ಅಪಘಾತ

ಮಂಜನಾಡಿ ಭೂಕುಸಿತ ದುರಂತ : ಎರಡೂ ಕಾಲುಗಳನ್ನು ಕಳೆದುಕೊಂಡ ಮಹಿಳೆ

ಸ್ವಾಧೀನ ಕಳೆದುಕೊಂಡ ಕಾಲುಗಳನ್ನು ಶಸ್ತ್ರಚಿಕಿತ್ಸೆ ಮಾಡಿ ತೆಗೆದ ವೈದ್ಯರು ಮಂಗಳೂರು: ಉಳ್ಳಾಲದ ಮಂಜನಾಡಿ ಸಮೀಪ ಮೊಂಟೆಪದವು ಕೋಡಿಯಲ್ಲಿ ಮನೆ ಮೇಲೆ ಗುಡ್ಡ ಕುಸಿದು ಅಜ್ಜಿ ಮತ್ತು ಇಬ್ಬರು ಮೊಮ್ಮಕ್ಕಳು ಬಲಿಯಾದ ಘಟನೆಯಲ್ಲಿ ಬದುಕುಳಿದವರ ಬದುಕು ಇನ್ನಷ್ಟು ಯಾತನಾಮಯವಾಗಿದೆ. ಮಣ್ಣಿನಡಿ ಸಿಲುಕಿ ಮೃತಪಟ್ಟ ಇಬ್ಬರು ಮಕ್ಕಳು ಮತ್ತು ಹಿರಿಯ ಮಹಿಳೆಯ ಅಂತ್ಯಸಂಸ್ಕಾರವನ್ನು ಶನಿವಾರ ಕಣ್ಣೀರಕೋಡಿಯ ನಡುವೆಯೇ ಮಾಡಲಾಗಿದೆ. ಸರ್ವಧರ್ಮದವರು ಸೇರಿ ಅಂತ್ಯಕ್ರಿಯೆ ನೆರವೇರಿಸಿದ್ದು, ಈ ಸಂದರ್ಭದಲ್ಲಿ ಅಲ್ಲಿದ್ದ ಎಲ್ಲರೂ ಕಣ್ಣೀರು ಸುರಿಸಿದ್ದಾರೆ. ಘಟನೆಯಲ್ಲಿ ಮೃತಪಟ್ಟ ಮೂವರನ್ನು ಮನೆ ಕುಸಿದ […]

ಮಂಜನಾಡಿ ಭೂಕುಸಿತ ದುರಂತ : ಎರಡೂ ಕಾಲುಗಳನ್ನು ಕಳೆದುಕೊಂಡ ಮಹಿಳೆ Read More »

ಕಾರ್ಕಳ : ಹಟ್ಟಿಗೆ ಬೆಂಕಿ ತಗಲಿ ಕಂಬಳದ ಕೋಣಗಳು ಸಾವು

ಜೀವಂತ ಸುಟ್ಟು ಕರಕಲಾದ ಚಾಂಪಿಯನ್‌ ಕೋಣಗಳು ಕಾರ್ಕಳ : ಹಟ್ಟಿಗೆ ಬೆಂಕಿ ತಗುಲಿದ ಪರಿಣಾಮ ಕಂಬಳದ ಕೋಣಗಳು ಜೀವಂತ ದಹಿಸಿದ ದಾರುಣ ಘಟನೆ ಶುಕ್ರವಾರ ತಡರಾತ್ರಿ ಕಾರ್ಕಳದ ಕಾಂತಾವರ ಸಮೀಪದ ಬೇಲಾಡಿ ಎಂಬಲ್ಲಿ ಸಂಭವಿಸಿದೆ. ಬೇಲಾಡಿ ಬಾವ ಅಶೋಕ್‌ ಶೆಟ್ಟಿಯವರ 2022-23ನೇ ಕಂಬಳ ಸಾಲಿನಲ್ಲಿ ಕನಹಲಗೆಯಲ್ಲಿ ಚಾಂಪಿಯನ್‌ ಪಡೆದ ಅಪ್ಪು ಮತ್ತು ತೋನ್ಸೆ ಸಾವಿಗೀಡಾದ ಕೋಣಗಳು. ಶಾರ್ಟ್‌ ಸರ್ಕ್ಯೂಟ್‌ನಿಂದಾಗಿ ಬೆಂಕಿ ಹತ್ತಿಕೊಂಡಿದೆ ಎನ್ನಲಾಗುತ್ತಿದೆ.

