ಅಪಘಾತ

ಕನ್ಯಾನ ಗ್ರಾಮದ ಮುಂಡೂರಿನಲ್ಲಿ ಕಂಪಿಸಿದ ಭೂಮಿ | ಆತಂಕಗೊಂಡ ಸಾರ್ವಜನಿಕರು

‍ ವಿಟ್ಲ: ಕನ್ಯಾನ ಗ್ರಾಮದ ಮಂಡ್ಕೂರು ಎಂಬಲ್ಲಿ ಜನರಿಗೆ ಒಂದು ಕ್ಷಣಕ್ಕೆ ಭೂಮಿ ಕಂಪಿಸಿದ ಅನುಭವ ಉಂಟಾಗಿದ್ದು, ಇದರಿಂದ ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ. ಕಂಪಿಸಿದ ಅನುಭವ ಕೇವಲ ಒಂದೆರಡು ಸೆಕೆಂಡ್‍  ಮಾತ್ರ ಉಂಟಾಗಿದೆ. ಘಟನೆ ಬಗ್ಗೆ ವ್ಯಕ್ತಿಯೊಬ್ಬರು ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ಹರಿಯಬಿಟ್ಟಿದ್ದು, ಸ್ಥಳೀಯ ಗ್ರಾಮ ಪಂಚಾಯಿತಿ ಅಧಿಕಾರಿಗಳು ಭೇಟಿ ನೀಡಿ ಮಾಹಿತಿ ಕಲೆ ಹಾಕಿದ್ದಾರೆ ಎನ್ನಲಾಗಿದೆ.

ಕನ್ಯಾನ ಗ್ರಾಮದ ಮುಂಡೂರಿನಲ್ಲಿ ಕಂಪಿಸಿದ ಭೂಮಿ | ಆತಂಕಗೊಂಡ ಸಾರ್ವಜನಿಕರು Read More »

ನದಿಯೊಂದರ ಸೇತುವೆ ಮೇಲಿನಿಂದ ತೆರಳುತ್ತಿದ್ದ ಬೈಕ್‍ | ಬೈಕ್‍ ಸಮೇತ ಕೊಚ್ಚಿ ಹೋದ ಸವಾರರು

ಸವಣಾಲು: ಹಿತ್ತಿಲವೇಲ ಕೂಡುಜಾಲು ಸಮೀಪದ ನದಿಯಲ್ಲಿ ಬೈಕ್ ಸಮೇತ ಯುವಕರಿಬ್ಬರು ಕೊಚ್ಚಿ ಹೋಗಿರುವ ಘಟನೆ ಭಾನುವಾರ ನಡೆದಿದ್ದು, ಬೈಕ್‍ ಸವಾರರು ಪವಾಡಸದೃಶವಾಗಿ ಪಾರಾಗಿದ್ದಾರೆ. ಸವಣಾಲು ಹಿತ್ತಿಲಪೇಲ ಪ್ರದೇಶದ ಕೆಳಗಿನ ವೇಲ ಎಂಬಲ್ಲಿನ ನಿವಾಸಿ ಕರಿಯ ಮಲೆಕುಡಿಯ ಎಂಬವರ ಮಗ ಸತೀಶ್‍ ಮತ್ತು ಸಹಸವಾರ ಸುಳ್ಳೋಡಿ ನಿವಾಸಿ ಸಂಜೀವ ಪೂಜಾರಿ ಎಂಬವರು ಕೆಲಸಕ್ಕೆಂದು ಬೈಕ್‍ ನಲ್ಲಿ ಹೊರಟು ನದಿಯನ್ನು ಬೈಕ್ ಸಮೇತ ದಾಟುವ ಸಾಹಸ ಮಾಡಿದಾಗ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಅದೃಷ್ಟವಶಾತ್ ಬೈಕ್ ನದಿಯ ಬದಿಯಲ್ಲಿ ಸಿಲುಕಿದ್ದು, ಯುವಕರಿಬ್ಬರು

ನದಿಯೊಂದರ ಸೇತುವೆ ಮೇಲಿನಿಂದ ತೆರಳುತ್ತಿದ್ದ ಬೈಕ್‍ | ಬೈಕ್‍ ಸಮೇತ ಕೊಚ್ಚಿ ಹೋದ ಸವಾರರು Read More »

ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಕಾರು : ಅಪಾಯದಿಂದ ಪಾರು

ಮುಂಡಾಜೆ:  ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಘಟನೆ ಮುಂಡಾಜೆ ಸಮೀಪದ ಸೀಟ್‍ ಬಳಿ ನಡೆದಿದೆ. ಕಾರಿನಲ್ಲಿ ಕಕ್ಕಿಂಜೆಯ ಚಿಬಿದ್ರೆ ಗ್ರಾಮ ಮುದ್ದಿನಡ್ಕ ನಿವಾಸಿ ಹರೀಶ್ ಗೌಡ, ಪತ್ನಿ ಹಾಗೂ ಇಬ್ಬರು ಮಕ್ಕಳು ಕಕ್ಕಿಂಜೆ ಯಿಂದ ಬೆಳ್ತಂಗಡಿ ಬರುತ್ತಿದ್ದ ಸಂದರ್ಭ ಅಪಘಾತ ಸಂಭವಿಸಿದೆ. ಹರೀಶ್ ಗೌಡ, ಪತ್ನಿ ಹಾಗೂ ಇಬ್ಬರು ಮಕ್ಕಳು ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಕಾರು : ಅಪಾಯದಿಂದ ಪಾರು Read More »

ಸುರತ್ಕಲ್‌ : ಮೇಲ್ಸೇತುವೆಯಿಂದ ಸರ್ವಿಸ್‌ ರಸ್ತೆಗೆ ಬಿದ್ದ ಕಾರು

ಸುರತ್ಕಲ್‌: ಸುರತ್ಕಲ್‌ ಎನ್‌ಐಟಿಕೆ ಸಮೀಪ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮೇಲ್ಸೇತುವೆಯಿಂದ ಕೆಳಗಿನ ರಸ್ತೆಗೆ ಬಿದ್ದ ಘಟನೆ ಭಾನುವಾರ ಸಂಭವಿಸಿದೆ. ಮಂಗಳೂರಿನಿಂದ ಉಡುಪಿ ಕಡೆ ತೆರಳುತ್ತಿದ್ದ ಕಾರನ್ನು ಕುಂದಾಪುರ ನಿವಾಸಿ ಪ್ರತ್ಯಕ್ಷ ಎಂಬವರು ಚಲಾಯಿಸುತ್ತಿದ್ದರು. ಅಪಘಾತದಿಂದ ಅವರಿಗೆ ಯಾವುದೇ ಪ್ರಾಣಾಪಾಯವಾಗಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಪ್ರತ್ಯಕ್ಷ ಅವರು ಕೆಲಸದ ನಿಮಿತ್ತ ಮಂಗಳೂರಿಗೆ ಹೋಗಿ ಕುಂದಾಪುರಕ್ಕೆ ಹಿಂದಿರುಗುತ್ತಿದ್ದ ವೇಳೆ ರಾಷ್ಟ್ರೀಯ ಹೆದ್ದಾರಿ 66ರ ಎನ್‌ಐಟಿಕೆ ಬಳಿ ಏಕಾಏಕಿ ಬ್ರೇಕ್‌ ಹಾಕಿದ್ದಾರೆ. ಇದರಿಂದ ನಿಯಂತ್ರಣ ಕಳೆದುಕೊಂಡ ಕಾರು ಮೇಲ್ಸೇತುವೆಯಿಂದ

ಸುರತ್ಕಲ್‌ : ಮೇಲ್ಸೇತುವೆಯಿಂದ ಸರ್ವಿಸ್‌ ರಸ್ತೆಗೆ ಬಿದ್ದ ಕಾರು Read More »

