ಅಪಘಾತ

ರಸ್ತೆ ದಾಟುತ್ತಿದ್ದ ವೇಳೆ ಮಹಿಳೆಗೆ ಸ್ಕೂಟರ್ ಡಿಕ್ಕಿ : ಮೃತ್ಯು

ಉಪ್ಪಿನಂಗಡಿ: ಮಹಿಳೆಯೊಬ್ಬರು ರಸ್ತೆ ದಾಟುತ್ತಿದ್ದ ವೇಳೆ ದ್ವಿಚಕ್ರ ವಾಹನ ಡಿಕ್ಕಿಯಾಗಿ ಸಾವನ್ನಪ್ಪಿದ ಘಟನೆ ಬಿ.ಸಿ.ರೋಡಿನಲ್ಲಿ ನಡೆದಿದೆ. ಉಪ್ಪಿನಂಗಡಿ ನಟ್ಟಿಬೈಲು ನಿವಾಸಿ ಕೆ.ಸದಾರಾಮ ಎಂಬವರ ಪತ್ನಿ ಸರಸ್ವತಿ (50) ಮೃತಪಟ್ಟವರು. ಸೋಮವಾರ ಬೆಳಗ್ಗೆ ಎಲೈಸಿ ಕಚೇರಿಯಲ್ಲಿ ಕೆಲಸ ಮುಗಿಸಿ, ಉಪ್ಪಿನಂಗಡಿಗೆ ತೆರಳಲು ರಸ್ತೆ ದಾಟುತ್ತಿದ್ದ ವೇಳೆ ಸ್ಕೂಟರ್ ಡಿಕ್ಕಿ ಹೊಡೆದಿದೆ. ಈ ವೇಳೆ ತಲೆಯ ಭಾಗಕ್ಕೆ ಗಾಯಗಳಾಗಿದ್ದು, ಕೂಡಲೇ ಅವರನ್ನು ಸಮೀಪದ ತುಂಬೆಯಲ್ಲಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅಲ್ಲಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಯಿತು. ರಾತ್ರಿ ವೇಳೆ ಚಿಕಿತ್ಸೆಗೆ […]

ರಸ್ತೆ ದಾಟುತ್ತಿದ್ದ ವೇಳೆ ಮಹಿಳೆಗೆ ಸ್ಕೂಟರ್ ಡಿಕ್ಕಿ : ಮೃತ್ಯು Read More »

ತೋಟವೊಂದರಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

ಪುತ್ತೂರು: ತೋಟವೊಂದರಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಪುತ್ತೂರಿನ ಪಾಂಗ್ಲಾಯಿ ಎಂಬಲ್ಲಿ ನಡೆದಿದೆ. ಸ್ಥಳಕ್ಕೆ ಪುತ್ತೂರು ನಗರ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮೃತ ದೇಹದ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ.

ತೋಟವೊಂದರಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ Read More »

ಕಾರು ಡಿಕ್ಕಿ ಬಾಲಕ ಸಾವು

ಬೆಳ್ತಂಗಡಿ: ಕಾರು ಡಿಕ್ಕಿ ಹೊಡೆದು ಬಾಲಕನೋರ್ವ ಮೃತಪಟ್ಟ ಘಟನೆ ಸೋಮವಾರ ಸಂಜೆ ಅಂಡಿಂಜೆಯಲ್ಲಿ ನಡೆದಿದೆ. ಅಂಡಿಂಜೆ ಗ್ರಾಮದ ನಿವಾಸಿ ದಿನೇಶ್ ಶರ್ಮ‌ ಎಂಬವರ ಪುತ್ರ ಇಮಾಂಶು ಶರ್ಮ(5) ಮೃತಪಟ್ಟ ಬಾಲಕ. ಸೋಮವಾರ ಸಂಜೆ ಅಂಡಿಂಜೆಯಲ್ಲಿ ವೇಣೂರು-ನಾರಾವಿ ರಸ್ತೆಯಲ್ಲಿ ಬಂದ ಕಾರು ರಸ್ತೆ ಬದಿಯಲ್ಲಿ ನಿಂತಿದ್ದ ಬಾಲಕನಿಗೆ ಡಿಕ್ಕಿ ಹೊಡೆದಿದೆ. ಹೊಡೆತದ ರಭಸಕ್ಕೆ ರಸ್ತೆಗೆ ಬಿದ್ದ ಬಾಲಕ ಗಂಭೀರವಾಗಿ ಗಾಯಗೊಂಡಿದ್ದು ಕೂಡಲೇ ಬಾಲಕನ್ನು ಆಸ್ಪತ್ರೆಗೆ ಕೊಂಡೊಯ್ದರೂ ಆ ವೇಳೆಗೆ ಬಾಲಕ ಮೃತಪಟ್ಟಿದ್ದ. ಘಟನೆಯ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ‌

