ಅಪಘಾತ

ಸೈಕಲ್‌ನಿಂದ ಬಿದ್ದು ಬಾಲಕ ಸಾವು

ವಿಟ್ಲ: ಬಾಲಕ ಸೈಕಲ್‌ನಿಂದ ಬಿದ್ದು ಗಂಭೀರವಾಗಿ ಗಾಯಗೊಂಡು ಮೃತಪಟ್ಟ ಘಟನೆ ವಿಟ್ಲ ಸಮೀಪ ಕೊಳ್ನಾಡು ಎಂಬಲ್ಲಿ ಸಂಭವಿಸಿದೆ. ಕೊಳ್ನಾಡು ಗ್ರಾಮದ ತಾಳಿತ್ತನೂಜಿ ದೇವಸ್ಯ ನಿವಾಸಿ ಅಸ್ಮ ಎಂಬವರ ಪುತ್ರ ಆಸಿಫ್‌ (12) ಸೈಕಲ್‌ನಿಂದ ಬಿದ್ದು ಗಂಭೀರವಾಗಿ ಗಾಯಗೊಂಡು ಮೃತಪಟ್ಟಿರುವ ಬಾಲಕ. ಮದರಸವೊಂದರಲ್ಲಿ ಆಯೋಜಿಸಲಾದ ಇಫ್ತಾರ್ ಕೂಟದಲ್ಲಿ ಭಾಗವಹಿಸಿ ಮನೆಗೆ ಸೈಕಲ್‌ನಲ್ಲಿ ಹಿಂತಿರುಗುವ ವೇಳೆ ರಸ್ತೆಯ ತಿರುವಿನಲ್ಲಿ ಸೈಕಲ್‌ ನಿಯಂತ್ರಣ ತಪ್ಪಿ ಬಿದ್ದಿದೆ. ಗಂಭೀರ ಗಾಯಗೊಂಡಿದ್ದ ಆಸೀಪ್‌ನ್ನು ತಕ್ಷಣ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಿದರೂ ಪ್ರಾಣ ಉಳಿಸಲು ಸಾಧ್ಯವಾಗಲಿಲ್ಲವೆಂದು ಸ್ಥಳೀಯರು […]

ಸೈಕಲ್‌ನಿಂದ ಬಿದ್ದು ಬಾಲಕ ಸಾವು Read More »

ವಿಟ್ಲದ ನೂಜಿಯಲ್ಲಿ ಮತ್ತೊಂದು ಭಾರಿ ಸ್ಫೋಟ

ದಾಸ್ತಾನು ಇಟ್ಟ ಪಟಾಕಿ ಬಿಸಿಲಿಗೆ ಸ್ಫೋಟಿಸಿ ಆತಂಕ ವಿಟ್ಲ: ವಿಟ್ಲ ಸಮೀಪದ ಕಂಬಳಬೆಟ್ಟು ನೂಜಿ ಎಂಬಲ್ಲಿ ಮ್ತೊಮ್ಮೆ ಭಾರಿ ಸ್ಫೋಟ ಸಂಭವಿಸಿದೆ. ಪಟಾಕಿ ತಯಾರಿಕಾ ಘಟಕದಲ್ಲಿ ಪಟಾಕಿ ಸಿಡಿದು ಭಾರಿ ಸ್ಫೋಟಗೊಂಡ ಘಟನೆ ನಡೆದಿದ್ದು, ಜನರು ಬೆಚ್ಚಿ ಬಿದ್ದಿದ್ದಾರೆ. ಕಳೆದ ವರ್ಷ ವಿಟ್ಲ ಮೂಡ್ನೂರು ಗ್ರಾಮದ ಮಾಡತ್ತಡ್ಕ ಪರಿಸರದ ಕೋರೆಯಲ್ಲಿ ಭಾರಿ ಪ್ರಮಾಣದಲ್ಲಿ ಸ್ಫೋಟ ಗೊಂಡ ಘಟನೆ ನಡೆದಿತ್ತು. ಈ ಘಟನೆಯಿಂದ ಆಸುಪಾಸಿನ ಮನೆಗಳಿಗೆ, ಮರ ಗಿಡಗಳಿಗೆ ಹಾನಿಯಾಗಿತ್ತು. ಇದೀಗ ಮತ್ತೆ ಅದೇ ಪರಿಸರದಲ್ಲಿ ಶುಕ್ರವಾರ ಮಧ್ಯಾಹ್ನ

