ಕೆದಿಲ ಗ್ರಾಮದ ಗಡಿಯಾರದಲ್ಲಿ ಸಿಡಿಲು ಬಡಿದು ಬಾಲಕ ಮೃತ್ಯು
ಬಂಟ್ವಾಳ: ಸಿಡಿಲು ಬಡಿದು ಬಾಲಕನೋರ್ವ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಕೆದಿಲ ಗ್ರಾಮದ ಗಡಿಯಾರದಲ್ಲಿ ಭಾನುವಾರ ಸಂಜೆ ನಡೆದಿದೆ. ಕೆದಿಲ ಗ್ರಾಮದ ಗಡಿಯಾರ ನಿವಾಸಿ ಸುಭೋದ್ ಸಿ. (14) ಸಿಡಿಲು ಬಡಿದು ಮೃತಪಟ್ಟವರು. ಈ ಕುರಿತು ಕಂದಾಯ ಇಲಾಖಾಧಿಕಾರಿಗಳು ಮಾಹಿತಿ ನೀಡಿದ್ದು, ಮರಣೋತ್ತರ ಪರೀಕ್ಷೆಗಾಗಿ ದೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಕೆದಿಲ ಗ್ರಾಮದ ಗಡಿಯಾರದಲ್ಲಿ ಸಿಡಿಲು ಬಡಿದು ಬಾಲಕ ಮೃತ್ಯು Read More »