ವಿದ್ಯಾರ್ಥಿಗಳ ಹಾಸ್ಟೆಲ್‌ ಕಟ್ಟಡದಲ್ಲಿ ಬೆಂಕಿ ಅವಘಡ

ಮಂಗಳೂರು ವಿವಿಯ ಎನ್‌ಆರ್‌ಐ ವಿದ್ಯಾರ್ಥಿಗಳಿದ್ದ ಹಾಸ್ಟೆಲ್‌ ಮಂಗಳೂರು: ದೇರಳಕಟ್ಟೆಯಲ್ಲಿ ಎನ್‌ಆರ್‌ಐ ವಿದ್ಯಾರ್ಥಿಗಳಿದ್ದ ಹಾಸ್ಟೆಲ್ ಕಟ್ಟಡದ ನೆಲಮಹಡಿಯಲ್ಲಿ ಬೆಂಕಿ ಅವಘಡ ಸಂಭವಿಸಿದ ಘಟನೆ ಭಾನುವಾರ ರಾತ್ರಿ ನಡೆದಿದೆ. ದೇರಳಕಟ್ಟೆ ಜಂಕ್ಷನ್‌ನಲ್ಲಿರುವ ವೆಂಕಟ್ ರೆಸಿಡೆನ್ಸಿಯ ಜನರೇಟರ್ ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮೇಲಿನ ಎರಡು ಮಹಡಿಗಳಲ್ಲಿ ಮಂಗಳೂರು ವಿಶ್ವವಿದ್ಯಾಲಯದಲ್ಲಿ ಕಲಿಯುವ ಎನ್‌ಆರ್‌ಐ ವಿದ್ಯಾರ್ಥಿಗಳಿದ್ದು, ಎಲ್ಲರನ್ನು ಸುರಕ್ಷಿತವಾಗಿ ಕೆಳಗೆ ಇಳಿಸಲಾಗಿದೆ. ಕಟ್ಟಡದ ಟಾಪ್ ಫ್ಲೋರ್‌ನಲ್ಲಿ ಸಭಾಂಗಣವಿದ್ದು, ಅಲ್ಲಿ ಯಾವುದೇ ಕಾರ್ಯಕ್ರಮಗಳಿರಲಿಲ್ಲ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಭೇಟಿ ನೀಡಿ ಬೆಂಕಿ ನಂದಿಸುವ ಕಾರ್ಯವನ್ನು

ವಿದ್ಯಾರ್ಥಿಗಳ ಹಾಸ್ಟೆಲ್‌ ಕಟ್ಟಡದಲ್ಲಿ ಬೆಂಕಿ ಅವಘಡ Read More »

ಖಾಸಗಿ ಬಸ್ ಹಿಟಾಚಿ ಲಾರಿಗೆ ಡಿಕ್ಕಿ : ಓರ್ವ ಮೃತ್ಯು, 18ಕ್ಕೂ ಹೆಚ್ಚು ಮಂದಿಗೆ ಗಾಯ

ನೆಲ್ಯಾಡಿ: ಖಾಸಗಿ ಬಸ್‍ ಹಿಟಾಚಿ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು, 18 ಕ್ಕೂ ಹಚ್ಚು ಮಂದಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಲಾವತಡ್ಕದಲ್ಲಿ ಇಂದು  ಮುಂಜಾನೆ ಸಂಭವಿಸಿದೆ. ಅಪಘಾತದಲ್ಲಿ ಗಂಭೀರ ಗಾಯಗೊಂಡ ಕಾರ್ಕಳ ಪಡುಮನೆ ನಿವಾಸಿ ಶಂಕರನಾರಾಯಣ ಭಟ್ (41) ಅವರನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಕಾರ್ಕಳದಿಂದ ಧರ್ಮಸ್ಥಳ ಮೂಲಕ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಬಸ್ಸು, ಲಾವತಡ್ಕ ಬಳಿ ಹೆದ್ದಾರಿ ಬದಿಯಲ್ಲಿ ನಿಂತಿದ್ದ ಹಿಟಾಚಿ ಯಂತ್ರವನ್ನು ಸಾಗಿಸುತ್ತಿದ್ದ ಲಾರಿಗೆ

ಖಾಸಗಿ ಬಸ್ ಹಿಟಾಚಿ ಲಾರಿಗೆ ಡಿಕ್ಕಿ : ಓರ್ವ ಮೃತ್ಯು, 18ಕ್ಕೂ ಹೆಚ್ಚು ಮಂದಿಗೆ ಗಾಯ Read More »

