ಸುದ್ದಿ

ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡಿದರೆ, ಉಗುಳಿದರೆ 1 ಸಾವಿರ ರೂ ದಂಡ

ಸಿಗರೇಟು ಮತ್ತು ತಂಬಾಕು ಉತ್ಪನ್ನ ಬಳಕೆಯ ಹೊಸ ಕಾನೂನು ಜಾರಿ ಬೆಂಗಳೂರು : ಸಾರ್ವಜನಿಕ ಸ್ಥಳಗಳಲ್ಲಿ ಗುಟ್ಕಾ, ಪಾನ್ ಪರಾಗ್, ತಂಬಾಕು ಸೇರಿದಂತೆ ಇನ್ನಿತರ ಪದಾರ್ಥಗಳನ್ನು ತಿಂದು ಉಗುಳುವುದನ್ನು ನಿಷೇಧಿಸಿ ರಾಜ್ಯ ಸರಕಾರ ಶುಕ್ರವಾರ ಅಧಿಸೂಚನೆ ಹೊರಡಿಸಿದೆ. ನಿಯಮ ಉಲ್ಲಂಘಿಸಿ ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟು ಸೇದಿದರೆ ಮತ್ತು ಗುಟ್ಕಾ ತಿಂದು ಉಗುಳಿದರೆ 1 ಸಾವಿರ ರೂ. ದಂಡ ವಿಧಿಸಲು ಅವಕಾಶ ಕಲ್ಪಿಸುವ ಕಾಯ್ದೆಯನ್ನು ಜಾರಿಗೊಳಿಸಲಾಗಿದೆ. ಈ ಸಂಬಂಧ ರಾಜ್ಯ ಸರ್ಕಾರ ರೂಪಿಸಿದ್ದ ‘ಸಿಗರೇಟು ಮತ್ತು ಇತರ ತಂಬಾಕು […]

ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡಿದರೆ, ಉಗುಳಿದರೆ 1 ಸಾವಿರ ರೂ ದಂಡ Read More »

ರಾಜ್ಯದಲ್ಲಿ ಕೊರೊನಾ ಏರಿಕೆ : ಇನ್ನೋರ್ವ ವ್ಯಕ್ತಿ ಬಲಿ

ಕೋವಿಟ್‌ ಟೆಸ್ಟ್‌ ಕಡ್ಡಾಯಗೊಳಿಸಿದ ಕೇಂದ್ರ ಸರ್ಕಾರ ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಕೇಸ್‌ಗಳು ಹೆಚ್ಚಾಗುತ್ತಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ಶುಕ್ರವಾರ ಕೊರೊನದಿಂದ ಇನ್ನೊಬ್ಬರು ಸಾವಿಗೀಡಾಗಿದ್ದು, ಇದರೊಂದಿಗೆ ಹೊಸ ಅಲೆಗೆ ರಾಜ್ಯದದಲ್ಲಿ ಒಟ್ಟು ಮೂವರು ಬಲಿಯಾದಂತಾಗಿದೆ. ಮೈಸೂರಲ್ಲಿ 63 ವರ್ಷದ ವ್ಯಕ್ತಿ ಕೊವಿಡ್‌ನಿಂದ ಸಾವನ್ನಪ್ಪಿದ್ದಾರೆ. ಈ ಮೂಲಕ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 3ಕ್ಕೆ ಏರಿಕೆಯಾಗಿದೆ. ಮತ್ತೊಂದೆಡೆ ತೀವ್ರ ಉಸಿರಾಟದ ಸೋಂಕಿನ ಗುಣಲಕ್ಷಣ ಹೊಂದಿರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯಗೊಳಿಸಿ ಕೇಂದ್ರ ಆರೋಗ್ಯ ಇಲಾಖೆ ಮಹತ್ವದ ಸುತ್ತೋಲೆ ಹೊರಡಿಸಿದೆ.

