ಸುದ್ದಿ

ಬೈಕ್‍ ಗೆ ಕಾರು ಡಿಕ್ಕಿ ಹೊಡೆಸಿ ಕೊಲೆಗೆ ಯತ್ನಿಸಿದ  ಆರೋಪಿಗೆ  ನ್ಯಾಯಾಂಗ  ಬಂಧನ

ಮಂಗಳೂರು: ನಗರದ ಸಮೀಪ ಹಳೆಯ ದ್ವೇಷಕ್ಕೆ ಸಂಬಂಧಿಸಿ ಬಿಜೈ ಕಾಪಿಕಾಡ್ 6ನೇ ಕ್ರಾಸ್‌ನಲ್ಲಿ ಬೈಕಿಗೆ ಕಾರು ಢಿಕ್ಕಿ ಹೊಡೆಸಿ ಬೈಕ್ ಸವಾರನನ್ನು ಕೊಲೆ ಮಾಡಲು ಯತ್ನಿಸಿದ ಘಟನೆಗೆ ಸಂಬಂಧಿಸಿದಂತೆ ಬಂಧಿತ ಆರೋಪಿ ಸತೀಶ್ ಕುಮಾರ್‌ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ಪಾದಚಾರಿ ಮಹಿಳೆ ಯಲ್ಲವ್ವ ಉಪ್ನಾಳ ಮತ್ತು ಬೈಕ್ ಸವಾರ ಮುರಳಿ ಪ್ರಸಾದ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಹಿಳೆಯು ಗುರುವಾರ ಬೆಳಗ್ಗೆ ಕೆಲಸಕ್ಕೆ ತೆರಳುತ್ತಿದ್ದಾಗ ಈ ಘಟನೆ ನಡೆದಿತ್ತು ಎಂದು ತಿಳಿದು ಬಂದಿದೆ. ಪೊಲೀಸರು […]

ಬೈಕ್‍ ಗೆ ಕಾರು ಡಿಕ್ಕಿ ಹೊಡೆಸಿ ಕೊಲೆಗೆ ಯತ್ನಿಸಿದ  ಆರೋಪಿಗೆ  ನ್ಯಾಯಾಂಗ  ಬಂಧನ Read More »

ಕೆಲಂಬೀರಿಯಲ್ಲಿ ಶ್ರೀ ಬ್ರಹ್ಮಬೈದೆರುಗಳ ನೇಮೋತ್ಸವ

ಕುದ್ಮಾರು : ಶ್ರೀ ಬ್ರಹ್ಮಬೈದೆರುಗಳ ಗರಡಿ , ಕೆಲಂಬೀರಿ ಕುದ್ಮಾರುವಿನಲ್ಲಿ ಇಂದು ಬೆಳಗ್ಗೆ 7 ಗಂಟೆಗೆ ಶ್ರೀ ಕೊಡಮಣಿತ್ತಾಯ ನೇಮೋತ್ಸವ ನಡೆಯಿತು. ಬಳಿಕ ಶ್ರೀ ಬ್ರಹ್ಮಬೈದೆರುಗಳ ನೇಮೋತ್ಸವ ನಡೆಯಲಿದ್ದು, ಸಂಜೆ 4 ಗಂಟೆಗೆ  ಶ್ರೀ ಬ್ರಹ್ಮಬೈದೆರುಗಳ ಭಂಡಾರ ತೆಗೆಯುವುದು, ರಾತ್ರಿ 6 ಗಂಟೆಗೆ ಪಂಚಲಿಂಗೇಶ್ವರ ಕುಣಿತ ಭಜನಾ ಮಕ್ಕಳ ತಂಡ, ಕುದ್ಮಾರು ಇವರಿಂದ ಭಜನಾ ಕಾರ್ಯಕ್ರಮ ನೆರವೇರಲಿದೆ. ರಾತ್ರಿ 7ರಿಂದ ಗರಡಿಯಲ್ಲಿ ಗಂಧಪ್ರಸಾದ ವಿತರಣೆ, ರಾತ್ರಿ 8:30 ಅನ್ನಸಂತರ್ಪಣೆ,  ಇಂದು ರಾತ್ರಿ 9 ಗಂಟೆಗೆ ಶ್ರೀ ಬ್ರಹ್ಮಬೇದೆರುಗಳ

