ಅಪಘಾತ

ಚಾಲಕನ ನಿದ್ರೆಯ ಮಂಪರಿನಲ್ಲಿ ಪ್ರಪಾತಕ್ಕೆ ಬಿದ್ದ ಕಾರು | ಅದೃಷ್ಟವಶಾತ್ ಚಾಲಕ ಅಪಾಯದಿಂದ ಪಾರು

ಪುತ್ತೂರು: ಸಂಟ್ಯಾರ್ ಪಾಣಾಜೆ ಹೆದ್ದಾರಿಯ ಕೈಕಾರ ಎಂಬಲ್ಲಿ ಚಾಲಕನಿಗೆ ನಿದ್ದೆ ಮಂಪರು ಆವರಿಸಿ ಹತೋಟಿ ತಪ್ಪಿದ ಕಾರು ರಸ್ತೆ ಅಂಚಿನಲ್ಲಿದ್ದ 50 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದಿದೆ. ಶನಿವಾರ ತಡರಾತ್ತಿ ಈ ಘಟನೆ ನಡೆದಿದ್ದು, ಪ್ರಪಾತಕ್ಕೆ ಕಾರು ಉರುಳಿ ಬಿದ್ದರೂ, ಯಾವುದೇ ಆಪಾಯಗಳಿಲ್ಲದೇ ಚಾಲಕ ಪಾರಾಗಿದ್ದಾನೆ. ಕಾರು ಕಾಸರಗೋಡು ಜಿಲ್ಲೆಯ ಬದಿಯಡ್ಕ ಬಳಿಯ ಡಾ. ಚಂದ್ರಶೇಖರ್ ಅವರ ಪುತ್ರ ಡಾ. ವಿವೇಕ್ ಅವರಿಗೆ ಸೇರಿದಾಗಿದೆ. ರಾತ್ರಿ ಬದಿಯಡ್ಕದಿಂದ ಅವರು ಪುತ್ತೂರಿಗೆ ಕಾರ್ಯ ನಿಮಿತ್ತ ಬರುತ್ತಿದ್ದರು. ಬಳಕ್ಕೆ […]

ಚಾಲಕನ ನಿದ್ರೆಯ ಮಂಪರಿನಲ್ಲಿ ಪ್ರಪಾತಕ್ಕೆ ಬಿದ್ದ ಕಾರು | ಅದೃಷ್ಟವಶಾತ್ ಚಾಲಕ ಅಪಾಯದಿಂದ ಪಾರು Read More »

ಎಕ್ಸ್ ಪ್ರೆಸ್ ರೈಲು ಡಿಕ್ಕಿ : ನಾಲ್ವರು ಕಾರ್ಮಿಕರು ಮೃತ್ಯು

ತಿರುವನಂತಪುರಂ: ಎಕ್ಸ್ ಪ್ರೆಸ್ ರೈಲು ಡಿಕ್ಕಿ ಹೊಡೆದು ನಾಲ್ವರು ಕಾರ್ಮಿಕರು ಮೃತಪಟ್ಟ ಘಟನೆ ಕೇರಳದ ಚೋರನೂರ್ ರೈಲು ನಿಲ್ದಾಣದಲ್ಲಿ ಶನಿವಾರ ಸಂಜೆ ನಡೆದಿದೆ. ತಿರುವನಂತಪುರಂ ಕಡೆಗೆ ಸಾಗುತ್ತಿದ್ದ ಕೇರಳ ಎಕ್ಸ್‌ಪ್ರೆಸ್ ಡಿಕ್ಕಿ ಹೊಡೆದ ಪರಿಣಾಮ ತಮಿಳುನಾಡಿನ ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರು ಪೌರ ಕಾರ್ಮಿಕರು ಮೃತಪಟ್ಟಿದ್ದಾರೆ. ರೈಲು ನಿಲ್ದಾಣದಿಂದ ಕೆಲವೇ ಕಿ.ಮೀ. ದೂರದಲ್ಲಿರುವ ತೋರನೂರ್ ಸೇತುವೆ ಬಳಿ ಹಳಿಯಿಂದ ಕಸವನ್ನು ತೆರವುಗೊಳಿಸುತ್ತಿದ್ದಾಗ ನವದೆಹಲಿ- ತಿರುವನಂತಪುರಂ ಮಾರ್ಗದ ಎಕ್ಸ್ ಪ್ರೆಸ್ ರೈಲು ಮಧ್ಯಾಹ್ನ ಕಾರ್ಮಿಕರಿಗೆ ಡಿಕ್ಕಿ ಹೊಡೆದಿದೆ ಎಂದು