ರಾಜ್ಯದಲ್ಲಿ ಕೊರೊನಾ ಏರಿಕೆ : ಇನ್ನೋರ್ವ ವ್ಯಕ್ತಿ ಬಲಿ Read More »

ಅಬ್ದುಲ್‌ ರಹಿಮಾನ್‌ ಕೊಲೆ ಪ್ರಕರಣ : ಮತ್ತಿಬ್ಬರು ಪೊಲೀಸರ ವಶಕ್ಕೆ

ಬಂಟ್ವಾಳ: ಇಲ್ಲಿನ ಗ್ರಾಮಾಂತರ ಠಾಣಾ ವ್ಯಾಪ್ತಿಯ ಕುರಿಯಾಳ ಗ್ರಾಮದ ಇರಾಕೋಡಿ ಎಂಬಲ್ಲಿ ಮೇ 27ರಂದು ನಡೆದ ಅಬ್ದುಲ್ ರಹಿಮಾನ್ ಕೊಲೆ ಮತ್ತು ಕಲಂದರ್ ಶಾಫಿ ಎಂಬವರ ಮೇಲೆ ನಡೆದ ಗಂಭೀರ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಮತ್ತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಮೊದಲು ಮೂವರು ಆರೋಪಿಗಳನ್ನು ಬಂಧಿಸಲಾಗಿತ್ತು. ಬಂಟ್ವಾಳದ ತೆಂಕಬೆಳ್ಳೂರು ಗ್ರಾಮದ ಸುಮಿತ್ ಆಚಾರ್ಯ (27) ಹಾಗೂ ಬಂಟ್ವಾಳದ ಬಡಗಬೆಳ್ಳೂರು ಗ್ರಾಮದ ರವಿರಾಜ್ (23) ಎಂಬುವವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಈಗಾಗಲೇ

ಅಬ್ದುಲ್‌ ರಹಿಮಾನ್‌ ಕೊಲೆ ಪ್ರಕರಣ : ಮತ್ತಿಬ್ಬರು ಪೊಲೀಸರ ವಶಕ್ಕೆ Read More »

ಮನೆ ಮೇಲೆ ಕುಸಿದ ಗುಡ್ಡ | ಮೂವರು ಬಲಿ, ನಾಲ್ವರ ರಕ್ಷಣೆ

ಮಂಗಳೂರು : ಈ ಭಾರಿಯ ವರ್ಷಧಾರೆ ನಿರೀಕ್ಷೆಕ್ಕಿಂತಲೂ ಸುರಿಯುತ್ತಿದ್ದು, ಮಳೆಯಿಂದಾಗಿ ಎಲ್ಲೆಡೆ ಅವಘಡಗಳು ಸಂಭವಿಸಿದೆ. ಇದಿಗ ಅಂತದ್ದೇ ಹೃದಯವಿದ್ರಕವಾದ ಘಟನೆ ಮಂಗಳೂರಿನ ಉಳ್ಳಾಲದಲ್ಲಿ ನಡೆದಿದೆ. ಹೌದು ಮಂಗಳೂರು  ಉಳ್ಳಾಲದಲ್ಲಿ ಭೂ ಕುಸಿತಕ್ಕೆ ಸಿಲುಕಿ ಮನೆಯಲ್ಲಿ ಮಲಗಿದ್ದ 3 ಜನರ ಪೈಕಿ ಮೂವರು ಸಾವನ್ನಪ್ಪಿದ್ದಾರೆ. ಆದರೆ, ಮನೆ ಕುಸಿತವಾದಾಗ ತನ್ನ ಪ್ರಾಣ ಹೋದರೂ ಸರಿ ಮಕ್ಕಳನ್ನು ಉಳಿಸೋಣವೆಂದು ಗೋಡೆಯ ಭಾರ ತಾನು ತಡೆದುಕೊಂಡು ಮಕ್ಕಳನ್ನು ಉಳಿಸಿದ್ದಳು. ಗೋಡೆಯ ಭಾರಕ್ಕೆ ದೇಹ ಜರ್ಜಿರಿತವಾಗಿ ಪ್ರಜ್ಞೆ ಕಳೆದುಕೊಂಡಿದ್ದಳು. ಗೋಡೆ ಬಿದ್ದ ಕ್ಷಣದಲ್ಲಿ

