ಸುದ್ದಿ

ಎರಡು ಬೈಕ್ ಗಳ ನಡುವೆ ಡಿಕ್ಕಿ | ನಾಲ್ವರ ದುರ್ಮರಣ

ಕಲಬುರಗಿ : ಎರಡು ಬೈಕ್‌ಗಳು ಪರಸ್ಪರ ಮುಖಾಮುಖಿಯಾಗಿ ಡಿಕ್ಕಿ ಹೊಡೆದು  ನಾಲ್ವರು ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಆಬಾಳ ಗ್ರಾಮದ ಬಳಿ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಮೃತಪಟ್ಟ ಯುವಕರನ್ನು ಸಿದ್ದು, ಸುರೇಶ್ ರೆಡ್ಡಿ, ಮಲ್ಲು ಪೂಜಾರಿ ಮತ್ತು ಪ್ರಕಾಶ್ ಪೂಜಾರಿ ಎನ್ನಲಾಗಿದೆ. ಸೇಡಂನಿಂದ ಆಬಾಳ್ ಕಡೆ ಹೊರಟಿದ್ದ ಒಂದು ಬೈಕ್​​ಗೆ ಎದುರಿಗೆ ಬಂದ ಮತ್ತೊಂದು ಬೈಕ್​​ ಡಿಕ್ಕಿ ಹೊಡೆದಿವೆ. ಘಟನಾ ಸ್ಥಳಕ್ಕೆ ಧಾವಿಸಿದ ಸೇಡಂ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಎರಡು ಬೈಕ್ ಗಳ ನಡುವೆ ಡಿಕ್ಕಿ | ನಾಲ್ವರ ದುರ್ಮರಣ Read More »

ಉಪ್ಪಿನಂಗಡಿ ವಳಾಲಿನಲ್ಲಿ ಅಕ್ರಮ ಮರಳು ಸಾಗಾಟ |  ಲೋಕೋಪಯೋಗಿ ಇಲಾಖೆಯ ಹೆಸರಿನಲ್ಲಿ ಮರಳು ಸಾಗುಸುತ್ತಿರುವ ಖದಿಮರು

ಉಪ್ಪಿನಂಗಡಿ : ಉಪ್ಪಿನಂಗಡಿಯ ವಳಾಲಿನಲ್ಲಿ ಲೋಕೋಪಯೋಗಿ ಇಲಾಖೆಯ ಹೆಸರಿನಲ್ಲಿ ನದಿಯಿಂದ ಮರಳು ತೆಗೆಯುತ್ತಿದ್ದಾರೆ  ಎಂದು ತಿಳಿದು ಬಂದಿದೆ. ಹಿಟಾಚಿಯ ಮುಖೇನ ನದಿಯಿಂದ ಮರಳು ತೆಗೆಯುತ್ತಿದ್ದು, ಅಲ್ಲಿಯ ಸಾರ್ವಜನಿಕರು ಪ್ರಶ್ನೆಸಿದಾಗ ಲೋಕೋಪಯೋಗಿ ಇಲಾಖೆಯ ಕಾಮಗಾರಿಗೆ ಮರಳು ತೆಗೆಯುತ್ತಿರುವುದಾಗಿ ತಿಳಿಸಿದ್ದಾರೆ.   ಲೋಕೋಪಯೋಗಿ ಇಲಾಖೆ ಅಂತಹ ಯಾವುದೇ ಕಾಮಗಾರಿ ನಡೆಸುತ್ತಿಲ್ಲ ಹಾಗೂ ನಮಗೆ ಈ ಬಗ್ಗೆ ಮಾಹಿತಿ ಇಲ್ಲ ಎಂದಿದೆ. ಪ್ರತಿನಿತ್ಯ ಇಲ್ಲಿ ಲೋಡುಗಟ್ಟಲೆ ಮರಳು ತೆಗೆದು ಸಾಗಾಟ ಮಾಡಲಾಗುತ್ತಿದ್ದು ಸರ್ಕಾರದ ಬೊಕ್ಕನಕ್ಕೆ ಲಕ್ಷಾಂತರ ರೂಪಾಯಿ ನಷ್ಟ ಉಂಟಾಗುತ್ತಿದೆ.   ಪೊಲೀಸ್