ವಿಟ್ಲದ ನೂಜಿಯಲ್ಲಿ ಮತ್ತೊಂದು ಭಾರಿ ಸ್ಫೋಟ Read More »

ಕಾರು – ಬೈಕ್ ಅಪಘಾತ: ಮೂರು ಸಾವು

ಗದಗ: ಕಾರು ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಮೂವರು ಬೈಕ್ ಸವಾರರು ಮೃತಪಟ್ಟ ಘಟನೆ ಮುಂಡರಗಿಯ ಮೇವುಂಡಿ ಎಂಬಲ್ಲಿ ನಡೆದಿದೆ. ಮೃತರನ್ನು ‌ಶಿವಪ್ಪ ಪಾಟ್ಲಿ, ಮುತ್ತಪ್ಪ ‌ಮುದುಗಣ್ಣವರ್, ಆನಂದ ಲಕ್ಷ್ಮೇಶ್ವರಮಠ ಎಂದು ಗುರುತಿಸಲಾಗಿದೆ. ಒಂದೇ ಬೈಕಿನಲ್ಲಿ ಈ ಮೂವರು ಮುಂಡರಗಿಯಿಂದ ಜಂತ್ಲಿ ಗ್ರಾಮಕ್ಕೆ ಹೋಗುತ್ತಿದ್ದರು. ಕಾರು ಡೋಣಿ ಗ್ರಾಮದಿಂದ ಮುಂಡರಗಿಯತ್ತ ಹೋಗುತ್ತಿತ್ತು. ಬೈಕ್ ಸವಾರರ ಅತಿ ವೇಗ ಮತ್ತು ಅಜಾಗರೂಕತೆಯ ಚಾಲನೆಯಿಂದ ಈ ದುರಂತ ನಡೆದಿದೆ ಎಂದು ಹೇಳಲಾಗುತ್ತಿದೆ. ಅಪಘಾತದ ತೀವ್ರತೆಗೆ ಬೈಕ್ ನಜ್ಜುಗುಜ್ಜಾಗಿದೆ. ಕಾರು

ಕಾರು – ಬೈಕ್ ಅಪಘಾತ: ಮೂರು ಸಾವು Read More »

ನಿಯಂತ್ರಣ ತಪ್ಪಿ ಕಲ್ಲಂಗಡಿ ಸಾಗಿಸುತ್ತಿದ್ದ ವಾಹನ ಪಲ್ಟಿ: ಚಾಲಕನಿಗೆ ಗಾಯ

ದೊಡ್ಡಬಳ್ಳಾಪುರ: ಮೇಷ್ಟ್ರು ಮನೆ ಸರ್ಕಲ್ ಸಮೀಪ ಕಲ್ಲಂಗಡಿ ಹಣ್ಣುಗಳನ್ನು ಸಾಗಾಟ‌ ಮಾಡುತ್ತಿದ್ದ ಕ್ಯಾಂಟರ್ ಒಂದು ಚಾಲಕನ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಅಪಘಾತದಲ್ಲಿ ಕ್ಯಾಂಟರ್ ಚಾಲಕ ವೇದಮೂರ್ತಿ ಅವರು ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಲ್ಲಂಗಡಿ ಹಣ್ಣುಗಳನ್ನು ಚೆನ್ನೈನಿಂದ ದಾವಣಗೆರೆಯ ಹೊನ್ನಾಳಿಗೆ ‌ಸಾಗಿಸಲಾಗುತ್ತಿತ್ತು. ಈ ವೇಳೆ ಅನಿರೀಕ್ಷಿತವಾಗಿ ಈ ದುರ್ಘಟನೆ ನಡೆದಿದೆ. ಪಲ್ಟಿಯಾದ ರಭಸಕ್ಕೆ ವಾಹನದಲ್ಲಿದ್ದ ಕಲ್ಲಂಗಡಿ ಹಣ್ಣುಗಳು ಚೆಲ್ಲಾಪಿಲ್ಲಿಯಾಗಿ ರಸ್ತೆಗೆ ಬಿದ್ದಿದೆ. ಸಾರ್ವಜನಿಕರು ಈ ಹಣ್ಣುಗಳನ್ನು ತೆಗೆದುಕೊಂಡು ಹೋದ ಘಟನೆ ನಡೆದಿದೆ.

