ಸುದ್ದಿ

ಸುಳ್ಯ : ಜನವಸತಿಯಿಲ್ಲದ ಮನೆಯ ಶೌಚಾಲಯದಲ್ಲಿ ಯುವಕನ ಶವಪತ್ತೆ

ಮದ್ಯದ ಅಮಲಿನಲ್ಲಿ ತನ್ನದೇ ಮನೆಗೆ ಬೆಂಕಿ ಹಚ್ಚಿ ಓಡಿಹೋಗಿದ್ದ ಯುವಕ ಸುಳ್ಯ: ಮನೆಗೆ ಬೆಂಕಿಹಚ್ಚಿ ಓಡಿಹೋಗಿದ್ದ ಯುವಕನ ಮೃತದೇಹ ಜನವಸತಿಯಿಲ್ಲದ ಮನೆಯ ಶೌಚಾಲಯದಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಸುಳ್ಯದ ಗುತ್ತಿಗಾರು ಗ್ರಾಮದ ಅಡ್ಡನಪಾರೆಯಲ್ಲಿ ಗುರುವಾರ ಸಂಭವಿಸಿದೆ. ಅಡ್ಡನಪಾರೆ ಗೋಪಾಲ ನಾಯ್ಕ ಎಂಬವರ ಪುತ್ರ ಮಹಾಬಲ ನಾಯ್ಕ (27) ಮೃತಪಟ್ಟಿರುವ ಯುವಕ. ಮಹಾಬಲ ಕಳೆದ ಫೆ.4ರಂದು ಮದ್ಯದ ಅಮಲಿನಲ್ಲಿ ಬಂದು ತನ್ನ ಮನೆಗೇ ಬೆಂಕಿಹಚ್ಚಿ ಅಲ್ಲಿಂದ ಓಡಿಹೋಗಿದ್ದ. ಮನೆಗೆ ಬೆಂಕಿಹಚ್ಚಿದ ಕುರಿತು ಗೋಪಾಲ ನಾಯ್ಕ ಮಗನ ವಿರುದ್ಧ […]

ಸುಳ್ಯ : ಜನವಸತಿಯಿಲ್ಲದ ಮನೆಯ ಶೌಚಾಲಯದಲ್ಲಿ ಯುವಕನ ಶವಪತ್ತೆ Read More »

ಕಾಂಗ್ರೆಸ್‌ ಸರ್ಕಾರಕ್ಕೆ ಸಾವಿರ ದಿನದ ಸಂಭ್ರಮ

ಕಚ್ಚಾಟ, ವಿವಾದ, ಸಂಘರ್ಷದ ಸುಳಿಯಲ್ಲೇ ಕಳೆದು ಹೋದ ಸಾವಿರ ದಿನಗಳು ಬೆಂಗಳೂರು : ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಸಾವಿರ ದಿನ ಪೂರೈಸಿದ ಸಂಭ್ರಮಾಚರಣೆಯಲ್ಲಿದೆ. 2023ರಲ್ಲಿ ಗ್ಯಾರಂಟಿ ಬಲದಿಂದ ನಿಚ್ಚಳ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದ್ದ ಸರ್ಕಾರ ಆರಂಭದ ದಿನದಿಂದಲೂ ಸಂಘರ್ಷದಲ್ಲೇ ಕಳೆದಿದೆ. ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‌ ನಡುವೆ ಮೊದಲ ದಿನದಿಂದ ಶುರುವಾದ ಕುರ್ಚಿ ಕಿತ್ತಾಟ ಈಗಲೂ ಮುಂದುವರಿದಿದೆ ಮಾತ್ರವಲ್ಲದೆ ಸಾವಿರ ದಿನ ಪೂರೈಸುವ ಸಂದರ್ಭದಲ್ಲೇ ತಾರಕ್ಕೇರಿರುವುದು ಗಮನಾರ್ಹ. ಕಾಂಗ್ರೆಸ್ಸನ್ನು ಅಧಿಕಾರಕ್ಕೆ ತರುವಲ್ಲಿ ಕೆಪಿಸಿಸಿ ಅಧ್ಯಕ್ಷನಾಗಿ ತನ್ನ ಪಾತ್ರವೇ

ಕಾಂಗ್ರೆಸ್‌ ಸರ್ಕಾರಕ್ಕೆ ಸಾವಿರ ದಿನದ ಸಂಭ್ರಮ Read More »

