ಸುದ್ದಿ

ರನ್ಯಾ ರಾವ್‌ ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ : ಕೇಳಿ ಬರುತ್ತಿದೆ ರಾಜಕೀಯ ನಾಯಕರ ಹೆಸರು

ನಟಿಯ ಕಂಪನಿಗೆ ಮಂಜೂರಾಗಿದೆಯಾ 12 ಎಕರೆ ಜಮೀನು? ಬೆಂಗಳೂರು: ಕನ್ನಡ ನಟಿ ರನ್ಯಾ ರಾವ್‌ ಒಳಗೊಂಡಿರುವ ಗೋಲ್ಡ್‌ ಸ್ಮಗ್ಲಿಂಗ್‌ ಜಾಲದ ಬಾಹುಗಳು ಬಹಳ ವಿಶಾಲವಾಗಿ ಚಾಚಿಕೊಂಡಿವೆ ಎಂಬ ವಿಚಾರ ತನಿಖೆ ಮುಂದುವರಿದಂತೆ ಬಯಲಾಗುತ್ತಿದೆ. ಕೆಲದಿನಗಳ ಹಿಂದೆಯಷ್ಟೇ ದಿಲ್ಲಿ ಮತ್ತು ಮುಂಬಯಿ ವಿಮಾನ ನಿಲ್ದಾಣಗಳಲ್ಲೂ ಭಾರಿ ಪ್ರಮಾಣದ ಚಿನ್ನದ ಬಿಸ್ಕಟ್‌ಗಳು ವಶವಾಗಿದ್ದು, ಈ ಪ್ರಕರಣಗಳಿಗೂ ರನ್ಯಾ ರಾವ್‌ ಒಳಗೊಂಡಿರುವ ಪ್ರಕರಣಕ್ಕೂ ಸಂಬಂಧ ಇದೆ ಎಂಬ ಅನುಮಾನ ಬಂದಿದೆ. ಮೂರು ಕಡೆ ಒಂದೇ ರೀತಿಯ ಚಿನ್ನದ ಬಿಸ್ಕೆಟ್‌ಗಳು ವಶವಾಗಿವೆ. ಮೂರೂ […]

ರನ್ಯಾ ರಾವ್‌ ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ : ಕೇಳಿ ಬರುತ್ತಿದೆ ರಾಜಕೀಯ ನಾಯಕರ ಹೆಸರು Read More »

ಕರಿದ ಹಸಿರು ಬಟಾಣಿಯಲ್ಲೂ ಇದೆ ಕ್ಯಾನ್ಸರ್‌ಕಾರಕ ಅಂಶ

ಪ್ರಯೋಗಾಲಯ ಪರೀಕ್ಷೆಯಲ್ಲಿ ದೃಢ, ಬ್ಯಾನ್‌ಗೆ ಶಿಫಾರಸ್ಸು ಬೆಂಗಳೂರು: ಇಡ್ಲಿ, ಗೋಬಿಮಂಚೂರಿ, ಕಬಾಬ್‌ ಸೇರಿದಂತೆ ವಿವಿಧ ಆಹಾರ ವಸ್ತುಗಳಲ್ಲಿ ಕ್ಯಾನ್ಸರ್‌ಕಾರಕ ರಾಸಾಯನಿಕ ಅಂಶ ಪತ್ತೆಯಾದ ಬಳಿಕ ಈಗ ಕರಿದ ಹಸಿರು ಬಟಾಣಿಯಲ್ಲೂ ಕ್ಯಾನ್ಸರ್‌ಕಾರಕ ಅಂಶ ಇರುವುದು ಪ್ರಯೋಗಾಲಯದ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಇತ್ತೀಚೆಗಷ್ಟೇ ಇಡ್ಲಿ ಬೇಯಿಸಲು ಪ್ಲಾಸ್ಟಿಕ್ ಹಾಳೆಗಳನ್ನು ಬಳಸುವುದರಿಂದ ಕ್ಯಾನ್ಸರ್​ಕಾರಕ ಅಂಶ ಬಿಡುಗಡೆಯಾಗಿ ಇಡ್ಲಿಯನ್ನು ಸೇರಿಕೊಳ್ಳುತ್ತಿರುವುದು ಪರೀಕ್ಷೆಯಲ್ಲಿ ದೃಢಪಟ್ಟಿತ್ತು. ಬಳಿಕ ಹೊಟೇಲ್, ಉಪಾಹಾರ ಮತ್ತು ತಿನಿಸು ಕೇಂದ್ರಗಳಲ್ಲಿ ಇಡ್ಲಿ ತಯಾರಿಸಲು ಪ್ಲಾಸ್ಟಿಕ್ ಹಾಳೆಯ ಬಳಕೆಯನ್ನು ನಿಷೇಧಿಸಲಾಗಿದೆ. ಇದರ ಬೆನ್ನಲ್ಲೇ

