ಅಪಘಾತ

ನಿಂತಿದ್ದ ಲಾರಿಗೆ ವ್ಯಾನ್‌ ಡಿಕ್ಕಿ : 7 ಮಕ್ಕಳ ಸಹಿತ 10 ಮಂದಿ ಸಾವು

ದೇವಸ್ಥಾನದಿಂದ ಹಿಂದಿರುಗುತ್ತಿದ್ದಾಗ ಸಂಭವಿಸಿದ ಭೀಕರ ಅಪಘಾತ ಜೈಪುರ: ಪಿಕ್​​ಅಪ್ ವ್ಯಾನ್ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ 7 ಮಕ್ಕಳು ಸೇರಿ 10 ಮಂದಿ ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ದೌಸಾ ಎಂಬಲ್ಲಿ ಇಂದು ನಸುಕಿನ ಹೊತ್ತು ನಡೆದಿದೆ. ಪಿಕ್‌ಅಪ್‌ ವ್ಯಾನಿನಲ್ಲಿದ್ದವರು ಖತುಶ್ಯಾಮ್​ ದೇವಸ್ಥಾನಕ್ಕೆ ಭೇಟಿ ನೀಡಿ ಮನೆಗೆ ಹಿಂದಿರುಗುತ್ತಿದ್ದಾಗ ಈ ದುರಂತ ನಸುಕಿನ 3.30ರ ವೇಳೆಗೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸುಮಾರು 7-8 ಜನರನ್ನು ಜೈಪುರದ ಎಸ್​ಎಂಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. […]

ನಿಂತಿದ್ದ ಲಾರಿಗೆ ವ್ಯಾನ್‌ ಡಿಕ್ಕಿ : 7 ಮಕ್ಕಳ ಸಹಿತ 10 ಮಂದಿ ಸಾವು Read More »

ತಾಂತ್ರಿಕ ದೋಷದಿಂದ ವಿಮಾನ ತುರ್ತು ಲ್ಯಾಂಡಿಂಗ್‌ : ಕೂದಲೆಳೆ ಅಂತರದಲ್ಲಿ ಬಚಾವಾದ ಸಂಸದರು, ಪ್ರಯಾಣಿಕರು

ಕಾಂಗ್ರೆಸ್‌ ಎಂಪಿ ಕೆ.ಸಿ.ವೇಣುಗೋಪಾಲ್‌ ಸಹಿತ ಹಲವು ಸಂಸದರು, ನೂರಾರು ಪ್ರಯಾಣಿಕರಿದ್ದ ಏರ್‌ ಇಂಡಿಯಾ ವಿಮಾನ ಚೆನ್ನೈ : ಕೇರಳದ ಕಾಂಗ್ರೆಸ್‌ ಸಂಸದ ಮತ್ತು ಸಂಸತ್ತಿನ ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ಅಧ್ಯಕ್ಷ ಕೆ.ಸಿ.ವೇಣುಗೋಪಾಲ್ ಸೇರಿದಂತೆ ಹಲವಾರು ಸಂಸದರು ಮತ್ತು ನೂರಾರು ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ತಾಂತ್ರಿಕ ದೋಷದ ಕಾರಣ ಚೆನ್ನೈಯಲ್ಲಿ ತುರ್ತು ಲ್ಯಾಂಡಿಂಗ್ ಮಾಡಿದೆ. ಭಾನುವಾರ ಸಂಜೆ ತಿರುವನಂತಪುರಂನಿಂದ ದೆಹಲಿಗೆ ಹೊರಟಿದ್ದ ವಿಮಾನ AI2455ರಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿತ್ತು. ಅಲ್ಲದೆ, ಹವಾಮಾನ ವೈಪರೀತ್ಯವೂ ತುರ್ತು ಲ್ಯಾಂಡಿಂಗ್​ಗೆ ಕಾರಣವಾಯಿತು

ತಾಂತ್ರಿಕ ದೋಷದಿಂದ ವಿಮಾನ ತುರ್ತು ಲ್ಯಾಂಡಿಂಗ್‌ : ಕೂದಲೆಳೆ ಅಂತರದಲ್ಲಿ ಬಚಾವಾದ ಸಂಸದರು, ಪ್ರಯಾಣಿಕರು Read More »

