ಅಪಘಾತ

ಮಹಡಿ ಮೇಲಿಂದ ಬಿದ್ದು ಗಾಯಗೊಂಡಿದ್ದ ವಿದ್ಯಾರ್ಥಿನಿ ಮೃತ್ಯು

ಪುತ್ತೂರು: ಮಹಡಿ ಮೇಲಿನಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ. ಕಲ್ಲಾರೆ ನಿವಾಸಿ ಸಂತ ಫಿಲೋಮಿನಾ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಫಾತಿಮತ್ ನಿಶ್ಚಾ (17) ಮೃತಪಟ್ಟವರು. ಮೃತರು ತಂದೆ ಪುತ್ತೂರು ಕಮ್ಯುನಿಟಿ ಸೆಂಟರ್ ಸ್ಥಾಪಕ ಹನೀಫ್ ಪುತ್ತೂರು, ತಾಯಿ ಹಾಗು ಕುಟುಂಬಸ್ಥರನ್ನು ಹಾಗು ಬಂಧು ಮಿತ್ರರನ್ನು ಅಗಲಿದ್ದಾರೆ.

ಮಹಡಿ ಮೇಲಿಂದ ಬಿದ್ದು ಗಾಯಗೊಂಡಿದ್ದ ವಿದ್ಯಾರ್ಥಿನಿ ಮೃತ್ಯು Read More »

ಉಚ್ಚಿಲ ರೆಸಾರ್ಟ್‍ ನ ಈಜುಕೊಳದಲ್ಲಿ ಮುಳುಗಿ ಮೂವರು ಯುವತಿಯರು ಮೃತ್ಯು

ಮಂಗಳೂರು: ಉಚ್ಚಿಲ ಸಮುದ್ರದ ಬಳಿಕ ರೆಸಾರ್ಟ್‍ ಒಂದರ ಈಜುಕೊಳದಲ್ಲಿ ಮೂವರು ಯುವತಿಯರು ಮುಳುಗಿ ಮೃತಪಟ್ಟ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಮೈಸೂರು ಕುರುಬರಹಳ್ಳಿ ನಾಲ್ಕನೇ ಕ್ರಾಸ್ ನಿವಾಸಿ ನಿಶಿತ ಎಂ.ಡಿ. (21), ಮೈಸೂರು ರಾಮಾನುಜ ರಸ್ತೆ, ಕೆ.ಆರ್ ಮೊಹಲ್ಲಾ ನಿವಾಸಿ ಪಾರ್ವತಿ ಎಸ್ (20) ಹಾಗೂ ಮೈಸೂರು ವಿಜಯ ನಗರ ದೇವರಾಜ ಮೊಹಲ್ಲ ನಿವಾಸಿ ಕೀರ್ತನ ಎನ್(21) ಮೃತಪಟ್ಟ ಯುವತಿಯರು ಮೈಸೂರು ಮೂಲದ ಯುವತಿಯರು ಉಚ್ಚಿಲ ಬೀಚ್ ಬಳಿಯ ರೆಸಾರ್ಟ್‌ ಸ್ವಮ್ಮಿಂಗ್‌ ಫುಲ್‌ನಲ್ಲಿ ಈಜಾಡುವಾಗ ಏಕಾಏಕಿ ಮುಳುಗಿ

ಉಚ್ಚಿಲ ರೆಸಾರ್ಟ್‍ ನ ಈಜುಕೊಳದಲ್ಲಿ ಮುಳುಗಿ ಮೂವರು ಯುವತಿಯರು ಮೃತ್ಯು Read More »

ಸಹೋದರಿಯರಿಬ್ಬರು ಹೋಗುತ್ತಿದ್ದ ಸ್ಕೂಟಿ ಬಸ್‍ ಗೆ ಡಿಕ್ಕಿ | ಒಬ್ಬರು ಮೃತ್ಯು, ಇನ್ನೋರ್ವಳಿಗೆ ಗಂಭೀರ ಗಾಯ

ಸುಳ್ಯ : ಕೆಎಸ್‍ ಆರ್‍ ಟಿಸಿ ಬಸ್ ಹಾಗೂ ಸ್ಕೂಟಿ ಡಿಕ್ಕಿ ಹೊಡೆದುಕೊಂಡ ಪರಿಣಾಮ ಸಹೋದರಿಯರಿಬ್ಬರು ಗಾಯಗೊಂಡು, ಒಬ್ಬರು ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಉಬರಡ್ಕ ಗ್ರಾಮದ ಸೂಂತೋಡು ತಿರುವಿನಲ್ಲಿ ಇಂದು ಸಂಜೆ ನಡೆದಿದೆ. ಇಂದು ಸಂಜೆ ಸುಳ್ಯದಿಂದ ಉಬರಡ್ಕಕ್ಕೆ ಸ್ಕೂಟಿಯಲ್ಲಿ ಕಾಡುತೋಟದ ಸಹೋದರಿಯರಾದ ರಚನಾ ಮತ್ತು ಅನನ್ಯ ತೆರಳುತಿದ್ದಾಗ, ಸೂಂತೋಡು ಬಳಿ ಎದುರಿನಿಂದ ಬಂದ ಬಸ್‌ ಪರಸ್ಪರ ಢಿಕ್ಕಿಯಾಯಿತು. ಪರಿಣಾಮ ರಚನಾ ಗಂಭೀರ ಗಾಯಗೊಂಡಿದ್ದು ಸುಳ್ಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಆ ವೇಳೆಗೆ ಕೊನೆಯುಸಿರೆಳೆದರೆಂದು ತಿಳಿದುಬಂದಿದೆ. ಅನನ್ಯರ