ಪತನಗೊಂಡ ವಿಮಾನದ ಎರಡನೇ ಬ್ಲ್ಯಾಕ್ ಬಾಕ್ಸ್ ಪತ್ತೆ

ಅಪಘಾತದ ನಿಖರ ಕಾರಣ ತಿಳಿಯುವ ಸಾಧ್ಯತೆ ಅಹಮದಾಬಾದ್‌: ಕಳೆದ ಗುರುವಾರ ಮಧ್ಯಾಹ್ನ ಟೇಕಾಫ್‌ ಆದ ಬೆನ್ನಲ್ಲೇ ವಿಮಾನ ನಿಲ್ದಾಣದ ಬಳಿಯಿರುವ ಮೇಘನಿನಗರದ ಬಿ.ಜೆ ವೈದ್ಯಕೀಯ ಕಾಲೇಜಿನ ಆವರಣದಲ್ಲಿ ಪತನಗೊಂಡಿದ್ದ ಏ‌ರ್ ಇಂಡಿಯಾ ಬೋಯಿಂಗ್ 787-8 ವಿಮಾನದ 2ನೇ ಬ್ಲ್ಯಾಕ್ ಬಾಕ್ಸ್ ಭಾನುವಾರ ಪತ್ತೆಯಾಗಿದೆ. ವಿಮಾನದಲ್ಲಿ 2 ಬ್ಲ್ಯಾಕ್ ಬಾಕ್ಸ್‌ಗಳಿದ್ದವು. ವಿಮಾನದ ಫ್ಲೈಟ್‌ ಡೇಟಾ ರೆಕಾರ್ಡರ್ ಶುಕ್ರವಾರ ಪತ್ತೆಯಾಗಿತ್ತು. ʻಕಾಕ್‌ಪಿಟ್ ವಾಯ್ಸ್ ರೆಕಾರ್ಡರ್ʼ ಭಾನುವಾರ ಪತ್ತೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರ ಹಿರಿಯ ಸಹಾಯಕ ಪಿ.ಕೆ. ಮಿಶ್ರಾ

ಪತನಗೊಂಡ ವಿಮಾನದ ಎರಡನೇ ಬ್ಲ್ಯಾಕ್ ಬಾಕ್ಸ್ ಪತ್ತೆ Read More »

ಗುಡ್ಡ ಕುಸಿತ : ಶೃಂಗೇರಿ-ಮಂಗಳೂರು ಸಂಚಾರ ಸ್ಥಗಿತ

ಚಿಕ್ಕಮಗಳೂರು: ಮಲೆನಾಡು ಭಾಗದಲ್ಲಿ ಗಾಳಿ, ಮಳೆ ಅಬ್ಬರ ಮುಂದುವರಿದಿದ್ದು, ಧಾರಾಕಾರ ಗಾಳಿ, ಮಳೆಗೆ ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಭಾರಿ ಪ್ರಮಾಣದಲ್ಲಿ ಗುಡ್ಡ ಕುಸಿದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ನೆಮ್ಮಾರು ಗ್ರಾಮದ ಬಳಿ ನಡೆದಿದೆ. ಗುಡ್ಡ ಕುಸಿದಿರುವ ಪರಿಣಾಮ ಶೃಂಗೇರಿ-ಮಂಗಳೂರು ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಪೊಲೀಸ್, ಪಂಚಾಯತ್‌ ಅಧಿಕಾರಿಗಳು ಹಾಗೂ ಸ್ಥಳೀಯರು ಸುರಿಯುತ್ತಿರುವ ಮಳೆ ಮಧ್ಯೆಯೇ ರಸ್ತೆಗೆ ಉರುಳಿರುವ ಮಣ್ಣಿನ ತೆರವು ಕಾರ್ಯಕ್ಕೆ ಮುಂದಾಗಿದ್ದಾರೆ. ಮಣ್ಣು ಕುಸಿಯದಂತೆ ರಸ್ತೆ ಬದಿಗೆ ಕಟ್ಟಿದ್ದ ಕಬ್ಬಿಣದ ತಡೆಗೋಡೆ ಕೂಡ

ಗುಡ್ಡ ಕುಸಿತ : ಶೃಂಗೇರಿ-ಮಂಗಳೂರು ಸಂಚಾರ ಸ್ಥಗಿತ Read More »

