ಅಪಘಾತ

ಮಂಗಳೂರು : ಕೋಳಿ ಆಹಾರ ಮಳಿಗೆಯಲ್ಲಿ ಬೆಂಕಿ ಅವಘಡ

ಮಂಗಳೂರು: ನಗರದ ಪಂಪ್‌ವೆಲ್‌ನಲ್ಲಿರುವ ಕೋಳಿ ಆಹಾರ ಮಾರಾಟ ಮಳಿಗೆಯೊಂದರಲ್ಲಿ ಮಂಗಳವಾರ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಅಪಾರ ಹಾನಿ ಉಂಟಾಗಿದೆ. ಪಂಪ್‌ವೆಲ್‌ನಲ್ಲಿರುವ ಭಾರತ್ ಆಗ್ರೋ ಎಂಬ ಮಳಿಗೆಯಲ್ಲಿ ಮಂಗಳವಾರ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿದೆ. ಇದರಿಂದ ಕೋಳಿ ಆಹಾರ ಮತ್ತು ಪೀಠೋಪಕರಣ ಸುಟ್ಟು ಹೋಗಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ. ಸ್ಥಳಕ್ಕೆ ಆಗಮಿಸಿರುವ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದರು. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಹತ್ತಿಕೊಂಡಿದೆ ಎಂದು ತಿಳಿದು ಬಂದಿದೆ.

ಮಂಗಳೂರು : ಕೋಳಿ ಆಹಾರ ಮಳಿಗೆಯಲ್ಲಿ ಬೆಂಕಿ ಅವಘಡ Read More »

ಬಸ್‌ಗೆ ಲಾರಿ ಡಿಕ್ಕಿ : 18 ಕನ್ವರ್‌ ಯಾತ್ರಿಗಳ ದಾರುಣ ಸಾವು

ಕನ್ವರ್‌ ಯಾತ್ರಿಗಳ ಪಾಲಿಗೆ ಕರಾಳ ದಿನವಾದ ಮಂಗಳವಾರ ಜಾರ್ಖಂಡ್‌: ಕನ್ವರ್‌ ಯಾತ್ರಿಗಳು ಪ್ರಯಾಣಿಸುತ್ತಿದ್ದ ಬಸ್ಸಿಗೆ ಗ್ಯಾಸ್‌ ಸಿಲಿಂಡರ್‌ಗಳನ್ನು ಸಾಗಿಸುತ್ತಿದ್ದ ಲಾರಿ ಡಿಕ್ಕಿ ಹೊಡೆದ ಪರಿಣಾಮ 18 ಮಂದಿ ಮೃತಪಟ್ಟಿರುವ ಭೀಕರ ಅಪಘಾತ ಇಂದು ಮುಂಜಾನೆ ಜಾರ್ಖಂಡ್‌ನ ದಿಯೋಘಡ್‌ ಎಂಬಲ್ಲಿ ಸಂಭವಿಸಿದೆ. ದಿಯೋಘಡ್‌ನ ಮೋಹನಪುರ ಪೊಲೀಸ್‌ ಠಾಣೆ ವ್ಯಾಪ್ತಿಯ ಜಮುನಿಯ ಅರಣ್ಯ ಪ್ರದೇಶ ಭಾಗದಲ್ಲಿ ಕನ್ವರ್‌ ಯಾತ್ರಾರ್ಥಿಗಳು ಪ್ರಯಾಣಿಸುತ್ತಿದ್ದ ಮಿನಿಬಸ್‌ಗೆ ಮುಂಜಾನೆ 4.30ರ ವೇಳೆಗೆ ಗ್ಯಾಸ್‌ ಸಿಲಿಂಡರ್‌ಗಳಿದ್ದ ಲಾರಿ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಕನಿಷ್ಠ 18 ಜನರು ಸಾವನ್ನಪ್ಪಿದ್ದು,

ಬಸ್‌ಗೆ ಲಾರಿ ಡಿಕ್ಕಿ : 18 ಕನ್ವರ್‌ ಯಾತ್ರಿಗಳ ದಾರುಣ ಸಾವು Read More »

