ಅಪಘಾತ

ಡಿ.ಕೆ.ಸುರೇಶ್‌ ತಂಗಿಯ ಸೋಗಿನಲ್ಲಿ 14.600 ಕೆಜಿ ಚಿನ್ನ ಖರೀದಿಸಿ ವಂಚಿಸಿದ ಮಹಿಳೆ

ಚಿತ್ರನಟನಿಂದ ಡಿಕೆಸು ಧ್ವನಿಯಲ್ಲಿ ಕರೆಮಾಡಿಸಿ ಬೆದರಿಕೆಯೊಡ್ಡಿದ್ದ ಖಿಲಾಡಿ ಬೆಂಗಳೂರು: ಕಾಂಗ್ರೆಸ್ ಮಾಜಿ ಸಂಸದ ಡಿ.ಕೆ ಸುರೇಶ್ ಸಹೋದರಿ ಎಂದು ಹೇಳಿಕೊಂಡು ಮಹಿಳೆಯೊಬ್ಬಳು ಬರೋಬ್ಬರಿ 14.600 ಕೆಜಿ ಚಿನ್ನಾಭರಣ ಖರೀದಿಸಿ ವಂಚನೆ ಮಾಡಿರುವ ಪ್ರಕರಣ ಬೆಂಗಳೂರಿನಲ್ಲಿ ಸಂಭವಿಸಿದೆ. ಪೊಲೀಸರು ಮಹಿಳೆ ಹಾಗೂ ಆಕೆಯ ಪತಿಯನ್ನು ಬಂಧಿಸಿದ್ದು, ಇಬ್ಬರನ್ನು ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೊಪ್ಪಿಸಿದೆ.ಚಂದ್ರ ಲೇಔಟ್ ಪೊಲೀಸರು ನಿನ್ನೆ ಆರೋಪಿ ಐಶ್ವರ್ಯ ಗೌಡ ಆಕೆಯ ಪತಿ ಹರೀಶ್‌ನನ್ನು ಬಂಧಿಸಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಬಳಿಕ ಕೋರಮಂಗಲದ […]

ಡಿ.ಕೆ.ಸುರೇಶ್‌ ತಂಗಿಯ ಸೋಗಿನಲ್ಲಿ 14.600 ಕೆಜಿ ಚಿನ್ನ ಖರೀದಿಸಿ ವಂಚಿಸಿದ ಮಹಿಳೆ Read More »

ಲಾರಿ ಮತ್ತು ಬೈಕ್  ನಡುವೆ ಭೀಕರ ಅಪಘಾತ: ಬೈಕ್ ನಲ್ಲಿದ್ದ ಪುಟ್ಟ ಮಗು  ಸ್ಥಳದಲ್ಲೇ  ಮೃತ್ಯು

ಬಂಟ್ವಾಳ: ಲಾರಿ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ ಘಟನೆ ಮಾಣಿ ಸಮೀಪದ ಗಡಿಯಾರ ಎಂಬಲ್ಲಿ ಡಿ.28 ರಂದು ನಡೆದಿದೆ. ಘಟನೆಯಲ್ಲಿ ಒಂದು ಮಗು ಮೃತಪಟ್ಟಿದ್ದಾಗಿ ತಿಳಿದು ಬಂದಿದೆ. ಬೆಳ್ತಂಗಡಿ ಸಮೀಪದ ನಾವುರ ಮುರ ನಿವಾಸಿ ಸಲೀಮ್ ರವರು ಕುಟುಂಬ ಸಮೇತ ಸಂಚರಿಸುತ್ತಿದ್ದ ಬೈಕ್ ಅಪಘಾತಕ್ಕೆ ಒಳಗಾಗಿದ್ದು  ಚಾಲಕ ಸಲೀಂ ಅವರಿಗೆ ಗಂಭೀರ  ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಲಾರಿ ಮತ್ತು ಬೈಕ್  ನಡುವೆ ಭೀಕರ ಅಪಘಾತ: ಬೈಕ್ ನಲ್ಲಿದ್ದ ಪುಟ್ಟ ಮಗು  ಸ್ಥಳದಲ್ಲೇ  ಮೃತ್ಯು Read More »

