ಅಪಘಾತ

ಕೊಡಪಾನ  ತೆಗೆಯುವಾಗ ಬಾವಿಯೊಳಗೆ ಬಿದ್ದು ವ್ಯಕ್ತಿ ಮೃತ್ಯು

ಮಣಿಪಾಲ : ಬಾವಿಯೊಳಗೆ ಬಿದ್ದ ಕೊಡಪಾನವನ್ನು  ತೆಗೆಯಲು ಹೋಗಿ ಕಾಲು ಜಾರಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ಸರಳೆಬೆಟ್ಟುವಿನ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಬಳಿ ನಡೆದಿದೆ. ಮೃತಪಟ್ಟ ವ್ಯಕ್ತಿ ಸರಳಬೆಟ್ಟು ನಿವಾಸಿ ಕೂಲಿ ಕಾರ್ಮಿಕ ಶಿವ ನಾಯ್ಕ(50) ಎಂದು ಗುರುತಿಸಲಾಗಿದೆ. ಕಲ್ಯಾಣಿ ಎಂಬವರ ಬಾವಿಯಲ್ಲಿ ಬಿದ್ದಿರುವ ಕೊಡಪಾನವನ್ನು ತೆಗೆಯಲು ಬಾವಿಗೆ ಇಳಿಯುವಾಗ ಈ ದುರ್ಘಟನೆ ನಡೆದಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದವರು ಭೇಟಿ ನೀಡಿ,  ಶಿವ ನಾಯ್ಕ ಅವರನ್ನು ಬಾವಿಯಿಂದ ಮೇಲೆಕ್ಕೆತ್ತಿ,  ಮಣಿಪಾಲ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ದಾರಿ […]

ಕೊಡಪಾನ  ತೆಗೆಯುವಾಗ ಬಾವಿಯೊಳಗೆ ಬಿದ್ದು ವ್ಯಕ್ತಿ ಮೃತ್ಯು Read More »

ಕಾಲು ಜಾರಿ ಬಿದ್ದು ವ್ಯಕ್ತಿ ಮೃತ್ಯು

ಬೆಳ್ತಂಗಡಿ : ಕಾಡಿಗೆ ಸೊಪ್ಪು ತರಲು ಹೋದ ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ಮಾಲ್ಯಳ ಕಾಡಿನಲ್ಲಿ ನಡೆದಿದೆ. ಪೊದಿಂಬಿಲ ನಿವಾಸಿ ರಾಜೇಶ್ ಆಚಾರ್ಯ (36) ಮೃತಪಟ್ಟವರು. ಸೋಮವಾರ ಮಾಲ್ಯಳ ಕಾಡಿಗೆ ಮಕ್ಕಳಿಗೆ ಮದ್ದಿನ ಸೊಪ್ಪು ತರಲು ಹೋದ ವ್ಯಕ್ತಿ ವಾಪಾಸು ಮನೆಗೆ ಬಾರದ ಹಿನ್ನಲೆಯಲ್ಲಿ ಮನೆಯವರು ಮತ್ತು ಸಾರ್ವಜನಿಕರು ಹುಡುಕಾಟ ನಡೆಸಿದಾಗ ಕಲ್ಲಿನ ಸೆರೆಯಲ್ಲಿ ಸಿಲುಕಿದ ರೀತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಮೃತರು ತಂದೆ ಆನಂದ ಆಚಾರ್ಯ ಅವರನ್ನು ಅಗಲಿದ್ದಾರೆ. ಮೃತರು ಬೆಳ್ತಂಗಡಿಯ ಸಂತೆಕಟ್ಟೆಯಲ್ಲಿ

ಕಾಲು ಜಾರಿ ಬಿದ್ದು ವ್ಯಕ್ತಿ ಮೃತ್ಯು Read More »

