ಸುದ್ದಿ

ರಾಜ್ಯಾದ್ಯಂತ ಗ್ಯಾಸ್‌ ಸಿಲಿಂಡರ್‌ಗೆ ಹಾಹಾಕಾರ : ಮೆನು ಕಡಿತ ಮಾಡಿದ ಹೋಟೆಲ್‌ಗಳು

ಸಾವಿರಾರು ಮಾಲೀಕರು, ಲಕ್ಷಾಂತರ ಕಾರ್ಮಿಕರಿಗೆ ಸಂಕಷ್ಟ ಸ್ಥಿತಿ ಮಂಗಳೂರು : ಮಧ್ಯಪ್ರಾಚ್ಯದ ಯುದ್ಧದಿಂದಾಗಿ ರಾಜ್ಯದಲ್ಲಿ ಎದುರಾಗಿರುವ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಕೊರತೆ ಹೋಟೆಲ್ ಮಾಲೀಕರನ್ನು ಸಂಕಷ್ಟಕ್ಕೆ ದೂಡಿದೆ. ಕರಾವಳಿಯೂ ಸೇರಿದಂತೆ ರಾಜ್ಯಾದ್ಯಂತ ಕಮರ್ಷಿಯಲ್‌ ಸಿಲಿಂಡರ್‌ ಸಿಗದೆ ಹೋಟೆಲ್‌, ಬೇಕರಿ, ಕ್ಯಾಂಟೀನ್‌ ಮಾಲೀಕರು ಒದ್ದಾಡುತ್ತಿದ್ದಾರೆ. ಈಗಾಗಲೇ ಕೆಲವು ಹೋಟೆಲ್‌ಗಳು ಅನಿವಾರ್ಯವಾಗಿ ಮುಚ್ಚಿವೆ. ಸಿಲಿಂಡರ್ ಸಿಗದೆ ಅಡುಗೆ ಮಾಡುವುದು ಅಸಾಧ್ಯವಾಗಿದ್ದು, ಇನ್ನೂ ಹಲವು ಹೋಟೆಲ್‌ಗಳು ಮುಚ್ಚುವ ಹಂತಕ್ಕೆ ತಲುಪಿವೆ. ಪರಿಸ್ಥಿತಿ ಹೀಗೆ ಮುಂದುವರಿದರೆ ಬಹುತೇಕ ಹೋಟೆಲ್‌ಗಳನ್ನು ಮುಚ್ಚಬೇಕಾಗಬಹುದು ಎಂದು ಹೋಟೆಲ್‌ […]

ರಾಜ್ಯಾದ್ಯಂತ ಗ್ಯಾಸ್‌ ಸಿಲಿಂಡರ್‌ಗೆ ಹಾಹಾಕಾರ : ಮೆನು ಕಡಿತ ಮಾಡಿದ ಹೋಟೆಲ್‌ಗಳು Read More »

ರೈಲಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 201 ಮೊಬೈಲ್‌ ವಶ

ವಾರಿಸುದಾರರಿಲ್ಲದ ಬ್ಯಾಗ್‌ ಪರಿಶೀಲಿಸಿದಾಗ ಸಿಕ್ಕಿದ ಮೊಬೈಲ್‌ ಮಂಗಳೂರು: ರೈಲಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 201 ಹಳೆಯ ಮೊಬೈಲ್‌ಗಳನ್ನು ರೈಲ್ವೆ ರಕ್ಷಣಾ ದಳದವರು (ಆರ್‌ಪಿಎಫ್) ಮಂಗಳೂರು ಜಂಕ್ಷನ್ ನಿಲ್ದಾಣದಲ್ಲಿ ಸೋಮವಾರ ವಶಪಡಿಸಿಕೊಂಡಿದ್ದಾರೆ. ಕೇರಳ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಣ್ಗಾವಲು ತೀವ್ರಗೊಳಿಸಿರುವ ದಕ್ಷಿಣ ರೈಲ್ವೆಯ ಪಾಲಕ್ಕಾಡ್ ವಿಭಾಗದ ಆರ್‌ಪಿಎಫ್ ರೈಲುಗಳ ಮೂಲಕ ನಗದು, ಚಿನ್ನ ಮತ್ತು ಇತರ ಬೆಲೆಬಾಳುವ ವಸ್ತುಗಳ ಅಕ್ರಮ ಸಾಗಾಟದ ವಿರುದ್ಧ ನಡೆಸಿದ ವಿಶೇಷ ಕಾರ್ಯಾಚರಣೆಯ ವೇಳೆ ಸುಮಾರು 10.05 ಲಕ್ಷ ರೂ. ಮೌಲ್ಯದ 201 ಹಳೆಯ ಮೊಬೈಲ್

ರೈಲಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 201 ಮೊಬೈಲ್‌ ವಶ Read More »

ಚಿನ್ನಾಭರಣ ಕಳ್ಳತನ ಪ್ರಕರಣ : 24 ಗಂಟೆಯಲ್ಲಿ ಆರೋಪಿ ಅರೆಸ್ಟ್‌

ಮನೆಯಿಂದ ಹಾಡಹಗಲೇ ಚಿನ್ನಾಭರಣ ಕಳ್ಳತನ ಮಾಡಿದ್ದ ಆರೋಪಿ ಮಂಗಳೂರು: ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಉಲ್ಲಾಸ್ ನಗರದಲ್ಲಿ ಮನೆಯಿಂದ ಹಾಡಹಗಲೇ ಚಿನ್ನಾಭರಣ ಕಳ್ಳತನವಾದ ಪ್ರಕರಣವನ್ನು ಪೊಲೀಸರು 24 ಗಂಟೆಯೊಳಗೆ ಭೇದಿಸಿ ಆರೋಪಿಯನ್ನು ಬಂಧಿಸಿ ಕಳವು ಮಾಡಿದ ಸೊತ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಮಾರ್ಚ್ 7ರಂದು ಮಧ್ಯಾಹ್ನ ಸುಮಾರು 12 ಗಂಟೆಯ ವೇಳೆ ಮನೆಯಲ್ಲಿದ್ದವರು ಹೊರಗಿದ್ದ ಸಂದರ್ಭದಲ್ಲಿ ಉಲ್ಲಾಸ್ ನಗರದ ಮನೆಯೊಂದರ ಬಾಗಿಲಿನ ಬೀಗ ಮುರಿದು ಒಳನುಗ್ಗಿದ ಕಳ್ಳರು ಸುಮಾರು 4,80,000 ರೂ. ಮೌಲ್ಯದ 39 ಗ್ರಾಂ ಚಿನ್ನಾಭರಣ ಹಾಗೂ

ಚಿನ್ನಾಭರಣ ಕಳ್ಳತನ ಪ್ರಕರಣ : 24 ಗಂಟೆಯಲ್ಲಿ ಆರೋಪಿ ಅರೆಸ್ಟ್‌ Read More »

4,175 ಲೀಟರ್‌ ಡೀಸೆಲ್‌ ಅಕ್ರಮ ದಾಸ್ತಾನು ಪತ್ತೆ

ಮನೆಯ ಶೆಡ್‌ನಲ್ಲಿ ಬ್ಯಾರಲ್‌ಗಳಲ್ಲಿ ಅಪಾಯಕಾರಿಯಾಗಿ ತುಂಬಿಸಿಟ್ಟಿದ್ದ ಡೀಸೆಲ್‌ ಉಪ್ಪಿನಂಗಡಿ: ಮಧ್ಯಪ್ರಾಚ್ಯದ ಯುದ್ಧದಿಂದಾಗಿ ಇಂಧನ ಅಭಾವದ ಭೀತಿ ತಲೆದೋರಿರುವಂತೆಯೇ ಉಪ್ಪಿನಂಗಡಿಯಲ್ಲಿ 4 ಸಾವಿರ ಲೀಟರ್‌ಗೂ ಅಧಿಕ ಡೀಸೆಲ್‌ ಅಕ್ರಮವಾಗಿ ದಾಸ್ತಾನು ಇಟ್ಟಿರುವುದು ಪತ್ತೆಯಾಗಿದೆ. ಅಕ್ರಮವಾಗಿ ಶೇಖರಿಸಿದ್ದ ಸುಮಾರು 4,175 ಲೀಟರ್ ಡೀಸೆಲ್‌ನ್ನು ಪೊಲೀಸರು ಪತ್ತೆಹಚ್ಚಿ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಮಾರ್ಚ್ 9ರಂದು ರಾತ್ರಿ ಬೆಳ್ತಂಗಡಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ರೋಹಿಣಿ ಸಿ.ಕೆ ಅವರಿಗೆ ಬಂದ ಖಚಿತ ಮಾಹಿತಿಯ ಮೇರೆಗೆ ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಮುದಲ್ತಿಯಾರ್

