ಅಪಘಾತ

ಮಲ್ಪೆ ಮೀನುಗಾರಿಕೆ ಇಲಾಖೆಯ ಕಚೇರಿ ಮೀಟಿಂಗ್ ರೂಮ್‌ನಲ್ಲಿ  ಶಾರ್ಟ್ ಸರ್ಕ್ಯೂಟ್‌

ಮಲ್ಪೆ: ಮೀನುಗಾರಿಕೆ ಇಲಾಖೆಯ ಕಚೇರಿ ಮೀಟಿಂಗ್ ರೂಮ್‌ನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ ಉಂಟಾಗಿ ರೂಮ್ ಸಂಪೂರ್ಣ ಸುಟ್ಟು ಹೋಗಿರುವ ಘಟನೆ ನಡೆದಿದೆ. ಮಂಗಳವಾರ ಬೆಳಗ್ಗೆ ಈ ಘಟನೆ ಗೋಚರಿಸಿದ್ದು, ಉರಿಯುತ್ತಿದ್ದ ಅವಶೇಷಗಳನ್ನು ಅಗ್ನಿಶಾಮಕ ದಳ ಸಿಬ್ಬಂದಿ ನಂದಿಸಿದ್ದಾರೆ. ರೂಮ್‍ನೊಳಗಿದ್ದ ಹವಾನಿಯಂತ್ರಕ ಯಂತ್ರಗಳು ಸ್ಫೋಟಗೊಂಡಿದ್ದು, ರೂಮ್‌ನ ಒಳಗಿದ್ದ ಎಲ್ಲ ಕಡತಗಳು ಸುಟ್ಟು ಹೋಗಿದೆ. ಫ್ಯಾನ್, ಚಯರ್, ಟೇಬಲ್, ಲೈಫ್‌ಬಾಯ್, ಲೈಫ್ಯಾಕೆಟ್, ಸೇರಿದಂತೆ ಪಾರ್ಟಿಶನ್ ಗೋಡೆಗಳಿಗೆ ಬೆಂಕಿ ತಗುಳಿದೆ. ಬೆಂಕಿ ಇತರ ಕೋಣೆಯನ್ನು ಆವರಿಸಿದರೆ ಈ ಕಟ್ಟಡ ಪೂರ್ತಿ ಬೆಂಕಿಗಾಹುತಿಯಾಗುತ್ತಿತ್ತು […]

ಮಲ್ಪೆ ಮೀನುಗಾರಿಕೆ ಇಲಾಖೆಯ ಕಚೇರಿ ಮೀಟಿಂಗ್ ರೂಮ್‌ನಲ್ಲಿ  ಶಾರ್ಟ್ ಸರ್ಕ್ಯೂಟ್‌ Read More »

ಬೆಳ್ತಂಗಡಿ ಮಲಂತಬೆಟ್ಟು  ಕಾಲೇಜಿನ ಅತಿಥಿ ಶಿಕ್ಷಕಿ ಭಾರತಿ ನಿಧನ

ಬೆಳ್ತಂಗಡಿ : 14 ವರ್ಷದ ಹಿಂದೆ ಭೀಕರ ರಸ್ತೆ ಅಪಘಾತವಾಗಿದ್ದು, ಗಂಭೀರ ಗಾಯಗೊಂಡು ಇಲ್ಲಿವರೆಗೂ ಚಿಂತಾಜನಕದ ಪರಿಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತಿದ್ದ ಕಳಿಯ ಗ್ರಾಮದ ಕು.ಭಾರತಿ ಮಂಗಳವಾರ ರಾತ್ರಿ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಬೆಳ್ತಂಗಡಿ ತಾಲೂಕು ಕಳಿಯ ಗ್ರಾಮದ ಉಬರಡ್ಕ ನಿವಾಸಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಲಕ್ಷ್ಮಿ ಅವರ ಪುತ್ರಿಯಾಗಿರುವ ಕಳಿಯ ಗ್ರಾಮದ ಕು.ಭಾರತಿ ಮೇಲಂತಬೆಟ್ಟು ಪದವಿಪೂರ್ವ ಕಾಲೇಜಿನ ಅತಿಥಿ ಉಪನ್ಯಾಸಕಿಯಾಗಿ ಸೇವೆಗೈದಿದ್ದಾರೆ. 2010ರ ಜುಲೈ 30ರಂದು ಬೆಳ್ತಂಗಡಿ ಅಯ್ಯಪ್ಪ ಮಂದಿರದ ಬಳಿ ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದಾಗ ಮೂಡಿಗೆರೆ

ಬೆಳ್ತಂಗಡಿ ಮಲಂತಬೆಟ್ಟು  ಕಾಲೇಜಿನ ಅತಿಥಿ ಶಿಕ್ಷಕಿ ಭಾರತಿ ನಿಧನ Read More »