ಸರಕಿನಂತೆ ಮಕ್ಕಳನ್ನು ಪ್ರವಾಸಕ್ಕೆ ಕರೆದೊಯ್ದ ಪ್ರಕರಣ : ಚಾಲಕರ ವಿರುದ್ಧ ಕೇಸ್‌ ದಾಖಲು

ಬಳೆಂಜ ಶಾಲೆಯ ಮಕ್ಕಳನ್ನು ಟಿಪ್ಪರ್‌, ಪಿಕಪ್‌ನಲ್ಲಿ ಪ್ರವಾಸಕ್ಕೆ ಕರೆದೊಯ್ದಿದ್ದ ಶಿಕ್ಷಕರು ಬೆಳ್ತಂಗಡಿ: ಟಿಪ್ಪರ್‌ನಲ್ಲಿ ಶಾಲಾ ಮಕ್ಕಳನ್ನು ಸರಕು ಸಾಗಿಸುವ ವಾಹನಗಳಲ್ಲಿ ಅಧ್ಯಯನ ಪ್ರವಾಸಕ್ಕೆ ಕೊಂಡೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಮುಖ್ಯಶಿಕ್ಷಕರನ್ನು ಅಮಾನತುಗೊಳಿಸಿದ ಬಳಿಕ ಇದೀಗ ಟಿಪ್ಪರ್ ಹಾಗೂ ಪಿಕಪ್ ವಾಹನ ಚಾಲಕರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಕಳೆದ ಗುರುವಾರ ಬೆಳ್ತಂಗಡಿ ತಾಲೂಕಿನ ಬಳೆಂಜ ಗ್ರಾಮದಲ್ಲಿ ಜೇನು ಕೃಷಿ ಅಧ್ಯಯನ ಪ್ರವಾಸಕ್ಕೆ ಶಾಲಾ ಮಕ್ಕಳನ್ನು ತೆರೆದ ಪಿಕಪ್ ಮತ್ತು ಟಿಪ್ಪರ್‌ನಲ್ಲಿ ಅಪಾಯಕಾರಿ ರೀತಿ ಕರೆದೊಯ್ಯಲಾಗಿತ್ತು. ಬಳೆಂಜ ಗ್ರಾಮದ ಹಿರಿಯ

ಸರಕಿನಂತೆ ಮಕ್ಕಳನ್ನು ಪ್ರವಾಸಕ್ಕೆ ಕರೆದೊಯ್ದ ಪ್ರಕರಣ : ಚಾಲಕರ ವಿರುದ್ಧ ಕೇಸ್‌ ದಾಖಲು Read More »

ಭಾರತ-ಪಾಕಿಸ್ತಾನ ಹೈವೋಲ್ಟೇಜ್‌ ಪಂದ್ಯಕ್ಕೆ ಮಳೆ ಅಡ್ಡಿ ಸಾಧ್ಯತೆ

ಕ್ರಿಕೆಟ್‌ ಅಭಿಮಾನಿಗಳ ಉತ್ಸಾಹಕ್ಕೆ ತಣ್ಣೀರು ಎರಚಿದ ಮುನ್ಸೂಚನೆ ಕೊಲಂಬೊ: ಹಲವು ಅಡ್ಡಿಗಳ ಬಳಿಕ ಕೊನೆಗೂ ಟಿ20 ವಿಶ್ವಕಪ್‌ನಲ್ಲಿ ಭಾರತದ ವಿರುದ್ಧ ಆಡಲು ಪಾಕಿಸ್ತಾನ ಒಪ್ಪಿಕೊಂಡಿದೆ. ಭಾನುವಾರ ಶ್ರೀಲಂಕಾದಲ್ಲಿ ನಡೆಯಲಿರುವ ಈ ಹೈ ವೋಲ್ಟೇಜ್‌ ಪಂದ್ಯವನ್ನು ನೋಡಲು ಕ್ರಿಕೆಟ್‌ ಅಭಿಮಾನಗಳು ತುದಿಗಾಲಲ್ಲಿ ನಿಂತಿದ್ದಾರೆ. ಹೀಗಿರುವಾಗ ಅವರ ಕುತೂಹಲಕ್ಕೆ ತಣ್ಣೀರು ಎರಚುವ ಸುದ್ದಿಯ್ನು ಹವಾಮಾನ ಇಲಾಖೆ ನೀಡಿದೆ. ಭಾರತ ಮತ್ತು ಪಾಕಿಸ್ತಾನ ಮಧ್ಯೆ ಭಾನುವಾರ ನಡೆಯುವ ರಣರೋಚಕ ಪಂದ್ಯಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ

