ಸುದ್ದಿ

ಇರಾನ್‌ ಯುದ್ಧ ಶೀಘ್ರ ಮುಕ್ತಾಯ : ಟ್ರಂಪ್‌ ಹೇಳಿಕೆ

ಇರಾನ್‌ ವಾಯುನೆಲೆ, ನೌಕಾನೆಲೆ ಧ್ವಂಸ, ಸಂಪರ್ಕ ಕಡಿತ ಎಂದ ಅಧ್ಯಕ್ಷ ಅಮೆರಿಕ: ಅಮೆರಿಕ, ಇಸ್ರೇಲ್‌ ಹಾಗೂ ಇರಾನ್‌ ನಡುವೆ ನಡೆಯುತ್ತಿರುವ ಭೀಕರ ಯುದ್ಧ ಜಗತ್ತಿನಾದ್ಯಂತ ಕೋಲಾಹಲ ಸೃಷ್ಟಿಸಿರುವಂತೆಯೇ ಡೊನಾಲ್ಡ್‌ ಟ್ರಂಪ್‌ ಯುದ್ಧ ನಿಲ್ಲಿಸುವ ಕುರಿತು ಮಾತನಾಡಿದ್ದಾರೆ. ಫೆಬ್ರವರಿ 28ರಿಂದ ನಡೆಯುತ್ತಿರುವ ಅಮೆರಿಕ, ಇಸ್ರೇಲ್ ಮತ್ತು ಇರಾನ್ ಮೇಲಿನ ಸಂಘರ್ಷ ಕೊನೆಯಾಗುವ ಸುದ್ದಿ ಸಿಕ್ಕಿದೆ. ಇರಾನ್ ಯುದ್ಧ ಶೀಘ್ರ ಕೊನೆಗೊಳ್ಳಲಿದೆ ಎಂದು ಡೊನಾಲ್ಡ್ ಟ್ರಂಪ್ ಮಂಗಳವಾರ ಹೇಳಿಕೆ ನೀಡಿದ್ದಾರೆ. ಫ್ಲೋರಿಡಾದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಟೆಹ್ರಾನ್ ಯಾವುದೇ […]

ಇರಾನ್‌ ಯುದ್ಧ ಶೀಘ್ರ ಮುಕ್ತಾಯ : ಟ್ರಂಪ್‌ ಹೇಳಿಕೆ Read More »

ದೇಶಾದ್ಯಂತ ಗ್ಯಾಸ್‌ ಕೋಲಾಹಲ : ಸಿಲಿಂಡರ್‌ ಬುಕ್ಕಿಂಗ್‌ ಅವಧಿ 25 ದಿನಕ್ಕೆ ಹೆಚ್ಚಳ

ಯುದ್ಧದಿಂದಾಗಿ ಗ್ಯಾಸ್‌ ಸಿಗುವುದಿಲ್ಲ ಎಂಬ ಆತಂಕದಿಂದ ಸಿಲಿಂಡರ್‌ ಸಂಗ್ರಹಿಸಲು ಮುಂದಾದ ಜನ ನವದೆಹಲಿ : ಇಸ್ರೇಲ್‌, ಅಮೆರಿಕ ಹಾಗೂ ಇರಾನ್‌ ನಡುವಿನ ಯುದ್ಧದಿಂದ ದೇಶದಲ್ಲಿ ಅಡುಗೆ ಅನಿಲ ಸಿಲಿಂಡರ್‌ ಬೆಲೆ ಹೆಚ್ಚಳವಾಗಿದೆ. ಇದರ ಬೆನ್ನಲ್ಲೇ ಕರ್ನಾಟಕ ಸೇರಿದಂತೆ ದೇಶದ ಅನೇಕ ಭಾಗಗಳಲ್ಲಿ ವಾಣಿಜ್ಯ ಬಳಕೆಯ ಸಿಲಿಂಡರ್‌ ಮತ್ತು ಗೃಹ ಬಳಕೆಯ ಎಲ್‌ಪಿಜಿ ಸರಬರಾಜಿನ ಮೇಲೆ ಪರಿಣಾಮ ಬೀರಿದ್ದು, ಗ್ಯಾಸ್‌ ಸಿಲಿಂಡರ್‌ ಅಭಾವ ತಲೆದೋರಿದೆ. ಬೆಂಗಳೂರು, ತಮಿಳುನಾಡು ಸೇರಿದಂತೆ ವಿವಿಧ ನಗರಗಳಲ್ಲಿ ಗ್ಯಾಸ್‌ ಅಭಾವದಿಂದ ಹೋಟೆಲ್‌ಗಳನ್ನು ಬಂದ್‌ ಮಾಡುವ