ಮನೆ ಮೇಲೆ ಕುಸಿದ ಗುಡ್ಡ | ಮೂವರು ಬಲಿ, ನಾಲ್ವರ ರಕ್ಷಣೆ Read More »

ವಿದ್ಯುತ್ ದುರಸ್ಥಿ ವೇಳೆ ಸಹಾಯಕ ಪವರ್ ಮ್ಯಾನ್ ಮೃತ್ಯು

ಬೆಳ್ತಂಗಡಿ: ಕುವೆಟ್ಟು ಗ್ರಾಮದ ಸಹಾಯಕ ಪವರ್ ಮ್ಯಾನ್ ವಿಜೇಶ್ ಜೈನ್ HT ಲೈನ್ ನಲ್ಲಿ ವಿದ್ಯುತ್ ಶಾಕ್ ಹೊಡೆದು ಸಾವನ್ನಪ್ಪಿದ ಘಟನೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಓಡಿನ್ನಾಳ ಗ್ರಾಮದ ಕೆಂಜಿಲ ಮನೆ ನಿವಾಸಿ ಸುಕುಮಾರ್ ಜೈನ್ ಮತ್ತು ಪೂರ್ಣಿಮಾ ಜೈನ್ ದಂಪತಿಗಳ ಎರಡನೇ ಮಗ ವಿಜೇಶ್ ಜೈನ್ (27) ಎಂಬವರು ಓಡಿಲ್ನಾಳ ಗ್ರಾಮದ ಕುಮ್ಮುಂಜ ಎಂಬಲ್ಲಿ HT ಲೈನ್ ನಲ್ಲಿ ಕೆಲಸ ಮಾಡುತ್ತಿದ್ದಾಗ ಮೇ.30 ರಂದು ವಿದ್ಯುತ್ ಶಾಕ್ ತಗುಲಿ ಮೃತಪಟ್ಟಿದ್ದಾರೆ. ಮೃತಪಟ್ಟ ವಿಜೇಶ್ ಜೈನ್ ಶವವನ್ನು

ವಿದ್ಯುತ್ ದುರಸ್ಥಿ ವೇಳೆ ಸಹಾಯಕ ಪವರ್ ಮ್ಯಾನ್ ಮೃತ್ಯು Read More »

ಪ್ರಸ್ತುತ ನಡೆಯುತ್ತಿರುವ ಹೊಡಿ-ಬಡಿ ವಿದ್ಯಾಮಾನ ತುಳು ಸಂಸ್ಕೃತಿಯಲ್ಲ : ವೆಂಕಟ್ರಮಣ ಗೌಡ ಕಳುವಾಜೆ | ‘ಗೇನೊದ ಬುಲೆ’ ತುಳು ಕೃತಿ ಬಿಡುಗಡೆ

ಪುತ್ತೂರು : ತುಳು ಎಂಬುದು ಭಾಷೆ ಮಾತ್ರವಲ್ಲ. ಬದಲಾಗಿ ಅದೊಂದು ಸಂಸ್ಕೃತಿ. ತುಳು ಮೂಲ ಜನಾಂಗದಲ್ಲಿ ಸತ್ಯ, ಧರ್ಮ ಮತ್ತು ನಿಷ್ಠೆಯಿದೆ. ಇಲ್ಲಿ ನಡೆಯುತ್ತಿರುವ ಅತ್ಯಾಚಾರ, ಕೊಲೆ, ಹಿಂಸೆಗಳು ತುಳು ಸಂಸ್ಕೃತಿಯಲ್ಲ. ಹೊರ ಸಂಸ್ಕೃತಿಯ ಆಗಮನದಿಂದ ಇಂತಹ ಕೃತ್ಯಗಳು ನಡೆಯುತ್ತಿದ್ದು, ಬೇರೆಯವರು ಇಲ್ಲಿಗೆ ಆಗಮಿಸಿ ನಮ್ಮ ತುಳು ಸಂಸ್ಕೃತಿಯನ್ನು ನಾಶ ಮಾಡುತ್ತಿದ್ದಾರೆ ಎಂದು ಎವಿಜಿ ಆಂಗ್ಲ ಮಾಧ್ಯಮ ಶಾಲಾ ಅಧ್ಯಕ್ಷ ವೆಂಕಟ್ರಮಣ ಗೌಡ ಕಳುವಾಜೆ  ಅಭಿಪ್ರಾಯಪಟ್ಟರು. ಅವರು ಶುಕ್ರವಾರ ಸಿರಿಗಂಗೆ ಪ್ರಕಾಶ ತುಳುನಾಡು ವತಿಯಿಂದ ಕರ್ನಾಟಕ ಕಾರ್ಯನಿರತ

