ಸುದ್ದಿ

ಖಾಸಗಿ ಬಸ್ ಸೇವಾ ವ್ಯವಸ್ಥೆಯು ನಷ್ಟದ ಅಂಚಿನಲ್ಲಿದೆ | ದ.ಕ. ಜಿಲ್ಲಾ ಸಿಟಿ ಬಸ್ಸು ಮಾಲಕರ ಸಂಘದ ಜತೆಗಿನ ಸಂವಾದ ಕಾರ್ಯಕ್ರಮದಲ್ಲಿ ಪದಾಧಿಕಾರಿಗಳ ಅಳಲು

ಮಂಗಳೂರು: 110 ವರ್ಷಗಳ ಇತಿಹಾಸವನ್ನು ಹೊಂದಿರುವ ದ.ಕ. ಜಿಲ್ಲೆಯಲ್ಲಿ ಖಾಸಗಿ ಬಸ್ಸು ಸೇವಾ ವ್ಯವಸ್ಥೆಯು ಪ್ರಸ್ತುತ ನಷ್ಟದ ಅಂಚಿನಲ್ಲಿದ್ದು, ತೆರಿಗೆಯಲ್ಲಿ ರಿಯಾಯಿತಿ, ಸಬ್ಸಿಡಿಯ ಮೂಲಕ ಸರಕಾರ ಪೂರಕವಾಗಿ ಸ್ಪಂದಿಸದಿದ್ದರೆ ಈ ವ್ಯವಸ್ಥೆ ಪತನಗೊಳ್ಳಲಿದೆ ಎಂಬ ಆತಂಕವನ್ನು ದ.ಕ. ಜಿಲ್ಲಾ ಖಾಸಗಿ ಬಸ್ ಮಾಲಕರ ಸಂಘ ವ್ಯಕ್ತಪಡಿಸಿದೆ. ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪ್ರೆಸ್‌ಕ್ಲಬ್‌ನಲ್ಲಿ ದ.ಕ. ಜಿಲ್ಲಾ ಸಿಟಿ ಬಸ್ಸು ಮಾಲಕರ ಸಂಘದ ಜತೆಗಿನ ಸಂವಾದ ಕಾರ್ಯಕ್ರಮದಲ್ಲಿ ಪದಾಧಿಕಾರಿಗಳು ಈ ಅಭಿಪ್ರಾಯ ವ್ಯಕ್ತಪಡಿಸಿದರು. ಸಂಘದ ಅಧ್ಯಕ್ಷ […]

ಖಾಸಗಿ ಬಸ್ ಸೇವಾ ವ್ಯವಸ್ಥೆಯು ನಷ್ಟದ ಅಂಚಿನಲ್ಲಿದೆ | ದ.ಕ. ಜಿಲ್ಲಾ ಸಿಟಿ ಬಸ್ಸು ಮಾಲಕರ ಸಂಘದ ಜತೆಗಿನ ಸಂವಾದ ಕಾರ್ಯಕ್ರಮದಲ್ಲಿ ಪದಾಧಿಕಾರಿಗಳ ಅಳಲು Read More »

ಲೀಗ್ ಮಾದರಿಯ ವಾಲಿಬಾಲ್ ಪಂದ್ಯ| ಸುಬ್ರಹ್ಮಣ್ಯ ಶ್ರೀ ರಕ್ಷಾ ತಂಡ ಪ್ರಥಮ, ಪ್ರಶಾಂತ್ ಸ್ಪೋರ್ಟ್ಸ್ ಕ್ಲಬ್‍ ದ್ವಿತೀಯ

ಸುಬ್ರಹ್ಮಣ್ಯ: ಸುಬ್ರಹ್ಮಣ್ಯದಲ್ಲಿ ನಡೆದ ಲೀಗ್ ಮಾದರಿಯ ಹೊನಲು ಬೆಳಕಿನ ಪುರುಷರ ವಾಲಿಬಾಲ್ ಪಂದ್ಯಾಟದಲ್ಲಿ ಉದಯಶಂಕರ ಭಟ್ ಮಾಲಕತ್ವದ ಶ್ರೀ ರಕ್ಷಾ ಸುಬ್ರಹ್ಮಣ್ಯ ತಂಡ ಪ್ರಥಮ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದೆ. ಉಮೇಶ ಕೆ.ಎನ್. ಮಾಲಕತ್ವದ ಪ್ರಶಾಂತ್ ಸ್ಪೋರ್ಟ್ಸ್ ಕ್ಲಬ್ ದ್ವಿತೀಯ ಸ್ಥಾನ ಹಾಗೂ ಜೀವನ್ ಮಾಲಕತ್ವದ ತಸ್ವಿಕ ಫ್ರೆಂಡ್ಸ್ ಸುಬ್ರಹ್ಮಣ್ಯ ತೃತೀಯ ಸ್ಥಾನವನ್ನು ತನ್ನದಾಗಿಸಿದೆ. ಹೊನಲು ಬೆಳಕಿನ ಲೀಗ್ ಮಾದರಿಯ ಪಂದ್ಯಾಟದಲ್ಲಿ ಒಟ್ಟು ಆರು ತಂಡಗಳು ಭಾಗವಹಿಸಿದ್ದವು. ಸಮಾರೋಪ ಸಮಾರಂಭದಲ್ಲಿ ಸುಬ್ರಹ್ಮಣ್ಯ ಕುಕ್ಕೆಶ್ರೀ ಫ್ರೆಂಡ್ಸ್ ಅಧ್ಯಕ್ಷ ಭವಿಷ್, ಉದ್ಯಮಿ

