ಸುದ್ದಿ

ಜಗಳ ಬಿಡಿಸಲು ಹೋದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಕೊಲೆ

ಎದೆಗೆ ಬಿದ್ದ ಏಟಿನಿಂದ ಸಾವನ್ನಪ್ಪಿದ 16ರ ಹರೆಯದ ಬಾಲಕ ಶಿವಮೊಗ್ಗ : ಜಗಳ ಬಿಡಿಸಲು ಹೋದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಭೀಕರವಾಗಿ ಕೊಲೆಯಾದ ಘಟನೆ ಶಿವಮೊಗ್ಗದಲ್ಲಿ ಸಂಭವಿಸಿದೆ. ಶಿವಮೊಗ್ಗದ ಸೂಳೆಬೈಲು ಬಡಾವಣೆಯ ಸಂಕೇತ್ (16) ಕೊಲೆಯಾದ ವಿದ್ಯಾರ್ಥಿ. ಸೂಳೆಬೈಲು ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಯಾಗಿದ್ದ ಸಂಕೇತ್ ಸೋಮವಾರ ಸ್ಪೆಷಲ್ ಕ್ಲಾಸ್ ಮುಗಿಸಿ ಹೊರಬಂದಾಗ ಇತರ ಕೆಲ ವಿದ್ಯಾರ್ಥಿಗಳ ನಡುವೆ ಜಗಳವಾಗುತ್ತಿತ್ತು. ಅವರ ಜಗಳವನ್ನು ಬಿಡಿಸಲು ಹೋದಾಗ ಸಂಕೇತ್ ಮೇಲೆ ನಾಲ್ವರು ವಿದ್ಯಾರ್ಥಿಗಳು ಹಲ್ಲೆ ನಡೆಸಿದ್ದಾರೆ. ಎದೆಯ ಭಾಗಕ್ಕೆ ಬಲವಾಗಿ ಗುದ್ದಿದ […]

ಜಗಳ ಬಿಡಿಸಲು ಹೋದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಕೊಲೆ Read More »

ಸಂಭವವೀಯ ದಾಳಿಯ ಸಾಧ್ಯತೆ: ಇರಾನ್ ತೊರೆಯುವಂತೆ ಭಾರತೀಯರಿಗೆ ಮುನ್ನೆಚ್ಚರಿಕೆ

ನವದೆಹಲಿ: ಇರಾನಿನ ಮೇಲೆ ಅಮೇರಿಕಾ ವೈಮಾನಿಕ ದಾಳಿ ಸಂಭವಿಸುವ ಸಾಧ್ಯತೆ ಇದ್ದು, ಆದಷ್ಟು ಬೇಗ ಇರಾನ್ ತೊರೆಯುವಂತೆ ಭಾರತೀಯರಿಗೆ ಭಾರತ ರಾಯಭಾರ ಕಚೇರಿ ಮುನ್ನೆಚ್ಚರಿಕೆ ನೀಡಿದೆ. ವಿದ್ಯಾರ್ಥಿಗಳು, ಯಾತ್ರಿಕರು, ಉದ್ಯಮಿಗಳು ಸೇರಿದಂತೆ ಭಾರತೀಯ ಮೂಲದ ಎಲ್ಲರಿಗೂ ಸರ್ಕಾರ ಈ ಮುನ್ನೆಚ್ಚರಿಕೆ ನೀಡಿರುವುದಾಗಿದೆ. ಹಾಗೆಯೇ ಪ್ರತಿಭಟನೆಗಳು ನಡೆಯುವ ಸ್ಥಳಕ್ಕೆ ಹೋಗದಂತೆಯೂ ಸೂಚನೆ ನೀಡಲಾಗಿದೆ. ಇರಾನ್‌ನಲ್ಲಿರುವವರು ತಮ್ಮ ಪಾಸ್‌ಪೋರ್ಟ್ ಮತ್ತು ಇತರೆ ಗುರುತಿನ ದಾಖಲೆಗಳನ್ನು ಸದಾ ಕೈಯಲ್ಲಿ ಇಟ್ಟುಕೊಳ್ಳಬೇಕು ಎಂದು ಸಲಹೆ ನೀಡಲಾಗಿದೆ. ತುರ್ತು ಪರಿಸ್ಥಿತಿಯಲ್ಲಿ ಸಹಾಯಕ್ಕಾಗಿ ರಾಯಭಾರ ಕಚೇರಿಯ