ಕೆಲಂಬೀರಿಯಲ್ಲಿ ಶ್ರೀ ಬ್ರಹ್ಮಬೈದೆರುಗಳ ನೇಮೋತ್ಸವ Read More »

ಪುತ್ತೂರು ತಾಲೂಕು ಕಚೇರಿಗೆ ರೈಡ್ | ಪ್ರತೀ ಕಚೇರಿಗೆ ತೆರಳಿ ಹಾಜರಾತಿ ಪರಿಶೀಲಿಸಿದ ಶಾಸಕ ಅಶೋಕ್ ರೈ

ಪುತ್ತೂರು: ತಾಲೂಕು ಕಚೇರಿಯ ಸಿಬಂದಿಗಳು ಸರಿಯಾದ ಸಮಯಕ್ಕೆ ಕಚೇರಿಗೆ ಬರುತ್ತಿಲ್ಲ, ಕೆಲವೊಂದು ಕಚೇರಿಗೆ ಹಗಲು ವೇಳೆ  ಬಾಗಿಲು ಹಾಕಿರುತ್ತಾರೆ ಎಂದು ದೂರು ಬಂದ ಹಿನ್ನೆಲೆಯಲ್ಲಿ ಶನಿವಾರ ಶಾಸಕ ಅಶೋಕ್ ರೈ ಅವರು ತಾಲೂಕು ಕಚೇರಿಗೆ ದಾಳಿ ನಡೆಸಿ ಹಾಜರಾತಿ ಪರಿಶೀಲನೆ ನಡೆಸಿದ್ದಾರೆ. ಮಿನಿ ವಿಧಾನ ಸೌಧದಲ್ಲಿರುವ ಪ್ರತೀ ಕಚೇರಿಗೂ ಶಾಸಕರು ಭೇಟಿ ನೀಡಿ ಪರಿಶೀಲನೆ ನಡೆಸಿದರು.‌ಈ ವೇಳೆ ಎಡಿಎಲ್  ಆರ್ ಕಚೇರಿಯಲ್ಲಿ ಯಾರೂ ಇರಲಿಲ್ಲ. ಅಧಿಕಾರಿಯ ಬಗ್ಗೆ ಪರಿಶೀಲನೆ ನಡೆಸಿದ ಶಾಸಕರು ಅಧಿಕಾರಿ ಇಲ್ಲದಿದ್ದರೆ ಕಚೇರಿಯನ್ನು ಯಾಕೆ

ಪುತ್ತೂರು ತಾಲೂಕು ಕಚೇರಿಗೆ ರೈಡ್ | ಪ್ರತೀ ಕಚೇರಿಗೆ ತೆರಳಿ ಹಾಜರಾತಿ ಪರಿಶೀಲಿಸಿದ ಶಾಸಕ ಅಶೋಕ್ ರೈ Read More »

ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ : ರನ್ಯಾ ರಾವ್‌ ತಂತ್ರಗಳು ಒಂದೊಂದಾಗಿ ಬಯಲು