ಕ್ರೇನ್ ಪಲ್ಟಿ : ಚಾಲಕನಿಗೆ ಗಂಭೀರ ಗಾಯ

ಮಂಗಳೂರು: ಬಜಪೆ ವಿಮಾನ ನಿಲ್ದಾಣದ ಸರಹದ್ದಿನಲ್ಲಿ ಕಾಮಗಾರಿ ನಡೆಸಿ ತೆರಳುತ್ತಿದ್ದ ಬೃಹತ್ ಕ್ರೇನೊಂದು ಪಲ್ಟಿಯಾದ ಘಟನೆ ಮಂಗಳವಾರ ರಾತ್ರಿ ಕೆಂಜಾರು ವಿಮಾನ ನಿಲ್ದಾಣದ ನಿರ್ಗಮನ ರಸ್ತೆಯ ಬಳಿ ನಡೆದಿದೆ. ಪಲ್ಟಿಯಾದ ಕ್ರೇನ್ ಚಾಲಕ ಬೆಂಗಳೂರು ಮೂಲದವನೆಂದು ತಿಳಿದು ಬಂದಿದೆ. ಕ್ರೇನ್‍ ಪಲ್ಟಿಯಾದ ರಭಸಕ್ಕೆ ಚಾಲಕ ಎಸೆಯಲ್ಪಟ್ಟು ಕ್ರೇನ್ ನ ಅಡಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ತಕ್ಷಣ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ.

ಕ್ರೇನ್ ಪಲ್ಟಿ : ಚಾಲಕನಿಗೆ ಗಂಭೀರ ಗಾಯ Read More »

ಶಾರ್ಟ್ ಸರ್ಕ್ಯೂಟ್‍ನಿಂದ ಹೊತ್ತಿ ಉರಿದ ಹುಂಡೈ ಕಾರು

ಮಂಗಳೂರು: ವೈದ್ಯೆಯೊಬ್ಬರು ತಮ್ಮ ಕಾರನ್ನು ಚಲಾಯಿಸಿತ್ತಿರುವ ವೇಳೆ ಹುಂಡೈ ಕಾರು ಹೊತ್ತಿ ಉರಿದ ಘಟನೆ ಮಂಗಳೂರಿನ ಕೆ.ಎಸ್.ರಾವ್ ರಸ್ತೆಯ ಸಿಟಿ ಸೆಂಟರ್ ಬಳಿ ಸೋಮವಾರ ನಡೆದಿದೆ. ವೈದ್ಯೆಯೊಬ್ಬರು ತಮ್ಮ ಕಾರನ್ನು ಚಲಾಯಿಸಿಕೊಂಡು ಬಂದು ಅಪಾರ್ಟ್‌ಮೆಂಟ್ ಬಳಿ ತಂದು ನಿಲ್ಲಿಸಿದ್ದಾರೆ. ಈ ವೇಳೆ ಕಾರಿನ ಮುಂಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಅವರು ಕಾರಿನಿಂದ ಇಳಿದಿದ್ದಾರೆ. ಅಷ್ಟರಲ್ಲಾಗಲೇ ಕಾರಿನ ಮುಂಭಾಗ ಸುಟ್ಟು ಉರಿದು ಹೋಗಿದೆ ಎಂದು ತಿಳಿದು ಬಂದಿದೆ. ಶಾರ್ಟ್ ಸರ್ಕ್ಯೂಟ್‍ನಿಂದ ಬೆಂಕಿ ತಗುಳಿ ಅವಘಡ ನಡೆದಿದ್ದು, ಸ್ಥಳಕ್ಕೆ ಧಾವಿಸಿದ

ಶಾರ್ಟ್ ಸರ್ಕ್ಯೂಟ್‍ನಿಂದ ಹೊತ್ತಿ ಉರಿದ ಹುಂಡೈ ಕಾರು Read More »

