ಸುದ್ದಿ

ಕಾರು ವಿದ್ಯುತ್‌ ಕಂಬಕ್ಕೆ ಡಿಕ್ಕಿ: 7 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

ಬಂಟ್ವಾಳ ಸಮೀಪ ಮಾರಿಪಳ್ಳದಲ್ಲಿ ತಡರಾತ್ರಿ ಸಂಭವಿಸಿದ ಅಪಘಾತ ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಡಿವೈಡರ್‌ನ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ 7 ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡ ಘಟನೆ ಫರಂಗಿಪೇಟೆ ಸಮೀಪದ ಮಾರಿಪಳ್ಳ ಎಂಬಲ್ಲಿ ಬುಧವಾರ ತಡರಾತ್ರಿ ನಡೆದಿದೆ. ಬುಧವಾರ ರಾತ್ರಿ ಸುಮಾರು 12.45 ಗಂಟೆಗೆ ಈ ಘಟನೆ ನಡೆದಿದ್ದು, ಅಪಘಾತದಿಂದ ಗಂಭೀರ ಗಾಯಗೊಂಡ ವಿದ್ಯಾರ್ಥಿಗಳು ಉಡುಪಿ ಮೂಲದವರು ಎಂದು ತಿಳಿದುಬಂದಿದೆ. ಕಾರು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಕಂಬವನ್ನೇ ಎಳೆದುಕೊಂಡು ಹೋಗಿ ಬಳಿಕ […]

ಕಾರು ವಿದ್ಯುತ್‌ ಕಂಬಕ್ಕೆ ಡಿಕ್ಕಿ: 7 ವಿದ್ಯಾರ್ಥಿಗಳಿಗೆ ಗಂಭೀರ ಗಾಯ Read More »

ಅಡಿಕೆ ತೇವಾಂಶ ಮಿತಿ ಸಡಿಲಿಕೆ : ಕ್ಯಾ.ಬ್ರಿಜೇಶ್‌ ಚೌಟ ಮನವಿ

ಹೊಸ ನಿಯಮದಿಂದ ಅಡಕತ್ತರಿಯಲ್ಲಿ ಸಿಲುಕಿದ ಅಡಿಕೆ ಬೆಳೆಗಾಗರರು ನವದೆಹಲಿ: ಭಾರತೀಯ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಪ್ರಾಧಿಕಾರ ಅಡಿಕೆಗೆ ನಿಗದಿಪಡಿಸಿರುವ ತೇವಾಂಶ ಮಿತಿಯನ್ನು ಸಡಿಲಿಸುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್‌ ಚೌಟ ಕೇಂದ್ರ ಆಹಾರ ಸಂಸ್ಕರಣಾ ಕೈಗಾರಿಕೆಗಳ ಸಚಿವ ಚಿರಾಗ್‌ ಪಾಸ್ವಾನ್‌ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ. ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಅಡಿಕೆ ಬೆಳಗಾರರರಿಗೆ ಈ ರೀತಿಯ ತೇವಾಂಶ ಮಿತಿ ಹೇರಿಕೆಯು ಸಾಕಷ್ಟು ತೊಂದರೆಯುಂಟು ಮಾಡುತ್ತಿರುವುದನ್ನು ಮನವರಿಕೆ ಮಾಡಿದ್ದಾರೆ. ನಮ್ಮ ಪ್ರದೇಶದ ಹೆಚ್ಚಿನ ಸಂಖ್ಯೆಯ ಸಣ್ಣ

ಅಡಿಕೆ ತೇವಾಂಶ ಮಿತಿ ಸಡಿಲಿಕೆ : ಕ್ಯಾ.ಬ್ರಿಜೇಶ್‌ ಚೌಟ ಮನವಿ Read More »

