ಅಪಘಾತ

ಚಾಲಕನ ನಿಯಂತ್ರಣ ತಪ್ಪಿ ಕಾಂಪೌಂಡಿಗೆ ಗುದ್ದಿದ ಕಾರು

ಸುಳ್ಯ: ಗೂನಡ್ಕ ಸಮೀಪ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮನೆಯ ಕಾಂಪೌಂಡ್‌ಗೆ ಗುದ್ದಿದ ಘಟನೆ ನಡೆದಿದೆ. ಸಂಪಾಜೆಯ ಮೂಲಕ ಸುಳ್ಯಕ್ಕೆ ಬರುತ್ತಿದ್ದ ಕಾರು ಗೂನಡ್ಕ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಸಮೀಪದಲ್ಲಿದ್ದ ರಹೀಂ ಬೀಜದಕಟ್ಟೆ ಅವರ ಮನೆಯ ಕಾಂಪೌಂಡಿಗೆ ಗುದ್ದಿದೆ. ಪರಿಣಾಮ ಕಾರಿನ ಮುಂಭಾಗ ಜಖಂಗೊಂಡಿದೆ. ಕಾರಿನಲ್ಲಿ ಕೇರಳದ ಕಾಸರಗೋಡು ಮೂಲದವರು ಪ್ರಯಾಣಿಸುತ್ತಿದ್ದು, ಅದೃಷ್ಟವಶಾತ್ ಯಾವುದೇ ಹಾನಿ ಸಂಭವಿಸಿಲ್ಲ.

ಚಾಲಕನ ನಿಯಂತ್ರಣ ತಪ್ಪಿ ಕಾಂಪೌಂಡಿಗೆ ಗುದ್ದಿದ ಕಾರು Read More »

ನಾಡದೋಣಿ ಮೀನುಗಾರಿಕೆ ದೋಣಿ ಮಗುಚಿ ಮೂವರು ಮೀನುಗಾರರು ಸಮುದ್ರಪಾಲು

ನೀರಿಗೆ ಬಿದ್ದ ಒಬ್ಬನನ್ನು ರಕ್ಷಿಸಲು ಯತ್ನಿಸಿದ ಇನ್ನಿಬ್ಬರು ನೀರುಪಾಲು ಉಡುಪಿ: ಮೀನುಗಾರಿಕೆಗೆ ತೆರಳಿದ್ದ ನಾಡದೋಣಿ ಮಗುಚಿ ಮೂವರು ಮೀನುಗಾರರು ನೀರುಪಾಲಾಗಿರುವ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಗಂಗೊಳ್ಳಿಯಲ್ಲಿ ನಡೆದಿದೆ. ಸುರೇಶ್ ಖಾರ್ವಿ (45), ರೋಹಿತ್ ಖಾರ್ವಿ (38) ಮತ್ತು ಜಗ್ಗು ಯಾನೆ ಜಗದೀಶ್ ಖಾರ್ವಿ (36) ನೀರುಪಾಲಾದ ಮೀನುಗಾರರು. ಅರಬ್ಬಿ ಸಮುದ್ರ ಪ್ರಕ್ಷುಬ್ಧಗೊಂಡ ಹಿನ್ನೆಲೆ ವಾಪಸ್ ಆಗುವಾಗ ದೋಣಿ ಮಗುಚಿದೆ. ದೋಣಿ ಮಗುಚಿದ ವೇಳೆ ಓರ್ವ ನೀರಿಗೆ ಬಿದ್ದಿದ್ದಾರೆ. ಆತನನ್ನು ರಕ್ಷಿಸಲು ಮುಂದಾದ ಇನ್ನಿಬ್ಬರು ಕೂಡ

ನಾಡದೋಣಿ ಮೀನುಗಾರಿಕೆ ದೋಣಿ ಮಗುಚಿ ಮೂವರು ಮೀನುಗಾರರು ಸಮುದ್ರಪಾಲು Read More »