ಕಾರ್ಕಳ : ಹಟ್ಟಿಗೆ ಬೆಂಕಿ ತಗಲಿ ಕಂಬಳದ ಕೋಣಗಳು ಸಾವು Read More »

ಮನೆ ಮೇಲೆ ಕುಸಿದ ಗುಡ್ಡ | ಮೂವರು ಬಲಿ, ನಾಲ್ವರ ರಕ್ಷಣೆ

ಮಂಗಳೂರು : ಈ ಭಾರಿಯ ವರ್ಷಧಾರೆ ನಿರೀಕ್ಷೆಕ್ಕಿಂತಲೂ ಸುರಿಯುತ್ತಿದ್ದು, ಮಳೆಯಿಂದಾಗಿ ಎಲ್ಲೆಡೆ ಅವಘಡಗಳು ಸಂಭವಿಸಿದೆ. ಇದಿಗ ಅಂತದ್ದೇ ಹೃದಯವಿದ್ರಕವಾದ ಘಟನೆ ಮಂಗಳೂರಿನ ಉಳ್ಳಾಲದಲ್ಲಿ ನಡೆದಿದೆ. ಹೌದು ಮಂಗಳೂರು  ಉಳ್ಳಾಲದಲ್ಲಿ ಭೂ ಕುಸಿತಕ್ಕೆ ಸಿಲುಕಿ ಮನೆಯಲ್ಲಿ ಮಲಗಿದ್ದ 3 ಜನರ ಪೈಕಿ ಮೂವರು ಸಾವನ್ನಪ್ಪಿದ್ದಾರೆ. ಆದರೆ, ಮನೆ ಕುಸಿತವಾದಾಗ ತನ್ನ ಪ್ರಾಣ ಹೋದರೂ ಸರಿ ಮಕ್ಕಳನ್ನು ಉಳಿಸೋಣವೆಂದು ಗೋಡೆಯ ಭಾರ ತಾನು ತಡೆದುಕೊಂಡು ಮಕ್ಕಳನ್ನು ಉಳಿಸಿದ್ದಳು. ಗೋಡೆಯ ಭಾರಕ್ಕೆ ದೇಹ ಜರ್ಜಿರಿತವಾಗಿ ಪ್ರಜ್ಞೆ ಕಳೆದುಕೊಂಡಿದ್ದಳು. ಗೋಡೆ ಬಿದ್ದ ಕ್ಷಣದಲ್ಲಿ

ಮನೆ ಮೇಲೆ ಕುಸಿದ ಗುಡ್ಡ | ಮೂವರು ಬಲಿ, ನಾಲ್ವರ ರಕ್ಷಣೆ Read More »

ನಾಡ ದೋಣಿ ಮಗುಚಿ ಇಬ್ಬರು ನಾಪತ್ತೆ

ಮಂಗಳೂರು: ನಾಡ ದೋಣಿ ಮಗುಚಿ ಇಬ್ಬರು ನಾಪತ್ತೆಯಾದ ಘಟನೆ ಬೆಂಗ್ರೆ ಅಳಿವೆ  ಸಮೀಪ ಮೇ 30ರ ಶುಕ್ರವಾರ ಸಂಭವಿಸಿದೆ. ತೋಟ ಬೆಂಗ್ರೆ ಅಳಿವೆ ಬಾಗಿಲು ಸಮೀಪ ಮೀನು ಹಿಡಿಯುತ್ತಿದ್ದಾಗ ಜೋರಾದ ಮಳೆ, ಗಾಳಿಯ ರಭಸಕ್ಕೆ  ಧೋಣಿ ಮಗುಚಿದ್ದು, ದೋಣಿಯಲ್ಲಿದ್ದವರು ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ. ದೋಣಿಯಲ್ಲಿದ್ದ ಯಶವಂತ, ಕಮಲಾಕ್ಷ ಎಂಬವರು ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ.