4,175 ಲೀಟರ್‌ ಡೀಸೆಲ್‌ ಅಕ್ರಮ ದಾಸ್ತಾನು ಪತ್ತೆ Read More »

ಡಿಕೆಶಿ ಡಿನ್ನರ್‌ ಪಾರ್ಟಿಯಲ್ಲಿ ಸಿದ್ದರಾಮಯ್ಯ ಭಾಗಿ

ಪವರ್ ಶೇರಿಂಗ್ ಗುದ್ದಾಟದ ಹಿನ್ನೆಲೆಯಲ್ಲಿ ಕುತೂಹಲ ಮೂಡಿಸಿದ್ದ ಭೋಜನಕೂಟ ಬೆಂಗಳೂರು: ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ ತುಂಬಿದ ಪ್ರಯುಕ್ತ ಮಂಗಳವಾರ ರಾತ್ರಿ ಏರ್ಪಡಿಸಿದ್ದ ಡಿನ್ನರ್‌ ಪಾರ್ಟಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹಿತ ಪಕ್ಷದ ಘಟಾನುಘಟಿ ನಾಯಕರು ಭಾಗಿಯಾಗಿದ್ದರು. ರಾಜಕೀಯ ಲೆಕ್ಕಾಚಾರ, ಪವರ್ ಶೇರಿಂಗ್ ಗುದ್ದಾಟದ ಹಿನ್ನೆಲೆಯಲ್ಲಿ ಕುತೂಹಲ ಮೂಡಿಸಿದ್ದ ಈ ಭೋಜನಕೂಟ ಸುಸೂತ್ರವಾಗಿ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಸಿಎಂ ಸಿದ್ದರಾಮಯ್ಯ ಸೇರಿದಂತೆ ಸಚಿವರು ಹಾಗೂ ಶಾಸಕರು ಇಂದಿನ ಭೋಜನ ಕೂಟದಲ್ಲಿ ಭಾಗಿಯಾಗಿದ್ದರು. ಇತ್ತೀಚೆಗಷ್ಟೇ ಕೆಪಿಸಿಸಿ ಅಧ್ಯಕ್ಷ

ಡಿಕೆಶಿ ಡಿನ್ನರ್‌ ಪಾರ್ಟಿಯಲ್ಲಿ ಸಿದ್ದರಾಮಯ್ಯ ಭಾಗಿ Read More »

ಸರ್ಕಾರಿ ವೈದ್ಯರ ಮುಷ್ಕರ ವಾಪಸ್‌

ಬಹುತೇಕ ಎಲ್ಲ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ಸರ್ಕಾರ ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ವೈದ್ಯಾಧಿಕಾರಿಗಳ ಸಂಘ ಇಂದಿನಿಂದ ಮಾಡಲುದ್ದೇಶೀಸಿದ್ದ ಮುಷ್ಕರವನ್ನು ಹಿಂಪಡೆದುಕೊಂಡಿದೆ. ಖಾಲಿ ಹುದ್ದೆಗಳ ಭರ್ತಿ ಸೇರಿ 14 ಬೇಡಿಕೆಗಳ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಒಪಿಡಿ ಬಂದ್ ಮಾಡಿ ಸರ್ಕಾರಿ ವೈದ್ಯರು ಮುಷ್ಕರಕ್ಕೆ ಕರೆ ನೀಡಿದ್ದರು. ಇದರಿಂದ ರಾಜ್ಯದಲ್ಲಿ ಹೆಲ್ತ್ ಎಮರ್ಜೆನ್ಸಿ ಉಂಟಾಗಬಹುದು ಎಂದು ಎಚ್ಚೆತ್ತ ರಾಜ್ಯ ಸರ್ಕಾರ, ವೈದ್ಯಾಧಿಕಾರಿಗಳ ಸಂಘದ ಜತೆ ನಡೆಸಿದ ಸಂಧಾನ ಸಭೆ ಯಶಸ್ವಿಯಾಗಿದೆ. 14 ಬೇಡಿಕೆಗಳ ಪೈಕಿ 13 ಬೇಡಿಕೆ

ಸರ್ಕಾರಿ ವೈದ್ಯರ ಮುಷ್ಕರ ವಾಪಸ್‌ Read More »

