ಅಪಘಾತ

ಎರಡು ಬೈಕ್‍ ಗಳ ನಡುವೆ ಡಿಕ್ಕಿ | ಓರ್ವರಿಗೆ ಗಂಭೀರ ಗಾಯ

ಪುತ್ತೂರು: ಮುಕ್ರುಂಪಾಡಿಯಲ್ಲಿ ಬೈಕ್ ಗಳ ನಡುವೆ ಭೀಕರ ಅಪಘಾತ ಸಂಭವಿಸಿ  ಓರ್ವ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಪುತ್ತೂರು ಖಾಸಗಿ ಆಸ್ಪತ್ರೆಯ ಸಿಬ್ಬಂದಿ ಸಂತೋಷ್ ಶೆಟ್ಟಿ ಮತ್ತು ಕಾಸರಗೋಡಿನ ಉದಯ ಎಂಬವರ ಬೈಕ್ ಗಳು ಮಾಣಿ ಮೈಸೂರು ಹೈವೇಯ ಪುತ್ತೂರಿನ ಮುಕ್ರುಂಪಾಡಿಯಲ್ಲಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಇಬ್ಬರಿಗೂ ಗಾಯವಾಗಿದೆ. ಓರ್ವರು ಗಂಭೀರ ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರನ್ನು ಕೂಡಲೇ ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಮಹಾವೀರ ಆಸ್ಪತ್ರೆಗೆ ತನ್ನ ಕಾರಿನಲ್ಲೇ ಸಾಗಿಸಿದ್ದಾರೆ ಎನ್ನಲಾಗಿದೆ.

ಎರಡು ಬೈಕ್‍ ಗಳ ನಡುವೆ ಡಿಕ್ಕಿ | ಓರ್ವರಿಗೆ ಗಂಭೀರ ಗಾಯ Read More »

ಪಾದಚಾರಿಗೆ ದ್ವಿಚಕ್ರ ವಾಹನ ಡಿಕ್ಕಿ

ಪುತ್ತೂರು : ರಸ್ತೆ ಬದಿ ನಿಂತಿದ್ದ ವ್ಯಕ್ತಿಯೊಬ್ಬರಿಗೆ ಡಿಕ್ಕಿ ಹೊಡೆದ ಘಟನೆ ಕೋಡಿಂಬಾಡಿ ಸಿಂಗಾರ ಮಂಟಪದ ಬಳಿ ನಡೆದಿದೆ. ಬೆಳಿಗ್ಗೆ ದ್ವಿಚಕ್ರ ವಾಹನ  ಸವಾರ ರೌಶೀನ್ ಎಂಬವರು ಉಪ್ಪಿನಂಗಡಿ ಕಡೆಯಿಂದ ಪುತ್ತೂರು ಕಡೆಗೆ ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ಸವಾರಿ ಮಾಡಿದ ಪರಿಣಾಮ ರಸ್ತೆಬದಿ ನಡೆದುಕೊಂಡು ಹೋಗುತ್ತಿದ್ದ ಪಾದಾಚಾರಿ ಹರಿಯಪ್ಪ ನಾಯ್ಕ ಎಂಬವರಿಗೆ ಹಿಂಬದಿಯಿಂದ ಡಿಕ್ಕಿಯಾಗಿದೆ. ಅಪಘಾತದಲ್ಲಿ ಹರಿಯಪ್ಪ ನಾಯ್ಕ ಮತ್ತು ದ್ವಿಚಕ್ರ ವಾಹನ ಸವಾರ ರೌಶೀನ್‌ ರಸ್ತೆಯಲ್ಲಿ ಬಿದ್ದು ಹರಿಯಪ್ಪ ನಾಯ್ಕ ರವರಿಗೆ ಗಾಯಗಳಾಗಿದ್ದು ಗಾಯಾಳು ಹರಿಯಪ್ಪ

ಪಾದಚಾರಿಗೆ ದ್ವಿಚಕ್ರ ವಾಹನ ಡಿಕ್ಕಿ Read More »

ಸ್ಕೂಟರ್–ಬೈಕ್ ಅಪಘಾತ : ಮೂರು ಮಂದಿಗೆ ಗಾಯ

ಪುತ್ತೂರು: ಬೈಕ್ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಮೂವರು ಗಾಯಗೊಂಡ ಘಟನೆ ಪುತ್ತೂರು – ಉಪ್ಪಿನಂಗಡಿ ರಸ್ತೆಯ ಕೇಪುಳು ಜಂಕ್ಷನ್ ನಲ್ಲಿ ನಡೆದಿದೆ. ಪುತ್ತೂರಿನಿಂದ ಉಪ್ಪಿನಂಗಡಿಗೆ ತೆರಳುತ್ತಿದ್ದ ಬೈಕ್ ಮತ್ತು ಕೇವುಳು ರಸ್ತೆಯಿಂದ ಮುಖ್ಯ ರಸ್ತೆಗೆ ಬರುತ್ತಿದ್ದ ಸ್ಕೂಟರ್ ನಡುವೆ ಅಪಘಾತ ಸಂಭವಿಸಿದೆ. ಸ್ಕೂಟರ್ ನಲ್ಲಿದ್ದ ಸವಾರ ಮತ್ತು ಹಿಂಬದಿ ಸವಾರ ಹಾಗು ಬೈಕ್ ಸವಾರನಿಗೆ ಗಾಯವಾಗಿದೆ.