ಕಾರು ಡಿಕ್ಕಿ ಬಾಲಕ ಸಾವು Read More »

ವೈದ್ಯರ ಎಡವಟ್ಟಿನಿಂದ ಹೆರಿಗೆ ಶಸ್ತ್ರ ಚಿಕಿತ್ಸೆ ವೇಳೆ ಹೊಟ್ಟೆಯಲ್ಲೇ ಉಳಿದುಕೊಂಡ ಬಟ್ಟೆ | ಆಸ್ಪತ್ರೆ ಹಾಗೂ ವೈದ್ಯರ ವಿರುದ್ಧ ನಗರ ಠಾಣೆಗೆ ದೂರು

ಪುತ್ತೂರು: ವೈದ್ಯರೊಬ್ಬರ ಎಡವಟ್ಟಿನಿಂದ ಹೆರಿಗೆಯಾದ ಬಳಿಕ ನಡೆಸಿದ ಶಸ್ತ್ರ ಚಿಕಿತ್ಸೆಯಲ್ಲಿ ಬಟ್ಟೆ ಮಹಿಳೆಯ ಹೊಟ್ಟೆಯೊಳಗೆ ಉಳಿದು ಬಾಣಂತಿಯೊಬ್ಬರು ಸುಮಾರು ಮೂರು ತಿಂಗಳು ನರಕಯಾತನೆ ಅನುಭವಿಸಿದ್ದು, ಈ ಕುರಿತು ಪುತ್ತೂರು ನಗರ ಠಾಣೆಗೆ ಪುತ್ತೂರಿನ ಆಸ್ಪತ್ರೆ ಹಾಗೂ ವೈದ್ಯರ ವಿರುದ್ಧ ಭಾನುವಾರ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ ಎಂದು ಬಾಣಂತಿಯ ಪತಿ ಗಗನ್ ದೀಪ್ ತಿಳಿಸಿದರು.ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಹೆರಿಗೆಯ ಸಂದರ್ಭ ನಗರದ ಆಸ್ಪತ್ರೆಯೊಂದರ ವೈದ್ಯರ ನಿರ್ಲಕ್ಷತೆಯಿಂದ ಬಟ್ಟೆ ಹೊಟ್ಟೆಯಲ್ಲೇ ಉಳಿದು, ಅದನ್ನು ತಿಳಿದ ಬಳಿಕವೂ ತೆರವು

ವೈದ್ಯರ ಎಡವಟ್ಟಿನಿಂದ ಹೆರಿಗೆ ಶಸ್ತ್ರ ಚಿಕಿತ್ಸೆ ವೇಳೆ ಹೊಟ್ಟೆಯಲ್ಲೇ ಉಳಿದುಕೊಂಡ ಬಟ್ಟೆ | ಆಸ್ಪತ್ರೆ ಹಾಗೂ ವೈದ್ಯರ ವಿರುದ್ಧ ನಗರ ಠಾಣೆಗೆ ದೂರು Read More »

ಹಾಲು ಸಾಗಾಟದ ವಾಹನ ಪಲ್ಟಿ

ಬೆಳ್ತಂಗಡಿ:  ಮಾಲಾಡಿಯ ಕೊದಬೈಲು ಇಂಡಿಯನ್ ಪೆಟ್ರೋಲ್ ಬಂಕ್ ಸಮೀಪದ ಅರ್ತಿಲ ಎಂಬಲ್ಲಿ ಹಾಲು ಸಾಗಾಟದ ವಾಹನವೊಂದು ಪಲ್ಟಿಯಾದ ಘಟನೆ ನಡೆದಿದೆ. ಮಂಗಳೂರು ಕಡೆಯಿಂದ ಧರ್ಮಸ್ಥಳ ಕಡೆ ಬರುತ್ತಿದ್ದ ನಂದಿನಿ ಹಾಲಿನ ವಾಹನ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅಪಘಾತದಿಂದ ಯಾವುದೇ ಅನಾಹುತ ಸಂಭವಿಸಿಲ್ಲ. ಈ ಕುರಿತು ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಾಲು ಸಾಗಾಟದ ವಾಹನ ಪಲ್ಟಿ Read More »