ನಾಸಾದ ಮೂನ್‌ ಮಿಷನ್‌ ಆರ್ಟೆಮಿಸ್ ಯಶಸ್ವಿ ಉಡಾವಣೆ

50 ವರ್ಷಗಳ ಬಳಿಕ ಚಂದ್ರನ ಅನ್ವೇಷಣೆ – ನಾಲ್ವರು ಗಗನಯಾತ್ರಿಗಳಿರುವ ನೌಕೆ ಫ್ಲೋರಿಡಾ: 50 ವರ್ಷಗಳ ಬಳಿಕ ಚಂದ್ರನ ಅನ್ವೇಷಣೆಗೆ ಹೊರಟಿರುವ ನಾಸಾ ಐತಿಹಾಸಿಕ ಆರ್ಟೆಮಿಸ್-(Artemis II) ಮಿಷನ್‌ ಉಡಾವಣೆ ಯಶಸ್ವಿಯಾಗಿದೆ. ಅಮೆರಿಕದ ಕಾಲಮಾನ ಬುಧವಾರ ಸಂಜೆ 6:35 (ಭಾರತೀಯ ಕಾಲಮಾನ ಗುರುವಾರ ಬೆಳಗ್ಗೆ4.05) ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ನಾಲ್ವರು ಗಗನಯಾತ್ರಿಗಳಿದ್ದ ಒರಾಯನ್ ಬಾಹ್ಯಾಕಾಶ ನೌಕೆಯನ್ನು ಅತ್ಯಂತ ಶಕ್ತಿಶಾಲಿ ಸ್ಪೇಸ್ ಲಾಂಚ್ ಸಿಸ್ಟಮ್ (SLS) ರಾಕೆಟ್ ಮೂಲಕ ಬಾಹ್ಯಾಕಾಶಕ್ಕೆ ಕಳುಹಿಸಲಾಗಿದೆ. ಉಡಾವಣೆಯಾದ ಸುಮಾರು 8.5 ನಿಮಿಷಗಳ ನಂತರ

ನಾಸಾದ ಮೂನ್‌ ಮಿಷನ್‌ ಆರ್ಟೆಮಿಸ್ ಯಶಸ್ವಿ ಉಡಾವಣೆ Read More »

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಅಂಕ ಕೈಬಿಡುವ ಆದೇಶದ ವಿರುದ್ಧ ಪಿಐಎಲ್‌

ಪರೋಕ್ಷವಾಗಿ ದ್ವಿಭಾಷಾ ನೀತಿ ಜಾರಿಗೆ ತರುವ ಪ್ರಯತ್ನ ಎಂದು ವಿರೋಧ ಬೆಂಗಳೂರು : ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆಗೆ ಅಂಕಗಳ ಬದಲಿಗೆ ಗ್ರೇಡ್ ನೀಡುವ ಸರ್ಕಾರದ ತೀರ್ಮಾನ ಈಗ ಕಾನೂನು ಹೋರಾಟಕ್ಕೆ ನಾಂದಿ ಹಾಡಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಈ ದಿಢೀರ್ ಘೋಷಣೆಯು ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಕರಿ ನೆರಳು ಬೀರಲಿದೆ ಎಂದು ಆರೋಪಿಸಿ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಾಗಿದೆ. ಬೆಂಗಳೂರಿನ ನಿವಾಸಿಗಳಾದ ಎಚ್.ಎನ್. ಚಂದನಾ ಮತ್ತು ಎಸ್. ವೆಂಕಟೇಶ್ ಸಲ್ಲಿಸಿರುವ ಈ ಅರ್ಜಿಯಲ್ಲಿ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಅಂಕ ಕೈಬಿಡುವ ಆದೇಶದ ವಿರುದ್ಧ ಪಿಐಎಲ್‌ Read More »

