ಅಪಘಾತ

ಕಂಬಳ ವೀಕ್ಷಿಸಿ ವಾಪಾಸಾಗುತ್ತಿದ್ದ ವೇಳೆ ಅಪಘಾತ : ಇಬ್ಬರು ಮೃತ್ಯು

ಬೆಂಗಳೂರು: ಬೆಂಗಳೂರಿನಲ್ಲಿ ನಡೆಯುತ್ತಿರುವ ಕಂಬಳ ವೀಕ್ಷಿಸಿ ಊರಿಗೆ ವಾಪಾಸಾಗುತ್ತಿದ್ದಾಗ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟು ಮೂವರು ಗಾಯಗೊಂಡ ಘಟನೆ ರಾಜ್ಯ ಹೆದ್ದಾರಿ 33 ಕೊತ್ತಗೆರೆ ಹೋಬಳಿ ಚಿಗಣಿ ಪಾಳ್ಯ ಗ್ರಾಮದ ಬಳಿ ನಡೆದಿದೆ. ಮೃತಪಟ್ಟವರನ್ನು ಬಜಪೆ ಮೂಲದ ಕಿಶಾನ್‍ ಶೆಟ್ಟಿ (20) ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಭಟ್ಟರ ತೋಟ ಗ್ರಾಮದ ಫಿಲೀಪ್‍ ನೇರಿ ಲೋಬೋ (32) ಎಂದು ಗುರುತಿಸಲಾಗಿದೆ. ನಿತೀಶ್‍ ಭಂಡಾರಿ, ಪ್ರೀತಿ ಲೋಬೋ, ಹರೀಶ್ ಗಂಭಿರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ […]

ಕಂಬಳ ವೀಕ್ಷಿಸಿ ವಾಪಾಸಾಗುತ್ತಿದ್ದ ವೇಳೆ ಅಪಘಾತ : ಇಬ್ಬರು ಮೃತ್ಯು Read More »

ವಿದ್ಯುತ್ ತಂತಿ ಸ್ಪರ್ಶಿಸಿದ ಅಲ್ಯೂಮಿನಿಯಂ ಏಣಿ: ಬಾಲಕೃಷ್ಣ ಶೆಟ್ಟಿ ಮೃತ್ಯು

ಬೆಳ್ತಂಗಡಿ: ಅಲ್ಯೂಮಿನಿಯಂ ಏಣಿ ವಿದ್ಯುತ್ ತಂತಿ ಸ್ಪರ್ಶಿಸಿ ಕಾರ್ಮಿಕರೋರ್ವರು ದಾರುಣವಾಗಿ ಮೃತಪಟ್ಟ ಘಟನೆ ಧರ್ಮಸ್ಥಳ ಸಮೀಪದ ಮಲ್ಲರ್ಮಾಡಿ ಎಂಬಲ್ಲಿ ನಡೆದಿದೆ. ಮೃತರನ್ನು ಮಲ್ಲರ್ಮಾಡಿ ನಿವಾಸಿ ಬಾಲಕೃಷ್ಣ ಶೆಟ್ಟಿ (49 ವ) ಎಂದು ಗುರುತಿಸಲಾಗಿದೆ. ಸೊಪ್ಪು ತರಲೆಂದು ಶುಕ್ರವಾರ ಬೆಳಿಗ್ಗೆ ಸ್ಥಳೀಯ ನಿವಾಸಿ ಬೊಮ್ಮಣ್ಣ ಗೌಡ ಅವರ ತೋಟಕ್ಕೆ ಹೋಗಿದ್ದರು. ಈ ಸಂದರ್ಭ ಘಟನೆ ನಡೆದಿದೆ ಎಂದು ಹೇಳಲಾಗಿದೆ. ತೋಟದ ನಡುವಿನಲ್ಲಿ ಹಾದುಹೋಗಿದ್ದ ವಿದ್ಯುತ್ ಲೈನ್ ಗೆ ಅಲ್ಯೂಮಿನಿಯಂ ಏಣಿ ಸ್ಪರ್ಶಿಸಿತ್ತು. ತೀವ್ರ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದ ಬಾಲಕೃಷ್ಣ

ವಿದ್ಯುತ್ ತಂತಿ ಸ್ಪರ್ಶಿಸಿದ ಅಲ್ಯೂಮಿನಿಯಂ ಏಣಿ: ಬಾಲಕೃಷ್ಣ ಶೆಟ್ಟಿ ಮೃತ್ಯು Read More »

ಲಾಡ್ಜ್ ರೂಮ್ ನಲ್ಲಿ ಬೆಂಕಿ, ಸುಟ್ಟ ಸ್ಥಿತಿಯಲ್ಲಿ ವ್ಯಕ್ತಿ ಮೃತದೇಹ!!