ನಾಡ ದೋಣಿ ಮಗುಚಿ ಇಬ್ಬರು ನಾಪತ್ತೆ Read More »

ಮಾಣಿ ಹೈಸ್ಕೂಲ್ ಬಳಿ ಗುಡ್ಡ ಕುಸಿತ

ವಿಟ್ಲ: ಅಡ್ಡಹೋಳೆ- ಬಿ ಸಿ.‌ರೋಡ್ ರಾಷ್ಟ್ರೀಯ ಹೆದ್ದಾರಿಯ  ಅಂಡರ್ ಪಾಸ್ ರಸ್ತೆ ಸಂಚಾರಕ್ಕೆ ಮುಕ್ತಗೊಂಡ ಬೆನ್ನಲ್ಲೇ ಮಾಣಿ ಹೈಸ್ಕೂಲ್ ಬಳಿ ಸರ್ವಿಸ್ ರಸ್ತೆಗೆ ಗೋಡೆ ಕುಸಿದ ಪರಿಣಾಮ ಮಣ್ಣು ರಸ್ತೆಗೆ ಬಿದ್ದಿದೆ. ಈ ಭಾಗದಲ್ಲಿ ತಡೆಗೋಡೆ ನಿರ್ಮಿಸದೇ ಇದ್ದದ್ದರಿಂದ ನಿರಂತರ ಸುರಿಯುತ್ತಿರುವ ಮಳೆಗೆ ಗುಡ್ಡ ಕುಸಿದು ಮಣ್ಣು ರಸ್ತೆಗೆ ಬಿದ್ದಿದೆ. ಸರಿಯಾಗಿ ಕಾಮಗಾರಿ ನಿರ್ವಹಿಸದೇ ಇದ್ದುದರಿಂದ ಅಲ್ಲಲ್ಲಿ ಈ ರೀತಿಯ ತೊಂದರೆಗಳು ಉಂಟಾಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ‌.

ಮಾಣಿ ಹೈಸ್ಕೂಲ್ ಬಳಿ ಗುಡ್ಡ ಕುಸಿತ Read More »

ಮನೆ ಮೇಲೆ ಬಿದ್ದ ಧರೆ | ಅವಶೇಷದಡಿ ಸಿಲುಕಿದ ತಾಯಿ, ಮಗು

ಉಳ್ಳಾಲ: ಮಳೆಯಾರ್ಭಟಕ್ಕೆ  ದ.ಕ ಜಿಲ್ಲೆ.ಯ ಜನರಲ್ಲಿ ಆತಂಕ ಹೆಚಾಗುತ್ತಿದ್ದು, ಇದೀಗ  ಉಳ್ಳಾಲದ ಮಂಜನಾಡಿ ಗ್ರಾಮದಲ್ಲಿ ಶುಕ್ರವಾರ ಮುಂಜಾನೆ ಮನೆಯ ಮೇಲೆ ಭಾರೀ ಪ್ರಮಾಣದಲ್ಲಿ ಮಣ್ಣು ಕುಸಿದ ಪರಿಣಾಮ ಮಹಿಳೆ ಮತ್ತು ಮಗು ಅಸುನೀಗಿದ್ದಾರೆ. ಘಟನೆಯಲ್ಲಿ ಇಬ್ಬರನ್ನು ರಕ್ಷಿಸಲಾಗಿದ್ದು, ತಾಯಿ ಮತ್ತು ಒಂದು ಮಗು ಅವಶೇಷದಡಿ ಸಿಲುಕಿದ್ದಾರೆ. ಮಂಜನಾಡಿ ಗ್ರಾಮದ ಉರುಮನೆ ಮದಪಾಡಿಯಲ್ಲಿ ಘಟನೆ ನಡೆದಿದ್ದು, ತೋಟದ ನಡುವಿರುವ ಮನೆಯ ಮೇಲೆ ಬೃಹತ್ ಮರ ಸಹಿತ ಸುಮಾರು 30 ಅಡಿ ದರೆ ಕುಸಿದು ಬಿದ್ದಿದೆ. ಶುಕ್ರವಾರ ಮುಂಜಾನೆ ಸುಮಾರು

