ಸುದ್ದಿ

ಸುಳ್ಳು ಸುದ್ದಿ ತಡೆಗೆ ಮಸೂದೆ: ಮಂಡನೆಗೆ ಸಿದ್ಧತೆ

ತುಮಕೂರು: ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ, ಅವಹೇಳನಕಾರಿ ಪೋಸ್ಟ್ಗಳ ಹಾಕುವುದನ್ನು ತಡೆಯುವ ಸಲುವಾಗಿ ಕಾನೂನು ಜಾರಿಗೆ ತರಲು ರಾಜ್ಯ ಸರ್ಕಾರ ಸಿದ್ಧತೆ ನಡೆಸುತ್ತಿದೆ. ಈ ಕುರಿತು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ 4ರಿಂದ ಪ್ರಾರಂಭವಾಗುವ ವಿಧಾನ ಮಂಡಲದ ಚಳಿಗಾಲದ ಜಂಟಿ ಅಧಿವೇಶನದಲ್ಲಿ ಮಸೂದೆಯನ್ನು ಮಂಡಿಸಲು ಸಿದ್ಧತೆ ನಡೆಸುತ್ತಿದೆ ಎಂದು ತಿಳಿದುಬಂದಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸುತ್ತಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಇದನ್ನು ತಡೆಯಲು ಮಸೂದೆಯ […]

ಸುಳ್ಳು ಸುದ್ದಿ ತಡೆಗೆ ಮಸೂದೆ: ಮಂಡನೆಗೆ ಸಿದ್ಧತೆ Read More »

ಕುಲ್ಕುಂದ ಜಾನುವಾರು ಜಾತ್ರೆ: ಗೋಪೂಜೆ

ಸುಬ್ರಹ್ಮಣ್ಯ: ಕಾರ್ತಿಕ ಹುಣ್ಣಿಮೆ ದಿನ ಕುಲ್ಕುಂದ ಜಾನುವಾರು ಜಾತ್ರೆಯ ಪ್ರಯುಕ್ತ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸಹಕಾರದೊಂದಿಗೆ ಕುಲ್ಕುಂದ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಗೋ ಪೂಜೆ ಸಾಂಕೇತಿಕವಾಗಿ ನಡೆಯಿತು. ದೇವಸ್ಥಾನದ ಅರ್ಚಕರು ವಿಧಿ ವಿಧಾನದೊಂದಿಗೆ ಗೋಪೂಜೆ ನೆರವೇರಿಸಿದರು. ಬಸವೇಶ್ವರ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಗಿರಿಧರ ಸ್ಕಂದ, ಬಸವೇಶ್ವರ ದೇವಸ್ಥಾನದ ಅರ್ಚಕ ಗಣೇಶ್ ದೀಕ್ಷಿತ್, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಅರ್ಚಕ, ವ್ಯವಸ್ಥಾಪನ ಸಮಿತಿ ಸದಸ್ಯ ವನಜ ಭಟ್, ಶೋಭಾ ಗಿರಿಧರ, ಮನೋಜ್, ಶ್ರೀಕುಮಾರ್, ರವಿ ಶೆಟ್ಟಿ

ಕುಲ್ಕುಂದ ಜಾನುವಾರು ಜಾತ್ರೆ: ಗೋಪೂಜೆ Read More »