ಮಂಗಳೂರು: ಇಲ್ಲಿನ ಲಾಡ್ಜ್ ರೂಂನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ವ್ಯಕ್ತಿಯೋರ್ವರ ಮೃತದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ವರದಿಯಾಗಿದೆ. ಮೃತಪಟ್ಟವರನ್ನು ಯಶ್ರಾಜ್ ಎಸ್.‌ ಸುವರ್ಣ (43) ಎಂದು ಗುರುತಿಸಲಾಗಿದೆ. ಯಶ್ರಾಜ್ ಅವರು ಲಾಡ್ಜ್ ರೂಂನಲ್ಲಿ ಮಲಗಿದ್ದು, ಬಾಗಿಲು ತೆರೆದು ಒಳಪ್ರವೇಶಿಸಿದಾಗ ರೂಂ ಪೂರ್ತಿ ಬೆಂಕಿ ಆವರಿಸಿಕೊಂಡಿತ್ತು ಎನ್ನಲಾಗಿದೆ. ಬೆಂದೂರ್ ವೆಲ್ ಸಮೀಪದ ಲಾಡ್ಜಿನಲ್ಲಿ ರಾತ್ರಿ 12.35ರ ಹೊತ್ತಿಗೆ ಬೆಂಕಿ ಕಾಣಿಸಿಕೊಂಡಿದೆ. ಪಾಂಡೇಶ್ವರ ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿ ಬೆಂಕಿ ಶಮನಗೊಳಿಸಿದ್ದಾರೆ. ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಲಾಡ್ಜ್ ರೂಮ್ ನಲ್ಲಿ ಬೆಂಕಿ, ಸುಟ್ಟ ಸ್ಥಿತಿಯಲ್ಲಿ ವ್ಯಕ್ತಿ ಮೃತದೇಹ!! Read More »

ಬೈಕ್ ಅಪಘಾತ: 20 ಫೀಟ್ ದೂರ ಎಸೆಯಲ್ಪಟ್ಟ ಸವಾರ!!

ವಿಟ್ಲ: ಬೈಕ್ ಅಪಘಾತವಾಗಿ ಸವಾರ ಸುಮಾರು 20 ಫೀಟ್ ದೂರ ಎಸೆಯಲ್ಪಟ್ಟು, ಗಂಭೀರ ಗಾಯಗೊಂಡ ಘಟನೆ ವಿಟ್ಲದ ವೀರಕಂಭ ಗ್ರಾಮದ ಕೆಲಿಂಜದಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ. ಬೈಕ್ ಸವಾರ ಕುಂಡಡ್ಕ ನಿವಾಸಿ ಪ್ರಜ್ವಲ್ ಎಂದು ಗುರುತಿಸಲಾಗಿದೆ. ಕಲ್ಲಡ್ಕದಿಂದ ವಿಟ್ಲ ಕಡೆಗೆ ಬರುತ್ತಿದ್ದ ಬೈಕ್, ಕೆಲಿಂಜ ಬಸ್ ಸ್ಟ್ಯಾಂಡಿಗೆ ಢಿಕ್ಕಿ ಹೊಡೆದಿದ್ದಾನೆ. ಪರಿಣಾಮ ಸವಾರ ಎಸೆಯಲ್ಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ಗಂಭೀರ ಗಾಯಗೊಂಡ ಸವಾರನನ್ನು ಸ್ಥಳೀಯರು ಪುತ್ತೂರು ಆಸ್ಪತ್ರೆಗೆ ರವಾನಿಸಿದ್ದಾರೆ

