ಅಪಘಾತ

ಐಪಿಎಲ್‍  ಫೈನಲ್‍ ನಲ್ಲಿ ಆರ್ ಸಿಬಿ ಚಾಂಪಿಯನ್ | ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಭಾರೀ ಜನಸ್ತೋಮ | ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡ ಹಲವರು ಕಾಲ್ತುಳಿತಕ್ಕೆ ಬಲಿ

ಬೆಂಗಳೂರು: 18ನೇ ಐಪಿಎಲ್‍ ಫೈನಲ್‍ ನಲ್ಲಿ ಆರ್ ಸಿಬಿ ಚಾಂಪಿಯನ್ ಆಗಿದ್ದು, ಈ ಸಂಬಂಧ ಇಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭ್ರಮಾಚರಣೆಗೆ ಸಿದ್ಧತೆ ನಡೆಯುತ್ತಿದ್ದಂತೆ ಭಾರೀ ಜನಸ್ತೋಮ ನೆರೆದಿದ್ದು, ಈ ಸಂದರ್ಭ ಕಾಲ್ತುಳಿತಕ್ಕೆ ಹಲವರು ಬಲಿಯಾಗಿದ್ದಾರೆ. ಸಂಭ್ರಮಾಚರಣೆಯನ್ನು ನೋಡಲು ಅಪಾರ ಸಂಖ್ಯೆಯ ಅಭಿಮಾನಿಗಳು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸೇರಿದ್ದಾರೆ. ನೂಕುನುಗ್ಗಾಟದಲ್ಲಿ  ಕಾಲ್ತುಳಿತಕ್ಕೆ  15ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ. ಅಸ್ವಸ್ಥಗೊಂಡವರನ್ನು ಶಿವಾಜಿನಗರದಲ್ಲಿರುವ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆ ಆಸ್ಪತ್ರೆಗೆ ದಾಖಲಿಸಲಾಗಿದೆ. 10 ಮಂದಿ ಅಭಿಮಾನಿಗಳು […]

ಐಪಿಎಲ್‍  ಫೈನಲ್‍ ನಲ್ಲಿ ಆರ್ ಸಿಬಿ ಚಾಂಪಿಯನ್ | ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಭಾರೀ ಜನಸ್ತೋಮ | ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡ ಹಲವರು ಕಾಲ್ತುಳಿತಕ್ಕೆ ಬಲಿ Read More »

ವ್ಯಾನಿನ ಮೇಲೆ ಉರುಳಿ ಬಿದ್ದ ಟ್ರಕ್‌ : 9 ಮಂದಿ ಸ್ಥಳದಲ್ಲೇ ಸಾವು

ಭೋಪಾಲ: ಸಿಮೆಂಟ್ ತುಂಬಿದ್ದ ಟ್ರಕ್ ವ್ಯಾನ್​ ಮೇಲೆ ಉರುಳಿ ಬಿದ್ದ ಪರಿಣಾಮ 9 ಮಂದಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಝಬುವಾ ಎಂಬಲ್ಲಿ ಇಂದು ನಸುಕಿನ ಹೊತ್ತು ಸಂಭವಿಸಿದೆ. ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ 9 ಸದಸ್ಯರು ಪ್ರಾಣ ಕಳೆದುಕೊಂಡಿದ್ದಾರೆ. ಇಬ್ಬರು ಗಾಯಗೊಂಡಿದ್ದಾರೆ. ಝಬುವಾ ಜಿಲ್ಲೆಯ ಮೇಘನಗರ ತಹಸಿಲ್​ನ ಸಂಜೆಲಿ ರೈಲ್ವೆ ಕ್ರಾಸಿಂಗ್ ಬಳಿ ಬೆಳಗಿನ ಜಾವ 2.30ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ತಾತ್ಕಾಲಿಕ ರಸ್ತೆ ಮೂಲಕ ನಿರ್ಮಾಣ ಹಂತದಲ್ಲಿರುವ ರೈಲು ಮೇಲ್ಸೇತುವೆ ದಾಟುತ್ತಿದ್ದ ಟ್ರಕ್ ಸಮತೋಲನ

ವ್ಯಾನಿನ ಮೇಲೆ ಉರುಳಿ ಬಿದ್ದ ಟ್ರಕ್‌ : 9 ಮಂದಿ ಸ್ಥಳದಲ್ಲೇ ಸಾವು Read More »

