ಅಪಘಾತ

ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್ ಗಾತ್ರದ ಮರ | ನಾಲ್ವರಿಗೆ ಗಾಯ

ಸುಬ್ರಹ್ಮಣ್ಯ: ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್ ಮರ ಬಿದ್ದು ಮಗು ಸೇರಿದಂತೆ ನಾಲ್ವರು ಗಾಯಗೊಂಡ ಘಟನೆ ರವಿವಾರ ಸುಬ್ರಹ್ಮಣ್ಯ – ಉಡುಪಿ ರಾಜ್ಯ ಹೆದ್ದಾರಿಯ ಕಡಬ ತಾಲೂಕಿನ ನೂಜಿಬಾಳ್ತಿಲದಲ್ಲಿ ಸಂಭವಿಸಿದೆ. ಕುಕ್ಕೆ ಸುಬ್ರಹ್ಮಣ್ಯ ಭಾಗದಿಂದ ಇಚ್ಲಂಪಾಡಿ ಮೂಲಕ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರಿನ ಮೇಲೆ ನೂಜಿಬಾಳ್ತಿಲ ಗ್ರಾಮದ ಕನ್ವಾರೆ ಎಂಬಲ್ಲಿ ಬೃಹತ್ ಮರ ಮುರಿದು ಬಿದ್ದಿದೆ. ಘಟನೆಯಿಂದ ಕಾರಿನಲ್ಲಿದ್ದ ಚಾಲಕ, ಇಬ್ಬರು ಮಹಿಳೆಯವರು, ಒಂದು ಮಗು ಕಾರಿನಲ್ಲಿ ಸಿಲುಕಿಕೊಂಡಿದ್ದರು. ಕೂಡಲೇ ಕಾರ್ಯಾಚರಣೆ ನಡೆಸಿದ ಸ್ಥಳೀಯರು ಕಾರಿನಲ್ಲಿದ್ದವರು ಹೊರ ತೆಗೆದು […]

ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್ ಗಾತ್ರದ ಮರ | ನಾಲ್ವರಿಗೆ ಗಾಯ Read More »

ಪರ್ಲಡ್ಕ ವೃತ್ತದ ಬಳಿ ರಸ್ತೆಗೆ ಗುಡ್ಡ ಕುಸಿತ

ಪುತ್ತೂರು: ಮಂಜಲ್ಪಡ್ಪು-ದರ್ಬೆ ನಡುವಿನ ಬೈಪಾಸ್ ರಸ್ತೆಯ ಪರ್ಲಡ್ಕದಲ್ಲಿ ಭಾನುವಾರ ಸುರಿದ ಭಾರೀ ಮಳೆಗೆ ಗುಡ್ಡ ಕುಸಿತ ಉಂಟಾಗಿ, ಕೆಲ ಹೊತ್ತು ಸಂಚಾರಕ್ಕೆ ಅಡಚಣೆಯಾಯಿತು. ಪರ್ಲಡ್ಕ ವೃತ್ತದ ಬಳಿಯ ಕಾವೇರಿ ಹಾರ್ಡ್’ವೇ ಅಂಗಡಿ  ಪಕ್ಕದಲ್ಲಿ ಗುಡ್ಡ ಕುಸಿತ ಉಂಟಾಗಿದೆ. ಪರಿಣಾಮ  ಎರಡು ಕಡೆಯ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಬಳಿಕ ಎರಡು ಜೆಸಿಬಿಯಿಂದ ಮಣ್ಣು ತೆರವು ಕಾರ್ಯಾಚರಣೆ ನಡೆಸಲಾಯಿತು.

ಪರ್ಲಡ್ಕ ವೃತ್ತದ ಬಳಿ ರಸ್ತೆಗೆ ಗುಡ್ಡ ಕುಸಿತ Read More »