ಗ್ಯಾಸ್ ಸೋರಿಕೆಯಿಂದ ಬೆಂಕಿ ಆವರಿಸಿ ಅಡುಗೆ ಮನೆಗೆ ಹಾನಿ

ಬೆಳ್ತಂಗಡಿ: ಗ್ಯಾಸ್ ಸೋರಿಕೆಯಿಂದ ಬೆಂಕಿ ಹತ್ತಿಕೊಂಡ ಪರಿಣಾಮ ಅಡುಗೆ ಮನೆ ಸಂಪೂರ್ಣ ಹೊತ್ತಿದ ಘಟನೆ ಧರ್ಮಸ್ಥಳ ಗ್ರಾಮದ ಗ್ರಾ.ಪಂ ಮಾಜಿ ಅಧ್ಯಕ್ಷೆ ಗೀತಾ ದಾಮೋದರ ಆಚಾರ್ಯ ಅವರ ಮನೆಯಲ್ಲಿ ಇಂದು ಮುಂಜಾನೆ ನಡೆದಿದೆ, ಭಾನುವಾರ ಬೆಳಗ್ಗೆ ಉಪಹಾರ ತಯಾರಿಸಲು ಗ್ಯಾಸ್ ಉರಿಸಿದಾಗ ಸಿಲಿಂಡರ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮನೆಯಲ್ಲಿ ಪೂಜಾ ಕಾರ್ಯಕ್ರಮ ಇದ್ದ ಕಾರಣ ತುಂಬಾ ಜನರಿದ್ದರು. ಮನೆಯವರು ಬೆಂಕಿ ನಂದಿಸುವ ಪ್ರಯತ್ನ ನಡೆಸಿದರೂ ಅದು ಸಾಧ್ಯವಾಗಿಲ್ಲ. ಅಗ್ನಿಶಾಮಕ ದಳದವರು ಬಂದು ಬೆಂಕಿ ನಂದಿಸಿದ್ದಾರೆ ಎನ್ನಲಾಗಿದೆ.

ಗ್ಯಾಸ್ ಸೋರಿಕೆಯಿಂದ ಬೆಂಕಿ ಆವರಿಸಿ ಅಡುಗೆ ಮನೆಗೆ ಹಾನಿ Read More »

ಡೀಸೆಲ್‌ ಸಾಗಿಸುತ್ತಿದ್ದ ರೈಲಿನಲ್ಲಿ ಭಾರಿ ಬೆಂಕಿ ಅವಘಡ

ಧಗಧಗನೆ ಉರಿದ ರೈಲಿನ ವ್ಯಾಗನ್‌ಗಳು ಚೆನ್ನೈ: ಡೀಸೆಲ್ ಸಾಗಿಸುತ್ತಿದ್ದ ಗೂಡ್ಸ್ ರೈಲಿನ 4 ವ್ಯಾಗನ್‌ಗಳು ಬೆಂಕಿ ಹತ್ತಿಕೊಂಡು ಧಗಧಗನೆ ಉರಿದ ಘಟನೆ ತಮಿಳುನಾಡಿನ ತಿರುವಲ್ಲೂರು ರೈಲು ನಿಲ್ದಾಣದ ಬಳಿ ನಡೆದಿದೆ. ಭಾನುವಾರ ಮುಂಜಾನೆ 5.30ರ ಸುಮಾರಿಗೆ ಈ ಘಟನೆ ನಡೆದಿದೆ. ಬೆಂಕಿ ಅವಘಡದಿಂದ ರೈಲು ಹೊತ್ತಿ ಉರಿದಿದ್ದು, ಆಕಾಶದಲ್ಲಿ ಕಪ್ಪು ದಟ್ಟಹೊಗೆ ಕಾಣಿಸಿಕೊಂಡಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಹಾಗೂ ರಕ್ಷಣಾ ತಂಡಗಳು ಧಾವಿಸಿದ್ದು, ಬೆಂಕಿಯನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾಗಿದೆ. ರೈಲಿನಲ್ಲಿ ಡೀಸೆಲ್ ಇದ್ದ ಕಾರಣ ಅಗ್ನಿಶಾಮಕ ಸಿಬ್ಬಂದಿ ಬೆಂಕಿ

ಡೀಸೆಲ್‌ ಸಾಗಿಸುತ್ತಿದ್ದ ರೈಲಿನಲ್ಲಿ ಭಾರಿ ಬೆಂಕಿ ಅವಘಡ Read More »

ಅಹಮದಾಬಾದ್‌ ವಿಮಾನ ದುರಂತದ ಕಾರಣ ಪತ್ತೆ

ಪ್ರಾಥಮಿಕ ತನಿಖಾ ವರದಿಯಲ್ಲಿದೆ ಬೆಚ್ಚಿಬೀಳಿಸುವ ಮಾಹಿತಿ ನವದೆಹಲಿ : ಅಹಮದಾಬಾದ್‌ನಲ್ಲಿ ಕಳೆದ ಜೂನ್ 12ರಂದು ಏರ್ ಇಂಡಿಯಾ ವಿಮಾನ ಪತನಗೊಂಡ ಕಾರಣ ಬಹಿರಂಗವಾಗಿದೆ. ಈ ಭೀಕರ ಅಪಘಾತದ ಪ್ರಾಥಮಿಕ ತನಿಖಾ ವರದಿಯಲ್ಲಿ ವಿಮಾನ ಪತನವಗಾಲು ಕಾರಣವಾದ ಪರಿಸ್ಥಿತಿಯನ್ನು ವಿವರಿಸಲಾಗಿದೆ. ವಿಮಾನ ಅಪಘಾತ ತನಿಖಾ ಬ್ಯೂರೋ (ಎಎಐಬಿ) ಸಲ್ಲಿಸಿರುವ 15 ಪುಟಗಳ ಪ್ರಾಥಮಿಕ ತನಿಖಾ ವರದಿಯಲ್ಲಿ ಹಲವು ಆಘಾತಕಾರಿ ಮಾಹಿತಿ ಬಹಿರಂಗವಾಗಿದೆ. ವರದಿಯ ಪ್ರಕಾರ, ಟೇಕ್ ಆಫ್ ಆದ ಕೆಲವೇ ಸೆಕೆಂಡುಗಳಲ್ಲಿ ವಿಮಾನದ ಎರಡೂ ಇಂಜಿನ್‌ಗಳು ಸ್ಥಗಿತಗೊಂಡವು. ಆ