ಸಂಭವವೀಯ ದಾಳಿಯ ಸಾಧ್ಯತೆ: ಇರಾನ್ ತೊರೆಯುವಂತೆ ಭಾರತೀಯರಿಗೆ ಮುನ್ನೆಚ್ಚರಿಕೆ Read More »

ಖಾಸಗಿ ಮೆಡಿಕಲ್ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ

ದಾವಣಗೆರೆ: ಇಂಜೆಕ್ಷನ್ ಓವರ್‌ಡೋಸ್ ಚುಚ್ಚಿಕೊಂಡು ವೈದ್ಯ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ನಗರದ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ನಡೆದಿದೆ. ಮಹಾರಾಷ್ಟ್ರ ಮೂಲದ ಸಿದ್ಧಾರ್ಥ ತ್ರಯಂಬಕೆ(30) ಮೃತಪಟ್ಟ ವಿದ್ಯಾರ್ಥಿ. ಸಿದ್ಧಾರ್ಥ ಅವರು ದಾವಣಗೆರೆಯ ಖಾಸಗಿ ಮೆಡಿಕಲ್ ಕಾಲೇಜಿನಲ್ಲಿ ಚರ್ಮರೋಗ ವಿಷಯದಲ್ಲಿ ಸ್ನಾತಕೋತ್ತರ ಪದವಿ ಅಧ್ಯಯನ ಮಾಡುತ್ತಿದ್ದರು. ಅವರು ಓವರ್ ಡೋಸ್ ಇಂಜೆಕ್ಷನ್ ಚುಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿರುವುದಾಗಿದೆ. ಸಿದ್ದಾರ್ಥ ಅವರ ಕೋಣೆ ಲಾಕ್ ಆಗಿದ್ದ ಕಾರಣ ಸಂದೇಹದಿಂದ ಇತರ ವಿದ್ಯಾರ್ಥಿಗಳು ಬಾಗಿಲು ಒಡೆದು ಪರಿಶೀಲನೆ ಮಾಡಿದ್ದಾರೆ. ಆಗ ಈ ಘಟನೆ

ಖಾಸಗಿ ಮೆಡಿಕಲ್ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ Read More »

ಅಕ್ಷಯ ಕಾಲೇಜಿನ ಎನ್‌ಎಸ್‌ಎಸ್ ಸೇವಾ ಶಿಬಿರ

ಸಂಪ್ಯ: ಅಕ್ಷಯ ಕಾಲೇಜು ಪುತ್ತೂರು ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆ ಇದರ ನೇತೃತ್ವದಲ್ಲಿ ‘ನನ್ನ ಭಾರತಕ್ಕಾಗಿ ಯುವ ಜನತೆ, ಡಿಜಿಟಲ್ ಸಾಕ್ಷರತೆಗಾಗಿ ಯುವಜನತೆ’ ಎಂಬ ಶಿರೋನಾಮೆಯೊಂದಿಗೆ ವಾರ್ಷಿಕ ವಿಶೇಷ ಶಿಬಿರ 2025-26 ಪ್ರಾರಂಭ ಗೊಂಡಿತು. ಶಿಬಿರವನ್ನು ಶ್ರೀ ರಾಮಚಂದ್ರ ಪದವಿಪೂರ್ವ ವಿದ್ಯಾಲಯ ಅಯೋಧ್ಯಾ ನಗರ ಪೆರ್ನೆ ಇಲ್ಲಿ ಆಯೋಜಿಸಲಾಯಿತು. ಹರೀಶ್ ಭಂಡಾರಿ ಟಿ, ವಕೀಲರು ಉಚ್ಚನ್ಯಾಯಾಲಯ, ಬೆಂಗಳೂರು ಸಂಚಾಲಕರು ಶ್ರೀ ರಾಮಚಂದ್ರ ವಿದ್ಯಾಲಯ ಅಯೋಧ್ಯಾ ನಗರ ಪೆರ್ನೆ ಇವರು ಉದ್ಘಾಟಿಸಿ ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ಜಯಂತ ನಡುಬೈಲು

ಅಕ್ಷಯ ಕಾಲೇಜಿನ ಎನ್‌ಎಸ್‌ಎಸ್ ಸೇವಾ ಶಿಬಿರ Read More »

