ಸುದ್ದಿ

ಇನ್ನು ದೇವಳಗಳ ರೂಮ್‌ ಮಾಹಿತಿ ವೆಬ್‌ಸೈಟಿನಲ್ಲಿ ಲಭ್ಯ

ಭಕ್ತರ ಅನುಕೂಲಕ್ಕಾಗಿ 400 ದೇವಸ್ಥಾನ, ಛತ್ರಗಳ ಮಾಹಿತಿ ಅಪ್‌ಲೋಡ್‌ ಬೆಂಗಳೂರು: ಮುಜರಾಯಿ ಇಲಾಖೆ ಅಧೀನದಲ್ಲಿರುವ ರಾಜ್ಯದ ದೇವಾಲಯಗಳು ಮತ್ತು ಹೊರರಾಜ್ಯಗಳ ಛತ್ರಗಳಲ್ಲಿ ಲಭ್ಯವಿರುವ ಕೊಠಡಿಗಳ ಮಾಹಿತಿ ಇನ್ನು ವೆಬ್‌ಸೈಟಿನಲ್ಲಿ ಸಿಗಲಿದೆ. ಹಬ್ಬ, ಹರಿದಿನಗಳಂದು ಜನ ಹೆಚ್ಚಿನ ಸಂಖ್ಯೆಯಲ್ಲಿ ದೇವಾಲಯಗಳಿಗೆ ತೆರಳುತ್ತಾರೆ. ಈ ವೇಳೆ ದೇವಸ್ಥಾನ ಪರಿಸರದಲ್ಲಿ ಉಳಿದುಕೊಳ್ಳಲು ಕೊಠಡಿ ಸಿಗುವುದಿಲ್ಲ. ಈ ಸಮಸ್ಯೆ ಬಗೆಹರಿಸಲು ವೆಬ್‌ಸೈಟ್‌ನಲ್ಲಿ ಕೊಠಡಿಗಳ ಮಾಹಿತಿ ನೀಡಲು ಮುಜರಾಯಿ ಇಲಾಖೆ ನಿರ್ಧರಿಸಿದೆ.ಈ ಬಾರಿಯ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಜರಾಯಿ ಹಾಗೂ ಧಾರ್ಮಿಕ ಧತ್ತಿ ಇಲಾಖೆಗೆ […]

ಇನ್ನು ದೇವಳಗಳ ರೂಮ್‌ ಮಾಹಿತಿ ವೆಬ್‌ಸೈಟಿನಲ್ಲಿ ಲಭ್ಯ Read More »

ಮಂಗಳೂರು : ಧಾರಾಕಾರ ಮಳೆಯಿಂದ ವಿಮಾನ ಲ್ಯಾಂಡಿಂಗ್‌ ಸಮಸ್ಯೆ

ಹಲವು ವಿಮಾನಗಳು ಡೈವರ್ಟ್‌; ಬೆಂಗಳೂರು ಫ್ಲೈಟ್‌ ವಾಪಸ್‌ ಮಂಗಳೂರು: ಮಂಗಳೂರು ಸೇರಿದಂತೆ ಕರಾವಳಿಯಲ್ಲಿ ನಿನ್ನೆ ರಾತ್ರಿ ಅನಿರೀಕ್ಷಿತವಾಗಿ ಧಾರಾಕಾರ ಮಳೆ ಸುರಿದಿದ್ದು, ಇದರಿಂದ ಕಡುಬೇಸಿಗೆಯ ಬಿಸಿಲಿಗೆ ಬಳಲಿ ಬೆಂಡಾಗಿದ್ದ ಜನ ತುಸು ತಂಪಾಗಿದ್ದರೂ ಮಳೆಯಿಂದಾಗಿ ಅಲ್ಲಲ್ಲಿ ಅನಾಹುತಗಳೂ ಸಂಭವಿಸಿವೆ. ಮಂಗಳೂರು ನಗರದಲ್ಲಿ ರಾತ್ರಿ 8 ಗಂಟೆ ಸುಮಾರಿಗೆ ಶುರುವಾದ ಗುಡುಗು ಸಿಡಿಲು ಗಾಳಿಯಿಂದೊಡಗೂಡಿದ ಮಳೆ ರಾತ್ರಿ 11 ಗಂಟೆಯವರೆಗೂ ಧಾರಾಕಾರವಾಗಿ ಸುರಿದಿದೆ. ಇದರ ಪರಿಣಾಮ ಮಂಗಳೂರು ವಿಮಾನ ನಿಲ್ದಾಣದಲ್ಲಿ ಕೆಲವು ವಿಮಾನಗಳ ಲ್ಯಾಂಡಿಂಗ್‌ ಸಾಧ್ಯವಾಗದೆ ವಿಮಾನಗಳನ್ನು ಪಕ್ಕದ