ಮಂಗಳೂರು : ಈಜು ಕೋಚ್‌ ಈಜುಕೊಳದಲ್ಲಿ ಮುಳುಗಿ ಸಾವು

ಈಜುವಾಗಲೇ ಹೃದಯಾಘಾತವಾಗಿ ಉಸಿರುಕಟ್ಟಿ ಮೃತ್ಯು ಮಂಗಳೂರು: ಈಜು ಕೋಚ್‌ ಈಜುಕೊಳದಲ್ಲೇ ಮುಳುಗಿ ಸಾವನ್ನಪ್ಪಿದ ದುರಂತ ಘಟನೆ ಮಂಗಳೂರಿನಲ್ಲಿ ಸಂಭವಿಸಿದೆ. ಈಜುಕೊಳದ ಲೈಫ್‌ಗಾರ್ಡ್ ಕೂಡ ಆಗಿದ್ದ ಅವರು ಹೃದಯಾಘಾತದಿಂದಾಗಿ ಮಂಗಳೂರಿನ ಲೇಡಿಹಿಲ್‌ನಲ್ಲಿರುವ ಮಹಾನಗರ ಪಾಲಿಕೆಯ ಈಜುಕೊಳದಲ್ಲಿ ಭಾನುವಾರ ಈಜುವಾಗಲೇ ಮುಳುಗಿ ಸಾವನ್ನಪ್ಪಿದ್ದಾರೆ. ಮೃತರನ್ನು ಬಂಟ್ವಾಳ ತಾಳುಕಿನ ಕಲ್ಲಡ್ಕದ ಸಮೀಪದ ಸೂರಿಕುಮೇರಿನ ಕೆ. ಚಂದ್ರಶೇಖರ್ ರೈ ಸೂರಿಕುಮೇರು (52) ಎಂದು ಗುರುತಿಸಲಾಗಿದೆ. ನಿರ್ವಹಣೆ ಕೆಲಸಗಳು ನಡೆಯುತ್ತಿದ್ದರಿಂದ ಭಾನುವಾರ ಈಜುಕೊಳಕ್ಕೆ ರಜೆ ಇತ್ತು. ಈ ಸಮಯದಲ್ಲಿ ಈಜಲು ನೀರಿಗಿಳಿದ ಅವರಿಗೆ ನೀರಿನೊಳಗೆ

ಮಂಗಳೂರು : ಈಜು ಕೋಚ್‌ ಈಜುಕೊಳದಲ್ಲಿ ಮುಳುಗಿ ಸಾವು Read More »

ಕಾರು ಡಿಕ್ಕಿ : ರಸ್ತೆ ಬದಿ ನಿಂತಿದ್ದ ಬೇಕರಿ ಮಾಲೀಕನಿಗೆ ಗಂಭಿರ ಗಾಯ

ಸ್ಕೂಟಿ ಪಂಕ್ಚರ್‌ ಆದ ಹಿನ್ನೆಲೆಯಲ್ಲಿ ರಸ್ತೆ ಬದಿ ನಿಂತಿದ್ದಾಗ ಡಿಕ್ಕಿ ಹೊಡೆದ ಕಾರು ವಿಟ್ಲ: ಕಾರು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿಯಲ್ಲಿ ನಿಂತಿದ್ದ ದ್ವಿಚಕ್ರ ಸವಾರರೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಶುಕ್ರವಾರ ಬೆಳಗ್ಗೆ ವಿಟ್ಲ ಠಾಣಾ ವ್ಯಾಪ್ತಿಯ ಪರ್ತಿಪ್ಪಾಡಿ ಎಂಬಲ್ಲಿ ನಡೆದಿದೆ. ಕುಡ್ತಮುಗೇರಿನ ಪ್ರಗತಿ ಸ್ವೀಟ್ಸ್ ಬೇಕರಿಯ ಮಾಲೀಕ ಜಗನ್ನಾಥ ಶೆಟ್ಟಿಗಾರ್ ಗಂಭೀರ ಗಾಯಗೊಂಡವರು. ಜಗನ್ನಾಥ ಶೆಟ್ಟಿಗಾರ್ ಇಂದು ಬೆಳಗ್ಗೆ ಕುಡ್ತಮುಗೇರಿನಿಂದ ಪರ್ತಿಪ್ಪಾಡಿ ಕಡೆಗೆ ತೆರಳುತ್ತಿದ್ದ ವೇಳೆ ದಾರಿಮಧ್ಯೆ ಅವರ ದ್ವಿಚಕ್ರ ವಾಹನದ ಟಯರ್ ಪಂಕ್ಚರ್