ದೇಶಾದ್ಯಂತ ಗ್ಯಾಸ್‌ ಕೋಲಾಹಲ : ಸಿಲಿಂಡರ್‌ ಬುಕ್ಕಿಂಗ್‌ ಅವಧಿ 25 ದಿನಕ್ಕೆ ಹೆಚ್ಚಳ Read More »

ದಂಪತಿ ಆತ್ಮಹತ್ಯೆ: ಕುಟುಂಬ ಕಲಹದ ಶಂಕೆ

ಮಂಡ್ಯ: ಕುಟುಂಬ ಕಲಹಕ್ಕೆ ದಂಪತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೆ. ಆರ್. ಪೇಟೆ ಪಟ್ಟಣದಲ್ಲಿ ನಡೆದಿದೆ. ದಂಪತಿ ಆತ್ಮಹತ್ಯೆಗೂ ಮುನ್ನ ತಮ್ಮ ಎರಡು ವರ್ಷದ ಮಗುವನ್ನು ಕತ್ತು ಹಿಸುಕಿ ಕೊಲ್ಲಲು ಪ್ರಯತ್ನ ನಡೆಸಿದ್ದು, ಆದರೆ ಅಸ್ವಸ್ಥಗೊಂಡ ಮಗು ಬದುಕುಳಿದ ಘಟನೆ ನಡೆದಿದೆ. ಮೃತರನ್ನು ದರ್ಶನ್ ಮತ್ತು ದಿವ್ಯಶ್ರೀ ಎಂದು ಗುರುತಿಸಲಾಗಿದೆ. ಇವರು ಕಳೆದ ಮೂರು ವರ್ಷಗಳ ಹಿಂದೆ ವಿವಾಹವಾಗಿದ್ದರು. ಜಯನಗರ ಬಡಾವಣೆಯ ಮನೆಯೊಂದರಲ್ಲಿ ಬಾಡಿಗೆಗೆ ಇದ್ದರು. ಯಾವುದೋ ಕಾರಣಕ್ಕೆ ದಂಪತಿ ತಮ್ಮ ಮಗುವನ್ನು ಕತ್ತು

ದಂಪತಿ ಆತ್ಮಹತ್ಯೆ: ಕುಟುಂಬ ಕಲಹದ ಶಂಕೆ Read More »

ಕಾಡಾನೆ ದಾಳಿ ಮಹಿಳೆ ಬಲಿ

ಕುಶಾಲನಗರ: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಮೇಲೆ ಕಾಡಾನೆ ದಾಳಿ ನಡೆಸಿದ ಪರಿಣಾಮ ಅವರು ಸಾವನ್ನಪ್ಪಿರುವ ಘಟನೆ ತ್ಯಾಗತ್ತೂರಿನಲ್ಲಿ ‌ನಡೆದಿದೆ. ನಂಜರಾಯಪಟ್ಟಣದ ಗ್ರಾಮ ಪಂಚಾಯತ್‌ನ ಮಾಜಿ ಸದಸ್ಯೆ, ಬಾಳೆಗುಂಡಿ ಗಿರಿಜನ ಹಾಡಿಯ ‌ನಿವಾಸಿ ಜಲಜಾಕ್ಷಿ(53) ಎಂಬವರೇ ಮೃತ ದುರ್ದೈವಿ. ಸ್ಥಳಕ್ಕೆ ಎಸಿಎಫ್ ಗೋಪಾಲ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮಸ್ಥರು ಅರಣ್ಯಾಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಡಾನೆ ದಾಳಿ ಮಹಿಳೆ ಬಲಿ Read More »