ಭೀಕರ ಅಪಘಾತ : ಕುಂಭಮೇಳಕ್ಕೆ ಹೋಗುತ್ತಿದ್ದ ಬೆಳಗಾವಿಯ 7 ಮಂದಿ ಸಾವು

ಬೆಳಗಾವಿ: ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಪುಣ್ಯಸ್ನಾನಕ್ಕೆ ತೆರಳುತ್ತಿದ್ದ ಬೆಳಗಾವಿಯ ಗೋಕಾಕ್‌ ನಗರದ 7 ಮಂದಿ ಭೀಕರ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಮಧ್ಯ ಪ್ರದೇಶದ ಜಬಲಪುರ ಪೆಹರಾ ಟೋಲ್ ನಾಕಾ ಬಳಿ ಇಂದು ಬೆಳಗಿನ ಜಾವ ಕ್ರೂಸರ್‌ ವಾಹನ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ದುರಂತ ಸಂಭವಿಸಿದೆ. 7 ಮಂದಿ ಕನ್ನಡಿಗರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ. ಎರಡು ದಿನಗಳ ಹಿಂದೆ ಗೋಕಾಕ್‌ ನಗರದಿಂದ 10 ಮಂದಿ ಕ್ರೂಸರ್‌ನಲ್ಲಿ ಮಹಾಕುಂಭಮೇಳಕ್ಕೆ ಹೊರಟಿದ್ದರು. ಇಂದು ಮುಂಜಾನೆ

ಭೀಕರ ಅಪಘಾತ : ಕುಂಭಮೇಳಕ್ಕೆ ಹೋಗುತ್ತಿದ್ದ ಬೆಳಗಾವಿಯ 7 ಮಂದಿ ಸಾವು Read More »

ಪಾದಚಾರಿಗಳ ಮೇಲೆ ಹರಿದ ಖಾಸಗಿ ಬಸ್‍ : ಇಬ್ಬರು ಮೃತ್ಯು, ಓರ್ವ ಗಂಭೀರ

ಹಾಸನ: ಧರ್ಮಸ್ಥಳಕ್ಕೆ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ವೇಗವಾಗಿ ಬಂದ ಖಾಸಗಿ ಬಸ್ ಹರಿದ ಪರಿಣಾಮ ಇಬ್ಬರು ಮೃತಪಟ್ಟಿದ್ದು, ಓರ್ವ ಗಂಭೀರ ಗಾಯಗೊಂಡ ಘಟನೆ ಹಾಸನ ತಾಲೂಕಿನ ಕೆಂಚಟ್ಟಹಳ್ಳಿ ಬಳಿ ನಡೆದಿದೆ. ಸುರೇಶ್ (60), ಕುಮಾರ್ (55) ಮೃತಪಟ್ಟವರೆಂದು ಗುರುತಿಸಲಾಗಿದೆ. ಮೃತರು ಮಂಡ್ಯ ಜಿಲ್ಲೆ ಕೆಆರ್ ಪೇಟೆ ತಾಲೂಕಿನ ಆನಗೋಳು ಗ್ರಾಮದವರು. ಘಟನೆಯಲ್ಲಿ ಗಂಭೀರ ಗಾಯಗೊಂಡ ದಿನೇಶ್‌ಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಾಂತಿಗ್ರಾಮ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ

ಪಾದಚಾರಿಗಳ ಮೇಲೆ ಹರಿದ ಖಾಸಗಿ ಬಸ್‍ : ಇಬ್ಬರು ಮೃತ್ಯು, ಓರ್ವ ಗಂಭೀರ Read More »