ಯುವಕ-ಯುವತಿ ನಾಪತ್ತೆ ! ಹುಡುಕಿಕೊಡಲು ಹೆತ್ತವರಿಂದ ಮನವಿ

ಬಂಟ್ವಾಳ : ಒಂದೇ ವಠಾರದ ಯುವಕ ಮತ್ತು ಯುವತಿ ನಾಪತ್ತೆಯಾದ ಘಟನೆ ಬಂಟ್ವಾಳ ತಾಲೂಕಿನ ಸಜಿಪ ಮುನ್ನೂರು ಗ್ರಾಮದ ಉದ್ದೊಟ್ಟು ಎಂಬಲ್ಲಿ ನಡೆದಿದೆ. ಸಜೀಪ ಮುನ್ನೂರು ಗ್ರಾಮದ ಉದ್ದೊಟ್ಟು ನಿವಾಸಿ ಅಬ್ದುಲ್ ಹಮೀದ್ ಎಂಬವರ ಪುತ್ರಿ ಆಯಿಸತ್ ರಸ್ನಾ (18) ಹಾಗೂ ಹೈದರ್ ಎಂಬವರ ಪುತ್ರ ಮಹಮ್ಮದ್ ಸಿನಾನ್ (23) ಕಾಣೆಯಾದವರು. ಇಬ್ಬರೂ ಅಕ್ಕಪಕ್ಕದ ಮನೆಯವರು. ದೇರಳಕಟ್ಟೆಯ ನಡುಪದವು ಪಿ.ಎ.ಕಾಲೇಜಿನಲ್ಲಿ ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿನಿಯಾಗಿದ್ದ ಆಯಿಸತ್ ರಸ್ಮಾ ಒಂದು ವಾರಗಳ ಕಾಲ ರಜೆಯಿದ್ದ ಹಿನ್ನಲೆಯಲ್ಲಿ ಮನೆಯಲ್ಲಿದ್ದಳು.

ಯುವಕ-ಯುವತಿ ನಾಪತ್ತೆ ! ಹುಡುಕಿಕೊಡಲು ಹೆತ್ತವರಿಂದ ಮನವಿ Read More »

ಕಂಬಳ ವೀಕ್ಷಿಸಿ ವಾಪಾಸಾಗುತ್ತಿದ್ದ ವೇಳೆ ಅಪಘಾತ : ಇಬ್ಬರು ಮೃತ್ಯು

ಬೆಂಗಳೂರು: ಬೆಂಗಳೂರಿನಲ್ಲಿ ನಡೆಯುತ್ತಿರುವ ಕಂಬಳ ವೀಕ್ಷಿಸಿ ಊರಿಗೆ ವಾಪಾಸಾಗುತ್ತಿದ್ದಾಗ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟು ಮೂವರು ಗಾಯಗೊಂಡ ಘಟನೆ ರಾಜ್ಯ ಹೆದ್ದಾರಿ 33 ಕೊತ್ತಗೆರೆ ಹೋಬಳಿ ಚಿಗಣಿ ಪಾಳ್ಯ ಗ್ರಾಮದ ಬಳಿ ನಡೆದಿದೆ. ಮೃತಪಟ್ಟವರನ್ನು ಬಜಪೆ ಮೂಲದ ಕಿಶಾನ್‍ ಶೆಟ್ಟಿ (20) ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಭಟ್ಟರ ತೋಟ ಗ್ರಾಮದ ಫಿಲೀಪ್‍ ನೇರಿ ಲೋಬೋ (32) ಎಂದು ಗುರುತಿಸಲಾಗಿದೆ. ನಿತೀಶ್‍ ಭಂಡಾರಿ, ಪ್ರೀತಿ ಲೋಬೋ, ಹರೀಶ್ ಗಂಭಿರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ

ಕಂಬಳ ವೀಕ್ಷಿಸಿ ವಾಪಾಸಾಗುತ್ತಿದ್ದ ವೇಳೆ ಅಪಘಾತ : ಇಬ್ಬರು ಮೃತ್ಯು Read More »

ಮೂರು ಇಲಾಖೆಗಳ ವಿಲೀನ, 2000 ಉದ್ಯೋಗ ನಷ್ಟ!

