ಅಪಘಾತ

ಕಾರು ಚಾಲಕನ ನಿಯಂತ್ರಣ ತಪ್ಪಿ ಮಹಿಳೆಗೆ ಡಿಕ್ಕಿ : ಗಂಭೀರ ಗಾಯ

ಬೆಳ್ತಂಗಡಿ: ಕಾರು ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ರಸ್ತೆ ಬದಿ ನಿಂತಿದ್ದ ಮಹಿಳೆಗೆ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ ಅಯ್ಯಪ್ಪನ ನಗರದ ಬಳಿ ನಡೆದಿದೆ. ಅಂಜಲಿ ಶೆಣೈ ಅಪಘಾತದಿಂದ ಗಂಭೀರ ಗಾಯಗೊಂಡವರು. ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಪಘಾತದ ಬಳಿಕ ಕಾರು ಚಾಲಕ ಪರಾರಿಯಾಗಿದ್ದು, ಬಳಿಕ ಠಾಣೆಗೆ ಬಂದು ಶರಣಾಗಿದ್ದಾನೆ ಎನ್ನಲಾಗಿದೆ. ಈ ಕುರಿತು ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರು ಚಾಲಕನ ನಿಯಂತ್ರಣ ತಪ್ಪಿ ಮಹಿಳೆಗೆ ಡಿಕ್ಕಿ : ಗಂಭೀರ ಗಾಯ Read More »

ಬೆಂಕಿಗೆ ಆಹುತಿಯಾದ ಮನೆ !

ಪುತ್ತೂರು: ತಾಲೂಕಿನ ಸರ್ವೆ ಗ್ರಾಮದ ಸೊರಕೆ ಎಂಬಲ್ಲಿ ಮನೆಯೊಂದಕ್ಕೆ ಬೆಂಕಿ ಬಿದ್ದ ಪರಿಣಾಮ ಸಂಪೂರ್ಣ ಭಸ್ಮವಾಗಿದೆ. ಜ.9 ರಂದು ಈ ಘಟನೆ ನಡೆದಿದ್ದು, ಸೊರಕೆ ಪೆರಂಟೋಲು ನಿವಾಸಿ ಕುಂಡ ಎಂಬವರ ಟರ್ಪಾಲು ಹೊದಿಕೆಯ ಮನೆ ಬೆಂಕಿಯಿಂದ ಸಂಪೂರ್ಣ ಭಸ್ಮವಾಗಿದೆ ಎನ್ನಲಾಗಿದೆ. ಮನೆಯಲ್ಲಿ ಕುಂಡ ಹಾಗೂ ಅವರ ಪುತ್ರ, ಸೊಸೆ ವಾಸಿಸುತ್ತಿದ್ದರು ಎನ್ನಲಾಗಿದ್ದು, ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡಿದ್ದು, ಬಟ್ಟೆ, ಪಾತ್ರೆ, ಮನೆಯ ದಾಖಲೆ ಪತ್ರ ಬೆಂಕಿಗೆ ಆಹುತಿಯಾಗಿದ್ದು, ಸುಮಾರು 1.5 ಲಕ್ಷ ರೂ.

ಬೆಂಕಿಗೆ ಆಹುತಿಯಾದ ಮನೆ ! Read More »

ಲಾರಿಗೆ ಢಿಕ್ಕಿ ಹೊಡೆದ ಬಸ್: ವಿದ್ಯಾರ್ಥಿಗಳಿಬ್ಬರಿಗೆ ಗಾಯ!

ಪುತ್ತೂರು: ನಿಂತಿದ್ದ ಲಾರಿಗೆ ಬಸ್ ಡಿಕ್ಕಿಯಾಗಿ, ವಿದ್ಯಾರ್ಥಿಗಳಿಬ್ಬರು ಗಾಯಗೊಂಡ ಘಟನೆ ಗುರುವಾರ ಬೆಳಿಗ್ಗೆ ಬೊಳುವಾರಿನಲ್ಲಿ ನಡೆದಿದೆ. ಇಲ್ಲಿಯ ಕಾಲೇಜೊಂದರ ದ್ವಿತೀಯ ಪಿಯುಸಿ ವಿದ್ಯಾರ್ಥಿ ಪವನ್ ಕುಮಾರ್ ಹಾಗೂ ಪಾಲಿಟೆಕ್ನಿಕ್ ವಿದ್ಯಾರ್ಥಿ ಗಣೇಶ್ ಬಸ್ಸಿನಿಂದ ಬಿದ್ದು ಗಾಯಗೊಂಡವರು. ವಿದ್ಯಾರ್ಥಿಗಳು ಬಸ್ಸಿನ ಫುಟ್ ಬೋರ್ಡ್ ನಲ್ಲಿ ನಿಂತು ಪ್ರಯಾಣಿಸುತ್ತಿದ್ದರು. ಬಸ್ ಲಾರಿಗೆ ಡಿಕ್ಕಿ ಹೊಡೆಯುತ್ತಿದ್ದಂತೆ, ಇಬ್ಬರು ವಿದ್ಯಾರ್ಥಿಗಳು ರಸ್ತೆಗೆ ಎಸೆಯಲ್ಪಟ್ಟಿದ್ದರು. ಗಾಯಾಳುಗಳನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಲಾರಿಗೆ ಢಿಕ್ಕಿ ಹೊಡೆದ ಬಸ್: ವಿದ್ಯಾರ್ಥಿಗಳಿಬ್ಬರಿಗೆ ಗಾಯ! Read More »