ಕರಿದ ಹಸಿರು ಬಟಾಣಿಯಲ್ಲೂ ಇದೆ ಕ್ಯಾನ್ಸರ್‌ಕಾರಕ ಅಂಶ Read More »

ಸಿರಿಯಾ : ಭದ್ರತಾ ಪಡೆಗಳಿಂದ 1000ಕ್ಕೂ ಅಧಿಕ ನಾಗರಿಕರ ಹತ್ಯೆ

ಮಾಜಿ ಅಧ್ಯಕ್ಷ ಅಸಾದ್‌ ಬೆಂಬಲಿಗರ ಮೇಲೆ ಪ್ರತೀಕಾರದ ಹಿಂಸಾಚಾರ ಬೇರೂತ್‌: ಸಿರಿಯಾದಲ್ಲಿ ಕಳೆದ ಎರಡು ದಿನಗಳಿಂದ ಭದ್ರತಾ ಪಡೆಗಳು ಮತ್ತು ಪದಚ್ಯುತ ಅಧ್ಯಕ್ಷ ಬಾಶರ್‌ ಅಲ್‌ ಅಸಾದ್‌ ಬೆಂಬಲಿಗರ ನಡುವೆ ನಡೆಯುತ್ತಿರುವ ಭೀಕರ ಹಿಂಸಾಚಾರದಲ್ಲಿ 1000ಕ್ಕೂ ಅಧಿಕ ನಾಗರಿಕರು ಕೊಲ್ಲಲ್ಪಟ್ಟಿದ್ದಾರೆ ಎಂದು ವರದಿಯಾಗಿದೆ. ಮೆಡಿಟೇರಿಯನ್‌ ಕರಾವಳಿಯಲ್ಲಿ ಎರಡು ದಿನಗಳಿಂದ ಭೀಕರ ಹಿಂಸಾಚಾರ ನಡೆಯುತ್ತಿದೆ. ದಂಗೆಯೆದ್ದಿರುವ ಅಲ್ವೈಟ್‌ ಸಮುದಾಯದ ಜನರನ್ನು ಭದ್ರತಾ ಪಡೆ ನಿರ್ದಯವಾಗಿ ಸಾಯಿಸುತ್ತಿದೆ ಎನ್ನಲಾಗಿದೆ.ಸಿರಿಯಾದ ಹೊಸ ಸರಕಾರ ಮತ್ತು ಮಾಜಿ ಅಧ್ಯಕ್ಷ ಅಸಾದ್‌ ಬೆಂಬಲಿಗರ ನಡುವೆ

ಸಿರಿಯಾ : ಭದ್ರತಾ ಪಡೆಗಳಿಂದ 1000ಕ್ಕೂ ಅಧಿಕ ನಾಗರಿಕರ ಹತ್ಯೆ Read More »