ಅಕ್ಷಯ ಕಾಲೇಜಿನಲ್ಲಿ ‘ಆರ್ಥಿಕ ಸಾಕ್ಷರತೆ’ ಮಾಹಿತಿ ಕಾರ್ಯಾಗಾರ

ಪುತ್ತೂರು: ಅಕ್ಷಯ ಎಜುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್ (ರಿ.) ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ “ಎಲೈಟ್” ಆಂತರಿಕ ವಿನ್ಯಾಸ ಸಂಘ ಹಾಗೂ ಐಕ್ಯೂಎಸಿ ಸಹಭಾಗಿತ್ವದಲ್ಲಿ ಆಂತರಿಕ ವಿನ್ಯಾಸ ವಿಭಾಗದ ವಿದ್ಯಾರ್ಥಿಗಳಿಗೆ “ಆರ್ಥಿಕ ಸಾಕ್ಷರತೆ” ಎಂಬ ವಿಷಯದ ಕುರಿತು ಮಾಹಿತಿ ಕಾರ್ಯಾಗಾರ ನಡೆಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಅಕ್ಷಯ ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥ ಕಿಶೋರ್ ಕುಮಾರ್ ರೈ ಕೆ. ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಆರ್ಥಿಕ ಸಾಕ್ಷರತೆಯ ವ್ಯಾಪ್ತಿಗೆ ಬರುವ ಕೌಶಲ್ಯಗಳಲ್ಲಿ ಮನೆಯ ಬಜೆಟ್, ಸಾಲ ನಿರ್ವಹಣೆ,

ಅಕ್ಷಯ ಕಾಲೇಜಿನಲ್ಲಿ ‘ಆರ್ಥಿಕ ಸಾಕ್ಷರತೆ’ ಮಾಹಿತಿ ಕಾರ್ಯಾಗಾರ Read More »

ಅಲ್ಟೋ ಕಾರ್ ಹೊತ್ತುರಿದು ‌ವೃದ್ಧ ಸಜೀವ ದಹನ

ಚಿಕ್ಕಬಳ್ಳಾಪುರ: ಅಲ್ಟೋ ಕಾರೊಂದು ಹೊತ್ತಿ ಉರಿದ ‌ಪರಿಣಾಮ ವೃದ್ಧ ಚಾಲಕ ಸಜೀವ ದಹನವಾದ ಘಟನೆ ಬಾಗೇಪಲ್ಲಿಯ ಆಚೇಪಲ್ಲಿ ಕ್ರಾಸ್ ಬಳಿ ನಡೆದಿದೆ. ಮೃತನನ್ನು ಪೆನುಮಲೆ ಗ್ರಾಮದ ಉದಯ್ ಕುಮಾರ್ (70) ಎಂದು ಗುರುತಿಸಲಾಗಿದೆ.‌ ಅವರು ನಿನ್ನೆ ರಾತ್ರಿ ಬಾಗೇಪಲ್ಲಿಯಿಂದ ‌ಸ್ವಗ್ರಾಮಕ್ಕೆ ತೆರಳುವ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ. ಕಾರಿನಲ್ಲಿ ಯಾವುದೇ ದೋಷಗಳು, ಅಪಘಾತದ ಕುರುಹುಗಳು ಕಂಡು ಬಂದಿಲ್ಲ. ಆದ್ದರಿಂದ ಇದು ಆತ್ಮಹತ್ಯೆಯೋ, ಆಕಸ್ಮಿಕವೋ ಎನ್ನುವ ಅನುಮಾನವೂ ಸೃಷ್ಟಿಯಾಗಿದೆ. ಬಾಗೇಪಲ್ಲಿ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

ಅಲ್ಟೋ ಕಾರ್ ಹೊತ್ತುರಿದು ‌ವೃದ್ಧ ಸಜೀವ ದಹನ Read More »