ಮಂಗಳೂರು : ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ ಅವಘಡ

ಮಂಗಳೂರು: ನಗರದ ಅಪಾರ್ಟ್‌ಮೆಂಟ್‌ ಒಂದರಲ್ಲಿ ಸೋಮವಾರ ಮುಂಜಾನೆ ಸಂಭವಿಸಿದ ಬೆಂಕಿ ಅವಘಡದಲ್ಲಿ ಅಪಾರ ಸೊತ್ತುಗಳು ಸುಟ್ಟು ಕರಕಲಾಗಿವೆ. ಸ್ಟೇಟ್‌ಬ್ಯಾಂಕ್‌ನ ರಾವ್‌ ಆಂಡ್‌ ರಾವ್‌ ಸರ್ಕಲ್‌ ಬಳಿ ಇರುವ ಅಪಾರ್ಟ್‌ಮೆಂಟ್‌ನ ಎರಡನೇ ಮಹಡಿಯಲ್ಲಿರುವ ಮನೆಯಲ್ಲಿ ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ ಸಂಭವಿಸಿದೆ. ಪಾಂಡೇಶ್ವರ ಅಗ್ನಿಶಾಮಕ ಪಡೆಯವರು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ. ಮನೆಯಲ್ಲಿದ್ದ ಸೋಫಾ, ಇಲೆಕ್ಟ್ರಾನಿಕ್‌ ಉಪಕರಣಗಳು ಮತ್ತಿತರ ವಸ್ತುಗಳು ಬೆಂಕಿಗಾಹುತಿಯಾಗಿವೆ. ಈ ಮನೆಯಲ್ಲಿ ವಿದ್ಯಾರ್ಥಿಗಳು ಬಾಡಿಗೆಗೆ ಇದ್ದರು. ಹೀಟರ್‌ನಿಂದಾಗಿ ಶಾರ್ಟ್‌ ಸರ್ಕ್ಯೂಟ್‌ ಆಗಿದೆ ಎನ್ನಲಾಗಿದೆ. ಯಾವುದೆ ಸಾವುನೋವು

ಮಂಗಳೂರು : ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ ಅವಘಡ Read More »

ಮಂಗಳೂರು : ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ ಅವಘಡ

ಮಂಗಳೂರು: ನಗರದ ಅಪಾರ್ಟ್‌ಮೆಂಟ್‌ ಒಂದರಲ್ಲಿ ಸೋಮವಾರ ಮುಂಜಾನೆ ಸಂಭವಿಸಿದ ಬೆಂಕಿ ಅವಘಡದಲ್ಲಿ ಅಪಾರ ಸೊತ್ತುಗಳು ಸುಟ್ಟು ಕರಕಲಾಗಿವೆ. ಸ್ಟೇಟ್‌ಬ್ಯಾಂಕ್‌ನ ರಾವ್‌ ಆಂಡ್‌ ರಾವ್‌ ಸರ್ಕಲ್‌ ಬಳಿ ಇರುವ ಅಪಾರ್ಟ್‌ಮೆಂಟ್‌ನ ಎರಡನೇ ಮಹಡಿಯಲ್ಲಿರುವ ಮನೆಯಲ್ಲಿ ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ ಸಂಭವಿಸಿದೆ. ಪಾಂಡೇಶ್ವರ ಅಗ್ನಿಶಾಮಕ ಪಡೆಯವರು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ. ಮನೆಯಲ್ಲಿದ್ದ ಸೋಫಾ, ಇಲೆಕ್ಟ್ರಾನಿಕ್‌ ಉಪಕರಣಗಳು ಮತ್ತಿತರ ವಸ್ತುಗಳು ಬೆಂಕಿಗಾಹುತಿಯಾಗಿವೆ. ಈ ಮನೆಯಲ್ಲಿ ವಿದ್ಯಾರ್ಥಿಗಳು ಬಾಡಿಗೆಗೆ ಇದ್ದರು. ಹೀಟರ್‌ನಿಂದಾಗಿ ಶಾರ್ಟ್‌ ಸರ್ಕ್ಯೂಟ್‌ ಆಗಿದೆ ಎನ್ನಲಾಗಿದೆ. ಯಾವುದೆ ಸಾವುನೋವು