ಬಂಟ್ವಾಳ : ರೈಲ್ವೆ ಹಳಿಯಲ್ಲಿ ನೆಟ್ಟಣ ವ್ಯಕ್ತಿಯ ಶವ ಪತ್ತೆ

ಕಡಬ: ಬಂಟ್ವಾಳ ತಾಲೂಕಿನ ಪುದು ಗ್ರಾಮದ ನೆತ್ತರಕೆರೆ ಸಮೀಪದ ರೈಲ್ವೆ ಹಳಿಯ ಬದಿಯ ಪೊದೆಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ. ಇದು ಬಿಳಿನೆಲೆ ಗ್ರಾಮದ ನೆಟ್ಟಣ ನಿವಾಸಿ ದಿ. ಚಂದನ್ ಎಂಬವರ ಪುತ್ರ ಶಶಿಕುಮಾರ್ ಎಸ್.(40ವ.) ಎಂದು ಗುರುತಿಸಲಾಗಿದೆ. ಬಂಟ್ವಾಳ ನಗರ ಪೊಲೀಸರು ಹಾಗೂ ಮಂಗಳೂರು ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ವ್ಯಕ್ತಿಯ ತಲೆಯ ಮೇಲೆ ಗಾಯವಾದ ಕುರುಹುಗಳು ಕಂಡುಬಂದಿದ್ದು, ರಕ್ತಸಿಕ್ತ ಮಾದರಿಯಲ್ಲಿರುವ ಶವವನ್ನು ಕಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಶಶಿಕುಮಾರ್ ಅವರು

ಬಂಟ್ವಾಳ : ರೈಲ್ವೆ ಹಳಿಯಲ್ಲಿ ನೆಟ್ಟಣ ವ್ಯಕ್ತಿಯ ಶವ ಪತ್ತೆ Read More »

ಬೈಕ್‍—ಖಾಸಗಿ ಬಸ್ ಡಿಕ್ಕಿ | ಬೈಕ್‍ ಸವಾರ ಸ್ಥಳದಲ್ಲೇ ಮೃತ್ಯು

ಕೊಕ್ಕಡ: ಖಾಸಗಿ ಬಸ್ ಹಾಗೂ ಬೈಕ್‍ ಡಿಕ್ಕಿ ಹೊಡೆದುಕೊಂಡು ಬೈಕ್‍ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕೌಕ್ರಾಡಿ ಗ್ರಾಮದ ಕಾಪಿನಬಾಗಿಲು ಎಂಬಲ್ಲಿ ಭಾನುವಾರ ಸಂಜೆ ನಡೆದಿದೆ. ಕೊಕ್ಕಡ ಸಮೀಪದ ಕೌಕ್ರಾಡಿ ಗ್ರಾಮದ ಮೂಡುಬೈಲು ನಿವಾಸಿ ಮಾಧವ ಆಚಾರಿ (52) ಮೃತಪಟ್ಟ ಬೈಕ್‍ ಸವಾರ . ಆಂಧ್ರಪ್ರದೇಶದಿಂದ ಅಯ್ಯಪ್ಪ ವೃತಧಾರಿಗಳನ್ನು ಶಬರಿಮಲೆ ಯಾತ್ರೆಗೆ ಕೊಂಡೊಯ್ಯುವ ಖಾಸಗಿ ಬಸ್ಸು ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದು, ಬೈಕ್ ಸವಾರ ಕೊಕ್ಕಡದಿಂದ ಕಾಪಿನಬಾಗಿಲಿಗೆ ಬರುತ್ತಿದ್ದಾಗ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಬೈಕ್‍—ಖಾಸಗಿ ಬಸ್ ಡಿಕ್ಕಿ | ಬೈಕ್‍ ಸವಾರ ಸ್ಥಳದಲ್ಲೇ ಮೃತ್ಯು Read More »

ಕಾರುಗಳ ಡಿಕ್ಕಿ | ಜಖಂಗೊಂಡ ಕಾರು

ಪುತ್ತೂರು: ಕಾರುಗಳೆರಡು ಡಿಕ್ಕಿ ಹೊಡೆದುಕೊಂಡ ಘಟನೆ ತೆಂಕಿಲ ಬೈಪಾಸ್‍ ಬಳಿ ನಡೆದಿದೆ. ಅಪಘಾತ ಪರಿಣಾಮ ಕಾರುಗಳು ಸಂಪೂರ್ಣ ನುಜ್ಜು ಗುಜ್ಜಾಗಿದ್ದು ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಪುತ್ತೂರು ಸಂಚಾರಿ ಠಾಣಾ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಕಾರುಗಳ ಡಿಕ್ಕಿ | ಜಖಂಗೊಂಡ ಕಾರು Read More »