ನಗರಸಭೆ ಕಾಂಪೌಂಡ್ ಗೋಡೆ ಕುಸಿತ | ರಿಕ್ಷಾಕ್ಕೆ ಹಾನಿ

ಪುತ್ತೂರು: ಇಂದು ಧಾರಕಾರವಾಗಿ ಸುರಿಯುತ್ತಿರುವ ಮಳೆಗೆ ಪುತ್ತೂರು ನಗರಸಭೆಯ ಕಾಂಪೌಂಡ್ ಗೋಡೆ ಕುಸಿದು ಬಿದ್ದ ಘಟನೆ ನಡೆದಿದೆ. ಗ್ರಾಮ ಚಾವಡಿಯ ಹಿಂಭಾಗದ ಕೋರ್ಟ್ ರಸ್ತೆಯ ಕಾಂಪೌಂಡ್ ಗೋಡೆ ಇದಾಗಿದ್ದು, ಈ ವೇಳೆ 3 ರಿಕ್ಷಾಗಳಿಗೆ ಹಾನಿಯಾಗಿದೆ. ಇದರಲ್ಲಿ 2 ರಿಕ್ಷಾ ತೀರಾ ಹಾನಿಗೊಳಗಾಗಿದೆ. ಈ ಸಂದರ್ಭದಲ್ಲಿ ಯಾರೂ ಇರದೇ ಇರುವುದರಿಂದ ಜೀವಕ್ಕೆ ಹಾನಿ ಸಂಭವಿಸಿಲ್ಲ ಎಂದು ಹೇಳಲಾಗಿದೆ. ಪಕ್ಕದಲ್ಲಿ ನಗರಸಭೆಯ ಟ್ರಾನ್ಸ್ ‘ಫಾರ್ಮರ್ ಇದ್ದು, ಕಾಂಪೌಂಡ್ ಬಿದ್ದಾಗ ರಸ್ತೆಗೆ ವಾಲಿಕೊಂಡು ಬಿಟ್ಟಿತ್ತು. ತಕ್ಷಣ ಮೆಸ್ಕಾಮ್ ಮಾಹಿತಿ ನೀಡಿ,

ನಗರಸಭೆ ಕಾಂಪೌಂಡ್ ಗೋಡೆ ಕುಸಿತ | ರಿಕ್ಷಾಕ್ಕೆ ಹಾನಿ Read More »

ನೇಣು ಬಿಗಿದು ಯುವಕ ಆತ್ಮಹತ್ಯೆ

ವಿಟ್ಲ: ನೇಣು ಬಿಗಿದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದ ನೆಕ್ಕರೆಕಾಡು ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕ ಸಂತೋಷ್ ನಾಯ್ಕ (32) ಎನ್ನಲಾಗಿದ್ದು, ಈತ ಕೂಲಿ ಕೆಲಸ ನಿರ್ವಹಿಸುತ್ತಿದ್ದ. ಮೃತರು ತಂದೆ, ತಾಯಿ ಮತ್ತು ಕುಟುಂಬಸ್ಥರನ್ನು ಆಗಲಿದ್ದಾರೆ.ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.

ನೇಣು ಬಿಗಿದು ಯುವಕ ಆತ್ಮಹತ್ಯೆ Read More »

ಹೂವಿನ ಸ್ಟಾಲ್‍ ಮೇಲೆ ಬಿದ್ದ ತೆರವಾದ ಕಟ್ಟಡದ ಗೋಡೆ : ಮಹಿಳೆಗೆ ಗಾಯ

ಪುತ್ತೂರು: ನಗರದ ಮಹಿಳಾ ಪೊಲೀಸ್ ಠಾಣೆಯ ಬಳಿ ಇತ್ತೇಚೆಗೆ ತೆರವಾದ ಕಟ್ಟಡದ ಪಕ್ಕದ ಕಟ್ಟಡದ ಗೋಡೆಯ ಭಾಗವೊಂದು ಜರಿದು ಬಿದ್ದ ಪರಿಣಾಮ ಹೂವಿನ ವ್ಯಾಪಾರಿ ಮಹಿಳೆಯೊಬ್ಬರು ಗಾಯಗೊಂಡ ಘಟನೆ ಶನಿವಾರ ತಡರಾತ್ರಿ ನಡೆದಿದೆ. ಕಳೆದ ಕೆಲವು ಸಮಯದಿಂದ ವಿನಾಯಕ ಪ್ಲವರ್ ಸ್ಟಾಲ್ ನ ಮಾಲಕತ್ವದ ಹೂವಿನ ಅಂಗಡಿ ಮೇಲೆ ಗೋಡೆ ಜರಿದು ಬಿದ್ದಿದೆ. ಈ ಸಂದರ್ಭ ಗಾಯಗೊಂಡ ಮಹಿಳೆಯನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದರು. ಸ್ಥಳಕ್ಕೆ ಅರುಣ್ ಕುಮಾರ್ ಪುತ್ತಿಲ, ಉಮೇಶ್ ಕೋಡಿಬೈಲು, ಪ್ರಜ್ವಲ್ ಘಾಟೆ ಭೇಟಿ ನೀಡಿದರು.