ಧರ್ಮಸ್ಥಳಕ್ಕೆ ಬರುತ್ತಿದ್ದ ಪಾದಯಾತ್ರಿಗಳಿಗೆ ಬಸ್‌ ಡಿಕ್ಕಿ : ಇಬ್ಬರು ಸಾವು

ಹಾಸನ: ಧರ್ಮಸ್ಥಳಕ್ಕೆ ತೆರಳುತ್ತಿದ್ದ ಪಾದಯಾತ್ರಿಗಳಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದು ಇಬ್ಬರು ಸಾವನ್ನಪ್ಪಿದ್ದು, ಓರ್ವ ಗಂಭೀರ ಗಾಯಗೊಂಡ ಘಟನೆ ಹಾಸನ ತಾಲೂಕಿನ ಕೆಂಚಟ್ಟಹಳ್ಳಿ ಬಳಿ ನಡೆದಿದೆ. ಶಿವರಾತ್ರಿ ಹಬ್ಬದ ಸಂದರ್ಭದಲ್ಲಿ ನಾಡಿನೆಲ್ಲೆಡೆಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ ಮೂಲಕ ಆಗಮಿಸುವುದು ವಾಡಿಕೆ.ಸುರೇಶ್ (60) ಮತ್ತು ಕುಮಾರ್ (55) ಬಸ್‌ ಡಿಕ್ಕಿ ಹೊಡೆದು ಮೃತಪಟ್ಟಿರುವ ದುರ್ದೈವಿಗಳು. ಮೃತರು ಮಂಡ್ಯ ಜಿಲ್ಲೆ, ಕೆ.ಆರ್ ಪೇಟೆ ತಾಲೂಕಿನ ಆನಗೋಳು ಗ್ರಾಮದವರು. ಗಂಭೀರ ಗಾಯಗೊಂಡ ದಿನೇಶ್‌ಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಇಂದು ಮುಂಜಾನೆ ಧರ್ಮಸ್ಥಳಕ್ಕೆ ರಸ್ತೆ ಬದಿ

ಧರ್ಮಸ್ಥಳಕ್ಕೆ ಬರುತ್ತಿದ್ದ ಪಾದಯಾತ್ರಿಗಳಿಗೆ ಬಸ್‌ ಡಿಕ್ಕಿ : ಇಬ್ಬರು ಸಾವು Read More »

ಕಾರು-ಬುಲೆಟ್ ಬೈಕ್‍ ಡಿಕ್ಕಿ

ಪುತ್ತೂರು: ಕಾರು ಹಾಗೂ ಬುಲೆಟ್ ಬೈಕ್‍ ಅಪಘಾತ ಸಂಭವಿಸಿದ ಘಟನೆ ಆರ್ಯಾಪು ಗ್ರಾಮದ ಕಲ್ಲರ್ಪೆ ಕಾರ್ಪಾಡಿ ದೇವಸ್ಥಾನದ ದ್ವಾರದ ಬಳಿ ಇಂದು ಸಂಜೆ ನಡೆದಿದೆ. ಅಪಘಾತದಲ್ಲಿ ಬುಲೆಟ್ ಸವಾರ ಗಾಯಗೊಂಡಿದ್ದಾರೆ. ಗಾಯಗೊಂಡ ಬೈಕ್ ಸವಾರನನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ.

ಕಾರು-ಬುಲೆಟ್ ಬೈಕ್‍ ಡಿಕ್ಕಿ Read More »

ಮಹಾಕುಂಭಮೇಳಕ್ಕೆ ಹೋಗಿದ್ದ ಬೀದರ್‌ನ 6 ಮಂದಿ ಭೀಕರ ಅಪಘಾತಕ್ಕೆ ಬಲಿ

ಲಾರಿಗೆ ಹಿಂದಿನಿಂದ ಕ್ರೂಸರ್‌ ವಾಹನ ಡಿಕ್ಕಿ ಹೊಡೆದು ಅಪಘಾತ ಲಖನೌ: ಮಹಾಕುಂಭಮೇಳಕ್ಕೆ ಹೋಗಿದ್ದ ಬೀದರ್‌ನ ಒಂದೇ ಕುಟುಂಬದ 6 ಜನ ಭೀಕರ ಅಪಘತದಲ್ಲಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಕಾಶಿ ಬಳಿ ನಡೆದಿದೆ. ಲಾರಿ ಮತ್ತು ಕ್ರೂಸರ್‌ ನಡುವೆ ಇಂದು ಬೆಳಗ್ಗೆ ಮಿರಾಜಾಪುರ ಜಿಲ್ಲೆಯ ರೂಪಾಪುರ ಬಳಿ ಅಪಘಾತ ಸಂಭವಿಸಿದೆ. 6 ಮಂದಿ ಸಾವನ್ನಪ್ಪಿದ್ದು ಉಳಿದವರ ಸ್ಥಿತಿ ಚಿಂತಾಜನಕವಾಗಿದೆ. ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.ಬೀದರ್ ನಗರದ ಲಾಡಗೇರಿ ಬಡಾವಣೆಯ ನಿವಾಸಿಗಳಾದ ಸುನೀತಾ(35) ಸಂತೋಷ್‌

ಮಹಾಕುಂಭಮೇಳಕ್ಕೆ ಹೋಗಿದ್ದ ಬೀದರ್‌ನ 6 ಮಂದಿ ಭೀಕರ ಅಪಘಾತಕ್ಕೆ ಬಲಿ Read More »

error: Content is protected !!
Scroll to Top