ನಿಯಂತ್ರಣ ತಪ್ಪಿ ಕಲ್ಲಂಗಡಿ ಸಾಗಿಸುತ್ತಿದ್ದ ವಾಹನ ಪಲ್ಟಿ: ಚಾಲಕನಿಗೆ ಗಾಯ Read More »

ಭೀಕರ ಅಪಘಾತ : ಐವರು ಸ್ಥಳದಲ್ಲೇ ಸಾವು

ಬೆಂಗಳೂರು: ಕಂಟೇನರ್‌ಗೆ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಬೆಂಗಳೂರಿನ ಐವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯ ಪಲಮನೇರು ಸಮೀಪ ಗಂಗಾವರಂ ಎಂಬಲ್ಲಿ ನಡೆದಿದೆ. ಕಾರು ಬೆಂಗಳೂರಿನಿಂದ ತಿರುಪತಿಗೆ ತೆರಳುತ್ತಿತ್ತು. ಡಿಕ್ಕಿಯ ರಭಸಕ್ಕೆ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರ ಪೈಕಿ ಮೂವರು ಮಹಿಳೆಯರು ಎಂದು ತಿಳಿದುಬಂದಿದೆ. ಕಾರು ಅತಿಯಾದ ವೇಗದಲ್ಲಿ ಸಂಚರಿಸುತ್ತಿದ್ದುದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಡಿಕ್ಕಿಯ ತೀವ್ರತೆಗೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಎಲ್ಲ ಐದು ಮಂದಿ ಸ್ಥಳದಲ್ಲೇ

ಭೀಕರ ಅಪಘಾತ : ಐವರು ಸ್ಥಳದಲ್ಲೇ ಸಾವು Read More »

ಪುತ್ತೂರು : ಬೈಕ್‌ ವಿದ್ಯುತ್‌ ಕಂಬಕ್ಕೆ ಡಿಕ್ಕಿಯಾಗಿ ಯುವಕ ಸಾವು

ಪುತ್ತೂರು: ಬೈಕ್‌ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದು ಯುವಕ ಸಾವಿಗೀಡಾದ ಘಟನೆ ಮಂಗಳವಾರ ರಾತ್ರಿ ಕುಂಬ್ರ-ಬೆಳ್ಳಾರೆ ರಸ್ತೆಯಲ್ಲಿ ಸಂಭವಿಸಿದೆ. ಕುಂಬ್ರ ಶಾಲೆಯ ಬಳಿಯ ನಿವಾಸಿ ಭುವನ್‌ (33) ಮೃತಪಟ್ಟಿರುವ ಯುವಕ. ನಿಂತಿಕಲ್ಲಿನ ಬಾರ್‌ ಒಂದರಲ್ಲಿ ಉದ್ಯೋಗಿಯಾಗಿರುವ ಭುವನ್‌ ಮಂಗಳವಾರ ಕೆಲಸಕ್ಕೆ ರಜೆ ಹಾಕಿದ್ದರು. ಕೆಯ್ಯೂರು ಕಡೆಗೆ ಹೋಗಿ ರಾತ್ರಿ ಮನೆಗೆ ಬರುತ್ತಿದ್ದಾಗ ಅವರ ಬೈಕ್‌ ಅಪಘಾತಕ್ಕೀಡಾಗಿದೆ. ಬೈಕ್‌ ವೇಗವಾಗಿ ಬಂದು ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಭುವನ್‌ ತಾಯಿ ಮತ್ತು ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ. ಪುತ್ತೂರು