ಮಂಗಳೂರು : ಧಾರಾಕಾರ ಮಳೆಯಿಂದ ವಿಮಾನ ಲ್ಯಾಂಡಿಂಗ್‌ ಸಮಸ್ಯೆ Read More »

ಪಾಕ್‌ ರೈಲು ಹೈಜಾಕ್‌ : ರಕ್ಷಣಾ ಕಾರ್ಯಾಚರಣೆ ಮುಕ್ತಾಯ, 33 ಬಂಡುಕೋರರ ಹತ್ಯೆ

500 ಪ್ರಯಣಿಕರಿದ್ದ ಪ್ಯಾಸೆಂಜರ್‌ ರೈಲನ್ನು ಅಪಹರಿಸಿದ್ದ ಬಲೂಚಿಸ್ಥಾನ ಬಂಡುಕೋರರು ಇಸ್ಲಾಮಾಬಾದ್‌ : ಬಲೂಚಿಸ್ಥಾನದಲ್ಲಿ ಜಾಫರ್‌ ಎಕ್ಸ್‌ಪ್ರೆಸ್‌ ಪ್ಯಾಸೆಂಜರ್‌ ರೈಲು ಅಪಹರಿಸಿ ಪ್ರಯಾಣಿಕರನ್ನು ಒತ್ತೆಸೆರೆಯಲ್ಲಿಟ್ಟಿದ್ದ ಎಲ್ಲ 33 ಬಂಡುಕೋರರನ್ನು ಸಾಯಿಸಿ, ಪ್ರಯಾಣಿಕರನ್ನು ರಕ್ಷಿಸಲಾಗಿದೆ ಎಂದು ಪಾಕಿಸ್ಥಾನದ ಸೇನೆ ಹೇಳಿಕೊಂಡಿದೆ.ಮಂಗಳವಾರ ಕ್ವೆಟ್ಟಾದಿಂದ ಪೇಷಾವರಕ್ಕೆ ಬರುತ್ತಿದ್ದ ರೈಲನ್ನು ಬಲೂಚಿಸ್ಥಾನದ ಬಲೂನ್‌ ಎಂಬಲ್ಲಿ ಹಳಿಯನ್ನು ಸ್ಫೋಟಿಸಿ ಅಪಹರಿಸಿದ್ದ ಬಂಡುಕೋರರು ಪ್ರಯಾಣಿಕರನ್ನು ಒತ್ತೆಸೆರೆಯಲ್ಲಿಟ್ಟು, ಸೆರೆಮನೆಗಳಲ್ಲಿರುವ ಬಲೂಚಿಸ್ಥಾನದ ರಾಜಕೀಯ ಕೈದಿಗಳನ್ನು ಬಿಡುಗಡೆಗೊಳಿಸಿ ಬಲೂಚಿಸ್ಥಾನವನ್ನು ಸ್ವತಂತ್ರ ದೇಶವಾಗಿ ಘೋಷಿಸಬೇಕೆಂಬ ಬೇಡಿಕೆ ಇಟ್ಟಿದ್ದರು.ಾಪಹರಿಸಿದ ರೈಲಿನಲ್ಲಿ ಸುಮಾರು 500 ಪ್ರಯಾಣಿಕರು