ಹೂವಿನ ಸ್ಟಾಲ್‍ ಮೇಲೆ ಬಿದ್ದ ತೆರವಾದ ಕಟ್ಟಡದ ಗೋಡೆ : ಮಹಿಳೆಗೆ ಗಾಯ Read More »

ಸಮುದ್ರದಲ್ಲಿ ಹಡಗು ಅವಘಡ : ನೀರುಪಾಲಾದ ಅಪಾಯಕಾರಿ ಬೃಹತ್‌ ಕಂಟೇನರ್‌ಗಳು

ಕರಾವಳಿ ಜನರಿಗೆ ಎಚ್ಚರಿಕೆ ನೀಡಿದ ನೈಸರ್ಗಿಕ ವಿಕೋಪ ನಿರ್ವಹಣೆ ಪ್ರಾಧಿಕಾರ ತಿರುನಂತಪುರಂ: ಕೊಚ್ಚಿಗೆ ಬರುತ್ತಿದ್ದ ಸರಕು ಸಾಗಣೆ ಹಡಗು ಅವಘಡಕ್ಕೀಡಾಗಿ ಅದರಲ್ಲಿದ್ದ ತೈಲ ತುಂಬಿದ ಕಂಟೇನರ್‌ಗಳು ಸಮುದ್ರ ಪಾಲಾಗಿದ ಘಟನೆ ಅರಬ್ಬಿ ಸಮುದ್ರದಲ್ಲಿ ಸಂಭವಿಸಿದ್ದು, ಈ ಕಂಟೇನರ್‌ಗಳು ದಡಕ್ಕೆ ಬಂದರೆ ಹತ್ತಿರ ಹೋಗದಂತೆ ಜನರಿಗೆ ಎಚ್ಚರಿಕೆ ನೀಡಲಾಗಿದೆ. ಸುಮಾರು 10 ದೊಡ್ಡ ಕಂಟೇನರ್‌ಗಳು ಸಮುದ್ರ ಪಾಲಾಗಿದ್ದು, ಮೀನುಗಾರರಲ್ಲಿ ಆತಂಕ ಸೃಷ್ಟಿಯಾಗಿದೆ. ಕಂಟೇನರ್‌ಗಳು ದಡಕ್ಕೆ ಬಂದರೆ ಅವುಗಳ ಬಳಿ ತೆರಳದಂತೆ ಕೇರಳ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣೆ ಪ್ರಾಧಿಕಾರ

ಸಮುದ್ರದಲ್ಲಿ ಹಡಗು ಅವಘಡ : ನೀರುಪಾಲಾದ ಅಪಾಯಕಾರಿ ಬೃಹತ್‌ ಕಂಟೇನರ್‌ಗಳು Read More »