ಸಹೋದರಿಯರಿಬ್ಬರು ಹೋಗುತ್ತಿದ್ದ ಸ್ಕೂಟಿ ಬಸ್‍ ಗೆ ಡಿಕ್ಕಿ | ಒಬ್ಬರು ಮೃತ್ಯು, ಇನ್ನೋರ್ವಳಿಗೆ ಗಂಭೀರ ಗಾಯ Read More »

ಕೆರೆಗೆ ಬಿದ್ದು ಮೃತ್ಯು

ಪುತ್ತೂರು: ವ್ಯಕ್ತಿಯೋರ್ವರು ಕೆರೆಗೆ ಬಿದ್ದು ಮೃತಪಟ್ಟ ಘಟನೆ ಅರಿಯಡ್ಕದಲ್ಲಿ ಇಂದು ನಡೆದಿದೆ ಅರಿಯಡ್ಕ ಗ್ರಾಮದ ಜಾರತ್ತಾರು ನಿವಾಸಿ ದಿನೇಶ್ ರೈ (42) ಮೃತಪಟ್ಟವರು. ತನ್ನ ಮನೆಯಿಂದ ಸ್ವಲ್ಪ ದೂರದಲ್ಲೇ ಇರುವ ಟರ್ಪಾಲು ಹಾಸಿದ ಕೆರೆಗೆ ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಕೆರೆಗೆ ಬಿದ್ದು ಮೃತ್ಯು Read More »

ಬೆಂಗಳೂರಿನಲ್ಲಿ ಬೈಕ್‍ ಅಪಘಾತ | ಬೆಳ್ತಂಗಡಿ ಇಂದಬೆಟ್ಟು ನಿವಾಸಿ ಮೃತ್ಯು

ಬೆಳ್ತಂಗಡಿ: ಬೆಂಗಳೂರಿನಲ್ಲಿ ನಡೆದ ಬೈಕ್‌ ಮತ್ತು ಕಂಟೈನ‌ರ್ ನಡುವೆ ಭೀಕರ ಅಪಘಾತದಲ್ಲಿ ಬೆಳ್ತಂಗಡಿ ತಾಲೂಕಿನ ಇಂದಬೆಟ್ಟುವಿನ ಯುವಕ ಸಾವನ್ನಪ್ಪಿದ್ದ ಘಟನೆ ಗುರುವಾರ ರಾತ್ರಿ ನಡೆದಿದೆ. ಇಂದಬೆಟ್ಟು ಗ್ರಾಮದ ವಸಂತ ಗೌಡ ರವರ ಪುತ್ರ ತುಷಾರ್ (22ವ) ಮೃತ ಪಟ್ಟವರು. ಬೆಂಗಳೂರಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು ರಾತ್ರಿ ವೇಳೆ ಬೈಕ್ ನಲ್ಲಿ ಹೋಗುವಾಗ ಈ ಘಟನೆ ನಡೆದಿದೆ. ಬೈಕ್ ನಲ್ಲಿದ್ದ ಇನೋರ್ವ ವ್ಯಕ್ತಿ ಬೆಳಾಲು ನಿವಾಸಿ ಸೃಜನ್ ಸುರುಳಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರಿನಲ್ಲಿ ಬೈಕ್‍ ಅಪಘಾತ | ಬೆಳ್ತಂಗಡಿ ಇಂದಬೆಟ್ಟು ನಿವಾಸಿ ಮೃತ್ಯು Read More »