ಫುಟ್‌ಪಾತ್‌ನಲ್ಲಿ ಮಲಗಿದ್ದವರ ಮೇಲೆ ಚಲಿಸಿದ ಟ್ರಕ್‌ : ಮೂವರು ಮೃತ್ಯು, ಆರು ಮಂದಿಗೆ ಗಾಯ

ಪುಣೆ: ಫುಟ್‌ಪಾತ್‌ನಲ್ಲಿ ಮಲಗಿದ್ದ ಕಾರ್ಮಿಕರ ಮೇಲೆ ಟ್ರಕ್ ಹರಿದು ಇಬ್ಬರು ಪುಟ್ಟ ಮಕ್ಕಳು ಸೇರಿದಂತೆ ಮೂವರು ಮೃತಪಟ್ಟಿರುವ ದಾರುಣ ಘಟನೆ ಭಾನುವಾರ ತಡರಾತ್ರಿ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಚಾಲಕ ಪಾನಮತ್ತನಾಗಿದ್ದು ಈ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ರಾತ್ರಿ ಸುಮಾರು 1 ಗಂಟೆ ವೇಳೆಗೆ ಅಪಘಾತ ಸಂಭವಿಸಿದೆ.ಮೃತರನ್ನು ವಿಶಾಲ್ ಪವಾರ್ (22) ಮತ್ತು ಪುಟ್ಟ ಮಕ್ಕಳಾದ ವೈಭವಿ ಪವಾರ್(1), ವೈಭವ್ ರಿತೇಶ್ ಪವಾರ್ (2) ಎಂದು ಗುರುತಿಸಲಾಗಿದೆ. ಎಲ್ಲರೂ ಅಮರಾವತಿಯವರಾಗಿದ್ದಾರೆ. ಪುಣೆಯ ವಾಘೋಲಿಯಲ್ಲಿ ಮಧ್ಯರಾತ್ರಿ 1ರ ಸುಮಾರಿಗೆ ಪಾನಮತ್ತ

ಫುಟ್‌ಪಾತ್‌ನಲ್ಲಿ ಮಲಗಿದ್ದವರ ಮೇಲೆ ಚಲಿಸಿದ ಟ್ರಕ್‌ : ಮೂವರು ಮೃತ್ಯು, ಆರು ಮಂದಿಗೆ ಗಾಯ Read More »

ಪೆರ್ಲ ಅಂಗಡಿ ಕಟ್ಟಡವೊಂದರಲ್ಲಿ ತಡ ರಾತ್ರಿ ಅಗ್ನಿ ಅವಘಡ | ಹೊತ್ತಿ ಉರಿದ ಐದು ಅಂಗಡಿಗಳು

ಪೆರ್ಲ : ಪೇಟೆಯ ಕಟ್ಟಡವೊಂದಕ್ಕೆ ನಿನ್ನೆ ತಡ ರಾತ್ರಿ ಬೆಂಕಿ ಹೊತ್ತಿದ್ದು, ಐದು ಅಂಗಡಿಗಳು ಸಂಪೂರ್ಣವಾಗಿ  ಉರಿದು ನಾಶವಾದ ಘಟನೆ ನಡೆದಿದೆ. ಇಲ್ಲಿನ ಬದಿಯಡ್ಕ ಪುತ್ತೂರು ರಸ್ತೆಯ ಎಡಭಾಗದಲ್ಲಿರುವ ಪೂಜಾ ಫ್ಯಾನ್ಸಿ, ಪೈಗಳ ಕ್ಲೋತ್ ಸ್ಟೋರ್ ಸಹಿತ ಪೇಪರ್ ವಿತರಣ ಸೆಂಟರ್,ಪ್ರವೀಣ್ ಆಟೋಮೊಬೈಲ್ಸ್,ಸದಾತ್ ಸ್ಟೋರ್, ಗೌತಮ್ ಕೋಲ್ಡ್ ಹೌಸ್ ಎಂಬಿ ಅಂಗಡಿ ಮುಂಗಟ್ಟು ಈ ಕಟ್ಟಡದಲ್ಲಿ ಕಾರ್ಯಚರಿಸುತ್ತಿದ್ದೂ ಸಂಪೂರ್ಣ ಬೆಂಕಿಗೆ ಅಹುತಿಯಾಗಿದೆ. ಮಧ್ಯರಾತ್ರಿ 12 ಗಂಟೆಯ ಬಳಿಕ ಬೆಂಕಿ ಕಾಣಿಸಿಕೊಂಡಿದ್ದು ಸ್ಥಳೀಯರು ಸೇರಿದ ಬಳಿಕ ಅಗ್ನಿಶಾಮಕ ದಳಕ್ಕೆ