ಸ್ಕೂಟರ್–ಬೈಕ್ ಅಪಘಾತ : ಮೂರು ಮಂದಿಗೆ ಗಾಯ Read More »

ರೈಲ್ವೇ ಹಳಿಯಲ್ಲಿ ಸೆಂಟ್ರಿಂಗ್‍ ಕಾರ್ಮಿಕ ರಾಧಾಕೃಷ್ಣ ನಾಯ್ಕರ ಮೃತದೇಹ ಪತ್ತೆ

ಪುತ್ತೂರು : ಸೆಂಟ್ರಿಂಗ್‍ ಕಾರ್ಮಿಕರೋರ್ವರ ಮೃತದೇಹ ಪುತ್ತೂರಿನ ಹಾರಾಡಿ ಸಮೀಪ ರೈಲು ಹಳಿಯಲ್ಲಿ ಗುರುವಾರ ಮಧ್ಯಾಹ ಪತ್ತೆಯಾಗಿದೆ. ಉಕ್ಕಿನಡ್ಕ ಸಮೀಪದ ಸರ್ಹಂಗಳ ನಿವಾಸಿ ತಿಮ್ಮ ನಾಯ್ಕ ಎಂಬವರ ಪುತ್ರ ಚನಿಯಪ್ಪ ಯಾನೆ ರಾಧಾಕೃಷ್ಣ ನಾಯ್ಕ (48) ಮೃತಪಟ್ಟವರು. ಸೆಂಟ್ರಿಂಗ್ ಕಾರ್ಮಿಕರಾದ ರಾಧಾಕೃಷ್ಣ ಪುತ್ತೂರು ಸಮೀಪದ ಕಬಕ ಪರಿಸರದಲ್ಲಿ ಕೆಲಸ ನಿರ್ವಹಿಸುತ್ತಿದ್ದು ವಾರಕ್ಕೊಮ್ಮೆ ಊರಿಗೆ ಬರುತ್ತಿದ್ದರು. ಬುಧವಾರ ಬೆಳಗ್ಗೆ ಮನೆಯಿಂದ ತೆರಳಿದ್ದರು ಎನ್ನಲಾಗಿದೆ. ಕಬಕ ಸ್ಟೇಶನ್ ವ್ಯಾಪ್ತಿಯ ರೈಲು ಹಳಿಯಲ್ಲಿ ಗುರುವಾರ ಮಧ್ಯಾಹ್ನ ಮೃತದೇಹ ಪತ್ತೆಯಾಗಿದ್ದು ಬುಧವಾರ ರಾತ್ರಿ

ರೈಲ್ವೇ ಹಳಿಯಲ್ಲಿ ಸೆಂಟ್ರಿಂಗ್‍ ಕಾರ್ಮಿಕ ರಾಧಾಕೃಷ್ಣ ನಾಯ್ಕರ ಮೃತದೇಹ ಪತ್ತೆ Read More »

ಅರಿಯಡ್ಕದಲ್ಲಿ ಸಿಡಿಲು ಬಡಿದು ಮನೆಗೆ ಹಾನಿ

ಪುತ್ತೂರು: ಭಾನುವಾರ ಸಂಜೆ ಸುರಿದ ಭಾರೀ ಮಳೆಯ ಸಂದರ್ಭ ಸಿಡಿಲು ಬಡಿದು    ಮನೆಯೊಂದಕ್ಕೆ ಅಪಾರ ಹಾನಿ ಉಂಟಾದ ಘಟನೆ ತಾಲೂಕಿನ ಅರಿಯಡ್ಕ ಗ್ರಾಮದ ಪಾಪೆಮಜಲು ಸಮೀಪದ ಪಾದಲಾಡಿ ಎಂಬಲ್ಲಿ ಸಂಭವಿಸಿದೆ. ಪಾದಲಾಡಿ ನಿವಾಸಿ ಶೇಖರ ಪೂಜಾರಿ ಎಂಬವರ ಮನೆಗೆ ಸಿಡಿಲು ಬಡಿದಿದೆ. ಗೋಡೆ ಬಿರುಕು ಬಿಟ್ಟಿದ್ದು ಟಿವಿ, ಫ್ರಿಜ್ ಮತ್ತಿತರ ಇಲೆಕ್ಟ್ರಾನಿಕ್ ಸೊತ್ತುಗಳು ಸುಟ್ಟು ಹೋಗಿವೆ. ವಿದ್ಯುತ್ ಲೈನ್ ಕೂಡಾ ಸುಟ್ಟು ಹೋಗಿದೆ. ಮನೆಯ ಹೊರಗೆ ಅಂಗಳದಲ್ಲಿದ್ದ ಸಾಕು ನಾಯಿ ಸಿಡಿಲಾಘಾತದಲ್ಲಿ ಮೃತಪಟ್ಟಿದೆ. ಸುಮಾರು ಐವತ್ತು ಸಾವಿರಕ್ಕೂ