ವಿಜೃಂಭಣೆಯಿಂದ ನಡೆದ ಮಕ್ಕಳ ಮನೆಯ ವಾರ್ಷಿಕೋತ್ಸವ ‘ವರ್ಷ ಸಂಭ್ರಮ 2026’

ಪುತ್ತೂರು: ಪ್ರಣತಿ ಎಜುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ನಡೆಸುತ್ತಿರುವ ಮಕ್ಕಳ ಮನೆಯ ವಾರ್ಷಿಕೋತ್ಸವ ‘ವರ್ಷ ಸಂಭ್ರಮ 2026’ ಪುತ್ತೂರಿನ ಟೌನ್‌ ಹಾಲ್‌ನಲ್ಲಿ ನಡೆಯಿತು. ರಾಮಕೃಷ್ಣ ಪ್ರೌಢಶಾಲೆಯ ನಿವೃತ್ತ ಮುಖ್ಯಗುರು, ಹಾಗೆಯೇ ರಾಜ್ಯ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಶ್ರೀಧರ ರೈ ಮತ್ತು ಮಕ್ಕಳ ಮನೆಯ ಮೂಲ ಸಂಸ್ಥಾಪಕ ಮಹಾಲಿಂಗೇಶ್ವರ ಭಟ್ ದಿವ್ಯ ಹಸ್ತದಿಂದ‌‌ ಉದ್ಘಾಟನೆ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಶ್ರೀಧರ್ ರೈ ಅವರು ಮಕ್ಕಳನ್ನುದ್ದೇಶಿಸಿ ಮಾತನಾಡಿದರು. ಜನ್ವಿ, ದುತಿ, ಆರ್ವಿ, ಮಾನುಶಿ, ವೈಶ್ವಿ ಕಾರ್ಯಕ್ರಮದ ಮೊದಲಿನ ಅಂಗವಾದ

ವಿಜೃಂಭಣೆಯಿಂದ ನಡೆದ ಮಕ್ಕಳ ಮನೆಯ ವಾರ್ಷಿಕೋತ್ಸವ ‘ವರ್ಷ ಸಂಭ್ರಮ 2026’ Read More »

ಬಾವಿ ತೋಡಲು ‌ಸ್ಪೋಟಕ ಬಳಕೆ: ಸಮೀಪದ ಮನೆಗಳಿಗೆ ಹಾನಿ, ದೂರು ದಾಖಲು

ಕಡಬ: ತಾಲೂಕಿನ ರಾಮಕುಂಜದಲ್ಲಿ ಬಾವಿ ನೋಡುವ ಸಮಯದಲ್ಲಿ ವ್ಯಕ್ತಿಯೊಬ್ಬರು ಸ್ಪೋಟಕಗಳನ್ನು ಬಳಕೆ ಮಾಡಿದ್ದು, ಇದರಿಂದ ನೆರೆಕರೆಯ ‌ಮನೆಗಳಿಗೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ. ಈ ಸಂಬಂಧ ಕಡಬ ಠಾಣೆಯಲ್ಲಿ ದೂರು ದಾಖಲಾಗಿದೆ. ಮೈಸೂರು ನಿವಾಸಿ ಸೋಮಶೇಖರ್ ಎಂಬವರು 23 ಸೆಂಟ್ಸ್ ಭೂಮಿ ಖರೀದಿ ಮಾಡಿದ್ದರು. ಅದರಲ್ಲಿರುವ ಅಡಿಕೆ ಮರಗಳಿಗೆ ನೀರಿನ ಅವಶ್ಯಕತೆ ಪೂರೈಸಲು ಬಾವಿ ತೋಡಿಸುತ್ತಿದ್ದರು. ಈ ವೇಳೆ ಸುಮಾರು 15 ಅಡಿ ಆಳದಲ್ಲಿ ಕಲ್ಲು ಸಿಕ್ಕಿದ್ದು, ಅದನ್ನು ಒಡೆಯುವ ನಿಟ್ಟಿನಲ್ಲಿ ಸ್ಪೋಟಕಗಳನ್ನು ಬಳಕೆ ಮಾಡಿದ್ದರು. ಮಾ.