ಅಹಮದಾಬಾದ್‌ ವಿಮಾನ ದುರಂತದ ಕಾರಣ ಪತ್ತೆ Read More »

ಭಾರತೀಯ ವಾಯುಪಡೆ ಯುದ್ಧ ವಿಮಾನ ಪತನ

ರಾಜಸ್ಥಾನ: ಭಾರತೀಯ ವಾಯುಪಡೆಯ ಯುದ್ಧ ವಿಮಾನವೊಂದು ರಾಜಸ್ಥಾನದ ಚುರುವಿನ ಬನೋಡಾ ಗ್ರಾಮದ ಬಳಿ ಪತನಗೊಂಡ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ. ವಿಮಾನದ ಅವಶೇಷಗಳಡಿಯಿಂದ ಪೈಲಟ್ ಮೃತದೇಹ ಹೊರತೆಗೆಯಲಾಗಿದೆ. ಜಿಲ್ಲಾಧಿಕಾರಿ ಅಭಿಷೇಕ್ ಸುರಾನ ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ತನಿಖೆ ಮತ್ತು ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ. ಅಪಘಾತದ ಪರಿಣಾಮ ಹೊಲದಲ್ಲಿ ಬೆಂಕಿ ಕಾಣಿಸಿಕೊಂಡಿತು. ಅದನ್ನು ತಾವೇ ನಂದಿಸಲು ಪ್ರಯತ್ನಿಸಿದೆವು ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಭಾರತೀಯ ವಾಯುಪಡೆ ಯುದ್ಧ ವಿಮಾನ ಪತನ Read More »

ಸೇತುವೆ ಕುಸಿದು ನದಿಗೆ ಬಿದ್ದ ನಾಲ್ಕು ವಾಹನಗಳು : ಮೂರು ಮಂದಿ ಸಾವು

ಅಂಚಿನ ತನಕ ಬಂದು ಪವಾಡಸದೃಶವಾಗಿ ಪಾರಾದ ಬೃಹತ್‌ ಟ್ಯಾಂಕರ್‌ ಅಹಮದಾಬಾದ್: ಗುಜರಾತ್‌ ವಡೋದರಾದ ಪದ್ರಾ ತಾಲೂಕಿನ ಮುಜ್ಪುರ ಬಳಿ ಹಳೇ ಸೇತುವೆ ಕುಸಿದ ಪರಿಣಾಮ ಅದರ ಮೇಲೆ ಸಂಚರಿಸುತ್ತಿದ್ದ ನಾಲ್ಕು ವಾಹನಗಳು ನದಿಗೆ ಬಿದ್ದು ಮೂವರು ಸಾವನ್ನಪ್ಪಿದ್ದಾರೆ. ಇಂದು ಬೆಳಗ್ಗೆ 7.45ರ ಸುಮಾರಿಗೆ ಸೇತುವೆ ಕುಸಿದಿದೆ. ಈ ಸೇತುವೆ ಮಧ್ಯ ಗುಜರಾತ್ ಮತ್ತು ಸೌರಾಷ್ಟ್ರ ನಡುವಿನ ಪ್ರಮುಖ ಸಂಪರ್ಕ ಕೊಂಡಿಯಾಗಿತ್ತು. ಎರಡು ಟ್ರಕ್‌ಗಳು, ಒಂದು ಪಿಕಪ್ ವ್ಯಾನ್ ಮತ್ತು ಇನ್ನೊಂದು ವಾಹನ ಕೆಳಗೆ ಬಿದ್ದಿದೆ. ವಾಹನಗಳಿಂದ ಮೂವರನ್ನು

ಸೇತುವೆ ಕುಸಿದು ನದಿಗೆ ಬಿದ್ದ ನಾಲ್ಕು ವಾಹನಗಳು : ಮೂರು ಮಂದಿ ಸಾವು Read More »