ಸುಳ್ಯ: ರಸ್ತೆ ದಾಟುತ್ತಿದ್ದಾಗ ಬೈಕ್ ಢಿಕ್ಕಿ ಹೊಡೆದು ಮಹಿಳೆ ಸಾವು

ಸುಳ್ಯ: ಕಲ್ಲಗುಂಡಿ ಅಂಚೆ ಕಚೇರಿ ಬಳಿ ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಮಹಿಳೆ ಮೃತಪಟ್ಟಿರುವ ಘಟನೆ ಭಾನುವಾರ ನಡೆದಿದೆ. ಮೃತರನ್ನು ಬೈಲು ನಿವಾಸಿ ಸಂಪಾಜೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕುಮಾರ್ ಚೆದ್ಮಾರ್ ಅವರ ತಾಯಿ ಕಮಲಾ ಚೆತ್ಕಾರ್(67) ಎಂದು ಗುರುತಿಸಲಾಗಿದೆ. ಕಮಲಾ ಅವರು ಸಂಪಾಜೆಗೆ ಹೋಗುವ ಬಸ್ ಹತ್ತುವುದಕ್ಕಾಗಿ ಕಲ್ಲಗುಂಡಿ ಅಂಚೆ ಕಚೇರಿ ಬಳಿ ರಸ್ತೆ ದಾಟುತ್ತಿದ್ದಾಗ, ಸುಳ್ಯದ ಕಡೆಗೆ ಬರುತ್ತಿದ್ದ ಕೇರಳ ನೋಂದಣಿಯ ಬೈಕ್ ನಿಯಂತ್ರಣ ಕಳೆದುಕೊಂಡು ಅವರಿಗೆ

ಸುಳ್ಯ: ರಸ್ತೆ ದಾಟುತ್ತಿದ್ದಾಗ ಬೈಕ್ ಢಿಕ್ಕಿ ಹೊಡೆದು ಮಹಿಳೆ ಸಾವು Read More »

ದೇವಾಲಯದಲ್ಲಿ ಕಾಲ್ತುಳಿತ: ಇಬ್ಬರು ಭಕ್ತರ ಸಾವು, 29 ಮಂದಿಗೆ ಗಾಯ

ವಿದ್ಯುತ್‌ ತಂತಿ ಕಡಿದು ಚಪ್ಪರದ ಶೀಟಿನ ಮೇಲೆ ಬಿದ್ದಾಗ ನೂಕುನುಗ್ಗಲು ಲಖನೌ: ಉತ್ತರ ಪ್ರದೇಶದ ಬಾರಾಬಂಕಿಯಲ್ಲಿರುವ ದೇವಾಲಯವೊಂದರಲ್ಲಿ ಇಂದು ನಸುಕಿನ ಹೊತ್ತು ಕಾಲ್ತುಳಿತ ಸಂಭವಿಸಿ ಇಬ್ಬರು ಭಕ್ತರು ಸಾವನ್ನಪ್ಪಿದ್ದು, 29 ಮಂದಿ ಗಾಯಗೊಂಡಿದ್ದಾರೆ. ಪವಿತ್ರ ಶ್ರಾವಣ ಮಾಸದ ಹಿನ್ನೆಲೆ ಸೋಮವಾರ ಬಾರಾಬಂಕಿಯಲ್ಲಿರುವ ಪ್ರಾಚೀನ ಅವಸಾನೇಶ್ವರ ಮಹಾದೇವ ದೇವಾಲಯದಲ್ಲಿ ಭಕ್ತರು ದೇವರ ದರ್ಶನಕ್ಕೆ ಸಾಲುಗಟ್ಟಿ ನಿಂತಿದ್ದರು. ಈ ವೇಳೆ ಕೆಲ ಕೋತಿಗಳು ಓವರ್‌ಹೆಡ್ ವಿದ್ಯುತ್ ತಂತಿಗಳ ಮೇಲೆ ಹಾರಿವೆ. ಇದರಿಂದ ವಿದ್ಯುತ್‌ ತಂತಿ ತುಂಡಾಗಿ ತಗಡಿನ ಶೆಡ್‌ ಮೇಲೆ