ಅರಿಯಡ್ಕದಲ್ಲಿ ಸಿಡಿಲು ಬಡಿದು ಮನೆಗೆ ಹಾನಿ Read More »

ಸರಣಿ ಅಪಘಾತ : ಟ್ರಾಫಿಕ್ ಜಾಮ್‍

ಪುತ್ತೂರು: ಸರಣಿ ಅಪಘಾತ ಸಂಭವಿಸಿದ ಘಟನೆ ದರ್ಬೆ ನಿರೀಕ್ಷಣಾ ಮಂದಿರದ ಎದುರು ಇಂದು ಸಂಜೆ ನಡೆದಿದೆ. ಆಟೋ ರಿಕ್ಷಾ ಮತ್ತು ಎರಡು ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ. ಕಾರು ಚಾಲಕ ಆಟೋ ರಿಕ್ಷಾ ಹಾಗೂ ಇನ್ನೊಂದು ಕಾರಿಗೆ ಡಿಕ್ಕಿ ಹೊಡೆದಿದ್ದು, ಮೂರು ವಾಹನಗಳ ನಡುವೆ ಅಪಘಾತ ಸಂಭವಿಸಿದೆ. ಘಟನೆಯಿಂದಾಗಿ ಕೆಲ ಸಮಯ ಟ್ರಾಫಿಕ್ ಜಾಮ್ ಉಂಟಾಯಿತು. ಬಳಿಕ ಸಂಚಾರಿ ಠಾಣಾ ಪೊಲೀಸರು ಆಗಮಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಸರಣಿ ಅಪಘಾತ : ಟ್ರಾಫಿಕ್ ಜಾಮ್‍ Read More »

ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಭಾಸ್ಕರ್ ನಿಧನ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಭಾಸ್ಕರ್ (49) ಅಪಘಾತದಿಂದಾಗಿ ಇಂದು ಬೆಳಿಗ್ಗೆ ನಿಧನರಾಗಿದ್ದಾರೆ. ನೇರಳಕಟ್ಟೆ ಪೆರಾಜೆ ಬೀರಕೋಡಿ ನಿವಾಸಿಯಾಗಿರುವ ಭಾಸ್ಕರ್ ಅವರು ಗುರುವಾರ ಮಂಗಳೂರಿನಲ್ಲಿ ಬೈಕ್ ಚಲಾಯಿಸುತ್ತಿದ್ದ ಸಂದರ್ಭ ನ್ಯಾನೋ ಕಾರು ಡಿಕ್ಕಿ ಹೊಡೆದಿತ್ತು. ತೀವೃ ಗಾಯಗೊಂಡ ಅವರನ್ನು ಮಂಗಳೂರು ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಇಂದು ಬೆಳಿಗ್ಗೆ ನಿಧನರಾದರು.

ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಭಾಸ್ಕರ್ ನಿಧನ Read More »