ಮಂಗಳೂರು : ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ ಅವಘಡ Read More »

ಮಂಜನಾಡಿ ಭೂಕುಸಿತ ದುರಂತ : ಎರಡೂ ಕಾಲುಗಳನ್ನು ಕಳೆದುಕೊಂಡ ಮಹಿಳೆ

ಸ್ವಾಧೀನ ಕಳೆದುಕೊಂಡ ಕಾಲುಗಳನ್ನು ಶಸ್ತ್ರಚಿಕಿತ್ಸೆ ಮಾಡಿ ತೆಗೆದ ವೈದ್ಯರು ಮಂಗಳೂರು: ಉಳ್ಳಾಲದ ಮಂಜನಾಡಿ ಸಮೀಪ ಮೊಂಟೆಪದವು ಕೋಡಿಯಲ್ಲಿ ಮನೆ ಮೇಲೆ ಗುಡ್ಡ ಕುಸಿದು ಅಜ್ಜಿ ಮತ್ತು ಇಬ್ಬರು ಮೊಮ್ಮಕ್ಕಳು ಬಲಿಯಾದ ಘಟನೆಯಲ್ಲಿ ಬದುಕುಳಿದವರ ಬದುಕು ಇನ್ನಷ್ಟು ಯಾತನಾಮಯವಾಗಿದೆ. ಮಣ್ಣಿನಡಿ ಸಿಲುಕಿ ಮೃತಪಟ್ಟ ಇಬ್ಬರು ಮಕ್ಕಳು ಮತ್ತು ಹಿರಿಯ ಮಹಿಳೆಯ ಅಂತ್ಯಸಂಸ್ಕಾರವನ್ನು ಶನಿವಾರ ಕಣ್ಣೀರಕೋಡಿಯ ನಡುವೆಯೇ ಮಾಡಲಾಗಿದೆ. ಸರ್ವಧರ್ಮದವರು ಸೇರಿ ಅಂತ್ಯಕ್ರಿಯೆ ನೆರವೇರಿಸಿದ್ದು, ಈ ಸಂದರ್ಭದಲ್ಲಿ ಅಲ್ಲಿದ್ದ ಎಲ್ಲರೂ ಕಣ್ಣೀರು ಸುರಿಸಿದ್ದಾರೆ. ಘಟನೆಯಲ್ಲಿ ಮೃತಪಟ್ಟ ಮೂವರನ್ನು ಮನೆ ಕುಸಿದ

ಮಂಜನಾಡಿ ಭೂಕುಸಿತ ದುರಂತ : ಎರಡೂ ಕಾಲುಗಳನ್ನು ಕಳೆದುಕೊಂಡ ಮಹಿಳೆ Read More »

ಕಾರ್ಕಳ : ಹಟ್ಟಿಗೆ ಬೆಂಕಿ ತಗಲಿ ಕಂಬಳದ ಕೋಣಗಳು ಸಾವು

ಜೀವಂತ ಸುಟ್ಟು ಕರಕಲಾದ ಚಾಂಪಿಯನ್‌ ಕೋಣಗಳು ಕಾರ್ಕಳ : ಹಟ್ಟಿಗೆ ಬೆಂಕಿ ತಗುಲಿದ ಪರಿಣಾಮ ಕಂಬಳದ ಕೋಣಗಳು ಜೀವಂತ ದಹಿಸಿದ ದಾರುಣ ಘಟನೆ ಶುಕ್ರವಾರ ತಡರಾತ್ರಿ ಕಾರ್ಕಳದ ಕಾಂತಾವರ ಸಮೀಪದ ಬೇಲಾಡಿ ಎಂಬಲ್ಲಿ ಸಂಭವಿಸಿದೆ. ಬೇಲಾಡಿ ಬಾವ ಅಶೋಕ್‌ ಶೆಟ್ಟಿಯವರ 2022-23ನೇ ಕಂಬಳ ಸಾಲಿನಲ್ಲಿ ಕನಹಲಗೆಯಲ್ಲಿ ಚಾಂಪಿಯನ್‌ ಪಡೆದ ಅಪ್ಪು ಮತ್ತು ತೋನ್ಸೆ ಸಾವಿಗೀಡಾದ ಕೋಣಗಳು. ಶಾರ್ಟ್‌ ಸರ್ಕ್ಯೂಟ್‌ನಿಂದಾಗಿ ಬೆಂಕಿ ಹತ್ತಿಕೊಂಡಿದೆ ಎನ್ನಲಾಗುತ್ತಿದೆ.