ಮನೆ ಮೇಲೆ ಬಿದ್ದ ಧರೆ | ಅವಶೇಷದಡಿ ಸಿಲುಕಿದ ತಾಯಿ, ಮಗು Read More »

ದ.ಕ. ಜಿಲ್ಲೆಯಲ್ಲಿ ಮುಂದುವರಿದ  ಮಳೆ :  ಮಳೆಯ ಆರ್ಭಟಕ್ಕೆ ಮನೆಯೊಂದರ ತಡೆಗೋಡೆ ಕುಸಿತ

ಪುತ್ತೂರು : ದ.ಕ. ಜಿಲ್ಲೆಯಲ್ಲಿ ನಿರಂತರವಾಗಿ ಮುಂದುವರಿದ ಮಳೆಯ ಆರ್ಭಟಕ್ಕೆ ಮನೆಯೊಂದರ ತಡೆಗೋಡೆ ಕುಸಿತವಾಗಿದ್ದು, ಪುತ್ತೂರಿನ ರಕ್ತೇಶ್ವರಿ ವಠಾರದ ಲಿಂಗದಗುಡ್ಡೆ ಎಂಬಲ್ಲಿ ಘಟನೆ ನಡೆದಿದೆ. ಈ ಘಟನೆ ವೇಳೆ ಮನೆಯಲ್ಲಿ ಯಾರೂ ಇಲ್ಲದ ಪರಿಣಾಮ ಬಹಳ ದೊಡ್ಡ ದುರಂತ ತಪ್ಪಿದೆ. ಶಶಿಕಾಂತ್ ರಾವ್ ಎಂಬವರಿಗೆ ಸೇರಿದ ತಡೆಗೋಡೆ ಇದಾಗಿದ್ದು, ಇನ್ನೂ ಮೂರು ಮನೆಗಳು ಅಪಾಯದ ಸ್ಥಿತಿಯಲ್ಲಿದೆ ಎನ್ನಲಾಗಿದೆ. ತಡೆಗೋಡೆ ಕುಸಿತ ಪ್ರದೇಶಕ್ಕೆ ನಗರಸಭೆಯ ಸದಸ್ಯ ದಿನೇಶ್ ಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ದ.ಕ. ಜಿಲ್ಲೆಯಲ್ಲಿ ಮುಂದುವರಿದ  ಮಳೆ :  ಮಳೆಯ ಆರ್ಭಟಕ್ಕೆ ಮನೆಯೊಂದರ ತಡೆಗೋಡೆ ಕುಸಿತ Read More »

ಲಾರಿ ಹಿಂಬದಿಗೆ ಬೈಕ್‍ ಡಿಕ್ಕಿ : ಸವಾರರಿಬ್ಬರಿಗೆ ಗಂಭೀರ ಗಾಯ

ವಿಟ್ಲ: ಲಾರಿಯ ಹಿಂಬದಿಗೆ ಬೈಕ್‍ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ  ಹಾಗೂ ಸಹ ಸವಾರ ಗಂಭೀರ ಗಾಯಗೊಂಡ ಘಟನೆ ಮಂಗಳಪದವುನಲ್ಲಿ ನಡೆದಿದೆ. ಒಕ್ಕೆತ್ತೂರು ಮೂಲದ ಇಬ್ಬರು ಯುವಕರು ಮಂಗಳಪದವು ಕಡೆಗೆ ತೆರಳುತ್ತಿದ್ದ ವೇಳೆ ಕನ್ಯಾನ ಕಡೆಯಿಂದ ಬಾಕ್ಸೆಟ್ ಮಣ್ಣು ಸಾಗಾಟ ಮಾಡುತ್ತಿದ್ದ ಅದರ ಚಾಲಕ ಮಂಗಳಪದವು ಎಂಬಲ್ಲಿ ರಸ್ತೆಯಲ್ಲಿಯೇ ಲಾರಿ ನಿಲ್ಲಿಸಿದ್ದು, ಅದಕ್ಕೆ ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಇಬ್ಬರನ್ನೂ ಮಂಗಳೂರು ಆಸ್ಪತ್ರೆ ಗೆ ಕೊಂಡೊಯ್ಯಲಾಗಿದ್ದು, ಒಬ್ಬನ ಸ್ಥಿತಿ ಚಿಂತಾಜನಕವಾಗಿದೆ’ ಎಂದು ತಿಳಿದು