ಮದುವೆ ಸಮಾರಂಭದಲ್ಲಿ ಪ್ಲಾಸ್ಟಿಕ್‌ ನೀರಿನ ಬಾಟಲಿ ಬಳಕೆ ಮಾಡುವಂತಿಲ್ಲ

ಹೈಕೋರ್ಟಿನ ಮಹತ್ವದ ಆದೇಶ ತಿರುವನಂತಪುರ: ಮದುವೆ ಮತ್ತಿತರ ಖಾಸಗಿ ಸಮಾರಂಭಗಳಲ್ಲಿ ಪ್ಲಾಸಿಕ್‌ ನೀರಿನ ಬಾಟಲಿ ಬಳಕೆ ಮಾಡಬಾರದು ಎಂದು ಕೇರಳ ಹೈಕೋರ್ಟ್‌ ಮಹತ್ವದ ಆದೇಶ ನೀಡಿದೆ. ಪರಿಸರದ ಬಗ್ಗೆ ಕಾಳಜಿ ವ್ಯಕ್ತಪಡಿಸಿರುವ ನ್ಯಾಯಾಲಯ ರಾಜ್ಯದಲ್ಲಿ ಮದುವೆ ಮತ್ತಿತರ ಸಮಾರಂಭದಲ್ಲಿ ನೀರಿನ ಪ್ಲಾಸ್ಟಿಕ್ ಬಾಟಲಿಗಳನ್ನು ಬಳಸಬಾರದು ಎಂದು ಹೇಳಿದೆ. ಸಣ್ಣ ಪ್ಲಾಸ್ಟಿಕ್ ಬಾಟಲಿಗಳು ಪ್ರಕೃತಿಗೆ ಹಾನಿಯನ್ನುಂಟುಮಾಡುತ್ತಿವೆ ಮತ್ತು ಯಾವುದೇ ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್ ವಸ್ತುಗಳನ್ನು ಬಳಸಬಾರದು ಎಂದು ತೀರ್ಪಿನಲ್ಲಿ ಸ್ಪಷ್ಟವಾಗಿ ಹೇಳಿದೆ.ಮರುಬಳಕೆ ಮಾಡಲಾಗದ ಪ್ಲಾಸ್ಟಿಕ್ ಅನ್ನು ತೊಡೆದುಹಾಕಲು ಕಠಿಣ ಕ್ರಮಗಳು

ಮದುವೆ ಸಮಾರಂಭದಲ್ಲಿ ಪ್ಲಾಸ್ಟಿಕ್‌ ನೀರಿನ ಬಾಟಲಿ ಬಳಕೆ ಮಾಡುವಂತಿಲ್ಲ Read More »

ಪರೀಕ್ಷೆಗೆ ಹೆದರಿ ಮನೆಬಿಟ್ಟು ಹೋಗಿದ್ದನೇ ದಿಗಂತ್‌?

ಶಿವಮೊಗ್ಗ, ಮೈಸೂರು, ಬೆಂಗಳೂರು ತಿರುಗಾಡಿ ಉಡುಪಿಗೆ ಬಂದಾಗ ಪತ್ತೆ ​ಮಂಗಳೂರು : ಬಂಟ್ವಾಳ ತಾಲೂಕಿನ ಫರಂಗಿಪೇಟೆ ಕಿದೆಬೆಟ್ಟು ನಿವಾಸಿ‌ ಪಿಯುಸಿ ವಿದ್ಯಾರ್ಥಿ ದಿಗಂತ್ ನಿಗೂಢ ನಾಪತ್ತೆ ಪ್ರಕರಣ ಕೊನೆಗೂ ನಿನ್ನೆ ಬಗೆಹರಿದಿದೆ. ದಿಗಂತ್‌ ನಾಪತ್ತೆ ಪ್ರಕರಣ ರಾಜ್ಯಾದ್ಯಂತ ಸುದ್ದಿಯಾಗಿ ವಿಧಾನ ಮಂಡಲದ ಕಲಾಪದಲ್ಲೂ ಪ್ರತಿಧ್ವನಿಸಿತ್ತು. ಸ್ಪೀಕರ್‌ ಖಾದರ್‌ ನೀಡಿದ ಸೂಚನೆಯ ಬಳಿಕ ಪೊಲೀಸರು 11 ತಂಡಗಳನ್ನು ರಚಿಸಿ ಹುಡುಕಾಡಿ ದಿಗಂತ್‌ನನ್ನು ನಿನ್ನೆ ಉಡುಪಿಯ ಡಿಮಾರ್ಟ್‌ ಮಾಲ್‌ನಲ್ಲಿ ಪತ್ತೆಹಚ್ಚಿದ್ದಾರೆ. ಹಿಂದು ಸಂಘಟನೆಗಳಿಂದ ಪ್ರತಿಭಟನೆ ಸಹಿತ ಹಲವು ಬೆಳವಣಿಗೆಗಳಿಗೆ ಕಾರಣವಾಗಿದ್ದ