ತೋಟಕ್ಕೆ ಉರುಳಿ ಬಿದ್ದ ಮಾರುತಿ ಎರ್ಟಿಗಾ ಕಾರು

ಪುತ್ತೂರು: ಪುತ್ತೂರಿನಿಂದ ಕಾಣಿಯೂರು ಕಡೆಗೆ ಸಂಚರಿಸುತ್ತಿದ್ದ ಮಾರುತಿ ಎರ್ಟಿಗಾ ಕಾರೊಂದು ಕಾಣಿಯೂರು ಸುಬ್ರಹ್ಮಣ್ಯ ಮುಖ್ಯರಸ್ತೆಯ ಗಡಿಪಿಲದಲ್ಲಿರುವ ಕರೆಮನೆ ಕಟ್ಟಿ ಎಂಬ ಸ್ಥಳದ ಸಮೀಪ ಅಪಘಾತಕ್ಕೀಡಾಗಿದೆ. ಚಾಲಕನು ಕಾರನ್ನು ಮುಖ್ಯ ರಸ್ತೆಯಿಂದ ಪಕ್ಕಕ್ಕೆ ಇಳಿಸುವ ಪ್ರಯತ್ನದಲ್ಲಿದ್ದಾಗ, ರಸ್ತೆಯ ಬದಿಯ ತೋಟಕ್ಕೆ ಉರುಳಿ ಬಿದ್ದಿದೆ. ಪುತ್ತೂರು ಕಡೆಯಿಂದ ಕಾಣಿಯೂರು ಮಾರ್ಗವಾಗಿ ಚಲಿಸುತ್ತಿದ್ದ ಮಾರುತಿ ಎರ್ಟಿಗಾ ಕಾರು, ಗಡಿಪಿಲ ಕರೆಮನೆ ಕಟ್ಟೆ ಬಳಿ ಬಂದಾಗ ಚಾಲಕನು ಎದುರಿನಿಂದ ಬರುತ್ತಿದ್ದ ವಾಹನಕ್ಕೆ ದಾರಿ ಮಾಡಿಕೊಡಲು ಕಾರನ್ನು ರಸ್ತೆಯ ಅಂಚಿಗೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಆದರೆ,

ತೋಟಕ್ಕೆ ಉರುಳಿ ಬಿದ್ದ ಮಾರುತಿ ಎರ್ಟಿಗಾ ಕಾರು Read More »

ಕಾಂಕ್ರಿಟ್‍  ಮಿಕ್ಸಿಂಗ್‍ ವಾಹನದಡಿ ಬಿದ್ದು ಮಹಿಳೆ ಮೃತ್ಯು | ಕೆಲಸ ಮಾಡುತ್ತಿದ್ದ ವೇಳೆ ಘಟನೆ

ಪುತ್ತೂರು: ಮಹಿಳೆಯೊಬ್ಬರು ರಸ್ತೆ ಕಾಂಕ್ರಿಟೀಕರಣ ಕಾಮಗಾರಿಯ ವೇಳೆ ಕಾಂಕ್ರೀಟ್ ಮಿಕ್ಸಿಂಗ್ ವಾಹನದಡಿಗೆ ಬಿದ್ದು ಮೃತಪಟ್ಟ ಘಟನೆ ಬೆಟ್ಟಂಪಾಡಿ ಗ್ರಾಮದ ಬಿಲ್ವಗಿರಿ ಸಮೀಪ ನಡೆದಿದೆ. ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಬೊಮ್ಮಾಳ ಗ್ರಾಮದ ಬಸವರಾಜರವರ ಪತ್ನಿ ಗೌರಮ್ಮ (28) ಮೃತಪಟ್ಟವರು. ಬೆಟ್ಟಂಪಾಡಿ ಗ್ರಾಮ ಪಂಚಾಯತ್‌ ವ್ಯಾಪ್ತಿಯ ರೆಂಜದಿಂದ ಬಿಲ್ವಗಿರಿ ಮೂಲಕ ಸಂಪರ್ಕ ಕಲ್ಪಿಸುವ ರಸ್ತೆಗೆ ಕೆಲ ದಿನಗಳಿಂದ ಕಾಮಗಾರಿ ನಡೆಯುತ್ತಿದ್ದು ರಾಯಚೂರು ಮೂಲದ ಒಂದೇ ಕುಟುಂಬದ ಹಲವು ಮಂದಿ ಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದರು. ಶುಕ್ರವಾರ ಸಂಜೆ ಕೆಲಸ ಮಾಡುತ್ತಿರುವ

ಕಾಂಕ್ರಿಟ್‍  ಮಿಕ್ಸಿಂಗ್‍ ವಾಹನದಡಿ ಬಿದ್ದು ಮಹಿಳೆ ಮೃತ್ಯು | ಕೆಲಸ ಮಾಡುತ್ತಿದ್ದ ವೇಳೆ ಘಟನೆ Read More »