ಪಾಕ್‌ ರೈಲು ಹೈಜಾಕ್‌ : ರಕ್ಷಣಾ ಕಾರ್ಯಾಚರಣೆ ಮುಕ್ತಾಯ, 33 ಬಂಡುಕೋರರ ಹತ್ಯೆ Read More »

ಲಿಟ್ಲ್ ಫ್ಲವರ್ ಶಾಲೆಯಲ್ಲಿ ಮೇಳೈಸಿದ ಸ್ಕೌಟ್, ಗೈಡ್ , ಕಬ್ ಮತ್ತು ಬುಲ್ ಬುಲ್ ವಾರ್ಷಿಕ ಮೇಳ

ಪುತ್ತೂರು : ಶತಮಾನದ ಹೊಸ್ತಿಲಲ್ಲಿರುವ ಲಿಟ್ಲ್ ಫ್ಲವರ್ ಹಿ ಪ್ರಾ ಶಾಲೆ ದರ್ಬೆ ಪುತ್ತೂರು ಇಲ್ಲಿ ಶಾಲಾ ಸ್ಕೌಟ್, ಗೈಡ್ , ಕಬ್ ಮತ್ತು ಬುಲ್ ಬುಲ್ ವಾರ್ಷಿಕ ಮೇಳವು ಎರಡು ದಿನ ಅದ್ದೂರಿಯಾಗಿ ನೆರವೇರಿತು. ಮೊದಲ ದಿನ 9.00 ಗಂಟೆಗೆ ಶಾಲಾ ಸಂಚಾಲಕಿ ಭಗಿನಿ ಪ್ರಶಾಂತಿ ಬಿ. ಎಸ್ ಅಧ್ಯಕ್ಷತೆಯಲ್ಲಿ ಧ್ವಜಾರೋಹಣ ನೇರವೇರಿತು. ಶಾಲಾ ಸ್ಕೌಟ್, ಗೈಡ್ , ಕಬ್ ಮತ್ತು ಬುಲ್ ಬುಲ್ ದಳದಿಂದ 350 ಮಕ್ಕಳು ಭಾಗವಹಿಸಿದರು. ನಂತರ ನಡೆದ ಉದ್ಘಾಟನಾ ಸಮಾರಂಭದಲ್ಲಿ

ಲಿಟ್ಲ್ ಫ್ಲವರ್ ಶಾಲೆಯಲ್ಲಿ ಮೇಳೈಸಿದ ಸ್ಕೌಟ್, ಗೈಡ್ , ಕಬ್ ಮತ್ತು ಬುಲ್ ಬುಲ್ ವಾರ್ಷಿಕ ಮೇಳ Read More »

ಗ್ಯಾರಂಟಿ ಅನುಷ್ಠಾನ ಸಮಿತಿ ನೆಪದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರನ್ನು ಸಾಕುತ್ತಿರುವ ಸರಕಾರ : ವಿಪಕ್ಷ ಆರೋಪ

ಪಕ್ಷದ ಕಾರ್ಯಕರ್ತರಿಗಾಗಿ ಖಜಾನೆ ಲೂಟಿ ಮಾಡಬೇಡಿ; ಕೆಪಿಸಿಸಿ ಹಣ ಕೊಡಿ ಎಂದು ಆಗ್ರಹ ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಮೇಲ್ವಿಚಾರಣೆ ಸಮಿತಿಗಳನ್ನು ರಚಿಸಿ, ಅವುಗಳಿಗೆ ಪಕ್ಷದ ನಾಯಕರು ಮತ್ತು ಕಾರ್ಯಕರ್ತರನ್ನು ನೇಮಿಸಿ ಅವರಿಗೆ ಪ್ರತಿತಿಂಗಳು ಸಾವಿರಗಟ್ಟಲೆ ಸಂಬಳ ಕೊಡುತ್ತಿರುವ ವಿಚಾರ ಭಾರಿ ವಿವಾದಕ್ಕೆ ಕಾರಣವಾಗಿದೆ. ವಿಪಕ್ಷ ಬಿಜೆಪಿ-ಜೆಡಿಎಸ್‌ ಸದನದಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಿ ಹೋರಾಟ ಶುರು ಮಾಡಿದೆ. ಸದನದ ಹೊರಗೂ ಇಂದು ಬಿಜೆಪಿ ಸರಕಾರದ ವಿರುದ್ಧ ಪ್ರತಿಭಟನೆ ನಡೆಸಿದೆ.ಗ್ಯಾರಂಟಿ ಅನುಷ್ಠಾನ ಸಮಿತಿಗಳು ಕಾಂಗ್ರೆಸ್‌