ದೇವಾಲಯದಲ್ಲಿ ಕಾಲ್ತುಳಿತ: ಇಬ್ಬರು ಭಕ್ತರ ಸಾವು, 29 ಮಂದಿಗೆ ಗಾಯ Read More »

ಕಾರು ಪಲ್ಟಿಯಾಗಿ ಇಬ್ಬರಿಗೆ ಗಾಯ

ಬಂಟ್ವಾಳ : ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಇಬ್ಬರಿಗೆ ಗಾಯವಾದ ಘಟನೆ ಮಾಣಿ ಸಮೀಪದ ಬೊಳ್ಳುಕಲ್ಲು ಬಳಿ ಶನಿವಾರ ನಡೆದಿದೆ. ಕಾರು ಉಪ್ಪಿನಂಗಡಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಅಪಘಾತದ ಪರಿಣಾಮ ಕಾರಿನಲ್ಲಿದ್ದ ಚಾಲಕ ಮತ್ತು ಓರ್ವ ಪ್ರಯಾಣಿಕ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಹೆದ್ದಾರಿ ಕಾಮಗಾರಿ ಅವಾಂತರದಿಂದಾಗಿ ಹೆದ್ದಾರಿಯಲ್ಲಿ ಮಳೆ ನೀರು ತುಂಬಿದೆ. ಹೀಗಾಗಿ ಆಗಾಗ್ಗೆ ಅಪಘಾತಗಳು ಸಂಭವಿಸುತ್ತಿವೆ ಎಂದು ವಾಹನ ಚಾಲಕ, ಮಾಲಕರು ತಿಳಿಸಿದ್ದಾರೆ.

ಕಾರು ಪಲ್ಟಿಯಾಗಿ ಇಬ್ಬರಿಗೆ ಗಾಯ Read More »

ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಸರಣಿ ಅಪಘಾತ : ಓರ್ವ ಸಾವು, 20 ಮಂದಿಗೆ ಗಾಯ

ಇಳಿಜಾರಿನಲ್ಲಿ ಬ್ರೇಕ್‌ಫೇಲ್‌ ಆದ ಟ್ರಕ್‌ 25ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿಯಾಗಿ ಅಪಘಾತ ಮುಂಬೈ: ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ರಾಯಗಢ ಜಿಲ್ಲೆಯ ಖೋಪೋಲಿ ಬಳಿ ಸುಮಾರು 20 ವಾಹನಗಳು ಸರಣಿ ಅಪಘಾತಕ್ಕೀಡಾಗಿ ಓರ್ವ ಮೃತಪಟ್ಟು ಹಲವು ಮಂದಿ ಗಾಯಗೊಂಡಿದ್ದಾರೆ. ಏಕಮುಖ ಸಂಚಾರ ರಸ್ತೆಯಲ್ಲಿ 25ಕ್ಕೂ ಹೆಚ್ಚು ವಾಹನಗಳು ಪರಸ್ಪರ ಡಿಕ್ಕಿಯಾಗಿವೆ. ಖೋಪೋಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮುಂಬೈಗೆ ಹೋಗುವ ಮಾರ್ಗದಲ್ಲಿ ಘಟನೆ ಸಂಭವಿಸಿದೆ. ಇಳಿಜಾರಿನಲ್ಲಿ ಕಂಟೇನರ್‌ ಟ್ರಕ್‌ನ ಬ್ರೇಕ್‌ ಫೇಲ್‌ ಆಗಿ ಇದರಿಂದ ನಿಯಂತ್ರಣ ಕಳೆದುಕೊಂಡು ಮುಂದೆ ಸಾಗುತ್ತಿದ್ದ ಬಿಎಂಡಬ್ಲ್ಯು

ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಸರಣಿ ಅಪಘಾತ : ಓರ್ವ ಸಾವು, 20 ಮಂದಿಗೆ ಗಾಯ Read More »