ಉಪ್ಪಿನಂಗಡಿ ವಳಾಲಿನಲ್ಲಿ ಅಕ್ರಮ ಮರಳು ಸಾಗಾಟ |  ಲೋಕೋಪಯೋಗಿ ಇಲಾಖೆಯ ಹೆಸರಿನಲ್ಲಿ ಮರಳು ಸಾಗುಸುತ್ತಿರುವ ಖದಿಮರು Read More »

ಮಾ. 9 :  ಗ್ರಾಮ ದೈವ  ಶ್ರೀ ಶಿರಾಡಿ  ರಾಜನ್ ದೈವ  ಹಾಗೂ  ಸಪರಿವಾರ  ದೈವಗಳ ನೇಮೋತ್ಸವ 

ಕುದ್ಮಾರು : ಗ್ರಾಮ ದೈವ  ಶ್ರೀ  ಶಿರಾಡಿ  ರಾಜನ್ ದೈವ ಹಾಗೂ ಸಪರಿವಾರ  ದೈವಗಳ  ನೇಮೋತ್ಸವವು  ಮಾ.  9 ಭಾನುವಾರದಂದು  ಕುದ್ಮಾರು  ಗ್ರಾಮದ  ಅನ್ಯಾಡಿಯಲ್ಲಿ  ಕಟ್ಟತ್ತಾರು ಕಟ್ಟೆ ಯಲ್ಲಿ ನಡೆಯಲಿದೆ. ನೇಮೋತ್ಸವದಂದು ಬೆಳಗ್ಗೆ 8 ಗಂಟೆಗೆ ಗಣಪತಿ ಹೋಮ, ಸಂಜೆ 7 ಗಂಟೆಗೆ ಗ್ರಾಮ ದೈವ ಶ್ರೀ ಶಿರಾಡಿ ರಾಜನ್‍ ದೈವದ ದೈವಸ್ಥಾನ ಅನ್ಯಾಡಿಯ ಗ್ರಾಮ ಚಾವಡಿಯಿಂದ ದೈವದ ಭಂಡಾರ ತೆಗೆಯುವುದು. ರಾತ್ರಿ 8:30 ಕ್ಕೆ ದೈವಕ್ಕೆ ಎಣ್ಣೆ ಬೂಳ್ಯ ನೀಡುವುದು. ರಾತ್ರಿ 9 ಗಂಟೆಗೆ ಅನ್ನಸಂತರ್ಪಣೆ

ಮಾ. 9 :  ಗ್ರಾಮ ದೈವ  ಶ್ರೀ ಶಿರಾಡಿ  ರಾಜನ್ ದೈವ  ಹಾಗೂ  ಸಪರಿವಾರ  ದೈವಗಳ ನೇಮೋತ್ಸವ  Read More »

ಬಜೆಟ್‌ ಹೈಲೈಟ್ಸ್‌ : ಮುಸ್ಲಿಮರಿಗೆ ಭರಪೂರ ಕೊಡುಗೆ

ಗುತ್ತಿಗೆಯಲ್ಲಿ ಮೀಸಲಾತಿ, ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿ ಬೆಂಗಳೂರು : ಬಜೆಟ್‌ನಲ್ಲಿ ಮುಸ್ಲಿಂ ಸಮುದಾಯಕ್ಕೆ ಭರಪೂರ ಕೊಡುಗೆಗಳನ್ನು ಘೋಷಿಸುವ ಮೂಲಕ ಸಿದ್ದರಾಮಯ್ಯ ತನ್ನ ಮತಬ್ಯಾಂಕನ್ನು ಭದ್ರಗೊಳಿಸಿದ್ದಾರೆ. ಮೌಲಾನಾ ಆಜಾದ್ ಶಾಲೆಗಳ ಉನ್ನತೀಕರಣ, ವಸತಿ ಶಾಲೆಗಳಲ್ಲಿ ವಾಣಿಜ್ಯ ವಿಭಾಗದ ಪ್ರಾರಂಭ, ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿ ಸೇರಿದಂತೆ ಸಿದ್ದರಾಮಯ್ಯನವರು ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಭರ್ಜರಿ ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ. ಅದರಲ್ಲೂ ಮುಖ್ಯವಾಗಿ ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಂರಿಗೆ ಮೀಸಲಾತಿ ನೀಡಿದ್ದಾರೆ. ಹಲವರ ವಿರೋಧದ ನಡುವೆಯೂ ಸದ್ದಿಲ್ಲದೆ ಸಿದ್ದರಾಮಯ್ಯನವರು ಬಜೆಟ್​ನಲ್ಲಿ ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ

ಬಜೆಟ್‌ ಹೈಲೈಟ್ಸ್‌ : ಮುಸ್ಲಿಮರಿಗೆ ಭರಪೂರ ಕೊಡುಗೆ Read More »

ಅಬಕಾರಿ ಇಲಾಖೆಗೆ 40 ಸಾವಿರ ಕೋ.ರೂ ರಾಜಸ್ವ ಸಂಗ್ರಹ ಗುರಿ

ಮದ್ಯದ ಬೆಲೆ ಮತ್ತೆ ಹೆಚ್ಚಾಗುವ ಸಾಧ್ಯತೆ ಬೆಂಗಳೂರು: ಅಬಕಾರಿ ಇಲಾಖೆಗೆ 40,000 ಕೋಟಿ ರೂ. ರಾಜಸ್ವ ಸಂಗ್ರಹ ಗುರಿಯನ್ನು ಸಿದ್ದರಾಮಯ್ಯ ಈ ಸಾಲಿನ ಬಜೆಟ್‌ನಲ್ಲಿ ನೀಡಿದ್ದಾರೆ. ಇಷ್ಟು ಮೊತ್ತ ಸಂಗ್ರಹವಾಗಬೇಕಾದರೆ ಅಬಕಾರಿ ಇಲಾಖೆ ಮದ್ಯ ಮಾರಾಟವನ್ನು ಹೆಚ್ಚು ಮಾಡಬೇಕು ಮತ್ತು ಜೊತೆಗೆ ಮದ್ಯದ ಬೆಲೆಯನ್ನು ಹೆಚ್ಚಿಸಬೇಕು. ಹೀಗಾಗಿ ರಾಜ್ಯದಲ್ಲಿ ಮದ್ಯ ಮತ್ತೆ ದುಬಾರಿಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. 2024-25ರ ಪರಿಷ್ಕೃತ ಅಂದಾಜಿನಲ್ಲಿ ಅಬಕಾರಿ ತೆರಿಗೆಯಿಂದ ಒಟ್ಟು 36,500 ಕೋಟಿ ರೂ.ಗಳ ರಾಜಸ್ವ ನಿರೀಕ್ಷಿಸಲಾಗಿದೆ. ಅದರಂತೆ 2025-26ನೇ ಸಾಲಿಗೆ

ಅಬಕಾರಿ ಇಲಾಖೆಗೆ 40 ಸಾವಿರ ಕೋ.ರೂ ರಾಜಸ್ವ ಸಂಗ್ರಹ ಗುರಿ Read More »