ಸ್ನೇಹಮಯಿ ಕೃಷ್ಣ ವಿರುದ್ಧ ಇನ್ನೊಂದು ಕೇಸ್‌

ದೂರು ನೀಡಿದ ಎರಡು ತಿಂಗಳ ಬಳಿಕ ಎಫ್‌ಐಆರ್‌ ದಾಖಲು ಬೆಂಗಳೂರು: ಮುಡಾ ಹಗರಣದ ದೂರುದಾರ, ಸಾಮಾಜಿಕ ಕಾರ್ಯಕರ್ತ ಸ್ನೇಹಿಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.ಪವಿತ್ರ ಎಂಬ ಮಹಿಳೆ ಕೊಟ್ಟ ದೂರಿನ ಆಧಾರದ ಮೇಲೆ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಬೆದರಿಕೆ ಹಾಗೂ ಪ್ರೊ.ಮೈಲಾರಪ್ಪ ವಿರುದ್ಧ ಕೊಟ್ಟಿರುವ ಕೇಸ್ ವಾಪಸ್ ಪಡೆದುಕೊಳ್ಳುವಂತೆ ಬೆದರಿಕೆ ಹಾಗೂ ಒತ್ತಡ ಹಾಕುತ್ತಿದ್ದಾರೆಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಮಹಿಳೆ ಕೊಟ್ಟ ದೂರಿನ ಆಧಾರದ ಮೇಲೆ ಸ್ನೇಹಮಯಿ ಕೃಷ್ಣ ಅವರನ್ನು ಎ1 ಆರೋಪಿಯನ್ನಾಗಿ

ಸ್ನೇಹಮಯಿ ಕೃಷ್ಣ ವಿರುದ್ಧ ಇನ್ನೊಂದು ಕೇಸ್‌ Read More »

ಡ್ರಗ್ಸ್‌ ಜಾಲದ ದೊರೆ ಎಲ್‌ ಮೆಂಚೊನ್ನು ಹತ್ಯೆ ಮಾಡಿದ ಮೆಕ್ಸಿಕೊ ಸೇನೆ

ಜಗತ್ತಿನ ಅತಿ ಪ್ರಬಲ ಡ್ರಗ್ಸ್‌ ಜಾಲದ ಮುಖಂಡ ಎಲ್‌ ಮೆಂಚೊ ಮೆಕ್ಸಿಕೊ: ಮೆಕ್ಸಿಕೊದ ಅತಿದೊಡ್ಡ ಮಾದಕವಸ್ತು ಜಾಲದ ದೊರೆ ನೆಮೆಸಿಯೊ ಎಲ್ ಮೆಂಚೊ ಒಸೆಗುರಾ ಎಂಬಾತನನ್ನು ಮೆಕ್ಸಿಕೊದ ಸೇನೆ ಹತ್ಯೆ ಮಾಡಿದೆ. ಆ ಬಳಿಕ ಮೆಕ್ಸಿಕೊ ನಗರದಲ್ಲಿ ಎಲ್‌ ಮೆಂಚೊನ ಗ್ಯಾಂಗಿನವರು ವ್ಯಾಪಕ ಹಿಂಚಾಚಾರ ಪ್ರಾರಂಭಿಸಿದ್ದು, ವಾಹನ, ಅಂಗಡಿ ಮುಂಗಟ್ಟುಗಳಿಗೆ ಬೆಂಕಿ ಹಚ್ಚಿದ್ದಾರೆ. ಜಲಿಸ್ಕೊ ​​ನ್ಯೂ ಜನರೇಷನ್ ಕಾರ್ಟೆಲ್‌ ಎಂಬ ಮಾದಕವಸ್ತು ಜಾಲದ ನಾಯಕ 59 ವರ್ಷದ ಎಲ್ ಮೆಂಚೊ ಜಲಿಸ್ಕೊ ​​ರಾಜ್ಯದ ಟಪಲ್ಪಾ ಪಟ್ಟಣದಲ್ಲಿ ಸೈನಿಕರೊಂದಿಗಿನ

ಡ್ರಗ್ಸ್‌ ಜಾಲದ ದೊರೆ ಎಲ್‌ ಮೆಂಚೊನ್ನು ಹತ್ಯೆ ಮಾಡಿದ ಮೆಕ್ಸಿಕೊ ಸೇನೆ Read More »