ಕಾರ್ಕಳ : ಹಟ್ಟಿಗೆ ಬೆಂಕಿ ತಗಲಿ ಕಂಬಳದ ಕೋಣಗಳು ಸಾವು Read More »

ಮನೆ ಮೇಲೆ ಕುಸಿದ ಗುಡ್ಡ | ಮೂವರು ಬಲಿ, ನಾಲ್ವರ ರಕ್ಷಣೆ

ಮಂಗಳೂರು : ಈ ಭಾರಿಯ ವರ್ಷಧಾರೆ ನಿರೀಕ್ಷೆಕ್ಕಿಂತಲೂ ಸುರಿಯುತ್ತಿದ್ದು, ಮಳೆಯಿಂದಾಗಿ ಎಲ್ಲೆಡೆ ಅವಘಡಗಳು ಸಂಭವಿಸಿದೆ. ಇದಿಗ ಅಂತದ್ದೇ ಹೃದಯವಿದ್ರಕವಾದ ಘಟನೆ ಮಂಗಳೂರಿನ ಉಳ್ಳಾಲದಲ್ಲಿ ನಡೆದಿದೆ. ಹೌದು ಮಂಗಳೂರು  ಉಳ್ಳಾಲದಲ್ಲಿ ಭೂ ಕುಸಿತಕ್ಕೆ ಸಿಲುಕಿ ಮನೆಯಲ್ಲಿ ಮಲಗಿದ್ದ 3 ಜನರ ಪೈಕಿ ಮೂವರು ಸಾವನ್ನಪ್ಪಿದ್ದಾರೆ. ಆದರೆ, ಮನೆ ಕುಸಿತವಾದಾಗ ತನ್ನ ಪ್ರಾಣ ಹೋದರೂ ಸರಿ ಮಕ್ಕಳನ್ನು ಉಳಿಸೋಣವೆಂದು ಗೋಡೆಯ ಭಾರ ತಾನು ತಡೆದುಕೊಂಡು ಮಕ್ಕಳನ್ನು ಉಳಿಸಿದ್ದಳು. ಗೋಡೆಯ ಭಾರಕ್ಕೆ ದೇಹ ಜರ್ಜಿರಿತವಾಗಿ ಪ್ರಜ್ಞೆ ಕಳೆದುಕೊಂಡಿದ್ದಳು. ಗೋಡೆ ಬಿದ್ದ ಕ್ಷಣದಲ್ಲಿ

ಮನೆ ಮೇಲೆ ಕುಸಿದ ಗುಡ್ಡ | ಮೂವರು ಬಲಿ, ನಾಲ್ವರ ರಕ್ಷಣೆ Read More »

ನಾಡ ದೋಣಿ ಮಗುಚಿ ಇಬ್ಬರು ನಾಪತ್ತೆ

ಮಂಗಳೂರು: ನಾಡ ದೋಣಿ ಮಗುಚಿ ಇಬ್ಬರು ನಾಪತ್ತೆಯಾದ ಘಟನೆ ಬೆಂಗ್ರೆ ಅಳಿವೆ  ಸಮೀಪ ಮೇ 30ರ ಶುಕ್ರವಾರ ಸಂಭವಿಸಿದೆ. ತೋಟ ಬೆಂಗ್ರೆ ಅಳಿವೆ ಬಾಗಿಲು ಸಮೀಪ ಮೀನು ಹಿಡಿಯುತ್ತಿದ್ದಾಗ ಜೋರಾದ ಮಳೆ, ಗಾಳಿಯ ರಭಸಕ್ಕೆ  ಧೋಣಿ ಮಗುಚಿದ್ದು, ದೋಣಿಯಲ್ಲಿದ್ದವರು ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ. ದೋಣಿಯಲ್ಲಿದ್ದ ಯಶವಂತ, ಕಮಲಾಕ್ಷ ಎಂಬವರು ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ.