ಕೊಯನಾಡಿನಲ್ಲಿ ಲಾರಿ – ಕಾರು ಮಧ್ಯೆ ಭೀಕರ ಅಪಘಾತ: ನಾಲ್ವರು ಯುವಕರ ಸಾವು

ಮಡಿಕೇರಿ: ಸಂಪಾಜೆ ಸಮೀಪದ ಕೊಯನಾಡಿನಲ್ಲಿ ಲಾರಿ ಮತ್ತು ಕಾರೊಂದರ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ‌ನಾಲ್ವರು ಯುವಕರು ಸಾವನ್ನಪ್ಪಿದ್ದಾರೆ. ಮೃತರನ್ನು ಗೋಣಿಕೊಪ್ಪದ ನಿಹಾದ್, ರಿಝಾನ್, ಹುಣಸೂರಿನ ರಾಖಿಬ್ ಎಂದು ಗುರುತಿಸಲಾಗಿದ್ದು, ಮತ್ತೊಬ್ಬ ಯುವಕನ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ. ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದರೆ, ಇನ್ನಿಬ್ಬರನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ. ಮಂಗಳೂರಿನ ಹೊರವಲಯದಲ್ಲಿರುವ ಉಳ್ಳಾಲಕ್ಕೆ ತೆರಳಿ ಅಲ್ಲಿಂದ ತಮ್ಮೂರುಗಳಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ. ಮಡಿಕೇರಿಯಿಂದ ‌ಸುಳ್ಯದ ಕಡೆಗೆ ಬರುತ್ತಿದ್ದ ಲಾರಿ

ಕೊಯನಾಡಿನಲ್ಲಿ ಲಾರಿ – ಕಾರು ಮಧ್ಯೆ ಭೀಕರ ಅಪಘಾತ: ನಾಲ್ವರು ಯುವಕರ ಸಾವು Read More »

ಶಾಲೆಯ ಮೇಲ್ಛಾವಣಿ ಕುಸಿದು ನಾಲ್ಕು ಮಕ್ಕಳು ಸಾವು

ಬೆಳಗ್ಗೆ ಪ್ರಾರ್ಥನೆ ನಡೆಯುತ್ತಿರುವಾಗಲೇ ಕುಸಿದು ಬಿದ್ದ ಛಾವಣಿ ಜೈಪುರ: ಪ್ರಾಥಮಿಕ ಶಾಲಾ ಕಟ್ಟದ ಮೇಲ್ಛಾವಣಿ ಕುಸಿದು ಕನಿಷ್ಠ ನಾಲ್ವರು ಮಕ್ಕಳು ಸಾವನ್ನಪ್ಪಿರುವ ದಾರುಣ ಘಟನೆ ರಾಜಸ್ಥಾನದ ಝಲಾವರ್‌ನಲ್ಲಿ ಸಂಭವಿಸಿದೆ. ಇಂದು ಬೆಳಗ್ಗೆ ಝಲಾವರ್‌ನಲ್ಲಿರುವ ಪಿಪ್ಲೋಡಿ ಪ್ರಾಥಮಿಕ ಶಾಲೆಯ ಮೇಲ್ಛಾವಣಿ ಕುಸಿದಿದ್ದು, ಘಟನೆಯಲ್ಲಿ ಕನಿಷ್ಠ ನಾಲ್ವರು ಮಕ್ಕಳು ಸಾವನ್ನಪ್ಪಿರುವುದಾಗಿ ವರದಿಯಾಗಿದೆ. 60ಕ್ಕೂ ಹೆಚ್ಚು ಮಕ್ಕಳು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದು, ರಕ್ಷಣಾ ತಂಡಗಳಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಸ್ಥಳೀಯರು ಸಹ ಅಧಿಕಾರಿಗಳೊಂದಿಗೆ ಕೈಜೋಡಿಸಿದ್ದಾರೆ. ಮೃತಪಟ್ಟ ಮಕ್ಕಳ ಶವಗಳನ್ನ ಹೊರತೆಗೆಯಲಾಗಿದೆ. ಗಾಯಗೊಂಡವರನ್ನ