ಲೀಗ್ ಮಾದರಿಯ ವಾಲಿಬಾಲ್ ಪಂದ್ಯ| ಸುಬ್ರಹ್ಮಣ್ಯ ಶ್ರೀ ರಕ್ಷಾ ತಂಡ ಪ್ರಥಮ, ಪ್ರಶಾಂತ್ ಸ್ಪೋರ್ಟ್ಸ್ ಕ್ಲಬ್‍ ದ್ವಿತೀಯ Read More »

ನಾಳೆ (ಡಿ.6): ಬಿಜಿಎಸ್ ಶಿಕ್ಷಣ ಸಂಸ್ಥೆಯ ವಾರ್ಷಿಕ ಕ್ರೀಡಾಕೂಟ

ಮಂಗಳೂರು: ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ನಡಿ ಮಂಗಳೂರಿನ ಕಾವೂರಿನಲ್ಲಿ ಕಾರ್ಯಾಚರಿಸುತ್ತಿರುವ ಬಿಜಿಎಸ್ ಶಿಕ್ಷಣ ಸಂಸ್ಥೆಯ ವಾರ್ಷಿಕ ಕ್ರೀಡಾಕೂಟ ಡಿ.6 ಬುಧವಾರ ನಡೆಯಲಿದೆ. ಬೆಳಿಗ್ಗೆ 9 ಗಂಟೆಯಿಂದ ಬಿಜಿಎಸ್‍ ಪಿಯು ಕಾಲೇಜು ಕ್ರೀಡಾಂಗಣದಲ್ಲಿ ಕ್ರೀಡಾಕೂಟ ನಡೆಯಲಿದೆ. ಉದ್ಘಾಟನಾ ಸಮಾರಂಭದಲ್ಲಿ ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಡಾ.ಶ್ರೀ ಧರ್ಮಪಾಲನಾಥ ಸ್ವಾಮೀಜಿ ದಿವ್ಯ ಉಪಸ್ಥಿತರಿರುವರು. ಮುಖ್ಯ ಅತಿಥಿಯಾಗಿ ಸಂಸ್ಥೆಯ ಮ್ಯಾನೇಜರ್ ಸುಬ್ಬ ಕಾರಡ್ಕ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.

ನಾಳೆ (ಡಿ.6): ಬಿಜಿಎಸ್ ಶಿಕ್ಷಣ ಸಂಸ್ಥೆಯ ವಾರ್ಷಿಕ ಕ್ರೀಡಾಕೂಟ Read More »

ಲೀಗ್ ಮಾದರಿಯ ವಾಲಿಬಾಲ್ ಪಂದ್ಯಾಟ

ಸುಬ್ರಹ್ಮಣ್ಯ: ಕುಕ್ಕೆ ಫ್ರೆಂಡ್ಸ್ ಹಾಗೂ ಕಡಬ ತಾಲೂಕು ವಾಲಿಬಾಲ್ ಅಸೋಸಿಯೇಷನ್ ಜಂಟಿ ಆಶ್ರಯದಲ್ಲಿ ಆಹ್ವಾನಿತ ಆರು ತಂಡಗಳ ಲೀಗ್ ಮಾದರಿಯ ಹೊನ್ನಲು ಬೆಳಕಿನ ಪುರುಷರ ವಾಲಿಬಾಲ್ ಪಂದ್ಯಾಟ ಕಾಶಿ ಕಟ್ಟೆ ಬಳಿಯ ಕ್ರೀಡಾಂಗಣದಲ್ಲಿ ನಡೆಯಿತು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯ ಶ್ರೀವತ್ಸ ದೀಪ ಬೆಳಗಿ ಉದ್ಘಾಟಿಸಿ, ಗ್ರಾಮೀಣ ಪ್ರದೇಶವಾದ ಸುಬ್ರಹ್ಮಣ್ಯದಲ್ಲಿ ಯುವಕರು ಸಂಘಟಿಸಿ ನಡೆಸಿದ ಈ ವಾಲಿಬಾಲ್ ಪಂದ್ಯಾಟ ಯಶಸ್ವಿಯಾಗಿ ನೆರವೇರಲಿ ಎಂದು ಶುಭ ಹಾರೈಸಿದರು. ಮುಖ್ಯ ಅತಿಥಿಯಾಗಿ ಕಡಬ ತಾಲೂಕು ವಾಲಿಬಾಲ್