ಪುತ್ತೂರು : ಬೈಕ್‌ ವಿದ್ಯುತ್‌ ಕಂಬಕ್ಕೆ ಡಿಕ್ಕಿಯಾಗಿ ಯುವಕ ಸಾವು Read More »

ಕುಣಿತ ಭಜನೆ ಮಾಡುತ್ತಿರುವಾಗಲೇ ಮಹಿಳೆ ಸಾವು

ಜಾತ್ರೋತ್ಸವದಲ್ಲಿ ಕುಣಿತ ಭಜನೆ ನಡೆಯುತ್ತಿರುವಾಗ ಸಂಭವಿಸಿದ ದುರಂತ ಈಶ್ವರಮಂಗಲ : ಈಶ್ವರಮಂಗಲ ಕಾವು ಮುತ್ತು ಮಾರಿಯಮ್ಮ ದೇವಸ್ಥಾನದ ಜಾತ್ರೋತ್ಸವದಲ್ಲಿ ಸುಳ್ಯಪದವು ಮಹಾಲಕ್ಷ್ಮಿ ವನಿತಾ ಭಜನ ಮಂಡಳಿಯ ಸದಸ್ಯೆ ರತ್ನಾವತಿ ಬಾಳಪ್ಪ ಪೂಜಾರಿ ಕನ್ನಡ್ಕ (63) ಎಂಬವರು ಕುಣಿತ ಭಜನೆ ಮಾಡುತ್ತಿರುವಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಬಿದ್ದ ಕೂಡಲೇ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆ ತೆಗೆದುಕೊಂಡು ಹೋಗಲಾಗಿದ್ದು, ಅಲ್ಲಿಗೆ ತಲುಪುವ ಮೊದಲೇ ಅವರು ಮೃತಪಟ್ಟಿದ್ದರು. ಸಾವಿಗೆ ಹೃದಯಾಘಾತ ಕಾರಣ ಎಂದು ವೈದ್ಯರು ತಿಳಿಸಿದ್ದಾರೆ. ಇವರ ಇಬ್ಬರು ಪುತ್ರರು ಹಾಗೂ

ಕುಣಿತ ಭಜನೆ ಮಾಡುತ್ತಿರುವಾಗಲೇ ಮಹಿಳೆ ಸಾವು Read More »

ಉಡುಪಿ: ಮ್ಯಾರಥಾನ್‌ ಓಡುತ್ತಿರುವಾಗಲೇ ಕುಸಿದು ಬಿದ್ದು ಎಸ್‌ಐ ಸಾವು

ಉಡುಪಿ: ಕುಂದಾಪುರ ಗ್ರಾಮಾಂತರ ಎಸ್ಐ ನಾಸೀರ್ ಹುಸೇನ್ (58) ಮ್ಯಾರಥಾನ್‌ ಓಡುವಾಗಲೇ ಕುಸಿದು ಬಿದ್ದ ಮೃತಪಟ್ಟ ಘಟನೆ ಭಾನುವಾರ ಬೆಳಗ್ಗೆ ಸಂಭವಿಸಿದೆ. ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಉಡುಪಿಯಲ್ಲಿ ಭಾನುವಾರ ಬೆಳಗ್ಗೆ ಹಮ್ಮಿಕೊಳ್ಳಲಾದ ಮ್ಯಾರಥಾನ್‌ನಲ್ಲಿ ಪಾಲ್ಗೊಂಡಿದ್ದ ನಾಸಿರ್‌ ಹುಸೈನ್‌ ಓಡುತ್ತಿರುವಾಗಲೇ ಕುಸಿದು ಬಿದ್ದು ಮೃತಪಟ್ಟ ಬಗ್ಗೆ ವರದಿಯಾಗಿದೆ. ನಮ್ಮ ಪೊಲೀಸ್ ನಮ್ಮ ಹೆಮ್ಮೆ ಎಲ್ಲರಿಗೂ ಫಿಟ್ನೆಸ್ ಡಬ್ ಫ್ರೀ ಕರ್ನಾಟಕ ಸೈಬರ್ ಜಾಗೃತಿಗಾಗಿ 5 ಕಿ.ಮೀ ಮ್ಯಾರಥಾನ್ ಓಟವನ್ನು ಉಡುಪಿ ಅಜ್ಜರಕಾಡು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಇದರಲ್ಲಿ