ತರಕಾರಿ ಅಂಗಡಿಗೆ ನುಗ್ಗಿದ ಓಮ್ನಿ! | ಅಂಗಡಿ, ದ್ವಿಚಕ್ರ ವಾಹನಕ್ಕೆ ಹಾನಿ!

ವಿಟ್ಲ: ಓಮ್ನಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ತರಕಾರಿ ಅಂಗಡಿಗೆ ನುಗ್ಗಿದ ಘಟನೆ ಕಂಬಳಬೆಟ್ಟು ದರ್ಗಾದ ಬಳಿ ನಡೆದಿದೆ. ಸುಳ್ಯ ಮೂಲದ ವ್ಯಕ್ತಿಯೊಬ್ಬರು ಚಲಾಯಿಸುತ್ತಿದ್ದ ಓಮ್ನಿ ಕಾರು ನಿಯಂತ್ರಣ ತಪ್ಪಿ ತರಕಾರಿ ಅಂಗಡಿಗೆ ನುಗ್ಗಿದೆ ಎನ್ನಲಾಗಿದೆ. ಅಂಗಡಿಯಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಕ್ಕೂ ಹಾನಿಯುಂಟಾಗಿದೆ. ಘಟನೆಯಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

ತರಕಾರಿ ಅಂಗಡಿಗೆ ನುಗ್ಗಿದ ಓಮ್ನಿ! | ಅಂಗಡಿ, ದ್ವಿಚಕ್ರ ವಾಹನಕ್ಕೆ ಹಾನಿ! Read More »

ಗ್ಯಾರೇಜಿಗೆ ನುಗ್ಗಿದ ಲಾರಿ: ಪಲ್ಟಿಯಾದ ಟೆಂಪೋ ರಿಕ್ಷಾ

ಉಪ್ಪಿನಂಗಡಿ: ಕೆಲವೇ ಕ್ಷಣಗಳೊಳಗೆ ಪೆರ್ನೆಯ ಒಂದೇ ಪ್ರದೇಶದಲ್ಲಿ ಎರಡು ಅಪಘಾತಗಳು ನಡೆದಿರುವ ಬಗ್ಗೆ ವರದಿಯಾಗಿದೆ. ಜ.8 ಸೋಮವಾರ ಸಂಜೆ ಪೆರ್ನೆ ಜಂಕ್ಷನ್‍ನಿಂದ ಕೆಲವೇ ಅಂತರ ದೂರದಲ್ಲಿ ನಿಲ್ಲಿಸಿದ್ದ ಈಚರ್ ಲಾರಿಯೊಂದು ಇಳಿಜಾರು ಪ್ರದೇಶದಲ್ಲಿ ತನ್ನಷ್ಟಕ್ಕೆ ಹಿಮ್ಮುಖವಾಗಿ ಚಲಿಸಿ ರಸ್ತೆ ಬದಿಯಲ್ಲಿದ್ದ ಚಂದ್ರಶೇಖರ್ ಎಂಬವರ ಗ್ಯಾರೇಜಿಗೆ ನುಗ್ಗಿದೆ. ಈ ಸಂದರ್ಭ ಗ್ಯಾರೇಜ್‍ನಲ್ಲಿ ಯಾರೂ ಇಲ್ಲದ್ದರಿಂದ ಅಪಾಯವೇನೂ ಸಂಭವಿಸಿಲ್ಲ. ಆದರೆ ಗ್ಯಾರೇಜ್ ಮುಂದೆ ನಿಲ್ಲಿಸಿದ್ದ ಎರಡು ಬೈಕ್‍ಗಳಿಗೆ ಹಾಗೂ ಗ್ಯಾರೇಜ್‍ಗೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ ಮೇಲಿನ ಘಟನೆ ನಡೆದ

ಗ್ಯಾರೇಜಿಗೆ ನುಗ್ಗಿದ ಲಾರಿ: ಪಲ್ಟಿಯಾದ ಟೆಂಪೋ ರಿಕ್ಷಾ Read More »

ಚಳಿ ಕಾಯಿಸಲು ಹಾಕಿದ್ದ ಬೆಂಕಿಗೆ ಅವಳಿ ಕಂದಮ್ಮಗಳು ಸಜೀವ ದಹನ!!