ಉಚಿತ ಆರೋಗ್ಯ ತಪಾಸಣಾ ಶಿಬಿರ

ಬೆಳ್ತಂಗಡಿ: ತಾಲೂಕಿನ ಕೊರಿಂಜ ಸಮುದಾಯ ಭವನದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಸಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ ) ಗುರುವಾಯನಕೆರೆ ಇದರ ನೇತ್ರತ್ವದಲ್ಲಿ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮ ದಡಿಯ ಕೊರಿಂಜ ದೇವಸ್ಥಾನ ಮತ್ತು ಭಜನಾ ಮಂಡಳಿಯ ಜಂಟಿ ಯಲ್ಲಿ ಕೊರಿಂಜ ಸಮುದಾಯ ಭವನದಲ್ಲಿ ನಡೆಯಿತು. ಉದ್ಘಾಟನೆಯನ್ನು ಕೊರಿಂಜ ದೇವಸ್ಥಾನದ ಆಡಳಿತ ಮೊಕ್ತೇಸರ ಯೋಗೀಶ್ ಅವರು ನೆರವೇರಿಸಿದರು, ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಯೋಜನೆಯ ತಾಲೂಕು ಜ್ಞಾನ ವಿಕಾಸ ಸಮನ್ವಯ

ಉಚಿತ ಆರೋಗ್ಯ ತಪಾಸಣಾ ಶಿಬಿರ Read More »

ಕುಣಿದು ಕುಪ್ಪಳಿಸಿದ ಟೀಂ ಇಂಡಿಯಾ ಸದಸ್ಯರು: ಸಂಭ್ರಮಾಚರಣೆಯ ಫೋಟೊ ಆಲ್ಬಂ

ಅಹಮದಾಬಾದ್‌: ಅಹಮದಾಬಾದ್‌ನ ನರೇಂದ್ರ ಮೋದಿ ಕ್ರಿಕೆಟ್‌ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್‌ನಲ್ಲಿ ಭಾರತ ತಂಡ ನ್ಯೂಜಿಲೆಂಡ್ ತಂಡವನ್ನು 96 ರನ್‌ಗಳ ಬೃಹತ್ ಅಂತರದಿಂದ ಸೋಲಿಸಿ ಟ್ರೋಫಿ ತನ್ನದಾಗಿಸಿಕೊಂಡಿತು. ಸೂರ್ಯಕುಮಾರ್ ಯಾದವ್ ನೇತೃತ್ವದ ತಂಡ ಮೊದಲು ಬ್ಯಾಟಿಂಗ್ ಮಾಡಿ 255 ರನ್‌ಗಳ ಬೃಹತ್ ಮೊತ್ತವನ್ನು ಗಳಿಸಿತು. ಆ ಬಳಿಕ ಗುರಿ ಹಿಂಬಾಲಿಸಿದ ಮಿಚೆಲ್ ಸ್ಯಾಂಟ್ನರ್ ನೇತೃತ್ವದ ನ್ಯೂಜಿಲೆಂಡ್‌ ತಂಡವನ್ನು ಕೇವಲ 159 ರನ್‌ಗಳಿಗೆ ಆಲೌಟ್ ಮಾಡಿತು. ಇಡೀ ದೇಶ ಟೀಂ ಇಂಡಿಯಾದ ಈ ಗೆಲುವನ್ನು ಸಂಭ್ರಮಿಸುತ್ತಿದೆ. ಎಲ್ಲೆಡೆ

ಕುಣಿದು ಕುಪ್ಪಳಿಸಿದ ಟೀಂ ಇಂಡಿಯಾ ಸದಸ್ಯರು: ಸಂಭ್ರಮಾಚರಣೆಯ ಫೋಟೊ ಆಲ್ಬಂ Read More »

ಚೇರ್ಕಾಡಿಯ ರಾಷ್ಟ್ರೋತ್ಥಾನ ಶಾಲೆಗೆ ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲಾ ಸಮಿತಿ ಭೇಟಿ