ಕಾರು ಡಿಕ್ಕಿ : ರಸ್ತೆ ಬದಿ ನಿಂತಿದ್ದ ಬೇಕರಿ ಮಾಲೀಕನಿಗೆ ಗಂಭಿರ ಗಾಯ Read More »

ವಲಸಿಗರನ್ನು ಸಾಗಿಸುತ್ತಿದ್ದ ದೋಣಿ ಮುಳುಗಿ 68 ಮಂದಿ ಸಾವು

74 ಮಂದಿ ನಾಪತ್ತೆ, 10 ಜನರ ರಕ್ಷಣೆ ಸನಾ: ಯೆಮೆನ್ ಕರಾವಳಿಯಲ್ಲಿ ಭಾನುವಾರ 154 ವಲಸಿಗರನ್ನು ಸಾಗಿಸುತ್ತಿದ್ದ ದೋಣಿ ಮುಳುಗಿ 68 ಜನರು ಮೃತಪಟ್ಟಿದ್ದಾರೆ. 74 ಮಂದಿ ನಾಪತ್ತೆಯಾಗಿದ್ದು, 10 ಜನರನ್ನು ರಕ್ಷಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ಈಗಲೂ ನಡೆಯುತ್ತಿದೆ. ರಕ್ಷಿಸಲ್ಪಟ್ಟ 10 ಜನರಲ್ಲಿ ಒಂಬತ್ತು ಮಂದಿ ಇಥಿಯೋಪಿಯನ್ ಪ್ರಜೆಗಳು ಮತ್ತು ಒಬ್ಬರು ಯೆಮೆನ್ ಪ್ರಜೆ ಸೇರಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪ್ರಾಂತ್ಯದ ಆರೋಗ್ಯ ಅಧಿಕಾರಿ ಅಬ್ದುಲ್ ಖಾದಿರ್ ಬಜಮೀಲ್ ಹೇಳಿದ್ದಾರೆ. ರಕ್ಷಣಾ ತಂಡಗಳು ನಾಪತ್ತೆಯಾದವರಿಗಾಗಿ ಹುಡುಕಾಟ

ವಲಸಿಗರನ್ನು ಸಾಗಿಸುತ್ತಿದ್ದ ದೋಣಿ ಮುಳುಗಿ 68 ಮಂದಿ ಸಾವು Read More »

ಪುತ್ತೂರು : ಅಪಘಾತದಲ್ಲಿ ಗಾಯಗೊಂಡಿದ್ದ ಮಹಿಳೆ ಸಾವು

ಪುತ್ತೂರು: ಪರ್ಲಡ್ಕ ಜಂಕ್ಷನ್‌ನಲ್ಲಿ ಶುಕ್ರವಾರ ರಾತ್ರಿ ಎರಡು ದ್ವಿಚಕ್ರ ವಾಹನಗಳು ಪರಸ್ಪರ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮೃತಪಟ್ಟಿದ್ದಾರೆ.ಪುತ್ತೂರು ನಗರಸಭಾ ವ್ಯಾಪ್ತಿಯ ಪರ್ಲಡ್ಕ ನಿವಾಸಿ ಸಯ್ಯದ್ ಆಲಂ ಎಂಬವರ ಪತ್ನಿ ಅಫ್ಸಾ (54) ಮೃತಪಟ್ಟ ಮಹಿಳೆ. ಶುಕ್ರವಾರ ರಾತ್ರಿ ಅಸ್ಲಾಂ ದಂಪತಿ ಪೇಟೆಯ ಕಡೆಗೆ ಸಂಚರಿಸುತ್ತಿದ್ದ ಸಂದರ್ಭದಲ್ಲಿ ಅವರ ಸ್ಕೂಟರ್ ಮತ್ತು ಮುಂಭಾಗದಿಂದ ಆಗಮಿಸುತ್ತಿದ್ದ ಇನ್ನೊಂದು ಸ್ಕೂಟರ್ ಪರ್ಲಡ್ಕ ಜಂಕ್ಷನ್‌ನಲ್ಲಿ ಪರಸ್ಪರ ಢಿಕ್ಕಿಯಾಗಿತ್ತು. ಢಿಕ್ಕಿಯ