ಟೆಂಪೊ ಟ್ರಾವೆಲರ್‌  – ಕಾರು ನಡುವೆ   ಢಿಕ್ಕಿ | ಪ್ರಾಣಾಪಾಯದಿಂದ ಪಾರು

ಪುತ್ತೂರು : ಟೆಂಪೊ ಟ್ರಾವೆಲರ್‌ ವಾಹನ ಮತ್ತು ಕಾರಿನ ನಡುವೆ ಢಿಕ್ಕಿಯಾದ ಘಟನೆ ಪುತ್ತೂರಿನ ಬೈಪಾಸ್ ರಸ್ತೆಯ ಬೊಳುವಾರು ಸಮೀಪದಲ್ಲಿ ನಡೆದಿದೆ.  ಈ ಘಟನೆ ತಡ ರಾತ್ರಿ ವೇಳೆ ನಡೆದಿದ್ದು,  ಅದೃಷ್ಟವಶಾತ್‍ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಂಗಳೂರಿನಿಂದ ಮೈಸೂರು ಕಡೆಗೆ ಸಂಚರಿಸುತ್ತಿದ್ದ ಟೆಂಪೊ ಟ್ರಾವೆಲರ್‌ ಮತ್ತು ಪುತ್ತೂರಿನಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಬಲೇನೋ ಕಾರು ನಡುವೆ ಡಿಕ್ಕಿಯಾಗಿದೆ. ಡಿಕ್ಕಿಯಾದ ಪರಿಣಾಮ ಹಲವು ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಆದರೆ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪುತ್ತೂರಿನ ಬೈಪಾಸ್‌ ರಸ್ತೆಯ ಅಪಾಯಕಾರಿ

ಟೆಂಪೊ ಟ್ರಾವೆಲರ್‌  – ಕಾರು ನಡುವೆ   ಢಿಕ್ಕಿ | ಪ್ರಾಣಾಪಾಯದಿಂದ ಪಾರು Read More »

ಹಿಟ್‍ ಆಂಡ್ ರನ್‍ | ಗಾಯಗೊಂಡ ಅರಿಯಡ್ಕ ಗ್ರಾಪಂ ಮಾಜಿ ಅಧ್ಯಕ್ಷೆ ಸವಿತಾ ಎಸ್‍.

ಪುತ್ತೂರು: ಹಿಟ್ ಆಂಡ್ ರನ್‌ ನಲ್ಲಿ ಅರಿಯಡ್ಕ ಗ್ರಾ. ಪಂ ಮಾಜಿ ಅಧ್ಯಕ್ಷೆ ಸವಿತಾ ಎಸ್.ರವರು ಗಾಯಗೊಂಡ ಘಟನೆ ಬುಧವಾರ ರಾಷ್ಟ್ರೀಯ ಹೆದ್ದಾರಿ 275 ರ ಕುಂಬ್ರ ಸಮೀಪದ ಶೇಖಮಲೆಯಲ್ಲಿ ನಡೆದಿದೆ. ಸವಿತಾರವರು ಚಲಾಯಿಸುತ್ತಿದ್ದ ಸ್ಕೂಟರ್‌ ಶೇಖಮಲೆ ಮಸೀದಿ ಹತ್ತಿರ ಟೆಂಪೋ ಟ್ರಾವೆಲ್ಲರ್‌ ವೊಂದು ಎದುರಿನಿಂದ ಬರುತ್ತಿದ್ದ ವಾಹನವನ್ನು ತಪ್ಪಿಸುವ ಭರದಲ್ಲಿ ಡಿಕ್ಕಿ ಹೊಡೆದು ಪರಾರಿಯಾಗಿತ್ತು. ಡಿಕ್ಕಿಯ ರಭಸಕ್ಕೆ ಸ್ಕೂಟರ್ ಪಲ್ಟಿಯಾಗಿದ್ದು ಸವಾರ ರಸ್ತೆಗೆ ಎಸೆಯಲ್ಪಟ್ಟಿದ್ದರು. ಗಾಯಾಳುವನ್ನು ತಕ್ಷಣವೇ ಕುಂಬ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ನಿರ್ದೇಶಕ

ಹಿಟ್‍ ಆಂಡ್ ರನ್‍ | ಗಾಯಗೊಂಡ ಅರಿಯಡ್ಕ ಗ್ರಾಪಂ ಮಾಜಿ ಅಧ್ಯಕ್ಷೆ ಸವಿತಾ ಎಸ್‍. Read More »

error: Content is protected !!
Scroll to Top