ಬಸ್‍ ಬ್ರೇಕ್‍ ಫೈಲ್‍| ಕ್ಷಣಾರ್ಧದಲ್ಲೇ  ತಪ್ಪಿದ ದುರಂತ

ಮಂಗಳೂರು: ಉಡುಪಿಯಿಂದ ಮಂಗಳೂರಿಗೆ ಬರುತ್ತಿದ್ದ ವಿಶಾಲ್ ಟ್ರಾವೆಲ್ಸ್ ಬಸ್ ಬ್ರೇಕ್‍ ಫೈಲ್‍ ಆಗಿರುವ ಘಟನೆ ಗುರುವಾರ ಬೆಳಗ್ಗೆ ನಗರದ ಬಲ್ಲಾಳ್‌ಬಾಗ್ ಬಳಿ ನಡೆದಿದೆ. ಈ ದುರಂತದಲ್ಲಿ ಯಾವುದೆ ಅಪಾಯ ಸಂಭವಿಸದೆ ಚಾಲಕನ ಸಮಯ ಪ್ರಜ್ಞೆಯಿಂದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಬೆಳಗ್ಗೆ 8 ಗಂಟೆ ವೇಳೆಗೆ ಘಟನೆ ನಡೆದಿದ್ದು, ಲಾಲ್‌ಬಾಗ್ ಜಂಕ್ಷನ್‌ನಲ್ಲಿ ಪ್ರಯಾಣಿಕರನ್ನು ಇಳಿಸಿ ಮುಂದುವರಿದ ಬಸ್ ಬಲ್ಲಾಳ್‌ಬಾಗ್ ತಂಗುದಾಣದತ್ತ ಬಂದಿದೆ. ಈ ವೇಳೆ ಚಾಲಕ ಸಿದ್ದಿಕ್ ಎರ್ಮಾಳ್ ಅವರಿಗೆ ಬಸ್ಸಿನ ಬ್ರೇಕ್ ಫೈಲ್‍ ಆಗಿದೆ ಎಂದು  ತಿಳಿದ

ಬಸ್‍ ಬ್ರೇಕ್‍ ಫೈಲ್‍| ಕ್ಷಣಾರ್ಧದಲ್ಲೇ  ತಪ್ಪಿದ ದುರಂತ Read More »

ನಿಯಂತ್ರಣ ತಪ್ಪಿ ಕಾರು ಪಲ್ಟಿ

ಪುತ್ತೂರು: ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಪುತ್ತೂರಿನ ಬೈಪಾಸ್ ರಸ್ತೆಯ ತೆಂಕಿಲ ವಿವೇಕಾನಂದ ಶಾಲೆಯ ಬಳಿ ನಡೆದಿದೆ. ಬುಧವಾರ ತಡರಾತ್ರಿ ಘಟನೆ ನಡೆದಿದೆ. ಕಾರು ಸಂಪೂರ್ಣ ಜಖಂ ಗೊಂಡಿದ್ದು, ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ.

ನಿಯಂತ್ರಣ ತಪ್ಪಿ ಕಾರು ಪಲ್ಟಿ Read More »

ಕಾಲ್ನಡಿಗೆ ಜಾಥಾ ಮಾಡುತ್ತಿದ್ದವರಿಗೆ ಟ್ರಕ್‌ ಡಿಕ್ಕಿ : ಇಬ್ಬರು ಸಾವು

ಅತ್ಯಾಚಾರಿಗಳಿಗೆ ತ್ವರಿತ ಶಿಕ್ಷೆ ಆಗ್ರಹಿಸಿ ಮಂಗಳೂರಿನಿಂದ ದಿಲ್ಲಿಗೆ ಪಾದಯಾತ್ರೆ ನಡೆಸುತ್ತಿದ್ದ ತಂಡ ಮಂಗಳೂರು: ಅತ್ಯಾಚಾರಿಗಳಿಗೆ ತಕ್ಷಣವೇ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿ ಮಂಗಳೂರಿನಿಂದ ದಿಲ್ಲಿಗೆ ಕಾಲ್ನಡಿಗೆ ಜಾಥಾ ಮಾಡುತ್ತಿದ್ದ ತಂಡದಲ್ಲಿದ್ದ ಇಬ್ಬರುಗುಜರಾತಿನಲ್ಲಿ ಅಪಘಾತಕ್ಕೆ ಬಲಿಯಾದ ದಾರುಣ ಘಟನೆ ನಿನ್ನೆ ಸಂಭವಿಸಿದೆ. ಇವರಲ್ಲಿ ಒಬ್ಬರನ್ನು ದಕ್ಷಿಣ ಕನ್ನಡ ಜಿಲ್ಲೆಯ ಚಾರ್ಮಾಡಿಯ ಮೂಸಾ ಶರೀಫ್ ಎಂದು ಗುರುತಿಸಲಾಗಿದೆ. ಪಾದಯಾತ್ರಿಗಳು ನಿನ್ನೆ ಮಧ್ಯಾಹ್ನ ಮಾರುತಿ ಓಮ್ನಿ ಕಾರಿನಲ್ಲಿ ಕುಳಿತು ವಿಶ್ರಾಂತಿ ಪಡೆಯುತ್ತಿದ್ದ ವೇಳೆ ಟ್ರಕ್‌ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,

ಕಾಲ್ನಡಿಗೆ ಜಾಥಾ ಮಾಡುತ್ತಿದ್ದವರಿಗೆ ಟ್ರಕ್‌ ಡಿಕ್ಕಿ : ಇಬ್ಬರು ಸಾವು Read More »

error: Content is protected !!
Scroll to Top