ನಾಡ ದೋಣಿ ಮಗುಚಿ ಇಬ್ಬರು ನಾಪತ್ತೆ Read More »

ಮಾಣಿ ಹೈಸ್ಕೂಲ್ ಬಳಿ ಗುಡ್ಡ ಕುಸಿತ

ವಿಟ್ಲ: ಅಡ್ಡಹೋಳೆ- ಬಿ ಸಿ.‌ರೋಡ್ ರಾಷ್ಟ್ರೀಯ ಹೆದ್ದಾರಿಯ  ಅಂಡರ್ ಪಾಸ್ ರಸ್ತೆ ಸಂಚಾರಕ್ಕೆ ಮುಕ್ತಗೊಂಡ ಬೆನ್ನಲ್ಲೇ ಮಾಣಿ ಹೈಸ್ಕೂಲ್ ಬಳಿ ಸರ್ವಿಸ್ ರಸ್ತೆಗೆ ಗೋಡೆ ಕುಸಿದ ಪರಿಣಾಮ ಮಣ್ಣು ರಸ್ತೆಗೆ ಬಿದ್ದಿದೆ. ಈ ಭಾಗದಲ್ಲಿ ತಡೆಗೋಡೆ ನಿರ್ಮಿಸದೇ ಇದ್ದದ್ದರಿಂದ ನಿರಂತರ ಸುರಿಯುತ್ತಿರುವ ಮಳೆಗೆ ಗುಡ್ಡ ಕುಸಿದು ಮಣ್ಣು ರಸ್ತೆಗೆ ಬಿದ್ದಿದೆ. ಸರಿಯಾಗಿ ಕಾಮಗಾರಿ ನಿರ್ವಹಿಸದೇ ಇದ್ದುದರಿಂದ ಅಲ್ಲಲ್ಲಿ ಈ ರೀತಿಯ ತೊಂದರೆಗಳು ಉಂಟಾಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ‌.

ಮಾಣಿ ಹೈಸ್ಕೂಲ್ ಬಳಿ ಗುಡ್ಡ ಕುಸಿತ Read More »

ಮನೆ ಮೇಲೆ ಬಿದ್ದ ಧರೆ | ಅವಶೇಷದಡಿ ಸಿಲುಕಿದ ತಾಯಿ, ಮಗು

ಉಳ್ಳಾಲ: ಮಳೆಯಾರ್ಭಟಕ್ಕೆ  ದ.ಕ ಜಿಲ್ಲೆ.ಯ ಜನರಲ್ಲಿ ಆತಂಕ ಹೆಚಾಗುತ್ತಿದ್ದು, ಇದೀಗ  ಉಳ್ಳಾಲದ ಮಂಜನಾಡಿ ಗ್ರಾಮದಲ್ಲಿ ಶುಕ್ರವಾರ ಮುಂಜಾನೆ ಮನೆಯ ಮೇಲೆ ಭಾರೀ ಪ್ರಮಾಣದಲ್ಲಿ ಮಣ್ಣು ಕುಸಿದ ಪರಿಣಾಮ ಮಹಿಳೆ ಮತ್ತು ಮಗು ಅಸುನೀಗಿದ್ದಾರೆ. ಘಟನೆಯಲ್ಲಿ ಇಬ್ಬರನ್ನು ರಕ್ಷಿಸಲಾಗಿದ್ದು, ತಾಯಿ ಮತ್ತು ಒಂದು ಮಗು ಅವಶೇಷದಡಿ ಸಿಲುಕಿದ್ದಾರೆ. ಮಂಜನಾಡಿ ಗ್ರಾಮದ ಉರುಮನೆ ಮದಪಾಡಿಯಲ್ಲಿ ಘಟನೆ ನಡೆದಿದ್ದು, ತೋಟದ ನಡುವಿರುವ ಮನೆಯ ಮೇಲೆ ಬೃಹತ್ ಮರ ಸಹಿತ ಸುಮಾರು 30 ಅಡಿ ದರೆ ಕುಸಿದು ಬಿದ್ದಿದೆ. ಶುಕ್ರವಾರ ಮುಂಜಾನೆ ಸುಮಾರು

ಮನೆ ಮೇಲೆ ಬಿದ್ದ ಧರೆ | ಅವಶೇಷದಡಿ ಸಿಲುಕಿದ ತಾಯಿ, ಮಗು Read More »

error: Content is protected !!
Scroll to Top