ಎಕ್ಸ್ ಪ್ರೆಸ್ ರೈಲು ಡಿಕ್ಕಿ : ನಾಲ್ವರು ಕಾರ್ಮಿಕರು ಮೃತ್ಯು Read More »

ದ್ವಿಚಕ್ರ ವಾಹನದ ಮೇಲೆ ಬಿದ್ದ ಮರ : ಸವಾರ ಮೃತ್ಯು

ಕಡಬ: ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಸಂದರ್ಭ ಮರ ಬಿದ್ದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕಡಬದಲ್ಲಿ ನಡೆದಿದೆ. ಕಡಬ ತಾಲೂಕಿನ ಸ್ಪಂದನ ಸಮುದಾಯ ಸಹಕಾರಿ ಸಂಘದ ಪಿಗ್ಮಿ ಸಂಗ್ರಾಹಕರಾದ ಸೀತಾರಾಮ ಗೌಡ ದೇವಸ್ಯ ಮೃತಪಟ್ಟವರು. ಕಡಬ ಸ್ಪಂದನ ಸಮುದಾಯ ಸಹಕಾರಿ ಸಂಘದ ಸಿಬ್ಬಂದಿ ಶಿಲ್ಪಾ ಅವರ ತಂದೆಯಾಗಿದ್ದಾರೆ.

ದ್ವಿಚಕ್ರ ವಾಹನದ ಮೇಲೆ ಬಿದ್ದ ಮರ : ಸವಾರ ಮೃತ್ಯು Read More »

ಡಿಸೇಲ್ ಟ್ಯಾಂಕರ್ ಪಲ್ಟಿ : ಡೀಸೆಲ್ ಸೋರಿಕೆ

ಸುಳ್ಯ : ಡೀಸೆಲ್ ಸಾಗಾಟದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಮಧ್ಯೆ ಪಲ್ಟಿಯಾದ ಘಟನೆ ಮಾಣಿ-ಮೈಸೂರು ಹೆದ್ದಾರಿಯ ಜಾಲ್ಸೂರು ಗ್ರಾಮದ ಬೈತಡ್ಕ ತಿರುವಿನಲ್ಲಿ ನಡೆದಿದೆ. ಮಂಗಳೂರಿನಿಂದ ಮಡಿಕೇರಿ ಕಡೆಗೆ ಡೀಸೆಲ್ ಹೊತ್ತೊಯ್ಯುತ್ತಿದ್ದ ಟ್ಯಾಂಕರ್ ಬೈತಡ್ಕ ತಿರುವಿನಲ್ಲಿ ರಸ್ತೆ ಮಧ್ಯೆ ಪಲ್ಟಿಯಾಗಿದೆ. ಪರಿಣಾಮ ಟ್ಯಾಂಕರ್ ನಲ್ಲಿ ಡೀಸಲ್ ಸೋರಿಕೆಯಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದವರು ಆಗಮಿಸಿ, ಕಾರ್ಯಾಚರಣೆ ನಡೆಸುತ್ತಿದ್ದಾರೆ. ಟ್ಯಾಂಕರ್ ಚಾಲಕನಿಗೆ ಗಾಯವಾಗಿದ್ದು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸ್ವಲ್ಪ ಹೊತ್ತು ವಾಹನ ಸಂಚಾರಕ್ಕೆ ಅಡ್ಡಿ ಉಂಟಾಯಿತು.