ಪೆರ್ಲ ಅಂಗಡಿ ಕಟ್ಟಡವೊಂದರಲ್ಲಿ ತಡ ರಾತ್ರಿ ಅಗ್ನಿ ಅವಘಡ | ಹೊತ್ತಿ ಉರಿದ ಐದು ಅಂಗಡಿಗಳು Read More »

ರಿಕ್ಷಾ ಪಲ್ಟಿ : ಚಾಲಕ ಮೃತ್ಯು

ಪುತ್ತೂರು: ಎಲೆಕ್ಟ್ರಿಕ್ ಆಟೋ ರಿಕ್ಷಾ ಪಲ್ಟಿಯಾಗಿ ಚಾಲಕ ಮೃತಪಟ್ಟ ಘಟನೆ ಪುತ್ತೂರು ಬೈಪಾಸ್ ರಸ್ತೆಯ ತೆಂಕಿಲ ಎಂಬಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಬೊಳ್ಳಾರ್ ನಿವಾಸಿ ಸೂರ್ಯ ಮೃತಪಟ್ಟ ಆಟೋ ಚಾಲಕ. ಇಂದು ಮುಂಜಾನೆ ಬೈಪಾಸ್ ರಸ್ತೆಯಲ್ಲಿ ತೆರಳುತ್ತಿದ್ದ ವೇಳೆ ನಾಯಿ ಅಡ್ಡ ಬಂದು ಆಟೋ ಪಲ್ಟಿಯಾಗಿದೆ ಎನ್ನಲಾಗಿದೆ. ಗಂಭೀರ ಗಾಯಗೊಂಡ ಅವರನ್ನು ವುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ರಿಕ್ಷಾ ಪಲ್ಟಿ : ಚಾಲಕ ಮೃತ್ಯು Read More »

ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿ ಬಸ್ಸಿನಡಿಗೆ ಬಿದ್ದು ಸ್ಕೂಟರ್‌ ಸವಾರ ಮೃತ್ಯು

ಬೆನ್ನಟ್ಟಿದ ಟ್ರಾಫಿಕ್‌ ಪೊಲೀಸ್‌ ಬಸ್‌ ಏರಿ ಪಲಾಯನ ಮಂಗಳೂರು: ಹೆಲ್ಮೆಟ್ ಧರಿಸದ ಕಾರಣಕ್ಕೆ ಪೊಲೀಸರು ಬೆನ್ನುಹತ್ತಿದಾಗ ತಪ್ಪಿಸಿಕೊಳ್ಳಲು ವೇಗವಾಗಿ ವಾಹನ ಚಲಾಯಿಸಿದ ಸ್ಕೂಟರ್‌ ಸವಾರ ಬಸ್ಸಿನಡಿಗೆ ಬಿದ್ದು ಸಾವಿಗೀಡಾದ ಘಟನೆ ನಿನ್ನೆ ರಾತ್ರಿ ಸುರತ್ಕಲ್‌ನಲ್ಲಿ ಸಂಭವಿಸಿದೆ. ಸುರತ್ಕಲ್‌ನ ಕಾನ ಕುಳಾಯಿ ಗುಡ್ಡೆ ಜಂಕ್ಷನ್‌ನಲ್ಲಿ ಶುಕ್ರವಾರ ರಾತ್ರಿ ಘಟನೆ ನಡೆದಿದ್ದು, ಮೃತರನ್ನು ಕಾನ ನಿವಾಸಿ ರೆಮ್ಮಿ (38) ಎಂದು ಗುರುತಿಸಲಾಗಿದೆ. ಅಪಘಾತ ಸಂಭವಿಸಿದಾಗ ರಕ್ಷಣೆಗೆ ಧಾವಿಸಬೇಕಾದ ಪೊಲೀಸರು ಬಸ್‌ ಹತ್ತಿ ಪಲಾಯನ ಮಾಡಿರುವುದಕ್ಕೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ. ದ್ವಿಚಕ್ರ

ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿ ಬಸ್ಸಿನಡಿಗೆ ಬಿದ್ದು ಸ್ಕೂಟರ್‌ ಸವಾರ ಮೃತ್ಯು Read More »

ಬೈಕ್‍-ಕಾರು ಡಿಕ್ಕಿ : ಓಡಿಲ್ನಾಳದ ಯುವಕ ಮೃತ್ಯು

ಬೆಳ್ತಂಗಡಿ: ಕಾರು ಬೈಕ್‍ ಗೆ ಡಿಕ್ಕಿ ಹೊಡೆದ ಪರಿಣಾಮ ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ನಿವಾಸಿ ಬೈಕ್‍ ಸವಾರ ಮೃತಪಟ್ಟ ಘಟನೆ ಎನ್‍ ಆರ್‍ ಪುರ ಬಳಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಓಡಿಲ್ನಾಳದ ಕುಂದಲಿಕೆ ನಿವಾಸಿ ಶಜಿ ಎಂಬವರ ಪುತ್ರ ಸಜೇಶ್ (26) ಮೃತಪಟ್ಟ ಬೈಕ್‍ ಸವಾರ. ಸಜೇಶ್‍ ಅವರು ಎನ್. ಆರ್. ಪುರ ಬಳಿ ಅಲ್ಯೂಮಿನಿಯಂ ಪ್ಯಾಬ್ರಿಕೇಶನ್ ಕೆಲಸಕ್ಕೆ ತೆರಳಿದ್ದು ಗುರುವಾರ ಮಧ್ಯಾಹ್ಮ ಕೆಲಸದಿಂದ ಊಟಕ್ಕೆಂದು ತೆರಳುತಿದ್ದ ವೇಳೆ ಎದುರಿನಿಂದ ಬಂದ ಕಾರು ಬೈಕಿಗೆ ಡಿಕ್ಕಿ ಹೊಡೆದಿದೆ.

ಬೈಕ್‍-ಕಾರು ಡಿಕ್ಕಿ : ಓಡಿಲ್ನಾಳದ ಯುವಕ ಮೃತ್ಯು Read More »

ಬೈಕ್‍-ಸರಕಾರಿ ಬಸ್ ಡಿಕ್ಕಿ : ಬೈಕ್‍ ಸವಾರ ಮೃತ್ಯು

ಪುತ್ತೂರು: ಸರಕಾರಿ ಬಸ್ ಹಾಗೂ ಬೈಕ್‍ ಡಿಕ್ಕಿ ಹೊಡೆದುಕೊಂಡ ಪರಿಣಾಮ ಬೈಕ್‍ ಸವಾರ ಮೃತಪಟ್ಟ ಘಟನೆ ಇದೀಗ ಮುರದಲ್ಲಿ ನಡೆದಿದೆ. ಪಡ್ನೂರು ನಿವಾಸಿ ಅಬ್ದುಲ್ ಕುಂಞಿ (65) ಮೃತಪಟ್ಟ ಬೈಕ್‍ ಸವಾರ. ಮುರದಲ್ಲಿ ಮೆಡಿಕಲ್‍ ಒಂದಕ್ಕೆ ಬಂದು  ವಾಪಾಸ್ ರಸ್ತೆ ದಾಟಿ ಕೆದಿಲ ರಸ್ತೆಯತ್ತ ಬೈಕ್ ಚಲಾಯಿಸಿದಾಗ ಮಾಣಿ ಕಡೆಯಿಂದ ಬಂದ ಬಸ್‍ ಡಿಕ್ಕಿಯಾಗಿದೆ ಎನ್ನಲಾಗಿದೆ.