ಸರಕಾರಿ ಕಾರಲ್ಲೇ ಚಿನ್ನ ಕಳ್ಳ ಸಾಗಾಟ ಬೆಂಗಳೂರು : ದುಬೈಯಿಂದ ಚಿನ್ನ ಕಳ್ಳ ಸಾಗಾಟ ಮಾಡಿ ಸಿಕ್ಕಿಬಿದ್ದಿರುವ ನಟಿ ರನ್ಯಾ ರಾವ್‌ ಕಳ್ಳ ಸಾಗಾಟಕ್ಕೆ ಬಳಸಿದ ತಂತ್ರವನ್ನು ಪತ್ತೆಹಚಿದ್ದಾರೆ. ರನ್ಯಾ ಕಳ್ಳ ಮಾರ್ಗದಲ್ಲಿ ತಂದ ಚಿನ್ನವನ್ನು ವಿಮಾನ ನಿಲ್ದಾಣದಿಂದ ಸಾಗಿಸಲು ಕರ್ನಾಟಕ ಸರಕಾರದ ಕಾರನ್ನೇ ಬಳಸುತ್ತಿದ್ದಳು ಎಂದು ಡಿಆರ್‌ಐ ಅಧಿಕಾರಿಗಳು ತಿಳಿಸಿದ್ದಾರೆ.ರನ್ಯಾ ರಾವ್‌ ಮಲತಂದೆ ರಾಮಚಂದ್ರ ರಾವ್‌ ಐಪಿಎಸ್‌ ದರ್ಜೆಯ ಪೊಲೀಸ್‌ ಅಧಿಕಾರಿಯಾಗಿದ್ದು, ಡಿಜಿಪಿ ಹುದ್ದೆಯಲ್ಲಿದ್ದರು. ತಂದೆಯ ಅಧಿಕಾರವನ್ನು ರನ್ಯಾ ರಾವ್‌ ಸಂಪೂರ್ಣವಾಗಿ ದುರ್ಬಳಕೆ ಮಾಡಿಕೊಂಡಿರುವುದು ಡಿಆರ್‌ಐ

ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ : ರನ್ಯಾ ರಾವ್‌ ತಂತ್ರಗಳು ಒಂದೊಂದಾಗಿ ಬಯಲು Read More »

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ “ಯುವಕರ ಸಾಮಾಜೀಕರಣ ಹಾಗೂ ಕೌಟುಂಬಿಕ ಭದ್ರತಗೆ ಪ್ರಸ್ತುತ ಸಮಾಜದಲ್ಲಿರುವ ಸವಾಲುಗಳು ” ಕುರಿತಾದ ಕಾರ್ಯಗಾರ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ, ಆಂತರಿಕ ಗುಣಮಟ್ಟ ಭರವಸಾ ಕೋಶ, ಸಮಾಜಶಾಸ್ತ್ರ ವಿಭಾಗ, ವಿವೇಕಾನಂದ ಕಾಲೇಜು ಪುತ್ತೂರು, ಸಮಾಜಶಾಸ್ತ್ರ ವಿಭಾಗದ ಜಂಟಿ ಆಶ್ರಯದಲ್ಲಿ, ಒಡಂಬಡಿಕೆ ಕಾರ್ಯಕ್ರಮವಾಗಿ ಯುವಕರ ಸಾಮಾಜೀಕರಣ ಹಾಗೂ ಕೌಟುಂಬಿಕ ಭದ್ರತೆಗೆ ಪ್ರಸ್ತುತ ಸಮಾಜದಲ್ಲಿರುವ ಸವಾಲುಗಳು ಎಂಬ ವಿಷಯದ ಕುರಿತು ಮಾ14  ರಂದು ಒಂದು ದಿನದ ಕಾರ್ಯಗಾರ  ನಡೆಯಿತು. ಎಂ ಎಲ್ ಟಿ ಸಿ ಕಾಲೇಜ್ ಉಜಿರೆ, ಇಲ್ಲಿನ ನಿವೃತ್ತ ಪ್ರಾಂಶುಪಾಲ ಅಶೋಕ್ ಕುಮಾರ್ ಇವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು. ಮಹಾವಿದ್ಯಾಲಯದ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥರಾದ 

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ “ಯುವಕರ ಸಾಮಾಜೀಕರಣ ಹಾಗೂ ಕೌಟುಂಬಿಕ ಭದ್ರತಗೆ ಪ್ರಸ್ತುತ ಸಮಾಜದಲ್ಲಿರುವ ಸವಾಲುಗಳು ” ಕುರಿತಾದ ಕಾರ್ಯಗಾರ Read More »