ಗ್ಯಾರಂಟಿ ಅನುಷ್ಠಾನ ಸಮಿತಿ ನೆಪದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರನ್ನು ಸಾಕುತ್ತಿರುವ ಸರಕಾರ : ವಿಪಕ್ಷ ಆರೋಪ Read More »

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆಯಿಂದ  ನಿರ್ಗತಿಕ  ಕುಟುಂಬಕ್ಕೆ  ಮಾಸಾಸನ ಕೈಪಿಡಿ  ಹಸ್ತಾಂತರ

ವಿಟ್ಲ : ಶ್ರೀ  ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ)  ವಿಟ್ಲ  ಬಂಟ್ವಾಳ ತಾಲೂಕು  ಕೆದಿಲ ಗ್ರಾಮದ ಅಂಗರಾಜೆ  ಜಾಕುರವರಿಗೆ  ಮಸಾಸನ  ಕೈಪಿಡಿ  ವಿತರಣೆ ಮಾಡಲಾಯಿತು. ಮನೆಗೆ ಆಧಾರ ಸ್ತಂಭವಾಗಿದ್ದ  ಮಗ  ವೆಲ್ಡಿಂಗ್  ಕೆಲಸ ಮಾಡುತ್ತಿದ್ದಾಗ  ಬಿದ್ದು  ಮೃತಪಟ್ಟಿರುತ್ತಾರೆ. ದೊಡ್ಡ ಮಗಳು  ಹೃದ್ರೋಗ ಸಮಸ್ಯೆಯಿಂದ  ಬಳಲುತಿದ್ದು, ಸಣ್ಣ ಮಗಳು ಬುದ್ಧಿಮಾಂದ್ಯಯಾಗಿದ್ದು. ಶ್ರೀ ಕ್ಷೇತ್ರದಿಂದ  ಮಂಜೂರಾದ  ಮಾಸಾಸನ ಕೈಪಿಡಿಯನ್ನು ಶೌರ್ಯ ವಿಪತ್ತು ನಿರ್ವಹಣಾ  ಕೆದಿಲದ ಸದಸ್ಯರು  ವಿತರಿಸಿದರು. ಈ ಸಂದರ್ಭದಲ್ಲಿ ಜ್ಞಾನವಿಕಾಸ ಸಮನ್ವಯಧಿಕಾರಿ ದೀಪಾ, ಕೆದಿಲ B

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆಯಿಂದ  ನಿರ್ಗತಿಕ  ಕುಟುಂಬಕ್ಕೆ  ಮಾಸಾಸನ ಕೈಪಿಡಿ  ಹಸ್ತಾಂತರ Read More »