ಪ್ರಸ್ತುತ ನಡೆಯುತ್ತಿರುವ ಹೊಡಿ-ಬಡಿ ವಿದ್ಯಾಮಾನ ತುಳು ಸಂಸ್ಕೃತಿಯಲ್ಲ : ವೆಂಕಟ್ರಮಣ ಗೌಡ ಕಳುವಾಜೆ | ‘ಗೇನೊದ ಬುಲೆ’ ತುಳು ಕೃತಿ ಬಿಡುಗಡೆ Read More »

ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ | ಯುವಕ ಪೋಲಿಸ್‌ ವಶಕ್ಕೆ

ಮೂಲ್ಕಿ : ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿರುವ ಘಟನೆ ಮೇ.೩೦ ಶುಕ್ರವಾರದಂದು  ಮೂಲ್ಕಿಯಲ್ಲಿ ನಡೆದಿದೆ. ಪಕ್ಷಿಕೆರೆ ಮೂಲದ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿರುವ ಆರೋಪದ ಮೇಲೆ ಬಜಪೆಯ ಪ್ರೀತಮ್ ಎಂಬಾತನನ್ನು  ಮೂಲ್ಕಿ ಪೋಲಿಸರು  ಬಂಧಿಸಿದ್ದಾರೆ ಎಂದು ತಿಳಿಸಿದ್ದಾರೆ. ಮೇ 25, 2025ರಂದು ಆರೋಪಿ ಪ್ರೀತಮ್, ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಹಾಸನದ ಉದಯಪುರಕ್ಕೆ ಕರೆದುಕೊಂಡು ಹೋಗಿದ್ದನು. ಬಾಲಕಿಯ ತಾಯಿ, ತನ್ನ ಮಗಳ ಅಪಹರಣದ  ಬಗ್ಗೆ ಮೂಲ್ಕಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಗುರುವಾರ (ಮೇ 29)

ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ | ಯುವಕ ಪೋಲಿಸ್‌ ವಶಕ್ಕೆ Read More »

ನಾಡ ದೋಣಿ ಮಗುಚಿ ಇಬ್ಬರು ನಾಪತ್ತೆ

ಮಂಗಳೂರು: ನಾಡ ದೋಣಿ ಮಗುಚಿ ಇಬ್ಬರು ನಾಪತ್ತೆಯಾದ ಘಟನೆ ಬೆಂಗ್ರೆ ಅಳಿವೆ  ಸಮೀಪ ಮೇ 30ರ ಶುಕ್ರವಾರ ಸಂಭವಿಸಿದೆ. ತೋಟ ಬೆಂಗ್ರೆ ಅಳಿವೆ ಬಾಗಿಲು ಸಮೀಪ ಮೀನು ಹಿಡಿಯುತ್ತಿದ್ದಾಗ ಜೋರಾದ ಮಳೆ, ಗಾಳಿಯ ರಭಸಕ್ಕೆ  ಧೋಣಿ ಮಗುಚಿದ್ದು, ದೋಣಿಯಲ್ಲಿದ್ದವರು ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ. ದೋಣಿಯಲ್ಲಿದ್ದ ಯಶವಂತ, ಕಮಲಾಕ್ಷ ಎಂಬವರು ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ.