ಇನ್‌ಸ್ಪೆಕ್ಟರ್‌ ಸಂದೇಶ್‌ ಅತ್ಯಾಚಾರ ಪ್ರಕರಣ ರದ್ದುಪಡಿಸಲು ಹೈಕೋರ್ಟ್‌ ನಕಾರ

ಅಧಿಕಾರ ದುರುಪಯೋಪಡಿಸಿಕೊಂಡಿರುವುದಕ್ಕೆ ತೀಕ್ಷ್ಣ ತರಾಟೆ ಮಂಗಳೂರು : ಶಿಕ್ಷಕಿ ದಾಖಲಿಸಿದ ಅತ್ಯಾಚಾರ ಪ್ರಕರಣ ರದ್ದುಕೋರಿ ಅಮಾನತಿನಲ್ಲಿರುವ ಮೂಡುಬಿದಿರೆಯ ಇನ್‌ಸ್ಪೆಕ್ಟರ್ ಸಂದೇಶ್‌ಗೆ ಹೈಕೋರ್ಟ್‌ ತೀಕ್ಷ್ಣವಾಗಿ ಚಾಟಿ ಬೀಸಿದೆ. ಎಫ್ಐಆರ್ ರದ್ದುಕೋರಿ ಸಂದೇಶ ಹೈಕೋರ್ಟ್ ಮೆಟ್ಟಿಲೇದ್ದರು. ಆದರೆ ಹೈಕೋರ್ಟ್​, ಇನ್‌ಸ್ಪೆಕ್ಟರ್ ಮಾಡಿರುವುದು ಅಧಿಕಾರದ ದುರುಪಯೋಗವಲ್ಲವೇ? ದೂರು ಕೊಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸಿದರೆ ಇನ್ನೇನಾಗುತ್ತೆ ಎಂದು ಸಂದೇಶ್​​ಗೆ ತರಾಟೆಗೆ ತೆಗೆದುಕೊಂಡಿದ್ದು, ಪ್ರಕರಣಕ್ಕೆ ಮಧ್ಯಂತರ ತಡೆ ನೀಡಲು ನಿರಾಕರಿಸಿ ವಿಚಾರಣೆಯನ್ನು ಮುಂದೂಡಿದೆ. ಸಂದೇಶ್‌ ಪರ ವಾದಿಸಿದ ವಕೀಲರು, ಮಹಿಳೆಯೊಂದಿಗೆ ಒಪ್ಪಿತ ಸಂಬಂಧವಿತ್ತು.

ಇನ್‌ಸ್ಪೆಕ್ಟರ್‌ ಸಂದೇಶ್‌ ಅತ್ಯಾಚಾರ ಪ್ರಕರಣ ರದ್ದುಪಡಿಸಲು ಹೈಕೋರ್ಟ್‌ ನಕಾರ Read More »

ಇಚ್ಚೂರು ದೇವಸ್ಥಾನದಲ್ಲಿ ಶ್ರೀ ಮಹಾಭಾರತ ಸರಣಿಯ ತಾಳಮದ್ದಳೆ

ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ ಇಚ್ಚೂರು ಉರುವಾಲು ಇಲ್ಲಿನ ವಾರ್ಷಿಕ ಜಾತ್ರೆಯ ಪ್ರಯುಕ್ತ ಉಪ್ಪಿನಂಗಡಿ ಶ್ರೀ ಕಾಳಿಕಾಂಬಾ ಯಕ್ಷಕಲಾ ಟ್ರಸ್ಟ್ ಸುವರ್ಣ ವರ್ಷದ ನಿಮಿತ್ತ ಶ್ರೀ ಮಹಾಭಾರತ ಸರಣಿಯ 109 ಮತ್ತು 110ನೇ ತಾಳಮದ್ದಳೆ ಜರಗಿತು. ಕವಿ ಗೆರೆಸೊಪ್ಪೆ ಶಾಂತಪ್ಪಯ್ಯ ವಿರಚಿತ ರುದ್ರ ಭೀಮ ಪ್ರಸಂಗದಲ್ಲಿ ಭಾಗವತರಾಗಿ ಮಹೇಶ್ ಕನ್ಯಾಡಿ, ಹಿಮ್ಮೇಳದಲ್ಲಿ ಲಕ್ಷ್ಮೀಶ ಅಮ್ಮಣ್ಣಾಯ, ಚಂದ್ರಶೇಖರ ಆಚಾರ್ಯ ಗುರುವಾಯನಕೆರೆ ಅರ್ಥಧಾರಿಗಳಾಗಿ ಗಣರಾಜ ಕುಂಬ್ಳೆ(ಭೀಮಸೇನ)ಜಯರಾಮ ಬಲ್ಯ (ದುಶ್ಯಾಸನ)ಜಿನೇಂದ್ರ ಜೈನ್ (ದ್ರೌಪದಿ)ದಿವಾಕರ ಆಚಾರ್ಯ ಗೇರುಕಟ್ಟೆ(ಶ್ರೀಕೃಷ್ಣ),ಶ್ರೀಧರ ಎಸ್ಪಿ ಕೃಷ್ಣಾಪುರ (ಅರ್ಜುನ) ಕಿರಿಯ

ಇಚ್ಚೂರು ದೇವಸ್ಥಾನದಲ್ಲಿ ಶ್ರೀ ಮಹಾಭಾರತ ಸರಣಿಯ ತಾಳಮದ್ದಳೆ Read More »