ಲಾರಿ ಹಿಂಬದಿಗೆ ಬೈಕ್‍ ಡಿಕ್ಕಿ : ಸವಾರರಿಬ್ಬರಿಗೆ ಗಂಭೀರ ಗಾಯ Read More »

ಕಾರು -ಮಿನಿ ಟೆಂಪೋ ಡಿಕ್ಕಿ  

ಕಡಬ: ಕಾರು ಮತ್ತು ಮಿನಿ ಟೆಂಪೋ ನಡುವೆ ಅಪಘಾತವಾದ  ಘಟನೆ ಕುದ್ಮಾರು ಆಲಂಕಾರು ರಸ್ತೆಯ ಶಾಂತಿಮೊಗರಿನಲ್ಲಿ ನಡೆದಿದೆ. ಕುದ್ಮಾರು ಕಡೆಗೆ ಬರುತ್ತಿದ್ದ ಕಾರು ಹಾಗೂ  ಅಲಂಕಾರು ಕಡೆಗೆ ಹೋಗುತ್ತಿದ್ದ ಬೇಕರಿ ಉತ್ಪನ್ನಗಳ ಲೈನ್ ಸೇಲ್‌ನ ಮಿನಿ ಟೆಂಪೋ ನಡುವೆ ಅಪಘಾತ ಉಂಟಾಗಿದೆ. ಅಪಘಾತದ ರಭಸಕ್ಕೆ ಟೆಂಪೋ ಪಲ್ಟಿಯಾಗಿದ್ದು, ಅದರಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗಿದೆ.

ಕಾರು -ಮಿನಿ ಟೆಂಪೋ ಡಿಕ್ಕಿ   Read More »

ವಿದ್ಯುತ್‍ ಕಂಬಕ್ಕೆ ಡಿಕ್ಕಿ ಹೊಡೆದ ಕಾರು : ಚಾಲಕ ಮೃತ್ಯು

ಬಂಟ್ವಾಳ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್‍ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಮೃತಪಟ್ಟ ಘಟನೆ ಬಿ.ಸಿ.ರೋಡಿನಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ಮಂಚಿ ಭಂಡಾರಕೊಟ್ಟಿಗೆ ನಿವಾಸಿ ಜಯಂತ್ ಗೌಡ ಮೃತಪಟ್ಟ ಚಾಲಕ. ತುಂಬೆಯ ಖಾಸಗಿ ಆಸ್ಪತ್ರೆಯ ಕ್ಯಾಂಟೀನ್‌ ಸಿಬ್ಬಂದಿಯಾಗಿದ್ದ ಜಯಂತ್ ಗೌಡ  ಕಾರಿನಲ್ಲಿ ತೆರಳುತ್ತಿದ್ದಾಗ ನಿಯಂತ್ರಣ ತಪ್ಪಿ ವಿದ್ಯುತ್‍ ಕಂಬಕ್ಕೆ ಡಿಕ್ಕಿಯಾಗಿದೆ. ಗಂಭೀರ ಗಾಯಗೊಂಡು ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಕಾರು  ಸಂಪೂರ್ಣ ನುಜ್ಜು ಗುಜ್ಜಾಗಿದ್ದು ವಿದ್ಯುತ್ ಕಂಬಕ್ಕೂ ಹಾನಿಯಾಗಿದೆ. ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.

ವಿದ್ಯುತ್‍ ಕಂಬಕ್ಕೆ ಡಿಕ್ಕಿ ಹೊಡೆದ ಕಾರು : ಚಾಲಕ ಮೃತ್ಯು Read More »

error: Content is protected !!
Scroll to Top