ಪರೀಕ್ಷೆಗೆ ಹೆದರಿ ಮನೆಬಿಟ್ಟು ಹೋಗಿದ್ದನೇ ದಿಗಂತ್‌? Read More »

ಚಾಂಪಿಯನ್ಸ್‌ ಟ್ರೋಫಿ : ಫೈನಲ್‌ ಪಂದ್ಯದ ಮೇಲೆ ನಡೆದಿದೆ ಭರ್ಜರಿ ಬೆಟ್ಟಿಂಗ್‌

ಭಾರತ-ನ್ಯೂಜಿಲ್ಯಾಂಡ್‌ ಫೈನಲ್‌ ಕದನಕ್ಕೆ ಕ್ಷಣಗಣನೆ; ಭಾರತವೇ ಬುಕ್ಕಿಗಳ ಫೇವರಿಟ್‌ ದುಬೈ : ಭಾರತ ಮತ್ತು ನ್ಯೂಜಿಲ್ಯಾಂಡ್‌ ತಂಡಗಳ ನಡುವೆ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಐಸಿಸಿ ಟೂರ್ನಿಯ ಫೈನಲ್​ನಲ್ಲಿ ನ್ಯೂಜಿಲ್ಯಾಂಡ್‌ ವಿರುದ್ಧ ಭಾರತ ಗೆದ್ದ ಇತಿಹಾಸವಿಲ್ಲ. ಹೀಗಾಗಿ ಈ ಬಾರಿ ಏನಾಗಲಿದೆ ಎಂಬ ತೀವ್ರ ಕುತೂಹಲ ಕ್ರಿಕೆಟ್‌ ಪ್ರೇಮಿಗಳಲ್ಲಿದೆ. ಇದರ ಜೊತೆಗೆ ಈ ಪಂದ್ಯದ ಮೇಲೆ ಭರ್ಜರಿ ಬೆಟ್ಟಿಂಗ್‌ ಕೂಡ ನಡೆದಿದೆ. ದುಬೈನ ಇಂಟರ್​ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಇಂದು ಮಧ್ಯಾಹ್ನ ಪಂದ್ಯ ಶುರುವಾಗಲಿದೆ.

ಚಾಂಪಿಯನ್ಸ್‌ ಟ್ರೋಫಿ : ಫೈನಲ್‌ ಪಂದ್ಯದ ಮೇಲೆ ನಡೆದಿದೆ ಭರ್ಜರಿ ಬೆಟ್ಟಿಂಗ್‌ Read More »

