ಬಾಯ್ದೆರೆದ ಅಪಾಯಕ್ಕೆ ತಾತ್ಕಾಲಿಕ ತಡೆ! | ಶಾಶ್ವತ ಪರಿಹಾರದ ಭರವಸೆ ನೀಡಿದ ಪಿಡಬ್ಲ್ಯೂಡಿ ಎಇಇ | ನ್ಯೂಸ್ ಪುತ್ತೂರು ವರದಿಗೆ ಕ್ಷಿಪ್ರ ಸ್ಪಂದನೆ | ಹಾರಾಡಿ ರೈಲ್ವೇ ರಸ್ತೆ ಪ್ರವೇಶಿಸುವಲ್ಲಿ ಎದುರಾಗಿದ್ದ ಅಪಾಯ!!
ಪುತ್ತೂರು: ಪುತ್ತೂರು – ಉಪ್ಪಿನಂಗಡಿ ಮುಖ್ಯರಸ್ತೆಯಿಂದ ಹಾರಾಡಿ ರೈಲ್ವೇ ರಸ್ತೆ ಪ್ರವೇಶಿಸುವಲ್ಲಿಯೇ ಚರಂಡಿಯೊಂದು ಬಾಯ್ದೆರೆದು ನಿಂತಿದ್ದು, ಲೋಕೋಪಯೋಗಿ ಇಲಾಖೆ ತಾತ್ಕಾಲಿಕ ತಡೆ ನಿರ್ಮಿಸಿದೆ. ಮುಖ್ಯರಸ್ತೆಯಲ್ಲೇ ಬಾಯ್ದೆರೆದು ನಿಂತಿದ್ದ ಅಪಾಯದ ಬಗ್ಗೆ ‘ನ್ಯೂಸ್ ಪುತ್ತೂರು’ ಅಕ್ಟೋಬರ್ 5ರಂದು ವರದಿ ಮಾಡಿತ್ತು. ವರದಿಗೆ ತಕ್ಷಣ ಸ್ಪಂದಿಸಿದ ಲೋಕೋಪಯೋಗಿ ಇಲಾಖೆ ತನ್ನ ಸಿಬ್ಬಂದಿಗಳ ಮೂಲಕ ತಾತ್ಕಾಲಿಕ ತಡೆ ಬೇಲಿ ನಿರ್ಮಿಸಿದೆ. ಮಾತ್ರವಲ್ಲ, ಮುರಿದು ಹೋಗಿದ್ದ ಚರಂಡಿಯ ಭಾಗಕ್ಕೆ ಮರಳು ತುಂಬಿದ್ದ ಚೀಲಗಳನ್ನಿಡಲಾಗಿದೆ. ಇದರಿಂದ ವಾಹನಗಳು ಸಂಚರಿಸುವಾಗ ರಸ್ತೆ ಬದಿಗೆ ಬಂದರೂ, ಯಾವುದೇ […]