ಬೈಕ್‍-ಸರಕಾರಿ ಬಸ್ ಡಿಕ್ಕಿ : ಬೈಕ್‍ ಸವಾರ ಮೃತ್ಯು Read More »

ಕೆ ಎಸ್ ಆರ್ ಟಿಸಿ ಬಸ್ ಮತ್ತು ಬೈಕ್  ಡಿಕ್ಕಿ

ಪುತ್ತೂರು: ಕೆ ಎಸ್ ಆರ್ ಟಿಸಿ ಬಸ್ ಮತ್ತು ಬೈಕ್ ನಡುವೆ ಡಿಕ್ಕಿಯಾದ  ಘಟನೆ ಮುರದಲ್ಲಿ ನಡೆದಿದೆ. ಘಟನೆ ಪರಿಣಾಮ ಬೈಕ್ ಸಂಪೂರ್ಣ ನುಜ್ಜು ಗುಜ್ಜಾಗಿದ್ದು, ಸವಾರನಿಗೆ ಗಂಭೀರ ಗಾಯಗಳಾಗಿದೆ. ಆತನನ್ನು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಪುತ್ತೂರು ಸಂಚಾರಿ ಠಾಣಾ ಪೊಲೀಸರು ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಕೆ ಎಸ್ ಆರ್ ಟಿಸಿ ಬಸ್ ಮತ್ತು ಬೈಕ್  ಡಿಕ್ಕಿ Read More »

ಬೈಕ್‍-ಟೆಂಪೋ ಅಪಘಾತ : ಬೈಕ್‍ ಸವಾರ ಮೃತ್ಯು

ಮಾಣಿ: ಬೈಕ್‍ ಹಾಗೂ ಟೆಂಪೋ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಸೂರಿಕುಮೇರ್ ನಲ್ಲಿ ಬುಧವಾರ ರಾತ್ರಿ ನಡೆದಿದೆ. ಸುಳ್ಯ ನಿವಾಸಿ, ಸೂರಿಕುಮೇರು ಸಮೀಪದ ಕೋಸ್ಕಲ್ ಕೋಳಿ ಫಾರ್ಮ್ ಕೆಲಸಗಾರ ಪುನೀತ್ ಮೃತಪಟ್ಟ ಬೈಕ್ ಸವಾರ, ಕಂಪೆನಿಯಲ್ಲಿ ಕೆಲಸ ಮುಗಿಸಿ ಸುಳ್ಯದ ತನ್ನ ಮನೆಗೆ ಹೊರಟಿದ ವೇಳೆ ಅಪಘಾತ ನಡೆದಿದೆ. ಸೂರಿಕುಮೇರು ಜಂಕ್ಷನ್ ನಲ್ಲಿ ಬೈಕ್ ಹಾಗೂ ಟೆಂಪೊ ಪರಸ್ಪರ ಢಿಕ್ಕಿ ಹೊಡೆದಿದ್ದು, ಅಪಘಾತದ ತೀವ್ರತೆಗೆ ಸವಾರ ರಸ್ತೆಗೆ ಉರುಳಿ ಬಿದ್ದು ಗಂಭೀರ

ಬೈಕ್‍-ಟೆಂಪೋ ಅಪಘಾತ : ಬೈಕ್‍ ಸವಾರ ಮೃತ್ಯು Read More »

error: Content is protected !!
Scroll to Top