ಭಾವ ತೀರ ಯಾನ ಸಿನಿಮಾ ಇಂದು ಮತ್ತು ನಾಳೆ ಸಂಜೆ  7.15 ಕ್ಕೆ ಚಿತ್ರಪ್ರದರ್ಶನ

ಪುತ್ತೂರು : ಸುಳ್ಯದ ಯುವ ಸಂಗೀತ ನಿರ್ದೆಶಕ ಮಯೂರ ಅಂಬೆಕಲ್ಲು ಸಾರಥ್ಯದಲ್ಲಿ ಮಾಡಿಬಂದ “ಭಾವ ತೀರ ಯಾನ” ಚಲನಚಿತ್ರ ಪುತ್ತೂರಿನ ಭಾರತ್ ಸಿನಿಮಾನ್ ನಲ್ಲಿ ನಿರಂತರ ಪ್ರದರ್ಶನ ಕಾಣುತ್ತಿದೆ. 21ನೇ ದಿನಕ್ಕೆ ಕಾಲಿರಿಸಿದೆ. ಮಾ. 12 ಮತ್ತು 13 ರಂದು ಸಂಜೆ 7.15 ಕ್ಕೆ ಚಿತ್ರ ಪ್ರದರ್ಶನಕ್ಕೆ ಸಮಯ ನಿಗದಿಯಾಗಿದೆ. ಕೌಂಟರ್‍ ನಲ್ಲಿ ಟಿಕೆಟ್ ಪಡೆದುಕೊಳ್ಳಲು ಕಷ್ಟ ಸಾಧ್ಯವಾಗುವವರು Book My Show Appನಲ್ಲಿ ticketಗಳನ್ನು ಕಾಯ್ದಿರಿಸಿಕೊಳ್ಳಬಹುದು ಎಂದು ನಿರ್ಮಾಪಕರು ತಿಳಿಸಿದ್ದಾರೆ.

ಭಾವ ತೀರ ಯಾನ ಸಿನಿಮಾ ಇಂದು ಮತ್ತು ನಾಳೆ ಸಂಜೆ  7.15 ಕ್ಕೆ ಚಿತ್ರಪ್ರದರ್ಶನ Read More »

ಪಾಕಿಸ್ಥಾನ ರೈಲು ಹೈಜಾಕ್‌ : 155 ಪ್ರಯಾಣಿಕರನ್ನು ರಕ್ಷಿಸಿದ ಭದ್ರತಾ ಪಡೆ

27 ಬಂಡುಕೋರರ ಹತ್ಯೆ, 200ಕ್ಕೂ ಅಧಿಕ ಪ್ರಯಾಣಿಕರು ಒತ್ತೆಸೆರೆಯಲ್ಲಿ ಇಸ್ಲಾಮಾಬಾದ್‌ : ಪಾಕಿಸ್ಥಾನದಲ್ಲಿ ಬಲೂಚಿಸ್ಥಾನದ ಪ್ರತ್ಯೇಕವಾದಿಗಳು ಒಂದಿಡೀ ರೈಲನ್ನು ಅಪಹರಿಸಿ ನೂರಾರು ಪ್ರಯಾಣಿಕರನ್ನು ಒತ್ತೆಸೆರೆಯಲ್ಲಿಟ್ಟುಕೊಂಡಿದ್ದು, ಪ್ರಯಾಣಿಕರನ್ನು ರಕ್ಷಿಸಲು ಭದ್ರತಾ ಪಡೆಗಳು ತೀವ್ರ ಕಾರ್ಯಾಚರಣೆ ನಡೆಸುತ್ತಿವೆ. ಮಂಗಳವಾರ ಕ್ವೆಟ್ಟಾದಿಂದ ಪೇಷಾವರಕ್ಕೆ ಬರುತ್ತಿದ್ದ ಜಾಫರ್‌ ಎಕ್ಸ್‌ಪ್ರೆಸ್‌ ಪ್ಯಾಸೆಂಜರ್‌ ರೈಲನ್ನು ʼದ ಬಲೂಚಿಸ್ಥಾನ್‌ ಲಿಬರೇಶನ್‌ ಆರ್ಮಿʼಯ ಬಂಡುಕೋರರು ಪ್ರಯಾಣಿಕರು ಮತ್ತು ಭದ್ರತಾ ಸಿಬ್ಬಂದಿ ಸಮೇತ ಅಪಹರಿಸಿಕೊಂಡು ಹೋಗಿದ್ದಾರೆ.ರಾತ್ರಿಗಾಗುವಾಗ ಮಹಿಳೆಯರು ಮತ್ತು ಮಕ್ಕಳು ಸೇರಿ 155 ಪ್ರಯಾಣಿಕರನ್ನು ರಕ್ಷಿಸಲಾಗಿದೆ, ಹಾಗೂ ಈ ಕಾರ್ಯಾಚರಣೆಯಲ್ಲಿ