ಭಾರತ-ಪಾಕಿಸ್ತಾನ ಹೈವೋಲ್ಟೇಜ್‌ ಪಂದ್ಯಕ್ಕೆ ಮಳೆ ಅಡ್ಡಿ ಸಾಧ್ಯತೆ Read More »

ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆ ವಿವಾದ : ಸಿಎಂ ಸ್ಪಷ್ಟನೆ

ಡಿಎಚ್‌ಒವನ್ನು ಅಬಕಾರಿ ಇಲಾಖೆಗೆ ವರ್ಗಾಯಿಸಿದ ಪತ್ರದಿಂದ ಭಾರಿ ವಿವಾದ ಬೆಂಗಳೂರು : ಆರೋಗ್ಯ ಇಲಾಖೆ ಅಧಿಕಾರಿಯನ್ನು ಅಬಕಾರಿ ಇಲಾಖೆಗೆ ವರ್ಗಾವಣೆ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ಎನ್ನಲಾದ ಪತ್ರ ರಾಜ್ಯದಲ್ಲಿ ಸಾಕಷ್ಟು ವಿವಾದಕ್ಕೊಳಗಾಗಿದೆ. ಮೊದಲೇ ವರ್ಗಾವಣೆ ದಂಧೆಯ ಆರೋಪ ಮಾಡುತ್ತಿದ್ದ ಬಿಜೆಪಿಗೆ ಹೊಸ ಅಸ್ತ್ರವೇ ಸಿಕ್ಕಂತಾಗಿತ್ತು. ಈ ವಿಚಾರವಾಗಿ ಖದ್ದು ಸಿಎಂ ಸಿದ್ದರಾಮಯ್ಯ ಸುಳ್ಳು ಆದೇಶ ಪ್ರತಿ ಹರಿಬಿಟ್ಟವರ ವಿರುದ್ಧ ಕಿಡಿಕಾರಿದ್ದಾರೆ. ಈ ಕುರಿತಾಗಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಕಿಡಿಗೇಡಿಗಳು ನನ್ನ ಕಚೇರಿಯ ನಕಲಿ ಟಿಪ್ಪಣಿಯೊಂದನ್ನು

ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆ ವಿವಾದ : ಸಿಎಂ ಸ್ಪಷ್ಟನೆ Read More »

ಡ್ರಗ್ಸ್ ಮಾರಾಟ: ಆರೋಪಿಗಳು ಪೊಲೀಸ್ ಬಲೆಗೆ

ಮಂಗಳೂರು: ಬೆಂಗಳೂರಿನಿಂದ ಮಂಗಳೂರಿಗೆ ಮಾದಕ ದ್ರವ್ಯ ತಂದು ಅದನ್ನು ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಸಿಸಿಬಿ ‌ಪೊಲೀಸರು ಬಂಧಿಸಿದ್ದು, ಲಕ್ಷಾಂತರ ರೂ. ಮೌಲ್ಯದ ಮಾದಕ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಆರೋಪಿಗಳನ್ನು ಉಳ್ಳಾಲದ ಮುಸ್ತಫಾ ಸೀದಿಯಬ್ಬ, ಮೈಯದ್ದಿ, ಮೊಹಮ್ಮದ್ ಶಿಫಾನ್ ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ನಿಷೇಧಿತ ಎಂಡಿಎಂಎ ಮಾದಕ ವಸ್ತುವನ್ನು ಬೂದು ಬಣ್ಣದ ಸ್ವಿಫ್ಟ್ ಕಾರಿನಲ್ಲಿ ತಂದು, ಉಳ್ಳಾಲ ತಾಲೂಕಿನ ತಲಪಾಡಿ ಪರಿಸರದಲ್ಲಿ ಸಾರ್ವಜನಿಕರಿಗೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ

ಡ್ರಗ್ಸ್ ಮಾರಾಟ: ಆರೋಪಿಗಳು ಪೊಲೀಸ್ ಬಲೆಗೆ Read More »