ಬೈಕ್ ಅಪಘಾತ: 20 ಫೀಟ್ ದೂರ ಎಸೆಯಲ್ಪಟ್ಟ ಸವಾರ!! Read More »

ಟ್ರಕ್ಕಿಗೆ ಢಿಕ್ಕಿ ಹೊಡೆದ ವಿದ್ಯಾರ್ಥಿಗಳಿದ್ದ ಆಟೋ | ಅಪಘಾತದ ರಭಸಕ್ಕೆ ಗಾಳಿಯಲ್ಲಿ ಎಗರಿಬಿದ್ದ ಶಾಲಾ ಮಕ್ಕಳು: ಭೀಕರ ವೀಡಿಯೋ!!

ಮಕ್ಕಳನ್ನು ಕರೆದುಕೊಂಡು ಹೋಗುತ್ತಿದ್ದ ಆಟೋ ರಿಕ್ಷಾಕ್ಕೆ ಟ್ರಕ್ಕೊಂದು ಢಿಕ್ಕಿ ಹೊಡೆದ ಪರಿಣಾಮ 8 ಮಕ್ಕಳು ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ಬುಧವಾರ (ನ. 22ರಂದು) ನಡೆದಿದೆ. ಮುಂಜಾನೆ 7:35ರ ಸಮಯಕ್ಕೆ ಮಕ್ಕಳು ಆಟೋದಲ್ಲಿ ಶಾಲೆಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ವಿಶಾಖಪಟ್ಟಣಂನ ಸಂಗಮ್ ಶರತ್ ಥಿಯೇಟರಿನ ಅಂಡರ್‌ ಪಾಸ್‌ ರಸ್ತೆಯಿಂದ ನುಗ್ಗಿದ ಆಟೋ ಹೆದ್ದಾರಿಯಲ್ಲಿ ಬರುತ್ತಿದ್ದ ಟ್ರಕ್ಕಿಗೆ ಢಿಕ್ಕಿ ಹೊಡೆದಿದೆ. ರಸ್ತೆ ದಾಟಲು ವೇಗವಾಗಿ ಹೋಗುತ್ತಿದ್ದ ರಿಕ್ಷಾ, ಟ್ರಕ್ಕಿಗೆ ಢಿಕ್ಕಿ ಹೊಡೆದಿದೆ. ಕ್ಷಣ ಮಾತ್ರದಲ್ಲಿ ಆಟೋ ಪಲ್ಟಿಯಾಗಿದ್ದು,

ಟ್ರಕ್ಕಿಗೆ ಢಿಕ್ಕಿ ಹೊಡೆದ ವಿದ್ಯಾರ್ಥಿಗಳಿದ್ದ ಆಟೋ | ಅಪಘಾತದ ರಭಸಕ್ಕೆ ಗಾಳಿಯಲ್ಲಿ ಎಗರಿಬಿದ್ದ ಶಾಲಾ ಮಕ್ಕಳು: ಭೀಕರ ವೀಡಿಯೋ!! Read More »

ಸಿಲಿಂಡರ್‌ ಸ್ಫೋಟಕ್ಕೆ ಮನೆಯೇ ಛಿದ್ರ; ಒಂದೇ ಕುಟುಂಬದ 7 ಮಂದಿ ಗಂಭೀರ

ಮನೆಯೊಳಗಡೆ ಸಿಲಿಂಡರ್ ಸ್ಪೋಟಗೊಂಡು ಒಂದೇ ಕುಟುಂಬದ ಏಳು ಮಂದಿ ಗಾಯಗೊಂಡ ಘಟನೆ ಬೆಂಗಳೂರಿನ ಅಂಜನಾಪುರ ಸಮೀಪದ ವೀವರ್ಸ್ ಕಾಲೋನಿಯ ಮಾರುತಿ ಲೇಔಟ್‌ನಲ್ಲಿ ನಡೆದಿದೆ. ಮಾರ್ಟಿನ್ ಎಂಬುವವರಿಗೆ ಸೇರಿದ ಮನೆಯಲ್ಲಿ ಐದು ಮಂದಿ ಬಾಡಿಗೆ ಪಡೆದು ವಾಸವಾಗಿದ್ದರು. ಉತ್ತರ ಪ್ರದೇಶದ ಬನಾರಸ್ ಮೂಲದ ಜಮಾಲ್ (32), ನಾಜಿಯಾ (22) ಹಾಗೂ ಇರ್ಫಾನ್ (21), ಗುಲಾಬ್ (18), ಶಹಜಾದ್ (9) ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬುಧವಾರ ಮುಂಜಾನೆ 5:30ರ ಸುಮಾರಿಗೆ ಅಡುಗೆ ಮನೆಯ ಲೈಟ್‌

