ್ಪ ಆ ವಿದ್ಯಾರ್ಥಿಯನ್ನು ಹುಡುಕಿ ಕ್ರಮ ಕೈಗೊಳ್ಳಬೇಖೆಂದು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ತಾಕೀತು ಮಾಡಿದ ಘಟನೆ ನಡೆದಿದೆ.ಬುಧವಾರ ವಿಧಾನಸೌಧದಲ್ಲಿ ನೀಟ್​ ಕೋಚಿಂಗ್​ ತರಬೇತಿ ಉದ್ಘಾಟನಾ ಸಮಾರಂಭದಲ್ಲಿ ಈ ಘಟನೆ ನಡೆದಿದೆ. ಉದ್ಘಾಟನೆ ಮುಗಿದು ಆನ್‌ಲೈನ್‌ನಲ್ಲಿ ಸಂವಾದ ನಡೆಸುವಾಗ ಓರ್ವ ವಿದ್ಯಾರ್ಥಿ ಶಿಕ್ಷಣ ಸಚಿವ

ಶಿಕ್ಷಣ ಮಂತ್ರಿಗೆ ಕನ್ನಡ ಬರಲ್ಲ ಎಂದ ವಿದ್ಯಾರ್ಥಿ ಮೇಲೆ ಮಧು ಬಂಗಾರಪ್ಪ ಕೆಂಡಾಮಂಡಲ Read More »

ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್‌

ಎರಡು ತಿಂಗಳ ಹಿಂದೆಯಷ್ಟೇ ವರ್ಗಾವಣೆಯಾಗಿದ್ದ ಬಂದಿದ್ದ ಅಧಿಕಾರಿಯ ಮನೆಗೆ ದಾಳಿ ಮಂಗಳೂರು: ಲೋಕಾಯುಕ್ತ ಅಧಿಕಾರಿಗಳ ತಂಡ ಗುರುವಾರ ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟ ಅಧಿಕಾರಿಗಳ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿದ್ದು, ಅದರಂತೆ ಮಂಗಳೂರಿನಲ್ಲಿ ಓರ್ವ ಅಧಿಕಾರಿಯ ಮನೆ ಮೇಲೂ ದಾಳಿಯಾಗಿದೆ.ಮಂಗಳೂರಿನ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಬೆಳಗ್ಗೆ ದಾಳಿ ನಡೆಸಿ ಶಾಕ್‌ ನೀಡಲಾಗಿದ್ದು, ಮನೆಯಲ್ಲಿ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.ಲೋಕಾಯುಕ್ತ ಎಸ್‌ಪಿ ನಟರಾಜ್ ನೇತೃತ್ವದಲ್ಲಿ ಏಕಕಾಲದಲ್ಲಿ ಅಧಿಕಾರಿಗಳ ತಂಡ ಮಂಗಳೂರಿನ

ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್‌ Read More »

ಅಬಕಾರಿ ಹಗರಣ : ಸಚಿವ ತಿಮ್ಮಾಪುರ ತಲೆದಂಡ?

ಅಧಿವೇಶನದಲ್ಲಿ ಮುಜುಗರದಿಂದ ಪಾರಾಗಲು ಸಚಿವರನ್ನು ಕೈಬಿಡುವ ಕುರಿತು ಚಿಂತನೆ ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ ಎಂದು ಮದ್ಯ ವ್ಯಾಪಾರಿಗಳು ಗಂಭೀರ ಆರೋಪ ಮಾಡುತ್ತಿರುವ ಹಿನ್ನೆಲೆಯಲ್ಲಿ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಅವರನ್ನು ಸಚಿವ ಸ್ಥಾನದಿಂದ ಕೈ ಬಿಡುವ ಕುರಿತು ಚಿಂತನೆ ನಡೆಯುತ್ತಿದೆ. ಅಬಕಾರಿ ಇಲಾಖೆಯ ಭ್ರಷ್ಟಾಚಾರ ಇತ್ತೀಚೆಗೆ ಬಹಳ ಸದ್ದು ಮಾಡಿದೆ. ಮದ್ಯ ವ್ಯಾಪಾರಿಗಳು ನೇರವಾಗಿ ರಾಜ್ಯಪಾಲರಿಗೆ ದೂರು ನೀಡಿದ್ದರು. ಇದರ ಬೆನ್ನಿಗೆ ಮಹಾರಾಷ್ಟ್ರ ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿಯ

ಅಬಕಾರಿ ಹಗರಣ : ಸಚಿವ ತಿಮ್ಮಾಪುರ ತಲೆದಂಡ? Read More »

ಪಿಯುಸಿ ವಿದ್ಯಾರ್ಥಿಗಳಿಗೆ ಸರಕಾರದಿಂದಲೇ ನೀಟ್‌ ಟ್ಯೂಷನ್‌

ರಾಜ್ಯದ ವಿದ್ಯಾರ್ಥಿಗಳಿಗೆ ವೈದ್ಯಕೀಯ ಸೀಟ್‌ ಕೊಡಿಸಲು ಪ್ರಯತ್ನ ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷದಿಂದ ನೀಟ್ ಕೋಚಿಂಗ್ ಪಡೆಯಲು ಟ್ಯೂಷನ್ ಸೆಂಟರ್​​ಗೆ ಹೋಗಿ ಲಕ್ಷ ಲಕ್ಷ ಹಣ ಖರ್ಚು ಮಾಡಬೇಕಿಲ್ಲ. ಬಡ ವಿದ್ಯಾರ್ಥಿಗಳ ವೈದ್ಯಕೀಯ ಶಿಕ್ಷಣದ ಕನಸು ಪೂರ್ತಿ ಮಾಡಲು ಸರ್ಕಾರವೇ ನೀಟ್‌ ಕೋಚಿಂಗ್‌ ನೀಡಲಿದೆ. ಪಿಯುಸಿಯ 25 ಸಾವಿರ ಅರ್ಹ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಟ್ ತರಬೇತಿ ನೀಡಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ವಿದ್ಯಾರ್ಥಿಗಳಿಗೆ ಉಚಿತ CET, NEET, JEE, ತರಬೇತಿ ಕಾರ್ಯಕ್ರಮಕ್ಕೆ ಬುಧವಾರ ಶಿಕ್ಷಣ ಸಚಿವ

ಪಿಯುಸಿ ವಿದ್ಯಾರ್ಥಿಗಳಿಗೆ ಸರಕಾರದಿಂದಲೇ ನೀಟ್‌ ಟ್ಯೂಷನ್‌ Read More »

ಬಿಪಿಎಲ್‌ ಕಾರ್ಡ್‌ ರದ್ದು ಮಾಡದಂತೆ ಸಿದ್ದರಾಮಯ್ಯ ಆದೇಶ

ಈಗಾಗಲೇ ರದ್ದಾಗಿರುವ ಕಾರ್ಡ್‌ಗಳನ್ನು ಸರಿಮಾಡಿಕೊಡಲು ಸೂಚನೆ ಬೆಂಗಳೂರು : ಬಿಪಿಎಲ್ ಕಾರ್ಡ್ ರದ್ದಾಗುತ್ತಿರುವ ವಿಚಾರ ತೀವ್ರ ಆಕ್ರೋಶಕ್ಕೆ ಗುರಿಯಾಗುತ್ತಿದ್ದಂತೆ ಎಚ್ಚೆತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವುದೇ ಬಿಪಿಎಲ್‌ ಕಾರ್ಡ್‌ ರದ್ದು ಮಾಡಬಾರದು ಎಂದು ಆದೇಶ ಹೊರಡಿಸಿದ್ದಾರೆ.ಸುಮಾರು 11 ಲಕ್ಷ ಬಿಪಿಎಲ್‌ ಕಾರ್ಡ್‌ಗಳನ್ನು ರದ್ದು ಮಾಡಿರುವ ಸರಕಾರದ ಕ್ರಮದ ವಿರುದ್ಧ ಸಾರ್ವಜನಿಕರು ಸಿಡಿದೆದ್ದಿದ್ದಾರೆ. ಎಲ್ಲೆಡೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿರುವುದರಿಂದ ಎಚ್ಚೆತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರಿ ನೌಕರರು ಮತ್ತು ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಯಾರೊಬ್ಬರ ಬಿಪಿಎಲ್​ ಕಾರ್ಡ್​​ ರದ್ದು ಮಾಡದಂತೆ ಆಹಾರ

ಬಿಪಿಎಲ್‌ ಕಾರ್ಡ್‌ ರದ್ದು ಮಾಡದಂತೆ ಸಿದ್ದರಾಮಯ್ಯ ಆದೇಶ Read More »

error: Content is protected !!
Scroll to Top