ನಟಿಗೆ ಕಿರುಕುಳ : ಮಲಯಾಳಂನ ಜನಪ್ರಿಯ ನಿರ್ದೇಶಕ ಬಂಧನ

ಶೂಟಿಂಗ್‌ ಸೆಟ್‌ನಲ್ಲಿ ಲೈಂಗಿಕ ಕಿರುಕುಳ ನೀಡಿದ ಆರೋಪ ತಿರುವನಂತಪುರ: ಸಿನಿಮಾ ಸೆಟ್‌ನಲ್ಲಿ ನಟಿಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ್ದಾರೆ ಎಂಬ ಆರೋಪದ ಮೇಲೆ ಮಲಯಾಳಂನ ಜನಪ್ರಿಯ ನಿರ್ದೇಶಕ ಹಾಗೂ ನಟ ರಂಜಿತ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಸೋಮವಾರ ಕೊಚ್ಚಿ ನಗರ ಪೊಲೀಸ್ ಠಾಣೆಯಲ್ಲಿ ನಟಿಯೊಬ್ಬರು ರಂಜಿತ್‌ ದೂರು ದಾಖಲಿಸಿದ್ದಾರೆ. ಸಿನಿಮಾ ಸಮಯದಲ್ಲಿ ರಂಜಿತ್ ತಮ್ಮನ್ನು ಕ್ಯಾರವಾನ್‌ಗೆ ಕರೆದೊಯ್ದು ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ್ದಾರೆ ಎಂದು ಆರೋಪಿಸಿದ್ದಾರೆ. ದೂರಿನನ್ವಯ ಪೊಲೀಸರು ರಂಜಿತ್ ಅವರನ್ನು ಮಂಗಳವಾರ (ಮಾ.31) ತಡರಾತ್ರಿ ಇಡುಕ್ಕಿ ಜಿಲ್ಲೆಯ

ನಟಿಗೆ ಕಿರುಕುಳ : ಮಲಯಾಳಂನ ಜನಪ್ರಿಯ ನಿರ್ದೇಶಕ ಬಂಧನ Read More »

ಎನ್‌ಕೌಂಟರ್‌ಗೆ ಪಾಕಿಸ್ತಾನದ ಉಗ್ರ ಬಲಿ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಂಡೇಬಲ್‌ ಜಿಲ್ಲೆಯಲ್ಲಿ ಉಗ್ರರ ನಿಗ್ರಹಕ್ಕೆ ʻಆಪರೇಷನ್ ಅರಹಮಾʼ ಕಾರ್ಯಾಚರಣೆ ನಡೆಯುತ್ತಿದ್ದು, ನಿನ್ನೆ ರಾತ್ರಿಯಿಡೀ ನಡೆದ ಎನ್‌ಕೌಂಟರ್‌ ಕಾರ್ಯಾಚರಣೆಯಲ್ಲಿ ಓರ್ವ ಪಾಕಿಸ್ತಾನಿ ಮೂಲದ ಉಗ್ರ ಸಾವನ್ನಪ್ಪಿದ್ದಾನೆ ಎಂದು ಭಾರತೀಯ ಸೇನೆ ತಿಳಿಸಿದೆ. ಗಂಡೇಬಲ್ ಜಿಲ್ಲೆಯ ಅರಹಮಾ ಪ್ರದೇಶದಲ್ಲಿ ʻಆಪರೇಷನ್ ಅರಹಮಾʼ ಕಾರ್ಯಾಚರಣೆ ಮುಂದುವರಿದಿದ್ದು, ಭದ್ರತಾ ಪಡೆಗಳು ಶೋಧ ನಡೆಸುತ್ತಿವೆ. ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ ಜೊತೆಗೆ ಭಾರತೀಯ ಸೇನೆಯ ಎರಡು ಅಸ್ಸಾಂ ರೆಜಿಮೆಂಟ್‌ಗಳು ಜಂಟಿ ಕಾರ್ಯಾಚರಣೆ

ಎನ್‌ಕೌಂಟರ್‌ಗೆ ಪಾಕಿಸ್ತಾನದ ಉಗ್ರ ಬಲಿ Read More »