ಪುತ್ತೂರಿನಲ್ಲಿ ಮೆಡಿಕಲ್‌ ಕಾಲೇಜು ಸ್ಥಾಪಿಸುವ ಉದ್ದೇಶ

ಸದ್ಯಕ್ಕೆ ತಾಲೂಕು ಆಸ್ಪತ್ರೆಯ ಉನ್ನತೀಕರಣ ಮಾತ್ರ ಬೆಂಗಳೂರು: ಪುತ್ತೂರಿನಲ್ಲಿ ಹೊಸ ಮೆಡಿಕಲ್‌ ಕಾಲೇಜು ಸ್ಥಾಪಿಸುವ ಉದ್ದೇಶ ಇದೆ ಎಂದು ಬಜೆಟ್‌ ಭಾಷಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಆದರೆ ಈ ಸಾಲಿನ ಬಜೆಟ್‌ನಲ್ಲಿ ಹೊಸ ಮೆಡಿಕಲ್‌ ಕಾಲೇಜು ಘೋಷಿಸಿಲ್ಲ. ಮೆಡಿಕಲ್‌ ಕಾಲೇಜು ಘೋಷಣೆಗೆ ಪೂರಕವಾಗಿ ಪುತ್ತೂರಿನಲ್ಲಿ ಈಗಿರುವ 100 ಹಾಸಿಗೆ ಸಾಮರ್ಥ್ಯದ ತಾಲೂಕು ಆಸ್ಪತ್ರೆಯನ್ನು ಉನ್ನತೀಕರಿಸಲಾಗುವುದು ಎಂದು ಘೋಷಿಸಿದ್ದಾರೆ.ಕಳೆದ ಕೆಲವು ದಿನಗಳಿಂದ ಈ ಸಲ ಪುತ್ತೂರಿಗೆ ಮೆಡಿಕಲ್‌ ಕಾಲೇಜು ಘೋಷಣೆಯಾಗುವುದು ಖಚಿತ ಎಂಬ ವದಂತಿ ದಟ್ಟವಾಗಿ ಹರಡಿತ್ತು. ಇದಕ್ಕೆ

ಪುತ್ತೂರಿನಲ್ಲಿ ಮೆಡಿಕಲ್‌ ಕಾಲೇಜು ಸ್ಥಾಪಿಸುವ ಉದ್ದೇಶ Read More »

ಅನಂತಾಡಿ ಶ್ರೀ ಉಳ್ಳಾಲ್ತಿ ದೈವಸ್ಥಾನದಲ್ಲಿ ಶ್ರೀ ಉಳ್ಳಾಲ್ತಿ ಅಮ್ಮನವರ ಕಾಲಾವಧಿ ಮೆಚ್ಚಿ ಜಾತ್ರೆಯ ಗೊನೆ ಕಾರ್ಯಕ್ರಮ

ಅನಂತಾಡಿ: ಇತಿಹಾಸ ಪ್ರಸಿದ್ದ ಅನಂತಾಡಿ ಶ್ರೀ ಉಳ್ಳಾಲ್ತಿ ದೈವಸ್ಥಾನದಲ್ಲಿ ಶ್ರೀ ಉಳ್ಳಾಲ್ತಿ ಅಮ್ಮನವರ ಕಾಲಾವಧಿ ಮೆಚ್ಚಿ ಜಾತ್ರೆ ಮಾರ್ಚ್ 14 ನೇ ಶುಕ್ರವಾರದಂದು ನಡೆಯಲಿದೆ. ಜಾತ್ರೋತ್ಸವದ ಗೊನೆ ಮುಹೂರ್ತ ಕಾರ್ಯಕ್ರಮ ನಿನ್ನೆ ನಡೆಯಿತು.  ಬಳಿಕ ಶ್ರೀ ಉಳ್ಳಾಲ್ತಿ ಅಮ್ಮನವರಿಗೆ ಪೂಜಾ ವಿಧಿ ವಿಧಾನಗಳು ನಡೆಯಿತು. ಮಾ.13  ಗುರುವಾರ ರಾತ್ರಿ ಭಂಡಾರವೇರಿ ಮಾ. 14 ಶುಕ್ರವಾರ ಬೆಳಗ್ಗೆ 9 ಗಂಟೆಯಿಂದ ಮೆಚ್ಚಿ ಜಾತ್ರೆ ನಡೆಯಲಿದೆ. ಈ ಸಂದರ್ಭದಲ್ಲಿ ನರೇಂದ್ರ ರೈ ನೇಳ್ಕೊಟ್ಟು ಮನೆ, ಅನಂತಾಡಿ ದೊಡ್ಡ ಮನೆತನದವರು ಮತ್ತು