ವಸತಿ ಶಾಲೆಯಿಂದ ತಪ್ಪಿಸಿಕೊಂಡಿದ್ದ ವಿದ್ಯಾರ್ಥಿಗಳು ಮಂಗಳೂರಿನಲ್ಲಿ ಪತ್ತೆ

ರಜೆ ಸಿಕ್ಕಿಲ್ಲ ಎಂದು ವಸತಿ ಶಾಲೆಯ ಗೋಡೆ ಹಾರಿ ಪಲಾಯನ ಮಾಡಿದ್ದ ಮಕ್ಕಳು ಮಂಗಳೂರು: ಚಿಕ್ಕಮಗಳೂರಿನ ತೇಗೂರು ಗ್ರಾಮದ ಡಾ. ಅಬ್ದುಲ್​ ಕಲಾಂ ವಸತಿ ಶಾಲೆಯಿಂದ ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳು ಶುಕ್ರವಾರ ರಾತ್ರಿ ಮಂಗಳೂರಿನಲ್ಲಿ ಪತ್ತೆಯಾಗಿದ್ದಾರೆ. ವಸತಿ ಶಾಲೆಯ 9ನೇ ತರಗತಿಯ ಬಾಳೆಹೊನ್ನೂರು ಮೂಲದ ಯಶ್ವಿತ್ ಸಾಲಿಯಾನ್​​​ ಮತ್ತು ಬೆಂಗಳೂರು ಮೂಲದ ತರುಣ್‌ ಮಾರ್ಚ್​ 3ರಂದು ನಾಪತ್ತೆಯಾಗಿದ್ದರು. ಮಂಗಳೂರಿನ ಹೋಟೆಲ್​ವೊಂದರಲ್ಲಿ ಕೆಲಸಕ್ಕೆ ಸೇರಲು ಯತ್ನಿಸಿ ಸಿಕ್ಕಿಬಿದ್ದಿದ್ದಾರೆ.ಯಶ್ವಿತ್ ಮತ್ತು ತರುಣ್ ಉತ್ತಮ ಸ್ನೇಹಿತರಾಗಿದ್ದು, ಓದಿನಲ್ಲಿ ಆಸಕ್ತಿ ಇಲ್ಲದಿದ್ದರೂ ವಸತಿ

ವಸತಿ ಶಾಲೆಯಿಂದ ತಪ್ಪಿಸಿಕೊಂಡಿದ್ದ ವಿದ್ಯಾರ್ಥಿಗಳು ಮಂಗಳೂರಿನಲ್ಲಿ ಪತ್ತೆ Read More »

ಡೆಪ್ಯುಟಿ ಸ್ಪೀಕರ್‌ ರುದ್ರಪ್ಪ ಲಮಾಣಿ ದಿಢೀರ್‌ ಬೆಂಗಳೂರಿನ ಆಸ್ಪತ್ರೆಗೆ ಶಿಫ್ಟ್‌

ಚಿತ್ರದುರ್ಗ ಬಳಿ ಬೈಕ್‌ ಗುದ್ದಿ ಗಾಯಗೊಂಡಿದ್ದ ಲಮಾಣಿ ಬೆಂಗಳೂರು : ನಿನ್ನೆ ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ ವಿಧಾನಸಭೆ ಡೆಪ್ಯೂಟಿ ಸ್ಪೀಕರ್​ ರುದ್ರಪ್ಪ ಲಮಾಣಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆಯಿಂದ ಬೆಂಗಳೂರಿಗೆ ಶಿಫ್ಟ್ ಮಾಡಲಾಗಿದೆ. ನಿನ್ನೆ ಬಜೆಟ್​​ ಅಧಿವೇಶನ ಮುಗಿಸಿಕೊಂಡು ಬೆಂಗಳೂರಿನಿಂದ ಹಾವೇರಿಗೆ ತೆರಳುವ ಮಾರ್ಗ ಮಧ್ಯೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜೆ.ಜೆ.ಹಳ್ಳಿ ಗ್ರಾಮದ ಬಳಿ ಅಪಘಾತ ಸಂಭವಿಸಿ ಲಮಾಣಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ದಾವಣಗೆರೆಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಈಗ ಏಕಾಏಕಿ ರುದ್ರಪ್ಪ ಲಮಾಣಿ