ರೈತರ ಮೇಲೆ ಲಾಠಿ ಚಾರ್ಜ್‌ ಖಂಡಿಸಿ ಇಂದು ಶೃಂಗೇರಿ ಬಂದ್‌

ಕಾಡಾನೆ ದಾಳಿಯ ವಿರುದ್ಧ ಪ್ರತಿಭಟಿಸುತ್ತಿದ್ದವರ ಮೇಲೆ ಲಾಠಿ ಚಾರ್ಜ್‌ ಚಿಕ್ಕಮಗಳೂರು: ಕಾಡಾನೆ ದಾಳಿಗೆ ಮಹಿಳೆ ಬಲಿಯಾಗಿದ್ದ ಪ್ರಕರಣ ಸಂಬಂಧ ಸರ್ಕಾರ, ಅರಣ್ಯ ಇಲಾಖೆ ವಿರುದ್ಧ ನಡೆಸಿದ ಪ್ರತಿಭಟನೆ ವೇಳೆ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ಮಾಡಿರುವುದನ್ನು ಖಂಡಿಸಿ ಇಂದು (ಫೆ.23) ಶೃಂಗೇರಿ, ಎನ್.ಆರ್.ಪುರ, ಕೊಪ್ಪ, ಖಾಂಡ್ಯ ಹೋಬಳಿ ಬಂದ್‌ಗೆ ಕರೆ ನೀಡಲಾಗಿದೆ. ರೈತ ಸಂಘಟನೆಗಳು ಬೆಳಗ್ಗೆ 8ರಿಂದ ಸಂಜೆ 5ರತನಕ ಬಂದ್‌ಗೆ ಕರೆ ನೀಡಿದ್ದು, ನಾಗರಿಕ ಹಿತ ರಕ್ಷಣಾ ವೇದಿಕೆ, ರೈತ ಒಕ್ಕೂಟ, ಆಟೋ ಚಾಲಕ-ಮಾಲೀಕರ ಸಂಘ,

ರೈತರ ಮೇಲೆ ಲಾಠಿ ಚಾರ್ಜ್‌ ಖಂಡಿಸಿ ಇಂದು ಶೃಂಗೇರಿ ಬಂದ್‌ Read More »

ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

ಬಂಗಾಲದ ರಾಜಕೀಯ ಚಾಣಕ್ಯ ಎಂಬ ಹಿರಿಮೆ ಹೊಂದಿದ್ದ ನಾಯಕ ಕೋಲ್ಕತ್ತಾ: ಮಾಜಿ ರೈಲ್ವೆ ಸಚಿವ ಮತ್ತು ಒಂದು ಕಾಲದಲ್ಲಿ ತೃಣಮೂಲ ಕಾಂಗ್ರೆಸ್‌ನ ಎರಡನೇ ಕಮಾಂಡರ್ ಆಗಿದ್ದ ಮುಕುಲ್ ರಾಯ್ 71ನೇ ವಯಸ್ಸಿನಲ್ಲಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ರಾಯ್ ಅವರನ್ನು ಕೋಲ್ಕತ್ತಾದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಮಧ್ಯರಾತ್ರಿ 1.30ರ ಸುಮಾರಿಗೆ ಕೊನೆಯುಸಿರೆಳೆದರು. ನಿನ್ನೆ ರಾತ್ರಿ ಸುಮಾರು 1.30ರ ಸುಮಾರಿಗೆ ಅವರಿಗೆ ತೀವ್ರ ಹೃದಯಾಘಾತವಾಯಿತು. ವೈದ್ಯರ ಪ್ರಯತ್ನಗಳ ಹೊರತಾಗಿಯೂ ಅವರು ಬದುಕುಳಿಯಲು ಸಾಧ್ಯವಾಗಲಿಲ್ಲ ಎಂದು ಅವರ ಮಗ ಸುಭ್ರಾಂಗ್ಶು

ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ Read More »