ಬೆಂಗಳೂರು : ವಿವಿಧ ಇಲಾಖೆಗಳನ್ನು ವಿಲೀನಗೊಳಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಇದರ ಮೊದಲ ಹಂತವಾಗಿ ಕೃಷಿ ಇಲಾಖೆಯಲ್ಲಿ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಯನ್ನು ವಿಲೀನಗೊಳಿಸುವ ಹಳೆಯ ಪ್ರಸ್ತಾವನೆಗೆ ಮತ್ತೆ ಚಾಲನೆ ನೀಡಲಾಗಿದೆ. ಈ ಕುರಿತು ಮುಂದಿನ ಸಚಿವ ಸಂಪುಟ ಉಪ ಸಮಿತಿ ಸಭೆಯು ಚರ್ಚೆ ನಡೆಸಲಿದೆ ಎಂದು ಸರ್ಕಾರದ ಉನ್ನತ ಮೂಲಗಳು ತಿಳಿಸಿವೆ.ಕೃಷಿ ಇಲಾಖೆಯಲ್ಲಿ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಯನ್ನು ವಿಲೀನಗೊಳಿಸುವ ಕುರಿತು ನವೆಂಬರ್‌ 8ರಂದು ಹೊರಡಿಸಲಾಗಿರುವ ಅರೆ ಸರ್ಕಾರಿ ಪತ್ರದಲ್ಲಿ ಈ ಕುರಿತು ಕೂಡಲೇ

ಮೂರು ಇಲಾಖೆಗಳ ವಿಲೀನ, 2000 ಉದ್ಯೋಗ ನಷ್ಟ! Read More »

ವಂಚನೆ; ಸುಬ್ರಹ್ಮಣ್ಯ ಮೂಲದ ಟಿ.ಎಸ್ ಶ್ರೀನಾಥ್’ಗೆ ಶಿಕ್ಷೆ

ಸುಬ್ರಹ್ಮಣ್ಯ; ಚೆಕ್ ಬೌನ್ಸ್ ಪ್ರಕರಣದಲ್ಲಿ ಕುಕ್ಕೆ ಸುಬ್ರಹ್ಮಣ್ಯ ಮೂಲದ ಟಿ.ಎಸ್ ಶ್ರೀನಾಥ ಎಂಬವರ ಆರೋಪವನ್ನು ಸಾಬೀತು ಮಾಡಿರುವ ಚಿಕ್ಕಮಗಳೂರು ಚಿಕ್ಕಮಗಳೂರು ಜೆಎಂಎಸಿ ನ್ಯಾಯಾಲಯ, ನಾಲ್ಕು ತಿಂಗಳ ಶಿಕ್ಷೆ ತಪ್ಪಿದಲ್ಲಿ 5 ಲಕ್ಷ 18 ಸಾವಿರ 100 ರೂ. ದಂಡ ವಿಧಿಸುವಂತೆ ಆದೇಶಿಸಿದೆ. ವ್ಯವಹಾರ ಸಂಬಂಧ ದುಡ್ಡಿಗೆ ಪ್ರತಿಯಾಗಿ ಶ್ರೀನಾಥ್ ಅವರು ಚೆಕ್ ನೀಡಿದ್ದರು. ಖಾತೆ ಬರಿದಾಗಿದ್ದು, ಚೆಕ್ ಬೌನ್ಸ್ ಆಗಿತ್ತು. ಚೆಕ್ ಪಡಕೊಂಡವರು ನ್ಯಾಯಾಲಯದ ಮೆಟ್ಟಿಲು ಹತ್ತಿದ್ದು, ಚಿಕ್ಕಮಗಳೂರು ಸಿವಿಲ್ ಜಡ್ಜ್ ಮತ್ತು ಐಎಂಎಪ್ ಸಿ ಕೋರ್ಟ್

ವಂಚನೆ; ಸುಬ್ರಹ್ಮಣ್ಯ ಮೂಲದ ಟಿ.ಎಸ್ ಶ್ರೀನಾಥ್’ಗೆ ಶಿಕ್ಷೆ Read More »