ಸೇವಾ ತೀರ್ಥವನ್ನು ಉದ್ಘಾಟಿಸಿದ ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ನೂತನ ಪ್ರಧಾನಮಂತ್ರಿ ಕಚೇರಿ ಸೇವಾತೀರ್ಥವನ್ನು ಉದ್ಘಾಟಿಸಿದ್ದಾರೆ. ಈ ಕಚೇರಿಯ್ನನು ಆಧುನಿಕ, ಪರಿಸರಸ್ನೇಹಿ, ಸುರಕ್ಷಿತ, ದಕ್ಷ ಮತ್ತು ನಾಗರಿಕ ಕೇಂದ್ರಿತ ಆಡಳಿತ ಪರಿಸರ ವ್ಯವಸ್ಥೆಯನ್ನು ಬೆಳೆಸುವ ಉದ್ದೇಶದಿಂದ ನಿರ್ಮಿಸಲಾಗಿದೆ. ಸಈ ಹೆಸರಿನ ಕೆಳಗೆ ನಾಗರಿಕ ದೇವೋ ಭವ (ಪ್ರಜೆಗಳೇ ದೇವರು) ಎಂದು ಕೂಡ ಬರೆಯಲಾಗಿದೆ. ಅನೇಕ ದಶಕಗಳ ಕಾಲ ಸೆಂಟ್ರಲ್ ವಿಸ್ಟಾ ಪ್ರದೇಶದಲ್ಲಿ ಅನೇಕ ಪ್ರಮುಖ ಸರ್ಕಾರಿ ಕಚೇರಿಗಳು ಮತ್ತು ಸಚಿವಾಲಯಗಳು ಹಲವು ಪ್ರತ್ಯೇಕ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿವೆ. ಇದರಿಂದಾಗಿ ಕಾರ್ಯಾಚರಣೆಯಲ್ಲಿ ಸಮನ್ವಯ

ಸೇವಾ ತೀರ್ಥವನ್ನು ಉದ್ಘಾಟಿಸಿದ ಪ್ರಧಾನಿ ಮೋದಿ Read More »

ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆಯಲ್ಲಿ ಬಿಎನ್‌ಪಿಗೆ ಐತಿಹಾಸಿಕ ಗೆಲುವು

ಮುಂದಿನ ಪ್ರಧಾನಿ ತಾರಿಕ್‌ ಅನ್ವರ್‌ಗೆ ನರೇಂದ್ರ ಮೋದಿ ಅಭಿನಂದನೆ ಢಾಕಾ: ಬಾಂಗ್ಲಾದೇಶದಲ್ಲಿ ಮಾಜಿ ಪ್ರಧಾನಿ ಶೇಖ್ ಹಸೀನಾ ಸರ್ಕಾರದ ಪತನದ ನಂತರ ನಡೆದ ಮೊದಲ ಸಾರ್ವತ್ರಿಕ ಚುನಾವಣೆ ಯ ಫಲಿತಾಂಶ ಇಂದು ಹೊರಬೀಳುತ್ತಿದೆ. ಈಗಾಗಲೇ ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷ (BNP) 166 ಸ್ಥಾನಗಳಲ್ಲಿ ಗೆದ್ದು ಮುನ್ನಡೆ ಕಾಯ್ದುಕೊಂಡಿದೆ. ಹೀಗಾಗಿ ಅಧಿಕೃತ ಫಲಿತಾಂಶ ಹೊರ ಬೀಳುವುದಕ್ಕೂ ಮುನ್ನವೇ ಬಿಎನ್‌ಪಿ ಗೆಲುವು ಘೋಷಿಸಿಕೊಂಡಿದೆ. ಈ ಬೆನ್ನಲ್ಲೇ ಅತಿದೊಡ್ಡ ಇಸ್ಲಾಮಿಸ್ಟ್ ಪಕ್ಷವಾದ ಜಮಾತ್-ಇ-ಇಸ್ಲಾಮಿ ಫಲಿತಾಂಶ ಪ್ರಕ್ರಿಯೆ ಸಮಗ್ರತೆಯ ಬಗ್ಗೆ ಗಂಭೀರ ಪ್ರಶ್ನೆ

ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆಯಲ್ಲಿ ಬಿಎನ್‌ಪಿಗೆ ಐತಿಹಾಸಿಕ ಗೆಲುವು Read More »

ಫೂಟ್ಪಾತ್ ಮೇಲೆ ಪ್ರಯಾಣಿಸಲು ಯತ್ನಿಸಿದ ದ್ವಿಚಕ್ರ ಸವಾರನನ್ನು ‌ಮತ್ತೆ ರಸ್ತೆಗಿಳಿಸಿದ ಜವಾಬ್ದಾರಿಯುತ ಮಹಿಳೆ