ತಾಯಿ ಹಚ್ಚಿದ ಅಗರಬತ್ತಿಯಿಂದ ಏಳುತಿಂಗಳ ಮಗು ಮೃತ್ಯು

ಕನಕಗಿರಿ :  ಮಗುವಿಗೆ ಅನಾರೋಗ್ಯವಾಗಿದ್ದರಿಂದ ಅಗರಬತ್ತಿಯಿಂದ ಬಿಸಿ ಮುಟ್ಟಿಸಿದರೆ ಗುಣಮುಖವಾಗಬಹುದೆಂದು ತಿಳಿದು ಏಳು ತಿಂಗಳ ಮಗುವಿಗೆ ಅಗರಬತ್ತಿಯಿಂದ ಬಿಸಿ ಮುಟ್ಟಿಸಿದ್ದು, ಬಳಿಕ ಗುಣ ಪಡಿಸಲು ಮನೆಮದ್ದು ಮಾಡಿದ ಪರಿಣಾಮ ಮಗು ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ. ಮಗು ಮೃತಪಟ್ಟ ವೇಳೆ ಮರಣೋತ್ತರ ಪರೀಕ್ಷೆ ಮಾಡಿದ ವೈದ್ಯರು ‘ಸುಟ್ಟಗಾಯಗಳಿಂದ ನಂಜಾಗಿ ಮಗು ಸಾವನ್ನಪ್ಪಿದೆ’ ಎಂದು ತಿಳಿಸಿದ್ದಾರೆ. ಈ ಕುರಿತು ಮರಣೋತ್ತರ ಪರೀಕ್ಷೆಯ ವರದಿಯನ್ನೂ ನೀಡಿದ್ದಾರೆ. ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿ ಪ್ರಶಾಂತ್ ಎಂಬುವವರು

ತಾಯಿ ಹಚ್ಚಿದ ಅಗರಬತ್ತಿಯಿಂದ ಏಳುತಿಂಗಳ ಮಗು ಮೃತ್ಯು Read More »

ನಾಪತ್ತೆಯಾದ ದಿಗಂತ್‍ ಪತ್ತೆ

ಬಂಟ್ವಾಳ : ಸುಮಾರು  13 ದಿನಗಳ ಕಾಲ  ನಾಪತ್ತೆಯಾಗಿದ್ದ ದಿಗಂತ್ ಪತ್ತೆಯಾಗಿದ್ದು, ಪೊಲೀಸರು ಕರೆ ತರುತ್ತಿದ್ದಾರೆ ಎಂದು ತಿಳಿದುಬಂದಿದೆ. ಫೆ. 25ರಂದು ದೇವಸ್ಥಾನಕ್ಕೆ ಹೋಗಿ ಬರುತ್ತೇನೆ ಎಂದು ಹೋಗಿದ್ದ ದಿಗಂತ್ ಹಿಂದಿರುಗಿ ಬಂದಿರಲಿಲ್ಲ. ರೈಲ್ವೇ ಹಳಿಯಲ್ಲಿ ಆತನ ಚಪ್ಪಲಿಗಳು, ಮೊಬೈಲ್ ಪತ್ತೆಯಾಗಿ ಸಾಕಷ್ಟು ಅನುಮಾನಗಳ ಜೊತೆ ಗೊಂದಲಕ್ಕೆ ಕಾರಣವಾಗಿತ್ತು. ಫರಂಗಿಪೇಟೆಯಲ್ಲಿ ಪ್ರತಿಭಟನೆ ನಡೆದು ಪೊಲೀಸರು ತನಿಖೆ ಸರಿಯಾಗಿ ಮಾಡಿಲ್ಲ ಎಂಬ ಆರೋಪ ಕೇಳಿ ಬಂದಿತ್ತು. ಆದರೆ ಇದೀಗ ಆತ ಕರಾವಳಿ ಭಾಗದಲ್ಲಿ ಪತ್ತೆಯಾಗಿದ್ದಾನೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ

ನಾಪತ್ತೆಯಾದ ದಿಗಂತ್‍ ಪತ್ತೆ Read More »

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಸಮಾಜಶಾಸ್ತ್ರ ವಿಭಾಗದಿಂದ ಆಟದಿಂದ ಪಾಠ  ಎಂಬ ವಿಸ್ತರಣಾ ಕಾರ್ಯಕ್ರಮ