ಲೀಗ್ ಮಾದರಿಯ ವಾಲಿಬಾಲ್ ಪಂದ್ಯಾಟ Read More »

ಡಿ. 5ರಿಂದ ಕೆಂಪು ಕಲ್ಲು ಸಾಗಾಟ ಅನಿರ್ಧಿಷ್ಟಾವಧಿ ಬಂದ್

ಪುತ್ತೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಂಪು ಕಲ್ಲು ಸಾಗಾಟವನ್ನು ಡಿ. 5ರಿಂದ ಅನಿರ್ದಿಷ್ಟಾವಧಿಗಳ ಕಾಲ ಬಂದ್’ಗೆ ಕರೆ ನೀಡಲಾಗಿದೆ. ಕಡಬ ಹಾಗೂ ಪುತ್ತೂರು ತಾಲೂಕಿನಲ್ಲಿ ಡಿ. 5ರಿಂದ 12ರವರೆಗೆ ಅನಿರ್ಧಿಷ್ಟಾವಧಿ ಬಂದ್ ನಡೆಯಲಿದೆ. ಲಾರಿ ಬಿಡಿ ಭಾಗಗಳಿಗೆ ಮತ್ತು ಡಿಸೇಲ್ ಬೆಲೆ ಏರಿಕೆ ಆಗುತ್ತಿರುವುದನ್ನು ವಿರೋಧಿಸಿ, ಕೆಂಪು ಕಲ್ಲು ಸಾಗಾಟದಲ್ಲಿ ಬ್ರೋಕರ್’ಗಳ ಹಾವಳಿಯನ್ನು ವಿರೋಧಿಸಿ ಬಂದ್’ಗೆ ಕರೆ ನೀಡಲಾಗಿದೆ. ಕೆಂಪು ಕಲ್ಲು ಸಾಗಾಟ ಮಾಡಿ, ತೀರಾ ಕಡಿಮೆ ದರಕ್ಕೆ ಇಳಿಸುವುದು ಕಂಡುಬಂದಿದೆ. ಇದರಿಂದಾಗಿ ಎಲ್ಲಾ ಕೆಂಪು

ಡಿ. 5ರಿಂದ ಕೆಂಪು ಕಲ್ಲು ಸಾಗಾಟ ಅನಿರ್ಧಿಷ್ಟಾವಧಿ ಬಂದ್ Read More »

ಬಂಟ್ವಾಳ ತಾಲೂಕು ಗೌಡರ ಕ್ರೀಡೋತ್ಸವ | ಬೆಂಗಳೂರು ಕಂಬಳದಲ್ಲಿ ಕೋಣ ಓಡಿಸಿದ ವಿಜೇತರಿಗೆ, ಕ್ರೀಡಾ ಸಾಧಕರಿಗೆ ಸನ್ಮಾನ

ವಿಟ್ಲ: ಇಲ್ಲಿನ ಬಂಟ್ವಾಳ ತಾಲೂಕು ಗೌಡರ ಯುವ ವೇದಿಕೆ ನೇತೃತ್ವದಲ್ಲಿ ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘ, ಬಂಟ್ವಾಳ ತಾಲೂಕು ಗೌಡರ ಮಹಿಳಾ ಘಟಕದ ಸಹಕಾರದಲ್ಲಿ ಬಂಟ್ವಾಳ ತಾಲೂಕು ಮಟ್ಟದ ಗೌಡರ ಕ್ರೀಡೋತ್ಸವ ಡಿ. 3ರಂದು ವಿಟ್ಲ ವಿಠಲ ಪದವಿ ಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಿತು. ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಶಾಸಕ ಸಂಜೀವ ಮಠಂದೂರು, ರಾಷ್ಟ್ರಧ್ವಜವನ್ನು ವಿಶ್ವ ಮಟ್ಟಕ್ಕೆ ಎತ್ತಿ ತೋರಿಸಲು ಇರುವ ಏಕೈಕ ಕ್ಷೇತ್ರ ಕ್ರೀಡೆ. ಒಲಿಂಪಿಕ್ ಕ್ರೀಡಾಕೂಟದಲ್ಲೂ ಭಾರತದ ತ್ರಿವರ್ಣ ಧ್ವಜವನ್ನು