ಡಿಸೇಲ್ ಟ್ಯಾಂಕರ್ ಪಲ್ಟಿ : ಡೀಸೆಲ್ ಸೋರಿಕೆ Read More »

ಎರಡು ಬೈಕ್‍ ಗಳ ನಡುವೆ ಡಿಕ್ಕಿ | ಓರ್ವರಿಗೆ ಗಂಭೀರ ಗಾಯ

ಪುತ್ತೂರು: ಮುಕ್ರುಂಪಾಡಿಯಲ್ಲಿ ಬೈಕ್ ಗಳ ನಡುವೆ ಭೀಕರ ಅಪಘಾತ ಸಂಭವಿಸಿ  ಓರ್ವ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಪುತ್ತೂರು ಖಾಸಗಿ ಆಸ್ಪತ್ರೆಯ ಸಿಬ್ಬಂದಿ ಸಂತೋಷ್ ಶೆಟ್ಟಿ ಮತ್ತು ಕಾಸರಗೋಡಿನ ಉದಯ ಎಂಬವರ ಬೈಕ್ ಗಳು ಮಾಣಿ ಮೈಸೂರು ಹೈವೇಯ ಪುತ್ತೂರಿನ ಮುಕ್ರುಂಪಾಡಿಯಲ್ಲಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಇಬ್ಬರಿಗೂ ಗಾಯವಾಗಿದೆ. ಓರ್ವರು ಗಂಭೀರ ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರನ್ನು ಕೂಡಲೇ ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಮಹಾವೀರ ಆಸ್ಪತ್ರೆಗೆ ತನ್ನ ಕಾರಿನಲ್ಲೇ ಸಾಗಿಸಿದ್ದಾರೆ ಎನ್ನಲಾಗಿದೆ.

ಎರಡು ಬೈಕ್‍ ಗಳ ನಡುವೆ ಡಿಕ್ಕಿ | ಓರ್ವರಿಗೆ ಗಂಭೀರ ಗಾಯ Read More »

ಪಾದಚಾರಿಗೆ ದ್ವಿಚಕ್ರ ವಾಹನ ಡಿಕ್ಕಿ

ಪುತ್ತೂರು : ರಸ್ತೆ ಬದಿ ನಿಂತಿದ್ದ ವ್ಯಕ್ತಿಯೊಬ್ಬರಿಗೆ ಡಿಕ್ಕಿ ಹೊಡೆದ ಘಟನೆ ಕೋಡಿಂಬಾಡಿ ಸಿಂಗಾರ ಮಂಟಪದ ಬಳಿ ನಡೆದಿದೆ. ಬೆಳಿಗ್ಗೆ ದ್ವಿಚಕ್ರ ವಾಹನ  ಸವಾರ ರೌಶೀನ್ ಎಂಬವರು ಉಪ್ಪಿನಂಗಡಿ ಕಡೆಯಿಂದ ಪುತ್ತೂರು ಕಡೆಗೆ ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ಸವಾರಿ ಮಾಡಿದ ಪರಿಣಾಮ ರಸ್ತೆಬದಿ ನಡೆದುಕೊಂಡು ಹೋಗುತ್ತಿದ್ದ ಪಾದಾಚಾರಿ ಹರಿಯಪ್ಪ ನಾಯ್ಕ ಎಂಬವರಿಗೆ ಹಿಂಬದಿಯಿಂದ ಡಿಕ್ಕಿಯಾಗಿದೆ. ಅಪಘಾತದಲ್ಲಿ ಹರಿಯಪ್ಪ ನಾಯ್ಕ ಮತ್ತು ದ್ವಿಚಕ್ರ ವಾಹನ ಸವಾರ ರೌಶೀನ್‌ ರಸ್ತೆಯಲ್ಲಿ ಬಿದ್ದು ಹರಿಯಪ್ಪ ನಾಯ್ಕ ರವರಿಗೆ ಗಾಯಗಳಾಗಿದ್ದು ಗಾಯಾಳು ಹರಿಯಪ್ಪ

ಪಾದಚಾರಿಗೆ ದ್ವಿಚಕ್ರ ವಾಹನ ಡಿಕ್ಕಿ Read More »