ಬಾವಿ ತೋಡಲು ‌ಸ್ಪೋಟಕ ಬಳಕೆ: ಸಮೀಪದ ಮನೆಗಳಿಗೆ ಹಾನಿ, ದೂರು ದಾಖಲು Read More »

ದೇಗುಲ, ವಿವೇಕಾನಂದ ಪ್ರತಿಮೆ ತೆರವು: ಹಿಂದೂ ಮುಖಂಡರ ಆಕ್ರೋಶ

ಹುಬ್ಬಳ್ಳಿ: ನೈಋತ್ಯ ರೈಲ್ವೆ ಗಾಲ್ಫ್ ಮೈದಾನದಲ್ಲಿರುವ ಬನ್ನಿ ಮಹಾಕಾಳಿ ದೇಗುಲ‌ ಮತ್ತು ವಿವೇಕಾನಂದರ ಪ್ರತಿಮೆಯನ್ನು ತೆರವು ಮಾಡಿರುವುದನ್ನು ಖಂಡಿಸಿ ಹಿಂದೂ ಸಂಘಟನೆಗಳಾದ ಭಜರಂಗ ದಳ ಮತ್ತು ವಿಶ್ವ ಹಿಂದೂ ಪರಿಷತ್ ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ. ನೈಋತ್ಯ ರೈಲ್ವೆ ವಿಭಾಗೀಯ ಕಚೇರಿಗೆ ಬಂದ ಪ್ರತಿಭಟನೆ ನಿರತರು ತಮ್ಮ ಮನವಿಗೆ ‌ಸ್ಪಂದಿಸದ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ವಿಭಾಗೀಯ ವ್ಯವಸ್ಥಾಪಕರ ನಾಮಫಲಕವನ್ನು ಕಿತ್ತೆಸೆದು ಅಸಮಾಧಾನ ಪ್ರದರ್ಶಿಸಿದರು. ದೇಗುಲ ಮತ್ತು ವಿವೇಕಾನಂದರ ಮೂರ್ತಿ ತೆರವು ಮಾಡಿ ಹಿಂದೂಗಳ ಭಾವನೆಗಳ ಜೊತೆ ಅಧಿಕಾರಿಗಳು

ದೇಗುಲ, ವಿವೇಕಾನಂದ ಪ್ರತಿಮೆ ತೆರವು: ಹಿಂದೂ ಮುಖಂಡರ ಆಕ್ರೋಶ Read More »

ಸಾರ್ವಜನಿಕವಾಗಿ ತಲವಾರ್ ಪ್ರದರ್ಶಿಸಿದ ವ್ಯಕ್ತಿಯ ಮೇಲೆ ಸಾರ್ವಜನಿಕರಿಂದ ಹಲ್ಲೆ: ದೂರು – ಪ್ರತಿದೂರು ದಾಖಲು

ಪುತ್ತೂರು: ಸಾರ್ವಜನಿಕವಾಗಿ ತಲವಾರು ತೋರಿಸಿ ನಾಗರಿಕರಿಗೆ ಭಯ ಹುಟ್ಟಿಸಿದ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದೇ ಸಂದರ್ಭದಲ್ಲಿ ತಲವಾರು ‌ಪ್ರದರ್ಶಿಸಿದ ಆರೋಪಿಯ ಮೇಲೆ ಸ್ಥಳೀಯರು ಹಲ್ಲೆ ನಡೆಸಿರುವ ಪರಿಣಾಮ ಆತ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಮುಕ್ವೆ ಮಸೀದಿಯ ಸಮೀಪ ನರಿಮೊಗರು ನಿವಾಸಿ ಮಹಮ್ಮದ್ ಸಿರಾಜುದ್ದೀನ್ ಎಂಬವರು ನಿಂತಿದ್ದಾಗ ಅದೇ ಗ್ರಾಮದ ಅಬ್ದುಲ್ ರಹಮಾನ್ ಎಂಬಾತ ಈ ಮೊದಲೇ ನಡೆದಿದ್ದ ಗಲಾಟೆಯೊಂದಕ್ಕೆ ‌ಸಂಬಂಧಿಸಿದ ಹಾಗೆ ತಕರಾರು ತೆಗೆದು ಅಲ್ಲಿಂದ ಹೋಗಿದ್ದ. ಆ ಬಳಿಕ ಸಿರಾಜುದ್ದೀನ್

ಸಾರ್ವಜನಿಕವಾಗಿ ತಲವಾರ್ ಪ್ರದರ್ಶಿಸಿದ ವ್ಯಕ್ತಿಯ ಮೇಲೆ ಸಾರ್ವಜನಿಕರಿಂದ ಹಲ್ಲೆ: ದೂರು – ಪ್ರತಿದೂರು ದಾಖಲು Read More »

error: Content is protected !!
Scroll to Top