ಪಾಕಿಸ್ಥಾನ ರೈಲು ಹೈಜಾಕ್‌ : 155 ಪ್ರಯಾಣಿಕರನ್ನು ರಕ್ಷಿಸಿದ ಭದ್ರತಾ ಪಡೆ Read More »

ದಾರಿ ಕೇಳುವ ನೆಪದಲ್ಲಿ ಚಿನ್ನ ಕದ್ದು ಪರಾರಿ

ಪುತ್ತೂರು : ದಾರಿ ಕೇಳುವ ನೆಪದಲ್ಲಿ ಚಿನ್ನದ ಉಂಗುರವನ್ನು  ಎಳೆದು ಕದ್ದೊಯ್ದು ಪರಾರಿಯಾಗಿರುವ ಘಟನೆ ಪುತ್ತೂರಿನ ರಾಗಿಕುಮೇರ್ ಬಳಿಯ ಅಂದ್ರಟ್ಟ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ ಬೈಕ್ ನಲ್ಲಿ ಅಪರಿಚಿತ ವ್ಯಕ್ತಿಯೋರ್ವ ದಾರಿ ಕೇಳಿದ್ದಾನೆ. ಈ ಸಂದರ್ಭ ದಾರಿ ಹೇಳಲು ಬಂದ ವ್ಯಕ್ತಿಯ ಕೈಯಲ್ಲಿದ್ದ ಉಂಗುರವನ್ನು ಕಿತ್ತು ಬೈಕ್ ನಲ್ಲಿ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಪುತ್ತೂರು ನಗರ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  

ದಾರಿ ಕೇಳುವ ನೆಪದಲ್ಲಿ ಚಿನ್ನ ಕದ್ದು ಪರಾರಿ Read More »

ನಟಿ ಸೌಂದರ್ಯ ಸಾವಿಗೆ ಈ ನಟನೇ ಕಾರಣವಂತೆ

ನಟಿ ಸತ್ತು 21 ವರ್ಷಗಳ ಬಳಿಕ ದಾಖಲಾಯಿತು ದೂರು ಬೆಂಗಳೂರು: ಕನ್ನಡದ ಮೋಹಕ ನಟಿ ಸೌಂದರ್ಯಾ ಹೆಲಿಕಾಪ್ಟರ್‌ ಅಪಘಾತದಲ್ಲಿ ತೀರಿಕೊಂಡು 20 ವರ್ಷಗಳೇ ಕಳೆದಿವೆ. ಈಗ ಅವರ ಸಾವಿನ ಬಗ್ಗೆ ಪ್ರಕಣವೊಂದು ದಾಖಲಾಗಿದೆ. ಸೌಂದರ್ಯಾ ಸಾವಿನ ಹಿಂದೆ ತೆಲುಗಿನ ಖ್ಯಾತ ನಟ, ನಿರ್ಮಾಪಕ ಮೋಹನ್ ಬಾಬು ಕೈವಾಡ ಇದೆ ಎಂದು ಆರೋಪಿಸಿ ದೂರು ದಾಖಲಿಸಲಾಗಿದೆ. ಈ ವಿಚಾರ ಸಾಕಷ್ಟು ಈಗ ಸಂಚಲನ ಸೃಷ್ಟಿ ಮಾಡಿದೆ. ಸೌಂದರ್ಯಾ 2004ರ ಏಪ್ರಿಲ್ 17ರಂದು ನಿಧನ ಹೊಂದಿದ್ದಾರೆ. ಅವರಿದ್ದ ಖಾಸಗಿ ಹೆಲಿಕಾಪ್ಟರ್‌

ನಟಿ ಸೌಂದರ್ಯ ಸಾವಿಗೆ ಈ ನಟನೇ ಕಾರಣವಂತೆ Read More »

error: Content is protected !!
Scroll to Top