ಪುತ್ತೂರು : ಅಪಘಾತದಲ್ಲಿ ಗಾಯಗೊಂಡಿದ್ದ ಮಹಿಳೆ ಸಾವು Read More »

ವಿಟ್ಲ : ಆವರಣ ಗೋಡೆಗೆ ಖಾಸಗಿ ಬಸ್‌ ಡಿಕ್ಕಿ, ಪ್ರಯಾಣಿಕರಿಗೆ ಗಾಯ

ವಿಟ್ಲ: ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ಸೊಂದು ಆವರಣ ಗೋಡೆಗೆ ಡಿಕ್ಕಿಯಾಗಿ ಪ್ರಯಾಣಿಕರು ಗಾಯಗೊಂಡ ಘಟನೆ ವಿಟ್ಲದಲ್ಲಿ ಶನಿವಾರ ಸಂಜೆ ನಡೆದಿದೆ. ವಿಟ್ಲ ಕೆ.ಎಸ್.ಆರ್.ಟಿ.ಸಿ.ನಿಲ್ದಾಣದ ಬಳಿ ಖಾಸಗಿ ಬಸ್ಸಿನ ಬ್ರೇಕ್ ವೈಫಲ್ಯದಿಂದ ರಸ್ತೆ ಬದಿಯ ಆವರಣ ಗೋಡೆಗೆ ಢಿಕ್ಕಿಯಾಗಿದೆ. ಅಪಘಾತದಲ್ಲಿ ಆವರಣ ಗೋಡೆ ಕುಸಿದುಬಿದ್ದಿದ್ದು, ಬಸ್ ಮುಂಭಾಗ ನಜ್ಜುಗುಜ್ಜಾಗಿದೆ. 17ಕ್ಕೂ ಅಧಿಕ ಪ್ರಯಾಣಿಕರಿಗೆ ಚಿಕ್ಕಪುಟ್ಟ ಗಾಯಗಳಾಗಿದ್ದು ಅಪಾಯದಿಂದ ಪಾರಾಗಿದ್ದಾರೆ. ವಿಟ್ಲದಿಂದ ಕನ್ಯಾನಕ್ಕೆ ಬಸ್ ತೆರಳುವ ಸಂದರ್ಭ ಈ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ. ವಿಟ್ಲ ಎಸ್.ಐ.ರಾಮಕೃಷ್ಣ

ವಿಟ್ಲ : ಆವರಣ ಗೋಡೆಗೆ ಖಾಸಗಿ ಬಸ್‌ ಡಿಕ್ಕಿ, ಪ್ರಯಾಣಿಕರಿಗೆ ಗಾಯ Read More »

ಭಾಗಮತಿ ಎಕ್ಸ್‌ಪ್ರೆಸ್‌ ರೈಲು ಅಪಘಾತ ಉದ್ದೇಶಪೂರ್ವಕ ದುಷ್ಕೃತ್ಯ : ತನಿಖಾ ವರದಿಯಲ್ಲಿ ಬಹಿರಂಗ

ಹಳಿಯ ಇಂಟರ್‌ಲಾಕ್‌ ಕಿತ್ತು ಹಾಕಿದ ಪರಿಣಾಮ ಭೀಕರ ಅಪಘಾತ ಚೆನ್ನೈ: ಕಳೆದ ವರ್ಷ ಮೈಸೂರಿನಿಂದ ದರ್ಭಾಂಗಗೆ ಹೋಗುತ್ತಿದ್ದ ಭಾಗಮತಿ ಎಕ್ಸ್‌ಪ್ರೆಸ್‌ ರೈಲು ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತ ಉದ್ದೇಶಿತ ದುಷ್ಕೃತ್ಯ. ಹಳಿ ಇಂಟರ್‌ಲಾಕ್ ತೆಗೆದು ದುಷ್ಕೃತ್ಯ ಎಸಗಿದ್ದಾರೆ ಎಂದು ರೈಲ್ವೆ ಸುರಕ್ಷತಾ ಆಯುಕ್ತರು ತನಿಖಾ ವರದಿಯಲ್ಲಿ ಬಹಿರಂಗಪಡಿಸಿದ್ದಾರೆ. ಈ ಕುರಿತು ದಕ್ಷಿಣ ರೈಲ್ವೆ ವಲಯದ ರೈಲ್ವೆ ಸುರಕ್ಷತಾ ವಿಭಾಗದ ಆಯುಕ್ತ ಎ.ಎಂ.ಚೌಧರಿ, ಕಳೆದ ವರ್ಷ ಅಕ್ಟೋಬರ್‌ 11ರಂದು ಚೆನ್ನೈ ಸಮೀಪದ ಕವರೈ ಪಟ್ಟಿ ರೈಲ್ವೆ