ಎನೆಕಲ್ಲು : ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ , ಆಂತರಿಕ ಗುಣಮಟ್ಟ ಭರವಸಾ ಕೋಶ ಸಮಾಜಶಾಸ್ತ್ರ ವಿಭಾಗದ ಆಶ್ರಯದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಎನೆಕಲ್ಲು ಇಲ್ಲಿ ಆಟದಿಂದ ಪಾಠ ಎಂಬ ವಿಸ್ತರಣಾ ಕಾರ್ಯಕ್ರಮ ಮಾ.8 (ಇಂದು) ರಂದು ನಡೆಯಿತು. ಸಮಾಜಶಾಸ್ತ್ರ ವಿಭಾಗದ  ತೃತೀಯ ಪದವಿಯ ವಿದ್ಯಾರ್ಥಿಗಳು, ಶಾಲಾ ಮಕ್ಕಳಿಗೆ ವಿವಿಧ ರೀತಿಯ ಆಟಗಳನ್ನು ಹಮ್ಮಿಕೊಂಡು ಆ ಮೂಲಕ ಪಾಠವನ್ನು ಕಲಿಸಿದರು.  ವಿದ್ಯಾರ್ಥಿಗಳಲ್ಲಿ ಏಕಾಗ್ರತೆ, ಸಮಯ ಪರಿಪಾಲನೆ, ಕೌಶಲ್ಯವನ್ನು ಹೆಚ್ಚಿಸುವ ಆಟಗಳನ್ನು ಆಡಿಸಿದರು.   ಕಾರ್ಯಕ್ರಮದಲ್ಲಿ ಸರಕಾರಿ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಸಮಾಜಶಾಸ್ತ್ರ ವಿಭಾಗದಿಂದ ಆಟದಿಂದ ಪಾಠ  ಎಂಬ ವಿಸ್ತರಣಾ ಕಾರ್ಯಕ್ರಮ Read More »

ಕೇಪು ಕಾರ್ಯಕ್ಷೇತ್ರದ  ಕಲ್ಲಂಗಳ ಶಾಲೆಯಲ್ಲಿ  ಟ್ಯೂಷನ್ ಕ್ಲಾಸ್ ಸಮಾರೋಪ  ಕಾರ್ಯಕ್ರಮ

ಕೇಪು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ ) ವಿಟ್ಲ ತಾಲೂಕಿನ  ಕೇಪು ವಲಯದ ಕೇಪು ಕಾರ್ಯಕ್ಷೇತ್ರದ  ಕಲ್ಲಂಗಳ ಶಾಲೆಯಲ್ಲಿ  3 ತಿಂಗಳ ಟ್ಯೂಷನ್ ಕ್ಲಾಸ್  ಆಯೋಜಿಸಿದ್ದು  ಇದರ  ಸಮಾರೋಪ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು  ಕೇಪು ಒಕ್ಕೂಟ ಅಧ್ಯಕ್ಷ   ವೆಂಕಪ್ಪರವರು ವಹಿಸಿದ್ದರು.  ಶಾಲೆಯ ಮುಖ್ಯೋಪಾಧ್ಯಾಯಿಣಿ  ಮಾಲತಿ ಯೋಜನೆಯ ಮುಖಾಂತರ ನಡೆಯುವ ಕಾರ್ಯಕ್ರಮಗಳ ಬಗ್ಗೆ ಖುಷಿಯನ್ನು ವ್ಯಕ್ತಪಡಿಸಿದರು.   ಪೂರ್ವ ತಯಾರಿ  ಪರೀಕ್ಷೆಯಲ್ಲಿ ಉತ್ತಮ  ಫಲಿತಾಂಶ ಇದ್ದು  ಇನ್ನು ಮುಂದೆಯು ಇಂತಹ

ಕೇಪು ಕಾರ್ಯಕ್ಷೇತ್ರದ  ಕಲ್ಲಂಗಳ ಶಾಲೆಯಲ್ಲಿ  ಟ್ಯೂಷನ್ ಕ್ಲಾಸ್ ಸಮಾರೋಪ  ಕಾರ್ಯಕ್ರಮ Read More »

error: Content is protected !!
Scroll to Top