ನಿಯಂತ್ರಣ ತಪ್ಪಿ ಕಾರು ಗುಂಡಿಗೆ | ಮೂವರು ಮೃತ್ಯು

ಪುತ್ತೂರು: ನಿಯಂತ್ರಣ ತಪ್ಪಿದ ಕಾರೊಂದು ಗುಂಡಿಗೆ ಬಿದ್ದ ಪರಿಣಾಮ ಮೂವರು ಮೃತಪಟ್ಟ ಘಟನೆ ಪುತ್ತೂರಿನ ಬೈಪಾಸ್ ರಸ್ತೆಯಲ್ಲಿ ನಡೆದಿದೆ. ಮೃತಪಟ್ಟವರು ಸುಳ್ಯ ಜಟ್ಟಿಪಳ್ಳ ನಿವಾಸಿಗಳೆನ್ನಲಾಗಿದ್ದು, ಅಣ್ಣು ನಾಯ್ಕ, ರಮೇಶ್ ನಾಯ್ಕ್ ಹಾಗೂ ಇನ್ನೊಬ್ಬರ ಹೆಸರು ತಿಳಿದು ಬಂದಿಲ್ಲ. ಮೃತ ದೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಪುತ್ತೂರು ಸಂಚಾರಿ ಠಾಣಾ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಮೃತಪಟ್ಟವರ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

ನಿಯಂತ್ರಣ ತಪ್ಪಿ ಕಾರು ಗುಂಡಿಗೆ | ಮೂವರು ಮೃತ್ಯು Read More »

ಶಾರ್ಟ್ ಸರ್ಕ್ಯೂಟ್‍ ನಿಂದ ಬೆಂಕಿಗಾಹುತಿಯಾದ ಸಮತ ಬೇಕರಿಗೆ ಮಾಜಿ ಶಾಸಕ ಸಂಜೀವ ಮಠಂದೂರು ಬೇಟಿ  

ಉಪ್ಪಿನಂಗಡಿ  : ಶಾರ್ಟ್‍ ಸರ್ಕ್ಯೂಟ್‍ ನಿಂದ ಬೆಂಕಿ ಬಿದ್ದ ಪರಿಣಾಮ ಸಮತ ಸ್ವೀಟ್ಸ್ ಬೇಕರಿ ಸಂಪೂರ್ಣ ಭಸ್ಮವಾದ ಘಟನೆ ಉಪ್ಪಿನಂಗಡಿ ಬಸ್ ನಿಲ್ದಾಣದ ಬಳಿ ನಡೆದಿದೆ. ಬೆಂಕಿಗೆ ಆಹುತಿಯಾದ  ಸಮತ ಸ್ವೀಟ್ಸ್ ಬೇಕರಿಗೆ ಮಾಜಿ ಶಾಸಕ ಸಂಜೀವ ಮಠಂದೂರು ಬೇಟಿ  ನೀಡಿ ಪರಿಶೀಲನೆ ನಡೆಸಿದ್ದಾರೆ.  ಈ ಸಂದರ್ಭದಲ್ಲಿ  ಸ್ಥಳಿಯ ಗ್ರಾಮ ಪಂಚಾಯತ್ ಸದಸ್ಯರಾದ ಧನಂಜಯ್ ನಟ್ಟಿಬೈಲ್,    ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಉಮೇಶ್ ಶನೈ ರಾಮನಗರ, ಬಿಜೆಪಿ ಉಪ್ಪಿನಂಗಡಿ  ಶಕ್ತಿ ಕೇಂದ್ರ ಅಧ್ಯಕ್ಷ ಪ್ರಸಾದ್ ಭಂಡಾರಿ, ಹಾಗೂ

ಶಾರ್ಟ್ ಸರ್ಕ್ಯೂಟ್‍ ನಿಂದ ಬೆಂಕಿಗಾಹುತಿಯಾದ ಸಮತ ಬೇಕರಿಗೆ ಮಾಜಿ ಶಾಸಕ ಸಂಜೀವ ಮಠಂದೂರು ಬೇಟಿ   Read More »