ಮೈಗೆ ವಿದ್ಯುತ್‌ ಹರಿಸಿಕೊಂಡು ಕಾರ್ಮಿಕ ಆತ್ಮಹತ್ಯೆ

ಬೆಳ್ತಂಗಡಿ: ಹೊಸಂಗಡಿ ಗ್ರಾಮದ ಪಾರ್ದೊಟ್ಟು ಎಂಬಲ್ಲಿ ಕೇರಳದಿಂದ ರಬ್ಬರ್ ಟ್ಯಾಪಿಂಗ್ ಕೆಲಸಕ್ಕೆಂದು ಬಂದಿದ್ದ ಕಾರ್ಮಿಕನೋರ್ವ ಸ್ವತಹ ಮೈಮೇಲೆ ವಿದ್ಯುತ್ ಹರಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದ್ದು ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಕೇರಳ ಮೂಲದ ಕಾರ್ಮಿಕ ಜೋಸೆಫ್ ತೋಮಸ್ (69) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಹೊಸಂಗಡಿಯ ಶಾಜು.ಪಿ.ಟಿ ಎಂಬವರ ರಬ್ಬರ್ ತೋಟದಲ್ಲಿ ಕಾರ್ಮಿಕನಾಗಿ ಕೆಲಸ ಮಾಡಿಕೊಂಡಿದ್ದು, ಮೃತದೇಹ ಮಾ. 30ರಂದು ಸಂಜೆಯ ವೇಳೆ ಶಾಜು ಅವರ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ರೀತಿಯಲ್ಲಿ ಕಂಡು ಬಂದಿದೆ.

ಮೈಗೆ ವಿದ್ಯುತ್‌ ಹರಿಸಿಕೊಂಡು ಕಾರ್ಮಿಕ ಆತ್ಮಹತ್ಯೆ Read More »

ಚಲಿಸುತ್ತಿದ್ದ ಬಸ್ಸಿನಿಂದ ಎಸೆಯಲ್ಪಟ್ಟ ವಿದ್ಯಾರ್ಥಿನಿಯರು : ಚಾಲಕ, ನಿರ್ವಾಹಕನ ವಿರುದ್ಧ ಕೇಸ್‌

ಬೆಳ್ತಂಗಡಿ : ಕಳಿಯ ಗ್ರಾಮದ ಗೇರುಕಟ್ಟೆ ಸಮೀಪ ಮಾ.31ರಂದು ಬೆಳಗ್ಗೆ ಚಲಿಸುತ್ತಿದ್ದ ಬಸ್ಸಿನ ಬಾಗಿಲು ತೆರೆದು ವಿದ್ಯಾರ್ಥಿನಿಯರಿಬ್ಬರು ರಸ್ತೆಗೆ ಎಸೆಯಲ್ಪಟ್ಟು ಗಾಯಗೊಂಡ ಘಟನೆಗೆ ಸಂಬಂಧಿಸಿ ಬಸ್ಸಿನ ಚಾಲಕ ಹಾಗೂ ನಿರ್ವಾಹಕನ ವಿರುದ್ಧ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಕಳಿಯದಿಂದ ಬೆಳ್ತಂಗಡಿ ಕಡೆಗೆ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ಸನ್ನು ಅದರ ಚಾಲಕ ದಯಾನಂದ ಅತ್ಯಂತ ಅಜಾಗರೂಕತೆಯಿಂದ ಚಲಾಯಿಸಿದ್ದು ನಿರ್ವಾಹಕ ಕಾಶಿನಾಥ್ ಬಸ್ಸಿನ ಬಾಗಿಲು ಸರಿಯಾಗಿ ಹಾಕದೆ ಅಜಾಗರೂಕತೆಯಿಂದ ಇದ್ದ ಕಾರಣದಿಂದಾಗಿ ಚಲಿಸುತ್ತಿದ್ದ ಬಸ್ಸಿನ ಬಾಗಿಲು ತೆರೆದು ಸಹೋದರಿಯರಾದ

ಚಲಿಸುತ್ತಿದ್ದ ಬಸ್ಸಿನಿಂದ ಎಸೆಯಲ್ಪಟ್ಟ ವಿದ್ಯಾರ್ಥಿನಿಯರು : ಚಾಲಕ, ನಿರ್ವಾಹಕನ ವಿರುದ್ಧ ಕೇಸ್‌ Read More »

error: Content is protected !!
Scroll to Top