ಉತ್ತರಪ್ರದೇಶ: ಮೈನ್‌ಪುರಿ ಜಿಲ್ಲೆಯಲ್ಲಿ ಅಜಾಗರೂಕತೆಯಿಂದ ಭೀಕರ ಅಪಘಾತವೇ ಸಂಭವಿಸಿದೆ. ಮಂಚಕ್ಕೆ ಬೆಂಕಿ ಹೊತ್ತಿಕೊಂಡ ಪರಿಣಾಮ ಆರು ತಿಂಗಳ ಅವಳಿ ಕಂದಮ್ಮಗಳು ಸಜೀವ ದಹನವಾಗಿದ್ದಾರೆ. ಮೈನ್‌ಪುರಿ ಜಿಲ್ಲೆಯ ಬೆಂಚಾ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಮೈನ್ಪುರಿ ರಸ್ತೆ ಬಳಿ ವಾಸಿಸುವ ಗೌರವ್ ಅಲಿಯಾಸ್ ದಿಲೀನ್ ಕುಮಾರ್ ಸೋಮವಾರ ಮಧ್ಯಾಹ್ನ ಮನೆಯಿಂದ ಹೊರಗೆ ಹೋಗಿದ್ದರು. ಮನೆಯಲ್ಲಿ ಅವರ ಪತ್ನಿ ರಜನಿ ಅವರ ಆರು ತಿಂಗಳ ಅವಳಿ ಹೆಣ್ಣು ಮಕ್ಕಳಾದ ರಿದ್ಧಿ ಮತ್ತು ಸಿದ್ಧಿ ಇದ್ದರು. ರಜನಿ ಟೆರೇಸ್​​​​ನಲ್ಲಿರುವ ಕೋಣೆಯಲ್ಲಿ ನೇವಾರ್ ಕಾಟ್

ಚಳಿ ಕಾಯಿಸಲು ಹಾಕಿದ್ದ ಬೆಂಕಿಗೆ ಅವಳಿ ಕಂದಮ್ಮಗಳು ಸಜೀವ ದಹನ!! Read More »

ಯಶ್ ಹುಟ್ಟುಹಬ್ಬದ ಕಟೌಟ್ ಕಟ್ಟುವಾಗ ವಿದ್ಯುತ್ ಶಾಕ್! | ಮೂವರು ಅಭಿಮಾನಿಗಳು ಮೃತ್ಯು!!

ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬದ ಅಂಗವಾಗಿ ಕಟೌಟ್ ಕಟ್ಟಲು ಹೋಗಿದ್ದ ಮೂವರು ಅಭಿಮಾನಿಗಳು ವಿದ್ಯುತ್ ಪ್ರವಹಿಸಿ ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದಿದೆ. ದುರಂತದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಹನುಮಂತ ಹರಿಜನ್, ಮುರಳಿ ನಡವಿನಮನಿ  ಮತ್ತು ನವೀನ್ ಗಾಜಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಯಶ್ ಮೇಲಿನ ಅಭಿಮಾನದಿಂದ ಮಧ್ಯರಾತ್ರಿ ಹುಟ್ಟುಹಬ್ಬ ಆಚರಿಸಲು ಇವರೆಲ್ಲರೂ ಯೋಜಿಸಿದ್ದರು ಎನ್ನಲಾಗಿದೆ. ಈ ವೇಳೆ ಯಶ್ ಫೋಟೋವುಳ್ಳ ಬೃಹತ್ ಬ್ಯಾನರ್ ನಿಲ್ಲಿಸುವಾಗ ವಿದ್ಯುತ್ ತಂತಿಗೆ ತಗುಲಿ ಅವಘಡ ಸಂಭವಿಸಿದೆ. ಈ ಸಂಬಂಧ

ಯಶ್ ಹುಟ್ಟುಹಬ್ಬದ ಕಟೌಟ್ ಕಟ್ಟುವಾಗ ವಿದ್ಯುತ್ ಶಾಕ್! | ಮೂವರು ಅಭಿಮಾನಿಗಳು ಮೃತ್ಯು!! Read More »