ದ್ವಿಚಕ್ರ ವಾಹನಗಳ ನಡುವೆ ಅಪಘಾತ : ಓರ್ವ ಮೃತ್ಯು

ಸುಳ್ಯ : ದ್ವಿಚಕ್ರ ವಾಹನ ಅಪಘಾತದ ಸಂಭವಿಸಿದ ಪರಿಣಾಮ ಒಬ್ಬರು ಮೃತಪಟ್ಟ ಘಟನೆ ಸುಳ್ಯದ ಪೈಚಾರು ಸೋಣಂಗೇರಿ ಎಂಬಲ್ಲಿಯ ಆರ್ತಾಜೆಯಲ್ಲಿ ನಡೆದಿದೆ. ಐವರ್ನಾಡು ಗ್ರಾಮದ ಪಾಲೆಪ್ಪಾಡಿ ನಿವಾಸಿ, ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಉದ್ಯೋಗಿ ಭೋಜಪ್ಪ  (50) ಮೃತಪಟ್ಟವರು. ಸುಳ್ಯ ಕಡೆಯಿಂದ ಸೋಣಂಗೇರಿ ಕಡೆಗೆ ಸಂಚರಿಸುತ್ತಿದ್ದ ಬುಲೆಟ್ ಹಾಗೂ ಐವರ್ನಾಡಿನಿಂದ ಸುಳ್ಯ ಕಡೆಗೆ ಸಾಗುತ್ತಿದ್ದ ಭೋಜಪ್ಪ ಅವರ ಹೋಂಡ ಬೈಕ್ ನಡುವೆ ಡಿಕ್ಕಿಯಾಗಿದೆ. ಬುಲೆಟ್‌ನಲ್ಲಿದ್ದ ನೆಲ್ಲೂರು ಕೆಮ್ರಾಜಿಯ ಮಂದ್ರಪ್ಪಾಡಿ ಅರುಣ್ ಹಾಗೂ ವಸಂತ ಅವರು

ದ್ವಿಚಕ್ರ ವಾಹನಗಳ ನಡುವೆ ಅಪಘಾತ : ಓರ್ವ ಮೃತ್ಯು Read More »

ಚಾಲಕನ ನಿಯಂತ್ರಣ ತಪ್ಪಿ ಅಡಿಕೆ ತೋಟಕ್ಕೆ ಬಿದ್ದ ಕಾರು : ಮಹಿಳೆ ಮೃತ್ಯು, ಚಾಲಕ ಗಂಭೀರ

ವಿಟ್ಲ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಅಡಿಕೆ ತೋಟಕ್ಕೆ ಬಿದ್ದ ಪರಿಣಾಮ ಮಹಿಳೆಯೋರ್ವರು ಮೃತಪಟ್ಟ ಘಟನೆ ಬಿ.ಸಿ.ರೋಡು ಬೆಳ್ತಂಗಡಿ ರಾಜ್ಯ ಹೆದ್ದಾರಿಯ ಬಾಂಬಿಲ ಎಂಬಲ್ಲಿ ನಡೆದಿದೆ. ಕೋಡಿಯಾಲ್ ಬೈಲು ನಿವಾಸಿ ಭಾಗೀರಥಿ (58) ಮೃತಪಟ್ಟ ಮಹಿಳೆ ಎಂದು ಗುರುತಿಸಲಾಗಿದೆ. ಭಾಗೀರಥಿ ಅವರು ಮಂಗಳೂರು ಕೊಡಿಯಾಲ್ ಬೈಲು ನಿವಾಸಿ ಪಿಡಬ್ಲೂಡಿ ಇಂಜಿನಿಯರ್ ಗೋಪಾಲರವರ ಸಹೋದರಿ ಎನ್ನಲಾಗಿದೆ. ಚಾಲಕ ರೂಪೇಶ್ (40) ಗಂಭೀರ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ. ರೂಪೇಶ್ ಅವರ ಪತ್ನಿ ಸುಚಿತ್ರ

ಚಾಲಕನ ನಿಯಂತ್ರಣ ತಪ್ಪಿ ಅಡಿಕೆ ತೋಟಕ್ಕೆ ಬಿದ್ದ ಕಾರು : ಮಹಿಳೆ ಮೃತ್ಯು, ಚಾಲಕ ಗಂಭೀರ Read More »

ಪ್ರಪಾತಕ್ಕೆ ಬಿದ್ದ ಖಾಸಗಿ ಬಸ್ : ಚಾಲಕ ಮೃತ್ಯು

ಪುತ್ತೂರು: ಉದನೆ ಸಮೀಪದ ಎಂಜಿರದಲ್ಲಿ ಖಾಸಗಿ ಬಸ್‌ ಪ್ರಪಾತಕ್ಕೆ ಬಿದ್ದು ಚಾಲಕ ಮೃತಪಟ್ಟ ಘಟನೆ ಇಂದು ನಸುಕಿನ ಜಾವ ನಡೆದಿದೆ. ಬಸ್ ಚಾಲಕ ಮತ್ತು ನಿರ್ವಾಹಕರಿಬ್ಬರೇ ಇದ್ದ “ಸುಬ್ರಹ್ಮಣ್ಯ” ಎಂಬ ಫಲಕವಿರುವ ಬಸ್ ಎಂಜಿರ ದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದೆ. ಘಟನೆಯಿಂದ ಚಾಲಕ ಭರತ್‌ ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಿರ್ವಾಹಕ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

ಪ್ರಪಾತಕ್ಕೆ ಬಿದ್ದ ಖಾಸಗಿ ಬಸ್ : ಚಾಲಕ ಮೃತ್ಯು Read More »

error: Content is protected !!
Scroll to Top