ಸ್ಕೂಟರ್–ಬೈಕ್ ಅಪಘಾತ : ಮೂರು ಮಂದಿಗೆ ಗಾಯ

ಪುತ್ತೂರು: ಬೈಕ್ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಮೂವರು ಗಾಯಗೊಂಡ ಘಟನೆ ಪುತ್ತೂರು – ಉಪ್ಪಿನಂಗಡಿ ರಸ್ತೆಯ ಕೇಪುಳು ಜಂಕ್ಷನ್ ನಲ್ಲಿ ನಡೆದಿದೆ. ಪುತ್ತೂರಿನಿಂದ ಉಪ್ಪಿನಂಗಡಿಗೆ ತೆರಳುತ್ತಿದ್ದ ಬೈಕ್ ಮತ್ತು ಕೇವುಳು ರಸ್ತೆಯಿಂದ ಮುಖ್ಯ ರಸ್ತೆಗೆ ಬರುತ್ತಿದ್ದ ಸ್ಕೂಟರ್ ನಡುವೆ ಅಪಘಾತ ಸಂಭವಿಸಿದೆ. ಸ್ಕೂಟರ್ ನಲ್ಲಿದ್ದ ಸವಾರ ಮತ್ತು ಹಿಂಬದಿ ಸವಾರ ಹಾಗು ಬೈಕ್ ಸವಾರನಿಗೆ ಗಾಯವಾಗಿದೆ.

ಸ್ಕೂಟರ್–ಬೈಕ್ ಅಪಘಾತ : ಮೂರು ಮಂದಿಗೆ ಗಾಯ Read More »

ರೈಲ್ವೇ ಹಳಿಯಲ್ಲಿ ಸೆಂಟ್ರಿಂಗ್‍ ಕಾರ್ಮಿಕ ರಾಧಾಕೃಷ್ಣ ನಾಯ್ಕರ ಮೃತದೇಹ ಪತ್ತೆ

ಪುತ್ತೂರು : ಸೆಂಟ್ರಿಂಗ್‍ ಕಾರ್ಮಿಕರೋರ್ವರ ಮೃತದೇಹ ಪುತ್ತೂರಿನ ಹಾರಾಡಿ ಸಮೀಪ ರೈಲು ಹಳಿಯಲ್ಲಿ ಗುರುವಾರ ಮಧ್ಯಾಹ ಪತ್ತೆಯಾಗಿದೆ. ಉಕ್ಕಿನಡ್ಕ ಸಮೀಪದ ಸರ್ಹಂಗಳ ನಿವಾಸಿ ತಿಮ್ಮ ನಾಯ್ಕ ಎಂಬವರ ಪುತ್ರ ಚನಿಯಪ್ಪ ಯಾನೆ ರಾಧಾಕೃಷ್ಣ ನಾಯ್ಕ (48) ಮೃತಪಟ್ಟವರು. ಸೆಂಟ್ರಿಂಗ್ ಕಾರ್ಮಿಕರಾದ ರಾಧಾಕೃಷ್ಣ ಪುತ್ತೂರು ಸಮೀಪದ ಕಬಕ ಪರಿಸರದಲ್ಲಿ ಕೆಲಸ ನಿರ್ವಹಿಸುತ್ತಿದ್ದು ವಾರಕ್ಕೊಮ್ಮೆ ಊರಿಗೆ ಬರುತ್ತಿದ್ದರು. ಬುಧವಾರ ಬೆಳಗ್ಗೆ ಮನೆಯಿಂದ ತೆರಳಿದ್ದರು ಎನ್ನಲಾಗಿದೆ. ಕಬಕ ಸ್ಟೇಶನ್ ವ್ಯಾಪ್ತಿಯ ರೈಲು ಹಳಿಯಲ್ಲಿ ಗುರುವಾರ ಮಧ್ಯಾಹ್ನ ಮೃತದೇಹ ಪತ್ತೆಯಾಗಿದ್ದು ಬುಧವಾರ ರಾತ್ರಿ