ಶಾಲಾ ವ್ಯಾನಿಗೆ ರೈಲು ಡಿಕ್ಕಿ : ಇಬ್ಬರು ಮಕ್ಕಳು ಸಾವು; ಮೂವರಿಗೆ ಗಂಭೀರ ಗಾಯ

ರೈಲು ಬರುತ್ತಿರುವುದನ್ನು ನೋಡಿಯೂ ದಾಟುವ ಸಾಹಸ ಮಾಡಿದಾಗ ದುರಂತ ಚೆನ್ನೈ : ಲೆವೆಲ್‌ ಕ್ರಾಸಿಂಗ್‌ನಲ್ಲಿ ಶಾಲಾ ವಾಹನಕ್ಕೆ ರೈಲು ಡಿಕ್ಕಿ ಹೊಡೆದು ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತಮಿಳುನಾಡಿನ ಕಡ್ಡಲೂರು ಎಂಬಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ. ಬೆಳಗ್ಗೆಮಕ್ಕಳನ್ನು ಹತ್ತಿಸಿಕೊಂಡು ಶಾಲೆಗೆ ಹೋಗುತ್ತಿರುವಾಗ ಈ ದುರ್ಘಟನೆ ಸಂಭವಿಸಿದೆ. ಕಡ್ಡಲೂರು ಸಮೀಪ ಸೆಮ್ಮನಕೊಪ್ಪಂ ಎಂಬಲ್ಲಿ ಲೆವೆಲ್‌ ಕ್ರಾಸಿಂಗ್‌ನ್ನು ಶಾಲಾ ವ್ಯಾನ್‌ ದಾಟುತ್ತಿದ್ದಾಗ ವೇಗವಾಗಿ ಬಂದ ರೈಲು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ವ್ಯಾನ್‌ ಪೂರ್ತಿ ಜಖಂಗೊಂಡಿದೆ. ಈ ಸಂದರ್ಭದಲ್ಲಿ

ಶಾಲಾ ವ್ಯಾನಿಗೆ ರೈಲು ಡಿಕ್ಕಿ : ಇಬ್ಬರು ಮಕ್ಕಳು ಸಾವು; ಮೂವರಿಗೆ ಗಂಭೀರ ಗಾಯ Read More »

ಹಾಲಿನ ವಾಹನ ಪಾದಚಾರಿ ಮೇಲ್ಸೇತುವೆಗೆ ಡಿಕ್ಕಿ

ಪುತ್ತೂರು: ನಗರದ ಮಂಜಲ್ಪಡ್ಪುವಿನಲ್ಲಿ ಹಾಲಿನ ವಾಹನವೊಂದು ಪಾದಚಾರಿ ಮೇಲ್ಸೆತುವೆಗೆ ಅಪ್ಪಳಿಸಿದೆ. ಸೋಮವಾರ ಸಂಜೆ ಘಟನೆ ನಡೆದಿದ್ದು, ಮಂಗಳೂರು ಕಡೆಯಿಂದ ಬರುತ್ತಿದ್ದ ಹಾಲಿನ ವಾಹನ ಇದಾಗಿದ್ದು, ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಯಾರಿಗೂ ಅಪಾಯವಾಗಿಲ್ಲ. ವಾಹನ ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾನೆ. ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

ಹಾಲಿನ ವಾಹನ ಪಾದಚಾರಿ ಮೇಲ್ಸೇತುವೆಗೆ ಡಿಕ್ಕಿ Read More »

ಡಿವೈಡರ್ ಗೆ ಕಾರು ಡಿಕ್ಕಿ : ಚಾಲಕ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ಕಾರೊಂದು ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕಾರು ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ಕೆಳಗಿನ ತುಂಬೆ ಎಂಬಲ್ಲಿ ಶನಿವಾರ ಮಧ್ಯಾಹ್ನ ಸಂಭವಿಸಿದೆ. ಪಾವೂರು ನಿವಾಸಿ ನೌಫಲ್ ಅಪಘಾತದಿಂದ ಮೃತಪಟ್ಟವರು. ನೌಫಲ್‍ ಶನಿವಾರ ಬೆಳಿಗ್ಗೆ ಬಿ.ಸಿ.ರೋಡ್ ಕೈಕಂಬ ನಿವಾಸಿ ಉಸ್ಮಾನ್ ಎಂಬವರಿಗೆ ಸೇರಿದ ಸ್ವಿಫ್ಟ್ ಕಾರು ಖರೀದಿಸಿ ಅದನ್ನು ತೆಗೆದುಕೊಂಡು ಹೋಗುವ ವೇಳೆ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ.

ಡಿವೈಡರ್ ಗೆ ಕಾರು ಡಿಕ್ಕಿ : ಚಾಲಕ ಸ್ಥಳದಲ್ಲೇ ಮೃತ್ಯು Read More »

error: Content is protected !!
Scroll to Top