ಭಾಗಮತಿ ಎಕ್ಸ್‌ಪ್ರೆಸ್‌ ರೈಲು ಅಪಘಾತ ಉದ್ದೇಶಪೂರ್ವಕ ದುಷ್ಕೃತ್ಯ : ತನಿಖಾ ವರದಿಯಲ್ಲಿ ಬಹಿರಂಗ Read More »

ಪುತ್ತೂರು : ರಿಕ್ಷಾ ಡಿಕ್ಕಿ ಹೊಡೆದು ಪಾದಚಾರಿ ಸಾವು

ಪುತ್ತೂರು: ಕೌಡಿಚಾರ್ – ರೆಂಜ ರಸ್ತೆಯ ಪಾಪೆಮಜಲು ಎಂಬಲ್ಲಿ ರಿಕ್ಷಾ ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ರಾತ್ರಿ ಸಂಭವಿಸಿದೆ. ಪಾಪೆಮಜಲು ನಿವಾಸಿ ಸುಭಾಷ್ (50) ಮೃತಪಟ್ಟವರು. ಅವರು ಶುಕ್ರವಾರ ರಾತ್ರಿ ವೇಳೆ ರಸ್ತೆ ದಾಟುತ್ತಿದ್ದಾಗ ಅವರಿಗೆ ರಿಕ್ಷಾ ಢಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಪುತ್ತೂರು : ರಿಕ್ಷಾ ಡಿಕ್ಕಿ ಹೊಡೆದು ಪಾದಚಾರಿ ಸಾವು Read More »

ಕೆಟ್ಟು ನಿಂತಿದ್ದ ಲಾರಿಗೆ ಬಸ್‌ ಡಿಕ್ಕಿ : ಇಬ್ಬರು ಸಾವು

ಮಂಗಳೂರಿನಿಂದ ಚಿತ್ರದುರ್ಗದತ್ತ ಹೋಗುತ್ತಿದ್ದ ಬಸ್‌ ಶಿವಮೊಗ್ಗ: ಮಂಗಳೂರಿನಿಂದ ಚಿತ್ರದುರ್ಗದತ್ತ ಹೋಗುತ್ತಿದ್ದ ಖಾಸಗಿ ಬಸ್‌ ಶಿವಮೊಗ್ಗ ಸಮೀಪ ಕೆಟ್ಟು ನಿಂತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಇಂದು ಮುಂಜಾನೆ ವೇಳೆ ಸಂಭವಿಸಿದೆ. ಶಿವಮೊಗ್ಗ ತಾಲೂಕಿನ ಗಾಜನೂರು ಅಗ್ರಹಾರ ಬಳಿ ತೀರ್ಥಹಳ್ಳಿ-ಶಿವಮೊಗ್ಗ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಬಸ್ ಮಂಗಳೂರಿನಿಂದ ರಾತ್ರಿ ಹೊರಟಿದ್ದು, ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಗೆ ತಲುಪಬೇಕಿತ್ತು. ಬುಧವಾರ ಬೆಳಗಿನ ಜಾವ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಬಸ್ಸಿನ ನಿರ್ವಾಹಕ, ಹೊಸನಗರದ

ಕೆಟ್ಟು ನಿಂತಿದ್ದ ಲಾರಿಗೆ ಬಸ್‌ ಡಿಕ್ಕಿ : ಇಬ್ಬರು ಸಾವು Read More »

error: Content is protected !!
Scroll to Top