ಶಾರ್ಟ್ ಸರ್ಕ್ಯೂಟ್‍ ನಿಂದ ಬೇಕರಿಗೆ ಬೆಂಕಿ : ಸಂಪೂರ್ಣ ಭಸ್ಮ

ಉಪ್ಪಿನಂಗಡಿ: ಬೇಕರಿಯೊಂದಕ್ಕೆ ಶಾರ್ಟ್‍ ಸರ್ಕ್ಯೂಟ್‍ ನಿಂದ ಬೆಂಕಿ ಬಿದ್ದ ಪರಿಣಾಮ ಬೇಕರಿ ಸಂಪೂರ್ಣ ಭಸ್ಮವಾದ ಘಟನೆ ಉಪ್ಪಿನಂಗಡಿ ಬಸ್ ನಿಲ್ದಾಣದ ಬಳಿ ನಡೆದಿದೆ. ಬಸ್ ನಿಲ್ದಾಣದ ಬಳಿಯಿರುವ ಸಮತ ಬೇಕರಿಗೆ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿದೆ. ಅಂಗಡಿ ಸಂಪೂರ್ಣ ಸುಟ್ಟಿದ್ದು ಬೆಂಕಿ ನಂದಿಸುವ ಪ್ರಯತ್ನ ಅಗ್ನಿ ಶಾಮಕ ದಳದ ಸಿಬ್ಬಂದಿಗಳಿಂದ ನಡೆಯುತ್ತಿದೆ ಎಂದು ತಿಳಿದು ಬಂದಿದೆ.

ಶಾರ್ಟ್ ಸರ್ಕ್ಯೂಟ್‍ ನಿಂದ ಬೇಕರಿಗೆ ಬೆಂಕಿ : ಸಂಪೂರ್ಣ ಭಸ್ಮ Read More »

ಸಿಲಿಂಡರ್ ಸ್ಪೋಟದಲ್ಲಿ ಚಿಕಿತ್ಸೆ ಫಲಿಸದೆ  ಇಬ್ಬರು ಮಾಲಾದಾರಿಗಳು ಮೃತ್ಯು

ಹುಬ್ಬಳ್ಳಿ: ಮಲಗಿದ್ದ ವೇಳೆ ಸಿಲಿಂಡರ್ ಸ್ಫೋಟಗೊಂಡು 9 ಅಯ್ಯಪ್ಪ ಮಾಲಾಧಾರಿಗಳಿಗೆ ತೀವ್ರ ಗಾಯಗಳಾಗಿದ್ದ ಘಟನೆಗೆ ಸಂಬಂಧಿಸಿದಂತೆ ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃತಪಟ್ಟಿದ್ದಾರೆ. ಮೃತಪಟ್ಟ ಅಯ್ಯಪ್ಪ ಮಾಲಾಧಾರಿಗಳನ್ನು ನಿಜಲಿಂಗಪ್ಪ ಮಲ್ಲಪ್ಪ ಬೇಪೂರು (58), ಸಂಜಯ್ ಪ್ರಕಾಶ್ ಸವದತ್ತಿ (17) ಎಂದು ಗುರುತಿಸಲಾಗಿದೆ. ಹುಬ್ಬಳ್ಳಿಯ ಅಚ್ಚವನ ಕಾಲೋನಿಯ ಈಶ್ವರ ದೇವಾಲಯದಲ್ಲಿ ಮೂರು ದಿನಗಳ ಹಿಂದೆ ಸಿಲಿಂಡರ್‌ನಿಂದ ಗ್ಯಾಸ್‌ ಸೋರಿಕೆಯಾಗಿ ಬೆಂಕಿ ಅವಘಡ ಸಂಭವಿಸಿದ್ದು. ಘಟನೆಯಲ್ಲಿ ಒಂಬತ್ತು ಜನ ಮಾಲಾಧಾರಿಗಳಿಗೆ ಗಾಯಗಳಾಗಿವೆ. ಗಾಯಾಳುಗಳಿಗೆ ಕಳೆದ ಮೂರು ದಿನಗಳಿಂದ ಹುಬ್ಬಳ್ಳಿ ಕಿಮ್ಸ್

ಸಿಲಿಂಡರ್ ಸ್ಪೋಟದಲ್ಲಿ ಚಿಕಿತ್ಸೆ ಫಲಿಸದೆ  ಇಬ್ಬರು ಮಾಲಾದಾರಿಗಳು ಮೃತ್ಯು Read More »

ಬಳ್ಳಾರಿ : ಬೆಂಕಿಗೆ ಆಹುತಿಯಾದ ಮೂರು ಅಂಗಡಿ..!