ತಿರುವನಂತಪುರ: ಕೇರಳದ ಕೋಝಿಕ್ಕೋಡ್‌ನಲ್ಲಿ ರೂಲ್ಸ್ ಬ್ರೇಕ್ ಮಾಡಿ ಫೂಟ್ಪಾತ್‌ ಮೇಲೆ ದ್ವಿಚಕ್ರ ವಾಹನ ಚಲಾಯಿಸಿದ ವ್ಯಕ್ತಿಯೊಬ್ಬನಿಗೆ ಮಹಿಳೆಯೊಬ್ಬರು ಪಾಠ ಕಲಿಸಿದ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರ ಮೆಚ್ಚುಗೆಗೂ ಪಾತ್ರವಾಗಿದೆ. ವ್ಯಕ್ತಿಯೊಬ್ಬ ರೆಡ್ ಸಿಗ್ನಲ್ ತಪ್ಪಿಸಿಕೊಳ್ಳುವ ಆತುರದಲ್ಲಿ ಜನರು ನಡೆದಾಡಲು ಇರುವ ಫೂಟ್ಪಾತ್ ಮೇಲೆ ದ್ವಿಚಕ್ರ ವಾಹನವನ್ನು ಚಲಾಯಿಸಲು ಯತ್ನಿಸಿದ್ದಾನೆ. ಆ ವೇಳೆ ಫೂಟ್ಪಾತ್ ‌ಮೇಲೆ ನಡೆದುಕೊಂಡು ಬರುತ್ತಿದ್ದ ಮಹಿಳೆ ಆತನ ವಾಹನದ ನೋಂದಣಿ ಸಂಖ್ಯೆಯನ್ನು ತಮ್ಮ ಫೋನಿನಲ್ಲಿ ‌ಸೆರೆ ಹಿಡಿದಿದ್ದಾರೆ. ಯಾವುದೇ ಕಾರಣಕ್ಕೂ ಆತನನ್ನು

ಫೂಟ್ಪಾತ್ ಮೇಲೆ ಪ್ರಯಾಣಿಸಲು ಯತ್ನಿಸಿದ ದ್ವಿಚಕ್ರ ಸವಾರನನ್ನು ‌ಮತ್ತೆ ರಸ್ತೆಗಿಳಿಸಿದ ಜವಾಬ್ದಾರಿಯುತ ಮಹಿಳೆ Read More »

ಮಹಿಳೆಯರ ಉಚಿತ ಪ್ರಯಾಣಕ್ಕೆ ಆಧಾರ್‌ ಬದಲು ಸ್ಮಾರ್ಟ್‌ ಕಾರ್ಡ್‌

4 ಸಾರಿಗೆ ನಿಗಮಗಳಿಂದ ಸ್ಮಾರ್ಟ್‌ ಕಾರ್ಡ್‌ ವಿತರಿಸಲು ತೀರ್ಮಾನ ಬೆಂಗಳೂರು: ಸಾರಿಗೆ ಬಸ್​ಗಳಲ್ಲಿ ಆಧಾರ್ ಕಾರ್ಡ್ ತೋರಿಸಿ ಉಚಿತವಾಗಿ ಪ್ರಯಾಣಿಸುವ ಶಕ್ತಿ ಯೋಜನೆಯಲ್ಲಿ ತುಸು ಮಾರ್ಪಾಡು ಮಾಡಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಇನ್ನು ಮುಂದೆ ಆಧಾರ್ ಬದಲಿಗೆ ಶಕ್ತಿ ಯೋಜನೆಯಡಿ ಸ್ಮಾರ್ಟ್‌ ಕಾರ್ಡ್‌ ವಿತರಣೆಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಇದರ ಜತೆಗೆ, ಹಲವು ಮತ್ವದ ನಿರ್ಣಯಗಳನ್ನು ಕ್ಯಾಬಿನೆಟ್​​ನಲ್ಲಿ ಕೈಗೊಳ್ಳಲಾಗಿದೆ. ಮಹಿಳೆಯರ ಉಚಿತ ಪ್ರಯಾಣಕ್ಕೆ 4 ಸಾರಿಗೆ ನಿಗಮಗಳು

ಮಹಿಳೆಯರ ಉಚಿತ ಪ್ರಯಾಣಕ್ಕೆ ಆಧಾರ್‌ ಬದಲು ಸ್ಮಾರ್ಟ್‌ ಕಾರ್ಡ್‌ Read More »

error: Content is protected !!
Scroll to Top