ಬಾಗಲಕೋಟೆಯಲ್ಲಿ ಫೆ.26ರಂದು ಮತ್ತೆ ಶಿವಾಜಿ ಜಯಂತಿ ಆಚರಣೆ

ಕಲ್ಲು ತೂರಾಟದಿಂದ ಬೂದಿ ಮುಚ್ಚಿದ ಕೆಂಡದಂತಿರುವ ಬಾಗಲಕೋಟೆ ಬಾಗಲಕೋಟೆ: ಶಿವಾಜಿ ಜಯಂತಿಯ ಮೆರವಣಿಗೆಮೇಲೆ ಮಸೀದಿಯಿಂದ ಕಲ್ಲು ಮತ್ತು ಚಪ್ಪಲಿ ತೂರಿದ ಘಟನೆಯ ಬಳಿಕ ಪ್ರಕ್ಷುಬ್ಧಗೊಂಡಿರುವ ಬಾಗಲಕೋಟೆಯಲ್ಲಿ ಮತ್ತೊಮ್ಮೆ ಶಿವಾಜಿ ಜಯಂತಿ ನಡೆಸಲು ನಿರ್ಧರಿಸಲಾಗಿದೆ. ಕಲ್ಲು ತೂರಾಟ ನಡೆದಿದ್ದ ಬಾಗಲಕೋಟೆಯ ಕಿಲ್ಲಾ ಓಣಿ ಸಹಜ ಸ್ಥಿತಿಗೆ ಬಂದಿದೆ. ಕೊತ್ತಲೇಶ್ವರ ದೇವಸ್ಥಾನ ಹಾಗೂ ಪಂಕಾ ಮಸೀದಿ ಆವರಣದಲ್ಲಿ ಎಂದಿನಂತೆ ವ್ಯಾಪಾರ ವಹಿವಾಟು ಆರಂಭವಾಗಿದೆ. ಈ ಬೆನ್ನಲ್ಲೇ ಹಿಂದೂ ಸರ್ವ ಸಮಾಜದ ಮುಖಂಡರು ಭಾನುವಾರ ನಡೆಸಿದ ಸಭೆಯಲ್ಲಿ ಮತ್ತೊಮ್ಮೆ ಶಿವಾಜಿ ಜಯಂತಿ

ಬಾಗಲಕೋಟೆಯಲ್ಲಿ ಫೆ.26ರಂದು ಮತ್ತೆ ಶಿವಾಜಿ ಜಯಂತಿ ಆಚರಣೆ Read More »

ಟಿ20 ವಿಶ್ವಕಪ್‌ : ಸೂಪರ್‌ 8 ಹಂತದಲ್ಲಿ ಮುಗ್ಗರಿಸಿದ ಭಾರತ

ಕಳಪೆ ಬೌಲಿಂಗ್‌, ಬ್ಯಾಟಿಂಗ್‌ನಿಂದಾಗಿ ಹೀನಾಯ ಸೋಲು ಅಹಮದಾಬಾದ್‌: ಸೂಪರ್‌ 8 ಸುತ್ತಿನ ಮೊದಲ ಪಂದ್ಯದಲ್ಲೇ ಟೀಂ ಇಂಡಿಯಾದ ಬ್ಯಾಟಿಂಗ್‌ ಮತ್ತು ಬೌಲಿಂಗ್‌ನ ಲೋಪಗಳೆಲ್ಲ ಬಯಲಾಗಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್‌ನ ಸೋಪರ್‌ 8 ಹಂತದ ಪಂದ್ಯದಲ್ಲಿ ದಕ್ಷಿಣ ಆಫ್ರಿಕ ವಿರುದ್ಧ ಹೀನಾಯವಾಗಿ ಸೋತು ಹೋದ ಭಾರತ ಕಳಪೆ ಬೌಲಿಂಗ್‌, ಅಗ್ರ ಬ್ಯಾಟರ್‌ಗಳ ಹೀನಾಯ ಪ್ರದರ್ಶನಕ್ಕೆ ಬೆಲೆತೆತ್ತಿದೆ. ಭಾರತ ತಂಡ 76 ರನ್‌ಗಳ ಹೀನಾಯ ಸೋಲು ಕಂಡಿದೆ. ಇದು ಪ್ರಸಕ್ತ ವಿಶ್ವಕಪ್‌ ಟೂರ್ನಿಯಲ್ಲಿ ಟೀಂ

ಟಿ20 ವಿಶ್ವಕಪ್‌ : ಸೂಪರ್‌ 8 ಹಂತದಲ್ಲಿ ಮುಗ್ಗರಿಸಿದ ಭಾರತ Read More »

error: Content is protected !!
Scroll to Top