ಸಿಲಿಂಡರ್‌ ಸ್ಫೋಟಕ್ಕೆ ಮನೆಯೇ ಛಿದ್ರ; ಒಂದೇ ಕುಟುಂಬದ 7 ಮಂದಿ ಗಂಭೀರ Read More »

ಆಟವಾಡುತ್ತಿದ್ದಾಗ ಕಳಚಿಬಿದ್ದ ಗೇಟ್‌: 3 ವರ್ಷದ ಮಗು ಸಾವು

ಗೆಸ್ಟ್‌ ಹೌಸ್‌ ಒಂದರ ಗೇಟ್‌ ಕಳಚಿಬಿದ್ದು ಆಲ್ಲೇ ಆಟವಾಡುತ್ತಿದ್ದ ಮಗು ದಾರುಣವಾಗಿ ಪ್ರಾಣ ಕಳೆದುಕೊಂಡ ಘಟನೆ ಉಡುಪಿ ಬಳಿ ನಡೆದಿದೆ. ಕೋಟತಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಪಡುಕರೆಯಲ್ಲಿ ಘಟನೆ ನಡೆದಿದ್ದು, ಸುಧೀರ್ ಮೊಗವೀರ ಅವರ ಪುತ್ರ ಸುಶಾಂತ್ (3) ಮೃತಪಟ್ಟ ಮಗು. ಪುಟ್ಟ ಮಗು ಸುಶಾಂತ್‌ ಪ್ರತಿನಿತ್ಯವೂ ಮನೆ ಪಕ್ಕದ ಗೆಸ್ಟ್ ಹೌಸ್ ಬಳಿ ಆಟವಾಡುತ್ತಿದ್ದ. ಮಂಗಳವಾರ ಅಚಾನಕ್‌ ಆಗಿ ಗೆಸ್ಟ್‌ ಹೌಸ್‌ನ ಗೇಟ್‌ ಕಳಚಿ ಬಿದ್ದಿದ್ದು, ಆಟವಾಡುತ್ತಿದ್ದ ಮಗುವಿನ ಮೇಲೆ ಬಿದ್ದಿದೆ. ಗಂಭೀರವಾಗಿ ಗಾಯಗೊಂಡ ಮಗುವನ್ನು

ಆಟವಾಡುತ್ತಿದ್ದಾಗ ಕಳಚಿಬಿದ್ದ ಗೇಟ್‌: 3 ವರ್ಷದ ಮಗು ಸಾವು Read More »

ಟೊಮೇಟೊ ಸಾಗಾಟದ ಟೆಂಪೋ ಪಲ್ಟಿ!!

ಬೆಳ್ತಂಗಡಿ: ಟೊಮೇಟೊ ಸಾಗಾಟದ ಟೆಂಪೋ ಪಲ್ಟಿಯಾದ ಘಟನೆ ಸೋಮವಾರ ರಾತ್ರಿ ಚಾರ್ಮಾಡಿ ಚೆಕ್ ಪೋಸ್ಟ್ ಸಮೀಪದ ವಲಸರಿ ಎಂಬಲ್ಲಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ರಸ್ತೆ ಬದಿಯ ಚರಂಡಿಗೆ ಪಲ್ಟಿಯಾಗಿ ಬಿದ್ದಿತು. ಚಿಕ್ಕಮಗಳೂರು ಕಡೆಯಿಂದ ಉಜಿರೆಯತ್ತ ಟೊಮೇಟೊ ಸಾಗಾಟ ಮಾಡಲಾಗುತ್ತಿತ್ತು. ವಾಹನದಲ್ಲಿದ್ದವರು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಸ್ಥಳೀಯರ ಸಹಕಾರದಿಂದ ಉರುಳಿ ಬಿದ್ದ ವಾಹನವನ್ನು ತೆರವು ಮಾಡಲಾಯಿತು.