ರೈಲ್ವೇ ಹಳಿಯಲ್ಲಿ ಸೆಂಟ್ರಿಂಗ್‍ ಕಾರ್ಮಿಕ ರಾಧಾಕೃಷ್ಣ ನಾಯ್ಕರ ಮೃತದೇಹ ಪತ್ತೆ Read More »

ಅರಿಯಡ್ಕದಲ್ಲಿ ಸಿಡಿಲು ಬಡಿದು ಮನೆಗೆ ಹಾನಿ

ಪುತ್ತೂರು: ಭಾನುವಾರ ಸಂಜೆ ಸುರಿದ ಭಾರೀ ಮಳೆಯ ಸಂದರ್ಭ ಸಿಡಿಲು ಬಡಿದು    ಮನೆಯೊಂದಕ್ಕೆ ಅಪಾರ ಹಾನಿ ಉಂಟಾದ ಘಟನೆ ತಾಲೂಕಿನ ಅರಿಯಡ್ಕ ಗ್ರಾಮದ ಪಾಪೆಮಜಲು ಸಮೀಪದ ಪಾದಲಾಡಿ ಎಂಬಲ್ಲಿ ಸಂಭವಿಸಿದೆ. ಪಾದಲಾಡಿ ನಿವಾಸಿ ಶೇಖರ ಪೂಜಾರಿ ಎಂಬವರ ಮನೆಗೆ ಸಿಡಿಲು ಬಡಿದಿದೆ. ಗೋಡೆ ಬಿರುಕು ಬಿಟ್ಟಿದ್ದು ಟಿವಿ, ಫ್ರಿಜ್ ಮತ್ತಿತರ ಇಲೆಕ್ಟ್ರಾನಿಕ್ ಸೊತ್ತುಗಳು ಸುಟ್ಟು ಹೋಗಿವೆ. ವಿದ್ಯುತ್ ಲೈನ್ ಕೂಡಾ ಸುಟ್ಟು ಹೋಗಿದೆ. ಮನೆಯ ಹೊರಗೆ ಅಂಗಳದಲ್ಲಿದ್ದ ಸಾಕು ನಾಯಿ ಸಿಡಿಲಾಘಾತದಲ್ಲಿ ಮೃತಪಟ್ಟಿದೆ. ಸುಮಾರು ಐವತ್ತು ಸಾವಿರಕ್ಕೂ

ಅರಿಯಡ್ಕದಲ್ಲಿ ಸಿಡಿಲು ಬಡಿದು ಮನೆಗೆ ಹಾನಿ Read More »

ಸರಣಿ ಅಪಘಾತ : ಟ್ರಾಫಿಕ್ ಜಾಮ್‍

ಪುತ್ತೂರು: ಸರಣಿ ಅಪಘಾತ ಸಂಭವಿಸಿದ ಘಟನೆ ದರ್ಬೆ ನಿರೀಕ್ಷಣಾ ಮಂದಿರದ ಎದುರು ಇಂದು ಸಂಜೆ ನಡೆದಿದೆ. ಆಟೋ ರಿಕ್ಷಾ ಮತ್ತು ಎರಡು ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ. ಕಾರು ಚಾಲಕ ಆಟೋ ರಿಕ್ಷಾ ಹಾಗೂ ಇನ್ನೊಂದು ಕಾರಿಗೆ ಡಿಕ್ಕಿ ಹೊಡೆದಿದ್ದು, ಮೂರು ವಾಹನಗಳ ನಡುವೆ ಅಪಘಾತ ಸಂಭವಿಸಿದೆ. ಘಟನೆಯಿಂದಾಗಿ ಕೆಲ ಸಮಯ ಟ್ರಾಫಿಕ್ ಜಾಮ್ ಉಂಟಾಯಿತು. ಬಳಿಕ ಸಂಚಾರಿ ಠಾಣಾ ಪೊಲೀಸರು ಆಗಮಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಸರಣಿ ಅಪಘಾತ : ಟ್ರಾಫಿಕ್ ಜಾಮ್‍ Read More »

error: Content is protected !!
Scroll to Top