ಬಳ್ಳಾರಿ : ಆಕಸ್ಮಿಕ ಬೆಂಕಿ ತಗುಲಿ ಮೂರು ಅಂಗಡಿಗಳು ಸುಟ್ಟು ಹೋಗಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ತೋರಣಗಲ್‌ನ ಜಿಂದಾಲ್ ಕಾರ್ಖಾನೆ ಬೈಪಾಸ್ ಬಳಿ ನಡೆದಿದೆ. ಶಾಪ್, ಎಲೆಕ್ನಿಕಲ್ ಹಾಗೂ ಹೋಟೆಲ್ ಅಂಗಡಿಗಳಿಗೆ ಬೆಂಕಿ ತಗುಲಿದೆ. ಬೆಂಕಿಯ ಬಲೆಗೆ ಸಿಲುಕಿ ಅಂಗಡಿಯಲ್ಲಿದ್ದ ವಸ್ತುಗಳೆಲ್ಲಾ ಸುಟ್ಟು ಭಸ್ಮವಾಗಿದೆ.  ಎಲೆಕ್ನಿಕ್ ಬ್ಯಾಟರಿಗಳು, ಎಲೆಕ್ನಿಕ್ ವಸ್ತುಗಳು ಹಾಗೂ ಹೋಟೆಲ್‌ನ ಫ್ರಿಜ್, ಟೇಬಲ್, ಚೇರ್ ಸೇರಿ ಒಟ್ಟು ಅಂದಾಜು 30 ಲಕ್ಷದ ವಸ್ತುಗಳಿಗೆ ಬೆಂಕಿ ತಗುಲಿದೆ ಎನ್ನಲಾಗಿದೆ. ಬೆಂಕಿ ತಗುಲಿ ಸುತ್ತಲೆಲ್ಲಾ

ಬಳ್ಳಾರಿ : ಬೆಂಕಿಗೆ ಆಹುತಿಯಾದ ಮೂರು ಅಂಗಡಿ..! Read More »

ಚಾಲಕನ ನಿರ್ಲ್ಯಕ್ಷ್ಯತನದಿಂದ ರೈಲ್ವೇ ಗೇಟ್ ಗೆ ಪಿಕಪ್‍ ಡಿಕ್ಕಿ

ಮುಲ್ಕಿ:  ಹಳೆಯಂಗಡಿ ರೈಲ್ವೇ ಗೇಟ್ ಬಳಿ ರೈಲು ಬರುವ ಕೆಲವೇ ಹೊತ್ತಲ್ಲಿ ಪಿಕಪ್ ವಾಹನ ಚಾಲಕನ ನಿರ್ಲಕ್ಷ್ಯತನದಿಂದ ರೈಲ್ವೇ ಗೇಟ್ ಗೆ ಡಿಕ್ಕಿಯಾದ ಘಟನೆ ನಡೆದಿದೆ. ಡಿಕ್ಕಿಯಾದ ಪರಿಣಾಮ ರೈಲ್ವೆ ಗೇಟ್‍ ತುಂಡಾಗಿದ್ದು. ಯಾವುದೇ ರೀತಿಯ ಪ್ರಾಣಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ. ರೈಲ್ವೇ ಗೇಟ್ ಸಿಬ್ಬಂದಿ ರೈಲು ಬರುವ ಹೊತ್ತಿನಲ್ಲಿ ಗೇಟ್ ಹಾಕಲು ಮುಂದಾಗುವ ವೇಳೆ ಕಿನ್ನಿಗೋಳಿ ಕಡೆಯಿಂದ ಹಳೆಯಂಗಡಿ ಕಡೆಗೆ ಹೋಗುತ್ತಿದ್ದ ಪಿಕಪ್ ವಾಹನ ಇಂದ್ರ ನಗರ ರೈಲ್ವೇ ಗೇಟ್ ತಲುಪುತ್ತಿದ್ದಂತೆ ಪಿಕಪ್ ಚಾಲಕ