ಅಪಘಾತ : ಸುಬ್ರಹ್ಮಣ್ಯದಿಂದ ವಾಪಸಾಗುತ್ತಿದ್ದ ದಂಪತಿ ಸಾವು

ಗದಗ: ಲಾರಿ ಮತ್ತು ಕಾರು ನಡುವೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಮಕ್ಕಳು ಗಾಯಗೊಂಡಿರುವ ದಾರುಣ ಘಟನೆ ಗದಗ ಜಿಲ್ಲೆ ನರಗುಂದ ತಾಲೂಕಿನ ಭೈರನಹಟ್ಟಿ ಗ್ರಾಮದ ಬಳಿ ನಡೆದಿದೆ. ಕಾರಿನಲ್ಲಿದ್ದವರು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿಯಿತ್ತು ವಾಪಸಾಗುತ್ತಿದ್ದಾಗ ಈ ಭೀಕರ ಅಪಘಾತ ಸಂಭವಿಸಿದೆ.ಬಾಗಲಕೋಟೆ ಮೂಲದ ಸಿದ್ದರಾಮ ಹಾಗೂ ಹೇಮಾ ಮೃತ ದಂಪತಿ. ಮಕ್ಕಳಾದ ಮಲ್ಲಿಕಾರ್ಜುನ ಹಾಗೂ ಸಹನಾ ಗಾಯಗೊಂಡು ನರಗುಂದ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಕುಟುಂಬಸ್ಥರು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಿಂದ ಪೂಜೆ ಮುಗಿಸಿಕೊಂಡು

ಅಪಘಾತ : ಸುಬ್ರಹ್ಮಣ್ಯದಿಂದ ವಾಪಸಾಗುತ್ತಿದ್ದ ದಂಪತಿ ಸಾವು Read More »

ಬೈಕ್ – ಖಾಸಗಿ ಬಸ್ ಡಿಕ್ಕಿ | ಓರ್ವ ಮೃತ್ಯು, ಮತ್ತೋರ್ವನಿಗೆ ಗಂಭೀರ ಗಾಯ

ಬಂಟ್ವಾಳ: ಬೈಕ್ ಹಾಗೂ ಖಾಸಗಿ ಬಸ್ ಡಿಕ್ಕಿ ಹೊಡೆದುಕೊಂಡ ಪರಿಣಾಮ ಓರ್ವ ಮೃತಪಟ್ಟು, ಇನ್ನೊರ್ವ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ ತುಂಬೆ ಬಳಿ ನಡೆದಿದೆ. ಕಡೆಗೋಳಿ ನಿವಾಸಿ ಪ್ರವೀಣ (30) ಸ್ಥಳದಲ್ಲೇ ಮೃತಪಟ್ಟವರು. ಸಂದೀಪ ಗಂಭೀರ ಗಾಯಗೊಂಡಿದ್ದಾರೆ. ಗಾಯಾಳು ಮಂಗಳೂರು ಖಾಸಗಿ ಆಸ್ಪತ್ರೆಯ ತೀವ್ರನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆಲಸವನ್ನು ಮುಗಿಸಿ ಮನೆಗೆ ಜೊತೆಯಾಗಿ ಪ್ರಯಾಣಿಸುತ್ತಿದ್ದ ವೇಳೆ ರಾಷ್ಟ್ರೀಯ ಹೆದ್ದಾರಿ ಮಂಗಳೂರು ಬೆಂಗಳೂರು ರಸ್ತೆಯ ತುಂಬೆ ಸಮೀಪದ ಕಡೆಗೋಳಿ ಎಂಬಲ್ಲಿ ಮಂಗಳೂರಿನಿಂದ ಬಿಸಿರೋಡಿನ ಕಡೆಗೆ ಬರುತ್ತಿದ್ದ

ಬೈಕ್ – ಖಾಸಗಿ ಬಸ್ ಡಿಕ್ಕಿ | ಓರ್ವ ಮೃತ್ಯು, ಮತ್ತೋರ್ವನಿಗೆ ಗಂಭೀರ ಗಾಯ Read More »

ಚಾಲಕನ ನಿದ್ರೆಯ ಮಂಪರಿನಲ್ಲಿ ಪ್ರಪಾತಕ್ಕೆ ಬಿದ್ದ ಕಾರು | ಅದೃಷ್ಟವಶಾತ್ ಚಾಲಕ ಅಪಾಯದಿಂದ ಪಾರು

ಪುತ್ತೂರು: ಸಂಟ್ಯಾರ್ ಪಾಣಾಜೆ ಹೆದ್ದಾರಿಯ ಕೈಕಾರ ಎಂಬಲ್ಲಿ ಚಾಲಕನಿಗೆ ನಿದ್ದೆ ಮಂಪರು ಆವರಿಸಿ ಹತೋಟಿ ತಪ್ಪಿದ ಕಾರು ರಸ್ತೆ ಅಂಚಿನಲ್ಲಿದ್ದ 50 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದಿದೆ. ಶನಿವಾರ ತಡರಾತ್ತಿ ಈ ಘಟನೆ ನಡೆದಿದ್ದು, ಪ್ರಪಾತಕ್ಕೆ ಕಾರು ಉರುಳಿ ಬಿದ್ದರೂ, ಯಾವುದೇ ಆಪಾಯಗಳಿಲ್ಲದೇ ಚಾಲಕ ಪಾರಾಗಿದ್ದಾನೆ. ಕಾರು ಕಾಸರಗೋಡು ಜಿಲ್ಲೆಯ ಬದಿಯಡ್ಕ ಬಳಿಯ ಡಾ. ಚಂದ್ರಶೇಖರ್ ಅವರ ಪುತ್ರ ಡಾ. ವಿವೇಕ್ ಅವರಿಗೆ ಸೇರಿದಾಗಿದೆ. ರಾತ್ರಿ ಬದಿಯಡ್ಕದಿಂದ ಅವರು ಪುತ್ತೂರಿಗೆ ಕಾರ್ಯ ನಿಮಿತ್ತ ಬರುತ್ತಿದ್ದರು. ಬಳಕ್ಕೆ