ಡೆಪ್ಯುಟಿ ಸ್ಪೀಕರ್‌ ರುದ್ರಪ್ಪ ಲಮಾಣಿ ದಿಢೀರ್‌ ಬೆಂಗಳೂರಿನ ಆಸ್ಪತ್ರೆಗೆ ಶಿಫ್ಟ್‌ Read More »

ಹೋಳಿ ನೆಪದಲ್ಲಿ ವಿಕೃತಿ : ವಿದ್ಯಾರ್ಥಿನಿಯರ ಮೇಲೆ ರಾಸಾಯನಿಕ ಮಿಶ್ರಿತ ಬಣ್ಣ ಎರಚಿದ ದುಷ್ಕರ್ಮಿಗಳು

7 ವಿದ್ಯಾರ್ಥಿನಿಯರು ಅಸ್ವಸ್ಥ; ನಾಲ್ಕು ಮಂದಿ ಗಂಭೀರ ಬೆಂಗಳೂರು: ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಶುಕ್ರವಾರ ಹೋಳಿ ಆಚರಿಸುತ್ತಿದ್ದಾಗ ದುಷ್ಕರ್ಮಿಗಳ ಗುಂಪೊಂದು ರಾಸಾಯನಿಕ ಮಿಶ್ರಿತ ಬಣ್ಣವನ್ನು ಎರಚಿದ್ದರಿಂದ ಏಳು ಶಾಲಾ ವಿದ್ಯಾರ್ಥಿನಿಯರು ಗಂಭೀರವಾಗಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ಆಘಾತಕಾರಿ ಘಟನೆ ನಡೆದಿದೆ. ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಉಸಿರಾಟದ ತೊಂದರೆ ಮತ್ತು ಎದೆ ನೋವು ಕಾಣಿಸಿಕೊಂಡಿದ್ದರಿಂದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಗದಗ ವೈದ್ಯಕೀಯ ವಿಜ್ಞಾನ ಸಂಸ್ಥೆ (ಜಿಮ್ಸ್)ಗೆ ಸ್ಥಳಾಂತರಿಸಲಾಗಿದೆ. ಉಳಿದ ಬಾಲಕಿಯರು ಲಕ್ಷ್ಮೇಶ್ವರದ ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ

ಹೋಳಿ ನೆಪದಲ್ಲಿ ವಿಕೃತಿ : ವಿದ್ಯಾರ್ಥಿನಿಯರ ಮೇಲೆ ರಾಸಾಯನಿಕ ಮಿಶ್ರಿತ ಬಣ್ಣ ಎರಚಿದ ದುಷ್ಕರ್ಮಿಗಳು Read More »

ಗಗನ ಯಾತ್ರಿ ಸುನೀತಾ ವಿಲ್ಲಿಯಮ್ಸ್‌ರನ್ನು ಭೂಮಿಗೆ ಕರೆತರುವ ಕಾರ್ಯಾಚರಣೆ ಶುರು

ಒಂಬತ್ತು ತಿಂಗಳಿಂದ ಅಂತರಿಕ್ಷದಲ್ಲಿ ಬಾಕಿಯಾಗಿರುವ ಭಾರತೀಯ ಮೂಲದ ಖಗೋಲ ವಿಜ್ಞಾನಿ ವಾಷಿಂಗ್ಟನ್: ಗಗನಯಾತ್ರಿ ಸುನೀತಾ ವಿಲ್ಲಿಯಮ್ಸ್‌ ಅವರ ಅಂತರಿಕ್ಷ ವಾಸಕ್ಕೆ ಕೊನೆಗೂ ಮುಕ್ತಿ ಸಿಗುವ ಗಳಿಗೆ ಸನ್ನಿಹಿತವಾಗಿದೆ. ತಾಂತ್ರಿಕ ಅಡಚಣೆಗಳಿಂದಾಗಿ ಸುಮಾರು 9 ತಿಂಗಳುಗಳಿಂದ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲೇ ಉಳಿದುಕೊಂಡಿರುವ ಭಾರತ ಮೂಲದ ಖಗೋಳ ವಿಜ್ಞಾನಿ ಸುನೀತಾ ವಿಲಿಯಮ್ಸ್ ಹಾಗೂ ಬಚ್ ವಿಲ್ಮೋರ್ ಅವರನ್ನು ಭೂಮಿಗೆ ವಾಪಸ್ ಕರೆತರುವ ಕಾರ್ಯಾಚರಣೆಯನ್ನು ನಾಸಾ ಮರಳಿ ಪ್ರಾರಂಭಿಸಿದೆ.ಅಮೆರಿಕ ಬ್ಯಾಹ್ಯಾಕಾಶ ಸಂಸ್ಥೆ (ನಾಸಾ) ಮತ್ತು ಉದ್ಯಮಿ ಎಲಾನ್ ಮಸ್ಕ್ ಅವರ ಸ್ಪೇಸ್