ವಿದ್ಯುತ್ ತಂತಿ ಸ್ಪರ್ಶಿಸಿದ ಅಲ್ಯೂಮಿನಿಯಂ ಏಣಿ: ಬಾಲಕೃಷ್ಣ ಶೆಟ್ಟಿ ಮೃತ್ಯು

ಬೆಳ್ತಂಗಡಿ: ಅಲ್ಯೂಮಿನಿಯಂ ಏಣಿ ವಿದ್ಯುತ್ ತಂತಿ ಸ್ಪರ್ಶಿಸಿ ಕಾರ್ಮಿಕರೋರ್ವರು ದಾರುಣವಾಗಿ ಮೃತಪಟ್ಟ ಘಟನೆ ಧರ್ಮಸ್ಥಳ ಸಮೀಪದ ಮಲ್ಲರ್ಮಾಡಿ ಎಂಬಲ್ಲಿ ನಡೆದಿದೆ. ಮೃತರನ್ನು ಮಲ್ಲರ್ಮಾಡಿ ನಿವಾಸಿ ಬಾಲಕೃಷ್ಣ ಶೆಟ್ಟಿ (49 ವ) ಎಂದು ಗುರುತಿಸಲಾಗಿದೆ. ಸೊಪ್ಪು ತರಲೆಂದು ಶುಕ್ರವಾರ ಬೆಳಿಗ್ಗೆ ಸ್ಥಳೀಯ ನಿವಾಸಿ ಬೊಮ್ಮಣ್ಣ ಗೌಡ ಅವರ ತೋಟಕ್ಕೆ ಹೋಗಿದ್ದರು. ಈ ಸಂದರ್ಭ ಘಟನೆ ನಡೆದಿದೆ ಎಂದು ಹೇಳಲಾಗಿದೆ. ತೋಟದ ನಡುವಿನಲ್ಲಿ ಹಾದುಹೋಗಿದ್ದ ವಿದ್ಯುತ್ ಲೈನ್ ಗೆ ಅಲ್ಯೂಮಿನಿಯಂ ಏಣಿ ಸ್ಪರ್ಶಿಸಿತ್ತು. ತೀವ್ರ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದ ಬಾಲಕೃಷ್ಣ

ವಿದ್ಯುತ್ ತಂತಿ ಸ್ಪರ್ಶಿಸಿದ ಅಲ್ಯೂಮಿನಿಯಂ ಏಣಿ: ಬಾಲಕೃಷ್ಣ ಶೆಟ್ಟಿ ಮೃತ್ಯು Read More »

ಕರಾವಳಿ ಭಾಗದಿಂದ ಬೆಂಗಳೂರು ಕಂಬಳಕ್ಕೆ ತೆರಳಿದ ಕೋಣಗಳ ದಂಡು | ಕೊಂಬು- ಕಹಳೆ, ಬ್ಯಾಂಡ್-ವಾದ್ಯಗಳ ಸಾಥ್

ಉಪ್ಪಿನಂಗಡಿ: ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ‘ಬೆಂಗಳೂರು ಕಂಬಳ- ನಮ್ಮ ಕಂಬಳ’ದಲ್ಲಿ ಭಾಗವಹಿಸಲು ಕೋಣಗಳ ದಂಡೇ ಇಂದು ಬೆಂಗಳೂರಿಗೆ ತೆರಳಿತು. ಕರಾವಳಿಯ ವಿವಿಧ ಕಡೆಗಳಿಂದ ಬಂದ ಕೋಣಗಳ ದಂಡು ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಮೈದಾನದಲ್ಲಿ ಬಂದು ಸೇರಿದವು. ಕೋಣಗಳಿಗೆ ಉಪ್ಪಿನಂಗಡಿಯಲ್ಲಿ ನೂರಾರು ಕಂಬಳಾಭಿಮಾನಿಗಳ ಸಮ್ಮುಖದಲ್ಲಿ ಪ್ರೀತಿ- ಗೌರವಾದಾರಗಳ ಸ್ವಾಗತ ನೀಡಲಾಯಿತು. ಬಳಿಕ ಕಂಬಳ ಸಮಿತಿಯ ವತಿಯಿಂದ ಕೋಣಗಳ ಯಜಮಾನರನ್ನು ಶಾಲು ಹೊದೆಸಿ ಸ್ವಾಗತಿಸಲಾಯಿತು. ಕೊಂಬು- ಕಹಳೆಗಳ ಸಹಿತ ಮೆರವಣಿಗೆಯೊಂದಿಗೆ ಕೋಣಗಳನ್ನು ಬೆಂಗಳೂರಿಗೆ ಬೀಳ್ಕೊಡಲಾಯಿತು. ಪಶು