ಅನಂತಾಡಿ ಶ್ರೀ ಉಳ್ಳಾಲ್ತಿ ದೈವಸ್ಥಾನದಲ್ಲಿ ಶ್ರೀ ಉಳ್ಳಾಲ್ತಿ ಅಮ್ಮನವರ ಕಾಲಾವಧಿ ಮೆಚ್ಚಿ ಜಾತ್ರೆಯ ಗೊನೆ ಕಾರ್ಯಕ್ರಮ Read More »

ಬಜೆಟ್‌ ಹೈಲೈಟ್ಸ್‌ : ಮಲ್ಪೆಯಲ್ಲಿ ಮಲ್ಟಿ ಲೆವೆಲ್‌ ಪಾರ್ಕಿಂಗ್‌; ಮತ್ಸ್ಯದರ್ಶಿನಿ, ಸುಸ್ಥಿರ ಮೀನುಗಾರಿಕೆಗೆ ಪ್ರೋತ್ಸಾಹ

ಕರಾವಳಿಗೆ ಸಿದ್ದರಾಮಯ್ಯ ಕೊಡುಗೆಗಳು ಬೆಂಗಳೂರು: ಉಡುಪಿ ಮಲ್ಪೆಯಲ್ಲಿ ಮಲ್ಟಿ ಲೆವೆಲ್ ಪಾರ್ಕಿಂಗ್, ಮೈಸೂರಿನಲ್ಲಿ ಹೈಟೆಕ್ ಮತ್ಸ್ಯದರ್ಶಿನಿ, ರಾಜ್ಯದ ಮತ್ಸ್ಯ ಸಂಪತ್ತಿನ ರಕ್ಷಣೆಯೊಂದಿಗೆ ಸುಸ್ಥಿರ ಮೀನುಗಾರಿಕೆ, ಹೊಸ ಇಂಜಿನ್‌ ಖರೀದಿಸಲು ಶೇ.50 ರಷ್ಟು ಒಂದು ಲಕ್ಷ ರೂ. ಮಿತಿಗೊಳಪಟ್ಟು ಸಹಾಯಧನ…ಇವು ಕರಾವಳಿಗೆ ಸಿದ್ದರಾಮಯ್ಯ ಬಜೆಟ್‌ನಲ್ಲಿ ಕೊಟ್ಟಿರುವ ಕೊಡುಗೆಗಳು.ಮಲ್ಟಿ-ಲೆವೆಲ್‌ ಪಾರ್ಕಿಂಗ್‌ ವ್ಯವಸ್ಥೆಯನ್ನು ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಾಣ ಮಾಡಲಾಗುವುದು ಎಂದು ಹೇಳಿದ್ದಾರೆ.ರಾಜ್ಯದ ಮತ್ಸ್ಯ ಸಂಪತ್ತಿನ ರಕ್ಷಣೆಯೊಂದಿಗೆ ಸುಸ್ಥಿರ ಮೀನುಗಾರಿಕೆ ಹಾಗೂ ಮೀನುಗಾರರ ಆರ್ಥಿಕ ಅಭಿವೃದ್ಧಿಗೆ ಉತ್ತೇಜನ ನೀಡಲು ಮೀನುಗಾರಿಕಾ ನೀತಿಯನ್ನು ರೂಪಿಸಲಾಗುವುದು.

ಬಜೆಟ್‌ ಹೈಲೈಟ್ಸ್‌ : ಮಲ್ಪೆಯಲ್ಲಿ ಮಲ್ಟಿ ಲೆವೆಲ್‌ ಪಾರ್ಕಿಂಗ್‌; ಮತ್ಸ್ಯದರ್ಶಿನಿ, ಸುಸ್ಥಿರ ಮೀನುಗಾರಿಕೆಗೆ ಪ್ರೋತ್ಸಾಹ Read More »