ಬ್ರಹ್ಮಾವರ: ತಾಲೂಕಿನ ಚೇರ್ಕಾಡಿಯ ರಾಷ್ಟ್ರೋತ್ಥಾನ ಶಾಲೆಗೆ ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲಾ ಸಮಿತಿಯ ವತಿಯಿಂದ ಭೇಟಿ ಮಾಡಲಾಯಿತು. ವಿದ್ಯಾಭಾರತಿ ಕರ್ನಾಟಕ ಪ್ರಾಂತ ಉಪಾಧ್ಯಕ್ಷ ಗುರುದಾಸ ಶೆಣೈ ಹೆಬ್ರಿ, ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲಾಧ್ಯಕ್ಷ ಪಾಂಡುರಂಗ ಪೈ ಸಿದ್ಧಾಪುರ , ಕಾರ್ಯದರ್ಶಿ ಮಹೇಶ ಹೈಕಾಡಿ ಭೇಟಿ ನೀಡಿದರು. ರಾಷ್ಟ್ರೋತ್ಥಾನ ಸಂಸ್ಥೆಯ ಆಡಳಿತಾಧಿಕಾರಿ ಸುರೇಶ್ ಹೆಜಮಾಡಿ , ಪ್ರಧಾನಾಚಾರ್ಯೆ ಪೂರ್ಣಿಮಾ ಎಸ್. ಡಿ. ಕಾಲೇಜು ವಿಭಾಗದ ಪ್ರಾಂಶುಪಾಲೆ ಶ್ರೀಮತಿ ಭಾಗ್ಯಲಕ್ಷೀ ಉಪಸ್ಥಿತರಿದ್ದರು. ಸಂಸ್ಥೆಯ ಶೈಕ್ಷಣಿಕ ಚಟುವಟಿಕೆಗಳನ್ನು, ಆಡಳಿತ ಅಭಿವೃದ್ಧಿ ಯೋಜನೆಯನ್ನು

ಚೇರ್ಕಾಡಿಯ ರಾಷ್ಟ್ರೋತ್ಥಾನ ಶಾಲೆಗೆ ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲಾ ಸಮಿತಿ ಭೇಟಿ Read More »

ನಿಯಂತ್ರಣ ತಪ್ಪಿದ ರಥ ಹರಿದು ಮಹಿಳೆಯ ಕಾಲು ಕಟ್

ಕಲಬುರ್ಗಿ: ಶರಣ ಬಸವೇಶ್ವರ ಜಾತ್ರೆಯ ವೇಳೆ ನಿಯಂತ್ರಣಕ್ಕೆ ಸಿಗದ ರಥ ಮಹಿಳೆಯ ಮೇಲೆ ಹರಿದು ಕಾಲುಗಳು ಕತ್ತರಿಸಿ ಹೋಗಿರುವ ಘಟನೆ ಯಡ್ರಾಮಿ ತಾಲೂಕಿನ ಅರಳಗುಂಡಗಿಯಲ್ಲಿ ನಡೆದಿದೆ. ಜಾತ್ರಾ ಪ್ರಯುಕ್ತ ನಡೆದ ರಥೋತ್ಸವದ ವೇಳೆ ಈ ದುರ್ಘಟನೆ ನಡೆದಿದೆ. ರಥ ನಿಯಂತ್ರಣ ಕಳೆದುಕೊಂಡು ಕೆಳಕ್ಕೆ ಬಂದ ಪರಿಣಾಮ ಮಹಿಳೆಯ ಕಾಲಿನ ಮೇಲೆ ಹರಿದಿದೆ. ಘಟನೆಯಲ್ಲಿ ಮಹಿಳೆ ತನ್ನ ಎರಡೂ ಕಾಲುಗಳನ್ನು ಕಳೆದುಕೊಂಡಿದ್ದಾರೆ. ಕಾಲು ಕಳಕೊಂಡ ಮಹಿಳೆಯನ್ನು ನಾಗಮ್ಮ ಎಂದು ಗುರುತಿಸಲಾಗಿದೆ. ರಥ ನೋಡಲು ನಿಂತುಕೊಂಡಿದ್ದ ಅವರ ಮೇಲೆ ರಥ

ನಿಯಂತ್ರಣ ತಪ್ಪಿದ ರಥ ಹರಿದು ಮಹಿಳೆಯ ಕಾಲು ಕಟ್ Read More »

error: Content is protected !!
Scroll to Top