ಕರಾವಳಿ ಭಾಗದಿಂದ ಬೆಂಗಳೂರು ಕಂಬಳಕ್ಕೆ ತೆರಳಿದ ಕೋಣಗಳ ದಂಡು | ಕೊಂಬು- ಕಹಳೆ, ಬ್ಯಾಂಡ್-ವಾದ್ಯಗಳ ಸಾಥ್ Read More »

ಸೇತುವೆಯಿಂದ ನೀರಿಗೆ ಹಾರಿ ಆತ್ಮಹತ್ಯೆ ! | ದೇಹಕ್ಕಾಗಿ ಶೋಧ ಕಾರ್ಯ

ಮಂಗಳೂರು: ವ್ಯಕ್ತಿಯೊಬ್ಬರು ಅದ್ದೂರು ಸೇತುವೆಯಿಂದ ಕೆಳಕ್ಕೆ ಹಾರಿ ಆತ್ಮಹತ್ಯೆ ಮಾಡಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮೂಲತಃ ಆಕಾಶಭವನದ ನಿವಾಸಿ ಪ್ರಶಾಂತ್ (41) ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ. ಸ್ನೇಹಿತ ದೇವಿಪ್ರಸಾದ್ ಜೊತೆಗೆ ಎರಡು ದಿನಗಳ ಕಾಲ ನಗರದ ವಿವಿಧ ದೇವಸ್ಥಾನಕ್ಕೆ ತೆರಳಿ ಇಂದು ಗುರುಪುರದ ಸೇತುವೆ ಬಳಿ ಬಂದಿದ್ದರು. ಈ ನಡುವೆ ಪ್ರಶಾಂತ್ ಸೇತುವೆಯಿಂದ ನದಿಗೆ ಹಾರಿ ನೀರಿನಲ್ಲಿ ಮುಳುಗುತ್ತಿರುವುದನ್ನು ದೇವಿಪ್ರಸಾದ್ ನೋಡಿದ್ದು, ಕೂಡಲೇ ಬಂಟ್ವಾಳ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಪ್ರಶಾಂತ್

ಸೇತುವೆಯಿಂದ ನೀರಿಗೆ ಹಾರಿ ಆತ್ಮಹತ್ಯೆ ! | ದೇಹಕ್ಕಾಗಿ ಶೋಧ ಕಾರ್ಯ Read More »

ಅಕ್ರಮ ಗೋಸಾಗಾಟ : ಇಬ್ಬರ ಬಂಧನ

ಮೂಡುಬಿದಿರೆ: ತಾಲೂಕಿನ ಮೂಡುಕೊಣಾಜೆ ಗ್ರಾಮದ ಕುಕ್ಕುದಕಟ್ಟೆಯಲ್ಲಿ ನಸುಕಿನ ಜಾವ ಗೋವುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿ ಎರಡು ಹಸು ಹಾಗೂ ಎರಡು ಕರುಗಳನ್ನು ರಕ್ಷಿಸಿದ್ದಾರೆ. ವಾಹನ ಚಾಲಕ ವೇಣೂರಿನ ನಡ್ತಿಕಲ್ಲು ನಿವಾಸಿ ಹೈದರ್‌ ಹಾಗೂ ಪಣಪಿಲದ ಶೈಲೇಶ್ ಮಡಿವಾಳ ಬಂಧಿತ ವ್ಯಕ್ತಿಗಳು. ಗಂಟಾಲ್ಕಟ್ಟೆಯ ಫಾರೂಕ್, ನಿಸಾರ್ ಹಾಗೂ ಪಣಪಿಲದ ಹೆರಾಲ್ಡ್ ಪರಾರಿಯಾಗಿದ್ದಾರೆ. ಬಂಧಿತ ಆರೋಪಿಗಳನ್ನು ಪೊಲೀಸರು ಮೂಡುಬಿದಿರೆ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಪೊಲೀಸ್ ಇನ್‌ಸ್ಪೆಕ್ಟರ್ ಸಂದೇಶ್ ಕುಮಾರ್ ನೇತೃತ್ವದ ತಂಡ

ಅಕ್ರಮ ಗೋಸಾಗಾಟ : ಇಬ್ಬರ ಬಂಧನ Read More »

error: Content is protected !!
Scroll to Top