ಬಜೆಟ್‌ ಹೈಲೈಟ್ಸ್‌ : ಮಕ್ಕಳಿಗೆ ಇಂಗ್ಲಿಷ್‌ ಕಲಿಸಲು ದ್ವಿಭಾಷೆ ಪರಿಚಯ

ರಾಗಿ ಆರೋಗ್ಯ ಮಿಶ್ರಣ ಇನ್ನು ಮುಂದೆ ವಾರಕ್ಕೆ 5 ದಿನ ಬೆಂಗಳೂರು: ಕಲಿತು ಹೊರಗೆ ಉದ್ಯೋಗಕ್ಕೆ ಹೋಗುವ ಸಂದರ್ಭದಲ್ಲಿ ಇಂಗ್ಲಿಷ್ ಸಂವಹನದ ಅಗತ್ಯ ಉಂಟಾಗುತ್ತದೆ. ಈ ನಿಟ್ಟಿನಲ್ಲಿ ಶಾಲಾ ಮಟ್ಟದಿಂದಲೇ ಮಕ್ಕಳಲ್ಲಿ ಇಂಗ್ಲಿಷ್ ಕಲಿಕೆಯ ಪರಿಚಯವಾಗಲು 4 ಸಾವಿರ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷೆ ಪರಿಚಯಿಸಲಾಗುತ್ತದೆ. ವಿದ್ಯಾರ್ಥಿಗಳು ಇಂಗ್ಲಿಷ್ ಮತ್ತು ಅವರ ಮಾತೃಭಾಷೆ ಎರಡರಲ್ಲೂ ನಿರರ್ಗಳತೆಯಿಂದ ಮಾತನಾಡಲು ಸಹಾಯ ಮಾಡುವುದು ಇದರ ಉದ್ದೇಶವಾಗಿದೆ ಎಂದು ಸಿದ್ದರಾಮಯ್ಯ ಬಜೆಟ್‌ನಲ್ಲಿ ಘೋಷಿಸಿದ್ದಾರೆ. ಪ್ರಸ್ತುತ ಶಾಲಾ ಮಕ್ಕಳಿಗೆ ವಾರಕ್ಕೆ 3 ದಿನ ನೀಡಲಾಗುತ್ತಿದ್ದ

ಬಜೆಟ್‌ ಹೈಲೈಟ್ಸ್‌ : ಮಕ್ಕಳಿಗೆ ಇಂಗ್ಲಿಷ್‌ ಕಲಿಸಲು ದ್ವಿಭಾಷೆ ಪರಿಚಯ Read More »

ಆಟೋ ರಿಕ್ಷಾದಲ್ಲಿ ಮಾದಕವಸ್ತು ಸಾಗಾಟ| ಆರೋಪಿ  ಅರೆಸ್ಟ್

ಮಂಗಳೂರು : ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಅನ್ನು ಆಟೊರಿಕ್ಷಾದಲ್ಲಿ ಸಾಗಾಟ ಮತ್ತು ಮಾರಾಟ ಮಾಡುತ್ತಿದ್ದ ರಿಕ್ಷಾ ಚಾಲಕನನ್ನು ಮಂಗಳೂರು ಸಿಸಿಬಿ ಪೊಲೀಸರು ಪತ್ತೆ ಹಚ್ಚಿ ಬಂಧಿಸಿದ್ದಾರೆ. ಕಸಬಾ ಬೆಂಗರೆಯ ಮುಹಮ್ಮದ್ ಅಬ್ದುಲ್ ಜಲೀಲ್ (32 ವ.) ಬಂಧಿತ ಆರೋಪಿ ಎನ್ನಲಾಗಿದೆ. ಆರೋಪಿಯಿಂದ 3,75,000 ಮೌಲ್ಯದ 75 ಗ್ರಾಂ ನಿಷೇಧಿತ ಮಾದಕ ವಸ್ತು ಎಂಡಿಎಂಎ, ಮೊಬೈಲ್ ಫೋನ್, ಆಟೊ ರಿಕ್ಷಾ ಸಹಿತ ಒಟ್ಟು ಮೊತ್ತ 5 ಲಕ್ಷ ರೂ. ಗೂ ಅಧಿಕ ಬೆಲೆಬಾಳುವ  ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಆಟೋ ರಿಕ್ಷಾದಲ್ಲಿ ಮಾದಕವಸ್ತು ಸಾಗಾಟ| ಆರೋಪಿ  ಅರೆಸ್ಟ್ Read More »

error: Content is protected !!
Scroll to Top