ಬಂಟ್ವಾಳ ತಾಲೂಕು ಗೌಡರ ಕ್ರೀಡೋತ್ಸವ | ಬೆಂಗಳೂರು ಕಂಬಳದಲ್ಲಿ ಕೋಣ ಓಡಿಸಿದ ವಿಜೇತರಿಗೆ, ಕ್ರೀಡಾ ಸಾಧಕರಿಗೆ ಸನ್ಮಾನ Read More »

ಪ್ರಜ್ಞಾ ಆಶ್ರಮದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ | ಕೇಶವ್ ಅಮೈ, ಮನು ಕುಮಾರ್, ನೇಹಾ ರೈ, ಅಬ್ದುಲ್ ಅಯೂಬ್, ಸುಬ್ರಮಣಿಗೆ ದಿವ್ಯಾಂಗ  ಸಾಧಕ ಪ್ರಶಸ್ತಿ ಪ್ರದಾನ

ಪುತ್ತೂರು: ವಿಶ್ವ ವಿಕಲಚೇತನರ ದಿನಾಚರಣೆ ಪ್ರಯುಕ್ತ ದಿವ್ಯಾಂಗ ಪ್ರತಿಭೆಗಳ ಸಾಹಿತ್ಯ ಸಂಭ್ರಮ ಹಾಗೂ ವಿಶಿಷ್ಟ ಸಾಧಕರಿಗೆ ಅಭಿನಂದನಾ ಕಾರ್ಯಕ್ರಮ ಡಿ. 3ರಂದು ಬಿರುಮಲೆ ಬೆಟ್ಟದ ಪ್ರಜ್ಞಾಶ್ರಮದಲ್ಲಿ ನಡೆಯಿತು. ಇದೇ ಸಂದರ್ಭ ವಿಶೇಷ ಚೇತನರಾಗಿ ವಿಶಿಷ್ಟ ಸಾಧನೆಯನ್ನು ಮಾಡಿದ ಯಶಸ್ವಿ ಉದ್ಯಮಿ ಸಮಾಜ ಸೇವಕರಾಗಿ ಗುರುತಿಸಿಕೊಂಡಿರುವ ಎಸ್.ಆರ್.ಕೆ. ಲ್ಯಾಡರ್ಸ್ ಮಾಲಕ ಕೇಶವ್ ಅಮೈ, ಸಾಹಿತ್ಯ ಹಾಗೂ ಸಂಘಟನೆಯಲ್ಲಿ ತೊಡಗಿಸಿಕೊಂಡಿರುವ ಮನು ಕುಮಾರ್, ಶಿಕ್ಷಣ ಕ್ಷೇತ್ರದ ಕುಮಾರಿ ನೇಹಾ ರೈ, ಝೀ ಕನ್ನಡ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಕಲಾವಿದ ಅಬ್ದುಲ್

ಪ್ರಜ್ಞಾ ಆಶ್ರಮದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ | ಕೇಶವ್ ಅಮೈ, ಮನು ಕುಮಾರ್, ನೇಹಾ ರೈ, ಅಬ್ದುಲ್ ಅಯೂಬ್, ಸುಬ್ರಮಣಿಗೆ ದಿವ್ಯಾಂಗ  ಸಾಧಕ ಪ್ರಶಸ್ತಿ ಪ್ರದಾನ Read More »