ಶಾಲೆಯ ಮೇಲ್ಛಾವಣಿ ಕುಸಿದು ನಾಲ್ಕು ಮಕ್ಕಳು ಸಾವು Read More »

ವಿಟ್ಲದಲ್ಲಿ ಕಾರಿಗೆ ಮಿನಿ ಟಿಪ್ಪರ್‌ ಡಿಕ್ಕಿ : ನವವಿವಾಹಿತ ಸಾವು

ಸಹೋದರಿ ಮತ್ತು ಮಗುವಿಗೆ ಗಂಭೀರ ಗಾಯ ವಿಟ್ಲ: ವಿಟ್ಲ ಸಮೀಪದ ವೀರಕಂಬ ಗ್ರಾಮದ ಕೆಲಿಂಜ ಜಂಕ್ಷನ್‌ನಲ್ಲಿ ಮಿನಿ ಟಿಪ್ಪರ್ ಮತ್ತು ಆಲ್ಟೊ ಕಾರು ನಡುವೆ ಭೀಕರ ಅಪಘಾತ ಸಂಭವಿಸಿ, ಕಾರಿನ ಚಾಲಕ ಮೃತಪಟ್ಟು, ಅವರ ಸಹೋದರಿ ಹಾಗೂ ಮಗು ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ಸೋಮವಾರ ಸಂಭವಿಸಿದೆ. ಅನೀಶ್ ಅನಂತಾಡಿ (34) ಮೃತ ದುರ್ದೈವಿ. ಕಲ್ಲಡ್ಕದಿಂದ ವಿಟ್ಲ ಕಡೆಗೆ ತೆರಳುತ್ತಿದ್ದ ಆಲ್ಟೊ ಕಾರಿಗೆ, ವಿಟ್ಲದಿಂದ ಕಲ್ಲಡ್ಕ ಕಡೆಗೆ ಚಲಿಸುತ್ತಿದ್ದ ಮಿನಿ ಟಿಪ್ಪರ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಸ್ಥಳೀಯರು

ವಿಟ್ಲದಲ್ಲಿ ಕಾರಿಗೆ ಮಿನಿ ಟಿಪ್ಪರ್‌ ಡಿಕ್ಕಿ : ನವವಿವಾಹಿತ ಸಾವು Read More »

ಮಿನಿ ಟಿಪ್ಪರ್ – ಕಾರು ಅಪಘಾತ : ಕಾರು ಚಾಲಕ ಮೃತ್ಯು

ವಿಟ್ಲ: ಮಿನಿ ಟಿಪ್ಪ‌ರ್ ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಕಾರು ಚಾಲಕ ಮೃತಪಟ್ಟು, ಅವರ ಸಹೋದರಿ ಹಾಗೂ ಮಗು ಗಂಭೀರ ಗಾಯಗೊಂಡ ಘಟನೆ ವಿಟ್ಲ ಸಮೀಪ ವೀರಕಂಬ ಗ್ರಾಮದ ಕೆಲಿಂಜ ಜಂಕ್ಷನ್‌ನಲ್ಲಿ ನಡೆದಿದೆ. ಕಾರು ಚಾಲಕ ಅನೀಶ್‍ ಗಂಭೀರ ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಾಗಿದ್ದವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಕಲ್ಲಡ್ಕದಿಂದ ವಿಟ್ಲ ಕಡೆಗೆ ತೆರಳುತ್ತಿದ್ದ ಆಲ್ಟೋ ಕಾರಿಗೆ, ವಿರುದ್ಧ ದಿಕ್ಕಿನಲ್ಲಿ ಚಲಿಸುತ್ತಿದ್ದ ಮಿನಿ ಟಿಪ್ಪರ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಕಾರಿನೊಳಗಿನವರು ತೀವ್ರ

ಮಿನಿ ಟಿಪ್ಪರ್ – ಕಾರು ಅಪಘಾತ : ಕಾರು ಚಾಲಕ ಮೃತ್ಯು Read More »

error: Content is protected !!
Scroll to Top