ಚಾಲಕನ ನಿರ್ಲ್ಯಕ್ಷ್ಯತನದಿಂದ ರೈಲ್ವೇ ಗೇಟ್ ಗೆ ಪಿಕಪ್‍ ಡಿಕ್ಕಿ Read More »

ಕೊಡಪಾನ  ತೆಗೆಯುವಾಗ ಬಾವಿಯೊಳಗೆ ಬಿದ್ದು ವ್ಯಕ್ತಿ ಮೃತ್ಯು

ಮಣಿಪಾಲ : ಬಾವಿಯೊಳಗೆ ಬಿದ್ದ ಕೊಡಪಾನವನ್ನು  ತೆಗೆಯಲು ಹೋಗಿ ಕಾಲು ಜಾರಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ಸರಳೆಬೆಟ್ಟುವಿನ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಬಳಿ ನಡೆದಿದೆ. ಮೃತಪಟ್ಟ ವ್ಯಕ್ತಿ ಸರಳಬೆಟ್ಟು ನಿವಾಸಿ ಕೂಲಿ ಕಾರ್ಮಿಕ ಶಿವ ನಾಯ್ಕ(50) ಎಂದು ಗುರುತಿಸಲಾಗಿದೆ. ಕಲ್ಯಾಣಿ ಎಂಬವರ ಬಾವಿಯಲ್ಲಿ ಬಿದ್ದಿರುವ ಕೊಡಪಾನವನ್ನು ತೆಗೆಯಲು ಬಾವಿಗೆ ಇಳಿಯುವಾಗ ಈ ದುರ್ಘಟನೆ ನಡೆದಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದವರು ಭೇಟಿ ನೀಡಿ,  ಶಿವ ನಾಯ್ಕ ಅವರನ್ನು ಬಾವಿಯಿಂದ ಮೇಲೆಕ್ಕೆತ್ತಿ,  ಮಣಿಪಾಲ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ದಾರಿ

ಕೊಡಪಾನ  ತೆಗೆಯುವಾಗ ಬಾವಿಯೊಳಗೆ ಬಿದ್ದು ವ್ಯಕ್ತಿ ಮೃತ್ಯು Read More »

ಕಾಲು ಜಾರಿ ಬಿದ್ದು ವ್ಯಕ್ತಿ ಮೃತ್ಯು

ಬೆಳ್ತಂಗಡಿ : ಕಾಡಿಗೆ ಸೊಪ್ಪು ತರಲು ಹೋದ ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ಮಾಲ್ಯಳ ಕಾಡಿನಲ್ಲಿ ನಡೆದಿದೆ. ಪೊದಿಂಬಿಲ ನಿವಾಸಿ ರಾಜೇಶ್ ಆಚಾರ್ಯ (36) ಮೃತಪಟ್ಟವರು. ಸೋಮವಾರ ಮಾಲ್ಯಳ ಕಾಡಿಗೆ ಮಕ್ಕಳಿಗೆ ಮದ್ದಿನ ಸೊಪ್ಪು ತರಲು ಹೋದ ವ್ಯಕ್ತಿ ವಾಪಾಸು ಮನೆಗೆ ಬಾರದ ಹಿನ್ನಲೆಯಲ್ಲಿ ಮನೆಯವರು ಮತ್ತು ಸಾರ್ವಜನಿಕರು ಹುಡುಕಾಟ ನಡೆಸಿದಾಗ ಕಲ್ಲಿನ ಸೆರೆಯಲ್ಲಿ ಸಿಲುಕಿದ ರೀತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಮೃತರು ತಂದೆ ಆನಂದ ಆಚಾರ್ಯ ಅವರನ್ನು ಅಗಲಿದ್ದಾರೆ. ಮೃತರು ಬೆಳ್ತಂಗಡಿಯ ಸಂತೆಕಟ್ಟೆಯಲ್ಲಿ

ಕಾಲು ಜಾರಿ ಬಿದ್ದು ವ್ಯಕ್ತಿ ಮೃತ್ಯು Read More »

error: Content is protected !!
Scroll to Top