ನಾಡ ದೋಣಿ ಮಗುಚಿ ಇಬ್ಬರು ನಾಪತ್ತೆ Read More »

ಲಾರಿ ಪಲ್ಟಿ : ಕಾರ್ಮಿಕ ಮೃತ್ಯು

ಬಂಟ್ವಾಳ : ಲಾರಿ ಪಲ್ಟಿಯಾಗಿ ಮೃತಪಟ್ಟ ಘಟನೆ ಬಂಟ್ವಾಳದಲ್ಲಿ ಇಂದು ಬೆಳಗ್ಗೆ ನಡೆದಿದೆ. ಘಟನೆಯಿಂದಾಗಿ ಜಾರ್ಖಾಂಡ್‌ ಮೂಲದ ನಿರ್ಮಲಾ ಅನ್ಸ್ತಾ ಮೃತಪಟ್ಟ ಕಾರ್ಮಿಕ ಎನ್ನಲಾಗಿದೆ. ಲಾರಿ ಚಾಲಕ ಸುಜಿತ್, ಕ್ಲೀನರ್ ಸಿಮೋಹನ್ ಮುರ್ಮ ಯಾವುದೇ ಗಾಯವಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ. ಅಕ್ಕಿ ಲೋಡ್ ನ ಲಾರಿ ಬಂಟ್ವಾಳದ ಎಸ್‌ವಿ.ಎಸ್.ಕಾಲೇಜು ಬಳಿ ಬರುವಾಗ ಅತಿಯಾದ ಮಳೆಗೆ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಉಡುಪಿಯಿಂದ ಅಕ್ಕಿ ಲೋಡ್ ಮಾಡಿಕೊಂಡು ಮೂಡಬಿದಿರೆಯಾಗಿ ಬಂಟ್ವಾಳಕ್ಕೆ ಬರುವ ವೇಳೆ ಈ ಘಟನೆ ನಡೆದಿದೆ.ಲಾರಿಯ ಹಿಂಭಾಗದಲ್ಲಿ ಅಕ್ಕಿ

ಲಾರಿ ಪಲ್ಟಿ : ಕಾರ್ಮಿಕ ಮೃತ್ಯು Read More »

ಮನೆ ಮೇಲೆ ಬಿದ್ದ ಧರೆ | ಅವಶೇಷದಡಿ ಸಿಲುಕಿದ ತಾಯಿ, ಮಗು

ಉಳ್ಳಾಲ: ಮಳೆಯಾರ್ಭಟಕ್ಕೆ  ದ.ಕ ಜಿಲ್ಲೆ.ಯ ಜನರಲ್ಲಿ ಆತಂಕ ಹೆಚಾಗುತ್ತಿದ್ದು, ಇದೀಗ  ಉಳ್ಳಾಲದ ಮಂಜನಾಡಿ ಗ್ರಾಮದಲ್ಲಿ ಶುಕ್ರವಾರ ಮುಂಜಾನೆ ಮನೆಯ ಮೇಲೆ ಭಾರೀ ಪ್ರಮಾಣದಲ್ಲಿ ಮಣ್ಣು ಕುಸಿದ ಪರಿಣಾಮ ಮಹಿಳೆ ಮತ್ತು ಮಗು ಅಸುನೀಗಿದ್ದಾರೆ. ಘಟನೆಯಲ್ಲಿ ಇಬ್ಬರನ್ನು ರಕ್ಷಿಸಲಾಗಿದ್ದು, ತಾಯಿ ಮತ್ತು ಒಂದು ಮಗು ಅವಶೇಷದಡಿ ಸಿಲುಕಿದ್ದಾರೆ. ಮಂಜನಾಡಿ ಗ್ರಾಮದ ಉರುಮನೆ ಮದಪಾಡಿಯಲ್ಲಿ ಘಟನೆ ನಡೆದಿದ್ದು, ತೋಟದ ನಡುವಿರುವ ಮನೆಯ ಮೇಲೆ ಬೃಹತ್ ಮರ ಸಹಿತ ಸುಮಾರು 30 ಅಡಿ ದರೆ ಕುಸಿದು ಬಿದ್ದಿದೆ. ಶುಕ್ರವಾರ ಮುಂಜಾನೆ ಸುಮಾರು

ಮನೆ ಮೇಲೆ ಬಿದ್ದ ಧರೆ | ಅವಶೇಷದಡಿ ಸಿಲುಕಿದ ತಾಯಿ, ಮಗು Read More »

error: Content is protected !!
Scroll to Top