ಉಡುಪಿ: ಮ್ಯಾರಥಾನ್‌ ಓಡುತ್ತಿರುವಾಗಲೇ ಕುಸಿದು ಬಿದ್ದು ಎಸ್‌ಐ ಸಾವು Read More »

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಗುದ್ದಿದ ಕಾರು: 2 ಸಾವು, ಓರ್ವ ಗಂಭೀರ

ಹಾಸನ: ಅತಿ ವೇಗದಿಂದ ಹೋಗುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದಿದ್ದು, ಗುದ್ದಿದ ರಭಸಕ್ಕೆ ಇಬ್ಬರು ಸ್ಥಳದಲ್ಲೇ ಮೃತರಾಗಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಸಕಲೇಶಪುರದ ಗುಲಗಳಲೆಯಲ್ಲಿ ಬೆಳ್ಳಂಬೆಳಗ್ಗೆ ನಡೆದಿದೆ. ಕಾರು ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿತ್ತು ಎಂದು ತಿಳಿದು ಬಂದಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ಜಖಂಗೊಂಡಿದೆ. ಮೃತಪಟ್ಟವರು ‌ತಮಿಳುನಾಡು ಮತ್ತು ಕೆಜಿಎಫ್ ಮೂಲದವರೆಂದು ತಿಳಿದು ಬಂದಿದೆ‌. ಗಂಭೀರವಾಗಿ ಗಾಯಗೊಂಡ ವ್ಯಕ್ತಿಯನ್ನು ಹಾಸನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಗುದ್ದಿದ ಕಾರು: 2 ಸಾವು, ಓರ್ವ ಗಂಭೀರ Read More »

ಕಾರು – ಬೈಕ್ ಢಿಕ್ಕಿ: ದಂಪತಿ ಸ್ಥಳದಲ್ಲೇ ಸಾವು

ಹುಣಸೂರು: ದ್ವಿಚಕ್ರ ವಾಹನಕ್ಕೆ ಕಾರು ಗುದ್ದಿದ ಪರಿಣಾಮ ದಂಪತಿ ಸ್ಥಳದಲ್ಲೇ ಮೃತಪಟ್ಟ ಘಟನೆ ನಾರಾಯಣಪುರದ ಬಳಿ ನಡೆದಿದೆ. ಬೀರನಹಳ್ಳಿಯ ನಂಜುಂಡಸ್ವಾಮಿ(52) ಮತ್ತು ನೇತ್ರಾವತಿ(46) ಎಂಬವರೇ ಮೃತ ದುರ್ದೈವಿಗಳು. ಈ ದಂಪತಿ ಸಂಬಂಧಿಕರ ಸಾವಿಗೆ ತೆರಳುತ್ತಿದ್ದಾಗ ಘಟನೆ ನಡೆದಿದೆ‌. ಮೃತರಿಗೆ ಇಬ್ಬರು ಮಕ್ಕಳಿದ್ದಾರೆ ಎಂದು ತಿಳಿದು ಬಂದಿದೆ. ಕಾರು ಢಿಕ್ಕಿಯಾದ ರಭಸಕ್ಕೆ ದಂಪತಿಯ ತಲೆ, ಕೈ ಕಾಲುಗಳಿಗೆ ‌ಗಂಭೀರ ಪ್ರಮಾಣದ ಗಾಯಗಳಾಗಿ ಅವರು ಸ್ಥಳದಲ್ಲೇ ಕೊನೆಯುಸಿರು ಎಳೆದಿದ್ದಾರೆ ಎಂದು ತಿಳಿದು ಬಂದಿದೆ. ಕೆ. ಆರ್. ನಗರ ಪೊಲೀಸರು ಪ್ರಕರಣ

ಕಾರು – ಬೈಕ್ ಢಿಕ್ಕಿ: ದಂಪತಿ ಸ್ಥಳದಲ್ಲೇ ಸಾವು Read More »

error: Content is protected !!
Scroll to Top