ಪುತ್ತೂರು ಗ್ರಾಮಾಂತರ ಠಾಣಾ ಎಸ್.ಐ. ಆಗಿ ನೇಮಕ

ಪುತ್ತೂರು: ಡಿ.ಸಿ.ಆರ್.ಬಿ. ಚಿಕ್ಕಮಗಳೂರು ಘಟಕದಲ್ಲಿದ್ದ ಜಂಬೂರಾಜ್ ಮಹಾಜನ್ ಅವರನ್ನು ಪುತ್ತೂರು ಗ್ರಾಮಾಂತರ ಠಾಣಾ ಪಿ.ಎಸ್.ಐ. ಆಗಿ ನೇಮಕಗೊಳಿಸಿ ಪೊಲೀಸ್ ಉಪ ಮಹಾನಿರೀಕ್ಷಕ ಚಂದ್ರಗುಪ್ತ ಆದೇಶಿಸಿದ್ದಾರೆ. ಇವರು ಈ ಹಿಂದೆ ಪುತ್ತೂರು ನಗರ ಠಾಣೆಯಲ್ಲಿ ಪಿ.ಎಸ್.ಐ. ಆಗಿ ಕರ್ತವ್ಯ ನಿರ್ವಹಿಸಿದ್ದರು. ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಪಿ.ಎಸ್.ಐ. ಆಗಿದ್ದ ಧನಂಜಯ ಬಿ.ಸಿ. ಅವರು ಪಶ್ಚಿಮ ವಲಯ ಕಚೇರಿಗೆ ಸ್ಥಳಾಂತರಗೊಂಡಿದ್ದು, ತೆರವಾದ ಹುದ್ದೆಗೆ ಜಂಬೂರಾಜ್ ಮಹಾಜನ್ ವರ್ಗಾವಣೆಗೊಂಡಿದ್ದಾರೆ.

ಪುತ್ತೂರು ಗ್ರಾಮಾಂತರ ಠಾಣಾ ಎಸ್.ಐ. ಆಗಿ ನೇಮಕ Read More »

ಜನೌಷಧಿ ಕೇಂದ್ರಕ್ಕೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ, ಸಂವಾದ

ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಯಶವಂತಪುರ ಸುಬೇದಾರ್ ಛತ್ರಂ ರಸ್ತೆಯಲ್ಲಿರುವ “ಪ್ರಧಾನಮಂತ್ರಿಗಳ ಜನೌಷಧಿ ಕೇಂದ್ರ”ಕ್ಕೆ ಭೇಟಿ ನೀಡಿ ಜನರ ಜೊತೆ ಸಂವಾದ ನಡೆಸಿದರು. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಜಾರ್ಖಂಡ್‍ನ ದಿಯೋಘರ್‍ನ ಏಮ್ಸ್‍ನಲ್ಲಿ 10 ಸಾವಿರನೇ ಜನೌಷಧಿ ಕೇಂದ್ರವನ್ನು ಜನತೆಗೆ ಸಮರ್ಪಿಸಿದ್ದಾರೆ. ಮಧ್ಯಮ ವರ್ಗ ಮತ್ತು ಬಡಜನರಲ್ಲಿ ಜನೌಷಧಿ ಕೇಂದ್ರಗಳ ಜನಪ್ರಿಯತೆ ಹೆಚ್ಚುತ್ತಿದೆ ಎಂದು ಅವರು ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು. ಕೆಲವು ಔಷಧಿಗಳು ಶೇ 70ರಷ್ಟು ಕಡಿಮೆ ದರಕ್ಕೆ ಲಭಿಸುತ್ತವೆ. ಕಳೆದ 9 ವರ್ಷಗಳಲ್ಲಿ, ದೇಶಾದ್ಯಂತ

ಜನೌಷಧಿ ಕೇಂದ್ರಕ್ಕೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ, ಸಂವಾದ Read More »

ಸಿಡಿಲು ಬಡಿದು ಸಹೋದರರಿಬ್ಬರು ಮೃತ್ಯು

ಭತ್ತ ಕಾಯಲು ಗದ್ದೆಗೆ ತೆರಳಿದ್ದ ಸಹೋದರರಿಬ್ಬರು ಸಿಡಿಲು ಬಡಿದು ಮೃತಪಟ್ಟ ಘಟನೆ ಶಿವಮೊಗ್ಗದ ಭದ್ರಾವತಿಯ ಹುಣಸೆಕಟ್ಟೆ ಜಂಕ್ಷನ್‌ನಲ್ಲಿ ನಡೆದಿದೆ. ಬೀರು (32) ಹಾಗೂ ಸುರೇಶ್ (30) ಸಿಡಿಲು ಬಡಿತದಿಂದ ಮೃತಪಟ್ಟವರು ಎನ್ನಲಾಗಿದೆ. ಇಬ್ಬರೂ ಮಂಗಳವಾರ ರಾತ್ರಿ ಕಟಾವಾಗಿದ್ದ ಭತ್ತದ ಗದ್ದೆಗೆ ಭತ್ತ ಕಾಯಲು ತೆರಳಿದ್ದರು. ಈ ವೇಳೆ ಸಿಡಿಲು ಬಡಿದು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಮೃತರ ಶವವನ್ನು ಭದ್ರಾವತಿಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಆಸ್ಪತ್ರೆಯ ಮುಂಭಾಗ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಭದ್ರಾವತಿ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ

ಸಿಡಿಲು ಬಡಿದು ಸಹೋದರರಿಬ್ಬರು ಮೃತ್ಯು Read More »

error: Content is protected !!
Scroll to Top