ಟಾಟಾ ಸುಮೋ, ಅಂಗಡಿ ಮೇಲೆ ಬಿದ್ದ ಮರ | ಇಬ್ಬರಿಗೆ ಗಾಯ

ಕಡಬ: ಚಲಿಸುತ್ತಿದ್ದ ಟಾಟಾ ಸುಮೋ ಹಾಗೂ ಅಂಗಡಿಯೊಂದರ ಮೇಲೆ ಬೃಹತ್ ಗಾತ್ರದ ಮರ ಬಿದ್ದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೈಕಂಬ ಜಂಕ್ಷನ್ ನಲ್ಲಿ ಸೋಮವಾರ ನಡೆದಿದೆ. ವಾಹನ ಚಾಲಕ ಬಿಳಿನೆಲೆ ನಿವಾಸಿ ಶೇಖ‌ರ್ ಹಾಗೂ ಮತ್ತೋರ್ವರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಸುಬ್ರಹ್ಮಣ್ಯದಿಂದ ನೆಟ್ಟಣ ಕಡೆಗೆ ತೆರಳುತ್ತಿದ್ದ ಟಾಟಾ ಸುಮೋ ಹಾಗೂ ಕೈಕಂಬ ಜಂಕ್ಷನ್ ನಲ್ಲಿದ್ದ ಗೂಡಂಗಡಿಯ ಮೇಲೆ ಬೃಹತ್ ಗಾತ್ರದ ಮರ ಬಿದ್ದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಹೆಚ್ಚಿನ

ಟಾಟಾ ಸುಮೋ, ಅಂಗಡಿ ಮೇಲೆ ಬಿದ್ದ ಮರ | ಇಬ್ಬರಿಗೆ ಗಾಯ Read More »

ಭಾರೀ ಮಳೆಗೆ ಒಡೆದ ಕಿಂಡಿ ಅಣೆಕಟ್ಟು | ಕೃಷಿ ಭೂಮಿ ನಾಶ

ಚೆನ್ನಾವರ : ಶನಿವಾರ ರಾತ್ರಿ ಸುರಿದ ಧಾರಕಾರ ಮಳೆಗೆ ಚೆನ್ನಾವರ ಬಳಿಯ ಗೌರಿ ಹೊಳೆಯ ಕಿಂಡಿ ಅಣೆಕಟ್ಟಿನ ಒಂದು ಪಾರ್ಶ್ವ ಒಡೆದು ಅಪಾರ ಪ್ರಮಾಣದ ಕೃಷಿ ಭೂಮಿ‌ ನಷ್ಟವಾಗಿದೆ. ತೋಟಕ್ಕೆ ನೀರು ಹರಿದು ಮಣ್ಣು ಕುಸಿದಿದ್ದು, ಅಡಕೆ ಮರಗಳು ಧರೆಗುರುಳಿ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದೆ. ಸ್ಥಳಕ್ಕೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ರವರು ಭೇಟಿ ನೀಡಿದ್ದು, ಅಧಿಕಾರಿಗಳಿಗೆ ಪರಿಹಾರ ನೀಡಬೇಕೆಂದು ಸೂಚಿಸಿದರು.

ಭಾರೀ ಮಳೆಗೆ ಒಡೆದ ಕಿಂಡಿ ಅಣೆಕಟ್ಟು | ಕೃಷಿ ಭೂಮಿ ನಾಶ Read More »

ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಯುವಕ ಮೃತ್ಯು !

ಪುತ್ತೂರು: ಹೋಂಡಾ ಆಕ್ಟೀವಾ ಹಾಗೂ ಕಾರು ಅಪಘಾತದಲ್ಲಿ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆಕ್ಟೀವಾ ಸಹಸವಾರ ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮೃತಪಟ್ಟಿದ್ದಾರೆ. ಇರ್ದೆ ಗ್ರಾಮದ ಉಪ್ಪಳಿಗೆ ನಾರಾಯಣ ನಾಯ್ಕ ಹಾಗೂ ಕಲ್ಯಾಣ ದಂಪತಿ ಪುತ್ರ ಪ್ರವೀಣ (18) ಮೃತ ಯುವಕ. ಡಿ.31 ರಂದು ಪ್ರವೀಣ್ ಪುತ್ತೂರಿನಿಂದ ಮನೆಯತ್ತ ಹಿಂದಿರುಗುತ್ತಿದ್ದಾಗ ಮುಕ್ರಂಪಾಡಿ ಬಳಿ ಎದುರಿನಿಂದ ಬಂದ ಕಾರು ಡಿಕ್ಕಿ ಹೊಡೆದಿದೆ. ರಸ್ತೆಗೆಸೆಯಲ್ಪಟ್ಟ ಸಹಸವಾರ ಪ್ರವೀಣ್ ತೀವ್ರ ಗಾಯಗೊಂಡು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಬಳಿಕ ಹೆಚ್ಚಿನ

ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಯುವಕ ಮೃತ್ಯು ! Read More »

error: Content is protected !!
Scroll to Top