ಮಂಗಳೂರು : ಕುಸಿದು ಬಿದ್ದ ಆಸ್ಪತ್ರೆಯ ಗೋಡೆ

ಒಂದೇ ಕುಟುಂಬದ ಆರು ಮಂದಿ ಅದೃಷ್ಟವಶಾತ್‌ ಪಾರು ಮಂಗಳೂರು : ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿನ್ನೆಯಿಂದ ಎಡೆಬಿಡದೆ ಮಳೆ ಸುರಿಯುತ್ತಿದ್ದು, ಕರಾವಳಿ ಭಾಗದಲ್ಲಿ ವರುಣಾರ್ಭಟಕ್ಕೆ ಜನ ತತ್ತರಿಸಿ ಹೋಗಿದ್ದಾರೆ. ಮಂಗಳೂರಿನಲ್ಲಿ ಭಾರಿ ಮಳೆಗೆ ಜಲ ಸ್ಫೋಟಗೊಂಡು ಖಾಸಗಿ ಆಸ್ಪತ್ರೆಯ ಗೋಡೆ ಕುಸಿದು ಬಿದ್ದಿದ್ದು, ಭಾರಿ ಅವಘಡವೊಂದು ಸ್ವಲ್ಪದರಲ್ಲೇ ತಪ್ಪಿದೆ. ಕುಟುಂಬವೊಂದು ಅದೃಷ್ಟವಶಾತ್‌ ಪಾರಾಗಿದೆ. ಕಂಕನಾಡಿ ಬಳಿಯ ಸುವರ್ಣ ಲೇನ್‌ನಲ್ಲಿ ಭಾರಿ ಅವಘಡ ಸಂಭವಿಸಿದೆ. ಧಾರಾಕಾರ ಮಳೆಗೆ ಖಾಸಗಿ ಆಸ್ಪತ್ರೆಯ ಕಾಂಪೌಂಡ್ ಗೋಡೆ ಕುಸಿದು ಬಿದ್ದಿದೆ.

ಮಂಗಳೂರು : ಕುಸಿದು ಬಿದ್ದ ಆಸ್ಪತ್ರೆಯ ಗೋಡೆ Read More »

ಕೇದಾರನಾಥದಲ್ಲಿ ಹೆಲಿಕಾಪ್ಟರ್‌ ಪತನ : ಆರು ಮಂದಿ ಸಾವು

ಡೆಹ್ರಾಡೂನ್: : ಅಹಮದಾಬಾದ್ ವಿಮಾನ ದುರಂತ ಜನರ ಮನಸ್ಸಿನಿಂದ ಮಾಸುವ ಮುನ್ನವೇ ಮತ್ತೊಂದು ಅಪಘಾತ ಸಂಭವಿಸಿದ್ದು, ಉತ್ತರಾಖಂಡದ ಕೇದಾರನಾಥದಲ್ಲಿ ಹೆಲಿಕಾಪ್ಟರ್ ಪತನಗೊಂಡಿದೆ. ಗೌರಿಕುಂಡ್ ಪ್ರದೇಶದ ಬಳಿ ಈ ಅಪಘಾತ ಸಂಭವಿಸಿ ಹೆಲಿಕಾಪ್ಟರ್​​ನಲ್ಲಿದ್ದ ಪೈಲಟರ್​ ಸೇರಿ 6 ಮಂದಿ ಸಾವನ್ನಪ್ಪಿದ್ದಾರೆ. ಪ್ರತಿಕೂಲ ಹವಾಮಾನದಿಂದಾಗಿ ಅಪಘಾತ ಸಂಭವಿಸಿದೆ. ಘಟನೆಯ ನಂತರ ಎನ್​​ಡಿಆರ್​ಎಫ್​ ತಂಡಗಳು ಸ್ಥಳಕ್ಕೆ ತಲುಪಿವೆ. ಹೆಲಿಕಾಪ್ಟರ್‌ನ ಅವಶೇಷಗಳು ಸ್ಥಳದಲ್ಲಿ ಚದುರಿಹೋಗಿವೆ. ಹುಲ್ಲು ಕತ್ತರಿಸುತ್ತಿದ್ದ ಮಹಿಳೆಯರು ಹೊಗೆಯನ್ನು ನೋಡಿದ ನಂತರ ಘಟನೆಯ ಬಗ್ಗೆ ಕೂಡಲೇ ಮಾಹಿತಿ ನೀಡಿದ್ದಾರೆ. ಅಪಘಾತಕ್ಕೀಡಾದ ಹೆಲಿಕಾಪ್ಟರ್

ಕೇದಾರನಾಥದಲ್ಲಿ ಹೆಲಿಕಾಪ್ಟರ್‌ ಪತನ : ಆರು ಮಂದಿ ಸಾವು Read More »

error: Content is protected !!
Scroll to Top