ಟೊಮೇಟೊ ಸಾಗಾಟದ ಟೆಂಪೋ ಪಲ್ಟಿ!! Read More »

ಕಾರು-ಸ್ಕೂಟಿ ಡಿಕ್ಕಿ: ಮಹಿಳೆಗೆ ಗಾಯ

ವಿಟ್ಲ: ಕಂಬಳಬೆಟ್ಟು ಕಾರ್ಯಾಡಿ ಕ್ರಾಸ್ ಬಳಿ  ಕಾರು ಮತ್ತು ಸ್ಕೂಟಿ ಢಿಕ್ಕಿ ಹೊಡೆದು  ಮಹಿಳೆಯೋರ್ವರು ಗಾಯಗೊಂಡಿದ್ದಾರೆ. ಸ್ಕೂಟಿ ಸವಾರೆ ದಿವ್ಯಾ ಗಾಯಗೊಂಡವರು. ಕನ್ಯಾನ ನಿವಾಸಿ  ಪ್ರಕಾಶ್  ಅವರು ಪತ್ನಿ ಮತ್ತು ಮಕ್ಕಳ ಜತೆ ಕಾರಿನಲ್ಲಿ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಸ್ಕೂಟಿಯಲ್ಲಿದ್ದ ದಿವ್ಯಾ ಕಾರ್ಯಾಡಿ ಒಳರಸ್ತೆಯಿಂದ ಕಂಬಳಬೆಟ್ಟುವಿಗೆ ಬರುತ್ತಿದ್ದರು. ಅಪಘಾತದಿಂದ ಅವರು ರಸ್ತೆಗೆ ಎಸೆಯಲ್ಪಟ್ಟರು ಎಂದು ಹೇಳಲಾಗಿದೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಟ್ಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕಾರು-ಸ್ಕೂಟಿ ಡಿಕ್ಕಿ: ಮಹಿಳೆಗೆ ಗಾಯ Read More »

ವಿದ್ಯುತ್ ತಂತಿ ತುಳಿದು ತಾಯಿ-ಮಗು ಸಜೀವ ದಹನ!! | 5 ಬೆಸ್ಕಾಂ ಅಧಿಕಾರಿಗಳಿಗೆ ಜಾಮೀನು!!

ಬೆಂಗಳೂರು: ವಿದ್ಯುತ್ ತಂತಿ ತುಳಿದು ತಾಯಿ ಮತ್ತು ಮಗು ಸಾವಿಗೀಡಾದ ಪ್ರಕರಣದಲ್ಲಿ ಬಂಧಿಸಲ್ಪಟ್ಟ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂಯ ಐವರು ಅಧಿಕಾರಿಗಳನ್ನು ಠಾಣಾ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ಸೋಮವಾರ ಮೂಲಗಳು ತಿಳಿಸಿವೆ. ಬೆಸ್ಕಾಂ ಕಚೇರಿಯಿಂದ 100 ಮೀಟರ್ ದೂರದಲ್ಲಿರುವ ವೈಟ್‌ಫೀಲ್ಡ್ ಮುಖ್ಯರಸ್ತೆಯ ಹೋಪ್ ಫಾರ್ಮ್ ಜಂಕ್ಷನ್ ಬಳಿ ಭಾನುವಾರ ಫುಟ್‌ಪಾತ್‌ನಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಸೌಂದರ್ಯ (23) ಮತ್ತು ಅವರ ಒಂಬತ್ತು ತಿಂಗಳ ಮಗು ಸಜೀವ ದಹನವಾಗಿದ್ದರು.

ವಿದ್ಯುತ್ ತಂತಿ ತುಳಿದು ತಾಯಿ-ಮಗು ಸಜೀವ ದಹನ!! | 5 ಬೆಸ್ಕಾಂ ಅಧಿಕಾರಿಗಳಿಗೆ ಜಾಮೀನು!! Read More »

error: Content is protected !!
Scroll to Top