ಗಗನ ಯಾತ್ರಿ ಸುನೀತಾ ವಿಲ್ಲಿಯಮ್ಸ್‌ರನ್ನು ಭೂಮಿಗೆ ಕರೆತರುವ ಕಾರ್ಯಾಚರಣೆ ಶುರು Read More »

ಹೈಜಾಕ್‌ ಮಾಡಿದ ರೈಲಿನಲ್ಲಿದ್ದ 214 ಪ್ರಯಾಣಿಕರ ಹತ್ಯೆ : ಬಂಡುಕೋರರ ಹೇಳಿಕೆ

ಪಾಕ್‌ ಸೇನೆ ಸುಳ್ಳು ಹೇಳಿ ಜಗತ್ತಿನ ದಿಕ್ಕುತಪ್ಪಿಸಿದೆ ಎಂದು ಆರೋಪ ಇಸ್ಲಾಮಾಬಾದ್: ಜಾಫರ್‌ ಎಕ್ಸ್‌ಪ್ರೆಸ್‌ ಅಪಹರಿಸಿ ಒತ್ತೆಯಾಳಾಗಿರಿಸಿಕೊಂಡಿದ್ದ ಎಲ್ಲ 214 ಪ್ರಯಾಣಿಕರನ್ನು ಹತ್ಯೆ ಮಾಡಲಾಗಿದೆ ಎಂದು ಬಲೂಚ್‌ ಲಿಬರೇಶನ್‌ ಆರ್ಮಿ (ಬಿಎಲ್‌ಎ) ಹೇಳಿಕೊಂಡಿದೆ.ನಮ್ಮ ಹೋರಾಟಗಾರರಿಂದ ಒತ್ತೆಯಾಳುಗಳಾಗಿದ್ದ ಎಲ್ಲ 214 ಮಂದಿಯನ್ನೂ ಹತ್ಯೆ ಮಾಡಲಾಗಿದೆ. ಪಾಕಿಸ್ಥಾನಿ ಭದ್ರತಾ ಪಡೆಗಳೊಂದಿಗೆ ಇನ್ನೂ ಎನ್‌ಕೌಂಟರ್ ನಡೆಯುತ್ತಿದೆ ಎಂದು ತಿಳಿಸಿದೆ. ಬಿಎಲ್‌ಎ ಪ್ರತ್ಯೇಕತಾವಾದಿಗಳನ್ನು ಸದೆಬಡಿದು ಜನರ ರಕ್ಷಣೆ ಮಾಡಿರುವುದಾಗಿ ಪಾಕಿಸ್ಥಾನ ಹೇಳಿಕೆ ನೀಡಿತ್ತು. ಆದರೆ, ಈ ಹೇಳಿಕೆಗೆ ತದ್ವಿರುದ್ಧವಾದ ಹೇಳಿಕೆಯನ್ನು ಬಿಎಲ್‌ಎ ನೀಡಿದೆ.

ಹೈಜಾಕ್‌ ಮಾಡಿದ ರೈಲಿನಲ್ಲಿದ್ದ 214 ಪ್ರಯಾಣಿಕರ ಹತ್ಯೆ : ಬಂಡುಕೋರರ ಹೇಳಿಕೆ Read More »

error: Content is protected !!
Scroll to Top