ಚಾಲಕನ ನಿದ್ರೆಯ ಮಂಪರಿನಲ್ಲಿ ಪ್ರಪಾತಕ್ಕೆ ಬಿದ್ದ ಕಾರು | ಅದೃಷ್ಟವಶಾತ್ ಚಾಲಕ ಅಪಾಯದಿಂದ ಪಾರು Read More »

ಎಕ್ಸ್ ಪ್ರೆಸ್ ರೈಲು ಡಿಕ್ಕಿ : ನಾಲ್ವರು ಕಾರ್ಮಿಕರು ಮೃತ್ಯು

ತಿರುವನಂತಪುರಂ: ಎಕ್ಸ್ ಪ್ರೆಸ್ ರೈಲು ಡಿಕ್ಕಿ ಹೊಡೆದು ನಾಲ್ವರು ಕಾರ್ಮಿಕರು ಮೃತಪಟ್ಟ ಘಟನೆ ಕೇರಳದ ಚೋರನೂರ್ ರೈಲು ನಿಲ್ದಾಣದಲ್ಲಿ ಶನಿವಾರ ಸಂಜೆ ನಡೆದಿದೆ. ತಿರುವನಂತಪುರಂ ಕಡೆಗೆ ಸಾಗುತ್ತಿದ್ದ ಕೇರಳ ಎಕ್ಸ್‌ಪ್ರೆಸ್ ಡಿಕ್ಕಿ ಹೊಡೆದ ಪರಿಣಾಮ ತಮಿಳುನಾಡಿನ ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರು ಪೌರ ಕಾರ್ಮಿಕರು ಮೃತಪಟ್ಟಿದ್ದಾರೆ. ರೈಲು ನಿಲ್ದಾಣದಿಂದ ಕೆಲವೇ ಕಿ.ಮೀ. ದೂರದಲ್ಲಿರುವ ತೋರನೂರ್ ಸೇತುವೆ ಬಳಿ ಹಳಿಯಿಂದ ಕಸವನ್ನು ತೆರವುಗೊಳಿಸುತ್ತಿದ್ದಾಗ ನವದೆಹಲಿ- ತಿರುವನಂತಪುರಂ ಮಾರ್ಗದ ಎಕ್ಸ್ ಪ್ರೆಸ್ ರೈಲು ಮಧ್ಯಾಹ್ನ ಕಾರ್ಮಿಕರಿಗೆ ಡಿಕ್ಕಿ ಹೊಡೆದಿದೆ ಎಂದು

ಎಕ್ಸ್ ಪ್ರೆಸ್ ರೈಲು ಡಿಕ್ಕಿ : ನಾಲ್ವರು ಕಾರ್ಮಿಕರು ಮೃತ್ಯು Read More »

ದ್ವಿಚಕ್ರ ವಾಹನದ ಮೇಲೆ ಬಿದ್ದ ಮರ : ಸವಾರ ಮೃತ್ಯು

ಕಡಬ: ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಸಂದರ್ಭ ಮರ ಬಿದ್ದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕಡಬದಲ್ಲಿ ನಡೆದಿದೆ. ಕಡಬ ತಾಲೂಕಿನ ಸ್ಪಂದನ ಸಮುದಾಯ ಸಹಕಾರಿ ಸಂಘದ ಪಿಗ್ಮಿ ಸಂಗ್ರಾಹಕರಾದ ಸೀತಾರಾಮ ಗೌಡ ದೇವಸ್ಯ ಮೃತಪಟ್ಟವರು. ಕಡಬ ಸ್ಪಂದನ ಸಮುದಾಯ ಸಹಕಾರಿ ಸಂಘದ ಸಿಬ್ಬಂದಿ ಶಿಲ್ಪಾ ಅವರ ತಂದೆಯಾಗಿದ್ದಾರೆ.

ದ್ವಿಚಕ್ರ ವಾಹನದ ಮೇಲೆ ಬಿದ್ದ ಮರ : ಸವಾರ ಮೃತ್ಯು Read More »

error: Content is protected !!
Scroll to Top